Homeಮುಖಪುಟಹುದ್ದೆ ತೊರೆಯುವ ಬಗ್ಗೆಯೂ ಯೋಚಿಸಿದೆ..ರಾಜ್ಯಸಭೆ ಅಧಿವೇಶನದ ವೇಳೆ ಕೆರಳಿದ ಸ್ಪೀಕರ್‌

ಹುದ್ದೆ ತೊರೆಯುವ ಬಗ್ಗೆಯೂ ಯೋಚಿಸಿದೆ..ರಾಜ್ಯಸಭೆ ಅಧಿವೇಶನದ ವೇಳೆ ಕೆರಳಿದ ಸ್ಪೀಕರ್‌

- Advertisement -
- Advertisement -

ನಿನ್ನೆ ರಾಜ್ಯಸಭೆ ಅಧಿವೇಶನದ ವೇಳೆ ಹೈಡ್ರಾಮವೇ ನಡೆದಿದೆ. ಚರಣ್‌ ಸಿಂಗ್‌ ಅವರನ್ನು ‘ಭಾರತ ರತ್ನ’ ಗೌರವಕ್ಕೆ ಆಯ್ಕೆ ಮಾಡಿರುವುದರ ಬಗ್ಗೆ ಮಾತನಾಡಲು ಅವರ ಮೊಮ್ಮಗ, ಆರ್‌ಎಲ್‌ಡಿ ಮುಖ್ಯಸ್ಥ ಜಯಂತ್‌ ಸಿಂಗ್‌ ಅವರಿಗೆ ಸ್ಪೀಕರ್‌ ಅವಕಾಶ ನೀಡಿದ್ದರು, ಇದಕ್ಕೆ ಕಾಂಗ್ರೆಸ್‌ ಸಂಸದರು ಆಕ್ಷೇಪಿಸಿದ್ದಕ್ಕೆ ಕೆರಳಿದ ಉಪರಾಷ್ಟ್ರಪತಿ ಮತ್ತು ರಾಜ್ಯಸಭಾ ಅಧ್ಯಕ್ಷ ಜಗದೀಪ್ ಧಂಖರ್ ತೀವ್ರ ವಿಷಾದವನ್ನು ವ್ಯಕ್ತಪಡಿಸಿದ್ದಾರೆ ಮತ್ತು ತಾನು ರಾಜೀನಾಮೆ ನೀಡಲು ಯೋಚಿಸಿದ್ದೆ ಎಂದು ಹೇಳಿಕೊಂಡಿದ್ದಾರೆ.

ಈ ಬೆಳವಣಿಗೆಯು ತನ್ನ ಚಿಕ್ಕ ಮಗನ ಸಾವಿಗಿಂತ ಹೆಚ್ಚು ನೋವುಂಟುಮಾಡಿದೆ ಎಂದ ಧಂಖರ್, ರಮೇಶ್ ಅವರು ‘ಸ್ಮಶಾನದಲ್ಲಿ ಹಬ್ಬ ಮಾಡುವ ವ್ಯಕ್ತಿ’ ಮತ್ತು ಈ ದುರ್ವರ್ತನೆಯಿಂದಾಗಿ ಅವರು ಮೇಲ್ಮನೆ ಸದಸ್ಯರಾಗಿರಲು ಯೋಗ್ಯರಲ್ಲ ಎಂದು ಹೇಳಿದ್ದಾರೆ.

ಜಯಂತ್ ಸಿಂಗ್ ಅವರಿಗೆ ಸದನದಲ್ಲಿ ಮಾತನಾಡಲು ಅವಕಾಶ ನೀಡುವಾಗ ಸಭಾಪತಿ ಸೂಚಿಸಿಲ್ಲ ಅಥವಾ ಭಾರತ ರತ್ನ ನೀಡುವ ಸರ್ಕಾರದ ನಿರ್ಧಾರದ ಬಗ್ಗೆ ಮಾತನಾಡುವ ಬಗ್ಗೆ ಸದನದ ವ್ಯವಹಾರ ಪತ್ರಗಳಲ್ಲಿ ಪಟ್ಟಿ ಮಾಡಿಲ್ಲ ಎಂಬುದು ಜೈರಾಮ್‌ ರಮೇಶ್‌ ವಾದವಾಗಿತ್ತು. ಜೈರಾಮ್ ರಮೇಶ್ ಅವರು ರಾಷ್ಟ್ರೀಯ ಲೋಕದಳದ ಜಯಂತ್ ಸಿಂಗ್ ಅವರಿಗೆ ನೀವು ಎಲ್ಲಿಗೆ ಹೋಗಲು ಬಯಸಿದ್ದೀರಿ? ಸುಳಿವು ಪ್ರಕಾರ ನೀವು ಲೋಕಸಭೆ ಚುನಾಣೆಯಲ್ಲಿ ಪ್ರತಿಪಕ್ಷಗಳೊಂದಿಗೆ ಸಂಬಂಧವನ್ನು ಕಡಿದುಕೊಳ್ಳಲು ಬಿಜೆಪಿಯ ಜೊತೆ ಹೊಂದಾಣಿಕೆ ಮಾಡಲು ಮುಂದಾಗಿದ್ದೀರಿ ಎಂದು ಹೇಳಿದ್ದಾರೆ.

