Homeಮುಖಪುಟಪತ್ರಕರ್ತೆ ಸೌಮ್ಯ ವಿಶ್ವನಾಥನ್ ಹತ್ಯೆ ಪ್ರಕರಣ: ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ಅಪರಾಧಿಗಳಿಗೆ ಜಾಮೀನು

ಪತ್ರಕರ್ತೆ ಸೌಮ್ಯ ವಿಶ್ವನಾಥನ್ ಹತ್ಯೆ ಪ್ರಕರಣ: ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ಅಪರಾಧಿಗಳಿಗೆ ಜಾಮೀನು

- Advertisement -
- Advertisement -

2008ರಲ್ಲಿ ನಡೆದಿದ್ದ ಟಿವಿ ಪತ್ರಕರ್ತೆ ಸೌಮ್ಯ ವಿಶ್ವನಾಥನ್ ಹತ್ಯೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ನಾಲ್ವರು ಅಪರಾಧಿಗಳಿಗೆ ದೆಹಲಿ ಹೈಕೋರ್ಟ್ ಸೋಮವಾರ ಜಾಮೀನು ಮಂಜೂರು ಮಾಡಿದೆ.

ನ್ಯಾಯಮೂರ್ತಿ ಸುರೇಶ್ ಕುಮಾರ್ ನೇತೃತ್ವದ ಪೀಠವು ಅಪರಾಧಿಗಳಾದ ರವಿ ಕಪೂರ್, ಅಮಿತ್ ಶುಕ್ಲಾ, ಬಲ್ಜೀತ್ ಸಿಂಗ್ ಮಲಿಕ್ ಮತ್ತು ಅಜಯ್ ಕುಮಾರ್ ಅವರ ಶಿಕ್ಷೆಯನ್ನು ಅಮಾನತುಗೊಳಿಸಿದೆ. ಅಪರಾಧ ಮತ್ತು ಶಿಕ್ಷೆಯನ್ನು ಪ್ರಶ್ನಿಸಿದ್ದ ಅವರ ಮೇಲ್ಮನವಿಗಳ ಬಾಕಿ ಇರುವವರೆಗೆ ಶಿಕ್ಷೆಯನ್ನು ಕೋರ್ಟ್‌ ರದ್ದುಪಡಿಸಿದೆ.

ನ್ಯಾಯಮೂರ್ತಿ ಗಿರೀಶ್ ಕತ್ಪಾಲಿಯಾ ಅವರನ್ನೊಳಗೊಂಡ ಪೀಠವು, ನಾಲ್ವರು ಅಪರಾಧಿಗಳು ಈಗಾಗಲೇ 14 ವರ್ಷ ಮತ್ತು 9 ತಿಂಗಳ ಕಾಲ ಶಿಕ್ಷೆಯನ್ನು ಅನುಭವಿಸಿದ್ದಾರೆ ಎಂದು ಗಮನಿಸಿದೆ. ನಾಲ್ವರು ಅಪರಾಧಿಗಳು ತಮ್ಮ ಶಿಕ್ಷೆಯನ್ನು ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ್ದರು.

2008ರಲ್ಲಿ ರಾಷ್ಟ್ರ ರಾಜಧಾನಿಯಲ್ಲಿ ಪತ್ರಕರ್ತೆ ಸೌಮ್ಯ ವಿಶ್ವನಾಥನ್ ಅವರನ್ನು ಗುಂಡಿಕ್ಕಿ ಹತ್ಯೆ ಮಾಡಿದ  ಹದಿನೈದು ವರ್ಷಗಳ ನಂತರ ಕಳೆದ ವರ್ಷ ಅಕ್ಟೋಬರ್ 18ರಂದು ದೆಹಲಿ ನ್ಯಾಯಾಲಯವು ಕೊಲೆ ಪ್ರಕರಣದಲ್ಲಿ ನಾಲ್ವರನ್ನು ಅಪರಾಧಿಗಳೆಂದು ಘೋಷಿಸಿತ್ತು. ಪ್ರಾಸಿಕ್ಯೂಷನ್ ಎಲ್ಲಾ ಸಮಂಜಸವಾದ ಅನುಮಾನಗಳನ್ನು ಮೀರಿ ಅಪರಾಧವನ್ನು ಸರಿಯಾಗಿ ಸಾಬೀತುಪಡಿಸಿದೆ ಎಂದು ಕೋರ್ಟ್‌ ಹೇಳಿದೆ.

