Homeಫ್ಯಾಕ್ಟ್‌ಚೆಕ್Fact Check: ರಾಹುಲ್ ಗಾಂಧಿ ರಹಸ್ಯವಾಗಿ ಮದುವೆಯಾಗಿದ್ದಾರೆ ಎಂಬುದು ಸುಳ್ಳು

Fact Check: ರಾಹುಲ್ ಗಾಂಧಿ ರಹಸ್ಯವಾಗಿ ಮದುವೆಯಾಗಿದ್ದಾರೆ ಎಂಬುದು ಸುಳ್ಳು

- Advertisement -
- Advertisement -

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನಾಲ್ವರು ಮಕ್ಕಳೊಂದಿಗೆ ನಿಂತಿರುವ ಫೋಟೋವೊಂದು ಕಳೆದ ಕೆಲ ದಿನಗಳಿಂದ ಹರಿದಾಡುತ್ತಿದ್ದು, “ರಾಹುಲ್ ಗಾಂಧಿ ರಹಸ್ಯವಾಗಿ ಮದುವೆಯಾಗಿದ್ದಾರೆ. ಫೋಟೊದಲ್ಲಿರುವ ಮಕ್ಕಳು ಅವರದ್ದೇ” ಎಂದು ಸುದ್ದಿ ಹರಿದಾಡಿದೆ.

ಕೆಲ ಸಾಮಾಜಿಕ ಜಾಲತಾಣ ಬಳಕೆದಾರರು ಫೋಟೋ ಪೋಸ್ಟ್‌ ಮಾಡಿದ್ದು, “ರಾಹುಲ್ ಗಾಂಧಿಗೆ ಮದುವೆಯಾಗಿದೆ ಮಕ್ಕಳಿದೆ” ಎಂಬರ್ಥದಲ್ಲಿ ಬರೆದುಕೊಂಡಿದ್ದಾರೆ.

ಫ್ಯಾಕ್ಟ್‌ಚೆಕ್ : ಮೇಲಿನ ಫೋಟೋ ಕುರಿತು ನಾವು ಸತ್ಯಾಸತ್ಯತೆ ಪರಿಶೀಲನೆ ನಡೆಸಿದ್ದೇವೆ. ಈ ವೇಳೆ ‘ರಾಹುಲ್ ಗಾಂಧಿ ಜೊತೆಯಲ್ಲಿರುವ ನಾಲ್ವರು ಮಕ್ಕಳು ರಾಜಸ್ಥಾನದ ಬರಾನ್ ಜಿಲ್ಲೆಯ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಪ್ರಿಯಾಂಕಾ ನಂದ್ವಾನಾ ಅವರ ಮಕ್ಕಳಾಗಿದ್ದಾರೆ. ರಾಹುಲ್ ಗಾಂಧಿಯನ್ನು ಭೇಟಿಯಾಗಬೇಕೆಂಬ ಪ್ರಿಯಾಂಕಾ ಅವರ ಬಯಕೆಯ ಬಗ್ಗೆ ತಿಳಿದುಕೊಂಡ ನಂತರ ರಾಹುಲ್, 2022ರಲ್ಲಿ ಭಾರತ್ ಜೋಡೋ ಯಾತ್ರೆಯ ಸಮಯದಲ್ಲಿ ಅವರ ಮಕ್ಕಳನ್ನು ಹೆಲಿಕಾಪ್ಟರ್ ರೈಡ್‌ಗೆ ಕರೆದೊಯ್ದಿದ್ದರು’ ಎಂದು ತಿಳಿದು ಬಂದಿದೆ.

ಈ ಕುರಿತು ಒಂದು ವರ್ಷದ ಹಿಂದೆ ‘FirstKhaber’ಎಂಬ ಹಿಂದಿ ಯೂಟ್ಯೂಬ್ ಚಾನೆಲ್ ಸ್ಪಷ್ಟವಾದ ಸುದ್ದಿ ಪ್ರಕಟಿಸಿದೆ. ವರದಿಯ ಪ್ರಕಾರ, ರಾಹುಲ್ ಗಾಂಧಿಯವರು ತಮ್ಮ ತಾಯಿ ಸೋನಿಯಾ ಗಾಂಧಿಯವರ ಜನ್ಮದಿನ ಆಚರಿಸಲು ರಾಜಸ್ತಾನದ ಬುಂದಿಯಲ್ಲಿರುವ ನೈನಾನಿ ಫಾರ್ಮ್‌ನಿಂದ ಸವಾಯಿ ಮಾಧೋಪುರಕ್ಕೆ ತೆರಳುತ್ತಿದ್ದರು. ಈ ವೇಳೆ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಪ್ರಿಯಾಂಕಾ ನಂದ್ವಾನಾ ಭೇಟಿಗೆ ಕಾಯುತ್ತಿದ್ದ ವಿಷಯ ಅವರಿಗೆ ಗೊತ್ತಾಗಿದೆ. ಹಾಗಾಗಿ, ರಾಹುಲ್ ಪ್ರಿಯಾಂಕಾ ನಂದ್ವಾನಾ ಅವರನ್ನು ಭೇಟಿಯಾಗಿ, ಅವರ ನಾಲ್ವರು ಮಕ್ಕಳನ್ನು ಹೆಲಿಕಾಫ್ಟರ್ ರೈಡ್ ಕರೆದುಕೊಂಡು ಹೋಗಿದ್ದಾರೆ. ರಾಹುಲ್ ಜೊತೆ ಹೆಲಿಕಾಫ್ಟರ್ ಪ್ರಯಾಣ ಮಾಡಿದ ದಿನ ಪ್ರಿಯಾಂಕಾ ಅವರ ಮಗಳು ಕಾಮಾಕ್ಷಿ ನಂದ್ವಾನಾ ಅವರ 14 ನೇ ಹುಟ್ಟು ಹಬ್ಬವಾಗಿತ್ತು.

