Homeಮುಖಪುಟಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಕ್ಷಮಾಪಣೆ ಕೊಟ್ಟಿದ್ದಕ್ಕೆ ಹಂಗೇರಿ ಅಧ್ಯಕ್ಷೆ ರಾಜೀನಾಮೆ: ಭಾರತದಲ್ಲಿ ಹುಟ್ಟು ಹಾಕಿದ ಚರ್ಚೆ..

ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಕ್ಷಮಾಪಣೆ ಕೊಟ್ಟಿದ್ದಕ್ಕೆ ಹಂಗೇರಿ ಅಧ್ಯಕ್ಷೆ ರಾಜೀನಾಮೆ: ಭಾರತದಲ್ಲಿ ಹುಟ್ಟು ಹಾಕಿದ ಚರ್ಚೆ..

- Advertisement -
- Advertisement -

ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಭಾಗಿಯಾಗಿರುವ ವ್ಯಕ್ತಿಗೆ ಕ್ಷಮಾದಾನ ನೀಡಿದ್ದಕ್ಕೆ ಆಕ್ರೋಶ ವ್ಯಕ್ತವಾಗುತ್ತಿದ್ದಂತೆ ಹಂಗೇರಿ ಅಧ್ಯಕ್ಷೆ ಕಟಲಿನ್ ನೊವಾಕ್ ಅವರು ಶನಿವಾರ ರಾಜೀನಾಮೆ ನೀಡಿದ್ದಾರೆ. ಕಟಲಿನ್ ನೊವಾಕ್ ಅವರು ಪ್ರಧಾನಿ ವಿಕ್ಟರ್ ಓರ್ಬನ್ ಅವರ ಆಪ್ತರು ಕೂಡ ಆಗಿದ್ದಾರೆ. ಹಂಗೇರಿ ಅಧ್ಯಕ್ಷರ ರಾಜೀನಾಮೆ ಭಾರತದಲ್ಲಿ ಕೂಡ ಚರ್ಚೆಗೆ ಗ್ರಾಸವಾಗಿದ್ದು, ಬಿಲ್ಕೀಸ್‌ ಬಾನು ಸಾಮೂಹಿಕ ಅತ್ಯಾಚಾರದ ಆರೋಪಿಗಳಿಗೆ ಕ್ಷಮಾಧಾನ ನೀಡಿದ್ದಕ್ಕೆ ಭಾರತದಲ್ಲಿ ಜವಾಬ್ಧಾರಿಯುತ ಸ್ಥಾನದಲ್ಲಿರುವವರು ತಲೆಕೆಡಿಸಿಕೊಂಡಿರಲಿಲ್ಲ ಎಂದು ಸಾಮಾಜಿಕ ಜಾಲತಾಣದಲ್ಲಿ ಟೀಕೆ ವ್ಯಕ್ತವಾಗಿದೆ.

ಕಟಲಿನ್ ನೊವಾಕ್ ಅಲ್ಲದೆ ಮಾಜಿ ಸಚಿವೆ ಜುಡಿಟ್ ವರ್ಗಾ ಅವರು ಸಾರ್ವಜನಿಕ ಜೀವನದಿಂದ ಹಿಂದೆ ಸರಿಯುವುದಾಗಿ ಘೋಷಿಸಿದ್ದಾರೆ. ಅಧ್ಯಕ್ಷೀಯ ಭವನದ ಹೊರಗೆ ವಿರೋಧ ಪಕ್ಷದ ನಾಯಕರ ಪ್ರತಿಭಟನೆಗಳು ಹೆಚ್ಚುತ್ತಿರುವ ಮಧ್ಯೆ ಈ ಬೆಳವಣಿಗೆಗಳು ನಡೆದಿದೆ.