ರವಿ ಕಪೂರ್, ಅಮಿತ್ ಶುಕ್ಲಾ, ಅಜಯ್ ಕುಮಾರ್ ಮತ್ತು ಬಲ್ಜೀತ್ ಮಲಿಕ್ ಎಂಬ ನಾಲ್ವರು ಅಪರಾಧಿಗಳ ವಿರುದ್ಧ 302 (ಕೊಲೆ) ಮತ್ತು 34 (ಸಾಮಾನ್ಯ ಉದ್ದೇಶದಿಂದ ಮಾಡಿದ ಅಪರಾಧ)  ಮತ್ತು ಭಾರತೀಯ ದಂಡ ಸಂಹಿತೆಯ ವಿವಿಧ ಸೆಕ್ಸನ್‌ಗಳಡಿಯಲ್ಲಿ ದಾಖಲಿಸಲಾಗಿದ್ದ ಪ್ರಕರಣದಲ್ಲಿ ಅವರಿಗೆ  ಶಿಕ್ಷೆ ವಿಧಿಸಲಾಗಿತ್ತು. ಇದಲ್ಲದೆ ಪ್ರಕರಣದ ಐದನೇ ಅಪರಾಧಿ ಅಜಯ್ ಸೇಥಿ ದರೋಡೆ ಮಾಡಿದ ಸೊತ್ತು ಪಡೆದ ಅಪರಾಧಕ್ಕೆ ಶಿಕ್ಷೆಗೆ ಗುರಿಯಾಗಿದ್ದಾನೆ. ಸಂಘಟಿತ ಅಪರಾಧ ಮತ್ತು ನಿರಂತರ ಕಾನೂನುಬಾಹಿರ ಚಟುವಟಿಕೆಯ ಹಿಂದಿನ ಒಳಗೊಳ್ಳುವಿಕೆಯ ಆಧಾರದ ಮೇಲೆ ವಿಧಿಸಲಾದ ಮಹಾರಾಷ್ಟ್ರದ ಸಂಘಟಿತ ಅಪರಾಧಗಳ ಕಠಿಣ ನಿಯಂತ್ರಣ ಕಾಯ್ದೆ (MCOCA) ಅಡಿಯಲ್ಲಿ ಸೇಥಿ ಸೇರಿದಂತೆ ಎಲ್ಲಾ ಐವರು ಅಪರಾಧಿಗಳನ್ನು ಶಿಕ್ಷೆಗೆ ಗುರಿಪಡಿಸಲಾಗಿದೆ.

