Homeಮುಖಪುಟಹಲ್ದ್ವಾನಿ ಹಿಂಸಾಚಾರದ ಬಳಿಕ ಪೊಲೀಸ್‌ ದೌರ್ಜನ್ಯ: ಸ್ಥಳೀಯರ ಆರೋಪ

ಹಲ್ದ್ವಾನಿ ಹಿಂಸಾಚಾರದ ಬಳಿಕ ಪೊಲೀಸ್‌ ದೌರ್ಜನ್ಯ: ಸ್ಥಳೀಯರ ಆರೋಪ

- Advertisement -
- Advertisement -

ಬಿಜೆಪಿ ಆಡಳಿತದ ಉತ್ತರಾಖಂಡದ ಹಲ್ದ್ವಾನಿಯಲ್ಲಿ ಮಸೀದಿ ಮತ್ತು ಮದರಸಾವನ್ನು ಕೆಡವಿದ ಎರಡು ದಿನಗಳ ನಂತರ ಆ ಪ್ರದೇಶದ ಮುಸ್ಲಿಂ ನಿವಾಸಿಗಳು ಪೊಲೀಸ್ ದೌರ್ಜನ್ಯವು ತಮ್ಮನ್ನು ಭಯಭೀತಗೊಳಿಸಿದೆ ಎಂದು ಹೇಳುತ್ತಿದ್ದು, ಕೆಲವರು ಭಯದಿಂದ ಆ ಪ್ರದೇಶವನ್ನು ತೊರೆದಿದ್ದಾರೆ.

ಫೆಬ್ರವರಿ 8ರಂದು ಮಸೀದಿ ಮತ್ತು ಮದರಸಾವನ್ನು ಧ್ವಂಸಗೊಳಿಸಿದ ನಂತರ ಸ್ಥಳೀಯ ಜನರು ಮತ್ತು ಪೊಲೀಸರ ನಡುವೆ ಘರ್ಷಣೆ ನಡೆದಿತ್ತು. ಈ ವೇಳೆ ಪೊಲೀಸ್ ಅಧಿಕಾರಿಗಳು ತಮ್ಮ ಮನೆಗಳಿಗೆ ನುಗ್ಗಿದರು, ಮಹಿಳೆಯರು ಸೇರಿದಂತೆ ಕುಟುಂಬದ ಸದಸ್ಯರ ಮೇಲೆ ಹಲ್ಲೆ ನಡೆಸಿದ್ದಾರೆ, ಮನೆಯಲ್ಲಿದ್ದ ವಸ್ತುಗಳನ್ನು ಧ್ವಂಸಗೊಳಿಸಿದ್ದಾರೆ ಮತ್ತು ಮನೆಯಲ್ಲಿದ್ದ ಪುರುಷರನ್ನು ಬಂಧಿಸಿದ್ದಾರೆ ಎಂದು ಬಂಬೂಲ್ಪುರದ ನಿವಾಸಿಗಳು ಆರೋಪಿಸಿದ್ದಾರೆ.