ಇದು ಧಂಖರ್ ಅವರನ್ನು ಕೆರಳಿಸಿದ್ದು, ರಮೇಶ್ ಅವರು ಸದನದಲ್ಲಿ ಇರಲು ಅನರ್ಹರು ಎಂದರು. ನಂತರ ಆರ್ಥಿಕತೆ ಕುರಿತ ಸರ್ಕಾರದ ಶ್ವೇತಪತ್ರದ ಮೇಲಿನ ಚರ್ಚೆಯ ನಂತರ ಸಭಾಪತಿ ಮತ್ತೆ ಜೈರಾಮ್‌ ರಮೇಶ್‌ ಮೇಲೆ ವಾಗ್ದಾಳಿ ನಡೆಸಿದ್ದಾರೆ.

ಜಯಂತ್‌ಗೆ ಜೈರಾಮ್ ರಮೇಶ್ ಹೇಳಿದ್ದನ್ನು ನಾನು ಕೇಳಿದೆ. ನೀವು (ರಮೇಶ್) ಸ್ಮಶಾನದಲ್ಲಿ ಔತಣ ಮಾಡುವ ವ್ಯಕ್ತಿ. ಈ ದುರ್ನಡತೆಗಾಗಿ ನೀವು (ರಮೇಶ್) ಈ ಸದನದ ಭಾಗವಾಗಲು ಅರ್ಹರಲ್ಲ ಎಂಬುದು ಸತ್ಯ ಎಂದು ಸ್ಪೀಕರ್‌ ಹೇಳಿದ್ದಾರೆ, ಈ ಬಗ್ಗೆ ಕಾಂಗ್ರೆಸ್ ಸಂಸದರು ಪ್ರತಿಭಟಿಸುತ್ತಿದ್ದಂತೆ ಧಂಖರ್ ಅವರು ವಿರೋಧ ಪಕ್ಷದ ನಾಯಕ ಮತ್ತು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಮಾತನಾಡಲು ಅವಕಾಶ ನೀಡಿದರು.

ಈ ವೇಳೆ ಮಾತನಾಡಿದ ಖರ್ಗೆ, ನಾಯಕರಿಗೆ ಭಾರತ ರತ್ನ ನೀಡಿ ಗೌರವಿಸುವ ಸರ್ಕಾರದ ನಿರ್ಧಾರದ ಬಗ್ಗೆ ಯಾವುದೇ ಚರ್ಚೆ ಇಲ್ಲ. ನಾನು ಎಲ್ಲರಿಗೂ ವಂದಿಸುತ್ತೇನೆ. ಆದರೆ ಸದಸ್ಯರು ಸಮಸ್ಯೆಯನ್ನು ಪ್ರಸ್ತಾಪಿಸಲು ಬಯಸಿದರೆ, ನೀವು (ಅಧ್ಯಕ್ಷರು) ‘ಯಾವ ನಿಯಮದ ಅಡಿಯಲ್ಲಿ’ ಎಂದು ಕೇಳುತ್ತೀರಿ. ಯಾವ ನಿಯಮದ ಅಡಿಯಲ್ಲಿ ಅವರಿಗೆ (ಜಯಂತ್ ಸಿಂಗ್) ಮಾತನಾಡಲು ಅವಕಾಶ ನೀಡಿದ್ದೀರಿ ಎಂದು (ನಾನು ತಿಳಿಯ ಬಯಸುತ್ತೇನೆ). ನಮಗೂ ಅನುಮತಿ ಕೊಡಿ. ಒಂದು ಕಡೆ ನೀವು ನಿಯಮಗಳ ಬಗ್ಗೆ ಮಾತನಾಡುತ್ತೀರಿ, ನಿಮಗೆ ವಿವೇಚನೆ ಇದೆ, ಆ ವಿವೇಚನೆಯನ್ನು ವಿವೇಚನೆಯಿಂದ ಬಳಸಬೇಕೇ ಹೊರತು ನಿಮಗೆ ಬೇಕಾದಾಗ ಅಲ್ಲ ಎಂದು ಖರ್ಗೆ ಹೇಳಿದರು. ಸಭಾಪತಿ ನಿಯಮಾವಳಿಗಳನ್ನು ಪಾಲಿಸುತ್ತಿಲ್ಲ ಎಂದು ಪ್ರತಿಪಾದಿಸಿದ ಅವರು, ಸದನದ ಅಜೆಂಡಾದಲ್ಲಿ ಭಾರತ ರತ್ನದ ಬಗ್ಗೆ ಚರ್ಚೆಯನ್ನು ಸೇರಿಸಿದ್ದರೆ, ಎಲ್ಲರೂ ಅದರಲ್ಲಿ ಭಾಗವಹಿಸುತ್ತಿದ್ದರು ಎಂದು ಹೇಳಿದರು.

