Homeಮುಖಪುಟಛತ್ತೀಸ್‌ಗಢದಲ್ಲಿ ಮುಂದುವರಿದ ಭಾರತ್‌ ಜೋಡೋ ನ್ಯಾಯ ಯಾತ್ರೆ: ಕೇಸರಿ ಭಾವುಟ ಪ್ರದರ್ಶಿಸಿದ ಬಿಜೆಪಿ ಕಾರ್ಯಕರ್ತರಿಗೆ ಹಸ್ತಲಾಘವ...

ಛತ್ತೀಸ್‌ಗಢದಲ್ಲಿ ಮುಂದುವರಿದ ಭಾರತ್‌ ಜೋಡೋ ನ್ಯಾಯ ಯಾತ್ರೆ: ಕೇಸರಿ ಭಾವುಟ ಪ್ರದರ್ಶಿಸಿದ ಬಿಜೆಪಿ ಕಾರ್ಯಕರ್ತರಿಗೆ ಹಸ್ತಲಾಘವ ಮಾಡಿದ ರಾಹುಲ್‌

- Advertisement -
- Advertisement -

ಛತ್ತೀಸ್‌ಗಢದ ಕೊರ್ಬಾದಿಂದ ಇಂದು ರಾಹುಲ್ ಗಾಂಧಿ ನೇತೃತ್ವದ ಭಾರತ್‌ ಜೋಡೋ ನ್ಯಾಯ ಯಾತ್ರೆ ಆರಂಭವಾಗಿದೆ. ಯಾತ್ರೆಗೆ ಉತ್ತಮ ಬೆಂಬಲ ವ್ಯಕ್ತವಾಗಿದ್ದು, ಸಾವಿರಾರು ಮಂದಿ ಯಾತ್ರೆಯಲ್ಲಿ ಭಾಗವಹಿಸಿದ್ದಾರೆ. ಯಾತ್ರೆ ವೇಳೆ ಮಾತನಾಡಿದ ರಾಹುಲ್‌ ಗಾಂಧಿ ರಾಮಮಂದಿರ ಪ್ರಾಣ ಪ್ರತಿಷ್ಠಾಪಣೆ ಕಾರ್ಯಕ್ರಮಕ್ಕೆ ಸೆಲೆಬ್ರಿಟಿಗಳಿಗೆ ಆಹ್ವಾನ ಕಳುಹಿಸಿರುವ ಬಗ್ಗೆ ತರಾಟೆಗೆ ತೆಗೆದುಕೊಂಡಿದ್ದಾರೆ.

ಕೊರ್ಬಾದಲ್ಲಿ ಯಾತ್ರೆಯ ವೇಳೆ ರಾಹುಲ್‌ ಗಾಂಧಿಗೆ ಬಿಜೆಪಿ ಕಾರ್ಯಕರ್ತರು ಕೇಸರಿ ಭಾವುಟವನ್ನು ಪ್ರದರ್ಶಿಸಿ ಮೋದಿ-ಮೋದಿ ಎಂದು ಘೋಷಣೆ ಕೂಗಿದ್ದಾರೆ. ಈ ವೇಳೆ ಪ್ರೀತಿಯಿಂದ ತೆರೆದ ಜೀಪಿನಿಂದ ಇಳಿದು ಬಂದ ರಾಹುಲ್‌ ಗಾಂಧಿಗೆ ಬಿಜೆಪಿ ಕಾರ್ಯಕರ್ತರು ಹಸ್ತಲಾಘವ ಮಾಡಿದ್ದಾರೆ.

ಈ ಬಿಜೆಪಿ ಕಾರ್ಯಕರ್ತರನ್ನು ಯಾತ್ರೆಯ ವಿರುದ್ಧ ಪ್ರತಿಭಟಿಸಲು ಕಳುಹಿಸಲಾಗಿದೆ, ಆದರೆ ರಾಹುಲ್ ಗಾಂಧಿ ಅವರು ಪ್ರತಿಭಟನಾಕಾರರನ್ನು ಭೇಟಿಯಾದಾಗ ಅವರ ಮುಖದಲ್ಲಿನ ಸಂತೋಷವನ್ನು ನೋಡಬೇಕಾಗಿದೆ. ಪ್ರೀತಿಯ ಶಕ್ತಿಯನ್ನು ಈ ವಿಡಿಯೋದಲ್ಲಿ ನೋಡಿ ಎಂದು ಭಾರತ್‌ ಜೋಡೋ ನ್ಯಾಯ ಯಾತ್ರೆ ಕುರಿತ ಪೋಸ್ಟ್‌ನಲ್ಲಿ ಹೇಳಲಾಗಿದೆ.