ಸ್ಥಳೀಯ ಶಾಲೆಯೊಂದರಲ್ಲಿ ಅಡುಗೆ ಕೆಲಸ ಮಾಡುವ 38 ವರ್ಷದ ಶಮಾ ಈ ಬಗ್ಗೆ ಪ್ರತಿಕ್ರಿಯಿಸಿದ್ದು, ಪೊಲೀಸ್ ಅಧಿಕಾರಿಗಳು ಶನಿವಾರ ಸಂಜೆ 4 ಗಂಟೆ ಸುಮಾರಿಗೆ ನಮ್ಮ ಮನೆಗೆ ನುಗ್ಗಿದರು. ಅವರು ನಮ್ಮ ಮನೆಯಲ್ಲಿದ್ದ ವಸ್ತುಗಳನ್ನೆಲ್ಲ ಚೆಲ್ಲಾಪಿಲ್ಲಿ ಮಾಡಿ ಪತಿಯ ಮೇಲೆ ಹಲ್ಲೆ ಮಾಡಿದ್ದಾರೆ, ನಮ್ಮನ್ನು ತಳ್ಳಿದ್ದಾರೆ. ಬಳಿಕ ಪತಿಯನ್ನು ಪೊಲೀಸರು ಕರೆದುಕೊಂಡು ಹೋಗಿದ್ದು, ಅವರು ಈಗ ಎಲ್ಲಿದ್ದಾರೆ ಎಂಬ ಬಗ್ಗೆ ನಮಗೆ ಯಾವುದೇ ಸುಳಿವು ಇಲ್ಲ ಎಂದು ಹೇಳಿದ್ದಾರೆ. ಶಮಾ ಅವರ ಪತಿ, ನಯೀಮ್(45) ಹಲ್ದ್ವಾನಿಯಲ್ಲಿ  ಮರಳನ್ನು ಸಾಗಿಸುವ ದೈನಂದಿನ ಕೂಲಿ ಕಾರ್ಮಿಕರಾಗಿದ್ದರು. ನಮಗೆ ಸಣ್ಣ ಸಣ್ಣ ಮಕ್ಕಳಿದ್ದಾರೆ, ನಮ್ಮನ್ನು ಬಿಟ್ಟುಬಿಡಿ ಎಂದು ನಾವು ಮನವಿ ಮಾಡಿದೆವು, ಈ ವೇಳೆ ಪೊಲೀಸರು ನಮಗೂ ಮಕ್ಕಳಿದ್ದಾರೆ ನಮ್ಮ ಮೇಲೆ ಏಕೆ ಕಲ್ಲು ಎಸೆದಿದ್ದೀರಿ ಎಂದು ಪ್ರಶ್ನಿಸಿದ್ದಾರೆ ಎಂದು ಹೇಳಿದ್ದಾರೆ.

ಘಟನೆ ಬಗ್ಗೆ 22 ವರ್ಷದ ಮೆಹ್ರೀನ್ ಮಾತನಾಡಿದ್ದು, ನನ್ನ ಪತಿ ಆರಿಫ್(25) ಅವರನ್ನು ಶನಿವಾರ ಸಂಜೆ 5 ಗಂಟೆಯ ಸುಮಾರಿಗೆ ನಾಲ್ಕು ಪೊಲೀಸ್ ಅಧಿಕಾರಿಗಳು ಕರೆದೊಯ್ದರು. ಏಳು ತಿಂಗಳ ಹಿಂದೆಯಷ್ಠೇ ನಮ್ಮ ವಿವಾಹವಾಗಿತ್ತು. ಅವರಿಲ್ಲದೆ ನನಗೆ ಬದುಕಲು ಸಾಧ್ಯವಿಲ್ಲ, ನಾನು ನನ್ನ ಪತಿಯನ್ನು ಭೇಟಿಯಾಗಲು ಬಯಸುತ್ತೇನೆ ಎಂದು ಹೇಳಿದ್ದಾರೆ.

ಉತ್ತರಾಖಂಡ್ ಪೊಲೀಸ್ ಮಹಾನಿರ್ದೇಶಕ ಅಭಿನವ್ ಕುಮಾರ್ ಈ ಬಗ್ಗೆ ಪ್ರತಿಕ್ರಿಯಿಸಿದ್ದು, ಸಾಕ್ಷ್ಯಾಧಾರಗಳಿಲ್ಲದೆ ಯಾರ ವಿರುದ್ಧವೂ ಕ್ರಮ ಕೈಗೊಳ್ಳುವ ಉದ್ದೇಶ ನಮಗಿಲ್ಲ. ಫೆಬ್ರವರಿ 7ರ ಘಟನೆಗಳು ಮತ್ತು ಅವುಗಳ ನಂತರದ ಬೆಳವಣಿಗೆ ಬಗ್ಗೆ ಈಗ ಸುಳ್ಳು ಹೇಳಲಾಗುತ್ತಿದೆ. ನಾವು ಕಾನೂನಿಗೆ ಅನುಸಾರವಾಗಿ ಯಾವುದೇ ಪಕ್ಷಪಾತವಿಲ್ಲದೆ ಕಾರ್ಯನಿರ್ವಹಿಸಲು ಉದ್ದೇಶಿಸಿದ್ದೇವೆ ಎಂದು ಹೇಳಿದ್ದಾರೆ.

