Homeಅಂತರಾಷ್ಟ್ರೀಯಭಾರತ ಪಾಕಿಸ್ತಾನ ದೇಶಗಳ ಸಂಬಂಧವನ್ನು ಗಟ್ಟಿಗೊಳಿಸುವ ಕರ್ತಾರ್ ಪುರ್‌ ಕಾರಿಡಾರ್ ಅಂದ್ರೆ ಏನು?

ಭಾರತ ಪಾಕಿಸ್ತಾನ ದೇಶಗಳ ಸಂಬಂಧವನ್ನು ಗಟ್ಟಿಗೊಳಿಸುವ ಕರ್ತಾರ್ ಪುರ್‌ ಕಾರಿಡಾರ್ ಅಂದ್ರೆ ಏನು?

- Advertisement -
- Advertisement -

ಭಾರತ ಮತ್ತು ಪಾಕಿಸ್ತಾನ, ಎರಡೂ ದೇಶಗಳ ಸಂಬಂಧವನ್ನು ಗಟ್ಟಿಗೊಳಿಸುವ ಕರ್ತಾರ್ ಪುರ್‌ ಕಾರಿಡಾರ್ ನವೆಂಬರ್‌ನಲ್ಲಿ ಉದ್ಘಾಟನೆಗೊಳ್ಳಲಿದೆ. ಇಂತಹ ಸಂಭ್ರಮದ ವಿಷಯ ಈಗ ಟೀಕೆ, ಆರೋಪಗಳಿಗೆ ಗುರಿಯಾಗಿ ದೇಶಾದ್ಯಂತ ಸದ್ದು ಮಾಡುತ್ತಿದೆ.

ಯಾವುದು ಈ ಕರ್ತಾರ್ ಪುರ್‌ ಕಾರಿಡಾರ್

ಸಿಖ್ಖರ ಪವಿತ್ರ ಸ್ಥಳಗಳಲ್ಲೊಂದು “ಗುರುದ್ವಾರ್ ದರ್ಬಾರ್ ಸಾಹಿಬ್”. ಸಿಖ್‌ರ ಧರ್ಮಗುರು ಗುರುನಾನಕ್‌ರವರ ಸಮಾಧಿ ಇರುವ ಸ್ಥಳ. ಇದು ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದ ನರೋವಾಲ ಜಿಲ್ಲೆಯ ಕರ್ತಾರ್ ಪುರದಲ್ಲಿದೆ. ಸಿಖ್ಖರ ಜೀವಿತಾವಧಿಯಲ್ಲಿ ಈ ಸ್ಥಳವನ್ನು ಒಮ್ಮೆಯಾದರೂ ನೋಡಲೇಬೇಕೆಂಬುದು ಅವರ ನಂಬಿಕೆ. ಇಲ್ಲವಾದರೆ ಅದು ತಮ್ಮ ಪಾಪವೆಂದು ಅವರು ಭಾವಿಸುತ್ತಾರೆ. ಪಾಕಿಸ್ತಾನಕ್ಕೆ ಸೇರಿರುವ ಲಾಹೋರ್ ಪ್ರದೇಶದಲ್ಲಿ ಹಾಗೂ ಪಂಜಾಬ್‍ನಲ್ಲಿರುವ ಭಾರತದ ಗಡಿಯಿಂದ ಕೇವಲ 4.7 ಕಿ.ಮೀ ಸಮೀಪದಲ್ಲಿ ಈ ಸ್ಥಳವಿದೆ. ಆದರೆ ಈ ಸ್ಥಳಕ್ಕೆ ಭಾರತೀಯರು ಹೋಗಬೇಕಾದರೆ ಸುಮಾರು 125 ಕಿ.ಮೀ ಸುತ್ತಾಟದ ಪ್ರಯಾಣ ಬೆಳೆಸಬೇಕು. ಅಲ್ಲದೆ ಪಾಕಿಸ್ತಾನದಿಂದ ವೀಸಾ ಕೂಡ ಪಡೆದುಕೊಳ್ಳಬೇಕಾಗಿತ್ತು. ಇಷ್ಟೆಲ್ಲಾ ಕಸರತ್ತು ಮಾಡಲಾಗದ ಕೆಲವರು ಭಾರತ ಮತ್ತು ಪಾಕಿಸ್ತಾನದ ನಡುವಿನ ಅಂತರಾಷ್ಟ್ರೀಯ ಗಡಿಯಲ್ಲಿ ನಿಂತು ಬೈನಾಕುಲರ್(ದೂರದರ್ಶಕ)ನ ಸಹಾಯದಿಂದ ನೋಡಿ ತೃಪ್ತಿ ಪಟ್ಟುಕೊಂಡು ಜೀವನದ ಸಾರ್ಥಕತೆಯೆಂದು ಭಾವಿಸುತ್ತಿದ್ದರು.