ಎರಡು ದಿನಗಳ ವಿರಾಮದ ನಂತರ ಭಾನುವಾರ ಛತ್ತೀಸ್‌ಗಢದ ರಾಯಗಢ ಜಿಲ್ಲೆಯಿಂದ ಭಾರತ್‌ ಜೋಡೋ ನ್ಯಾಯ ಯಾತ್ರೆ ಪುನರಾರಂಭವಾಗಿತ್ತು. ಗಾಂಧಿ ಚೌಕ್‌ನಲ್ಲಿರುವ ಮಹಾತ್ಮ ಗಾಂಧಿ ಅವರ ಪ್ರತಿಮೆಗೆ ರಾಹುಲ್‌ ಗಾಂಧಿ ಮಾಲಾರ್ಪಣೆ ಮಾಡಿದ್ದು, ನಂತರ ಯಾತ್ರೆಯು ಖಾರ್ಸಿಯಾ ವಿಧಾನಸಭಾ ಕ್ಷೇತ್ರದಲ್ಲಿ ಮುಂದುವರಿದಿದೆ.

ಕಾಂಗ್ರೆಸ್ ನಾಯಕರು ಮತ್ತು ಬೆಂಬಲಿಗರು ಗಾಂಧಿ ಚೌಕ್‌ನಲ್ಲಿ ಜಮಾಯಿಸಿದ್ದರು. ರಾಜ್ಯ ಕಾಂಗ್ರೆಸ್ ಉಸ್ತುವಾರಿ ಸಚಿನ್ ಪೈಲಟ್, ಛತ್ತೀಸ್‌ಗಢ ಕಾಂಗ್ರೆಸ್‌ ಮುಖ್ಯಸ್ಥ ದೀಪಕ್ ಬೈಜ್ ಮತ್ತು ವಿರೋಧ ಪಕ್ಷದ ನಾಯಕ ಚರಣ್ ದಾಸ್ ಮಹಂತ್ ಅವರು ತೆರೆದ ಜೀಪಿನಲ್ಲಿ ರಾಹುಲ್‌ ಗಾಂಧಿ ಜೊತೆ ಯಾತ್ರೆಯಲ್ಲಿ ಸಾಗಿದ್ದರು.

ಯಾತ್ರೆಯು ಒಡಿಶಾದಿಂದ ಗುರುವಾರ ರಾಯಗಢವನ್ನು ಪ್ರವೇಶಿಸಿತ್ತು ಮತ್ತು ಎರಡು ದಿನಗಳ ವಿರಾಮದ ನಂತರ ಭಾನುವಾರ ಮಧ್ಯಾಹ್ನ ಯಾತ್ರೆ ಪುನರಾರಂಭವಾಗಿದೆ. ಛತ್ತೀಸ್‌ಗಢ-ಒಡಿಶಾ ಗಡಿಯಲ್ಲಿರುವ ರಾಯ್‌ಗಢ್ ಜಿಲ್ಲೆಯ ರೆಂಗಾರ್‌ಪಾಲಿ ಚೆಕ್‌ಪೋಸ್ಟ್‌ ಮೂಲಕ ಯಾತ್ರೆ ಛತ್ತೀಸ್‌ಗಢ ಪ್ರವೇಶಿಸಿದೆ. ಅಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ರಾಹುಲ್‌ ಗಾಂಧಿ ಮಾತನಾಡಿದ್ದರು.