ಖರ್ಗೆಯವರು ಎತ್ತಿರುವ ಆಕ್ಷೇಪಗಳಿಗೆ ಧಂಖರ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ ಮತ್ತು ಕಾಂಗ್ರೆಸ್ ನಾಯಕರು ಚರಣ್ ಸಿಂಗ್ ಮತ್ತು ಅವರ ಪರಂಪರೆಯನ್ನು ಅವಮಾನಿಸಿದ್ದಾರೆ ಎಂದು ಆರೋಪಿಸಿದರು. ಇದೇ ವೇಳೆ ಚೌಧರಿ ಚರಣ್ ಸಿಂಗ್ ಅವರಿಗೆ ಭಾರತ ರತ್ನ ನೀಡುವುದನ್ನು ಕಾಂಗ್ರೆಸ್ ವಿರೋಧಿಸುತ್ತಿದೆ ಎಂದು ಕೇಂದ್ರ ಸಚಿವ ಪರಶೋತ್ತಮ್ ರೂಪಾಲಾ ಹೇಳಿದ್ದಾರೆ. ವಿರೋಧ ಪಕ್ಷದ ನಾಯಕ ಅಧ್ಯಕ್ಷರಿಗೆ ಸವಾಲು ಹಾಕುತ್ತಿದ್ದಾರೆ ಮತ್ತು ಅದೂ ಇಂತಹ ಸಂದರ್ಭದಲ್ಲಿ, ಇದು ಕಾಂಗ್ರೆಸ್‌ನ ಅಸಲಿ ಮುಖ ಎಂದು ಹೇಳಿದ್ದಾರೆ.

ಕೇಂದ್ರ ಸಚಿವ ಪಿಯೂಷ್ ಗೋಯಲ್ ಅವರು ಖರ್ಗೆಯವರು ಪೀಠಕ್ಕೆ ಅಗೌರವ ತೋರಿದ್ದಕ್ಕಾಗಿ ಕ್ಷಮೆಯಾಚಿಸಬೇಕು ಎಂದು ಒತ್ತಾಯಿಸಿದ್ದಾರೆ. ಧಂಖರ್ ಅವರು ಜಯಂತ್ ಸಿಂಗ್ ಅವರಿಂದ ಒಂದೆರಡು ನಿಮಿಷಗಳ ಕಾಲ ಮಾತನಾಡುವ ಬಗ್ಗೆ ಸ್ವೀಕರಿಸಿದ ಮನವಿಯನ್ನು ಓದಿದ್ದಾರೆ.

