Homeಮುಖಪುಟಸಹಾಯಕ್ಕಾಗಿ ಯಾಚಿಸಿದ 12 ದಿನಗಳ ಬಳಿಕ ಆರು ವರ್ಷದ ಗಾಝಾ ಬಾಲಕಿಯ ಮೃತದೇಹ ಪತ್ತೆ

ಸಹಾಯಕ್ಕಾಗಿ ಯಾಚಿಸಿದ 12 ದಿನಗಳ ಬಳಿಕ ಆರು ವರ್ಷದ ಗಾಝಾ ಬಾಲಕಿಯ ಮೃತದೇಹ ಪತ್ತೆ

- Advertisement -
- Advertisement -

“ನನಗೆ ಭಯವಾಗುತ್ತಿದೆ, ದಯವಿಟ್ಟು ಬಂದು ಕಾಪಾಡಿ” ಎಂದು ರಕ್ಷಣಾ ಕಾರ್ಯಕರ್ತರಿಗೆ ಕರೆ ಮಾಡಿ ಸಹಾಯಕ್ಕಾಗಿ ಅಂಗಲಾಚಿದ್ದ ಗಾಝಾದ 6 ವರ್ಷದ ಬಾಲಕಿ ಹಿಂದ್‌ ರಜಬ್‌ಳ ಮೃತದೇಹ 12 ದಿನಗಳ ಬಳಿಕ ಸುಟ್ಟು ಕರಕಲಾದ ಸ್ಥಿತಿಯಲ್ಲಿ ಪತ್ತೆಯಾಗಿದೆ ಎಂದು ಅಂತಾರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ.

ಬಾಲಕಿಯ ಕುಟುಂಬ ಸಂಚರಿಸುತ್ತಿದ್ದ ಕಾರಿನ ಮೇಲೆ ಇಸ್ರೇಲಿ ಸೇನಾಪಡೆ ದಾಳಿ ಮಾಡಿದ್ದ ಸಂದರ್ಭ ಆಕೆ ಸಹಾಯಕ್ಕಾಗಿ ಪ್ಯಾಲಿಸ್ತೀನ್ ರೆಡ್‌ ಕ್ರೆಸೆಂಟ್ ಸಂಸ್ಥೆಗೆ ಕರೆ ಮಾಡಿದ್ದಳು ಎಂದು ವರದಿಗಳು ಹೇಳಿವೆ.

ಇಸ್ರೇಲ್‌ ಸೈನಿಕರ ದಾಳಿಯಲ್ಲಿ ಕುಟುಂಬಸ್ಥರು ಹತ್ಯೆಯಾದಾಗ ಸುಮಾರು ಮೂರು ಗಂಟೆಗಳ ಕಾಲ ಹಿಂದ್ ರಜಬ್‌ ಕಾರಿನೊಳಗೆ ಮೃತ ದೇಹಗಳೊಂದಿಗೆ ಇದ್ದಳು. ಈ ವೇಳೆ ಆಕೆ ರೆಡ್‌ ಕ್ರೆಸೆಂಟ್‌ಗೆ ಕರೆ ಮಾಡಿ “ನನಗೆ ಭಯವಾಗುತ್ತಿದೆ. ನನ್ನನ್ನು ಕರೆದುಕೊಂಡು ಹೋಗಿ” ಎಂದಿದ್ದಾಳೆ. ಈ ವೇಳೆ ಆ ಕಡೆಯಿಂದ ಆಕೆಗೆ ಧೈರ್ಯ ತುಂಬಿದ್ದ ರೆಡ್ ಕ್ರೆಸೆಂಟ್‌ನ ರಕ್ಷಣಾ ಕಾರ್ಯರ್ತೆ, “ಹೆದರಬೇಡ ಪುಟ್ಟ, ನಾವು ಬರುತ್ತಿದ್ದೇವೆ. ನಿನ್ನನ್ನು ರಕ್ಷಿಸುತ್ತೇವೆ” ಎಂದು ಹೇಳಿರುವ ಕಾಲ್ ರೆಕಾರ್ಡ್‌ ಹೃದಯ ವಿದ್ರಾವಕವಾಗಿದೆ.