ನಿನ್ನೆ ಛತ್ತೀಸ್‌ಗಢದ ರಾಯ್‌ಗಢ್‌ನ ಕೆವದಬಾದಿ ಚೌಕ್‌ನಲ್ಲಿ ಸಭೆಯನ್ನುದ್ದೇಶಿಸಿ ಮಾತನಾಡಿದ ರಾಹುಲ್ ಗಾಂಧಿ, ನಮ್ಮ ಪಕ್ಷವು ಭವಿಷ್ಯದ ಪೀಳಿಗೆಗೆ ದ್ವೇಷ ಮತ್ತು ಹಿಂಸೆ ಅಸ್ತಿತ್ವದಲ್ಲಿಲ್ಲದ ಹಿಂದೂಸ್ಥಾನವನ್ನು ನೀಡಲು ಬಯಸುತ್ತದೆ ಎಂದು ಹೇಳಿದ್ದರು.

ಸದ್ಯ ದೇಶದ ಮೂಲೆ ಮೂಲೆಗಳಲ್ಲಿ ದ್ವೇಷ, ಹಿಂಸಾಚಾರ ಹರಡುತ್ತಿದೆ. ಕೆಲವರು ಅವರ ಭಾಷೆಯ ಆಧಾರದ ಮೇಲೆ ಇತರರನ್ನು ಇಷ್ಟಪಡುವುದಿಲ್ಲ. ಕೆಲವರು ರಾಜ್ಯಗಳ ಆಧಾರದ ಮೇಲೆ ಇತರರನ್ನು ಇಷ್ಟಪಡುವುದಿಲ್ಲ. ಇಂತಹ ಚಿಂತನೆಗಳು ದೇಶವನ್ನು ದುರ್ಬಲಗೊಳಿಸುತ್ತವೆ. ಬಿಜೆಪಿ ಮತ್ತು ಆರೆಸ್ಸೆಸ್ ದ್ವೇಷವನ್ನು ಹರಡುತ್ತಿದೆ. ಆದರೆ, ಈ ದೇಶದ ಡಿಎನ್‌ಎಯಲ್ಲೇ ಪ್ರೀತಿ ಇದೆ. ದೇಶದಲ್ಲಿ, ವಿಭಿನ್ನ ನಂಬಿಕೆ ಮತ್ತು ಆಲೋಚನೆಗಳನ್ನು ಹೊಂದಿರುವ ಜನರು ಪ್ರೀತಿಯಿಂದ ಶಾಂತಿಯುತವಾಗಿ ಒಟ್ಟಿಗೆ ಬದುಕುತ್ತಿದ್ದಾರೆ ಎಂದು ರಾಹುಲ್ ಗಾಂಧಿ ಹೇಳಿದ್ದರು.

ಭಾರತ್ ಜೋಡೋ ನ್ಯಾಯ್ ಯಾತ್ರೆ ಅವಧಿ ಕಡಿತಕ್ಕೆ ನಿರ್ಧಾರ:

ಉತ್ತರಪ್ರದೇಶದಲ್ಲಿ 10-12ನೇ ತರಗತಿ ಬೋರ್ಡ್ ಪರೀಕ್ಷೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ‘ಭಾರತ್ ಜೋಡೋ ನ್ಯಾಯ್ ಯಾತ್ರೆ’ ಅವಧಿಯನ್ನು ಕಡಿಮೆ ಮಾಡಲು ಕಾಂಗ್ರೆಸ್‌ ನಾಯಕರು ನಿರ್ಧರಿಸಿರುವುದಾಗಿ ತಿಳಿದು ಬಂದಿದೆ.

