Homeಮುಖಪುಟಇಸ್ರೇಲ್‌-ಪ್ಯಾಲೆಸ್ತೀನ್‌ ಯುದ್ಧ: ಅತಿಭಯಾನಕ '100 ದಿನಗಳು'..

ಇಸ್ರೇಲ್‌-ಪ್ಯಾಲೆಸ್ತೀನ್‌ ಯುದ್ಧ: ಅತಿಭಯಾನಕ ‘100 ದಿನಗಳು’..

- Advertisement -
- Advertisement -

ಇಸ್ರೇಲ್‌- ಪ್ಯಾಲೆಸ್ತೀನ್‌ ವಿರುದ್ಧ ಯುದ್ಧ ಘೋಷಿಸಿ 100 ದಿನಗಳೇ ಕಳೆದಿದೆ. ಪ್ರತಿ 100 ಜನರಲ್ಲಿ ಒಬ್ಬರು ಮತ್ತು ಪ್ರತಿ 85 ಮಕ್ಕಳಲ್ಲಿ ಒಬ್ಬರು, ಕಳೆದ 100 ದಿನಗಳಲ್ಲಿ ಗಾಝಾದಲ್ಲಿ ಮೃತಪಟ್ಟಿದ್ದಾರೆ ಎನ್ನುವ ಶಾಕಿಂಗ್‌ ಅಂಕಿ-ಅಂಶಗಳನ್ನು ಯುಎನ್‌ ಅಧೀನದ 20 ಅರಬ್ ರಾಷ್ಟ್ರಗಳ ಅಂಗವಾದ ಪಶ್ಚಿಮ ಏಷ್ಯಾದ ಆರ್ಥಿಕ ಮತ್ತು ಸಾಮಾಜಿಕ ಆಯೋಗವು ಪ್ರಕಟಿಸಿದ ವರದಿಯು ಬಹಿರಂಗಪಡಿಸಿದೆ. ಈ ದಿನಗಳು 21ನೇ ಶತಮಾನದಲ್ಲಿ  ಎಂದೂ ಕಂಡರಿಯದ 100 ದಿನಗಳ ಭಯಾನಕ ಮಾರಣಾಂತಿಕ ಸಶಸ್ತ್ರ ಸಂಘರ್ಷವಾಗಿದೆ ಎಂದು ವರದಿ ತಿಳಿಸಿದೆ.

ಪಶ್ಚಿಮ ಏಷ್ಯಾದ ಆರ್ಥಿಕ ಮತ್ತು ಸಾಮಾಜಿಕ ಆಯೋಗದ ವರದಿಯು ಎಲ್ಲಾ ಯುದ್ಧಗಳನ್ನು ತಕ್ಷಣವೇ ನಿಲ್ಲಿಸಲು ಕರೆ ನೀಡಿದೆ. ನಾಗರಿಕರನ್ನು ರಕ್ಷಿಸುವ ಅಗತ್ಯವನ್ನು ಮತ್ತು ಮಾನವೀಯ ನೆರವಿನ ಬಗ್ಗೆ ವರದಿಯು ಒತ್ತಿ ಹೇಳಿದೆ.

ಇಸ್ರೇಲ್‌ನಿಂದ ಗಾಝಾದ ಮೇಲಿನ ಯುದ್ಧವು ಜನವರಿ 14ರಂದು ಪ್ರಾರಂಭವಾಗಿದೆ, ಇದೀಗ ಯುದ್ಧ 100 ದಿನಗಳನ್ನೇ ದಾಟಿದೆ. 2023ರ ಅಕ್ಟೋಬರ್ 7ರಂದು ಪ್ರಾರಂಭವಾದ ಯುದ್ಧವು ವಿನಾಶಕ್ಕೆ, ಸ್ಥಳಾಂತರಕ್ಕೆ ಮತ್ತು ಸಾವುಗಳಿಗೆ ಕಾರಣವಾಯಿತು. 2024ರ ಫೆಬ್ರವರಿ 6ರವರೆಗೆ ಯುದ್ಧದಲ್ಲಿ ಸುಮಾರು 27,585 ಪ್ಯಾಲೆಸ್ತೀನ್‌ ನಾಗರಿಕರು ಪ್ರಾಣ ಕಳೆದುಕೊಂಡಿದ್ದಾರೆ ಮತ್ತು 66,978 ಮಂದಿ ಗಾಯಗೊಂಡಿದ್ದಾರೆ ಎನ್ನುವುದನ್ನು ವರದಿಯು ಬಹಿರಂಗಪಡಿಸಿದೆ.

