Homeಮುಖಪುಟಬಿಹಾರ ವಿಧಾನಸಭೆ: ವಿಶ್ವಾಸ ಸಾಬೀತುಪಡಿಸಿದ ನಿತೀಶ್ ಕುಮಾರ್, ಸದನ ಬಹಿಷ್ಕರಿಸಿದ ಆರ್‌ಜೆಡಿ

ಬಿಹಾರ ವಿಧಾನಸಭೆ: ವಿಶ್ವಾಸ ಸಾಬೀತುಪಡಿಸಿದ ನಿತೀಶ್ ಕುಮಾರ್, ಸದನ ಬಹಿಷ್ಕರಿಸಿದ ಆರ್‌ಜೆಡಿ

- Advertisement -
- Advertisement -

ಬಿಹಾರ ವಿಧಾನಸಭೆಯಲ್ಲಿ ಸೋಮವಾರ ನಡೆದ ವಿಶ್ವಾಸಮತ ಯಾಚನೆಯಲ್ಲಿ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ 130-0 ಅಂತರದಲ್ಲಿ ಗೆದ್ದಿದ್ದಾರೆ. ಈ ವೇಳೆ ತೇಜಸ್ವಿ ಯಾದವ್ ನೇತೃತ್ವದ ರಾಷ್ಟ್ರೀಯ ಜನತಾ ದಳ (ಆರ್‌ಜೆಡಿ) ಸದನ ಬಹಿಷ್ಕರಿಸಿದರು.

ಜೆಡಿಯು, ಆರ್‌ಜೆಡಿ ಮತ್ತು ಕಾಂಗ್ರೆಸ್ ಮೈತ್ರಿಕೂಟವಾದ ಮಹಾಘಟಬಂಧನ್ ತೊರೆದು, ಎನ್‌ಡಿಎ ಒಕ್ಕೂಟಕ್ಕೆ ನಿತೀಶ್ ಜಿಗಿದ ಎರಡು ವಾರಗಳ ನಂತರ ವಿಶ್ವಾಸ ಮತ ಪರೀಕ್ಷೆ ಇಂದು ನಡೆಯಿತು. ಇದೇ ಅಧಿವೇಶನದಲ್ಲಿ ರಾಷ್ಟ್ರೀಯ ಜನತಾ ದಳ (ಆರ್‌ಜೆಡಿ)ದ ಮೂವರು ಶಾಸಕರಾದ ಪ್ರಹ್ಲಾದ್ ಯಾದವ್, ನೀಲಂ ದೇವಿ ಮತ್ತು ಚೇತನ್ ಆನಂದ್ ಎನ್‌ಡಿಎ ಒಕ್ಕೂಟಕ್ಕೆ ಬೆಂಬಲಿಸಿದರು. ವಿಧಾನಸಭೆಯಲ್ಲಿ ಮಾತನಾಡಿದ ನಿತೀಶ್ ಕುಮಾರ್, ‘ಕಳೆದ 15 ವರ್ಷಗಳಿಂದ ಲಾಲು ಪ್ರಸಾದ್-ರಾಬ್ರಿ ದೇವಿ ಸರ್ಕಾರಗಳು ಬಿಹಾರದ ಅಭಿವೃದ್ಧಿಗೆ ಏನನ್ನೂ ಮಾಡಿಲ್ಲ’ ಎಂದು ಆರೋಪಿಸಿದರು.

ಮತದಾನದ ಮೊದಲು ಸ್ಪೀಕರ್ ಅವಧ್ ಬಿಹಾರಿ ಚೌಧರಿ ವಿರುದ್ಧದ ಅವಿಶ್ವಾಸ ನಿರ್ಣಯವನ್ನು ಸಭೆಯು ಅಂಗೀಕರಿಸಿತು. ಉಚ್ಛಾಟನೆಯ ಪರವಾಗಿ 125 ಸದಸ್ಯರು ಮತ ಚಲಾಯಿಸಿದರು. ವಿಶ್ವಾಸಮತಕ್ಕೂ ಮುನ್ನ, ‘ಆಪರೇಷನ್’ ಕಳವಳದ ನಡುವೆ ಕಾಂಗ್ರೆಸ್ ಕಳೆದ ವಾರವೆ ತನ್ನ ಶಾಸಕರನ್ನು ಹೈದರಾಬಾದ್‌ಗೆ ಸ್ಥಳಾಂತರಿಸಿತ್ತು. ಆದರೆ, ಆರ್‌ಜೆಡಿಯ ಶಾಸಕರು ತೇಜಸ್ವಿ ಯಾದವ್ ಅವರ ಮನೆಯಲ್ಲಿ ಒಟ್ಟಿಗೆ ಇರಲು ನಿರ್ಧರಿಸಿದ್ದರು. ಬಿಜೆಪಿ ನಾಯಕ ನಿತ್ಯಾನಂದ ರೈ ಕೇಸರಿ ಪಕ್ಷದ ಎಲ್ಲಾ 78 ಶಾಸಕರನ್ನು ನಿರ್ವಹಿಸಿದರು. ಅವರೆಲ್ಲರೂ ಪಾಟ್ನಾದ ಹೋಟೆಲ್‌ನಲ್ಲಿ ಇದ್ದರು. ನಿತೀಶ್ ಕುಮಾರ್ ಅವರ ಜೆಡಿಯು ತನ್ನ 40 ಶಾಸಕರನ್ನು ರಾಜ್ಯ ರಾಜಧಾನಿಯ ಮತ್ತೊಂದು ಹೋಟೆಲ್‌ನಲ್ಲಿ ತಂಗುವಂತೆ ಮಾಡಿತ್ತು.

