Homeಕರ್ನಾಟಕ33 ಲಕ್ಷ ರೈತರ ಖಾತೆಗೆ 628 ಕೋಟಿ ರೂ. ಬರ ಪರಿಹಾರದ ಹಣ ಬಿಡುಗಡೆ: ಸಚಿವ...

33 ಲಕ್ಷ ರೈತರ ಖಾತೆಗೆ 628 ಕೋಟಿ ರೂ. ಬರ ಪರಿಹಾರದ ಹಣ ಬಿಡುಗಡೆ: ಸಚಿವ ಕೃಷ್ಣ ಭೈರೇಗೌಡ

- Advertisement -
- Advertisement -

ರಾಜ್ಯ ಸರ್ಕಾರ ಬರ ನಿರ್ವಹಣೆಗೆ ಪರಿಹಾರ ಕ್ರಮವಾಗಿ ರೂ 2000 ಕೋಟಿ ಅನುದಾನವನ್ನು ನಿಗದಿ ಪಡಿಸಿದ್ದು, ಈಗಾಗಲೇ ರೂ 628 ಕೋಟಿ ಹಣವನ್ನು ನೇರವಾಗಿ 33 ಲಕ್ಷ ರೈತರ ಖಾತೆಗೆ ಬಿಡುಗಡೆ ಮಾಡಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ತಿಳಿಸಿದರು.

ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾಡನಾಡಿದ ಅವರು, 1.6 ಲಕ್ಷ ರೈತರ ಬ್ಯಾಂಕ್ ಖಾತೆಯ ಮಾರ್ಪಾಡು ಪ್ರಕ್ರಿಯೆ ನಡೆಯುತ್ತಿದ್ದು, ಇದು ಸರಿಯಾದ ಕೂಡಲೇ ಅವರ ಖಾತೆಗಳಿಗೂ ಬರ ಪರಿಹಾರದ ಹಣವನ್ನು ರಾಜ್ಯ ಸರ್ಕಾರದಿಂದ ಬಿಡುಗಡೆ ಮಾಡಲಾಗುವುದು ಎಂದರು.

ಅರ್ಹ ರೈತರಿಗೆ ಬರ ಪರಿಹಾರ ತಲುಪಿಸುವ ಹಾಗೂ ವ್ಯವಸ್ಥೆಯಲ್ಲಿ ಪಾರದರ್ಶಕತೆ ತರಲು ಎಲ್ಲಾ ಗ್ರಾಮ ಪಂಚಾಯಿತಿಗಳಿಗೆ ಬರ ಪರಿಹಾರ ಬಿಡುಗಡೆ ಮಾಡಿರುವ ರೈತ ಪಟ್ಟಿಯನ್ನು ಪ್ರಕಟ ಮಾಡಬೇಕು ಎಂದು ಸೂಚನೆ ನೀಡಿರುವ ಹಿನ್ನೆಲೆ, ಬಹುತೇಕ ಗ್ರಾಮ ಪಂಚಾಯಿತಿಗಳಲ್ಲಿ ರೈತರ ಹೆಸರು ಪ್ರಕಟಣೆ ಮಾಡಲಾಗಿದೆ. ಆ ಪಟ್ಟಿಯಲ್ಲಿ ರೈತರ ಹೆಸರು ಬಿಟ್ಟು ಹೋಗಿದ್ದಲ್ಲಿ, ಅಂತಹ ರೈತರು ಸಮೀಪದ ರೈತ ಸಂಪರ್ಕ ಕೇಂದ್ರ ಅಥವಾ ಸ್ಥಳೀಯ ಕಂದಾಯ ಇಲಾಖೆ ಕಚೇರಿಗೆ ಭೇಟಿ ನೀಡಿ, ಹೆಸರು ಸೇರ್ಪಡಿಕೊಳ್ಳಬೇಕು ಎಂದು ಸಚಿವರು ರೈತರಲ್ಲಿ ಕೋರಿದರು.

