Homeಮುಖಪುಟಹಲ್ದ್ವಾನಿ ಹಿಂಸಾಚಾರ: ಮಾಹಿತಿ ಬಿಚ್ಚಿಟ್ಟ ಮೃತರ ಸಂಬಂಧಿಕರು..

ಹಲ್ದ್ವಾನಿ ಹಿಂಸಾಚಾರ: ಮಾಹಿತಿ ಬಿಚ್ಚಿಟ್ಟ ಮೃತರ ಸಂಬಂಧಿಕರು..

- Advertisement -
- Advertisement -

ಬಿಜೆಪಿ ಆಡಳಿತದ ಉತ್ತರಖಂಡದ ಹಲ್ದ್ವಾನಿಯಲ್ಲಿ ಮಸೀದಿ ಮತ್ತು ಮದರಸಾ ಧ್ವಂಸ ಕಾರ್ಯಾಚರಣೆ ಹಿಂಸಾಚಾರಕ್ಕೆ ತಿರುಗಿತ್ತು. ಹಿಂಸಾಚಾರದ ಬಳಿಕ ಬನ್‌ಭೂಲ್‌ಪುರ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಜನರು ಆತಂಕದಿಂದ ದಿನದೂಡುತ್ತಿದ್ದಾರೆ. ಈ ಪ್ರದೇಶದಲ್ಲಿ ಇಂಟರ್‌ನೆಟ್‌ ಸ್ಥಗಿತಗೊಳಿಸಲಾಗಿದೆ. ಪೋಲಿಸರ ಬಗ್ಗೆ ಭಯದಿಂದ ಜನರು ತಮ್ಮ ಮನೆಗಳ ಬಾಗಿಲು ಮತ್ತು ಕಿಟಕಿಗಳನ್ನು ತೆರೆಯಲು ಹಿಂದೇಟು ಹಾಕುತ್ತಿದ್ದಾರೆ.

ಜಿಲ್ಲಾಡಳಿತ ನೀಡಿದ ಮಾಹಿತಿಯ ಪ್ರಕಾರ ಹಿಂಸಾಚಾರದಲ್ಲಿ ಐವರು ಮೃತಪಟ್ಟಿದ್ದಾರೆ. ಮೃತರನ್ನು ಹಲ್ದ್ವಾನಿ ನಿವಾಸಿಗಳಾದ ಫಹೀಮ್ ಖುರೇಷಿ (30), ಝಾಹಿದ್ (45), ಮಗ ಮೊಹಮ್ಮದ್ ಅನಸ್ (16), ಮೊಹಮ್ಮದ್ ಶಬಾನ್ (22), ಮತ್ತು ಬಿಹಾರ ನಿವಾಸಿ ಪ್ರಕಾಶ್ ಕುಮಾರ್ ಸಿಂಗ್ (24) ಎಂದು ಗುರುತಿಸಲಾಗಿದೆ.