ಸೆಪ್ಟೆಂಬರ್ 30, 2008ರಲ್ಲಿ ಬೆಳಿಗ್ಗೆ 3.25 ರಿಂದ 3.55ರ ನಡುವೆ ದೆಹಲಿಯ ವಸಂತ ವಿಹಾರ್ ಕಡೆಯಿಂದ ವಸಂತ್ ಕುಂಜ್ ಕಡೆಗೆ ಹೋಗುವ ರಸ್ತೆಯಲ್ಲಿ ಅಪರಾಧಿಗಳು ಪತ್ರಕರ್ತೆ ಸೌಮ್ಯಾಳನ್ನು ದರೋಡೆ ಮಾಡುವ ಉದ್ದೇಶದಿಂದ ಗುಂಡು ಹಾರಿಸಿದ್ದರು. ಪ್ರಮುಖ ಇಂಗ್ಲೀಷ್ ನ್ಯೂಸ್ ಚಾನೆಲ್‌ನಲ್ಲಿ ಸೌಮ್ಯಾ ಅವರು ಕೆಲಸ ಮಾಡುತ್ತಿದ್ದರು. ಕೆಲಸ ಮುಗಿಸಿ ಕಾರಿನಲ್ಲಿ ಹಿಂದಿರುಗುತ್ತಿದ್ದಾಗ ಅವರನ್ನು ದಕ್ಷಿಣ ದಿಲ್ಲಿಯ ನೆಲ್ಸನ್ ಮಂಡೇಲಾ ಮಾರ್ಗದಲ್ಲಿ 2008 ಸೆಪ್ಟಂಬರ್ 30ರಂದು ಮುಂಜಾನೆ ಗುಂಡು ಹಾರಿಸಿ ಹತ್ಯೆಗೈಯಲಾಗಿತ್ತು.

ಇದನ್ನು ಓದಿ: ರಾಜಸ್ಥಾನ: ಅತ್ಯಾಚಾರಿಯ ಬಂಧನಕ್ಕೆ ಆಗ್ರಹಿಸಿ ನೀರಿನ ಟ್ಯಾಂಕ್ ಏರಿದ ದಲಿತ ಮಹಿಳೆ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜೂನ್‌ ಅಂತ್ಯದೊಳಗೆ ಜಿಬಿಎ ವ್ಯಾಪ್ತಿಯ ಪಾಲಿಕೆಗಳಿಗೆ ಚುನಾವಣೆ : ಗಡುವು ವಿಧಿಸಿದ ಸುಪ್ರೀಂ ಕೋರ್ಟ್

ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ವ್ಯಾಪ್ತಿಯ ಐದು ನಗರ ಪಾಲಿಕೆಗಳಿಗೆ ಜೂನ್ ಅಂತ್ಯದೊಳಗೆ ಚುನಾವಣೆ ನಡೆಸುವಂತೆ ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಸೋಮವಾರ (ಜ.12) ನಿರ್ದೇಶನ ನೀಡಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಮತ್ತು...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಸುಪ್ರೀಂ ಕೋರ್ಟ್ ನಲ್ಲಿ ಮಮತಾ ವಿರುದ್ಧ ಎಫ್‌ಐಆರ್ ದಾಖಲಿಸಲು ನಿರ್ದೇಶನ ಕೋರಿ ಅರ್ಜಿ ಸಲ್ಲಿಸಿದ ಇಡಿ

ನವದೆಹಲಿ: ಐ-ಪಿಎಸಿ ವಿರುದ್ಧದ ಬಹು-ರಾಜ್ಯ ಹಣ ವರ್ಗಾವಣೆ ಪ್ರಕರಣದಲ್ಲಿ ತನಿಖೆಗೆ ಅಡ್ಡಿಪಡಿಸಿದ, ಸಾಕ್ಷ್ಯಗಳನ್ನು ತಿರುಚಿದ ಮತ್ತು ನಾಶಪಡಿಸಿದ ಆರೋಪದ ಮೇಲೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಡಿಜಿಪಿ ಮತ್ತು ಕೋಲ್ಕತ್ತಾ ಪೊಲೀಸ್...

ಭಾರತಕ್ಕಿಂತ ಯಾವುದೇ ಪಾಲುದಾರ ದೇಶ ಮುಖ್ಯವಲ್ಲ, ವ್ಯಾಪಾರ ಮಾತುಕತೆ ಪುನರಾರಂಭ: ಅಮೆರಿಕ ರಾಯಭಾರಿ ಸೆರ್ಗಿಯೊ ಗೋರ್

"ವಾಷಿಂಗ್ಟನ್‌ಗೆ ಭಾರತಕ್ಕಿಂತ ಅಗತ್ಯವಾದ ದೇಶ ಇನ್ನೊಂದಿಲ್ಲ ಮತ್ತು ಎರಡೂ ಕಡೆಯವರು ವ್ಯಾಪಾರ ಒಪ್ಪಂದವನ್ನು ದೃಢೀಕರಿಸುವಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ" ಎಂದು ಅಮೆರಿಕದ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್ ಸೋಮವಾರ ಹೇಳಿದ್ದಾರೆ. ಅಮೆರಿಕ ರಾಯಭಾರ ಕಚೇರಿಯ ನೌಕರರು...

