Homeಮುಖಪುಟಮೋದಿ ಸರ್ಕಾರ ಒಂದು ನಿರ್ದಿಷ್ಟ ಸಮುದಾಯಕ್ಕೆ ಮಾತ್ರ ಸೇರಿದೆಯೇ? ಸಂಸತ್ತಿನಲ್ಲಿ ಓವೈಸಿ ಪ್ರಶ್ನೆ

ಮೋದಿ ಸರ್ಕಾರ ಒಂದು ನಿರ್ದಿಷ್ಟ ಸಮುದಾಯಕ್ಕೆ ಮಾತ್ರ ಸೇರಿದೆಯೇ? ಸಂಸತ್ತಿನಲ್ಲಿ ಓವೈಸಿ ಪ್ರಶ್ನೆ

- Advertisement -
- Advertisement -

ಅಯೋಧ್ಯೆಯ ರಾಮಮಂದಿರದ ಶಂಕುಸ್ಥಾಪನೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಹಾದಿಯಾಗಿ ಇಡೀ ಆಡಳಿತ ಯಂತ್ರವೇ ಭಾಗವಹಿಸಿದ್ದನ್ನು ಪ್ರಶ್ನಿಸಿದ ಆಲ್ ಇಂಡಿಯಾ ಮಜ್ಲಿಸ್-ಎ-ಇತ್ತೆಹಾದುಲ್ ಮುಸ್ಲಿಮೀನ್ (ಎಐಎಂಐಎಂ) ಅಧ್ಯಕ್ಷ ಅಸಾದುದ್ದೀನ್ ಓವೈಸಿ, ನರೇಂದ್ರ ಮೋದಿ ಸರ್ಕಾರ ಕೇವಲ ಒಂದು ನಿರ್ದಿಷ್ಟ ಸಮುದಾಯಕ್ಕೆ ಮಾತ್ರ ಸೇರಿದೆಯೇ ಎಂದು ಪ್ರಶ್ನಿಸಿದ್ದಾರೆ.

ಜನವರಿ 22ರಂದು ನಡೆದ ರಾಮ ಮಂದಿರ ಉದ್ಘಾಟನೆ ಸಂದರ್ಭದಲ್ಲಿ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು  ಸಕ್ರಿಯ ವಾಗಿದ್ದ ಬಗ್ಗೆ ಪ್ರಶ್ನಿಸಿದ ಅಸಾದುದ್ದೀನ್ ಓವೈಸಿ, ರಾಜ್ಯ ಮತ್ತು ಧರ್ಮದ ನಡುವಿನ ಗೆರೆಗಳು ಮಸುಕಾಗಿವೆ. ಧಾರ್ಮಿಕ ಕಾರ್ಯಕ್ರಮಗಳಿಂದ ದೂರ ಉಳಿಯಬೇಕಿರುವ ಭಾರತೀಯ ವಾಯುಸೇನೆ ಕಾರ್ಯಕ್ರಮದ ವೇಳೆ ದೇವಸ್ಥಾನದ ಆವರಣದಲ್ಲಿ ಅಭೂತಪೂರ್ವ ರೀತಿಯಲ್ಲಿ ಹೂವಿನ ದಳಗಳನ್ನು ಸುರಿಸಿದೆ ಎಂದು ಹೇಳಿದ್ದಾರೆ.

ಕೇಂದ್ರ ಸರ್ಕಾರ ಶನಿವಾರ ಲೋಕಸಭೆಯಲ್ಲಿ ರಾಮಮಂದಿರ ಕುರಿತ ವಂದನಾ ನಿರ್ಣಯವನ್ನು ಮಂಡಿಸಿದೆ. ಈ ವೇಳೆ ಮಾತನಾಡಿದ ಹೈದರಾಬಾದ್ ಸಂಸದ ಒವೈಸಿ, ಸರಕಾರಕ್ಕೆ ಧರ್ಮವಿದೆಯೇ? ಈ ದೇಶಕ್ಕೆ ಧರ್ಮವಿಲ್ಲ ಎಂದು ನಾನು ನಂಬುತ್ತೇನೆ. ಜನವರಿ 22ರ ಮೂಲಕ ಈ ಸರ್ಕಾರವು ಒಂದು ಧರ್ಮದ ಮೇಲೆ ಇನ್ನೊಂದು ಧರ್ಮವನ್ನು ಗೆದ್ದಿದೆ ಎಂಬ ಸಂದೇಶವನ್ನು ನೀಡಲು ಬಯಸುತ್ತದೆಯೇ? ದೇಶದಲ್ಲಿರುವ 17 ಕೋಟಿ ಮುಸ್ಲಿಮರಿಗೆ ಏನು ಸಂದೇಶ ನೀಡುತ್ತೀರಿ. ಹಿರಿಯ ಬಿಜೆಪಿ ನಾಯಕ ಎಲ್‌ಕೆ ಅಡ್ವಾಣಿ ನೇತೃತ್ವದಲ್ಲಿ ರಾಮ ಜನ್ಮಭೂಮಿ ಅಭಿಯಾನದ ನಂತರ 1992ರಲ್ಲಿ ಕರಸೇವಕರಿಂದ ಧ್ವಂಸಗೊಂಡ 16ನೇ ಶತಮಾನದ ಬಾಬ್ರಿ ಮಸೀದಿಯ ಸ್ಥಳದಲ್ಲಿ ರಾಮ ಮಂದಿರವನ್ನು ನಿರ್ಮಿಸಲಾಗಿದೆ ಎಂದು ಹೇಳಿದ್ದಾರೆ.