ಅನಾಸ್ ಅವರ ಸಹೋದರ ಮೊಹಮ್ಮದ್ ಅಮನ್ ಆ ದಿನ ನಡೆದ ಘಟನೆಯನ್ನು ವಿವರಿಸಿದ್ದಾರೆ.  ಹಿಂಸಾಚಾರಕ್ಕೆ ಮೊದಲು ನಾನು ಮತ್ತು ತಂದೆ ಝಾಹಿದ್ ಹುಸೇನ್ ಪಕ್ಕದಲ್ಲೇ ಕೆಲಸ ಮಾಡುತ್ತಿದ್ದೆವು. ಬಳಿಕ ನಾನು ಮನೆಗೆ ಮರಳಿದೆ. ಆದರೆ ತಂದೆ ಅಲ್ಲಿಯೇ ಕೆಲಸ ಮಾಡುತ್ತಿದ್ದರು. ಹಿಂಸಾಚಾರದ ಸುದ್ದಿ ಗೊತ್ತಾದಾಗ ಹೊರಗಿದ್ದ ಅನಸ್‌ಗೆ ಕರೆಮಾಡಿ ಮನೆಗೆ ಮರಳುವಂತೆ ಸೂಚಿಸಿದ್ದೆ. ನನ್ನ ಸ್ನೇಹಿತೆಯೋರ್ವಳು ಮಾರುಕಟ್ಟೆಯಲ್ಲಿರುವ ಮಾಹಿತಿ ತಿಳಿದು ಆಕೆಯನ್ನು ಹುಡುಕಲು ಹೋಗಿದ್ದೆ. ಬಳಿಕ ನನ್ನ ತಂದೆ ಮನೆಗೆ ಮರಳಿದ್ದರು. ಆದರೆ ಅನಾಸ್ ಇನ್ನೂ ಬಂದಿಲ್ಲ ಎಂದು ತಂದೆ ಆತನನ್ನು ಹುಡಕಲು ಹೋಗಿದ್ದಾರೆ. ನನ್ನ ತಂದೆ ಡೇರಿಯೊಂದರ ಬಳಿ ನಿಂತಿದ್ದಾಗ ಅವರ ಎದೆಗೆ ಗುಂಡು ಬಡಿದಿತ್ತು. ನೆರೆಯಾತ ನೀಡಿದ ಮಾಹಿತಿಯಂತೆ ನಾನು ಅಲ್ಲಿಗೆ ತೆರಳಿದಾಗ ತಂದೆ ಗಾಯಗೊಂಡು ರಸ್ತೆಯಲ್ಲಿ ಬಿದ್ದಿದ್ದರು. ಇತರ ಇಬ್ಬರ ನೆರವಿನಿಂದ ಅವರನ್ನು ಸ್ಥಳೀಯ ಕ್ಲಿನಿಕ್ ಗೆ ಸಾಗಿಸಿದ್ದೆ. ನೋಡಿದರೆ ಅನಾಸ್ ಸೊಂಟದ ಕೆಳಗೆ ಗುಂಡೇಟಿನಿಂದ ಗಾಯಗೊಂಡು ಅದಾಗಲೇ ಅಲ್ಲಿದ್ದ. ಇಬ್ಬರನ್ನೂ ಬೇರೆ ಕಡೆ ಕರೆದೊಯ್ಯುವಂತೆ ವೈದ್ಯರು ಸೂಚಿಸಿದ್ದರು. ಆದರೆ ಅದಕ್ಕೆ ಯಾವುದೇ ವ್ಯವಸ್ಥೆ ಇರಲಿಲ್ಲ, ಇದರಿಂದ ಕೆಲವೇ ಕ್ಷಣದಲ್ಲಿ ತಂದೆ ಮತ್ತು ಸಹೋದರ ಮೃತಪಟ್ಟರು ಎಂದು ಹೇಳಿಕೊಂಡಿದ್ದಾರೆ. ಇಬ್ಬರ ಸಾವಿನ ಬಳಿಕ ಶುಕ್ರವಾರ ರಾತ್ರಿ ಜಿಲ್ಲಾಡಳಿತದ ಉಪಸ್ಥಿತಿಯಲ್ಲಿ ದಫನ ಕಾರ್ಯ ಮಾಡಿದ್ದೇವೆ, ಈ ವೇಳೆ ನಮ್ಮ ಕುಟುಂಬದ ಕೇವಲ ಐವರಿಗೆ ಹಾಜರಾಗಲು ಅವಕಾಶ ನೀಡಲಾಗಿತ್ತು ಎಂದು ಅಮನ್‌ ಹೇಳಿದ್ದಾರೆ.

