Homeಮುಖಪುಟಮೆರವಣಿಗೆ ಆರಂಭಿಸಿದ ರೈತರು; ದೆಹಲಿ-ಹರಿಯಾಣ ಗಡಿಯಲ್ಲಿ ಕಂದಕ, ಮುಳ್ಳಿನ ಬೇಲಿ

ಮೆರವಣಿಗೆ ಆರಂಭಿಸಿದ ರೈತರು; ದೆಹಲಿ-ಹರಿಯಾಣ ಗಡಿಯಲ್ಲಿ ಕಂದಕ, ಮುಳ್ಳಿನ ಬೇಲಿ

- Advertisement -
- Advertisement -

ಕನಿಷ್ಠ ಬೆಂಬಲ ಬೆಲೆ (ಎಂಎಸ್‌ಪಿ) ಸೇರಿದಂತೆ ವಿವಿಧ ಬೇಡಿಕೆಗಳನ್ನಿಟ್ಟುಕೊಂಡು ಇಂದು ಹಲವು ರಾಜ್ಯಗಳ ರೈತರು ‘ದೆಹಲಿ ಚಲೋ’ ಹಮ್ಮಿಕೊಂಡಿದ್ದು, ‘ಸಂಯುಕ್ತ ಕಿಸಾನ್ ಮೋರ್ಚಾ ಮತ್ತು ಕಿಸಾನ್ ಮಜ್ದೂರ್ ಮೋರ್ಚಾ’ ಸೇರಿದಂತೆ ಹಲವು ಸಂಘಟನೆಗಳು ಹರಿಯಾಣ, ಪಂಜಾಬ್ ಮತ್ತು ಉತ್ತರ ಪ್ರದೇಶ ಗಡಿಗಳಿಂದ ಮೆರವಣಿಗೆ ಆರಂಭಿಸಿದ್ದಾರೆ. ಇದೇ ಸಂಘಟನೆಗಳ ನೇತೃತ್ವದಲ್ಲಿ 2020-21 ರಲ್ಲಿ ವರ್ಷವಿಡೀ ನಡೆದ ಆಂದೋಲನದ ನಂತರ ಕೇಂದ್ರ ಸರ್ಕಾರ ಮೂರು ಕೃಷಿ ಕಾನೂಗಳನ್ನು ಹಿಂದೆಗೆದುಕೊಂಡು, ಎಂಎಸ್‌ಪಿಯನ್ನು ಕಾನೂನುಬದ್ಧಗೊಳಿಸುವುದಾಗಿ ಭರವಸೆ ನೀಡಿತ್ತು.

250ಕ್ಕೂ ಹೆಚ್ಚು ರೈತ ಸಂಘಗಳ ಬೆಂಬಲ ಹೊಂದಿರುವ ಕಿಸಾನ್ ಮಜ್ದೂರ್ ಮೋರ್ಚಾ ಮತ್ತು 150 ರೈತ ಒಕ್ಕೂಟಗಳ ವೇದಿಕೆಯಾದ ಸಂಯುಕ್ತ ಕಿಸಾನ್ ಮೋರ್ಚಾ ಡಿಸೆಂಬರ್‌ನಲ್ಲಿ ಪ್ರತಿಭಟನೆಗೆ ಕರೆ ನೀಡಿವೆ. ಪಂಜಾಬ್‌ನಿಂದ ಪ್ರಾರಂಭಗೊಂಡ ಸಂಘಟಿತವಾದ ಪ್ರತಿಭಟನೆಯು ಸರ್ಕಾರ ಎರಡು ವರ್ಷಗಳ ಹಿಂದೆ ನೀಡಿದ್ದ ಭರವಸೆಗಳನ್ನು ನೆನಪಿಸುವ ಉದ್ದೇಶ ಹೊಂದಿದೆ.

