Homeಫ್ಯಾಕ್ಟ್‌ಚೆಕ್Fact Check: ಅಧಿಕಾರಕ್ಕೆ ಬಂದರೆ 50% ಮೀಸಲಾತಿಯನ್ನು ರದ್ದುಪಡಿಸುವುದಾಗಿ ರಾಹುಲ್ ಗಾಂಧಿ ಹೇಳಿದ್ರಾ?

Fact Check: ಅಧಿಕಾರಕ್ಕೆ ಬಂದರೆ 50% ಮೀಸಲಾತಿಯನ್ನು ರದ್ದುಪಡಿಸುವುದಾಗಿ ರಾಹುಲ್ ಗಾಂಧಿ ಹೇಳಿದ್ರಾ?

- Advertisement -
- Advertisement -

ಕಾಂಗ್ರೆಸ್ ಅಥವಾ ಇಂಡಿಯಾ ಮೈತ್ರಿಕೂಟ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದರೆ ’50 ಶೇ.ಮೀಸಲಾತಿಯನ್ನು ತೆಗೆದು ಹಾಕಲಾಗುವುದು’ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿರುವುದಾಗಿ ಸುದ್ದಿಯೊಂದು ಹಬ್ಬಿದೆ.

‘Students Facts’ಎಂಬ ಹೆಸರಿನಲ್ಲಿ ಹರಿದಾಡುತ್ತಿರುವ ಪೋಸ್ಟರ್‌ನಲ್ಲಿ ಮೇಲಿನಂತೆ ಹೇಳಲಾಗಿದೆ.

ಫ್ಯಾಕ್ಟ್‌ಚೆಕ್‌ : ಮೀಸಲಾತಿ ಹೆಚ್ಚಳದ ಬಗ್ಗೆ ಸದಾ ಮಾತನಾಡುವ ಕಾಂಗ್ರೆಸ್‌ ಪಕ್ಷದ ನಾಯಕ ರಾಹುಲ್ ಗಾಂಧಿ ಮೀಸಲಾತಿಯನ್ನು ತೆಗೆದು ಹಾಕುವ ಬಗ್ಗೆ ಮಾತನಾಡಿದ್ದಾರೆಯೇ? ಎಂಬ ಬಗ್ಗೆ ನಾನುಗೌರಿ.ಕಾಂ ಫ್ಯಾಕ್ಟ್ ಚೆಕ್ ಮಾಡಿದೆ.

ರಾಹುಲ್ ಗಾಂಧಿಯವರ ಹೇಳಿಕೆಯ ಕುರಿತು ಫೆಬ್ರವರಿ 6,2024ರಂದು ನಾವು (ನಾನುಗೌರಿ) ‘ಕೇಂದ್ರದಲ್ಲಿ ಅಧಿಕಾರಕ್ಕೆ ಬಂದರೆ 50% ಮೀಸಲಾತಿ ಮಿತಿ ಕಿತ್ತೆಸೆಯುತ್ತೇವೆ: ರಾಹುಲ್ ಗಾಂಧಿ‘ ಸುದ್ದಿಯನ್ನು ಪ್ರಕಟಿಸಿದ್ದೇವೆ. ಆ ಸುದ್ದಿಯ ಪ್ರಕಾರ, ‘50% ಮೀಸಲಾತಿ ಮಿತಿಯನ್ನು ತೆಗೆದು ಹಾಕುತ್ತೇವೆ’ ಎಂದು ರಾಹುಲ್ ಗಾಂಧಿ ಹೇಳಿದ್ದಾರೆಯೇ ಹೊರತು 50% ಮೀಸಲಾತಿಯನ್ನೇ ರದ್ದುಪಡಿಸುತ್ತೇವೆ ಎಂದಿಲ್ಲ.