ಪಶ್ಚಿಮ ಏಷ್ಯಾದ ಆರ್ಥಿಕ ಮತ್ತು ಸಾಮಾಜಿಕ ಆಯೋಗ (ECSWA), ಸದಸ್ಯ ರಾಷ್ಟ್ರಗಳಲ್ಲಿನ ಆರ್ಥಿಕ ಮತ್ತು ಸಾಮಾಜಿಕ ಅಭಿವೃದ್ಧಿಯನ್ನು ಬೆಂಬಲಿಸುವ ಗುರಿಯನ್ನು ಹೊಂದಿದೆ ಮತ್ತು ಅವುಗಳ ನಡುವೆ ಪರಸ್ಪರ ಸಹಕಾರವನ್ನು ಉತ್ತೇಜಿಸುತ್ತದೆ. ESCWA 20 ಅರಬ್ ದೇಶಗಳನ್ನು ಒಳಗೊಂಡಿದೆ. ಅಲ್ಜೀರಿಯಾ, ಬಹ್ರೇನ್, ಈಜಿಪ್ಟ್, ಇರಾಕ್, ಜೋರ್ಡಾನ್, ಕುವೈತ್, ಲೆಬನಾನ್, ಲಿಬಿಯಾ, ಮಾರಿಟಾನಿಯಾ, ಮೊರಾಕೊ, ಓಮನ್, ಪ್ಯಾಲೆಸ್ತೀನ್‌, ಕತಾರ್, ಸೌದಿ ಅರೇಬಿಯಾ, ಸುಡಾನ್, ಸೊಮಾಲಿಯಾ, ಸಿರಿಯನ್ ಅರಬ್ ರಿಪಬ್ಲಿಕ್, ಟುನೀಶಿಯಾ , ಯುನೈಟೆಡ್ ಅರಬ್ ಎಮಿರೇಟ್ಸ್ ಮತ್ತು ಯೆಮೆನ್ ಈ ಆಯೋಗಕ್ಕೆ ಒಳಪಡುತ್ತದೆ.

ESCWA ವರದಿಯ ಪ್ರಕಾರ, ಗಾಝಾದಲ್ಲಿ ಪ್ರತಿ 100 ಜನರಲ್ಲಿ ಒಬ್ಬರಿಗಿಂತ ಹೆಚ್ಚು ಜನರು ಕೇವಲ 100 ದಿನಗಳಲ್ಲಿ ಕೊಲ್ಲಲ್ಪಟ್ಟಿದ್ದಾರೆ. ಇದರಿಂದ ಪ್ರತಿದಿನ 240 ಸಾವುಗಳು ಸಂಭವಿಸುತ್ತವೆ, ಈ ಸಾವಿನ ಪ್ರಮಾಣವು 21ನೇ ಶತಮಾನದಲ್ಲಿ ಯಾವುದೇ ಇತರ ಸಶಸ್ತ್ರ ಸಂಘರ್ಷಕ್ಕಿಂತ ಭಯಾನಕವಾಗಿದೆ ಎಂದು ವರದಿ ಹೇಳಿದೆ.

ಹೆಚ್ಚಿನ ಸಂಖ್ಯೆಯಲ್ಲಿ ಮಕ್ಕಳ ಹತ್ಯೆ:

ಗಾಝಾದಲ್ಲಿ ಕೊಲ್ಲಲ್ಪಟ್ಟ 27,585 ಜನರಲ್ಲಿ 12,345 ಮಕ್ಕಳಾಗಿದ್ದಾರೆ. 100 ದಿನಗಳಲ್ಲಿ ಪ್ರತಿ 85ರಲ್ಲಿ ಒಂದು ಮಗು ಕೊಲ್ಲಲ್ಪಟ್ಟಿದೆ ಎಂದು ವರದಿಯು ಹೇಳುತ್ತದೆ. ಇದು ಇತರ ಇತ್ತೀಚಿನ ಸಂಘರ್ಷಕ್ಕೆ ಹೋಲಿಸಿದರೆ ಅತಿ ಹೆಚ್ಚಿನ ಸಂಖ್ಯೆಯಲ್ಲಿ ಸಂಭವಿಸಿದ ಮಕ್ಕಳ ಹತ್ಯೆಯಾಗಿದೆ.

ವರದಿಯು ಎಲ್ಲಾ ಯುದ್ಧಗಳನ್ನು ತಕ್ಷಣವೇ ನಿಲ್ಲಿಸಲು ಕರೆ ನೀಡಿದೆ. ಪ್ಯಾಲೆಸ್ತೀನ್‌ನ ಸಾಮಾಜಿಕ, ಆರ್ಥಿಕ ಮತ್ತು ಸಾಂಸ್ಥಿಕ ರಚನೆಯ ಮೇಲೆ ನಡೆಯುತ್ತಿರುವ ಯುದ್ಧದ ವಿನಾಶಕಾರಿ ಪರಿಣಾಮಗಳು ಮುಂಬರುವ ಪೀಳಿಗೆಯ ಮೇಲೆ ಅಗಾಧ ಪರಿಣಾಮ ಬೀರುತ್ತವೆ. ಈ ಪರಿಣಾಮಗಳು ಭವಿಷ್ಯದ ಹಿಂಸಾಚಾರದ ಅಪಾಯವನ್ನು ತೀವ್ರಗೊಳಿಸುತ್ತವೆ ಎಂದು ವರದಿ ಹೇಳಿದೆ.