ವರದಿಗಳ ಪ್ರಕಾರ, ಬಾಲಕಿ ಕರೆ ಮಾಡಿದ ತಕ್ಷಣ ರೆಡ್ ಕ್ರೆಸೆಂಟ್ ಇಬ್ಬರು ವೈದ್ಯಕೀಯ ಸಿಬ್ಬಂದಿಯೊಂದಿಗೆ ಆಕೆ ಇರುವ ಸ್ಥಳಕ್ಕೆ ಆಂಬ್ಯುಲೆನ್ಸ್ ಕಳಿಸಿತ್ತು. ಬಳಿಕ ಆಂಬ್ಯುಲೆನ್ಸ್ ಸಂಪರ್ಕ ಕಳೆದುಕೊಂಡಿತ್ತು. ಜನವರಿ 29ರಂದು ಈ ಘಟನೆ ನಡೆದಿದೆ.

ಘಟನೆ ನಡೆದು ಎರಡು ವಾರಗಳ ಬಳಿಕ ಶನಿವಾರ (ಫೆ.10) ಗಾಝಾದ ಟೆಲ್ ಅಲ್‌ ಹವಾ ಪ್ರದೇಶದಲ್ಲಿ ಸುಟ್ಟು ಕರಕಲಾದ ಕಾರಿನೊಳಗೆ ಮೃತದೇಹಗಳು ಸಿಕ್ಕಿವೆ. ಅದರಲ್ಲಿ ಹಿಂದ್ ರಜಬ್‌ಳ ಶವವೂ ಇತ್ತು ಎಂದು ವರದಿಗಳು ಹೇಳಿವೆ. ಬಾಲಕಿ ಸಹಾಯಕ್ಕಾಗಿ ಕೋರಿದಾಗ ರೆಡ್‌ ಕ್ರೆಸೆಂಟ್ ಕಳಿಸಿದ್ದ ಆಂಬ್ಯುಲೆನ್ಸ್ ಕೂಡ ಅಲ್ಲೆ ಅಣತಿ ದೂರದಲ್ಲಿ ಸುಟ್ಟು ಕರಕಲಾದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಅದರಲ್ಲಿ ಇಬ್ಬರು ವೈದ್ಯಕೀಯ ಸಿಬ್ಬಂದಿಯ ಮೃತದೇಹಗಳು ದೊರೆತಿವೆ ಎಂದು ರೆಡ್‌ ಕ್ರೆಸೆಂಟ್ ಉಲ್ಲೇಖಿಸಿ ನ್ಯೂಯಾರ್ಕ್‌ ಟೈಮ್ಸ್ ವರದಿ ಮಾಡಿದೆ.