ಉತ್ತರಪ್ರದೇಶದಲ್ಲಿ ಯಾತ್ರೆಯು ಫೆ.26ರವೆರೆಗೆ ಮುಂದುವರಿಯುವ ಬಗ್ಗೆ ಈ ಮೊದಲು ಮಾಹಿತಿಯನ್ನು ನೀಡಲಾಗಿತ್ತು. ಆದರೆ ಫೆಬ್ರವರಿ 22ರಿಂದ ಪ್ರಾರಂಭವಾಗುವ ಯುಪಿ ಬೋರ್ಡ್ ಪರೀಕ್ಷೆಗಳನ್ನು ಗಮನದಲ್ಲಿಟ್ಟುಕೊಂಡು, ಭಾರತ್ ಜೋಡೋ ನ್ಯಾಯ್ ಯಾತ್ರೆಯು ಫೆಬ್ರವರಿ 16ರಿಂದ ಫೆಬ್ರವರಿ 21ರವರೆಗೆ ಉತ್ತರಪ್ರದೇಶದಲ್ಲಿ ನಡೆಯಲಿದೆ ಎಂದು ರಾಜ್ಯ ಕಾಂಗ್ರೆಸ್ ವಕ್ತಾರ ಅಂಶು ಅವಸ್ತಿ ಹೇಳಿಕೆಯಲ್ಲಿ ತಿಳಿಸಿದ್ದಾರೆ. ರಾಹುಲ್ ಗಾಂಧಿ ಅನೇಕ ಸಂದರ್ಭಗಳಲ್ಲಿ ಸಾರ್ವಜನಿಕ ಹಿತಾಸಕ್ತಿಗೆ ಆದ್ಯತೆ ನೀಡಿದ್ದಾರೆ. ಈ ಹಿಂದೆ ಕೋವಿಡ್ -19 ಅವಧಿಯಲ್ಲಿ ಜನರ ಬಗ್ಗೆ ಕಾಳಜಿ ವಹಿಸಿ ರಾಹುಲ್ ಗಾಂಧಿ ಬಂಗಾಳದಲ್ಲಿ ತಮ್ಮ ರ್ಯಾಲಿಗಳನ್ನು ರದ್ದುಗೊಳಿಸಿದ್ದರು ಎಂದು ಅವಸ್ಥಿ ಹೇಳಿದ್ದಾರೆ.

ಭಾರತ್ ಜೋಡೋ ನ್ಯಾಯ್ ಯಾತ್ರೆಯು ಫೆಬ್ರವರಿ 16ರಂದು ವಾರಣಾಸಿ ಮೂಲಕ ರಾಜ್ಯವನ್ನು ಪ್ರವೇಶಿಸಲಿದೆ ಮತ್ತು ಫೆಬ್ರವರಿ 19ರಂದು ಭದೋಹಿ, ಪ್ರಯಾಗರಾಜ್ ಮತ್ತು ಪ್ರತಾಪಗಢ ಮೂಲಕ ಅಮೇಥಿ ತಲುಪಲಿದೆ. ಫೆಬ್ರವರಿ 19ರಂದು ಅಮೇಥಿ ಲೋಕಸಭಾ ಕ್ಷೇತ್ರದ ಗೌರಿಗಂಜ್‌ನಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ರಾಹುಲ್‌ ಗಾಂಧಿ ಮಾತನಾಡಲಿದ್ದು, ಮರುದಿನ ಫೆಬ್ರವರಿ 20ರಂದು ಯಾತ್ರೆ ರಾಯ್ ಬರೇಲಿ ಮೂಲಕ ಲಕ್ನೋಗೆ ತೆರಳಲಿದೆ. ಫೆಬ್ರವರಿ 21ರಂದು ಯಾತ್ರೆಯು ಲಕ್ನೋದಿಂದ ಉನ್ನಾವ್ ತಲುಪಲಿದ್ದು, ಉನ್ನಾವೋ ನಗರ ಮತ್ತು ಶುಕ್ಲಗಂಜ್ ಮೂಲಕ ಕಾನ್ಪುರವನ್ನು ಯಾತ್ರೆ ಪ್ರವೇಶಿಸಲಿದೆ. ನಂತರ ಕಾನ್ಪುರ, ಝಾನ್ಸಿ ಮೂಲಕ ಯಾತ್ರೆ ಮಧ್ಯಪ್ರದೇಶ ಪ್ರವೇಶಿಸಲಿದೆ.

