Homeಮುಖಪುಟಪ.ಬಂಗಾಳ: ಸದನದಲ್ಲಿ ಹೈಡ್ರಾಮ ಮಾಡಿದ 6 ಮಂದಿ ಬಿಜೆಪಿ ಶಾಸಕರು ಅಮಾನತು

ಪ.ಬಂಗಾಳ: ಸದನದಲ್ಲಿ ಹೈಡ್ರಾಮ ಮಾಡಿದ 6 ಮಂದಿ ಬಿಜೆಪಿ ಶಾಸಕರು ಅಮಾನತು

- Advertisement -
- Advertisement -

ಪ.ಬಂಗಾಳ ವಿಧಾನಸಭೆಯಲ್ಲಿ ಗದ್ದಲ ಸೃಷ್ಟಿಸಿ ಹೈಡ್ರಾಮ ಮಾಡಿದ ವಿರೋಧ ಪಕ್ಷದ ನಾಯಕ ಸುವೇಂದು ಅಧಿಕಾರಿ ಸೇರಿದಂತೆ ಬಿಜೆಪಿ ಶಾಸಕರನ್ನು ಸ್ಪೀಕರ್‌ ಅಮಾನತು ಮಾಡಿದ್ದಾರೆ.

ಭೂ ಕಬಳಿಕೆ ಆರೋಪದ ಮೇಲೆ ಟಿಎಂಸಿ ನಾಯಕ ಶಹಜಹಾನ್ ಶೇಖ್ ಮತ್ತು ಅವರ ಇಬ್ಬರು ಸಹಾಯಕರನ್ನು ಬಂಧಿಸುವಂತೆ ಕೋರಿ ಉತ್ತರ 24 ಪರಗಣ ಜಿಲ್ಲೆಯ ಸಂದೇಶಖಾಲಿಯಲ್ಲಿ ಬಿಜೆಪಿ ಬೆಂಬಲಿತರು ಬೀದಿಗಿಳಿದು ಪ್ರತಿಭಟನೆ ಮಾಡಿದ್ದಾರೆ. ಇದೇ ಘಟನೆ ಬಗ್ಗೆ ಪಶ್ಚಿಮ ಬಂಗಾಳ ವಿಧಾನಸಭೆಗೆ ಎಳೆದು ತಂದು ಸುವೇಂದು ಅಧಿಕಾರಿ ಸೇರಿದಂತೆ ಬಿಜೆಪಿ ಶಾಸಕರು ಸದನದಲ್ಲಿ ಗದ್ದಲ ಸೃಷ್ಟಿಸಿ ಸದನದ ಕಲಾಪಕ್ಕೆ ಅಡ್ಡಿ ಉಂಟು ಮಾಡಿದ್ದರು.

ಬಂಗಾಳ ವಿಧಾನಸಭೆಯ ಪ್ರತಿಪಕ್ಷದ ನಾಯಕ ಸುವೇಂದು ಅಧಿಕಾರಿ ಜೊತೆಗೆ ಮಿಹಿರ್ ಗೋಸ್ವಾಮಿ, ಶಂಕರ್ ಘೋಷ್, ತಾಪಸಿ ಮೊಂಡೋಲ್, ಅಗ್ನಿಮಿತ್ರ ಪಾಲ್ ಮತ್ತು ಬಂಕಿಮ್ ಘೋಷ್ ಅವರನ್ನು ಅಮಾನತು ಮಾಡಲಾಗಿದೆ.

ಸೋಮವಾರ ಬೆಳಿಗ್ಗೆ ಬಿಜೆಪಿಯ ಎಲ್ಲ ಶಾಸಕರು ಟೀ ಶರ್ಟ್‌ ಧರಿಸಿಕೊಂಡು ಅಧಿವೇಶನಕ್ಕೆ ಬಂದಿದ್ದು, ‘ನಾವು ಸಂದೇಶ ಖಾಲಿ ಜೊತೆಗಿದ್ದೇವೆ’ ಎಂದು ಅದರಲ್ಲಿ ಬರೆಯಲಾಗಿತ್ತು, ಘಟನೆಯ ಕುರಿತು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸದನದಲ್ಲಿ ಮಾತನಾಡಬೇಕು ಎಂದು ಬಿಜೆಪಿ ಶಾಸಕರು ಒತ್ತಾಯಿಸಿದ್ದರು.

