Homeಮುಖಪುಟರೈತರ ‘ದಿಲ್ಲಿ ಚಲೋ': 2 ಕ್ರೀಡಾಂಗಣಗಳನ್ನು ಜೈಲನ್ನಾಗಿ ಸಿದ್ಧಪಡಿಸಿದ ಬಿಜೆಪಿ ಸರಕಾರ!

ರೈತರ ‘ದಿಲ್ಲಿ ಚಲೋ’: 2 ಕ್ರೀಡಾಂಗಣಗಳನ್ನು ಜೈಲನ್ನಾಗಿ ಸಿದ್ಧಪಡಿಸಿದ ಬಿಜೆಪಿ ಸರಕಾರ!

- Advertisement -
- Advertisement -

ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ (MSP) ಸೇರಿ ಹಲವು ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಫೆಬ್ರವರಿ 13ರಂದು ರೈತರು ‘ದಿಲ್ಲಿ ಚಲೋ’ ಹಮ್ಮಿಕೊಂಡಿದ್ದಾರೆ. ಸಂಯುಕ್ತ ಕಿಸಾನ್ ಮೋರ್ಚಾ ಮತ್ತು ಕಿಸಾನ್ ಮಜ್ದೂರ್ ಮೋರ್ಚಾ ಸೇರಿದಂತೆ 200ಕ್ಕೂ ಹೆಚ್ಚು ರೈತ ಸಂಘಗಳು ಪ್ರತಿಭಟನೆಯಲ್ಲಿ ಭಾಗವಹಿಸಲಿದೆ. ಮಂಗಳವಾರ ದೆಹಲಿಗೆ ಸಾವಿರಾರು ರೈತರು ನಡೆಸಲಿರುವ ಮೆರವಣಿಗೆಗೆ ಮುನ್ನ ಹರಿಯಾಣ ಸರಕಾರ ಎರಡು ದೊಡ್ಡ ಕ್ರೀಡಾಂಗಣಗಳನ್ನು ತಾತ್ಕಾಲಿಕ ಜೈಲುಗಳನ್ನಾಗಿ ಪರಿವರ್ತಿಸಿದೆ.

ಸಿರ್ಸಾದ ಚೌಧರಿ ದಲ್ಬೀರ್ ಸಿಂಗ್ ಒಳಾಂಗಣ ಕ್ರೀಡಾಂಗಣ ಮತ್ತು ದಬ್ವಾಲಿಯ ಗುರು ಗೋಬಿಂದ್ ಸಿಂಗ್ ಕ್ರೀಡಾಂಗಣಗಳನ್ನು ತಾತ್ಕಾಲಿಕ ಬಂಧನ ಕೇಂದ್ರಗಳನ್ನಾಗಿ ಮಾಡಿದ ಹರ್ಯಾಣದ ಬಿಜೆಪಿ ಸರಕಾರ ರೈತರು ಮೆರವಣಿಗೆಯನ್ನು ಮುಂದುವರೆಸಿದರೆ ಬಂಧಿಸಲು ಮುಂದಾಗಿದೆ. ಯಾವುದೇ ಅಹಿತಕರ ಪರಿಸ್ಥಿತಿಯ ಸಂದರ್ಭದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಬಂಧಿತ ರೈತರನ್ನು ತಾತ್ಕಾಲಿಕ ಜೈಲುಗಳಲ್ಲಿ ಇರಿಸಲಾಗುವುದು ಎಂದು ಮೂಲಗಳು ತಿಳಿಸಿವೆ.