ಸಿಖ್ ಧರ್ಮ ಸಂಸ್ಥಾಪಕ ಗುರುನಾನಕ್ ದೇವ್ ಅವರ ಸಮಾಧಿ ಇರುವ ಕರ್ತಾರ್ ಪುರವನ್ನು ಪವಿತ್ರ ಸ್ಥಳವೆಂದು ಸಿಖ್ಖರು ಪೂಜಿಸುವ ಈ ಪ್ರದೇಶಕ್ಕೆ ಭಾರತೀಯರಿಗೆ ಮುಕ್ತ ಅವಕಾಶ ಕಲ್ಪಿಸುವ ವಿಚಾರ ಹಲವಾರು ವರ್ಷಗಳಿಂದ ಚರ್ಚೆಯಲ್ಲಿದೆ. 1999ರಲ್ಲಿ ದೆಹಲಿ ಮತ್ತು ಲಾಹೋರ್ ನಡುವೆ ಬಸ್ ವ್ಯವಸ್ಥೆಗೆ ಚಾಲನೆ ನೀಡಿದ ಸಂದರ್ಭದಲ್ಲಿ ಈ ಚರ್ಚೆ ಪ್ರಾರಂಭವಾಗಿತ್ತು. ಅಂದಿನ ಭಾರತದ ಪ್ರಧಾನಿಯಾಗಿದ್ದ ಅ.ಬಿ.ವಾಜಪೇಯಿ ಮತ್ತು ಪಾಕ್ ಪ್ರಧಾನಿ ನವಾಜ್ ಷರೀಫ್ ಕರ್ತಾರ್ ಪುರ್ ಕಾರಿಡಾರ್ ಬಗ್ಗೆ ಪ್ರಸ್ತಾಪಿಸಿದ್ದರು. ಆದರೆ ಆ ಪ್ರಸ್ಥಾಪ ಪ್ರಸ್ತಾಪವಾಗಿಯೇ ನೆನೆಗುದಿಗೆ ಬಿದ್ದಿತ್ತು.