ರಾಜ್ಯ ಸರ್ಕಾರವು ರಾಜ್ಯದ 223 ತಾಲ್ಲೂಕುಗಳನ್ನು ಬರ ಪೀಡಿತ ತಾಲ್ಲೂಕುಗಳು ಎಂದು ಘೋಷಿಸಿದ್ದು, ಕುಡಿಯುವ ನೀರು, ಮೇವು ಹಾಗೂ ಇತರೆ ಮೂಲಭೂತ ಸಮಸ್ಯೆಗಳ ನಿವಾರಣೆಗೆ, ಜಿಲ್ಲಾಧಿಕಾರಿ ಹಾಗೂ ತಹಶೀಲ್ದಾರ್ ಗಳ ಖಾತೆಗಳಿಗೆ ರೂ 870 ಕೋಟಿ ಅನುದಾನ ಬಿಡುಗಡೆ ಮಾಡಲಾಗಿದೆ. ಪರಿಹಾರದ ಹಣವನ್ನು ಸಮರ್ಪಕವಾಗಿ ಬಳಸಲು, ಶಾಸಕರ ಅಧ್ಯಕ್ಷತೆಯಲ್ಲಿ 223 ಟಾಸ್ಕ್ ಫೋರ್ಸ್ ಸಮಿತಿಯನ್ನು ರಚಿಸಲಾಗಿದ್ದು, ರಾಜ್ಯಾದ್ಯಂತ ಇಲ್ಲಿಯವರೆಗೆ, 431 ಟಾಸ್ಕ್ ಫೋರ್ಸ್ ಸಮಿತಿ ಸಭೆ ನಡೆಸಲಾಗಿದೆ. ಜಿಲ್ಲಾ ಮಟ್ಟದಲ್ಲಿ 236 ಟಾಸ್ಕ್ ಫೋರ್ಸ್ ಸಮಿತಿಯ ಸಭೆಗಳು ನಡೆದಿವೆ ಎಂದು ಹೇಳಿದರು.

ರಾಜ್ಯದ 156 ಹಳ್ಳಿಗಳಲ್ಲಿ ಖಾಸಗಿ ಕೊಳವೆ ಬಾವಿಗಳಿಂದ ಬಾಡಿಗೆ ಆಧಾರದ ಮೇಲೆ ಕುಡಿಯುವ ನೀರು ಸರಬರಾಜು ಮಾಡಲಾಗುತ್ತಿದ್ದು, ಅಲ್ಲದೇ 46 ಗ್ರಾಮಗಳಲ್ಲಿ ಮತ್ತು ನಗರ ಪ್ರದೇಶದಲ್ಲಿನ 46 ವಾರ್ಡ್ ಗಳಲ್ಲಿ ಟ್ಯಾಂಕರ್ ಗಳ ಮೂಲಕ ಕುಡಿಯುವ ನೀರನ್ನು ಒದಗಿಸಲಾಗುತ್ತಿದೆ ಎಂದು ತಿಳಿಸಿದರು.

ಕಳೆದ ಐದು ವರ್ಷದ ಅಂಕಿ ಅಂಶಗಳ ಆಧಾರದ ಮೇಲೆ, ಮುಂಜಾಗ್ರತಾ ಕ್ರಮವಾಗಿ, ಮುಂಬರುವ ದಿನಗಳಲ್ಲಿ ಗ್ರಾಮೀಣ ಹಾಗೂ ನಗರ ಪ್ರದೇಶಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಉದ್ಭವವಾಗುವ 782 ಗ್ರಾಮಗಳು ಹಾಗೂ 1193 ವಾರ್ಡ್ ಗಳನ್ನು ಗುರುತಿಸಲಾಗಿದ್ದು, ಅಂತಹ ಪ್ರದೇಶಗಳಲ್ಲಿ ಸಹ ಕುಡಿಯುವ ನೀರಿನ ಸಮಸ್ಯೆ ನೀಗಿಸಲು ಕ್ರಮವನ್ನು ಕೈಗೊಳ್ಳಲಾಗಿದೆ. ಕುಡಿಯುವ ನೀರಿನ ಸಮಸ್ಯೆಯ ನಿರ್ವಹಣೆಗೆ ಹೊಸ ಕೊಳವೆ ಬಾವಿಗಳ ಕೊರೆಯುವ ಅವಶ್ಯಕತೆ ಇದ್ದಲ್ಲಿ, ಕೊಳವೆ ಬಾವಿಗಳನ್ನು ಕೊರೆಯಲು ಕ್ರಮವಹಿಸುವಂತೆ ಮುಖ್ಯಮಂತ್ರಿಯವರು ಗ್ರಾಮೀಣ ಅಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಇಲಾಖೆಗೆ ಸೂಚಿಸಿದ್ದಾರೆ ಎಂದು ಮಾಹಿತಿ ನೀಡಿದರು.