ನಾನು ನನ್ನ ಹುದ್ದೆಗೆ ರಾಜೀನಾಮೆ ನೀಡುತ್ತಿದ್ದೇನೆ ಎಂದು 46ರ ಹರೆಯದ ನೊವಾಕ್ ಅವರು ಘೋಷಿಸಿದ್ದು, ಕ್ಷಮಾಧಾನ ವಿಚಾರದಲ್ಲಿ ತಪ್ಪು ಮಾಡಿರುವುದನ್ನು ಒಪ್ಪಿಕೊಂಡಿದ್ದಾರೆ. ನಾನು ನೋಯಿಸಿದವರಿಗೆ ಮತ್ತು ನಾನು ಅವರನ್ನು ಬೆಂಬಲಿಸಲಿಲ್ಲ ಎಂಬ ಅನಿಸಿಕೆ ಹೊಂದಿರುವ ಎಲ್ಲಾ ಸಂತ್ರಸ್ತರಿಗೆ ನಾನು ಕ್ಷಮೆಯಾಚಿಸುತ್ತೇನೆ ಎಂದು ಹೇಳಿದ್ದಾರೆ.

ನೊವಾಕ್ ಅವರು ಮಾರ್ಚ್ 2022ರಲ್ಲಿ ಅಧ್ಯಕ್ಷರಾಗಿ ಅಧಿಕಾರವನ್ನು ಸ್ವೀಕರಿಸಿದ್ದರು. ಅವರು ಹಂಗೇರಿಯ ಅಧ್ಯಕ್ಷರಾಗಿ ಅಧಿಕಾರವನ್ನು ವಹಿಸಿಕೊಂಡ ಮೊದಲ ಮಹಿಳೆಯಾಗಿದ್ದರು.

ಮಕ್ಕಳ ಗೃಹವೊಂದರ ಮಾಜಿ ಉಪನಿರ್ದೇಶಕರಿಗೆ ಕ್ಷಮಾದಾನ ನೀಡಿರುವುದು ವಿವಾದಕ್ಕೆ ಕಾರಣವಾಗಿತ್ತು.  ಕಳೆದ ಏಪ್ರಿಲ್‌ನಲ್ಲಿ ಪೋಪ್ ಫ್ರಾನ್ಸಿಸ್ ಅವರು ಬುಡಾಪೆಸ್ಟ್‌ಗೆ ಭೇಟಿ ನೀಡಿದ ಸಂದರ್ಭದಲ್ಲಿ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ. ಸ್ವತಂತ್ರ ಸುದ್ದಿ ತಾಣ 444 ಕಳೆದ ವಾರ ಈ ಬಗ್ಗೆ ವರದಿ ಮಾಡಿದ ನಂತರ ಪ್ರತಿಪಕ್ಷಗಳು ನೋವಾಕ್ ಅವರ ರಾಜೀನಾಮೆಗೆ ಕರೆ ನೀಡಿದ್ದವು. ಶುಕ್ರವಾರ ಸಂಜೆ ಪ್ರತಿಭಟನಾಕಾರರು ಅಧ್ಯಕ್ಷೀಯ ಭವನದ ಹೊರಗೆ ಜಮಾಯಿಸಿ ಪ್ರತಿಭಟನೆಯನ್ನು ನಡೆಸಿದ್ದರು.

ಶುಕ್ರವಾರ ನಡೆದ ವಿಶ್ವ ವಾಟರ್ ಪೋಲೊ ಚಾಂಪಿಯನ್‌ಶಿಪ್‌ನಲ್ಲಿ ಕಜಕಿಸ್ತಾನ್ ವಿರುದ್ಧದ ಹಂಗೇರಿಯ ಪಂದ್ಯದಲ್ಲಿ ಪಾಲ್ಗೊಳ್ಳಲು ಕತಾರ್‌ಗೆ ಬಂದಿದ್ದ ನೊವಾಕ್ ಬುಡಾಪೆಸ್ಟ್‌ಗೆ ಮರಳಿ ತನ್ನ ರಾಜೀನಾಮೆಯನ್ನು ಘೋಷಿಸಿದ್ದಾರೆ.