ಇಸ್ರೇಲ್‌ ಪಡೆಗಳಿಂದ ತಪ್ಪಿಸಿಕೊಳ್ಳಲು ಹಿಂದ್‌ ರಜಬ್‌ಳ ಕುಟುಂಬ ಗಾಝಾದಿಂದ ದೂರ ಹೊರಟಿತ್ತು. ಈ ವೇಳೆ ಇಸ್ರೇಲ್‌ ಟ್ಯಾಂಕರ್‌ಗಳು ಅವರ ಕಾರಿನ ಮೇಲೆ ದಾಳಿ ಮಾಡಿದೆ. ಘಟನೆಯಲ್ಲಿ ಕಾರಿನಲ್ಲಿದ್ದ ಎಲ್ಲರೂ ಮೃತಪಟ್ಟಿದ್ದಾರೆ. ದಾಳಿ ಬಳಿಕ ರೆಡ್ ಕ್ರೆಸೆಂಟ್‌ಗೆ ಕರೆ ಮಾಡಿದ್ದ ರಜಬ್‌ ಹಿಂದ್‌ ಕೂಡ ಆ ಬಳಿಕ ಸಾವನ್ನಪ್ಪಿದ್ದಾಳೆ. ಆಕೆಗೆ ಸಹಾಯ ಮಾಡಲು ತೆರಳುತ್ತಿದ್ದ ಆಂಬ್ಯುಲೆನ್ಸ್ ಮೇಲೆಯೂ ದಾಳಿ ಮಾಡಿ ಸುಟ್ಟು ಹಾಕಲಾಗಿದೆ. ಅದರಲ್ಲಿದ್ದ ಇಬ್ಬರು ವೈದ್ಯಕೀಯ ಸಿಬ್ಬಂದಿ ಮೃತಪಟ್ಟಿದ್ದಾರೆ. ಕನಿಷ್ಠ ಮಾನವೀಯತೆ ಇಲ್ಲದೆ 6 ವರ್ಷ ಬಾಲಕಿ ಮತ್ತು ಆಕೆಗೆ ಸಹಾಯ ಮಾಡಲು ತೆರಳುತ್ತಿದ್ದ ಆಂಬ್ಯುಲೆನ್ಸ್ ಅನ್ನು ಇಸ್ರೇಲಿ ಪಡೆಗಳು ಸುಟ್ಟು ಹಾಕಿವೆ. ಇದು ಯುದ್ದಪರಾಧವಲ್ಲದೆ ಇನ್ನೇನು? ಎಂದು ಮಾಧ್ಯಮಗಳು ಪ್ರಶ್ನಿಸಿವೆ.

ಇದನ್ನೂ ಓದಿ: ಇಸ್ರೇಲ್‌-ಪ್ಯಾಲೆಸ್ತೀನ್‌ ಯುದ್ಧ: ಅತಿಭಯಾನಕ ‘100 ದಿನಗಳು’..

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಜಾರಿ ಸರ್ಕಾರದ ಹೊಸ ಸೂತ್ರ

ಕರ್ನಾಟಕದಲ್ಲಿ ಒಳಮೀಸಲಾತಿಯ ’ಸದ್ದು-ಗುದ್ದು’ ಅವಿಭಜಿತ ಆಂಧ್ರಪ್ರದೇಶಕ್ಕಿಂತಲೂ ಹೆಚ್ಚಾಗಿದೆ. ಇದಕ್ಕೆ ಕಾರಣ ಪರಿಶಿಷ್ಟ ಜಾತಿಗಳೊಳಗಿನ ಮೇಲಾಟವೂ ಹೌದು, ಸರ್ಕಾರದ ಬೇಜವಾಬ್ದಾರಿ ನಡೆಗಳೂ ಹೌದು. ಆದರೆ ದಿನಾಂಕ: 24.04.2026ರಂದು ನಡೆದ ಸಚಿವ ಸಂಪುಟ ಸಭೆಯು ಒಳಮೀಸಲಾತಿ...

ಕೊರೋನಾ ಲಸಿಕೆ ಒಳಹೊರಗುಗಳ ಪರಾಮರ್ಶೆಯ ನೋಟ

ಮನುಷ್ಯನ ನೆನಪಿನ ಶಕ್ತಿ ಕಡಿಮೆ ಎಂದು ರಾಜಕಾರಣಿಗಳು, ಅಧಿಕಾರಿಗಳು ಸದಾ ಗುನುಗುತ್ತಿರುತ್ತಾರೆ. ಅದು ಜೀವ ಮತ್ತು ಜೀವನ ಕಳೆದುಕೊಂಡ ವಿಚಾರವನ್ನು ಕೂಡ ಬಹಳ ಬೇಗ ಮರೆವಿನ ತೊಟ್ಟಿಗೆ ತಳ್ಳಿ ಬಿಡುತ್ತದೆ.ಆದರೂ, ಮನುಷ್ಯ ಭೂಮಿಯ...