ವರದಿಯ ಶಿಫಾರಸುಗಳಲ್ಲಿ ನಾಗರಿಕರ ಜೊತೆಗೆ ಅವರ ಮೂಲಸೌಕರ್ಯವನ್ನು ರಕ್ಷಿಸುವುದು ಮತ್ತು ಮಾನವೀಯ ಸಹಾಯ  ಖಾತ್ರಿಪಡಿಸುವುದು ಸೇರಿದೆ. ಇಂಧನ, ಔಷಧಗಳು, ಉಪಕರಣಗಳು ಮತ್ತು ಮಾನವ ಸಂಪನ್ಮೂಲಗಳನ್ನು ಒದಗಿಸುವ ಮೂಲಕ ಆಸ್ಪತ್ರೆಗಳು ಮತ್ತು ಇತರ ವೈದ್ಯಕೀಯ ಸೌಲಭ್ಯಗಳನ್ನು ಒಳಗೊಂಡಂತೆ ಆರೋಗ್ಯ ಮೂಲಸೌಕರ್ಯಗಳನ್ನು ಪುನರ್‌ನಿರ್ಮಾಣ ಮಾಡುವ ಅಗತ್ಯವನ್ನು ಅದು ಒತ್ತಿ ಹೇಳಿದೆ. ಆಘಾತಕ್ಕೊಳಗಾದ ಜನರಿಗೆ ಮತ್ತು ವಿಶೇಷವಾಗಿ ಮಕ್ಕಳಿಗೆ ಮಾನಸಿಕ ಮತ್ತು ಭಾವನಾತ್ಮಕ ಬೆಂಬಲವನ್ನು ನೀಡಲು ಇದು ನಿರ್ಣಾಯಕವಾಗಿದೆ ಎಂದು ವರದಿ ಹೇಳಿದೆ.

ಗಾಝಾದ ರಫಾದಲ್ಲಿ ವೈಮಾನಿಕ ದಾಳಿಯನ್ನು ತೀವ್ರಗೊಳಿಸಿದ ಇಸ್ರೇಲ್‌:

ಹಮಾಸ್ ನಿಯಂತ್ರಿತ ಪ್ರದೇಶದಲ್ಲಿನ ಆರೋಗ್ಯ ಸಚಿವಾಲಯದ ಪ್ರಕಾರ, ನಿನ್ನೆ ಇಸ್ರೇಲ್‌ ನಡೆಸಿದ ವಾಯುದಾಳಿಗಳಿಗೆ ಗಾಝಾದ ದಕ್ಷಿಣ ಗಡಿಯ ರಾಫಾ ನಗರದಲ್ಲಿ ಕನಿಷ್ಠ 25 ಜನರು ಸಾವನ್ನಪ್ಪಿದ್ದಾರೆ. ಇದಲ್ಲದೆ ಇಸ್ರೇಲ್‌ ಪಡೆಗಳು ಈಗಾಗಲೇ ಎರಡು ಪ್ರಮುಖ ನಗರಗಳಾದ ಗಾಝಾ ಸಿಟಿ ಮತ್ತು ಖಾನ್ ಯೂನಿಸ್‌ಗಳಲ್ಲಿ ಕಾರ್ಯಾಚರಣೆಯನ್ನು ನಡೆಸುತ್ತಿದೆ.

ಯುಎನ್‌ನ ಇತ್ತೀಚಿನ ಸುದ್ದಿಗಳ ಪ್ರಕಾರ, ಈಜಿಪ್ಟ್‌ನ ಗಡಿಯಲ್ಲಿರುವ ದಕ್ಷಿಣ ಗಾಜಾದ ರಫಾ ನಗರವು ಈಗ  ಎರಡು ಮಿಲಿಯನ್‌ಗಿಂತಲೂ ಹೆಚ್ಚು ಜನಸಂಖ್ಯೆಗೆ ಅಂದರೆ ಗಾಝಾದ ಅರ್ಧಕ್ಕಿಂತ ಹೆಚ್ಚು ಜನರಿಗೆ ನೆಲೆಯಾಗಿದೆ. ನಗರದಲ್ಲಿ ಈಗಾಗಲೇ ಸುಮಾರು 2,50,000 ಜನರು ನೆಲೆಸಿದ್ದರು. ಆ ಪ್ರದೇಶದಲ್ಲಿ ಆಹಾರ ಮತ್ತು ಶುದ್ಧ ನೀರಿನ ಸಮಸ್ಯೆ ಉದ್ಭವಿಸಿದೆ, ನೈರ್ಮಲ್ಯ ಸಮಸ್ಯೆ ಎದುರಾಗಿದ್ದು, ನಗರವು ಕೇವಲ ಮೂರು ತಿಂಗಳಲ್ಲಿ ಒಂದು ವರ್ಷದಲ್ಲಿ ಉತ್ಪಾದಿಸುವಷ್ಟು ಕಸವನ್ನು ಉತ್ಪಾದಿಸಿದೆ.