ಯೂಟ್ಯೂಬ್ ಲಿಂಕ್ ಇಲ್ಲಿದೆ

ನಮ್ಮ ಪರಿಶೀಲನೆಯಲ್ಲಿ ತಿಳಿದು ಬಂದ ವಿಚಾರವೇನೆಂದರೆ, ರಾಹುಲ್ ಗಾಂಧಿ ಜೊತೆ ನಿಂತಿರುವುದು ಅವರ ಪತ್ನಿ ಮತ್ತು ಮೂವರು ಮಕ್ಕಳು ಅಲ್ಲ. ಅದು ರಾಜಸ್ಥಾನದ ಬರಾನ್ ಜಿಲ್ಲೆಯ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಪ್ರಿಯಾಂಕಾ ನಂದ್ವಾನಾ ಅವರ ನಾಲ್ವರು ಮಕ್ಕಳು. ಫೋಟೋದಲ್ಲಿ ರಾಹುಲ್ ಜೊತೆ ನಿಂತಿರವ ಹುಡುಗಿ ಪ್ರಿಯಾಂಕಾ ನಂದ್ವಾನಾ ಅವರ 14 ವರ್ಷದ ಮಗಳು ಕಾಮಾಕ್ಷಿ ನಂದ್ವಾನಾ ಆಗಿದ್ದಾರೆ. ಹಾಗಾಗಿ ರಾಹುಲ್ ಗಾಂಧಿಗೆ ರಸಹ್ಯವಾಗಿ ಮದುವೆಯಾಗಿದೆ. ಮಕ್ಕಳಿದೆ ಎಂಬುವುದು ಎಲ್ಲವೂ ಸುಳ್ಳು ಸುದ್ದಿ.

ಇದನ್ನೂ ಓದಿ: Fact Check: ಅಧಿಕಾರಕ್ಕೆ ಬಂದರೆ 50% ಮೀಸಲಾತಿಯನ್ನು ರದ್ದುಪಡಿಸುವುದಾಗಿ ರಾಹುಲ್ ಗಾಂಧಿ ಹೇಳಿದ್ರಾ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ಯಾಲೆಸ್ತೀನ್ ಜನರೊಂದಿಗೆ ಒಗ್ಗಟ್ಟು ಪ್ರದರ್ಶನ: ದೆಹಲಿಯ ಮೆಕ್‌ಡೊನಾಲ್ಡ್ಸ್ ಹೊರಗೆ ಪ್ರತಿಭಟನೆ

ಪ್ಯಾಲೆಸ್ಟೈನ್ ಜೊತೆ ಒಗ್ಗಟ್ಟಿನ ಭಾರತೀಯ ಜನರು (ಐಪಿಎಸ್‌ಪಿ) ಗುಂಪಿನ ಸದಸ್ಯರು (ಏ.3) ಜನಪಥ್ ಪ್ರದೇಶದ ಮೆಕ್‌ಡೊನಾಲ್ಡ್ಸ್ ಔಟ್‌ಲೆಟ್‌ನ ಹೊರಗೆ ದಿಢೀರ್ ಪ್ರತಿಭಟನೆಯನ್ನು ಆಯೋಜಿಸಿದ್ದರು. ಪ್ಯಾಲೆಸ್ತೀನಿಯನ್ನರನ್ನು ಒಳಗೊಂಡ ನಡೆಯುತ್ತಿರುವ ಸಂಘರ್ಷದಲ್ಲಿ ಮೆಕ್‌ಡೊನಾಲ್ಡ್ಸ್ ಮತ್ತು ಕೋಕಾ-ಕೋಲಾದಂತಹ ಬಹುರಾಷ್ಟ್ರೀಯ...