‘ಮಾವಿನ ಮರ’ ಕಂಡ ಕನಸು

ಪುಸ್ತಕ ಪರಿಚಯ ಸವಾಲಿನ ವಿಷಯ. ಅದರಲ್ಲೂ ಕವಿತೆಗಳ ಕುರಿತು ಮಾತನಾಡುವುದು ಇನ್ನೂ ಸವಾಲು. ಪ್ರತಿಯೊಂದು ಕವಿತೆಯೂ ತನ್ನ ಓದುಗರೊಂದಿಗೆ ಸಂವಾದಿಸುವ ಬಗೆ ವಿಭಿನ್ನವಾಗಿರುತ್ತದೆ. ಅದನ್ನು ಏಕರೂಪೀ ಪರಿಭಾಷೆಯಲ್ಲಿ ಮಂಡಿಸುವುದು ಸರಿಯಲ್ಲ. ’ಮಿಥಿಲೆಯ ಮಾವಿನ...

NEET ರದ್ದು : ಖಿನ್ನತೆ, ಆತಂಕಕ್ಕೆ ಒಳಗಾದ ವಿದ್ಯಾರ್ಥಿಗಳು; ನಾಲ್ಕು ದಿನದಲ್ಲಿ ನಾಲ್ವರು ಸಾವಿಗೆ ಶರಣು

ಈ ವರ್ಷದ (2026) ನೀಟ್-ಯುಜಿ (NEET-UG) ಪರೀಕ್ಷೆ ರದ್ದಾದ ಬಳಿಕ ದೇಶದಾದ್ಯಂತ ಕನಿಷ್ಠ ನಾಲ್ವರು ವಿದ್ಯಾರ್ಥಿಗಳು ತೀವ್ರ ಮಾನಸಿಕ ಒತ್ತಡ ಹಾಗೂ ಹತಾಶೆಯಿಂದ ಸಾವಿಗೆ ಶರಣಾಗಿದ್ದಾರೆ. ರಾಜಸ್ಥಾನದ ಝುಂಜುನು ಜಿಲ್ಲೆಯ 23 ವರ್ಷದ ಪ್ರದೀಪ್...

ಪ್ಯಾಲೆಸ್ಟೀನಿಯನ್ ಕೈದಿಗಳ ಮೇಲೆ ಲೈಂಗಿಕ ದೌರ್ಜನ್ಯ ವರದಿ: ನ್ಯೂಯಾರ್ಕ್ ಟೈಮ್ ವಿರುದ್ಧ ಮೊಕದ್ದಮೆ ದಾಖಲಿಸಿದ ಇಸ್ರೇಲ್ ಕ್ರಮಕ್ಕೆ ಆರ್‌ಎಸ್‌ಎಫ್ ಖಂಡನೆ

ಪ್ಯಾಲೆಸ್ಟೀನಿಯನ್ ಕೈದಿಗಳನ್ನು ಗುರಿಯಾಗಿಸಿಕೊಂಡು ವ್ಯಾಪಕವಾದ ಲೈಂಗಿಕ ದೌರ್ಜನ್ಯವನ್ನು ಬಹಿರಂಗಪಡಿಸಿದ ನಿಕೋಲಸ್ ಕ್ರಿಸ್ಟೋಫ್ ಅವರ  ಅಭಿಪ್ರಾಯ ಅಂಕಣವನ್ನು ಪ್ರಕಟಿಸಿದ ನ್ಯೂಯಾರ್ಕ್ ಟೈಮ್ಸ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿರುವ ಇಸ್ರೇಲಿ ಸರ್ಕಾರದ ನಿರ್ಧಾರವನ್ನು ರಿಪೋರ್ಟರ್ಸ್ ವಿದೌಟ್...

