Homeಮುಖಪುಟಸಹಾಯಕ್ಕಾಗಿ ಯಾಚಿಸಿದ 12 ದಿನಗಳ ಬಳಿಕ ಆರು ವರ್ಷದ ಗಾಝಾ ಬಾಲಕಿಯ ಮೃತದೇಹ ಪತ್ತೆ

ಸಹಾಯಕ್ಕಾಗಿ ಯಾಚಿಸಿದ 12 ದಿನಗಳ ಬಳಿಕ ಆರು ವರ್ಷದ ಗಾಝಾ ಬಾಲಕಿಯ ಮೃತದೇಹ ಪತ್ತೆ

- Advertisement -
- Advertisement -

“ನನಗೆ ಭಯವಾಗುತ್ತಿದೆ, ದಯವಿಟ್ಟು ಬಂದು ಕಾಪಾಡಿ” ಎಂದು ರಕ್ಷಣಾ ಕಾರ್ಯಕರ್ತರಿಗೆ ಕರೆ ಮಾಡಿ ಸಹಾಯಕ್ಕಾಗಿ ಅಂಗಲಾಚಿದ್ದ ಗಾಝಾದ 6 ವರ್ಷದ ಬಾಲಕಿ ಹಿಂದ್‌ ರಜಬ್‌ಳ ಮೃತದೇಹ 12 ದಿನಗಳ ಬಳಿಕ ಸುಟ್ಟು ಕರಕಲಾದ ಸ್ಥಿತಿಯಲ್ಲಿ ಪತ್ತೆಯಾಗಿದೆ ಎಂದು ಅಂತಾರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ.

ಬಾಲಕಿಯ ಕುಟುಂಬ ಸಂಚರಿಸುತ್ತಿದ್ದ ಕಾರಿನ ಮೇಲೆ ಇಸ್ರೇಲಿ ಸೇನಾಪಡೆ ದಾಳಿ ಮಾಡಿದ್ದ ಸಂದರ್ಭ ಆಕೆ ಸಹಾಯಕ್ಕಾಗಿ ಪ್ಯಾಲಿಸ್ತೀನ್ ರೆಡ್‌ ಕ್ರೆಸೆಂಟ್ ಸಂಸ್ಥೆಗೆ ಕರೆ ಮಾಡಿದ್ದಳು ಎಂದು ವರದಿಗಳು ಹೇಳಿವೆ.

ಇಸ್ರೇಲ್‌ ಸೈನಿಕರ ದಾಳಿಯಲ್ಲಿ ಕುಟುಂಬಸ್ಥರು ಹತ್ಯೆಯಾದಾಗ ಸುಮಾರು ಮೂರು ಗಂಟೆಗಳ ಕಾಲ ಹಿಂದ್ ರಜಬ್‌ ಕಾರಿನೊಳಗೆ ಮೃತ ದೇಹಗಳೊಂದಿಗೆ ಇದ್ದಳು. ಈ ವೇಳೆ ಆಕೆ ರೆಡ್‌ ಕ್ರೆಸೆಂಟ್‌ಗೆ ಕರೆ ಮಾಡಿ “ನನಗೆ ಭಯವಾಗುತ್ತಿದೆ. ನನ್ನನ್ನು ಕರೆದುಕೊಂಡು ಹೋಗಿ” ಎಂದಿದ್ದಾಳೆ. ಈ ವೇಳೆ ಆ ಕಡೆಯಿಂದ ಆಕೆಗೆ ಧೈರ್ಯ ತುಂಬಿದ್ದ ರೆಡ್ ಕ್ರೆಸೆಂಟ್‌ನ ರಕ್ಷಣಾ ಕಾರ್ಯರ್ತೆ, “ಹೆದರಬೇಡ ಪುಟ್ಟ, ನಾವು ಬರುತ್ತಿದ್ದೇವೆ. ನಿನ್ನನ್ನು ರಕ್ಷಿಸುತ್ತೇವೆ” ಎಂದು ಹೇಳಿರುವ ಕಾಲ್ ರೆಕಾರ್ಡ್‌ ಹೃದಯ ವಿದ್ರಾವಕವಾಗಿದೆ.

ವರದಿಗಳ ಪ್ರಕಾರ, ಬಾಲಕಿ ಕರೆ ಮಾಡಿದ ತಕ್ಷಣ ರೆಡ್ ಕ್ರೆಸೆಂಟ್ ಇಬ್ಬರು ವೈದ್ಯಕೀಯ ಸಿಬ್ಬಂದಿಯೊಂದಿಗೆ ಆಕೆ ಇರುವ ಸ್ಥಳಕ್ಕೆ ಆಂಬ್ಯುಲೆನ್ಸ್ ಕಳಿಸಿತ್ತು. ಬಳಿಕ ಆಂಬ್ಯುಲೆನ್ಸ್ ಸಂಪರ್ಕ ಕಳೆದುಕೊಂಡಿತ್ತು. ಜನವರಿ 29ರಂದು ಈ ಘಟನೆ ನಡೆದಿದೆ.