‘ಇರಾನಿಯನ್ನರು ಸ್ಮಾರ್ಟ್ ಚೆಸ್ ಆಡುತ್ತಿದ್ದು, ಟ್ರಂಪ್ ಭ್ರಮಾಲೋಕದಲ್ಲಿದ್ದಾರೆ..’; ಮಾಜಿ ರಾಜತಾಂತ್ರಿಕ ಅಧಿಕಾರಿ ಕೆ.ಪಿ. ಫ್ಯಾಬಿಯನ್

ಪ್ರಸ್ತುತ ನಡೆಯುತ್ತಿರುವ ಪಶ್ಚಿಮ ಏಷ್ಯಾ ಸಂಘರ್ಷದ ಬಗ್ಗೆ ಮಾತನಾಡಿದ ಭಾರತದ ಮಾಜಿ ರಾಯಭಾರಿ ಕೆ.ಪಿ. ಫ್ಯಾಬಿಯನ್, "ಇರಾನಿಯನ್ನರು ಸ್ಮಾರ್ಟ್ ಚೆಸ್ ಆಟವನ್ನು ಆಡುತ್ತಿದ್ದಾರೆ. ಆದರೆ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗಳು...

‘ನಾನು ಸಂಸತ್ತಿಗೆ ಹೋಗುವುದು ಗದ್ದಲ ಸೃಷ್ಟಿಸಲು ಅಲ್ಲ’ : ಎಎಪಿ ಆರೋಪಗಳನ್ನು ತಳ್ಳಿ ಹಾಕಿದ ರಾಘವ್ ಚಡ್ಡಾ

ತನ್ನ ವಿರುದ್ದ ಆಮ್‌ ಆದ್ಮಿ ಪಕ್ಷ (ಎಎಪಿ) ಮಾಡಿರುವ ಎಲ್ಲಾ ಆರೋಪಗಳನ್ನು ರಾಘವ್ ಚಡ್ಡಾ ಶನಿವಾರ (ಏ.4) ಅಲ್ಲಗಳೆದಿದ್ದು, "ಅವೆಲ್ಲವೂ ಸುಳ್ಳು ಮತ್ತು ಸಂಘಟಿತ ಅಭಿಯಾನದ ಭಾಗ" ಎಂದಿದ್ದಾರೆ. "ಸಂಸತ್ತಿನಲ್ಲಿ ನನ್ನ ಉದ್ದೇಶ...

ಎಡರಂಗದಲ್ಲಿ ಎಡಪಂಥೀಯರೇ ಇಲ್ಲ; ದ್ವೇಷ ಹರಡುವ ಜನರೊಂದಿಗೆ ಪಿಣರಾಯಿ ಪಾಲುದಾರಿಕೆ ಹೊಂದಿದ್ದಾರೆ: ರಾಹುಲ್ ಗಾಂಧಿ

ಕೇರಳ ವಿಧಾನಸಭಾ ಚುನಾವಣೆ ಪ್ರಚಾರವು ಅಂತಿಮ ಹಂತಕ್ಕೆ ತಲುಪುತ್ತಿದ್ದಂತೆ ತೀಕ್ಷ್ಣವಾದ ರಾಜಕೀಯ ದಾಳಿಯನ್ನು ಆರಂಭಿಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, "ಸಿಪಿಐ-ಎಂ ನೇತೃತ್ವದ ಎಡಪಕ್ಷವು ತನ್ನ ಸೈದ್ಧಾಂತಿಕ ತಿರುಳನ್ನು ಕಳೆದುಕೊಳ್ಳುತ್ತಿದೆ" ಎಂದು ಆರೋಪಿಸಿದ್ದಾರೆ. "ಎಲ್‌ಡಿಎಫ್...

ಬಿಜೆಪಿ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಅಂದಿದ್ದೆ : ಅಣ್ಣಾಮಲೈ

"ವಿಧಾನಸಭಾ ಚುನಾವಣೆಗೆ ಬಿಜೆಪಿ ನನಗೆ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಎಂದು ಮುಂಚಿತವಾಗಿ ಹೈಕಮಾಂಡ್‌ಗೆ ತಿಳಿಸಿದ್ದೆ" ಎಂದು ತಮಿಳುನಾಡು ಬಿಜೆಪಿಯ ಮಾಜಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ಹೇಳಿದ್ದಾರೆ. ಚೆನ್ನೈ ವಿಮಾನ ನಿಲ್ದಾಣದಲ್ಲಿ ಶನಿವಾರ...