“ಮುಸ್ಲಿಮರಿಗೆ ಯಾವುದೇ ಕೆಲಸ ಮಾಡಲ್ಲ” ಎಂದು ವಿವಾದಾತ್ಮಕ ಶಪಥ ಮಾಡಿದ ಪಶ್ಚಿಮ ಬಂಗಾಳದ ಬಿಜೆಪಿ ಶಾಸಕ ರಿತೇಶ್ ತಿವಾರಿ

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಬಿಜೆಪಿ ತನ್ನ ಮೊದಲ ಸರ್ಕಾರವನ್ನು ರಚಿಸಿದ ಕೆಲವೇ ದಿನಗಳಲ್ಲಿ, ಪಕ್ಷದ ಶಾಸಕ ರಿತೇಶ್ ತಿವಾರಿ ಅವರು ಮಾಡಿರುವ ಭಾಷಣವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. "ಪಶ್ಚಿಮ...

’ಎಸ್‌ಐಆರ್’ ವಿರುದ್ಧ ಜನಪರ ಸಂಘಟನೆಗಳಿಂದ ಜನಾಂದೋಲನ ಬಂಗಾಳದ ಜನರ ಜೊತೆಗೆ ನಿಂತ ಕರ್ನಾಟಕ

ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಮೂಲಕ ವಿರೋಧ ಪಕ್ಷಗಳ ಮತದಾರರು ಮತ್ತು ಅಲ್ಪಸಂಖ್ಯಾತ ಸಮುದಾಯದ ಲಕ್ಷಾಂತರ ಮತದಾರರನ್ನು ಪಟ್ಟಿಯಿಂದ ಕೈಬಿಡುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಕುತಂತ್ರ ಈಗಾಗಲೇ ಬಿಹಾರದಲ್ಲಿ ಜಗಜ್ಜಾಹೀರಾಗಿದೆ....

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇದೆಂತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...

ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ..ಹಕ್ಕುಗಳನ್ನು ಕೇಳಬಾರದಾ?: ಕಾಂಗ್ರೆಸ್‌ಗೆ ಮುಸ್ಲಿಂ ಸಮಾವೇಶ ಪ್ರಶ್ನೆ

"ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ? ಯಾವ ಹಕ್ಕನ್ನೂ ಕೇಳಬಾರದು ಎಂದು ನೀವು (ಕಾಂಗ್ರೆಸ್‌ನವರು) ಬಯಸುತ್ತಿದ್ದೀರಾ?" ಎಂದು ಕರ್ನಾಟಕ ಮುಸ್ಲಿಂ ಸಮಾವೇಶ ಖಾರವಾಗಿ ಪ್ರಶ್ನಿಸಿತು. ಬೆಂಗಳೂರಿನ ಪುರಭವನದಲ್ಲಿ ಇಂದು (ಮೇ 16, ಶನಿವಾರ) ನಡೆದ...

“ಸನಾತನ ಬೇರುಗಳಲ್ಲಿರುವ ಅಸಮಾನತೆಗೆ ದ್ರಾವಿಡ ನೆಲದ ಪ್ರತಿರೋಧ”: ಉದಯನಿಧಿ ಹೇಳಿಕೆ ವಿವಾದವಾಗಿದ್ದೇಗೆ..?

ಸನಾತನ ಸಂಸ್ಥೆಗಳನ್ನು ಮತ್ತು ಸನಾತನ ಧರ್ಮವನ್ನು ನಿರ್ಮೂಲನೆ ಮಾಡುವ ಬಗ್ಗೆ ಉದಯನಿಧಿ ಸ್ಟಾಲಿನ್ ಅವರ ಹೇಳಿಕೆಗಳು ಸದ್ಯ ದೇಶಾದ್ಯಂತ ಸಂಚಲನ ಮೂಡಿಸಿವೆ.  ತಮಿಳುನಾಡು ವಿಧಾನಸಭೆಯಲ್ಲಿ ನೂತನ ಮುಖ್ಯಮಂತ್ರಿಯಾಗಿ ಸಿ. ಜೋಸೆಫ್ ವಿಜಯ್ ಅವರು ಅಧಿಕಾರ...