ಫೆಬ್ರವರಿ 8ರಂದು ಪಟ್ಟಣದ ಮುನ್ಸಿಪಲ್ ಕಾರ್ಪೊರೇಶನ್ ಬಂಭೂಲ್ಪುರದಲ್ಲಿರುವ ಮಸೀದಿ ಮತ್ತು ಮದರಸಾವನ್ನು ಸರ್ಕಾರಿ ಭೂಮಿಯಲ್ಲಿ ಅಕ್ರಮವಾಗಿ ನಿರ್ಮಿಸಲಾಗಿದೆ ಎಂದು ಆರೋಪಿಸಿ ಪುರಸಭೆಯು ನೆಲಸಮಗೊಳಿಸಿತ್ತು. ಮಸೀದಿ ಕುರಿತ ಪ್ರಕರಣ ಉತ್ತರಾಖಂಡ ಹೈಕೋರ್ಟ್‌ನಲ್ಲಿ ಬಾಕಿ ಇರುವಾಗಲೇ ದಿಢೀರ್‌ ಎಂಬಂತೆ ಈ ಬೆಳವಣಿಗೆ ನಡೆದಿತ್ತು.

ಈ ವೇಳೆ ನಡೆದ ಹಿಂಸಾಚಾರದಲ್ಲಿ 6 ಮಂದಿ ನಾಗರಿಕರು ಸಾವನ್ನಪ್ಪಿದ್ದರು. ನೂರಾರು ಪೊಲೀಸ್ ಸಿಬ್ಬಂದಿ ಗಾಯಗೊಂಡಿದ್ದರು. ಪೊಲೀಸರ ಪ್ರಕಾರ, ಉದ್ರಿಕ್ತರ ಗುಂಪು ಕಲ್ಲು ತೂರಾಟ ನಡೆಸಿದೆ, ಕಾರುಗಳಿಗೆ ಬೆಂಕಿ ಹಚ್ಚಿದೆ ಮತ್ತು ಬಂಭೂಲ್ಪುರ ಪೊಲೀಸ್ ಠಾಣೆಯನ್ನು ಗುಂಪು ಸುತ್ತುವರಿದಿದೆ. ಸ್ಥಳೀಯ ಆಡಳಿತವು ಫೆಬ್ರವರಿ 8ರ ಸಂಜೆ ಕರ್ಫ್ಯೂ, ಇಂಟರ್ನೆಟ್ ಸ್ಥಗಿತಗೊಳಿಸುವಿಕೆ ಮತ್ತು ಕಂಡಲ್ಲಿ ಗುಂಡು ಆದೇಶವನ್ನು ನೀಡಿತ್ತು. ಅಂದಿನಿಂದ ಬಂಭೂಲ್‌ಪುರದ ಹಿಂದೂ ಬಹುಸಂಖ್ಯಾತ ಪ್ರದೇಶದ ಬಳಿ ಪೊಲೀಸ್ ಬ್ಯಾರಿಕೇಡ್‌ಗಳು ಹಾಕಲಾಗಿದೆ ಮತ್ತು ಪತ್ರಕರ್ತರು ಮುಸ್ಲಿಮರು ವಾಸಿಸುವ ಪ್ರದೇಶಕ್ಕೆ ಪ್ರವೇಶಿಸುವುದನ್ನು ನಿರ್ಬಂಧಿಸಲಾಗಿದೆ.

