Homeಮುಖಪುಟಭಾರತೀಯರ ಡಿಎನ್‌ಎಯಲ್ಲೇ ಪ್ರೀತಿ ಇರುವಾಗ ಆರೆಸ್ಸೆಸ್‌-ಬಿಜೆಪಿ ದ್ವೇಷ ಹರಡುತ್ತಿದೆ: ರಾಹುಲ್ ಗಾಂಧಿ

ಭಾರತೀಯರ ಡಿಎನ್‌ಎಯಲ್ಲೇ ಪ್ರೀತಿ ಇರುವಾಗ ಆರೆಸ್ಸೆಸ್‌-ಬಿಜೆಪಿ ದ್ವೇಷ ಹರಡುತ್ತಿದೆ: ರಾಹುಲ್ ಗಾಂಧಿ

- Advertisement -
- Advertisement -

ಭಾರತೀಯರ ಡಿಎನ್‌ಎಯಲ್ಲೇ ಪ್ರೀತಿ ಇರುವಾಗ ಬಿಜೆಪಿ ಮತ್ತು ಆರ್‌ಎಸ್‌ಎಸ್ ದ್ವೇಷ ಹರಡುತ್ತಿವೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ. ಎರಡು ದಿನಗಳ ವಿರಾಮದ ಬಳಿಕ ಛತ್ತೀಸ್‌ಗಢದಲ್ಲಿ ‘ಭಾರತ್ ಜೋಡೋ ನ್ಯಾಯ ಯಾತ್ರೆ’ಯನ್ನು ಪುನರಾರಂಭಿಸಿ ಭಾನುವಾರ ಅವರು ಮಾತನಾಡಿದರು.

ಛತ್ತೀಸ್‌ಗಢದ ರಾಯ್‌ಗಢ್‌ನ ಕೆವದಬಾದಿ ಚೌಕ್‌ನಲ್ಲಿ ಸಭೆಯನ್ನುದ್ದೇಶಿಸಿ ಮಾತನಾಡಿದ ರಾಹುಲ್ ಗಾಂಧಿ, “ನಮ್ಮ ಪಕ್ಷವು ಭವಿಷ್ಯದ ಪೀಳಿಗೆಗೆ ದ್ವೇಷ ಮತ್ತು ಹಿಂಸೆ ಅಸ್ತಿತ್ವದಲ್ಲಿಲ್ಲದ ಹಿಂದೂಸ್ಥಾನವನ್ನು ನೀಡಲು ಬಯಸುತ್ತದೆ ಎಂದು ಹೇಳಿದರು.

”ಸದ್ಯ ದೇಶದ ಮೂಲೆ ಮೂಲೆಗಳಲ್ಲಿ ದ್ವೇಷ, ಹಿಂಸಾಚಾರ ಹರಡುತ್ತಿದೆ. ಕೆಲವರು ಅವರ ಭಾಷೆಯ ಆಧಾರದ ಮೇಲೆ ಇತರರನ್ನು ಇಷ್ಟಪಡುವುದಿಲ್ಲ. ಕೆಲವರು ರಾಜ್ಯಗಳ ಆಧಾರದ ಮೇಲೆ ಇತರರನ್ನು ಇಷ್ಟಪಡುವುದಿಲ್ಲ. ಇಂತಹ ಚಿಂತನೆಗಳು ದೇಶವನ್ನು ದುರ್ಬಲಗೊಳಿಸುತ್ತವೆ” ಎಂದರು.

ಭಾರತೀಯ ಜನತಾ ಪಕ್ಷ (ಬಿಜೆಪಿ) ಮತ್ತು ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್‌) ದ್ವೇಷವನ್ನು ಹರಡುತ್ತಿದೆ. ಆದರೆ, ಈ ದೇಶದ ಡಿಎನ್‌ಎಯಲ್ಲೇ ಪ್ರೀತಿ ಇದೆ. ದೇಶದಲ್ಲಿ, ವಿಭಿನ್ನ ನಂಬಿಕೆ ಮತ್ತು ಆಲೋಚನೆಗಳನ್ನು ಹೊಂದಿರುವ ಜನರು ಪ್ರೀತಿಯಿಂದ ಶಾಂತಿಯುತವಾಗಿ ಒಟ್ಟಿಗೆ ಬದುಕುತ್ತಿದ್ದಾರೆ ಎಂದು ರಾಹುಲ್ ಗಾಂಧಿ ಹೇಳಿದರು.