ಬಿಜೆಪಿ ಸಂಸದ ನಿಶಿಕಾಂತ್ ದುಬೆಯ ಬಾಬರ್‌ ಕುರಿತ ಪ್ರಶ್ನೆಗೆ ಪ್ರತಿಕ್ರಿಯಿಸಿದ ಒವೈಸಿ, ನಾನು ಬಾಬರ್, ಜಿನ್ನಾ ಅಥವಾ ಔರಂಗಜೇಬ್‌ನ ವಕ್ತಾರನೇ? ನಾನು ಭಗವಾನ್ ರಾಮನನ್ನು ಗೌರವಿಸುತ್ತೇನೆ ಆದರೆ ನಾನು ನಾಥೂರಾಂ ಗೋಡ್ಸೆಯನ್ನು ದ್ವೇಷಿಸುತ್ತೇನೆ ಏಕೆಂದರೆ ಅವನು ‘ಹೇ ರಾಮ್’ ಎಂದು ಕೊನೆಯ ಮಾತುಗಳನ್ನು ಹೇಳಿದ್ದ ವ್ಯಕ್ತಿಯನ್ನು ಕೊಂದಿದ್ದಾನೆ ಎಂದು ಓವೈಸಿ ಹೇಳಿದ್ದಾರೆ.

ಪ್ರಧಾನಿ ಪಕ್ಷಪಾತಿ ಎಂದು ಆರೋಪಿಸಿದ ಓವೈಸಿ, ಪ್ರಧಾನಿ 140 ಕೋಟಿ ಭಾರತೀಯರ ಪರವಾಗಿ ಮಾತನಾಡುತ್ತಾರೆಯೇ ಅಥವಾ ಹಿಂದುತ್ವವನ್ನು ಬೆಂಬಲಿಸುವವರ ಪರವಾಗಿ ಮಾತ್ರ ಮಾತನಾಡುತ್ತಾರೆಯೇ ಎಂದು ಕೇಳಿದ್ದಾರೆ. ಗುಪ್ತಚರ ವರದಿಗಳ ಹೊರತಾಗಿಯೂ ಮಸೀದಿ ಬಳಿ ಕರಸೇವಕರಿಗೆ ಸೇರಲು ಅವಕಾಶ ನೀಡಿದ ಅಡ್ವಾಣಿ ಮತ್ತು ಮಾಜಿ ಪ್ರಧಾನಿ ಪಿವಿ ನರಸಿಂಹರಾವ್ ಅವರಿಗೆ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ಭಾರತ ರತ್ನ ನೀಡುವ ಕೇಂದ್ರ ಸರ್ಕಾರದ ನಿರ್ಧಾರದ ಬಗ್ಗೆ ಮಾತನಾಡಿದ ಓವೈಸಿ, ಇದು ನ್ಯಾಯವೇ ಅಥವಾ ಅನ್ಯಾಯವೇ ಎಂದು ಪ್ರಶ್ನಿಸಿದರು.

ಹೈದರಾಬಾದ್ ಸಂಸದರು ಡಿಸೆಂಬರ್ 6, 1992ರಂದು ಬಾಬರಿ ಮಸೀದಿಯ ಧ್ವಂಸವನ್ನು ಖಂಡಿಸಿ ಲೋಕಸಭೆಯಲ್ಲಿ ಅಂಗೀಕರಿಸಿದ ನಿರ್ಣಯವನ್ನು ಉಲ್ಲೇಖಿಸಿದ್ದಾರೆ. ಬ್ರಿಟಿಷರ ವಿರುದ್ಧ ಹೋರಾಡಿ ಪ್ರಾಣ ತ್ಯಾಗ ಮಾಡಿದ ಅಯೋಧ್ಯೆಯ ಮೌಲಾನಾ ಅಮೀರ್ ಅಲಿ ಮತ್ತು ಬಾಬಾ ರಾಮಚರಣ್ ದಾಸ್ ಅವರಂತಹ ಜನರು ಪ್ರಸ್ತುತ ಭಾರತಕ್ಕೆ ಅಗತ್ಯವಿದೆ ಎಂದು ಅವರು ಹೇಳಿದ್ದಾರೆ.

