Homeಮುಖಪುಟಇಸ್ರೇಲ್‌-ಪ್ಯಾಲೆಸ್ತೀನ್‌ ಯುದ್ಧ: ಅತಿಭಯಾನಕ '100 ದಿನಗಳು'..

ಇಸ್ರೇಲ್‌-ಪ್ಯಾಲೆಸ್ತೀನ್‌ ಯುದ್ಧ: ಅತಿಭಯಾನಕ ‘100 ದಿನಗಳು’..

- Advertisement -
- Advertisement -

ಇಸ್ರೇಲ್‌- ಪ್ಯಾಲೆಸ್ತೀನ್‌ ವಿರುದ್ಧ ಯುದ್ಧ ಘೋಷಿಸಿ 100 ದಿನಗಳೇ ಕಳೆದಿದೆ. ಪ್ರತಿ 100 ಜನರಲ್ಲಿ ಒಬ್ಬರು ಮತ್ತು ಪ್ರತಿ 85 ಮಕ್ಕಳಲ್ಲಿ ಒಬ್ಬರು, ಕಳೆದ 100 ದಿನಗಳಲ್ಲಿ ಗಾಝಾದಲ್ಲಿ ಮೃತಪಟ್ಟಿದ್ದಾರೆ ಎನ್ನುವ ಶಾಕಿಂಗ್‌ ಅಂಕಿ-ಅಂಶಗಳನ್ನು ಯುಎನ್‌ ಅಧೀನದ 20 ಅರಬ್ ರಾಷ್ಟ್ರಗಳ ಅಂಗವಾದ ಪಶ್ಚಿಮ ಏಷ್ಯಾದ ಆರ್ಥಿಕ ಮತ್ತು ಸಾಮಾಜಿಕ ಆಯೋಗವು ಪ್ರಕಟಿಸಿದ ವರದಿಯು ಬಹಿರಂಗಪಡಿಸಿದೆ. ಈ ದಿನಗಳು 21ನೇ ಶತಮಾನದಲ್ಲಿ  ಎಂದೂ ಕಂಡರಿಯದ 100 ದಿನಗಳ ಭಯಾನಕ ಮಾರಣಾಂತಿಕ ಸಶಸ್ತ್ರ ಸಂಘರ್ಷವಾಗಿದೆ ಎಂದು ವರದಿ ತಿಳಿಸಿದೆ.

ಪಶ್ಚಿಮ ಏಷ್ಯಾದ ಆರ್ಥಿಕ ಮತ್ತು ಸಾಮಾಜಿಕ ಆಯೋಗದ ವರದಿಯು ಎಲ್ಲಾ ಯುದ್ಧಗಳನ್ನು ತಕ್ಷಣವೇ ನಿಲ್ಲಿಸಲು ಕರೆ ನೀಡಿದೆ. ನಾಗರಿಕರನ್ನು ರಕ್ಷಿಸುವ ಅಗತ್ಯವನ್ನು ಮತ್ತು ಮಾನವೀಯ ನೆರವಿನ ಬಗ್ಗೆ ವರದಿಯು ಒತ್ತಿ ಹೇಳಿದೆ.

ಇಸ್ರೇಲ್‌ನಿಂದ ಗಾಝಾದ ಮೇಲಿನ ಯುದ್ಧವು ಜನವರಿ 14ರಂದು ಪ್ರಾರಂಭವಾಗಿದೆ, ಇದೀಗ ಯುದ್ಧ 100 ದಿನಗಳನ್ನೇ ದಾಟಿದೆ. 2023ರ ಅಕ್ಟೋಬರ್ 7ರಂದು ಪ್ರಾರಂಭವಾದ ಯುದ್ಧವು ವಿನಾಶಕ್ಕೆ, ಸ್ಥಳಾಂತರಕ್ಕೆ ಮತ್ತು ಸಾವುಗಳಿಗೆ ಕಾರಣವಾಯಿತು. 2024ರ ಫೆಬ್ರವರಿ 6ರವರೆಗೆ ಯುದ್ಧದಲ್ಲಿ ಸುಮಾರು 27,585 ಪ್ಯಾಲೆಸ್ತೀನ್‌ ನಾಗರಿಕರು ಪ್ರಾಣ ಕಳೆದುಕೊಂಡಿದ್ದಾರೆ ಮತ್ತು 66,978 ಮಂದಿ ಗಾಯಗೊಂಡಿದ್ದಾರೆ ಎನ್ನುವುದನ್ನು ವರದಿಯು ಬಹಿರಂಗಪಡಿಸಿದೆ.

