Homeಮುಖಪುಟಮುಂದುವರೆದ ಇಸ್ರೇಲ್ ಆಕ್ರಮಣ: ಮತ್ತೆ 67 ಜನರ ಮಾರಣಹೋಮ

ಮುಂದುವರೆದ ಇಸ್ರೇಲ್ ಆಕ್ರಮಣ: ಮತ್ತೆ 67 ಜನರ ಮಾರಣಹೋಮ

- Advertisement -
- Advertisement -

ಭಯೋತ್ಪಾದನೆ ನಿರ್ಮೂಲನೆಯ ನೆಪದಲ್ಲಿ ಮುಗ್ದ ಪ್ಯಾಲೆಸ್ತೀನ್ ನಾಗರಿಕರ ಮೇಲೆ ಇಸ್ರೇಲ್‌ ನಡೆಸುತ್ತಿರುವ ಆಕ್ರಮಣಕ್ಕೆ ಸೋಮವಾರ 67 ಜನರು ಬಲಿಯಾಗಿದ್ದಾರೆ.

ಗಾಝಾದ ಅತ್ಯಂತ ಜನ ನಿಬಿಡ ನಗರವಾದ ರಫಾದಲ್ಲಿ ಇಸ್ರೇಲ್ ಅಟ್ಟಹಾಸ ಮೆರೆದಿದ್ದು, ಕಂದಮ್ಮಗಳು ಸೇರಿದಂತೆ 67 ಜನರು ಕೊನೆಯುಸಿರೆಳೆದಿದ್ದಾರೆ. ನೂರಾರು ಜನರು ಗಾಯಗೊಂಡಿದ್ದಾರೆ. ಘಟನೆಯ ಕುರಿತು ಅಂತಾರಾಷ್ಟ್ರೀಯ ಮಾಧ್ಯಮಗಳು ಪ್ರಕಟಿಸಿರುವ ಫೋಟೋಗಳು ಕಣ್ಣೀರು ತರಿಸುತ್ತಿವೆ.

ಸೋಮವಾರ ಗಾಝಾದ ದಕ್ಷಿಣದ ನಗರವಾದ ರಫಾದ ವಿವಿಧ ಭಾಗಗಳಲ್ಲಿ 14 ಮನೆಗಳು ಮತ್ತು ಮೂರು ಮಸೀದಿಗಳನ್ನು ಇಸ್ರೇಲ್ ಸೇನೆ ಹೊಡೆದುರುಳಿಸಿವೆ ಎಂದು ಹಮಾಸ್ ಸರ್ಕಾರ ವರದಿ ಮಾಡಿದೆ.

“ದಕ್ಷಿಣ ಗಾಝಾ ಪಟ್ಟಿಯಲ್ಲಿರುವ ಶಬೌರಾ ಪ್ರದೇಶದಲ್ಲಿ ಭಯೋತ್ಪಾದಕರ ನೆಲೆಗಳನ್ನು ಗುರಿಯಾಗಿಸಿ ಸರಣಿ ದಾಳಿ ನಡೆಸಲಾಗಿದೆ” ಎಂದು ಇಸ್ರೇಲಿ ಮಿಲಿಟರಿ ಹೇಳಿಕೊಂಡಿದೆ.

ಯುಎಸ್‌ನ ಎಬಿಸಿ ನ್ಯೂಸ್‌ ಜೊತೆ ಮಾತನಾಡಿರುವ ಇಸ್ರೇಲ್‌ ಪ್ರಧಾನಿ ಬೆಂಜಮಿನ್ ನೆತನ್ಯಾಹು, “ಹಮಾಸ್ ಅನ್ನು ನಿರ್ಮೂಲನೆ ಮಾಡುವವರೆಗೆ ರಫಾದಲ್ಲಿ ಕಾರ್ಯಾಚರಣೆ ಮುಂದುವರಿಯಲಿದೆ. ಅಲ್ಲಿಂದ ಹೊರ ಬರಲು ಬಯಸುವ ನಾಗರಿಕರಿಗೆ ನಾವು ವ್ಯವಸ್ಥೆಗಳನ್ನು ಮಾಡಿ ಕೊಡುತ್ತೇವೆ” ಎಂದಿದ್ದಾರೆ.