ಮುಖ್ಯವಾಗಿ ಪಂಜಾಬ್‌ನ ರೈತರು, ಹರಿಯಾಣ ಮತ್ತು ಉತ್ತರ ಪ್ರದೇಶ ಸಹ ಸಂಘಟನೆಗಳು ತಮ್ಮ ‘ಚಲೋ ದೆಹಲಿ’ ಮೆರವಣಿಗೆಯನ್ನು ಪ್ರಾರಂಭಿಸಿವೆ. ಕೇಂದ್ರ ಸರ್ಕಾರದೊಂದಿಗಿನ ಅವರ ಸಭೆಯು ಅನಿರ್ದಿಷ್ಟವಾಗಿ ಉಳಿದಿದೆ. ಮೆರವಣಿಗೆಯ ಮುನ್ನಾದಿನದಂದು, ಪಂಜಾಬ್, ಹರಿಯಾಣ ಮತ್ತು ಉತ್ತರ ಪ್ರದೇಶದ ರೈತ ಮುಖಂಡರು ಎರಡನೇ ಸುತ್ತಿನ ಮಾತುಕತೆಗಾಗಿ ಕೇಂದ್ರ ಸಚಿವರಾದ ಪಿಯೂಷ್ ಗೋಯಲ್ ಮತ್ತು ಅರ್ಜುನ್ ಮುಂಡಾ ಅವರನ್ನು ಭೇಟಿ ಮಾಡಿದರು. ಸಭೆಯು ಐದು ಗಂಟೆಗಳ ಕಾಲ ನಡೆಯಿತು, ಕೇಂದ್ರದ ಕೊನೆಯ ಪ್ರಯತ್ನವೂ ವಿಫಲವಾಗಿದ್ದು, ರಾಷ್ಟ್ರ ರಾಜಧಾಣಿಗೆ ಅನ್ನದಾತರು ಬರದಂತೆ ದೆಹಲಿ ಗಡಿಯಲ್ಲಿ ಕಂದಕ ತೋಡಲಾಗಿದೆ. ಸಿಮೆಂಡ್ ಬ್ಲಾಕ್‌ಗಳಿಂದ ರಸ್ತೆಗಳನ್ನು ಬಂದ್ ಮಾಡಲಾಗಿದೆ.

ರೈತರಿಗೆ ಸಂಬಂಧಿಸಿದ ಬಹುತೇಕ ವಿಷಯಗಳ ಬಗ್ಗೆ ಒಮ್ಮತಕ್ಕೆ ಬರಲಾಗಿದೆ ಎಂದು ಸಭೆಯ ನಂತರ ಕೇಂದ್ರ ಕೃಷಿ ಸಚಿವ ಮುಂಡಾ ತಿಳಿಸಿದರು. ಆದಾಗ್ಯೂ, ಮಂಗಳವಾರದಂದು ಮೆರವಣಿಗೆ ನಡೆಸುವುದಾಗಿ ರೈತರು ಪ್ರತಿಪಾದಿಸಿದರು. ಇದರಿಂದಾಗಿ ದೆಹಲಿಯಾದ್ಯಂತ ಅನೇಕ ರಾಜ್ಯಗಳ ಗಡಿಗಳನ್ನು ಮುಚ್ಚಲಾಗಿದೆ.

ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆಯನ್ನು (ಎಂಎಸ್‌ಪಿ) ಖಾತರಿಪಡಿಸುವ ಕಾನೂನು ಜಾರಿಗೊಳಿಸುವುದು ಸೇರಿದಂತೆ ತಮ್ಮ ಬೇಡಿಕೆಗಳನ್ನು ಅಂಗೀಕರಿಸುವಂತೆ ಕೇಂದ್ರವನ್ನು ಒತ್ತಾಯಿಸಲು ಸಂಯುಕ್ತ ಕಿಸಾನ್ ಮೋರ್ಚಾ (ರಾಜಕೀಯೇತರ) ಮತ್ತು ಕಿಸಾನ್ ಮಜ್ದೂರ್ ಮೋರ್ಚಾ ಮಂಗಳವಾರದ ಮೆರವಣಿಗೆಯನ್ನು ನಡೆಸಲಿದೆ.

ಎಂಎಸ್‌ಪಿಯ ಕಾನೂನು ಖಾತರಿ ರೈತರ ಪ್ರತಿಭಟನೆಗೆ ಪ್ರಮುಖ ಕಾರಣವಾಗಿದೆ. ಇದಲ್ಲದೇ, ಸ್ವಾಮಿನಾಥನ್ ಆಯೋಗದ ಶಿಫಾರಸುಗಳನ್ನು ಜಾರಿಗೆ ತರಲು ಹಾಗೂ ಕೃಷಿ ಸಾಲ ಮನ್ನಾಕ್ಕೆ ರೈತರು ಒತ್ತಾಯಿಸಿದ್ದಾರೆ.

ಹರ್ಯಾಣ, ಪಂಜಾಬ್ ಮತ್ತು ಉತ್ತರ ಪ್ರದೇಶದ ರೈತರು ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಎಂಎಸ್‌ಪಿ ಕಾನೂನು ಖಾತರಿ ಘೋಷಣೆಗಾಗಿ ಬೃಹತ್ ಪ್ರತಿಭಟನೆಯನ್ನು ಪ್ರಾರಂಭಿಸುತ್ತಿದ್ದಾರೆ. ತಮ್ಮ ಬೇಡಿಕೆಗಳನ್ನು ಅಂಗೀಕರಿಸುವಂತೆ ಕೇಂದ್ರವನ್ನು ಒತ್ತಾಯಿಸಲು ಕಳೆದ ವಾರ ‘ದೆಹಲಿ ಚಲೋ’ ಮೆರವಣಿಗೆಯನ್ನು ಘೋಷಿಸಲಾಗಿತ್ತು.