ಮಣಿಪುರದಿಂದ-ಮುಂಬೈಗೆ ರಾಹುಲ್ ಗಾಂಧಿ ಕೈಗೊಂಡಿರುವ ‘ಭಾರತ್ ಜೋಡೋ ನ್ಯಾಯ ಯಾತ್ರೆ’ ಫೆ.5ರಂದು ಜಾರ್ಖಂಡ್‌ನ ರಾಂಚಿಗೆ ತಲುಪಿತ್ತು. ಅಲ್ಲಿ ಬುಡಕ್ಕಟ್ಟು ಮತ್ತು ಹಿಂದುಳಿದ ಸಮುದಾಯಗಳ ಜನರನ್ನು ಉದ್ದೇಶಿಸಿ ಮಾತನಾಡಿದ್ದ ರಾಹುಲ್ ಗಾಂಧಿ, 50% ಮೀಸಲಾತಿ ಮಿತಿಯನ್ನು ತೆಗೆದುಹಾಕಿ ಮೀಸಲಾತಿ ಹೆಚ್ಚಿಸುವ ಬಗ್ಗೆ ಮಾತನಾಡಿದ್ದಾರೆ. ಅಲ್ಲದೆ, ಮೀಸಲಾತಿಯನ್ನು ರದ್ದುಪಡಿಸುವ ಬಗ್ಗೆ ಹೇಳಿಕೆ ಕೊಟ್ಟಿಲ್ಲ.

ರಾಹುಲ್ ಗಾಂಧಿಯವರ ಹೇಳಿಕೆಯ ವಿಡಿಯೋವನ್ನು ಫೆ.6,2024ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಎಕ್ಸ್‌ ಖಾತೆಯಲ್ಲಿ ಹಂಚಿಕೊಂಡಿದ್ದರು. ವಿಡಿಯೋದಲ್ಲಿ ಹಿಂದಿ ಭಾಷಣದ ಕನ್ನಡ ಭಾಷಾಂತರವೂ ಅಕ್ಷರ ರೂಪದಲ್ಲಿದೆ. ಯಾರೂ ಬೇಕಾದರು ನೋಡಿ ಅರ್ಥೈಸಿಕೊಳ್ಳಬಹುದು.

ವಿಡಿಯೋದ ಜೊತೆಗೆ “ಕೇಂದ್ರದಲ್ಲಿ ಕಾಂಗ್ರೆಸ್ ನೇತೃತ್ವದ ಇಂಡಿಯಾ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಮಾಡುವ ಮೊದಲ ಕೆಲಸವೇ ‘ಮೀಸಲಾತಿಗೆ ಇರುವ ಮಿತಿ’ಯನ್ನು ಕಿತ್ತೆಸೆಯುವುದು ಎಂದು ಸಿಎಂ ಸಿದ್ದರಾಮಯ್ಯ ಬರೆದುಕೊಂಡಿದ್ದರು.

ಹಾಗಾಗಿ, ರಾಹುಲ್ ಗಾಂಧಿ ಮೀಸಲಾತಿ ‘ಮಿತಿ’ಯನ್ನು ಕಿತ್ತೆಸೆಯುತ್ತೇವೆ ಎಂದಿದ್ದಾರೆಯೇ ಹೊರತು ಮೀಸಲಾತಿಯನ್ನೇ ತೆಗೆದು ಹಾಕುತ್ತೇವೆ ಎಂದಿಲ್ಲ. ವೈರಲ್ ಪೋಸ್ಟರ್‌ನಲ್ಲಿ ತಪ್ಪು ಮಾಹಿತಿಯನ್ನು ಹರಡಲಾಗಿದೆ.

ಇದನ್ನೂ ಓದಿ: Fact Check: ಮುಸ್ಲಿಮರು ನಮಾಝ್ ಮುಗಿಸಿ ಬರುವ ಹಳೆಯ ವಿಡಿಯೋ ತಪ್ಪಾಗಿ ಹಂಚಿಕೆ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

'ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು' ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ...

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...

ಚಲಿಸುತ್ತಿದ್ದ ಸ್ಲೀಪರ್ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : ಚಾಲಕ, ಕಂಡಕ್ಟರ್ ಬಂಧನ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 2012ರಲ್ಲಿ ನಡೆದ ನಿರ್ಭಯಾ ಪ್ರಕರಣವನ್ನು ನೆನಪಿಸುವಂತಹ ಆಘಾತಕಾರಿ ಘಟನೆಯೊಂದು ನಡೆದಿದೆ. ಸ್ಲೀಪರ್‌ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. indiatoday.in ವರದಿಯ ಪ್ರಕಾರ, ಈ ಘಟನೆಯು ಆಗಸ್ಟ್ 4ರ...