ಕಳೆದ ವರ್ಷದ ಮೇ ತಿಂಗಳಿನಿಂದ ನೂರಾರು ಜನರು ಸಾಯುತ್ತಿದ್ದರೂ, ಹಲವಾರು ಮನೆಗಳಿಗೆ ಬೆಂಕಿ ಹಚ್ಚಲಾಗುತ್ತಿದ್ದರೂ, ಇದುವರೆಗೆ ಕಲಹ ಪೀಡಿತ ಮಣಿಪುರಕ್ಕೆ ಭೇಟಿ ನೀಡಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ವಿರುದ್ದ ರಾಹುಲ್ ವಾಗ್ದಾಳಿ ನಡೆಸಿದರು.

ಈಶಾನ್ಯ ರಾಜ್ಯಗಳಲ್ಲಿ ಅಂತರ್ಯುದ್ಧ ನಡೆಯುತ್ತಿದೆ. ಕೇಂದ್ರ ಸರ್ಕಾರಕ್ಕೆ ಅದನ್ನು ನಿಯಂತ್ರಿಸಲು ಆಗುತ್ತಿಲ್ಲ. “ನಾನು ಅಲ್ಲಿಗೆ ಭೇಟಿ ನೀಡಿದ್ದಾಗ ಮೈತೇಯಿ ಸಮುದಾಯದವರು ಕುಕಿ ಭದ್ರತಾ ಸಿಬ್ಬಂದಿಯನ್ನು ಪಡೆಯದಂತೆ ನನ್ನನ್ನು ಕೇಳಿದ್ದರು. ಅದೇ ರೀತಿ ಕುಕಿಗಳು ಮೈತೇಯಿಗಳ ಕುರಿತು ಮಾತನಾಡಿದ್ದರು ಎಂದರು.

ತನ್ನ ಯಾತ್ರಾ ವಾಹನದ ಮೇಲೆ ಹತ್ತಿದೆ ಮಕ್ಕಳಿಗೆ ಸಿಹಿ ಹಂಚಿದ ರಾಹುಲ್ ಗಾಂಧಿ, ಒಬ್ಬ ಹುಡುಗಿಯತ್ರ ನ್ಯಾಯ ಬೇಕಾ, ಅನ್ಯಾಯ ಬೇಕಾ? ಎಂದು ಕೇಳಿದರು. ಅದಕ್ಕೆ ನ್ಯಾಯ ಎಂದು ಉತ್ತರ ಬಾಲಕಿ, ತಾನು ಭಾರತವನ್ನು ತುಂಬಾ ಪ್ರೀತಿಸುವ ಕಾರಣ, ತನಗೆ “ಮೊಹಬ್ಬತ್ ಕಾ ಹಿಂದೂಸ್ತಾನ್” ಬೇಕು ಎಂದು ರಾಹುಲ್ ಗಾಂಧಿಗೆ ಹೇಳಿದಳು.

ಸಶಸ್ತ್ರ ಪಡೆಗಳಲ್ಲಿ ಅಲ್ಪಾವಧಿಗೆ ಸೈನಿಕರನ್ನು ನೇಮಿಸಿಕೊಳ್ಳುವ ಅಗ್ನಿವೀರ್ ಪ್ರಕ್ರಿಯೆಯನ್ನು ಟೀಕಿಸಿದ ಗಾಂಧಿ, 1.50 ಲಕ್ಷ ಯುವಕರಿಗೆ ನ್ಯಾಯ ಸಿಗುವುದನ್ನು ತಮ್ಮ ಪಕ್ಷ ಖಚಿತಪಡಿಸುತ್ತದೆ ಎಂದು ಎಂದರು.

