Homeಮುಖಪುಟರೈತರ ‘ದಿಲ್ಲಿ ಚಲೋ': 2 ಕ್ರೀಡಾಂಗಣಗಳನ್ನು ಜೈಲನ್ನಾಗಿ ಸಿದ್ಧಪಡಿಸಿದ ಬಿಜೆಪಿ ಸರಕಾರ!

ರೈತರ ‘ದಿಲ್ಲಿ ಚಲೋ’: 2 ಕ್ರೀಡಾಂಗಣಗಳನ್ನು ಜೈಲನ್ನಾಗಿ ಸಿದ್ಧಪಡಿಸಿದ ಬಿಜೆಪಿ ಸರಕಾರ!

- Advertisement -
- Advertisement -

ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ (MSP) ಸೇರಿ ಹಲವು ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಫೆಬ್ರವರಿ 13ರಂದು ರೈತರು ‘ದಿಲ್ಲಿ ಚಲೋ’ ಹಮ್ಮಿಕೊಂಡಿದ್ದಾರೆ. ಸಂಯುಕ್ತ ಕಿಸಾನ್ ಮೋರ್ಚಾ ಮತ್ತು ಕಿಸಾನ್ ಮಜ್ದೂರ್ ಮೋರ್ಚಾ ಸೇರಿದಂತೆ 200ಕ್ಕೂ ಹೆಚ್ಚು ರೈತ ಸಂಘಗಳು ಪ್ರತಿಭಟನೆಯಲ್ಲಿ ಭಾಗವಹಿಸಲಿದೆ. ಮಂಗಳವಾರ ದೆಹಲಿಗೆ ಸಾವಿರಾರು ರೈತರು ನಡೆಸಲಿರುವ ಮೆರವಣಿಗೆಗೆ ಮುನ್ನ ಹರಿಯಾಣ ಸರಕಾರ ಎರಡು ದೊಡ್ಡ ಕ್ರೀಡಾಂಗಣಗಳನ್ನು ತಾತ್ಕಾಲಿಕ ಜೈಲುಗಳನ್ನಾಗಿ ಪರಿವರ್ತಿಸಿದೆ.

ಸಿರ್ಸಾದ ಚೌಧರಿ ದಲ್ಬೀರ್ ಸಿಂಗ್ ಒಳಾಂಗಣ ಕ್ರೀಡಾಂಗಣ ಮತ್ತು ದಬ್ವಾಲಿಯ ಗುರು ಗೋಬಿಂದ್ ಸಿಂಗ್ ಕ್ರೀಡಾಂಗಣಗಳನ್ನು ತಾತ್ಕಾಲಿಕ ಬಂಧನ ಕೇಂದ್ರಗಳನ್ನಾಗಿ ಮಾಡಿದ ಹರ್ಯಾಣದ ಬಿಜೆಪಿ ಸರಕಾರ ರೈತರು ಮೆರವಣಿಗೆಯನ್ನು ಮುಂದುವರೆಸಿದರೆ ಬಂಧಿಸಲು ಮುಂದಾಗಿದೆ. ಯಾವುದೇ ಅಹಿತಕರ ಪರಿಸ್ಥಿತಿಯ ಸಂದರ್ಭದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಬಂಧಿತ ರೈತರನ್ನು ತಾತ್ಕಾಲಿಕ ಜೈಲುಗಳಲ್ಲಿ ಇರಿಸಲಾಗುವುದು ಎಂದು ಮೂಲಗಳು ತಿಳಿಸಿವೆ.