ಕಟಲಿನ್ ನೊವಾಕ್ ಅವರ ರಾಜೀನಾಮೆ ಘೋಷಣೆಯ ಕೆಲವೇ ನಿಮಿಷಗಳಲ್ಲಿ ಆರ್ಬನ್‌ನ ಮತ್ತೊಬ್ಬ ಮಿತ್ರ ಜುಡಿಟ್ ವರ್ಗಾ ಕೂಡ ಸಾರ್ವಜನಿಕ ಜೀವನದಿಂದ ಹಿಂದೆ ಸರಿಯುವುದಾಗಿ ಘೋಷಿಸಿದ್ದಾರೆ. ನಾನು ಸಂಸದರಾಗಿ ಮತ್ತು ಯುರೋಪಿಯನ್ ಪಾರ್ಲಿಮೆಂಟ್‌ ಪಟ್ಟಿಯ ಮುಖ್ಯಸ್ಥಳಾಗಿ ನನ್ನ ಸ್ಥಾನವನ್ನು ತ್ಯಜಿಸುತ್ತೇನೆ ಎಂದು ಅವರು ಫೇಸ್‌ಬುಕ್‌ನಲ್ಲಿ ಹೇಳಿದ್ದಾರೆ.

ವಿಕ್ಟರ್ ಓರ್ಬನ್ ಅವರ ಅನುಮೋದನೆಯಿಲ್ಲದೆ ಹಂಗೇರಿಯಲ್ಲಿ ಯಾವುದೇ ಪ್ರಮುಖ ನಿರ್ಧಾರವನ್ನು ತೆಗೆದುಕೊಳ್ಳಲಾಗುವುದಿಲ್ಲ ಎಂದು ನಮಗೆ ತಿಳಿದಿದೆ ಎಂದು ಲಿಬರಲ್ ಮೊಮೆಂಟಮ್ ಪಕ್ಷದ ಸದಸ್ಯ ಡೊನಾತ್ ಫೇಸ್‌ಬುಕ್‌ನಲ್ಲಿ ಹೇಳಿದ್ದು, ಈ ಕ್ಷಮಾಧಾನಕ್ಕೆ ಅವರು ಜವಾಬ್ದಾರಿಯನ್ನು ತೆಗೆದುಕೊಳ್ಳಬೇಕು ಮತ್ತು ಏನಾಯಿತು ಎಂದು ವಿವರಿಸಬೇಕು ಎಂದು ಹೇಳಿದ್ದಾರೆ.

ಈ ಘಟನೆ ಬೆನ್ನಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಬಿಲ್ಕೀಸ್‌ ಬಾನು ಪ್ರಕರಣ ಸದ್ದು ಮಾಡಿದೆ. ಮಕ್ಕಳ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಭಾಗಿಯಾಗಿರುವ ವ್ಯಕ್ತಿಗೆ ಕ್ಷಮಾದಾನ ನೀಡಿದ್ದಕ್ಕೆ ಆಕ್ರೋಶ ವ್ಯಕ್ತಪಡಿಸಿ ಹಂಗೇರಿಯನ್ ಅಧ್ಯಕ್ಷೆ ರಾಜೀನಾಮೆ ನೀಡಿದ್ದಾರೆ. ಆದರೆ ಭಾರತದಲ್ಲಿ 2002ರ ಗುಜರಾತ್‌ ಗಲಭೆಯ ವೇಳೆ ಬಲ್ಕೀಸ್‌ ಬಾನು ಸಾಮೂಹಿಕ ಅತ್ಯಚಾರ ಮತ್ತು ಆಕೆಯ ಕುಟುಂಬದ ಸದಸ್ಯರನ್ನು ಹತ್ಯೆ ಮಾಡಿದ್ದ ಪ್ರಕರಣದ 11 ಅಪರಾಧಿಗಳಿಗೆ ಕ್ಷಮಾದಾನ ನೀಡಿ ಬಿಡುಗಡೆ ಮಾಡಲಾಗಿತ್ತು. ಆದರೆ ಈ ಬಗ್ಗೆ ಭಾರತದಲ್ಲಿ ಸರಕಾರದ ಭಾಗವಾಗಿರುವ ಯಾರೂ ಕೂಡ ತಲೆ ಕೆಡಿಸಿಕೊಂಡಿರಲಿಲ್ಲ ಎಂದು ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾದ ಟೀಕೆ ವ್ಯಕ್ತವಾಗಿದೆ.