ಫೆಬ್ರವರಿ 10ರಂದು ವರದಿಗಾರರು ಆ ಪ್ರದೇಶಕ್ಕೆ ಭೇಟಿ ನೀಡಿದಾಗ, ಎಲ್ಲಾ ಅಂಗಡಿಗಳನ್ನು ಮುಚ್ಚಲಾಗಿತ್ತು ಮತ್ತು ಅನೇಕ ಮನೆಗಳ ಬಾಗಿಲುಗಳಿಗೆ ಬೀಗಗಳನ್ನು ನೇತು ಹಾಕಲಾಗಿತ್ತು. ಹತ್ತಾರು ಕಾರುಗಳು ಮತ್ತು ಬೈಕ್‌ಗಳು ಧ್ವಂಸಗೊಂಡಿದ್ದವು. ವಾಹನಗಳ ಕಿಟಕಿಗಳು ಮತ್ತು ಹೆಡ್‌ಲೈಟ್‌ಗಳನ್ನು ಪೊಲೀಸ್ ಅಧಿಕಾರಿಗಳು ಒಡೆದಿದ್ದಾರೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ.

ಪರ್ವೀನ್(30) ಈ ಬಗ್ಗೆ ಮಾತನಾಡಿದ್ದು, ತನ್ನ ಪತಿ ಮುಕೀಮ್ ದಿನಗೂಲಿ ನೌಕರನಾಗಿದ್ದು, ಫೆ.10ರಂದು ಸಂಜೆ ಪೊಲೀಸ್ ಅಧಿಕಾರಿಗಳು ಕರೆದೊಯ್ದರು. ಶಾಹಿದ್ (35) ತರಕಾರಿ ಮಾರಾಟಗಾರನಾಗಿದ್ದು, ಆತನನ್ನು ಸಹ ಪೊಲೀಸರು ಬಂಧಿಸಿದ್ದಾರೆ ಎಂದು ಅವರ ತಾಯಿ ಅನಿಸಾ ಹೇಳಿದ್ದಾರೆ. ಹಾರ್ಡ್‌ವೇರ್ ಅಂಗಡಿಯಲ್ಲಿ ಕೆಲಸ ಮಾಡುವ ತನ್ನ ಪತಿ ಆರಿಫ್‌ನನ್ನು ಬಂಧಿಸಿದ ನಾಲ್ವರು ಪೊಲೀಸ್ ಅಧಿಕಾರಿಗಳು ತನ್ನ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಮೆಹ್ರೀನ್ ಎಂಬವರು ಆರೋಪಿಸಿದರು. ಅವಳ ಒಂದು ಕೈ ಮತ್ತು ತೊಡೆಯ ಮೇಲೆ ಹಲ್ಲೆ ನಡೆಸಲಾಗಿದೆ. ಎರಡೂ ಈಗ ಊದಿಕೊಂಡಿವೆ ಎಂದು ಅವರು ಹೇಳಿದ್ದಾರೆ.

55 ವರ್ಷದ ಶಾಹೀನ್ ತನ್ನ ಮನೆಯ ಪ್ರವೇಶದ್ವಾರದಲ್ಲಿ ಅಳುತ್ತಾ, ಜೀವನೋಪಾಯಕ್ಕಾಗಿ ಮಂಚಗಳನ್ನು ತಯಾರಿಸುವ ಕೆಲಸ ಮಾಡುತ್ತಿದ್ದ ಮಗ ಶಾರುಖ್(32)ನನ್ನು ಫೆಬ್ರವರಿ 10ರಂದು ಮಧ್ಯಾಹ್ನ 3ಗಂಟೆಗೆ ಬಂಧಿಸಲಾಗಿದೆ. ಮನೆಯೊಳಗಿದ್ದ ಟಿವಿಯನ್ನು ಧ್ವಂಸಗೊಳಿಸಿ ನಮ್ಮ ಮೇಲೆ ಹಲ್ಲೆ ನಡೆಸಿ ಮಗನನ್ನು ಎಳೆದೊಯ್ದಿದ್ದಾರೆ ಎಂದು ಹೇಳಿದ್ದಾರೆ. ಪೋಲೀಸರ ದೌರ್ಜನ್ಯದಿಂದ  ಹಲ್ದ್ವಾನಿಯಿಂದ ಮುಸ್ಲಿಮರು ವಲಸೆ ಹೋಗುವಂತಾಗಿದೆ. ನೂರಾರು ಜನರು, ಕೈಯಲ್ಲಿ ಸಾಮಾನುಗಳನ್ನು ಹಿಡಿದುಕೊಂಡು ಉತ್ತರಾಖಂಡದ ಇತರ ನಗರಗಳಿಗೆ ಮತ್ತು ಉತ್ತರಪ್ರದೇಶದ ನೆರೆಯ ಪಟ್ಟಣಗಳು ಮತ್ತು ನಗರಗಳಿಗೆ ಬಸ್ಸುಗಳನ್ನು ಹತ್ತಿದ್ದಾರೆ.