ಸುರಕ್ಷಿತವಾಗಿ ಹಾರ್ಮುಜ್ ದಾಟಿದ 7ನೇ ಎಲ್‌ಪಿಜಿ ಹಡಗು; ಸರದಿಯಲ್ಲಿ ಕಾಯುತ್ತಿವೆ ಭಾರತದ 17 ಟ್ಯಾಂಕರ್‌ಗಳು

ಭಾರತದ ಧ್ವಜ ಹೊಂದಿದ್ದ ಮತ್ತೊಂದು ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಟ್ಯಾಂಕರ್, ಗ್ರೀನ್ ಸಾನ್ವಿ ಹೆಸರಿನ ಹಡಗು ಹಾರ್ಮುಜ್ ಜಲಸಂಧಿಯ ಪೂರ್ವಕ್ಕೆ ಯಶಸ್ವಿಯಾಗಿ ತಲುಪಿದೆ. ಹಡಗು ಟ್ರ್ಯಾಕಿಂಗ್ ದತ್ತಾಂಶದ ಪ್ರಕಾರ, ನಡೆಯುತ್ತಿರುವ ಪಶ್ಚಿಮ...

ಸಿಬಿಎಸ್‌ಇ ಹಿಂದಿ ಹೇರಿಕೆಯು ತ್ರಿಭಾಷಾ ಸೂತ್ರ ಜಾರಿಯ ‘ರಹಸ್ಯ ಕಾರ್ಯವಿಧಾನ’: ಸ್ಟಾಲಿನ್ ಆರೋಪ

ಸಿಬಿಎಸ್‌ಇ ಇತ್ತೀಚೆಗೆ ಅನಾವರಣಗೊಳಿಸಿದ ಪಠ್ಯಕ್ರಮ ಚೌಕಟ್ಟಿನ ಕುರಿತು ಮಾತನಾಡಿದ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್, "ಮೂರು ಭಾಷಾ ಸೂತ್ರ ಎಂದು ಕರೆಯಲ್ಪಡುವುದು ವಾಸ್ತವದಲ್ಲಿ ಹಿಂದಿ ಮಾತನಾಡದ ಪ್ರದೇಶಗಳಿಗೆ ಹಿಂದಿ ವಿಸ್ತರಿಸುವ ರಹಸ್ಯ ಕಾರ್ಯವಿಧಾನವಾಗಿದೆ"...

‘ತಿಂದ ಮನೆಗೆ ಕನ್ನ ಹಾಕುವುದು ತರವಲ್ಲ, ನಿಮ್ಮ ಅಧಿಕ ಪ್ರಸಂಗ ಕರ್ನಾಟಕದ ಜನತೆ ಒಪ್ಪುವುದಿಲ್ಲ’ : ರಾಜ್ಯಪಾಲರ ವಿರುದ್ಧ ಕರವೇ ಕಿಡಿ

ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಲ್ಲಿ ತೃತೀಯ ಭಾಷೆಗೆ ಗ್ರೇಡಿಂಗ್ ನೀಡುವ ಸರ್ಕಾರದ ನಿರ್ಧಾರವನ್ನು ಮರುಪರಿಶೀಲಿಸುವಂತೆ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದಿರುವ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ರಾಜ್ಯಾಧ್ಯಕ್ಷ...

‘ತಪ್ಪಾಗಿದೆ’ : ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್‌ ವಿಧೇಯಕದ ಕುರಿತ ಟೀಕೆಗಳನ್ನು ಕೈಬಿಟ್ಟ ರಾಜಸ್ಥಾನ ಹೈಕೋರ್ಟ್

ಟ್ರಾನ್ಸ್‌ಜೆಂಡರ್ ಕಾಯ್ದೆ, 2019ರಲ್ಲಿ ಬದಲಾವಣೆಗಳನ್ನು ತರಲಿರುವ ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ವಿಧೇಯ, 2026ರ ಕುರಿತು ಈ ಹಿಂದೆ ಮಾಡಿದ್ದ ವಿಮರ್ಶಾತ್ಮಕ ಟಿಪ್ಪಣಿಗಳನ್ನು ರಾಜಸ್ಥಾನ ಹೈಕೋರ್ಟ್ ತೆಗೆದುಹಾಕಿದೆ ಎಂದು...

ಯುಸಿಸಿ ಜಾರಿ ನಂತರ ‘ಜನಸಂಖ್ಯಾ ನಿಯಂತ್ರಣ’ ಕಾನೂನಿಗೆ ಮುಂದಾದ ಉತ್ತರಾಖಂಡ ಬಿಜೆಪಿ ಸರ್ಕಾರ

ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತಂದ ನಂತರ, ಉತ್ತರಾಖಂಡ ಸರ್ಕಾರ ಈಗ ಜನಸಂಖ್ಯಾ ನಿಯಂತ್ರಣ ಕಾನೂನನ್ನು ತರುವ ಬಗ್ಗೆ ಯೋಚಿಸುತ್ತಿದೆ ಎಂದು ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಶುಕ್ರವಾರ ಸೂಚಿಸಿದ್ದಾರೆ. ಪ್ರಸ್ತಾವಿತ ಕ್ರಮದ...