ಘಟನೆ ನಡೆದು ಎರಡು ವಾರಗಳ ಬಳಿಕ ಶನಿವಾರ (ಫೆ.10) ಗಾಝಾದ ಟೆಲ್ ಅಲ್‌ ಹವಾ ಪ್ರದೇಶದಲ್ಲಿ ಸುಟ್ಟು ಕರಕಲಾದ ಕಾರಿನೊಳಗೆ ಮೃತದೇಹಗಳು ಸಿಕ್ಕಿವೆ. ಅದರಲ್ಲಿ ಹಿಂದ್ ರಜಬ್‌ಳ ಶವವೂ ಇತ್ತು ಎಂದು ವರದಿಗಳು ಹೇಳಿವೆ. ಬಾಲಕಿ ಸಹಾಯಕ್ಕಾಗಿ ಕೋರಿದಾಗ ರೆಡ್‌ ಕ್ರೆಸೆಂಟ್ ಕಳಿಸಿದ್ದ ಆಂಬ್ಯುಲೆನ್ಸ್ ಕೂಡ ಅಲ್ಲೆ ಅಣತಿ ದೂರದಲ್ಲಿ ಸುಟ್ಟು ಕರಕಲಾದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಅದರಲ್ಲಿ ಇಬ್ಬರು ವೈದ್ಯಕೀಯ ಸಿಬ್ಬಂದಿಯ ಮೃತದೇಹಗಳು ದೊರೆತಿವೆ ಎಂದು ರೆಡ್‌ ಕ್ರೆಸೆಂಟ್ ಉಲ್ಲೇಖಿಸಿ ನ್ಯೂಯಾರ್ಕ್‌ ಟೈಮ್ಸ್ ವರದಿ ಮಾಡಿದೆ.

ಇಸ್ರೇಲ್‌ ಪಡೆಗಳಿಂದ ತಪ್ಪಿಸಿಕೊಳ್ಳಲು ಹಿಂದ್‌ ರಜಬ್‌ಳ ಕುಟುಂಬ ಗಾಝಾದಿಂದ ದೂರ ಹೊರಟಿತ್ತು. ಈ ವೇಳೆ ಇಸ್ರೇಲ್‌ ಟ್ಯಾಂಕರ್‌ಗಳು ಅವರ ಕಾರಿನ ಮೇಲೆ ದಾಳಿ ಮಾಡಿದೆ. ಘಟನೆಯಲ್ಲಿ ಕಾರಿನಲ್ಲಿದ್ದ ಎಲ್ಲರೂ ಮೃತಪಟ್ಟಿದ್ದಾರೆ. ದಾಳಿ ಬಳಿಕ ರೆಡ್ ಕ್ರೆಸೆಂಟ್‌ಗೆ ಕರೆ ಮಾಡಿದ್ದ ರಜಬ್‌ ಹಿಂದ್‌ ಕೂಡ ಆ ಬಳಿಕ ಸಾವನ್ನಪ್ಪಿದ್ದಾಳೆ. ಆಕೆಗೆ ಸಹಾಯ ಮಾಡಲು ತೆರಳುತ್ತಿದ್ದ ಆಂಬ್ಯುಲೆನ್ಸ್ ಮೇಲೆಯೂ ದಾಳಿ ಮಾಡಿ ಸುಟ್ಟು ಹಾಕಲಾಗಿದೆ. ಅದರಲ್ಲಿದ್ದ ಇಬ್ಬರು ವೈದ್ಯಕೀಯ ಸಿಬ್ಬಂದಿ ಮೃತಪಟ್ಟಿದ್ದಾರೆ. ಕನಿಷ್ಠ ಮಾನವೀಯತೆ ಇಲ್ಲದೆ 6 ವರ್ಷ ಬಾಲಕಿ ಮತ್ತು ಆಕೆಗೆ ಸಹಾಯ ಮಾಡಲು ತೆರಳುತ್ತಿದ್ದ ಆಂಬ್ಯುಲೆನ್ಸ್ ಅನ್ನು ಇಸ್ರೇಲಿ ಪಡೆಗಳು ಸುಟ್ಟು ಹಾಕಿವೆ. ಇದು ಯುದ್ದಪರಾಧವಲ್ಲದೆ ಇನ್ನೇನು? ಎಂದು ಮಾಧ್ಯಮಗಳು ಪ್ರಶ್ನಿಸಿವೆ.

ಇದನ್ನೂ ಓದಿ: ಇಸ್ರೇಲ್‌-ಪ್ಯಾಲೆಸ್ತೀನ್‌ ಯುದ್ಧ: ಅತಿಭಯಾನಕ ‘100 ದಿನಗಳು’..

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...