ಪಶ್ಚಿಮ ಏಷ್ಯಾದ ಆರ್ಥಿಕ ಮತ್ತು ಸಾಮಾಜಿಕ ಆಯೋಗ (ECSWA), ಸದಸ್ಯ ರಾಷ್ಟ್ರಗಳಲ್ಲಿನ ಆರ್ಥಿಕ ಮತ್ತು ಸಾಮಾಜಿಕ ಅಭಿವೃದ್ಧಿಯನ್ನು ಬೆಂಬಲಿಸುವ ಗುರಿಯನ್ನು ಹೊಂದಿದೆ ಮತ್ತು ಅವುಗಳ ನಡುವೆ ಪರಸ್ಪರ ಸಹಕಾರವನ್ನು ಉತ್ತೇಜಿಸುತ್ತದೆ. ESCWA 20 ಅರಬ್ ದೇಶಗಳನ್ನು ಒಳಗೊಂಡಿದೆ. ಅಲ್ಜೀರಿಯಾ, ಬಹ್ರೇನ್, ಈಜಿಪ್ಟ್, ಇರಾಕ್, ಜೋರ್ಡಾನ್, ಕುವೈತ್, ಲೆಬನಾನ್, ಲಿಬಿಯಾ, ಮಾರಿಟಾನಿಯಾ, ಮೊರಾಕೊ, ಓಮನ್, ಪ್ಯಾಲೆಸ್ತೀನ್‌, ಕತಾರ್, ಸೌದಿ ಅರೇಬಿಯಾ, ಸುಡಾನ್, ಸೊಮಾಲಿಯಾ, ಸಿರಿಯನ್ ಅರಬ್ ರಿಪಬ್ಲಿಕ್, ಟುನೀಶಿಯಾ , ಯುನೈಟೆಡ್ ಅರಬ್ ಎಮಿರೇಟ್ಸ್ ಮತ್ತು ಯೆಮೆನ್ ಈ ಆಯೋಗಕ್ಕೆ ಒಳಪಡುತ್ತದೆ.

ESCWA ವರದಿಯ ಪ್ರಕಾರ, ಗಾಝಾದಲ್ಲಿ ಪ್ರತಿ 100 ಜನರಲ್ಲಿ ಒಬ್ಬರಿಗಿಂತ ಹೆಚ್ಚು ಜನರು ಕೇವಲ 100 ದಿನಗಳಲ್ಲಿ ಕೊಲ್ಲಲ್ಪಟ್ಟಿದ್ದಾರೆ. ಇದರಿಂದ ಪ್ರತಿದಿನ 240 ಸಾವುಗಳು ಸಂಭವಿಸುತ್ತವೆ, ಈ ಸಾವಿನ ಪ್ರಮಾಣವು 21ನೇ ಶತಮಾನದಲ್ಲಿ ಯಾವುದೇ ಇತರ ಸಶಸ್ತ್ರ ಸಂಘರ್ಷಕ್ಕಿಂತ ಭಯಾನಕವಾಗಿದೆ ಎಂದು ವರದಿ ಹೇಳಿದೆ.

ಹೆಚ್ಚಿನ ಸಂಖ್ಯೆಯಲ್ಲಿ ಮಕ್ಕಳ ಹತ್ಯೆ:

ಗಾಝಾದಲ್ಲಿ ಕೊಲ್ಲಲ್ಪಟ್ಟ 27,585 ಜನರಲ್ಲಿ 12,345 ಮಕ್ಕಳಾಗಿದ್ದಾರೆ. 100 ದಿನಗಳಲ್ಲಿ ಪ್ರತಿ 85ರಲ್ಲಿ ಒಂದು ಮಗು ಕೊಲ್ಲಲ್ಪಟ್ಟಿದೆ ಎಂದು ವರದಿಯು ಹೇಳುತ್ತದೆ. ಇದು ಇತರ ಇತ್ತೀಚಿನ ಸಂಘರ್ಷಕ್ಕೆ ಹೋಲಿಸಿದರೆ ಅತಿ ಹೆಚ್ಚಿನ ಸಂಖ್ಯೆಯಲ್ಲಿ ಸಂಭವಿಸಿದ ಮಕ್ಕಳ ಹತ್ಯೆಯಾಗಿದೆ.