ಘಟನೆಯ ಬಗ್ಗೆ ಮಾತನಾಡಿದ ಮೃತ ಫಹೀಮ್ ಖುರೇಷಿಯ ಸೋದರ ಸಂಬಂಧಿ ಜಾವೇದ್,  ಫಹೀಮ್ ಖುರೇಷಿಯನ್ನು ನೆರೆಹೊರೆಯವರೇ ಗುಂಡಿಕ್ಕಿ ಕೊಂದಿದ್ದಾರೆ. ಅವರು ಮನೆಯಲ್ಲಿದ್ದಾಗ ರಾತ್ರಿ 7.30ರ ಸುಮಾರಿಗೆ ಯಾರೋ ತಮ್ಮ ವಾಹನಕ್ಕೆ ಬೆಂಕಿ ಹಚ್ಚುತ್ತಿರುವುದನ್ನು ಗಮನಿಸಿದರು. ಅದಕ್ಕೆ ಅವರು ವಿರೋಧಿಸಿದಾಗ ಅವರ ಮೆಲೆ ಗುಂಡಿನ ದಾಳಿ ನಡೆಸಲಾಗಿದೆ. ಬಳಿಕ ಫಹೀಮ್‌ನನ್ನು ಆಸ್ಪತ್ರೆಗೆ ಸಾಗಿಸಲಾಯಿತು. ಆದರೆ ಅವರು ಅಲ್ಲಿ ಮೃತಪಟ್ಟಿದ್ದಾರೆ. ಫಹೀಂ ತಾಯಿ, ಪತ್ನಿ ಹಾಗೂ ಇಬ್ಬರು ಚಿಕ್ಕ ಮಕ್ಕಳನ್ನು ಅಗಲಿದ್ದಾರೆ ಎಂದು ಹೇಳಿದ್ದಾರೆ.

ಬನ್‌ಭೂಲ್‌ಪುರ ಪ್ರದೇಶದಲ್ಲಿ ಬೀದಿ ಬದಿ ವ್ಯಾಪಾರಿಯಾಗಿ ಕೆಲಸ ಮಾಡುತ್ತಿರುವ ಗೌಹರ್, ಹಿಂಸಾಚಾರದ ಸಮಯದಲ್ಲಿ ತನ್ನ ಮಗ ಆರಿಸ್ (18) ಸಾವನ್ನಪ್ಪಿದ್ದಾನೆ ಎಂದು ಹೇಳಿಕೊಂಡಿದ್ದಾರೆ. ಆದರೆ ಕುಟುಂಬವು ಅವನನ್ನು ಬರೇಲಿಯ ಆಸ್ಪತ್ರೆಗೆ ಕರೆದೊಯ್ದಿದ್ದರಿಂದ ಜಿಲ್ಲಾಡಳಿತ ಹಿಂಸಾಚಾರದಲ್ಲಿ ಮೃತರ ಪಟ್ಟಿಯಲ್ಲಿ ಅವರನ್ನು ಸೇರಿಸಿಲ್ಲ ಎಂದು ಹೇಳಿದ್ದಾರೆ. ನನ್ನ ಮಗ ನಮ್ಮ ಮನೆಯಿಂದ ಒಂದು ಕಿಲೋಮೀಟರ್ ದೂರದಲ್ಲಿರುವ ಗಾರ್ಮೆಂಟ್ಸ್ ಅಂಗಡಿಯಲ್ಲಿ ಸೇಲ್ಸ್‌ಮ್ಯಾನ್ ಆಗಿ ಕೆಲಸ ಮಾಡುತ್ತಿದ್ದ. ಗುರುವಾರ ಹಿಂಸಾಚಾರ ಪ್ರಾರಂಭವಾದಾಗ ನಾನು ಸಂಜೆ 5.45ರ ಸುಮಾರಿಗೆ ಅವರಿಗೆ ಕರೆ ಮಾಡಿ ಹಿಂತಿರುಗುವಂತೆ ಹೇಳಿದೆ. ಆದರೆ ಅವನು ಬಂದಿರಲಿಲ್ಲ, ಮತ್ತೆ 6.30ಕ್ಕೆ ಕರೆ ಮಾಡಿದರೂ ಪ್ರತಿಕ್ರಿಯೆ ಬರಲಿಲ್ಲ. ನಾನು ಅವನನ್ನು ಹುಡುಕಲು ನಿರ್ಧರಿಸಿದೆ, ಹುಡುಕುತ್ತಿರುವಾಗ, ನನ್ನ ಮಗ ಚೌರಾಹಾದಲ್ಲಿ ಬಿದ್ದುಕೊಂಡಿದ್ದಾನೆ ಎಂದು ಯಾರೋ ಹೇಳಿದ್ದರು. ಇನ್ನಿಬ್ಬರ ಸಹಾಯದಿಂದ ನಾನು ಅವನನ್ನು ಮನೆಗೆ ಕರೆತಂದೆವು. ಹಿಂಸಾಚಾರದ ಹಿನ್ನೆಲೆ ಅವರನ್ನು ಬರೇಲಿಗೆ ಕರೆದೊಯ್ಯುತ್ತಿರುವಾಗ ಅವರು ದಾರಿ ಮಧ್ಯೆ ಸಾವನ್ನಪ್ಪಿದ್ದಾರೆ. ಅವನು ನನ್ನ ಹಿರಿಯ ಮಗ, ನನ್ನ ಇಡೀ ಜಗತ್ತು ಆತ ಆಗಿದ್ದ ಎಂದು ಗೌಹರ್ ಹೇಳಿದ್ದಾರೆ.