ಉತ್ತರಪ್ರದೇಶ, ಹರಿಯಾಣ ಮತ್ತು ಪಂಜಾಬ್ ರಾಜ್ಯಗಳ ವಿವಿಧ ಭಾಗಗಳ ರೈತರು ಕೇಂದ್ರ ಸರ್ಕಾರದ ವಿರುದ್ದ ‘ದಿಲ್ಲಿ ಚಲೋ’ ಹಮ್ಮಿಕೊಂಡಿದ್ದು, ರೈತರು ರಾಜಧಾನಿ ಪ್ರವೇಶಿಸುವುದನ್ನು ತಡೆಯಲು ಪೊಲೀಸರು ರಸ್ತೆಗಳನ್ನೇ ಮುಚ್ಚಿದ್ದಾರೆ. ಅಧಿಕಾರಿಗಳು ಅನೇಕ ಸ್ಥಳಗಳಲ್ಲಿ ಕಾಂಕ್ರೀಟ್ ಬ್ಲಾಕ್‌ಗಳಿಂದ ಗಡಿಗಳನ್ನು ಮುಚ್ಚಿದ್ದಾರೆ, ಅಂತರಾಜ್ಯ ಗಡಿಯಲ್ಲಿ, ಮುಳ್ಳುತಂತಿಗಳನ್ನು ಹಾಕಲಾಗಿದೆ ಮತ್ತು ಸಾವಿರಾರು ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಹರ್ಯಾಣ ಪೊಲೀಸರು ಅಂಬಾಲಾದ ಘಗ್ಗರ್ ನದಿಯ ಹೆದ್ದಾರಿಯ ಎರಡೂ ಬದಿಗಳನ್ನು ಮುಚ್ಚಲು ಕಾಂಕ್ರೀಟ್ ಬ್ಲಾಕ್‌ಗಳು ಮತ್ತು ಲೋಹದ ಶೀಟ್‌ಗಳನ್ನು ಅಳವಡಿಸಿದ್ದಾರೆ. ರೈತರು ಟ್ರ್ಯಾಕ್ಟರ್‌ಗಳ ಮೂಲಕ ಹೆದ್ದಾರಿಗೆ ಬರುವುದನ್ನು ತಡೆಯಲು ಘಗ್ಗರ್ ನದಿಯ ಬದಿಯನ್ನು ಅಗೆದು ಹೊಂಡ ನಿರ್ಮಿಸಲಾಗಿದೆ.

ಮೂರು ಕೃಷಿ ಕಾನೂನುಗಳ ವಿರುದ್ಧದ 2020ರ ಪ್ರತಿಭಟನೆಯನ್ನು ಉಲ್ಲೇಖಿಸಿ ಹರ್ಯಾಣ ಮತ್ತು ದೆಹಲಿಯ ಅಧಿಕಾರಿಗಳು ನಿರ್ಬಂಧಗಳನ್ನು ಸಮರ್ಥಿಸಿಕೊಂಡಿದ್ದಾರೆ. ರೈತರು ರಾಷ್ಟ್ರ ರಾಜಧಾನಿಗೆ ಪ್ರವೇಶಿಸುವುದನ್ನು ತಡೆಯಲು ಗಡಿಗಳನ್ನು ನಿರ್ಬಂಧಿಸುವ ಕ್ರಮವು ವಿರೋಧ ಪಕ್ಷಗಳು ಮತ್ತು ರೈತ ಗುಂಪುಗಳಿಂದ ಟೀಕೆಗೆ ಗುರಿಯಾಗಿತ್ತು.

ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು, ರಾಜ್ಯದ ಗಡಿಗಳಲ್ಲಿ ರಸ್ತೆಗೆ  ತಡೆಗೋಡೆಗಳನ್ನು ಹಾಕಿರುವ ವೀಡಿಯೊವನ್ನು ಹಂಚಿಕೊಂಡಿದ್ದಾರೆ. “ರೈತರ ಹಾದಿಯಲ್ಲಿ ಮೊಳೆ-ಮುಳ್ಳುಗಳನ್ನು ಹಾಕುವುದು ‘ಅಮೃತಕಾಲ’ ಅಥವಾ ‘ಅನ್ಯಾಯಕಾಲವೇ? ಎಂದು ಪ್ರಶ್ನಿಸಿದ್ದಾರೆ.

ಪಂಜಾಬ್ ಮುಖ್ಯಮಂತ್ರಿ ಮತ್ತು ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಭಗವಂತ್ ಮಾನ್ ದೆಹಲಿ ಮತ್ತು ಹರ್ಯಾಣವನ್ನು ಪ್ರವೇಶಿಸುವ ರಸ್ತೆಗಳನ್ನು ಭಾರತ-ಪಾಕಿಸ್ತಾನ ನಿಯಂತ್ರಣ ರೇಖೆಗೆ (ಎಲ್‌ಒಸಿ) ಹೋಲಿಸಿದ್ದಾರೆ. ರೈತರೊಂದಿಗೆ ಮಾತುಕತೆ ನಡೆಸಿ ಅವರ ನಿಜವಾದ ಬೇಡಿಕೆಗಳನ್ನು ಒಪ್ಪಿಕೊಳ್ಳುವಂತೆ ನಾನು ಕೇಂದ್ರವನ್ನು ಒತ್ತಾಯಿಸುತ್ತೇನೆ, ಪಾಕಿಸ್ತಾನದ ಗಡಿಯಲ್ಲಿರುವಂತೆ ದೆಹಲಿಗೆ ಹೋಗುವ ರಸ್ತೆಗಳಲ್ಲಿ ಅನೇಕ ತಂತಿಗಳನ್ನು ಹಾಕಲಾಗಿದೆ ಎಂದು ಭಗವಂತ್ ಮಾನ್ ಹೇಳಿದ್ದಾರೆ.