ಇತ್ತೀಚೆಗೆ ಸುಪ್ರೀಂಕೋರ್ಟ್‌ ಬಿಲ್ಕೀಸ್‌ ಬಾನು ಪ್ರಕರಣದಲ್ಲಿ ಆರೋಪಿಗಳಿಗೆ ಕ್ಷಮಾಧಾನ ನೀಡಿ ಅವಧಿ ಪೂರ್ವವಾಗಿ ಬಿಡುಗಡೆ ಮಾಡಿರುವುದನ್ನು ರದ್ದುಗೊಳಿಸಿತ್ತು.ಜನವರಿಯಲ್ಲಿ, 11 ಅಪರಾಧಿಗಳಿಗೆ ಅವಧಿ ಪೂರ್ವ ಬಿಡುಗಡೆಯನ್ನು ನೀಡಿದ್ದಕ್ಕಾಗಿ ಸುಪ್ರೀಂ ಕೋರ್ಟ್ ಗುಜರಾತ್ ಸರ್ಕಾರವನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿತ್ತು. ಗುಜರಾತ್ ರಾಜ್ಯವು “ಅಪರಾಧಿಗಳೊಂದಿಗೆ ಸಹಕರಿಸಿದೆ” ಎಂದು ಪೀಠ ಹೇಳಿತ್ತು. ಈ ಭಯದಿಂದಲೇ ನ್ಯಾಯಾಲಯವು ಬಿಲ್ಕಿಸ್ ಬಾನು ಪ್ರಕರಣದ ವಿಚಾರಣೆಯನ್ನು ಗುಜರಾತ್‌ನಿಂದ ಮಹಾರಾಷ್ಟ್ರಕ್ಕೆ ವರ್ಗಾಯಿಸಿದ್ದು ಎಂದು ಹೇಳಿತ್ತು.

ಬಿಲ್ಕಿಸ್‌ ಬಾನು ಅತ್ಯಾಚಾರ ನಡೆಯುವಾಗ 2002ರಲ್ಲಿ ಗುಜರಾತ್‌ನಲ್ಲಿ ಬಿಜೆಪಿ ಸರ್ಕಾರವಿತ್ತು. ಎಲ್ಲಾ 11 ಅತ್ಯಾಚಾರಿಗಳನ್ನು ಸನ್ನಡೆತೆಯ ಕಾರಣ ನೀಡಿ 2022ರ ಆಗಸ್ಟ್ 15 ರಂದು ಬಿಜೆಪಿ ಸರ್ಕಾರವೇ ಬಿಡುಗಡೆ ಮಾಡಿತ್ತು. ಅತ್ಯಾಚಾರ ಅಪರಾಧಿಗಳು ಎಲ್ಲರೂ ಬಿಜೆಪಿ ಸದಸ್ಯರು ಅಥವಾ ಅದರೊಂದಿಗೆ ಸಂಪರ್ಕ ಇರುವವರು ಎಂದು ಹೇಳಲಾಗ್ತಿದೆ. ಈ ಹಿಂದೆ ತಾತ್ಕಾಲಿಕ ಪೆರೋಲ್ ಮೇಲೆ ಇದ್ದಾಗ ಅಪರಾಧಿಗಳು ಸಾಕ್ಷಿಗಳಿಗೆ ಬೆದರಿಕೆ ಹಾಕಿದ್ದರು ಎಂಬ ಆರೋಪವೂ ಇದೆ. ಅಪರಾಧಿಗಳ ಬಿಡುಗಡೆ ಕುರಿತು ನಿರ್ಧಿರಿಸಲು ಸರ್ಕಾರ ರಚಿಸಿದ್ದ ಸಮಿತಿ ಸದಸ್ಯರಲ್ಲಿ ಒಬ್ಬರಾದ ಬಿಜೆಪಿ ಶಾಸಕ “ಅತ್ಯಾಚಾರಿಗಳು ಬಿಡುಗಡೆಗೆ ಅರ್ಹರು, ಏಕೆಂದರೆ ಅವರೆಲ್ಲ ಉತ್ತಮ ಸಂಸ್ಕಾರ ಅಥವಾ ಮೌಲ್ಯಗಳನ್ನು ಹೊಂದಿರುವ ಬ್ರಾಹ್ಮಣರು” ಎಂದಿದ್ದರು.