ಏನಿದು ಘಟನೆ?

ಉತ್ತರಖಂಡದ ಹಲ್ದ್ವಾನಿ ಪುರಸಭೆಯು, ಅತಿಕ್ರಮಣ ವಿರೋಧಿ ಅಭಿಯಾನ ಎಂದು ಪಟ್ಟಣದ ಬನ್‌ಭೂಲ್‌ಪುರ ಪ್ರದೇಶದಲ್ಲಿ ಮರಿಯಮ್ ಮಸೀದಿ ಮತ್ತು ಅಬ್ದುಲ್ ರಝಾಕ್ ಝಕರಿಯಾ ಮದರಸಾವನ್ನು   ಕೆಡವಿದೆ. ಈ ಕುರಿತ ಪ್ರಕರಣ ಇನ್ನೂ ಕೋರ್ಟ್‌ನಲ್ಲಿ ಬಾಕಿ ಇದೆ. ಆದರೆ ಮಸೀದಿಯನ್ನು ತುರ್ತಾಗಿ ಕೆಡವಲಾಗಿದೆ. ಪುರಸಭೆಯ ಈ ಕೃತ್ಯವು ಸ್ಥಳೀಯರು ಮತ್ತು ಪೊಲೀಸ್ ಅಧಿಕಾರಿಗಳ ನಡುವೆ ಘರ್ಷಣೆಗೆ ಕಾರಣವಾಗಿ ಐವರ ಸಾವಿಗೆ ಕಾರಣವಾಗಿದ್ದು 100 ಪೊಲೀಸ್‌ ಸಿಬ್ಬಂದಿಗಳಿಗೆ ಗಾಯವಾಗಿದೆ.

ಘರ್ಷಣೆಯ ನಂತರ ಕರ್ಫ್ಯೂ ಮತ್ತು ‘ಕಂಡಲ್ಲಿ ಗುಂಡು ಆದೇಶಗಳನ್ನು’ ನೀಡಲಾಗಿತ್ತು. ಮಸೀದಿಯ ಧ್ವಂಸದ ಬಳಿಕ ಕೋಮು ಉದ್ವಿಗ್ನತೆ ಮತ್ತು ಹಿಂಸಾಚಾರದ ಹಿನ್ನೆಲೆ ಅರೆಸೇನಾ ಪಡೆಯ ನಾಲ್ಕು ತುಕಡಿಗಳನ್ನು ನಿಯೋಜಿಸಲಾಗಿತ್ತು. ಹಲ್ದ್ವಾನಿಯಲ್ಲಿ ಜಿಲ್ಲಾಡಳಿತ ಕರ್ಫ್ಯೂ ವಿಧಿಸಿ, ಇಂಟರ್ನೆಟ್ ಸೇವೆ ಸ್ಥಗಿತಗೊಳಿಸಿತ್ತು. ಬಂಭೂಲ್ಪುರದಲ್ಲಿ ಹಿಂಸಾಚಾರದ ನಡೆದಿದ್ದರೂ, ಉತ್ತರಾಖಂಡ ಸರ್ಕಾರ ಇಡೀ ರಾಜ್ಯದಲ್ಲಿ ಹೈ ಅಲರ್ಟ್ ಘೋಷಿಸಿತ್ತು.

ಇದನ್ನು ಓದಿ: ಉತ್ತರಖಂಡ: ಕೋರ್ಟ್‌ ಆದೇಶವಿಲ್ಲದೆಯೇ ಮದರಸಾ ಧ್ವಂಸ: ದಾಖಲೆಯಲ್ಲಿ ಬಯಲು

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...