ಘಟನೆ ಬಗ್ಗೆ ಸ್ಥಳೀಯ ನಿವಾಸಿ ಪರ್ವೀನ್ ಹೇಳಿಕೆ…..

ಫೆಬ್ರವರಿ 8ರಂದು ಮಧ್ಯಾಹ್ನ 3.30ರ ಸುಮಾರಿಗೆ ನಾನು (ಪರ್ವೀನ್) ತನ್ನ ಟೆರೇಸ್‌ನಲ್ಲಿ ಬಟ್ಟೆಗಳನ್ನು ನೇತು ಹಾಕುತ್ತಿದ್ದಾಗ ಬುಲ್ಡೋಜರ್‌ಗಳು ಬಂದವು, ಡಜನ್‌ಗಟ್ಟಲೆ ಪೊಲೀಸ್ ಅಧಿಕಾರಿಗಳು ಇದ್ದರು. ಇದು ಅನಿರೀಕ್ಷಿತವಾಗಿತ್ತು ಎಂದು ಅವರು ಹೇಳಿದ್ದಾರೆ. ಸ್ಥಳೀಯ ಅಧಿಕಾರಿಗಳು ಕೆಡವಿದ ಮರಿಯಮ್ ಮಸೀದಿ ಮತ್ತು ಅಬ್ದುಲ್ ರಝಾಕ್ ಜಕಾರಿಯಾ ಮದರಸಾದಿಂದ ಪರ್ವೀನ್ ಅವರ ಮನೆ ಕೇವಲ 50 ಮೀಟರ್ ದೂರದಲ್ಲಿತ್ತು.

ತೆರವು ಕಾರ್ಯಾಚರಣೆ ತಡೆಯಲು ಜನರು ತಮ್ಮ ಮನೆಗಳಿಂದ ಹೊರಬಂದರು. ಸ್ಥಳೀಯ ಕೌನ್ಸಿಲರ್ ನೇತೃತ್ವದಲ್ಲಿ ಹಿರಿಯರು ಮುಂಭಾಗದಲ್ಲಿದ್ದರು. ಕಟ್ಟಡಗಳನ್ನು ಕೆಡವದಂತೆ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಲು ಪ್ರಯತ್ನಿಸಿದರು. ಧ್ವಂಸ ಮಾಡುವುದನ್ನು ತಡೆಯಲು ಮಹಿಳೆಯರು ಮದರಸಾದ ಪಕ್ಕದ ತೆರೆದ ಪ್ರದೇಶದಲ್ಲಿ ಕುಳಿತುಕೊಂಡರು. ಈ ವೇಳೆ ಪೊಲೀಸರು ಮಹಿಳೆಯರನ್ನು ಲಾಠಿಗಳಿಂದ ಹೊಡೆಯಲು ಪ್ರಾರಂಭಿಸಿದರು. ಇದು ಹಿಂಸೆಗೆ ಪ್ರೇರೇಪಿಸಿದ್ದು, ಆ ಮೇಲೆ ಕಲ್ಲು ತೂರಲು ಪ್ರಾರಂಭವಾಯಿತು ಎಂದು ಹೇಳಿದ್ದಾರೆ.