 

ಕ್ಲಿಪಟ್ನ ಡಿ ರೊಝಾರಿಯೋ ಎಂಬವರು ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ್ದು, ಮಕ್ಕಳ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಭಾಗಿಯಾಗಿರುವ ವ್ಯಕ್ತಿಗೆ ಕ್ಷಮಾದಾನ ನೀಡಿದ್ದಕ್ಕೆ ಹಂಗೇರಿಯನ್ ಅಧ್ಯಕ್ಷೆ, ಪ್ರಧಾನಿ ವಿಕ್ಟರ್ ಓರ್ಬನ್ ಅವರ ಆಪ್ತ ಮಿತ್ರ ಕಟಲಿನ್ ನೊವಾಕ್ ಶನಿವಾರ ರಾಜೀನಾಮೆ ಘೋಷಿಸಿದ್ದಾರೆ.
ಆದರೆ ಭಾರತದಲ್ಲಿ ಬಿಲ್ಕಿಸ್ ಪ್ರಕರಣದಲ್ಲಿ ಯಾರೂ ತಲೆ ಕೆಡಿಸಿಕೊಂಡಿಲ್ಲ ಎಂದು ಬರೆದುಕೊಂಡಿದ್ದಾರೆ.

ಇದನ್ನು ಓದಿ: ಬಿಲ್ಕಿಸ್ ಬಾನು ಪ್ರಕರಣ: ಜೈಲಿಗೆ ಮರಳಿದ ಎರಡೇ ವಾರಕ್ಕೆ ಓರ್ವ ಅಪರಾಧಿಗೆ ಪೆರೋಲ್ ನೀಡಿದ ಕೋರ್ಟ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ರಾಜಭವನ’ಗಳನ್ನು ‘ಲೋಕಭವನ’ಗಳೆಂದು ಮರುನಾಮಕರಣ; ಇದು ಒಕ್ಕೂಟ ವ್ಯವಸ್ಥೆ ಮತ್ತು ಭಾಷಾ ಸಮಾನತೆಯ ಮೇಲಿನ ಆಕ್ರಮಣ: ಜಾಗೃತ ಕರ್ನಾಟಕ

ದೇಶಾದಾದ್ಯಂತ ಇರುವ ರಾಜಭವನಗಳ ಹೆಸರನ್ನು ಲೋಕಭವನ ಎಂದು ಮರುನಾಮಕರಣ ಮಾಡುವುದಾಗಿ ಕೇಂದ್ರ ಗೃಹಸಚಿವಾಲಯ ತೀರ್ಮಾನಿಸಿದೆ. ಕೇಂದ್ರದ  ಈ ನೀತಿಯನ್ನು ವಿರೋಧಿಸಿರುವ ಜಾಗೃತ ಕರ್ನಾಟಕ ದೇಶದ ಎಲ್ಲಾ ಹಿಂದಿಯೇತರ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದೆ....

ಯುಜಿಸಿ ಈಕ್ವಿಟಿ ನಿಯಮಗಳ ಮೇಲಿನ ಸುಪ್ರೀಂ ಕೋರ್ಟ್ ತಡೆಗೆ ವಿದ್ಯಾರ್ಥಿಗಳ ಪ್ರತಿಭಟನೆ, ರೋಹಿತ್ ಕಾಯ್ದೆಗೆ ಒತ್ತಾಯ

ಯುಜಿಸಿ ಇಕ್ವಿಟಿ ನಿಯಮಗಳಿಗೆ ಸುಪ್ರೀಂ ಕೋರ್ಟ್ ನೀಡಿದ ತಡೆಯಾಜ್ಞೆಯ ವಿರುದ್ಧ ಮತ್ತು ವಿಶ್ವವಿದ್ಯಾಲಯಗಳಲ್ಲಿ ಜಾತಿ ತಾರತಮ್ಯವನ್ನು ಎದುರಿಸಲು ಶಾಸನಬದ್ಧ ರೋಹಿತ್ ಕಾಯ್ದೆಯನ್ನು ಜಾರಿಗೆ ತರುವಂತೆ ಒತ್ತಾಯಿಸಿ ಅಖಿಲ ಭಾರತ ವಿದ್ಯಾರ್ಥಿ ಸಂಘ (ಎಐಎಸ್ಎ)...