2018ರಲ್ಲಿ ಇಮ್ರಾನ್ ಖಾನ್ ಪಾಕಿಸ್ತಾನದ ಪ್ರಧಾನಿಯಾಗಿ ಆಯ್ಕೆಯಾದರು. ತಮ್ಮ ಪ್ರಮಾಣವಚನ ಸಂದರ್ಭದಲ್ಲಿ ಭಾರತದಿಂದ ಕರ್ತಾರ್‌ಪುರಕ್ಕೆ ರಸ್ತೆ ಸೌಲಭ್ಯ ಕಲ್ಪಿಸಿ ಮುಕ್ತ ಪ್ರವೇಶ ನೀಡುವುದಾಗಿ ಘೋಷಿಸಿದ್ದರು. ಅದಾದ ಮೂರು ತಿಂಗಳ ನಂತರ 2018ರ ನವೆಂಬರ್‌ನಲ್ಲಿ ಕರ್ತಾರ್ ಪುರ್ ಕಾರಿಡಾರ್ ಯೋಜನೆಗೆ ಚಾಲನೆ ನೀಡಿದ್ದರು. ಕರ್ತಾರ್‌ಪುರದಿಂದ ಭಾರತದ ಗುರುದಾಸ್ ಪುರದ ದೇರೆ ಬಾಬ ನಾಸಿಕ್‍ಗೆ 4.7 ಕಿ.ಮೀ ಉದ್ದದ ಕಾರಿಡಾರ್ ಇದಾಗಿದೆ. 2019ರ ನವೆಂಬರ್‌ನಲ್ಲಿ ಗುರುನಾನಕ್ ಅವರ 550ನೇ ಜನ್ಮ ಜಯಂತಿಯಿದೆ. ಆ ವೇಳೆಗೆ ಕಾರಿಡಾರ್‌ನಲ್ಲಿ ಸಂಚಾರ ಆರಂಭಗೊಳಿಸುವುದಾಗಿ ಇಮ್ರಾನ್ ಖಾನ್ ತಿಳಿಸಿದ್ದರು. ಅಂತಯೇ ನವೆಂಬರ್ 1ರಂದು ಈ ಕಾರಿಡಾರ್ ಉದ್ಘಾಟನೆಗೊಳ್ಳುತ್ತಿದೆ. ಇನ್ನು ಮುಂದೆ ಭಾರತೀಯರ ಪ್ರವೇಶಕ್ಕೆ ಕರ್ತಾರ್‌ ಪುರ್ ತೆರೆದುಕೊಳ್ಳಲಿದೆ. ಭಾರತೀಯ ಸಿಖ್ ಯಾತ್ರಿಗಳು ತಮ್ಮ ಪುಣ್ಯ ಸ್ಥಳವನ್ನು ಮುಕ್ತ ಪ್ರವೇಶದೊಂದಿಗೆ ಕಣ್ತುಂಬಿಕೊಳ್ಳುವ ಅವಕಾಶವನ್ನು ಕಲ್ಪಸಿಕೊಡಲಾಗಿದೆ.

ಕಾರಿಡಾರ್ ಅನ್ನು ಬರ್ಲಿನ್ ಗೋಡೆಯ ಪತನಕ್ಕೆ ಹೋಲಿಸಿದ್ದ ಇಮ್ರಾನ್ ಖಾನ್

2018ರ ನವೆಂಬರ್ 28ರಂದು ಭಾರತ ಮತ್ತು ಪಾಕಿಸ್ತಾನಕ್ಕೆ ಮುಕ್ತ ಪ್ರವೇಶ ಕಲ್ಪಿಸುವ ಕರ್ತಾರ್ ಪುರ್ ಕಾರಿಡಾರ್‌ಗೆ ಚಾಲನೆ ನೀಡಿ ಪಾಕ್ ಪ್ರಧಾನಿ ಇಮ್ರಾನ್ ಖಾನ್ ಮಾತನಾಡಿದ್ದರು. ತಮ್ಮ ಮಾತಿನಲ್ಲಿ ಈ ಯೋಜನೆಯನ್ನು ಜರ್ಮನಿಯ ಬರ್ಲಿನ್ ಗೋಡೆಗೆ ಹೋಲಿಸಿದ್ದರು. ಜರ್ಮನ್ ದೇಶವನ್ನು ಪೂರ್ವ ಜರ್ಮನ್ ಮತ್ತು ಪಶ್ಚಿಮ ಜರ್ಮನ್ ಎಂದು ಇಬ್ಬಾಗಿಸಿ ಬರ್ಲಿನ್‍ನಲ್ಲಿ ಗೋಡೆಯನ್ನು ಕಟ್ಟಲಾಗಿತ್ತು. 1990ರ ದಶಕದಲ್ಲಿ ಈ ಗೋಡೆಯನ್ನು ಕೆಡವಿ ಇಬ್ಬಾಗವಾಗಿದ್ದ ದೇಶಗಳ ಜನರನ್ನು ಒಂದುಗೂಡಿಸಿ ಒಂದೇ ದೇಶವೆಂದು ಘೋಷಿಸಲಾಗಿತ್ತು. ಅಂತೆಯೇ ಪಾಕಿಸ್ತಾನದ ಕರ್ತಾರ್‌ಪುರ್‌ಗೆ ಭಾರತೀಯರಿಗೆ ಮುಕ್ತ ಅವಕಾಶ ನೀಡಿರುವುದು ಶತ್ರುಗಳಂತೆ ಕಾದಾಡುತ್ತಿದ್ದ ದೇಶಗಳ ನಡುವೆ ಸಾಮರಸ್ಯ ಸಂಬಂಧವನ್ನು ತರಲಿದೆ ಎಂಬ ಭಾವ ಅವರ ಮಾತಿನಲ್ಲಿತ್ತು.