ಸುಮಾರು 130 ದಿನಗಳ ಕಾಲ ರಫಾದಲ್ಲಿ ಹಮಾಸ್ ವಶದಲ್ಲಿದ್ದ ಇಬ್ಬರನ್ನು ರಕ್ಷಿಸಲಾಗಿದೆ ಎಂದು ಇಸ್ರೇಲಿ ಮಿಲಿಟರಿ ಸೋಮವಾರ ಮುಂಜಾನೆ ಘೋಷಿಸಿದೆ. ಫೆರ್ನಾಂಡೋ ಸೈಮನ್ ಮರ್ಮನ್ ಮತ್ತು ಲೂಯಿಸ್ ಹರ್ ಎಂಬ ಇಬ್ಬರನ್ನುಅಕ್ಟೋಬರ್ 7ರಂದು ಹಮಾಸ್ ಕಿಬ್ಬುಟ್ಜ್ ನಿರ್ ಯಿಟ್ಜಾಕ್‌ನಿಂದ ಅಪಹರಿಸಿತ್ತು. ಅವರನ್ನು ರಕ್ಷಿಸಿದ್ದೇವೆ. ಇಬ್ಬರೂ ಆರೋಗ್ಯವಾಗಿದ್ದಾರೆ ಎಂದು ತಿಳಿಸಿದೆ.

ಅಲ್‌ ಜಝೀರಾ ವರದಿಯ ಪ್ರಕಾರ, ಪ್ರಸ್ತುತ ಸುಮಾರು 1.4 ಮಿಲಿಯನ್ ಪ್ಯಾಲೆಸ್ತೀನಿಯನ್ನರು ರಫಾದಲ್ಲಿ ಆಶ್ರಯ ಪಡೆದಿದ್ದಾರೆ. ಅನೇಕರು ಡೇರೆಗಳಲ್ಲಿ ವಾಸಿಸುತ್ತಿದ್ದಾರೆ. ಅವರಿಗೆ ಆಹಾರ, ನೀರು ಮತ್ತು ಔಷಧ ಆಹಾಕಾರ ಉಂಟಾಗಿದೆ.

ಇಸ್ರೇಲ್ ಮತ್ತು ಯುಎಸ್‌ ಜಂಟಿಯಾಗಿ ರಫಾದ ಜನರಿಗೆ ಅಗತ್ಯ ಸಾಮಾಗ್ರಿ ಒದಗಿಸುವ ಜವಬ್ದಾರಿ ವಹಿಸಿಕೊಂಡಿದೆ. ಜನರಿಗೆ ಪುನರ್ವಸತಿ ಕಲ್ಪಿಸಿರುವ ರಫಾ ನಗರದಲ್ಲೂ ಇಸ್ರೇಲ್ ಆಕ್ರಮಣ ಪ್ರಾರಂಭಿಸಿರುವುದಕ್ಕೆ ಮಾನವ ಹಕ್ಕುಗಳ ಸಂಘಟನೆಗಳು ಕಳವಳ ವ್ಯಕ್ತಪಡಿಸಿವೆ. ಮಾಧ್ಯಮ ವರದಿಗಳ ಪ್ರಕಾರ, ಇಸ್ರೇಲ್ ದಾಳಿಯಿಂದ ಮೃತಪಟ್ಟ ಗಾಝಾ ನಾಗರಿಕರ ಸಂಖ್ಯೆ 28 ಸಾವಿರ ದಾಟಿದೆ.

ಇದನ್ನೂ ಓದಿ: ರೈತರಿಂದ ಇಂದು ‘ದಿಲ್ಲಿ ಚಲೋ’: ಕೇಂದ್ರದ ಮನವೊಲಿಸುವ ತಂತ್ರ ವಿಫಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನ ಬದಲಿಸಿ ಮನುಸ್ಮೃತಿ ತರಲು SIR ಷಡ್ಯಂತ್ರ: ನಟ ಕಿಶೋರ್

ದೇಶದ ಬಹುಕೋಟಿ ಉದ್ಯಮಿ ಗೌತಮ್ ಅದಾನಿಯದ್ದೇ ಇರಲಿ ಅಥವಾ ಒಬ್ಬ ಬಡ ರೈತನದ್ದೇ ಇರಲಿ, ಪ್ರಜಾಪ್ರಭುತ್ವದಲ್ಲಿ ಎಲ್ಲರ ಮತವೂ ಒಂದೇ ಸಮ. ಪ್ರಜೆಗಳನ್ನೆಲ್ಲ ಸಮಾನವಾಗಿ ಕಾಣುವ ಏಕೈಕ ಅಸ್ತ್ರ ಎಂದರೆ ಅದು ಮತದಾನದ...

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

'ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು' ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ...

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...