ನರವಾಣೆ ಅಪ್ರಕಟಿತ ಪುಸ್ತಕ ಗದ್ದಲ | ಸತ್ಯ ಹೊರಬಂದರೆ ಮೋದಿ, ರಾಜನಾಥ್ ಸಿಂಗ್ ಮುಖವಾಡ ಬಯಲಾಗಲಿದೆ : ರಾಹುಲ್ ಗಾಂಧಿ

ಮಾಜಿ ಸೇನಾ ಮುಖ್ಯಸ್ಥ ಜನರಲ್ ಮನೋಜ್ ಮುಕುಂದ್ ನರವಾಣೆ ಅವರ ಅಪ್ರಕಟಿತ ಆತ್ಮಚರಿತ್ರೆ ಕುರಿತು ರಾಹುಲ್ ಗಾಂಧಿ ಸೋಮವಾರ (ಫೆ.2) ಲೋಕಸಭೆಯಲ್ಲಿ ಉಲ್ಲೇಖಿಸಿದ್ದು, ಈ ವೇಳೆ ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ತೀವ್ರ...

ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ಘರ್ಷಣೆ : ಮೂವರ ಬಂಧನ

ಗುಜರಾತ್‌ನ ಪಠಾಣ್ ತಾಲೂಕಿನ ಚದ್ರುಮಣ ಗ್ರಾಮದಲ್ಲಿ ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ನಡೆದ ಗಲಾಟೆಗೆ ಸಂಬಂಧಿಸಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದು, ಇನ್ನೂ ಐವರ ಬಂಧನಕ್ಕೆ ಬಲೆ ಬೀಸಿದ್ದಾರೆ. ಆರೋಪಿಗಳ ವಿರುದ್ದ ಎಸ್‌ಸಿ/ಎಸ್‌ಟಿ...

ಲೋಕಸಭೆಯಲ್ಲಿ ಲಡಾಖ್ ಬಿಕ್ಕಟ್ಟಿನ ಬಗ್ಗೆ ಮಾಜಿ ಸೇನಾ ಮುಖ್ಯಸ್ಥರ ಅಪ್ರಕಟಿತ ಆತ್ಮಚರಿತ್ರೆ ಉಲ್ಲೇಖಿಸಿದ ರಾಹುಲ್ ಗಾಂಧಿ: ಸಭೆಯಲ್ಲಿ ತೀವ್ರ ಗದ್ದಲ

ಸೋಮವಾರ ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಮಾಜಿ ಸೇನಾ ಮುಖ್ಯಸ್ಥ ಎಂಎಂ ನರವಾಣೆ ಅವರ ಆತ್ಮಚರಿತ್ರೆಯಿಂದ ಉಲ್ಲೇಖಿಸಲು ಪ್ರಯತ್ನಿಸಿದ ನಂತರ ಗದ್ದಲ ಭುಗಿಲೆದ್ದಿತು. ರಾಹುಲ್ ಮಾತನಾಡಲು ಪ್ರಾರಂಭಿಸುತ್ತಿದ್ದಂತೆ, ರಕ್ಷಣಾ ಸಚಿವ...

ಪಂಜಾಬ್ ನಿರೀಕ್ಷೆಗಳನ್ನು ಪೂರೈಸುವಲ್ಲಿ ಕೇಂದ್ರ ಬಜೆಟ್ ಮತ್ತೊಮ್ಮೆ ವಿಫಲವಾಗಿದೆ: ಸಿಎಂ ಭಗವಂತ್ ಮಾನ್

ಕೇಂದ್ರ ಬಜೆಟ್ ಮತ್ತೊಮ್ಮೆ ಪಂಜಾಬ್‌ನ ನಿರೀಕ್ಷೆಗಳನ್ನು ಪೂರೈಸುವಲ್ಲಿ ವಿಫಲವಾಗಿದೆ ಎಂದು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಮತ್ತು ಆಡಳಿತಾರೂಢ ಆಮ್ ಆದ್ಮಿ ಪಕ್ಷದ (ಎಎಪಿ) ಸರ್ಕಾರದ ಸಚಿವರು ಭಾನುವಾರ ಅಭಿಪ್ರಾಯಪಟ್ಟಿದ್ದಾರೆ. ಬಜೆಟ್ ರೈತರಿಗೆ ಯಾವುದೇ...