“ಎಲ್ಲಾ ರಕ್ಷಣಾ ಗುತ್ತಿಗೆಗಳನ್ನು (ಕೈಗಾರಿಕೋದ್ಯಮಿ ಗೌತಮ್) ಅದಾನಿಗೆ ನೀಡಲಾಗುತ್ತಿದೆ. ನಾನು ಈ ವಿಷಯವನ್ನು ಸಂಸತ್ತಿನಲ್ಲಿ ಪ್ರಸ್ತಾಪಿಸಿದಾಗ, ನನ್ನ ಸದಸ್ಯತ್ವವನ್ನು ರದ್ದುಗೊಳಿಸಲಾಯಿತು ಮತ್ತು ನನ್ನ ಅಧಿಕೃತ ನಿವಾಸವನ್ನು ಖಾಲಿ ಮಾಡುವಂತೆ ಕೇಳಲಾಯಿತು. ಜನರ ಹೃದಯದಲ್ಲಿ ವಾಸಿಸುತ್ತಿರುವ ನನಗೆ ಮನೆಯ ಅಗತ್ಯವಿಲ್ಲ ಎಂದು ರಾಹುಲ್ ಗಾಂಧಿ ಹೇಳಿದರು.

ತಮ್ಮ ಭಾಷಣದ ಸಮಯದಲ್ಲಿ ಜನ ಸಮೂಹಕ್ಕೆ ತಮ್ಮ ಮೊಬೈಲ್ ಫೋನ್ ತೋರಿಸಿದ ರಾಹುಲ್ ಗಾಂಧಿ, “ಇದನ್ನು ಚೀನಾದಲ್ಲಿ ತಯಾರಿಸಲಾಗಿದೆ. ಅಂಬಾನಿಯಂತಹ ಜನರು ಭಾರತದಲ್ಲಿ ಮಾರಾಟ ಮಾಡುತ್ತಿದ್ದಾರೆ. ಚೀನೀಯರು ಮತ್ತು ಅಂಬಾನಿ ಇಂತಹ ಫೋನ್‌ಗಳಿಂದ ಹಣ ಗಳಿಸುತ್ತಿದ್ದಾರೆ. ಈ ಫೋನ್ ಛತ್ತೀಸ್‌ಗಢದಲ್ಲಿ ಉತ್ಪಾದನೆಯಾಗಬೇಕೆಂದು ನಾನು ಬಯಸುತ್ತೇನೆ” ಎಂದರು.

ಇದನ್ನೂ ಓದಿ : ಕೇರಳದ 3 ರಾಜಕೀಯ ಕೊಲೆಗಳ ಸ್ಟೋರಿ…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ರಾಜಭವನ’ಗಳನ್ನು ‘ಲೋಕಭವನ’ಗಳೆಂದು ಮರುನಾಮಕರಣ; ಇದು ಒಕ್ಕೂಟ ವ್ಯವಸ್ಥೆ ಮತ್ತು ಭಾಷಾ ಸಮಾನತೆಯ ಮೇಲಿನ ಆಕ್ರಮಣ: ಜಾಗೃತ ಕರ್ನಾಟಕ

ದೇಶಾದಾದ್ಯಂತ ಇರುವ ರಾಜಭವನಗಳ ಹೆಸರನ್ನು ಲೋಕಭವನ ಎಂದು ಮರುನಾಮಕರಣ ಮಾಡುವುದಾಗಿ ಕೇಂದ್ರ ಗೃಹಸಚಿವಾಲಯ ತೀರ್ಮಾನಿಸಿದೆ. ಕೇಂದ್ರದ  ಈ ನೀತಿಯನ್ನು ವಿರೋಧಿಸಿರುವ ಜಾಗೃತ ಕರ್ನಾಟಕ ದೇಶದ ಎಲ್ಲಾ ಹಿಂದಿಯೇತರ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದೆ....

ಯುಜಿಸಿ ಈಕ್ವಿಟಿ ನಿಯಮಗಳ ಮೇಲಿನ ಸುಪ್ರೀಂ ಕೋರ್ಟ್ ತಡೆಗೆ ವಿದ್ಯಾರ್ಥಿಗಳ ಪ್ರತಿಭಟನೆ, ರೋಹಿತ್ ಕಾಯ್ದೆಗೆ ಒತ್ತಾಯ

ಯುಜಿಸಿ ಇಕ್ವಿಟಿ ನಿಯಮಗಳಿಗೆ ಸುಪ್ರೀಂ ಕೋರ್ಟ್ ನೀಡಿದ ತಡೆಯಾಜ್ಞೆಯ ವಿರುದ್ಧ ಮತ್ತು ವಿಶ್ವವಿದ್ಯಾಲಯಗಳಲ್ಲಿ ಜಾತಿ ತಾರತಮ್ಯವನ್ನು ಎದುರಿಸಲು ಶಾಸನಬದ್ಧ ರೋಹಿತ್ ಕಾಯ್ದೆಯನ್ನು ಜಾರಿಗೆ ತರುವಂತೆ ಒತ್ತಾಯಿಸಿ ಅಖಿಲ ಭಾರತ ವಿದ್ಯಾರ್ಥಿ ಸಂಘ (ಎಐಎಸ್ಎ)...