ವರದಿಯು ಎಲ್ಲಾ ಯುದ್ಧಗಳನ್ನು ತಕ್ಷಣವೇ ನಿಲ್ಲಿಸಲು ಕರೆ ನೀಡಿದೆ. ಪ್ಯಾಲೆಸ್ತೀನ್‌ನ ಸಾಮಾಜಿಕ, ಆರ್ಥಿಕ ಮತ್ತು ಸಾಂಸ್ಥಿಕ ರಚನೆಯ ಮೇಲೆ ನಡೆಯುತ್ತಿರುವ ಯುದ್ಧದ ವಿನಾಶಕಾರಿ ಪರಿಣಾಮಗಳು ಮುಂಬರುವ ಪೀಳಿಗೆಯ ಮೇಲೆ ಅಗಾಧ ಪರಿಣಾಮ ಬೀರುತ್ತವೆ. ಈ ಪರಿಣಾಮಗಳು ಭವಿಷ್ಯದ ಹಿಂಸಾಚಾರದ ಅಪಾಯವನ್ನು ತೀವ್ರಗೊಳಿಸುತ್ತವೆ ಎಂದು ವರದಿ ಹೇಳಿದೆ.

ವರದಿಯ ಶಿಫಾರಸುಗಳಲ್ಲಿ ನಾಗರಿಕರ ಜೊತೆಗೆ ಅವರ ಮೂಲಸೌಕರ್ಯವನ್ನು ರಕ್ಷಿಸುವುದು ಮತ್ತು ಮಾನವೀಯ ಸಹಾಯ  ಖಾತ್ರಿಪಡಿಸುವುದು ಸೇರಿದೆ. ಇಂಧನ, ಔಷಧಗಳು, ಉಪಕರಣಗಳು ಮತ್ತು ಮಾನವ ಸಂಪನ್ಮೂಲಗಳನ್ನು ಒದಗಿಸುವ ಮೂಲಕ ಆಸ್ಪತ್ರೆಗಳು ಮತ್ತು ಇತರ ವೈದ್ಯಕೀಯ ಸೌಲಭ್ಯಗಳನ್ನು ಒಳಗೊಂಡಂತೆ ಆರೋಗ್ಯ ಮೂಲಸೌಕರ್ಯಗಳನ್ನು ಪುನರ್‌ನಿರ್ಮಾಣ ಮಾಡುವ ಅಗತ್ಯವನ್ನು ಅದು ಒತ್ತಿ ಹೇಳಿದೆ. ಆಘಾತಕ್ಕೊಳಗಾದ ಜನರಿಗೆ ಮತ್ತು ವಿಶೇಷವಾಗಿ ಮಕ್ಕಳಿಗೆ ಮಾನಸಿಕ ಮತ್ತು ಭಾವನಾತ್ಮಕ ಬೆಂಬಲವನ್ನು ನೀಡಲು ಇದು ನಿರ್ಣಾಯಕವಾಗಿದೆ ಎಂದು ವರದಿ ಹೇಳಿದೆ.