ಮೊಘಲ್ ಚಕ್ರವರ್ತಿ ಬಾಬರನ ಕಮಾಂಡರ್ ಮೀರ್ ಬಾಕಿ 1528ರಲ್ಲಿ ನಿರ್ಮಿಸಿದ ಬಾಬರಿ ಮಸೀದಿಯನ್ನು ಹಿಂದುತ್ವ ಸಂಘಟನೆಗಳಿಗೆ ಸೇರಿದ ಕರಸೇವಕರು ಡಿಸೆಂಬರ್ 6, 1992 ರಂದು ಕೆಡವಿದರು. ಆ ಬಳಿಕ ತಿಂಗಳುಗಳ ಕಾಲ ನಡೆದ ಕೋಮು ಗಲಭೆಗಳಿಂದ 2,000ಕ್ಕೂ ಹೆಚ್ಚು ಸಾವುಗಳಿಗೆ ಕಾರಣವಾಯಿತು.

2019ರಲ್ಲಿ ಅಂದಿನ ಮುಖ್ಯನ್ಯಾಯಮೂರ್ತಿ ರಂಜನ್‌ ಗೊಗೊಯಿ ಹಾಗೂ ನ್ಯಾಯಮೂರ್ತಿಗಳಾದ ಎಸ್‌.ಎ ಬೊಬ್ಡೆ, ಡಿ.ವೈ. ಚಂದ್ರಚೂಡ್‌, ಅಶೋಕ್‌ ಭೂಷಣ್‌ ಹಾಗೂ ಅಬ್ದುಲ್ ನಜೀರ್‌ ಅವರನ್ನೊಳಗೊಂಡ ಪೀಠ ಅಯೋಧ್ಯೆ ಭೂ ವಿವಾದದ ಕುರಿತು ತೀರ್ಪು ನೀಡಿತ್ತು. ವಿವಾದಿತ ಸ್ಥಳದಲ್ಲಿ ರಾಮಮಂದಿರ ನಿರ್ಮಾಣಕ್ಕೆ ಗ್ರೀನ್ ಸಿಗ್ನಲ್‌ ನೀಡಿತ್ತು. ಸುಪ್ರೀಂಕೋರ್ಟ್ 2.77 ಎಕರೆ ವಿವಾದಿತ ಭೂಮಿಯನ್ನು ರಾಮ್ ಲಲ್ಲಾಗೆ ನೀಡಿತು ಮತ್ತು ಮಸೀದಿ ನಿರ್ಮಿಸಲು ಮುಸ್ಲಿಮರಿಗೆ ಐದು ಎಕರೆ ಭೂಮಿಯನ್ನು ಮಂಜೂರು ಮಾಡುವಂತೆ ಉತ್ತರಪ್ರದೇಶ ಸರ್ಕಾರಕ್ಕೆ ನಿರ್ದೇಶನ ನೀಡಿತ್ತು. ಮಸೀದಿಯ ಧ್ವಂಸವನ್ನು ಕಾನೂನಿನ ನಿಯಮದ ಉಲ್ಲಂಘನೆ ಎಂದು ಸುಪ್ರೀಂಕೋರ್ಟ್ ಉಲ್ಲೇಖಿಸಿದ್ದರೂ, ವಾಸ್ತವಕ್ಕಿಂತ ನಂಬಿಕೆ ಆಧಾರದಲ್ಲಿ ತೀರ್ಪನ್ನು ನೀಡಲಾಗಿದೆ ಎಂದು ಟೀಕೆ ವ್ಯಕ್ತವಾಗಿತ್ತು.

ಇದನ್ನು ಓದಿ: ಲೋಕಸಭೆ ಚುನಾವಣೆ: ಅಸಂವಿಧಾನಿಕ ‘CAA’ ಅಬ್ಬರ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನ ಬದಲಿಸಿ ಮನುಸ್ಮೃತಿ ತರಲು SIR ಷಡ್ಯಂತ್ರ: ನಟ ಕಿಶೋರ್

ದೇಶದ ಬಹುಕೋಟಿ ಉದ್ಯಮಿ ಗೌತಮ್ ಅದಾನಿಯದ್ದೇ ಇರಲಿ ಅಥವಾ ಒಬ್ಬ ಬಡ ರೈತನದ್ದೇ ಇರಲಿ, ಪ್ರಜಾಪ್ರಭುತ್ವದಲ್ಲಿ ಎಲ್ಲರ ಮತವೂ ಒಂದೇ ಸಮ. ಪ್ರಜೆಗಳನ್ನೆಲ್ಲ ಸಮಾನವಾಗಿ ಕಾಣುವ ಏಕೈಕ ಅಸ್ತ್ರ ಎಂದರೆ ಅದು ಮತದಾನದ...

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

'ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು' ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ...

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...