ನರವಾಣೆ ಅಪ್ರಕಟಿತ ಪುಸ್ತಕ ಗದ್ದಲ | ಸತ್ಯ ಹೊರಬಂದರೆ ಮೋದಿ, ರಾಜನಾಥ್ ಸಿಂಗ್ ಮುಖವಾಡ ಬಯಲಾಗಲಿದೆ : ರಾಹುಲ್ ಗಾಂಧಿ

ಮಾಜಿ ಸೇನಾ ಮುಖ್ಯಸ್ಥ ಜನರಲ್ ಮನೋಜ್ ಮುಕುಂದ್ ನರವಾಣೆ ಅವರ ಅಪ್ರಕಟಿತ ಆತ್ಮಚರಿತ್ರೆ ಕುರಿತು ರಾಹುಲ್ ಗಾಂಧಿ ಸೋಮವಾರ (ಫೆ.2) ಲೋಕಸಭೆಯಲ್ಲಿ ಉಲ್ಲೇಖಿಸಿದ್ದು, ಈ ವೇಳೆ ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ತೀವ್ರ...

ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ಘರ್ಷಣೆ : ಮೂವರ ಬಂಧನ

ಗುಜರಾತ್‌ನ ಪಠಾಣ್ ತಾಲೂಕಿನ ಚದ್ರುಮಣ ಗ್ರಾಮದಲ್ಲಿ ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ನಡೆದ ಗಲಾಟೆಗೆ ಸಂಬಂಧಿಸಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದು, ಇನ್ನೂ ಐವರ ಬಂಧನಕ್ಕೆ ಬಲೆ ಬೀಸಿದ್ದಾರೆ. ಆರೋಪಿಗಳ ವಿರುದ್ದ ಎಸ್‌ಸಿ/ಎಸ್‌ಟಿ...

ಲೋಕಸಭೆಯಲ್ಲಿ ಲಡಾಖ್ ಬಿಕ್ಕಟ್ಟಿನ ಬಗ್ಗೆ ಮಾಜಿ ಸೇನಾ ಮುಖ್ಯಸ್ಥರ ಅಪ್ರಕಟಿತ ಆತ್ಮಚರಿತ್ರೆ ಉಲ್ಲೇಖಿಸಿದ ರಾಹುಲ್ ಗಾಂಧಿ: ಸಭೆಯಲ್ಲಿ ತೀವ್ರ ಗದ್ದಲ

ಸೋಮವಾರ ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಮಾಜಿ ಸೇನಾ ಮುಖ್ಯಸ್ಥ ಎಂಎಂ ನರವಾಣೆ ಅವರ ಆತ್ಮಚರಿತ್ರೆಯಿಂದ ಉಲ್ಲೇಖಿಸಲು ಪ್ರಯತ್ನಿಸಿದ ನಂತರ ಗದ್ದಲ ಭುಗಿಲೆದ್ದಿತು. ರಾಹುಲ್ ಮಾತನಾಡಲು ಪ್ರಾರಂಭಿಸುತ್ತಿದ್ದಂತೆ, ರಕ್ಷಣಾ ಸಚಿವ...

ಪಂಜಾಬ್ ನಿರೀಕ್ಷೆಗಳನ್ನು ಪೂರೈಸುವಲ್ಲಿ ಕೇಂದ್ರ ಬಜೆಟ್ ಮತ್ತೊಮ್ಮೆ ವಿಫಲವಾಗಿದೆ: ಸಿಎಂ ಭಗವಂತ್ ಮಾನ್

ಕೇಂದ್ರ ಬಜೆಟ್ ಮತ್ತೊಮ್ಮೆ ಪಂಜಾಬ್‌ನ ನಿರೀಕ್ಷೆಗಳನ್ನು ಪೂರೈಸುವಲ್ಲಿ ವಿಫಲವಾಗಿದೆ ಎಂದು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಮತ್ತು ಆಡಳಿತಾರೂಢ ಆಮ್ ಆದ್ಮಿ ಪಕ್ಷದ (ಎಎಪಿ) ಸರ್ಕಾರದ ಸಚಿವರು ಭಾನುವಾರ ಅಭಿಪ್ರಾಯಪಟ್ಟಿದ್ದಾರೆ. ಬಜೆಟ್ ರೈತರಿಗೆ ಯಾವುದೇ...