ಇಸ್ರೇಲ್‌ ನಡೆಸುತ್ತಿರುವ ಈ ನರಹತ್ಯೆಯನ್ನು ಮಾನವತಾವಾದಿಗಳು ಮತ್ತು ಇಸ್ರೇಲ್‌ನ ಕೆಲವು ನಿಕಟ ಮಿತ್ರರು ಕೂಡ ತೀವ್ರವಾಗಿ ಟೀಕಿಸಿದ್ದಾರೆ. ರಾಫಾದ ಮೇಲೆ ಇಸ್ರೇಲ್ ಆಕ್ರಮಣವು ದುರಂತವಾಗಿದೆ ಮತ್ತು ಅದು ಮುಂದುವರಿಯಬಾರದು ಎಂದು ಡಾಕ್ಟರ್ಸ್ ವಿದೌಟ್ ಬಾರ್ಡರ್ಸ್ ಹೇಳಿಕೆಯಲ್ಲಿ ತಿಳಿಸಿದೆ. ಗಾಝಾದಲ್ಲಿ ಸುರಕ್ಷಿತವಾದ ಸ್ಥಳವಿಲ್ಲ ಮತ್ತು ಗಾಝಾದ ಜನರಿಗೆ ಅಲ್ಲಿಂದ ನಿರ್ಗಮಿಸಲು ಯಾವುದೇ ಮಾರ್ಗವಿಲ್ಲ ಎಂದು ಹೇಳಿದ್ದಾರೆ. UNRWA ಏಜೆನ್ಸಿಯ ಮುಖ್ಯಸ್ಥರಾದ ಫಿಲಿಪ್ ಲಾಝಾರಿನಿ ಮಾತನಾಡಿ, ರಾಫಾದಲ್ಲಿ ಆತಂಕ ಹೆಚ್ಚುತ್ತಿದೆ, ಜನರಿಗೆ ಎಲ್ಲಿಗೆ ಹೋಗಬೇಕೆಂದು ತಿಳಿದಿಲ್ಲ ಎಂದು ಹೇಳಿದ್ದಾರೆ. ನಿರಾಶ್ರಿತರ ಶಿಬಿರದ ಮೇಲಿನ ಯಾವುದೇ ಯುದ್ಧವನ್ನು ಸ್ವೀಕರಿಸಲು ಸಾಧ್ಯವಿಲ್ಲ ಎಂದು ನಾರ್ವೇಜಿಯನ್ ನಿರಾಶ್ರಿತರ ಮಂಡಳಿಯ ಪ್ರಧಾನ ಕಾರ್ಯದರ್ಶಿ ಜಾನ್ ಎಗೆಲ್ಯಾಂಡ್ ಕೂಡ ಹೇಳಿದ್ದಾರೆ.

ಇದನ್ನು ಓದಿ; ಮೋದಿ ಸರ್ಕಾರ ಒಂದು ನಿರ್ದಿಷ್ಟ ಸಮುದಾಯಕ್ಕೆ ಮಾತ್ರ ಸೇರಿದೆಯೇ? ಸಂಸತ್ತಿನಲ್ಲಿ ಓವೈಸಿ ಪ್ರಶ್ನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನ ಬದಲಿಸಿ ಮನುಸ್ಮೃತಿ ತರಲು SIR ಷಡ್ಯಂತ್ರ: ನಟ ಕಿಶೋರ್

ದೇಶದ ಬಹುಕೋಟಿ ಉದ್ಯಮಿ ಗೌತಮ್ ಅದಾನಿಯದ್ದೇ ಇರಲಿ ಅಥವಾ ಒಬ್ಬ ಬಡ ರೈತನದ್ದೇ ಇರಲಿ, ಪ್ರಜಾಪ್ರಭುತ್ವದಲ್ಲಿ ಎಲ್ಲರ ಮತವೂ ಒಂದೇ ಸಮ. ಪ್ರಜೆಗಳನ್ನೆಲ್ಲ ಸಮಾನವಾಗಿ ಕಾಣುವ ಏಕೈಕ ಅಸ್ತ್ರ ಎಂದರೆ ಅದು ಮತದಾನದ...

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

'ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು' ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ...

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...