ಶ್ವೇತಪತ್ರದ ಮೇಲಿನ ಚರ್ಚೆಯ ನಂತರ ಧಂಖರ್ ಮತ್ತೆ ಮಾತನಾಡಿ, ಇಂದು ನನಗೆ ನೋವಿನ ದಿನವಾಗಿತ್ತು.  ನೋವಿನಿಂದ ನಾನು ನಿಮ್ಮ ಗಮನಕ್ಕೆ ಒಂದು ವಿಷಯವನ್ನು ಹಂಚಿಕೊಳ್ಳಲು ಮತ್ತು ಚರ್ಚಿಸಲು ಬಯಸುತ್ತೇನೆ. ಅವರ ವರ್ತನೆಯು ‘ಅನಿರೀಕ್ಷಿತ’, ‘ನಾಚಿಕೆಗೇಡಿನ’ ಮತ್ತು ‘ನೋವು’ ತಂದಿದೆ ಎಂದು ಹೇಳಿದ್ದಾರೆ. ಇದು ನಮ್ಮ ಘನತೆಗೆ ವಿರುದ್ಧವಾಗಿತ್ತು. ಈ ಅವಧಿಯಲ್ಲಿ ನಮ್ಮ ನಡುವಳಿಕೆ ತೀರಾ ಕೆಳಮಟ್ಟದ್ದಾಗಿದ್ದು, ನನಗೆ ನಾಚಿಕೆಯಾಗುತ್ತಿದೆ. ನನ್ನ ಮನಸ್ಸಿನಲ್ಲಿ ವಿವಿಧ ಆಲೋಚನೆಗಳು ಬಂದವು, ನಾನು ಹುದ್ದೆಯನ್ನು ತೊರೆಯುವ ಬಗ್ಗೆಯೂ ಯೋಚಿಸಿದೆ, ರೈತನ ಮಗನಾಗಿ ಕಷ್ಟದ ದಿನಗಳನ್ನು ಕಂಡಿದ್ದೇನೆ. ನನ್ನ ಬೆಳೆದ ಮಗನನ್ನು ಕಳೆದುಕೊಂಡೆ. ಆದರೆ ಇಂದಿನ ನೋವು ಅದಕ್ಕಿಂತ ಹೆಚ್ಚು ಇತ್ತು. ಜಯಂತ್ ಚೌಧರಿ ಮಾತನಾಡುವಾಗ ಜೈರಾಮ್ ರಮೇಶ್ ಹೇಳಿದ್ದೇನು? ನೀವು ಎಲ್ಲಿಗೆ ಹೋಗಬೇಕೋ ಅಲ್ಲಿಗೆ ಹೋಗು ಎಂದು ಹೇಳುವುದನ್ನು ನಾನು ಕೇಳಿದ್ದೇನೆ. ನೀವು ಸ್ಮಶಾನದಲ್ಲಿ ಹಬ್ಬ ಮಾಡಬೇಡಿ, ಇದನ್ನು ನಿರ್ಲಕ್ಷಿಸಲಾಗುವುದಿಲ್ಲ.  ರಾಜಕೀಯ ವಾದಗಳನ್ನು ಬದಿಗಿಟ್ಟು, ನಾಯಕರ ಗೌರವದ ವಿಚಾರದಲ್ಲಿ ನಾವು ಸಂವೇದನಾಶೀಲರಾಗಿರಬೇಕು ಎಂದು ಹೇಳಿದರು. ನನಗೆ ತುಂಬಾ ದುಃಖವಾಗಿದೆ, ನಾವು ಒಂದೇ ಧ್ವನಿಯಲ್ಲಿ ಅದನ್ನು ಖಂಡಿಸಬೇಕು. ವೈಯಕ್ತಿಕವಾಗಿ ನಾನು ಇದನ್ನು ಖಂಡಿಸುತ್ತೇನೆ ಮತ್ತು ನೀವೆಲ್ಲರೂ ಇದನ್ನು ಖಂಡಿಸಬೇಕೆಂದು ನಾನು ವಿನಂತಿಸುತ್ತೇನೆ. ಸದನದಲ್ಲಿ ನಾವು ಅತ್ಯಂತ ಕೆಳಮಟ್ಟಕ್ಕೆ ತಲುಪಿದ್ದೇವೆ, ಅದನ್ನು ಮತ್ತಷ್ಟು ಕೆಳಗಿಳಿಯಲು ಬಿಡಬಾರದು ಎಂದು ಹೇಳಿದ್ದಾರೆ.

ಇದನ್ನು ಓದಿ: ಪತ್ರಕರ್ತ ನಿಖಿಲ್ ವಾಗ್ಲೆ ಮೇಲೆ ದಾಳಿ: 10 ಬಿಜೆಪಿ ಕಾರ್ಯಕರ್ತರ ಬಂಧನ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...