ಗಾಝಾದ ರಫಾದಲ್ಲಿ ವೈಮಾನಿಕ ದಾಳಿಯನ್ನು ತೀವ್ರಗೊಳಿಸಿದ ಇಸ್ರೇಲ್‌:

ಹಮಾಸ್ ನಿಯಂತ್ರಿತ ಪ್ರದೇಶದಲ್ಲಿನ ಆರೋಗ್ಯ ಸಚಿವಾಲಯದ ಪ್ರಕಾರ, ನಿನ್ನೆ ಇಸ್ರೇಲ್‌ ನಡೆಸಿದ ವಾಯುದಾಳಿಗಳಿಗೆ ಗಾಝಾದ ದಕ್ಷಿಣ ಗಡಿಯ ರಾಫಾ ನಗರದಲ್ಲಿ ಕನಿಷ್ಠ 25 ಜನರು ಸಾವನ್ನಪ್ಪಿದ್ದಾರೆ. ಇದಲ್ಲದೆ ಇಸ್ರೇಲ್‌ ಪಡೆಗಳು ಈಗಾಗಲೇ ಎರಡು ಪ್ರಮುಖ ನಗರಗಳಾದ ಗಾಝಾ ಸಿಟಿ ಮತ್ತು ಖಾನ್ ಯೂನಿಸ್‌ಗಳಲ್ಲಿ ಕಾರ್ಯಾಚರಣೆಯನ್ನು ನಡೆಸುತ್ತಿದೆ.

ಯುಎನ್‌ನ ಇತ್ತೀಚಿನ ಸುದ್ದಿಗಳ ಪ್ರಕಾರ, ಈಜಿಪ್ಟ್‌ನ ಗಡಿಯಲ್ಲಿರುವ ದಕ್ಷಿಣ ಗಾಜಾದ ರಫಾ ನಗರವು ಈಗ  ಎರಡು ಮಿಲಿಯನ್‌ಗಿಂತಲೂ ಹೆಚ್ಚು ಜನಸಂಖ್ಯೆಗೆ ಅಂದರೆ ಗಾಝಾದ ಅರ್ಧಕ್ಕಿಂತ ಹೆಚ್ಚು ಜನರಿಗೆ ನೆಲೆಯಾಗಿದೆ. ನಗರದಲ್ಲಿ ಈಗಾಗಲೇ ಸುಮಾರು 2,50,000 ಜನರು ನೆಲೆಸಿದ್ದರು. ಆ ಪ್ರದೇಶದಲ್ಲಿ ಆಹಾರ ಮತ್ತು ಶುದ್ಧ ನೀರಿನ ಸಮಸ್ಯೆ ಉದ್ಭವಿಸಿದೆ, ನೈರ್ಮಲ್ಯ ಸಮಸ್ಯೆ ಎದುರಾಗಿದ್ದು, ನಗರವು ಕೇವಲ ಮೂರು ತಿಂಗಳಲ್ಲಿ ಒಂದು ವರ್ಷದಲ್ಲಿ ಉತ್ಪಾದಿಸುವಷ್ಟು ಕಸವನ್ನು ಉತ್ಪಾದಿಸಿದೆ.

ಇಸ್ರೇಲ್‌ ನಡೆಸುತ್ತಿರುವ ಈ ನರಹತ್ಯೆಯನ್ನು ಮಾನವತಾವಾದಿಗಳು ಮತ್ತು ಇಸ್ರೇಲ್‌ನ ಕೆಲವು ನಿಕಟ ಮಿತ್ರರು ಕೂಡ ತೀವ್ರವಾಗಿ ಟೀಕಿಸಿದ್ದಾರೆ. ರಾಫಾದ ಮೇಲೆ ಇಸ್ರೇಲ್ ಆಕ್ರಮಣವು ದುರಂತವಾಗಿದೆ ಮತ್ತು ಅದು ಮುಂದುವರಿಯಬಾರದು ಎಂದು ಡಾಕ್ಟರ್ಸ್ ವಿದೌಟ್ ಬಾರ್ಡರ್ಸ್ ಹೇಳಿಕೆಯಲ್ಲಿ ತಿಳಿಸಿದೆ. ಗಾಝಾದಲ್ಲಿ ಸುರಕ್ಷಿತವಾದ ಸ್ಥಳವಿಲ್ಲ ಮತ್ತು ಗಾಝಾದ ಜನರಿಗೆ ಅಲ್ಲಿಂದ ನಿರ್ಗಮಿಸಲು ಯಾವುದೇ ಮಾರ್ಗವಿಲ್ಲ ಎಂದು ಹೇಳಿದ್ದಾರೆ. UNRWA ಏಜೆನ್ಸಿಯ ಮುಖ್ಯಸ್ಥರಾದ ಫಿಲಿಪ್ ಲಾಝಾರಿನಿ ಮಾತನಾಡಿ, ರಾಫಾದಲ್ಲಿ ಆತಂಕ ಹೆಚ್ಚುತ್ತಿದೆ, ಜನರಿಗೆ ಎಲ್ಲಿಗೆ ಹೋಗಬೇಕೆಂದು ತಿಳಿದಿಲ್ಲ ಎಂದು ಹೇಳಿದ್ದಾರೆ. ನಿರಾಶ್ರಿತರ ಶಿಬಿರದ ಮೇಲಿನ ಯಾವುದೇ ಯುದ್ಧವನ್ನು ಸ್ವೀಕರಿಸಲು ಸಾಧ್ಯವಿಲ್ಲ ಎಂದು ನಾರ್ವೇಜಿಯನ್ ನಿರಾಶ್ರಿತರ ಮಂಡಳಿಯ ಪ್ರಧಾನ ಕಾರ್ಯದರ್ಶಿ ಜಾನ್ ಎಗೆಲ್ಯಾಂಡ್ ಕೂಡ ಹೇಳಿದ್ದಾರೆ.