ವಿಶ್ವಾಸ ಮತಕ್ಕೆ ನಿಮಿಷಗಳ ಮೊದಲು, ಆರ್‌ಜೆಡಿ ನೇತೃತ್ವದ ಪ್ರತಿಪಕ್ಷಗಳು ಸದನದಿಂದ ಹೊರನಡೆದವು. ಜನತಾ ದಳ (ಯುನೈಟೆಡ್) ಮುಖ್ಯಸ್ಥರು ತೇಜಸ್ವಿ ಯಾದವ್ ಅವರ ಪಕ್ಷದ ವಿರುದ್ಧ ಭ್ರಷ್ಟಾಚಾರದ ಆರೋಪ ಮಾಡಿದರು.

ಪ್ರತಿಪಕ್ಷಗಳ ಅನುಪಸ್ಥಿತಿಯಲ್ಲಿ, ನಿತೀಶ್‌ ಕುಮಾರ್ ಮೊದಲು ಧ್ವನಿ ಮತದ ಮೂಲಕ ಬಹುಮತವನ್ನು ಸಾಬೀತುಪಡಿಸಿದರು. ನಂತರ, ಅವರು ಕೈಯಿಂದ ಮತದಾನಕ್ಕೆ ಒತ್ತಾಯಿಸಿದರು. ಅವರು ವಿಶ್ವಾಸ ಮತವನ್ನು ಗೆದ್ದರು, ಅವರ ಸರ್ಕಾರದ ಪರವಾಗಿ 129 ಮತಗಳನ್ನು ಪಡೆದರು.

ಕಳೆದ ತಿಂಗಳು ಮಿತ್ರಪಕ್ಷ ಆರ್‌ಜೆಡಿಯನ್ನು ತ್ಯಜಿಸಿ ಭಾರತೀಯ ಜನತಾ ಪಕ್ಷದೊಂದಿಗೆ ಕೈಜೋಡಿಸಿರುವ ನಿತೀಶ್ ಕುಮಾರ್, ತೇಜಸ್ವಿ ಯಾದವ್ ಅವರ ಪೋಷಕರಾದ ಲಾಲು ಯಾದವ್ ಮತ್ತು ರಾಬ್ರಿ ದೇವಿ ಅವರ ಮೇಲೆ ವಾಗ್ದಾಳಿ ನಡೆಸಿದರು. ‘ಇದಕ್ಕಿಂತ ಮೊದಲು, ಅವರ ತಂದೆ ಮತ್ತು ತಾಯಿಗೆ ಕೆಲಸ ಮಾಡುವ ಅವಕಾಶ ಸಿಕ್ಕಿತು, ಆಗ ಬಿಹಾರದಲ್ಲಿ ಏನಾಯಿತು? ಆ ಸಮಯದಲ್ಲಿ ಯಾರಾದರೂ ರಾತ್ರಿಯಲ್ಲಿ ಹೊರಗೆ ಹೋಗಲು ಧೈರ್ಯ ಮಾಡುತ್ತಾರೆಯೇ? ಯಾವುದೇ ರಸ್ತೆ ಇದೆಯೇ?’ ಎಂದು ಅವರು ತಮ್ಮ ಭಾಷಣದಲ್ಲಿ ಹೇಳಿದರು.

ಇದನ್ನೂ ಓದಿ; ಪ.ಬಂಗಾಳ: ಸದನದಲ್ಲಿ ಹೈಡ್ರಾಮ ಮಾಡಿದ 6 ಮಂದಿ ಬಿಜೆಪಿ ಶಾಸಕರು ಅಮಾನತು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನ ಬದಲಿಸಿ ಮನುಸ್ಮೃತಿ ತರಲು SIR ಷಡ್ಯಂತ್ರ: ನಟ ಕಿಶೋರ್

ದೇಶದ ಬಹುಕೋಟಿ ಉದ್ಯಮಿ ಗೌತಮ್ ಅದಾನಿಯದ್ದೇ ಇರಲಿ ಅಥವಾ ಒಬ್ಬ ಬಡ ರೈತನದ್ದೇ ಇರಲಿ, ಪ್ರಜಾಪ್ರಭುತ್ವದಲ್ಲಿ ಎಲ್ಲರ ಮತವೂ ಒಂದೇ ಸಮ. ಪ್ರಜೆಗಳನ್ನೆಲ್ಲ ಸಮಾನವಾಗಿ ಕಾಣುವ ಏಕೈಕ ಅಸ್ತ್ರ ಎಂದರೆ ಅದು ಮತದಾನದ...

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

'ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು' ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ...

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...