ಬಿಷಪ್ ಫ್ರಾಂಕೊ ಮುಲಕ್ಕಲ್ ಅತ್ಯಾಚಾರ ಪ್ರಕರಣ : ಒಂಬತ್ತು ವರ್ಷಗಳ ಬಳಿಕ ಮೌನ ಮುರಿದ ಸಂತ್ರಸ್ತೆ, ಕಾನೂನು ಹೋರಾಟ ಮುಂದುವರಿಸುವುದಾಗಿ ಹೇಳಿಕೆ

ಬಿಷಪ್ ಫ್ರಾಂಕೊ ಮುಲಕ್ಕಲ್ ವಿರುದ್ದದ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಕ್ರೈಸ್ತ ಸನ್ಯಾಸಿನಿ ಒಂಬತ್ತು ವರ್ಷಗಳ ನಂತರ ಮೊದಲ ಬಾರಿಗೆ ಸಾರ್ವಜನಿಕವಾಗಿ ಮಾತನಾಡಿದ್ದು, ಫ್ರಾಂಕೊ ಮುಲಕ್ಕಲ್ ಅವರನ್ನು ನ್ಯಾಯಾಲಯ ಖುಲಾಸೆಗೊಳಿಸಿದ್ದಕ್ಕೆ ನಾನು ದಂಗಾಗಿದ್ದೇನೆ. ನ್ಯಾಯಕ್ಕಾಗಿ...

‘ವೆನೆಜುವೆಲಾದ ಹಂಗಾಮಿ ಅಧ್ಯಕ್ಷ’ ಎಂದು ಘೋಷಿಸಿಕೊಂಡ ಡೊನಾಲ್ಡ್ ಟ್ರಂಪ್ 

ಸೋಮವಾರ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಟ್ರುತ್ ಸೋಶಿಯಲ್‌ನಲ್ಲಿ ತಮ್ಮದೇ ಆದ ವಿಕಿಪೀಡಿಯಾ ಪುಟದ ಫೋಟೋವನ್ನು ಪೋಸ್ಟ್ ಮಾಡಿದ್ದಾರೆ, ಅದರಲ್ಲಿ "ವೆನೆಜುವೆಲಾದ ಹಂಗಾಮಿ ಅಧ್ಯಕ್ಷ" ಎಂಬ ಹುದ್ದೆಯನ್ನು ಹೊಂದಿರುವ ಅವರ ಚಿತ್ರವಿದೆ. ಪೋಸ್ಟ್‌ನಲ್ಲಿ ಟ್ರಂಪ್...

ಪೊಲೀಸ್ ತುರ್ತು ವಾಹನದ ಚಾಲಕ ಸೇರಿ ಐವರಿಂದ ಯುವತಿ ಮೇಲೆ ಅತ್ಯಾಚಾರ!

ಪೊಲೀಸ್ ತುರ್ತು ಸೇವೆ (112) ವಾಹನದ ಚಾಲಕ ಸೇರಿದಂತೆ ಐವರು ಪುರುಷರು 19 ವರ್ಷದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಛತ್ತೀಸ್‌ಗಢದ ಕೋರ್ಬಾ ಜಿಲ್ಲೆಯ ಬಂಕಿಮೊಂಗ್ರ ಪ್ರದೇಶದಲ್ಲಿ ನಡೆದಿದೆ. ಜನವರಿ...

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...