ಇದನ್ನು ಓದಿ; ಮೋದಿ ಸರ್ಕಾರ ಒಂದು ನಿರ್ದಿಷ್ಟ ಸಮುದಾಯಕ್ಕೆ ಮಾತ್ರ ಸೇರಿದೆಯೇ? ಸಂಸತ್ತಿನಲ್ಲಿ ಓವೈಸಿ ಪ್ರಶ್ನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ರಾಜಭವನ’ಗಳನ್ನು ‘ಲೋಕಭವನ’ಗಳೆಂದು ಮರುನಾಮಕರಣ; ಇದು ಒಕ್ಕೂಟ ವ್ಯವಸ್ಥೆ ಮತ್ತು ಭಾಷಾ ಸಮಾನತೆಯ ಮೇಲಿನ ಆಕ್ರಮಣ: ಜಾಗೃತ ಕರ್ನಾಟಕ

ದೇಶಾದಾದ್ಯಂತ ಇರುವ ರಾಜಭವನಗಳ ಹೆಸರನ್ನು ಲೋಕಭವನ ಎಂದು ಮರುನಾಮಕರಣ ಮಾಡುವುದಾಗಿ ಕೇಂದ್ರ ಗೃಹಸಚಿವಾಲಯ ತೀರ್ಮಾನಿಸಿದೆ. ಕೇಂದ್ರದ  ಈ ನೀತಿಯನ್ನು ವಿರೋಧಿಸಿರುವ ಜಾಗೃತ ಕರ್ನಾಟಕ ದೇಶದ ಎಲ್ಲಾ ಹಿಂದಿಯೇತರ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದೆ....

ಯುಜಿಸಿ ಈಕ್ವಿಟಿ ನಿಯಮಗಳ ಮೇಲಿನ ಸುಪ್ರೀಂ ಕೋರ್ಟ್ ತಡೆಗೆ ವಿದ್ಯಾರ್ಥಿಗಳ ಪ್ರತಿಭಟನೆ, ರೋಹಿತ್ ಕಾಯ್ದೆಗೆ ಒತ್ತಾಯ

ಯುಜಿಸಿ ಇಕ್ವಿಟಿ ನಿಯಮಗಳಿಗೆ ಸುಪ್ರೀಂ ಕೋರ್ಟ್ ನೀಡಿದ ತಡೆಯಾಜ್ಞೆಯ ವಿರುದ್ಧ ಮತ್ತು ವಿಶ್ವವಿದ್ಯಾಲಯಗಳಲ್ಲಿ ಜಾತಿ ತಾರತಮ್ಯವನ್ನು ಎದುರಿಸಲು ಶಾಸನಬದ್ಧ ರೋಹಿತ್ ಕಾಯ್ದೆಯನ್ನು ಜಾರಿಗೆ ತರುವಂತೆ ಒತ್ತಾಯಿಸಿ ಅಖಿಲ ಭಾರತ ವಿದ್ಯಾರ್ಥಿ ಸಂಘ (ಎಐಎಸ್ಎ)...