ಕಾರಿಡಾರ್ ನಿರ್ಮಾಣಕ್ಕೆ ಕಾರಣವಾಯ್ತಾ ಆ ಅಪ್ಪುಗೆ..

2018ರಲ್ಲಿ ಪ್ರಧಾನಿಯಾಗಿ ಆಯ್ಕೆಯಾದ ಇಮ್ರಾನ್ ಖಾನ್ ಪ್ರಮಾಣ ವಚನ ಕಾರ್ಯಕ್ರಮಕ್ಕೆ ಭಾರತದ ಮಾಜಿ ಕ್ರಿಕೆಟಿಗ ಮತ್ತು ಮಂತ್ರಿಯೂ ಆಗಿದ್ದ ನವಜೋದ್ ಸಿಂಗ್ ಸಿಧು ಭಾಗವಹಿಸಿದ್ದರು. ಆ ಸಂದರ್ಭದಲ್ಲಿ ಪಾಕ್ ಸೇನಾ ಮುಖ್ಯಸ್ಥ ಖಮರ್ ಜಾವೇದ್ ಬಾಜ್ವಾ ಅವರನ್ನು ಸಿಧು ಅಪ್ಪಿಕೊಂಡಿದ್ದರು. ಈ ಅಪ್ಪುಗೆಯನ್ನು ಭಾರತೀಯರು ಕಟುವಾಗಿ ಟೀಕಿಸಿದ್ದರು. ಕೆಲವು ದಿನಗಳ ನಂತರ ಈ ಟೀಕೆಗೆ ಪ್ರತಿಕ್ರಿಯಿಸಿದ್ದ ಸಿಧು ಭಾರತ ಮತ್ತು ಕರ್ತಾರ್ ಪುರ್ ನಡುವೆ ಮುಕ್ತ ಸಂಪರ್ಕ ಕಲ್ಪಿಸುವ ಬಗ್ಗೆ ಪಾಕ್ ತೀರ್ಮಾನಿಸಿದೆ. ಅದಕ್ಕಾಗಿ ನಾನು ಅವರನ್ನು ಅಪ್ಪಿಕೊಂಡೆ ಎಂದು ಹೇಳಿದ್ದರು. ಈ ‍ಘಟನೆ ನಡೆದ ಮೂರು ತಿಂಗಳ ನಂತರ ಕಾರಿಡಾರ್ ನಿರ್ಮಾಣಕ್ಕೆ ಶಂಕುಸ್ಥಾಪನೆಯೂ ನಡೆಯಿತು. ಆ ದಿನವೂ ಸಿಧು ಭಾಗವಹಿಸಿದ್ದರು.

ಅಂತೂ ಸಿಖ್ ಯಾತ್ರಿಗಳಿಗೆ “ಗುರುದ್ವಾರ್ ದರ್ಬಾರ್ ಸಾಹಿಬ್‍ಗೆ ಮುಕ್ತ ಪ್ರವೇಶ ದೊರೆಯುಂತಾಗಿದೆ. ಈ ಕಾರಿಡಾರ್‌ನ ಉದ್ಘಾಟನಾ ಸಮಾರಂಭಕ್ಕೆ ಭಾರತ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರನ್ನು ಆಹ್ವಾನಿಸುವುದಾಗಿ ಪಾಕಿಸ್ತಾನ ವಿದೇಶಾಂಗ ಸಚಿವ ಶಾ ಮಹಮದ್ ಹೇಳಿದ್ದಾರೆ. ಆದರೆ ಈ ಬಗ್ಗೆ ಮನಮೋಹನ್ ಸಿಂಗ್‌ರವರು ಯಾವುದೇ ನಿರ್ಧಾರ ಕೈಗೊಂಡಿಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...