ಇದನ್ನು ಓದಿ: ಹಲ್ದ್ವಾನಿ ಹಿಂಸಾಚಾರದ ಬಳಿಕ ಪೊಲೀಸ್‌ ದೌರ್ಜನ್ಯ: ಸ್ಥಳೀಯರ ಆರೋಪ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ-ಮಹಾರಾಷ್ಟ್ರದಲ್ಲಿ ಜನನ ಪ್ರಮಾಣಪತ್ರಕ್ಕೆ ಆಧಾರ್ ಮಾನ್ಯವಲ್ಲ: ಹೊಸ ಮಾರ್ಗಸೂಚಿ

ಜನನ ಪ್ರಮಾಣಪತ್ರಗಳನ್ನು ನೀಡಲು ಆಧಾರ್ ಕಾರ್ಡ್‌ಗಳನ್ನು ಇನ್ನು ಮುಂದೆ ಮಾನ್ಯ ಪುರಾವೆಯಾಗಿ ಅಥವಾ ಜನ್ಮ ದಿನಾಂಕದ ಪುರಾವೆಯಾಗಿ ಸ್ವೀಕರಿಸಲಾಗುವುದಿಲ್ಲ ಎಂದು ಉತ್ತರ ಪ್ರದೇಶ ಮತ್ತು ಮಹಾರಾಷ್ಟ್ರ ಘೋಷಿಸಿವೆ. ಈ ಉದ್ದೇಶಕ್ಕಾಗಿ ಆಧಾರ್ ಬಳಸುವುದನ್ನು...

ಉತ್ತರಾಖಂಡ| 150 ವರ್ಷಗಳ ಜಾತಿ ತಡೆಗೋಡೆ ಮುರಿದು ತಮ್ಮದೇ ಮುಖ್ಯಸ್ಥರ ಆಯ್ಕೆ ಮಾಡಿಕೊಂಡ ದಲಿತರು

ಉತ್ತರಾಖಂಡದ ದೂರದ ಜೌನ್ಸರ್-ಬವಾರ್ ಪ್ರದೇಶದ ಬಿಜ್ನು ಬಿಜ್ನಾಡ್ ಗ್ರಾಮದ ದಲಿತ ಸಮುದಾಯವು ಸುಮಾರು 150 ವರ್ಷಗಳಲ್ಲಿ ಮೊದಲ ಬಾರಿಗೆ ತನ್ನದೇ ಆದ 'ಸೈನಾ' (ಗ್ರಾಮದ ಮುಖ್ಯಸ್ಥ) ಆಯ್ಕೆ ಮಾಡುವ ಮೂಲಕ ಐತಿಹಾಸಿಕ ಹೆಜ್ಜೆ...

ರಿಲಯನ್ಸ್ ಇಂಡಸ್ಟ್ರೀಸ್‌ಗೆ ರೂ. 56.44 ಕೋಟಿ ಸಿಜಿಎಸ್‌ಟಿ ದಂಡ

ಮುಖೇಶ್ ಅಂಬಾನಿ ನೇತೃತ್ವದ ರಿಲಯನ್ಸ್ ಇಂಡಸ್ಟ್ರೀಸ್, ಅಹಮದಾಬಾದ್‌ನ ಸಿಜಿಎಸ್‌ಟಿ ಜಂಟಿ ಆಯುಕ್ತರಿಂದ 56.44 ಕೋಟಿ ರೂ. ದಂಡದ ಆದೇಶವನ್ನು ಸ್ವೀಕರಿಸಿದೆ ಎಂದು ಶುಕ್ರವಾರ ತಿಳಿಸಿದೆ. ನವೆಂಬರ್ 25 ರಂದು ಹೊರಡಿಸಲಾದ ಆದೇಶದಲ್ಲಿ, ಕಂಪನಿಯ ಇನ್‌ಪುಟ್...

ತಮಿಳುನಾಡು| ರಸ್ತೆ ಅಪಘಾತದಲ್ಲಿ ಇಬ್ಬರು ದಲಿತ ಯುವಕರು ಸಾವು; ಜಾತಿ ವೈಷಮ್ಯ ಆರೋಪ

ತಮಿಳುನಾಡಿನ ಧರ್ಮಪುರಿಯಲ್ಲಿ ಬುಧವಾರ ರಾತ್ರಿ ಚಿನ್ನಾರ್ಥಳ್ಳಿ ಕೂಟ್ ರಸ್ತೆಯ ಬಳಿ ಅಪರಿಚಿತ ವಾಹನವೊಂದು ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸೊನ್ನಂಪಟ್ಟಿ ಗ್ರಾಮದ ಪರಿಶಿಷ್ಟ ಜಾತಿಗೆ ಸೇರಿದ ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ ಎಂದು...

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...