ನರವಾಣೆ ಅಪ್ರಕಟಿತ ಪುಸ್ತಕ ಗದ್ದಲ | ಸತ್ಯ ಹೊರಬಂದರೆ ಮೋದಿ, ರಾಜನಾಥ್ ಸಿಂಗ್ ಮುಖವಾಡ ಬಯಲಾಗಲಿದೆ : ರಾಹುಲ್ ಗಾಂಧಿ

ಮಾಜಿ ಸೇನಾ ಮುಖ್ಯಸ್ಥ ಜನರಲ್ ಮನೋಜ್ ಮುಕುಂದ್ ನರವಾಣೆ ಅವರ ಅಪ್ರಕಟಿತ ಆತ್ಮಚರಿತ್ರೆ ಕುರಿತು ರಾಹುಲ್ ಗಾಂಧಿ ಸೋಮವಾರ (ಫೆ.2) ಲೋಕಸಭೆಯಲ್ಲಿ ಉಲ್ಲೇಖಿಸಿದ್ದು, ಈ ವೇಳೆ ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ತೀವ್ರ...

ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ಘರ್ಷಣೆ : ಮೂವರ ಬಂಧನ

ಗುಜರಾತ್‌ನ ಪಠಾಣ್ ತಾಲೂಕಿನ ಚದ್ರುಮಣ ಗ್ರಾಮದಲ್ಲಿ ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ನಡೆದ ಗಲಾಟೆಗೆ ಸಂಬಂಧಿಸಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದು, ಇನ್ನೂ ಐವರ ಬಂಧನಕ್ಕೆ ಬಲೆ ಬೀಸಿದ್ದಾರೆ. ಆರೋಪಿಗಳ ವಿರುದ್ದ ಎಸ್‌ಸಿ/ಎಸ್‌ಟಿ...

ಲೋಕಸಭೆಯಲ್ಲಿ ಲಡಾಖ್ ಬಿಕ್ಕಟ್ಟಿನ ಬಗ್ಗೆ ಮಾಜಿ ಸೇನಾ ಮುಖ್ಯಸ್ಥರ ಅಪ್ರಕಟಿತ ಆತ್ಮಚರಿತ್ರೆ ಉಲ್ಲೇಖಿಸಿದ ರಾಹುಲ್ ಗಾಂಧಿ: ಸಭೆಯಲ್ಲಿ ತೀವ್ರ ಗದ್ದಲ

ಸೋಮವಾರ ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಮಾಜಿ ಸೇನಾ ಮುಖ್ಯಸ್ಥ ಎಂಎಂ ನರವಾಣೆ ಅವರ ಆತ್ಮಚರಿತ್ರೆಯಿಂದ ಉಲ್ಲೇಖಿಸಲು ಪ್ರಯತ್ನಿಸಿದ ನಂತರ ಗದ್ದಲ ಭುಗಿಲೆದ್ದಿತು. ರಾಹುಲ್ ಮಾತನಾಡಲು ಪ್ರಾರಂಭಿಸುತ್ತಿದ್ದಂತೆ, ರಕ್ಷಣಾ ಸಚಿವ...

ಪಂಜಾಬ್ ನಿರೀಕ್ಷೆಗಳನ್ನು ಪೂರೈಸುವಲ್ಲಿ ಕೇಂದ್ರ ಬಜೆಟ್ ಮತ್ತೊಮ್ಮೆ ವಿಫಲವಾಗಿದೆ: ಸಿಎಂ ಭಗವಂತ್ ಮಾನ್

ಕೇಂದ್ರ ಬಜೆಟ್ ಮತ್ತೊಮ್ಮೆ ಪಂಜಾಬ್‌ನ ನಿರೀಕ್ಷೆಗಳನ್ನು ಪೂರೈಸುವಲ್ಲಿ ವಿಫಲವಾಗಿದೆ ಎಂದು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಮತ್ತು ಆಡಳಿತಾರೂಢ ಆಮ್ ಆದ್ಮಿ ಪಕ್ಷದ (ಎಎಪಿ) ಸರ್ಕಾರದ ಸಚಿವರು ಭಾನುವಾರ ಅಭಿಪ್ರಾಯಪಟ್ಟಿದ್ದಾರೆ. ಬಜೆಟ್ ರೈತರಿಗೆ ಯಾವುದೇ...