ಉತ್ತರಪ್ರದೇಶ, ಹರಿಯಾಣ ಮತ್ತು ಪಂಜಾಬ್ ರಾಜ್ಯಗಳ ವಿವಿಧ ಭಾಗಗಳ ರೈತರು ಕೇಂದ್ರ ಸರ್ಕಾರದ ವಿರುದ್ದ ‘ದಿಲ್ಲಿ ಚಲೋ’ ಹಮ್ಮಿಕೊಂಡಿದ್ದು, ರೈತರು ರಾಜಧಾನಿ ಪ್ರವೇಶಿಸುವುದನ್ನು ತಡೆಯಲು ಪೊಲೀಸರು ರಸ್ತೆಗಳನ್ನೇ ಮುಚ್ಚಿದ್ದಾರೆ. ಅಧಿಕಾರಿಗಳು ಅನೇಕ ಸ್ಥಳಗಳಲ್ಲಿ ಕಾಂಕ್ರೀಟ್ ಬ್ಲಾಕ್‌ಗಳಿಂದ ಗಡಿಗಳನ್ನು ಮುಚ್ಚಿದ್ದಾರೆ, ಅಂತರಾಜ್ಯ ಗಡಿಯಲ್ಲಿ, ಮುಳ್ಳುತಂತಿಗಳನ್ನು ಹಾಕಲಾಗಿದೆ ಮತ್ತು ಸಾವಿರಾರು ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಹರ್ಯಾಣ ಪೊಲೀಸರು ಅಂಬಾಲಾದ ಘಗ್ಗರ್ ನದಿಯ ಹೆದ್ದಾರಿಯ ಎರಡೂ ಬದಿಗಳನ್ನು ಮುಚ್ಚಲು ಕಾಂಕ್ರೀಟ್ ಬ್ಲಾಕ್‌ಗಳು ಮತ್ತು ಲೋಹದ ಶೀಟ್‌ಗಳನ್ನು ಅಳವಡಿಸಿದ್ದಾರೆ. ರೈತರು ಟ್ರ್ಯಾಕ್ಟರ್‌ಗಳ ಮೂಲಕ ಹೆದ್ದಾರಿಗೆ ಬರುವುದನ್ನು ತಡೆಯಲು ಘಗ್ಗರ್ ನದಿಯ ಬದಿಯನ್ನು ಅಗೆದು ಹೊಂಡ ನಿರ್ಮಿಸಲಾಗಿದೆ.

ಮೂರು ಕೃಷಿ ಕಾನೂನುಗಳ ವಿರುದ್ಧದ 2020ರ ಪ್ರತಿಭಟನೆಯನ್ನು ಉಲ್ಲೇಖಿಸಿ ಹರ್ಯಾಣ ಮತ್ತು ದೆಹಲಿಯ ಅಧಿಕಾರಿಗಳು ನಿರ್ಬಂಧಗಳನ್ನು ಸಮರ್ಥಿಸಿಕೊಂಡಿದ್ದಾರೆ. ರೈತರು ರಾಷ್ಟ್ರ ರಾಜಧಾನಿಗೆ ಪ್ರವೇಶಿಸುವುದನ್ನು ತಡೆಯಲು ಗಡಿಗಳನ್ನು ನಿರ್ಬಂಧಿಸುವ ಕ್ರಮವು ವಿರೋಧ ಪಕ್ಷಗಳು ಮತ್ತು ರೈತ ಗುಂಪುಗಳಿಂದ ಟೀಕೆಗೆ ಗುರಿಯಾಗಿತ್ತು.

ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು, ರಾಜ್ಯದ ಗಡಿಗಳಲ್ಲಿ ರಸ್ತೆಗೆ  ತಡೆಗೋಡೆಗಳನ್ನು ಹಾಕಿರುವ ವೀಡಿಯೊವನ್ನು ಹಂಚಿಕೊಂಡಿದ್ದಾರೆ. “ರೈತರ ಹಾದಿಯಲ್ಲಿ ಮೊಳೆ-ಮುಳ್ಳುಗಳನ್ನು ಹಾಕುವುದು ‘ಅಮೃತಕಾಲ’ ಅಥವಾ ‘ಅನ್ಯಾಯಕಾಲವೇ? ಎಂದು ಪ್ರಶ್ನಿಸಿದ್ದಾರೆ.

ಪಂಜಾಬ್ ಮುಖ್ಯಮಂತ್ರಿ ಮತ್ತು ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಭಗವಂತ್ ಮಾನ್ ದೆಹಲಿ ಮತ್ತು ಹರ್ಯಾಣವನ್ನು ಪ್ರವೇಶಿಸುವ ರಸ್ತೆಗಳನ್ನು ಭಾರತ-ಪಾಕಿಸ್ತಾನ ನಿಯಂತ್ರಣ ರೇಖೆಗೆ (ಎಲ್‌ಒಸಿ) ಹೋಲಿಸಿದ್ದಾರೆ. ರೈತರೊಂದಿಗೆ ಮಾತುಕತೆ ನಡೆಸಿ ಅವರ ನಿಜವಾದ ಬೇಡಿಕೆಗಳನ್ನು ಒಪ್ಪಿಕೊಳ್ಳುವಂತೆ ನಾನು ಕೇಂದ್ರವನ್ನು ಒತ್ತಾಯಿಸುತ್ತೇನೆ, ಪಾಕಿಸ್ತಾನದ ಗಡಿಯಲ್ಲಿರುವಂತೆ ದೆಹಲಿಗೆ ಹೋಗುವ ರಸ್ತೆಗಳಲ್ಲಿ ಅನೇಕ ತಂತಿಗಳನ್ನು ಹಾಕಲಾಗಿದೆ ಎಂದು ಭಗವಂತ್ ಮಾನ್ ಹೇಳಿದ್ದಾರೆ.