ರೈತರು ಕಾನೂನುಬದ್ಧ ಎಂಎಸ್‌ಪಿ ಗ್ಯಾರಂಟಿ, ರೈತರು ಮತ್ತು ಕೃಷಿ ಕಾರ್ಮಿಕರಿಗೆ ಪಿಂಚಣಿ, ಕೃಷಿ ಸಾಲ ಮನ್ನಾ ಮತ್ತು ಲಖಿಂಪುರ ಖೇರಿ ಹಿಂಸಾಚಾರದ ಸಂತ್ರಸ್ತರಿಗೆ “ನ್ಯಾಯ” ಮುಂತಾದ ಅನೇಕ ಷರತ್ತುಗಳನ್ನು ಮುಂದಿಟ್ಟಿದ್ದಾರೆ.

ದೆಹಲಿಯ ಸಿಂಗ್, ಟಿಕ್ರಿ ಮತ್ತು ಗಾಜಿಪುರ ಗಡಿಯಲ್ಲಿ ಭದ್ರತೆಯನ್ನು ತೀವ್ರಗೊಳಿಸಲಾಗಿದ್ದು, ವಾಹನಗಳ ಸಂಚಾರವನ್ನು ನಿರ್ಬಂಧಿಸಲು ಮತ್ತು ರಾಷ್ಟ್ರ ರಾಜಧಾನಿಯಲ್ಲಿ ಅಡಚಣೆಗಳನ್ನು ತಡೆಗಟ್ಟಲು ಸಿಮೆಂಟ್ ಬ್ಯಾರಿಕೇಡಿಂಗ್, ಲೋಹದ ಮೊಳೆಗಳು ಮತ್ತು ತಡೆಗೋಡೆಗಳನ್ನು ಸ್ಥಾಪಿಸಲಾಗಿದೆ.

ಮಂಗಳವಾರ ರೈತರ ಪ್ರತಿಭಟನೆಗೆ ಮುನ್ನ ಅನಾಹುತಗಳನ್ನು ತಡೆಯಲು ದೆಹಲಿ ಪೊಲೀಸರು ಭಾನುವಾರ ಉತ್ತರ ಪ್ರದೇಶ ಮತ್ತು ಹರ್ಯಾಣ ಗಡಿಗಳಲ್ಲಿ ಕ್ರಿಮಿನಲ್ ಪ್ರೊಸೀಜರ್ ಕೋಡ್‌ನ ಸೆಕ್ಷನ್ 144 ಅನ್ನು ವಿಧಿಸಿದ್ದಾರೆ. ದೆಹಲಿಯ ಗಡಿಯಲ್ಲಿ 50,000 ಕ್ಕೂ ಹೆಚ್ಚು ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಫೆಬ್ರವರಿ 13 ಕ್ಕೆ ಅಂಬಾಲಾ, ಕುರುಕ್ಷೇತ್ರ, ಕೈತಾಲ್, ಜಿಂದ್, ಹಿಸಾರ್, ಫತೇಹಾಬಾದ್ ಮತ್ತು ಸಿರ್ಸಾ – ಏಳು ಜಿಲ್ಲೆಗಳಲ್ಲಿ ಇಂಟರ್ನೆಟ್ ಮತ್ತು ಬಲ್ಕ್‌ ಎಸ್‌ಎಂಎಸ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ.

ಇದನ್ನೂ ಓದಿ; ರೈತರಿಂದ ಇಂದು ‘ದಿಲ್ಲಿ ಚಲೋ’: ಕೇಂದ್ರದ ಮನವೊಲಿಸುವ ತಂತ್ರ ವಿಫಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನ ಬದಲಿಸಿ ಮನುಸ್ಮೃತಿ ತರಲು SIR ಷಡ್ಯಂತ್ರ: ನಟ ಕಿಶೋರ್

ದೇಶದ ಬಹುಕೋಟಿ ಉದ್ಯಮಿ ಗೌತಮ್ ಅದಾನಿಯದ್ದೇ ಇರಲಿ ಅಥವಾ ಒಬ್ಬ ಬಡ ರೈತನದ್ದೇ ಇರಲಿ, ಪ್ರಜಾಪ್ರಭುತ್ವದಲ್ಲಿ ಎಲ್ಲರ ಮತವೂ ಒಂದೇ ಸಮ. ಪ್ರಜೆಗಳನ್ನೆಲ್ಲ ಸಮಾನವಾಗಿ ಕಾಣುವ ಏಕೈಕ ಅಸ್ತ್ರ ಎಂದರೆ ಅದು ಮತದಾನದ...

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

'ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು' ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ...

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...