ರಾಜ್ಯಪಾಲರು ಪೂರ್ಣ ಭಾಷಣ ಓದಿಲ್ಲ, ‘ಜೈ ಸಂವಿಧಾನ’ ಎನ್ನುವುದನ್ನು ಉಲ್ಲೇಖಿಸದೆ ಹೋದರು : ಸಿಎಂ ಸಿದ್ದರಾಮಯ್ಯ

ರಾಜ್ಯಪಾಲರು ಪೂರ್ತಿ ಭಾಷಣ ಓದದೆ ತರಾತುರಿಯಲ್ಲಿ ಹೋದರು. ಭಾಷಣದಲ್ಲಿದ್ದ "ಜೈ ಸಂವಿಧಾನ" ಎನ್ನುವುದನ್ನೂ ಉಲ್ಲೇಖಿಸದೆ ತೆರಳಿದರು. ರಾಷ್ಟ್ರಗೀತೆ ಮುಗಿಯುವವರೆಗೂ ಕಾಯದೆ ಹೋಗಿಬಿಟ್ಟರು. ಇದು ಸರಿಯಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಬಿಜೆಪಿ ಶಾಸಕ...

ಉತ್ತರಾಖಂಡ| ಹಿಂದುತ್ವ ಗುಂಪಿನ ಕಿರುಕುಳದಿಂದ ಮುಸ್ಲಿಂ ಅಂಗಡಿ ಮಾಲೀಕನನ್ನು ರಕ್ಷಿಸಿದ ದೀಪಕ್ ಕುಮಾರ್

ಸ್ಥಳೀಯ ಮುಸ್ಲಿಂ ಅಂಗಡಿ ಮಾಲೀಕನ ವಿರುದ್ಧ ಬಜರಂಗದಳ ಸದಸ್ಯರು ನೀಡುತ್ತಿದ್ದ ಕಿರುಕುಳವನ್ನು ಜಿಮ್ ಮಾಲೀಕ ದೀಪಕ್ ಕುಮಾರ್ ಸ್ಥಳದಲ್ಲೇ ಎದುರಿಸಿದ್ದಾರೆ. ಆಕ್ರೋಶಿತರಾದ ಹಿಂದುತ್ವ ಗುಂಪಿನ ಸದಸ್ಯರು ದೀಪಕ್ ವಿರುದ್ಧವೇ ಪ್ರತಿಭಟನೆ ನಡೆಸಿದ್ದು, ಹಲವಾರ...

ಎಸ್‌ಐಆರ್ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ನಡೆಸುವ ಭಾರತೀಯ ಚುನಾವಣಾ ಆಯೋಗದ (ಇಸಿಐ) ನಿರ್ಧಾರವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ...

ದಕ್ಷಿಣ ಪಿನಾಕಿನಿ ಜಲವಿವಾದ : ನ್ಯಾಯಮಂಡಳಿ ಸ್ಥಾಪಿಸಲು ಸುಪ್ರೀಂ ಕೋರ್ಟ್ ಆದೇಶ

ದಕ್ಷಿಣ ಪಿನಾಕಿನಿ (ಪೆನ್ನೈಯಾರ್) ನದಿ ನೀರಿನ ಹಂಚಿಕೆಗೆ ಸಂಬಂಧಿಸಿದಂತೆ ತಮಿಳುನಾಡು ಮತ್ತು ಕರ್ನಾಟಕ ರಾಜ್ಯಗಳ ನಡುವೆ ಬಾಕಿ ಇರುವ ವಿವಾದಗಳನ್ನು ಪರಿಹರಿಸಲು ನ್ಯಾಯಮಂಡಳಿ ಸ್ಥಾಪಿಸುವಂತೆ ಸುಪ್ರೀಂ ಕೋರ್ಟ್ ಸೋಮವಾರ (ಫೆ.2) ನಿರ್ದೇಶನ ನೀಡಿದೆ. ಕೇಂದ್ರ...