ನೈನಿತಾಲ್‌ನ ಹಿರಿಯ ಪೊಲೀಸ್ ಅಧೀಕ್ಷಕ ಪ್ರಹ್ಲಾದ್ ನಾರಾಯಣ ಮೀನಾ ಅವರು ಈ ಬಗ್ಗೆ ಪ್ರತಿಕ್ರಿಯಿಸಿದ್ದು, ಹಿಂಸಾಚಾರಕ್ಕೆ ಸಂಬಂಧಿಸಿದಂತೆ 25 ಜನರನ್ನು ಬಂಧಿಸಲಾಗಿದೆ, ಇವರಲ್ಲಿ ಪೊಲೀಸ್ ಠಾಣೆಯ ಮೇಲೆ ದಾಳಿ, ಪೊಲೀಸ್ ಠಾಣೆಯ ಹೊರಗೆ ಕಾರುಗಳಿಗೆ ಬೆಂಕಿ ಹಚ್ಚಿದ ಪ್ರಕರಣದ ಆರೋಪಿಗಳು ಸೇರಿದ್ದಾರೆ ಎಂದು ಹೇಳಿದ್ದಾರೆ.

ಡಿಜಿಪಿ ಅಭಿನವ್ ಕುಮಾರ್ ಅವರು ಈ ಬಗ್ಗೆ ಪ್ರತಿಕ್ರಿಯಿಸಿದ್ದು, ಪೊಲೀಸರು ತಮ್ಮ ಅಧಿಕೃತ ಕರ್ತವ್ಯಗಳ ನಿರ್ವಹಣೆಯಲ್ಲಿ ತಮ್ಮ ಆತ್ಮರಕ್ಷಣೆ ಹಕ್ಕನ್ನು ಕಾನೂನುಬದ್ಧವಾಗಿ ಚಲಾಯಿಸಿದ್ದಾರೆ. ಇದಕ್ಕೆ ನಮ್ಮಲ್ಲಿ ಸಾಕಷ್ಟು ಪುರಾವೆಗಳಿವೆ. ಇದನ್ನು ಮ್ಯಾಜಿಸ್ಟ್ರೇಟ್ ವಿಚಾರಣೆ ಮತ್ತು ಕ್ರಿಮಿನಲ್ ತನಿಖೆಯಲ್ಲಿ ಪ್ರಸ್ತುತಪಡಿಸಲಾಗುತ್ತದೆ ಎಂದು ಹೇಳಿದ್ದಾರೆ.

ಇದನ್ನು ಓದಿ: ಹಲ್ದ್ವಾನಿ ಹಿಂಸಾಚಾರ: ಮಾಹಿತಿ ಬಿಚ್ಚಿಟ್ಟ ಮೃತರ ಸಂಬಂಧಿಕರು..

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಸ್ಸಾಂನ ನಾಲ್ವರು ಮುಸ್ಲಿಂ ಮಹಿಳೆಯರ ಗಡೀಪಾರು ಪ್ರಕ್ರಿಯೆಗೆ ಸುಪ್ರೀಂ ತಡೆ: ಕೇಂದ್ರ, ರಾಜ್ಯ ಸರ್ಕಾರಗಳಿಗೆ ನೋಟಿಸ್‌

ಅಸ್ಸಾಂನಲ್ಲಿ 'ವಿದೇಶಿಯರು' ಎಂದು ಘೋಷಿತರಾಗಿ ಗಡೀಪಾರು ಭೀತಿ ಎದುರಿಸುತ್ತಿದ್ದ ನಾಲ್ವರು ಮುಸ್ಲಿಂ ಮಹಿಳೆಯರ ವಿಚಾರದಲ್ಲಿ ಭಾರತದ ಸುಪ್ರೀಂ ಕೋರ್ಟ್ ಮಹತ್ವದ ಮಧ್ಯಪ್ರವೇಶ ಮಾಡಿದೆ. ಈ ಮಹಿಳೆಯರನ್ನು ದೇಶದಿಂದ ಹೊರಹಾಕುವ (ಗಡೀಪಾರು ಮಾಡುವ) ಪ್ರಕ್ರಿಯೆಗೆ...

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...