ರಾಜ್ಯಪಾಲರು ಪೂರ್ಣ ಭಾಷಣ ಓದಿಲ್ಲ, ‘ಜೈ ಸಂವಿಧಾನ’ ಎನ್ನುವುದನ್ನು ಉಲ್ಲೇಖಿಸದೆ ಹೋದರು : ಸಿಎಂ ಸಿದ್ದರಾಮಯ್ಯ

ರಾಜ್ಯಪಾಲರು ಪೂರ್ತಿ ಭಾಷಣ ಓದದೆ ತರಾತುರಿಯಲ್ಲಿ ಹೋದರು. ಭಾಷಣದಲ್ಲಿದ್ದ "ಜೈ ಸಂವಿಧಾನ" ಎನ್ನುವುದನ್ನೂ ಉಲ್ಲೇಖಿಸದೆ ತೆರಳಿದರು. ರಾಷ್ಟ್ರಗೀತೆ ಮುಗಿಯುವವರೆಗೂ ಕಾಯದೆ ಹೋಗಿಬಿಟ್ಟರು. ಇದು ಸರಿಯಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಬಿಜೆಪಿ ಶಾಸಕ...

ಉತ್ತರಾಖಂಡ| ಹಿಂದುತ್ವ ಗುಂಪಿನ ಕಿರುಕುಳದಿಂದ ಮುಸ್ಲಿಂ ಅಂಗಡಿ ಮಾಲೀಕನನ್ನು ರಕ್ಷಿಸಿದ ದೀಪಕ್ ಕುಮಾರ್

ಸ್ಥಳೀಯ ಮುಸ್ಲಿಂ ಅಂಗಡಿ ಮಾಲೀಕನ ವಿರುದ್ಧ ಬಜರಂಗದಳ ಸದಸ್ಯರು ನೀಡುತ್ತಿದ್ದ ಕಿರುಕುಳವನ್ನು ಜಿಮ್ ಮಾಲೀಕ ದೀಪಕ್ ಕುಮಾರ್ ಸ್ಥಳದಲ್ಲೇ ಎದುರಿಸಿದ್ದಾರೆ. ಆಕ್ರೋಶಿತರಾದ ಹಿಂದುತ್ವ ಗುಂಪಿನ ಸದಸ್ಯರು ದೀಪಕ್ ವಿರುದ್ಧವೇ ಪ್ರತಿಭಟನೆ ನಡೆಸಿದ್ದು, ಹಲವಾರ...

ಎಸ್‌ಐಆರ್ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ನಡೆಸುವ ಭಾರತೀಯ ಚುನಾವಣಾ ಆಯೋಗದ (ಇಸಿಐ) ನಿರ್ಧಾರವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ...

ದಕ್ಷಿಣ ಪಿನಾಕಿನಿ ಜಲವಿವಾದ : ನ್ಯಾಯಮಂಡಳಿ ಸ್ಥಾಪಿಸಲು ಸುಪ್ರೀಂ ಕೋರ್ಟ್ ಆದೇಶ

ದಕ್ಷಿಣ ಪಿನಾಕಿನಿ (ಪೆನ್ನೈಯಾರ್) ನದಿ ನೀರಿನ ಹಂಚಿಕೆಗೆ ಸಂಬಂಧಿಸಿದಂತೆ ತಮಿಳುನಾಡು ಮತ್ತು ಕರ್ನಾಟಕ ರಾಜ್ಯಗಳ ನಡುವೆ ಬಾಕಿ ಇರುವ ವಿವಾದಗಳನ್ನು ಪರಿಹರಿಸಲು ನ್ಯಾಯಮಂಡಳಿ ಸ್ಥಾಪಿಸುವಂತೆ ಸುಪ್ರೀಂ ಕೋರ್ಟ್ ಸೋಮವಾರ (ಫೆ.2) ನಿರ್ದೇಶನ ನೀಡಿದೆ. ಕೇಂದ್ರ...