ಸಂಯುಕ್ತ ಕಿಸಾನ್ ಮೋರ್ಚಾದ (SKM) ನಾಯಕ ಜಗಜಿತ್ ಸಿಂಗ್ ದಲ್ಲೆವಾಲ್, ರಸ್ತೆಗಳ ತಡೆ ನಡೆಸಿರುವುದನ್ನು ಖಂಡಿಸಿದ್ದಾರೆ. ಸರ್ಕಾರವೇಕೆ ಹೆದರುತ್ತಿದೆ? ಬೃಹತ್ ಬ್ಯಾರಿಕೇಡ್‌ಗಳನ್ನು ಹಾಕಲಾಗಿದೆ, ಇದು ಪ್ರಜಾಪ್ರಭುತ್ವವೇ? ಒಂದು ವೇಳೆ ಪರಿಸ್ಥಿತಿ ವಿಕೋಪಕ್ಕೆ ತಿರುಗಿದರೆ ಅದಕ್ಕೆ ಖಟ್ಟರ್ ಸರ್ಕಾರವೇ ಹೊಣೆ ಎಂದು ಅವರು ವಿಡಿಯೋ ಸಂದೇಶದಲ್ಲಿ ತಿಳಿಸಿದ್ದಾರೆ.

ಹರ್ಯಾಣವು ಅಂಬಾಲಾ ಬಳಿಯ ಶಂಭು ಎಂಬಲ್ಲಿ ಪಂಜಾಬ್‌ನ ಗಡಿಯನ್ನು ಮುಚ್ಚಿದೆ. ಮೆರವಣಿಗೆಯನ್ನು ತಡೆಯಲು ಜಿಂದ್ ಮತ್ತು ಫತೇಹಾಬಾದ್ ಜಿಲ್ಲೆಗಳ ಗಡಿಯಲ್ಲಿ ದೊಡ್ಡ ವ್ಯವಸ್ಥೆ ಮಾಡಲಾಗಿದೆ. ಅಂಬಾಲಾ, ಕುರುಕ್ಷೇತ್ರ, ಕೈತಾಲ್, ಜಿಂದ್, ಹಿಸಾರ್, ಫತೇಹಾಬಾದ್ ಮತ್ತು ಸಿರ್ಸಾ ಜಿಲ್ಲೆಗಳಲ್ಲಿ ಫೆಬ್ರವರಿ 13ರ ಮಧ್ಯಾಹ್ನದವರೆಗೆ ಮೊಬೈಲ್ ಇಂಟರ್ನೆಟ್ ಸೇವೆಗಳನ್ನು, ಮೆಸೇಜ್‌ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ.

2020ರಲ್ಲಿ ಕೇಂದ್ರದ 3 ಕೃಷಿ ಕಾನೂನುಗಳ ವಿರುದ್ಧದ ಪ್ರತಿಭಟನೆಯ ವೇಳೆ ಪಂಜಾಬ್ ಮತ್ತು ಅಂಬಾಲಾದ ಹತ್ತಿರದ ಪ್ರದೇಶಗಳಿಂದ ಹೆಚ್ಚಿನ ಸಂಖ್ಯೆಯ ರೈತರು ಶಂಭು ಗಡಿಯಲ್ಲಿ ಜಮಾಯಿಸಿದ್ದರು ಮತ್ತು ಪೊಲೀಸ್‌ ಬ್ಯಾರಿಕೇಡ್‌ಗಳನ್ನು ಮುರಿದು ದೆಹಲಿಯತ್ತ ಮೆರವಣಿಗೆ ಸಾಗಿದ್ದರು. ಮುಖ್ಯವಾಗಿ ಪಂಜಾಬ್, ಹರಿಯಾಣ ಮತ್ತು ಉತ್ತರಪ್ರದೇಶದ ರೈತರು, ದೆಹಲಿಯ ಗಡಿ ಭಾಗವಾದ ಸಿಂಘು, ಟಿಕ್ರಿ ಮತ್ತು ಘಾಜಿಪುರದಲ್ಲಿ ಧರಣಿ ನಡೆಸಿದ್ದರು. ಬಳಿಕ ರೈತರ ಹೋರಾಟಕ್ಕೆ ಮಣಿದ ಸರಕಾರ ಮೂರು ಕೃಷಿ ಕಾಯ್ದೆಯನ್ನು ವಾಪಾಸ್ಸು ಪಡೆದುಕೊಂಡಿತ್ತು.

ಇದನ್ನು ಓದಿ: ಹಲ್ದ್ವಾನಿ ಹಿಂಸಾಚಾರ: ಮಾಹಿತಿ ಬಿಚ್ಚಿಟ್ಟ ಮೃತರ ಸಂಬಂಧಿಕರು..

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...