ಸಂಯುಕ್ತ ಕಿಸಾನ್ ಮೋರ್ಚಾದ (SKM) ನಾಯಕ ಜಗಜಿತ್ ಸಿಂಗ್ ದಲ್ಲೆವಾಲ್, ರಸ್ತೆಗಳ ತಡೆ ನಡೆಸಿರುವುದನ್ನು ಖಂಡಿಸಿದ್ದಾರೆ. ಸರ್ಕಾರವೇಕೆ ಹೆದರುತ್ತಿದೆ? ಬೃಹತ್ ಬ್ಯಾರಿಕೇಡ್‌ಗಳನ್ನು ಹಾಕಲಾಗಿದೆ, ಇದು ಪ್ರಜಾಪ್ರಭುತ್ವವೇ? ಒಂದು ವೇಳೆ ಪರಿಸ್ಥಿತಿ ವಿಕೋಪಕ್ಕೆ ತಿರುಗಿದರೆ ಅದಕ್ಕೆ ಖಟ್ಟರ್ ಸರ್ಕಾರವೇ ಹೊಣೆ ಎಂದು ಅವರು ವಿಡಿಯೋ ಸಂದೇಶದಲ್ಲಿ ತಿಳಿಸಿದ್ದಾರೆ.

ಹರ್ಯಾಣವು ಅಂಬಾಲಾ ಬಳಿಯ ಶಂಭು ಎಂಬಲ್ಲಿ ಪಂಜಾಬ್‌ನ ಗಡಿಯನ್ನು ಮುಚ್ಚಿದೆ. ಮೆರವಣಿಗೆಯನ್ನು ತಡೆಯಲು ಜಿಂದ್ ಮತ್ತು ಫತೇಹಾಬಾದ್ ಜಿಲ್ಲೆಗಳ ಗಡಿಯಲ್ಲಿ ದೊಡ್ಡ ವ್ಯವಸ್ಥೆ ಮಾಡಲಾಗಿದೆ. ಅಂಬಾಲಾ, ಕುರುಕ್ಷೇತ್ರ, ಕೈತಾಲ್, ಜಿಂದ್, ಹಿಸಾರ್, ಫತೇಹಾಬಾದ್ ಮತ್ತು ಸಿರ್ಸಾ ಜಿಲ್ಲೆಗಳಲ್ಲಿ ಫೆಬ್ರವರಿ 13ರ ಮಧ್ಯಾಹ್ನದವರೆಗೆ ಮೊಬೈಲ್ ಇಂಟರ್ನೆಟ್ ಸೇವೆಗಳನ್ನು, ಮೆಸೇಜ್‌ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ.

2020ರಲ್ಲಿ ಕೇಂದ್ರದ 3 ಕೃಷಿ ಕಾನೂನುಗಳ ವಿರುದ್ಧದ ಪ್ರತಿಭಟನೆಯ ವೇಳೆ ಪಂಜಾಬ್ ಮತ್ತು ಅಂಬಾಲಾದ ಹತ್ತಿರದ ಪ್ರದೇಶಗಳಿಂದ ಹೆಚ್ಚಿನ ಸಂಖ್ಯೆಯ ರೈತರು ಶಂಭು ಗಡಿಯಲ್ಲಿ ಜಮಾಯಿಸಿದ್ದರು ಮತ್ತು ಪೊಲೀಸ್‌ ಬ್ಯಾರಿಕೇಡ್‌ಗಳನ್ನು ಮುರಿದು ದೆಹಲಿಯತ್ತ ಮೆರವಣಿಗೆ ಸಾಗಿದ್ದರು. ಮುಖ್ಯವಾಗಿ ಪಂಜಾಬ್, ಹರಿಯಾಣ ಮತ್ತು ಉತ್ತರಪ್ರದೇಶದ ರೈತರು, ದೆಹಲಿಯ ಗಡಿ ಭಾಗವಾದ ಸಿಂಘು, ಟಿಕ್ರಿ ಮತ್ತು ಘಾಜಿಪುರದಲ್ಲಿ ಧರಣಿ ನಡೆಸಿದ್ದರು. ಬಳಿಕ ರೈತರ ಹೋರಾಟಕ್ಕೆ ಮಣಿದ ಸರಕಾರ ಮೂರು ಕೃಷಿ ಕಾಯ್ದೆಯನ್ನು ವಾಪಾಸ್ಸು ಪಡೆದುಕೊಂಡಿತ್ತು.

ಇದನ್ನು ಓದಿ: ಹಲ್ದ್ವಾನಿ ಹಿಂಸಾಚಾರ: ಮಾಹಿತಿ ಬಿಚ್ಚಿಟ್ಟ ಮೃತರ ಸಂಬಂಧಿಕರು..

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...