ರಾಜ್ಯಪಾಲರು ಪೂರ್ಣ ಭಾಷಣ ಓದಿಲ್ಲ, ‘ಜೈ ಸಂವಿಧಾನ’ ಎನ್ನುವುದನ್ನು ಉಲ್ಲೇಖಿಸದೆ ಹೋದರು : ಸಿಎಂ ಸಿದ್ದರಾಮಯ್ಯ

ರಾಜ್ಯಪಾಲರು ಪೂರ್ತಿ ಭಾಷಣ ಓದದೆ ತರಾತುರಿಯಲ್ಲಿ ಹೋದರು. ಭಾಷಣದಲ್ಲಿದ್ದ "ಜೈ ಸಂವಿಧಾನ" ಎನ್ನುವುದನ್ನೂ ಉಲ್ಲೇಖಿಸದೆ ತೆರಳಿದರು. ರಾಷ್ಟ್ರಗೀತೆ ಮುಗಿಯುವವರೆಗೂ ಕಾಯದೆ ಹೋಗಿಬಿಟ್ಟರು. ಇದು ಸರಿಯಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಬಿಜೆಪಿ ಶಾಸಕ...

ಉತ್ತರಾಖಂಡ| ಹಿಂದುತ್ವ ಗುಂಪಿನ ಕಿರುಕುಳದಿಂದ ಮುಸ್ಲಿಂ ಅಂಗಡಿ ಮಾಲೀಕನನ್ನು ರಕ್ಷಿಸಿದ ದೀಪಕ್ ಕುಮಾರ್

ಸ್ಥಳೀಯ ಮುಸ್ಲಿಂ ಅಂಗಡಿ ಮಾಲೀಕನ ವಿರುದ್ಧ ಬಜರಂಗದಳ ಸದಸ್ಯರು ನೀಡುತ್ತಿದ್ದ ಕಿರುಕುಳವನ್ನು ಜಿಮ್ ಮಾಲೀಕ ದೀಪಕ್ ಕುಮಾರ್ ಸ್ಥಳದಲ್ಲೇ ಎದುರಿಸಿದ್ದಾರೆ. ಆಕ್ರೋಶಿತರಾದ ಹಿಂದುತ್ವ ಗುಂಪಿನ ಸದಸ್ಯರು ದೀಪಕ್ ವಿರುದ್ಧವೇ ಪ್ರತಿಭಟನೆ ನಡೆಸಿದ್ದು, ಹಲವಾರ...

ಎಸ್‌ಐಆರ್ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ನಡೆಸುವ ಭಾರತೀಯ ಚುನಾವಣಾ ಆಯೋಗದ (ಇಸಿಐ) ನಿರ್ಧಾರವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ...

ದಕ್ಷಿಣ ಪಿನಾಕಿನಿ ಜಲವಿವಾದ : ನ್ಯಾಯಮಂಡಳಿ ಸ್ಥಾಪಿಸಲು ಸುಪ್ರೀಂ ಕೋರ್ಟ್ ಆದೇಶ

ದಕ್ಷಿಣ ಪಿನಾಕಿನಿ (ಪೆನ್ನೈಯಾರ್) ನದಿ ನೀರಿನ ಹಂಚಿಕೆಗೆ ಸಂಬಂಧಿಸಿದಂತೆ ತಮಿಳುನಾಡು ಮತ್ತು ಕರ್ನಾಟಕ ರಾಜ್ಯಗಳ ನಡುವೆ ಬಾಕಿ ಇರುವ ವಿವಾದಗಳನ್ನು ಪರಿಹರಿಸಲು ನ್ಯಾಯಮಂಡಳಿ ಸ್ಥಾಪಿಸುವಂತೆ ಸುಪ್ರೀಂ ಕೋರ್ಟ್ ಸೋಮವಾರ (ಫೆ.2) ನಿರ್ದೇಶನ ನೀಡಿದೆ. ಕೇಂದ್ರ...