ಮೇವಿನ ಸಮಸ್ಯೆ ನೀಗಿಸಲು 2023ರ ನವೆಂಬರ್ ತಿಂಗಳಲ್ಲಿ ಮೊದಲ ಹಂತದ ಕ್ರಮವಾಗಿ 7 ಲಕ್ಷ ಮೇವಿನ ಬಿತ್ತನೆ ಬೀಜದ ಕಿಟ್ ಗಳನ್ನು ರೈತರಿಗೆ ನೀಡಲಾಗಿದ್ದು, ಎರಡನೇ ಹಂತವಾಗಿ 7 ಲಕ್ಷ ಮೇವಿನ ಬಿತ್ತನೆ ಬೀಜದ ಕಿಟ್ ಗಳನ್ನು ರೈತರಿಗೆ ವಿತರಿಸಲು ಪಶುಸಂಗೋಪನೆ ಇಲಾಖೆಗೆ ಹಣವನ್ನು ಬಿಡುಗಡೆ ಮಾಡಲಾಗಿದೆ. ರಾಜ್ಯದ ವಿವಿಧೆಡೆ 3 ಗೂಶಾಲೆಗಳನ್ನು‌ ಸ್ಥಾಪಿಸಲಾಗಿದ್ದು, ಇದರ ಜೊತೆಗೆ ಮೇವಿನ ದಾಸ್ತಾನಿಗೆ ಹಲವು ಮುಂಜಾಗ್ರತಾ ಕ್ರಮಗಳನ್ನು ಸರ್ಕಾರ ಕೈಗೊಂಡಿದೆ ಎಂದು ಹೇಳಿದರು.

ಕೇಂದ್ರ ಸರ್ಕಾರಕ್ಕೆ ರೂ 18,178 ಕೋಟಿ ಬರ ಪರಿಹಾರ ಅನುದಾನವನ್ನು ಬಿಡುಗಡೆ ಮಾಡಲು ಮನವಿಯನ್ನು ಸಲ್ಲಿಸಲಾಗಿದ್ದು, ಮುಖ್ಯಮಂತ್ರಿ ಕೂಡ ಪ್ರಧಾನ ಮಂತ್ರಿಯನ್ನು ಖುದ್ದು ಭೇಟಿಯಾಗಿ ಬರ ಪರಿಹಾರದ ಅನುದಾನ ಬಿಡುಗಡೆಗೆ ಮಾಡಲು ಮನವಿ ಮಾಡಿದ್ದಾರೆ. ಕೇಂದ್ರ ಗೃಹ ಸಚಿವರನ್ನು ಮುಖ್ಯಮಂತ್ರಿಗಳು ಸೇರಿದಂತೆ ರಾಜ್ಯ ಸರ್ಕಾರದ ಹಲವು ಸಚಿವರು ಖುದ್ದು ಭೇಟಿ ಮಾಡಿ, ಬರ ಪರಿಹಾರ ನೀಡಲು ಮನವಿಯನ್ನು ಮಾಡಿದ್ದಾರೆ. ಈಗಾಗಲೇ ಬರ ಪರಿಹಾರಕ್ಕೆ ಮನವಿಯನ್ನು ಸಲ್ಲಿಸಿ ನಾಲ್ಕು ತಿಂಗಳು ಕಳೆದಿದ್ದು, ಕೇಂದ್ರ ಗೃಹ ಸಚಿವರು ರಾಜ್ಯ ಪ್ರವಾಸದಲ್ಲಿರುವ, ಈ ಸಂದರ್ಭದಲ್ಲಿ, ಬರ ಪರಿಹಾರ ಘೋಷಿಸಿದರೆ ರಾಜ್ಯದ ರೈತರಿಗೆ ಬಹಳ ಅನುಕೂಲವಾಗಲಿದೆ ಎಂದು ಸಚಿವರು ಹೇಳಿದರು.

ಇದನ್ನೂ ಓದಿ : ಬಡವರು, ರೈತರ ಬಗ್ಗೆ ಮಾತನಾಡಲು ಅಮಿತ್ ಶಾ ಅವರಿಗೆ ನೈತಿಕತೆ ಇಲ್ಲ: ಸಿಎಂ ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನ ಬದಲಿಸಿ ಮನುಸ್ಮೃತಿ ತರಲು SIR ಷಡ್ಯಂತ್ರ: ನಟ ಕಿಶೋರ್

ದೇಶದ ಬಹುಕೋಟಿ ಉದ್ಯಮಿ ಗೌತಮ್ ಅದಾನಿಯದ್ದೇ ಇರಲಿ ಅಥವಾ ಒಬ್ಬ ಬಡ ರೈತನದ್ದೇ ಇರಲಿ, ಪ್ರಜಾಪ್ರಭುತ್ವದಲ್ಲಿ ಎಲ್ಲರ ಮತವೂ ಒಂದೇ ಸಮ. ಪ್ರಜೆಗಳನ್ನೆಲ್ಲ ಸಮಾನವಾಗಿ ಕಾಣುವ ಏಕೈಕ ಅಸ್ತ್ರ ಎಂದರೆ ಅದು ಮತದಾನದ...

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

'ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು' ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ...

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...