ಟಿ-ಶರ್ಟ್‌ಗಳನ್ನು ನೋಡಿದ ಸ್ಪೀಕರ್ ಬಿಮನ್ ಬ್ಯಾನರ್ಜಿ, ಅದನ್ನು ತೆಗೆಯಲು ವಿರೋಧ ಪಕ್ಷದ ಶಾಸಕರಿಗೆ ನಿರ್ದೇಶನ ನೀಡುವಂತೆ ಸುವೇಂದು ಅಧಿಕಾರಿಗೆ ಮನವಿ ಮಾಡಿದ್ದಾರೆ, ಆದರೆ ಅವರು ನಿರಾಕರಿಸಿದ್ದರು. ಟೀ-ಶರ್ಟ್‌ಗಳ ಮೇಲೆ ಆಕ್ಷೇಪಾರ್ಹವಾದ ಪದಗಳನ್ನು ಬರೆಯಲಾಗಿಲ್ಲವಾದ್ದರಿಂದ ಅವುಗಳನ್ನು ಏಕೆ ತೆಗೆಯಬೇಕು ಎಂದು ಸುವೇಂದು ಅಧಿಕಾರಿ ಕೇಳಿದ್ದರು. ನಂತರ ಸ್ಪೀಕರ್‌ ಮನವಿಯನ್ನು ಧಿಕ್ಕರಿಸಿ ಸದನದ ಬಾವಿಯ ಕೆಳಗೆ ಕುಳಿತು ಘೋಷಣೆಗಳನ್ನು ಕೂಗಲು ಆರಂಭಿಸಿದರು. ಇದರಿಂದ ಸ್ಪೀಕರ್ ಆರು ಶಾಸಕರನ್ನು ಅಮಾನತು ಮಾಡಿ ಆದೇಶಿಸಿದ್ದಾರೆ.

ಏನಿದು ಘಟನೆ?

ಫೆಬ್ರವರಿ 10ರಂದು ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯ ಸಂದೇಶಖಾಲಿಯಲ್ಲಿ ಹಿಂಸಾತ್ಮಕ ಪ್ರತಿಭಟನೆಗಳು ನಡೆದಿದೆ. ಪಡಿತರ ಹಗರಣದಲ್ಲಿ ತಲೆ ಮರೆಸಿಕೊಂಡಿರುವ ಟಿಎಂಸಿ ನಾಯಕ ಶೇಖ್ ಷಹಜಹಾನ್ ಮತ್ತು ಅವರ ಸಹಚರರನ್ನು ಬಂಧಿಸುವಂತೆ ಒತ್ತಾಯಿಸಿ ಸ್ಥಳೀಯ ಮಹಿಳೆಯರು ಮೆರವಣಿಗೆ ನಡೆಸಿದ್ದರು. ಜಾರಿ ನಿರ್ದೇಶನಾಲಯ ತಂಡವು ಷಹಜಹಾನ್‌ಗೆ ಸಂಬಂಧಿಸಿದ ಸ್ಥಳಗಳ ಮೇಲೆ ದಾಳಿ ಮಾಡಲು ಹೋದಾಗ ಅವರ ಮೇಲೆ ಹಲ್ಲೆ ಕೂಡ ನಡೆದಿತ್ತು.

ಸ್ಥಳೀಯ ಮಹಿಳೆಯರ ಮೆರವಣಿಗೆಯನ್ನು ಗಮನದಲ್ಲಿಟ್ಟುಕೊಂಡು ಸಂದೇಶ ಖಾಲಿಯಲ್ಲಿ ಸೆಕ್ಷನ್ 144 ವಿಧಿಸಲಾಗಿದೆ. ಶೇಖ್ ಷಹಜಹಾನ್ ಮತ್ತು ಅವರ ತಂಡದ ಸದಸ್ಯರು ಮಹಿಳೆಯರಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದಾರೆ ಎಂದು ಕೂಡ ಪ್ರತಿಭಟನಾನಿರತರು ಆರೋಪಿಸಿದ್ದರು. ಈ ಬಗ್ಗೆ ಬಿಜೆಪಿ ಶಾಸಕರು ಸದನದಲ್ಲಿ ಗದ್ದಲವನ್ನುಂಟುಮಾಡಿದ್ದು, ಅವರನ್ನು ಸ್ಪೀಕರ್‌ ಅಮಾನತು ಮಾಡಿದ್ದಾರೆ.

ಇದನ್ನು ಓದಿ: ಹಲ್ದ್ವಾನಿ ಹಿಂಸಾಚಾರದ ಬಳಿಕ ಪೊಲೀಸ್‌ ದೌರ್ಜನ್ಯ: ಸ್ಥಳೀಯರ ಆರೋಪ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನ ಬದಲಿಸಿ ಮನುಸ್ಮೃತಿ ತರಲು SIR ಷಡ್ಯಂತ್ರ: ನಟ ಕಿಶೋರ್

ದೇಶದ ಬಹುಕೋಟಿ ಉದ್ಯಮಿ ಗೌತಮ್ ಅದಾನಿಯದ್ದೇ ಇರಲಿ ಅಥವಾ ಒಬ್ಬ ಬಡ ರೈತನದ್ದೇ ಇರಲಿ, ಪ್ರಜಾಪ್ರಭುತ್ವದಲ್ಲಿ ಎಲ್ಲರ ಮತವೂ ಒಂದೇ ಸಮ. ಪ್ರಜೆಗಳನ್ನೆಲ್ಲ ಸಮಾನವಾಗಿ ಕಾಣುವ ಏಕೈಕ ಅಸ್ತ್ರ ಎಂದರೆ ಅದು ಮತದಾನದ...

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

'ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು' ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ...

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...