Homeಮುಖಪುಟಪತ್ರಕರ್ತೆ ಸೌಮ್ಯ ವಿಶ್ವನಾಥನ್ ಹತ್ಯೆ ಪ್ರಕರಣ: ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ಅಪರಾಧಿಗಳಿಗೆ ಜಾಮೀನು

ಪತ್ರಕರ್ತೆ ಸೌಮ್ಯ ವಿಶ್ವನಾಥನ್ ಹತ್ಯೆ ಪ್ರಕರಣ: ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ಅಪರಾಧಿಗಳಿಗೆ ಜಾಮೀನು

- Advertisement -
- Advertisement -

2008ರಲ್ಲಿ ನಡೆದಿದ್ದ ಟಿವಿ ಪತ್ರಕರ್ತೆ ಸೌಮ್ಯ ವಿಶ್ವನಾಥನ್ ಹತ್ಯೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ನಾಲ್ವರು ಅಪರಾಧಿಗಳಿಗೆ ದೆಹಲಿ ಹೈಕೋರ್ಟ್ ಸೋಮವಾರ ಜಾಮೀನು ಮಂಜೂರು ಮಾಡಿದೆ.

ನ್ಯಾಯಮೂರ್ತಿ ಸುರೇಶ್ ಕುಮಾರ್ ನೇತೃತ್ವದ ಪೀಠವು ಅಪರಾಧಿಗಳಾದ ರವಿ ಕಪೂರ್, ಅಮಿತ್ ಶುಕ್ಲಾ, ಬಲ್ಜೀತ್ ಸಿಂಗ್ ಮಲಿಕ್ ಮತ್ತು ಅಜಯ್ ಕುಮಾರ್ ಅವರ ಶಿಕ್ಷೆಯನ್ನು ಅಮಾನತುಗೊಳಿಸಿದೆ. ಅಪರಾಧ ಮತ್ತು ಶಿಕ್ಷೆಯನ್ನು ಪ್ರಶ್ನಿಸಿದ್ದ ಅವರ ಮೇಲ್ಮನವಿಗಳ ಬಾಕಿ ಇರುವವರೆಗೆ ಶಿಕ್ಷೆಯನ್ನು ಕೋರ್ಟ್‌ ರದ್ದುಪಡಿಸಿದೆ.

ನ್ಯಾಯಮೂರ್ತಿ ಗಿರೀಶ್ ಕತ್ಪಾಲಿಯಾ ಅವರನ್ನೊಳಗೊಂಡ ಪೀಠವು, ನಾಲ್ವರು ಅಪರಾಧಿಗಳು ಈಗಾಗಲೇ 14 ವರ್ಷ ಮತ್ತು 9 ತಿಂಗಳ ಕಾಲ ಶಿಕ್ಷೆಯನ್ನು ಅನುಭವಿಸಿದ್ದಾರೆ ಎಂದು ಗಮನಿಸಿದೆ. ನಾಲ್ವರು ಅಪರಾಧಿಗಳು ತಮ್ಮ ಶಿಕ್ಷೆಯನ್ನು ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ್ದರು.

2008ರಲ್ಲಿ ರಾಷ್ಟ್ರ ರಾಜಧಾನಿಯಲ್ಲಿ ಪತ್ರಕರ್ತೆ ಸೌಮ್ಯ ವಿಶ್ವನಾಥನ್ ಅವರನ್ನು ಗುಂಡಿಕ್ಕಿ ಹತ್ಯೆ ಮಾಡಿದ  ಹದಿನೈದು ವರ್ಷಗಳ ನಂತರ ಕಳೆದ ವರ್ಷ ಅಕ್ಟೋಬರ್ 18ರಂದು ದೆಹಲಿ ನ್ಯಾಯಾಲಯವು ಕೊಲೆ ಪ್ರಕರಣದಲ್ಲಿ ನಾಲ್ವರನ್ನು ಅಪರಾಧಿಗಳೆಂದು ಘೋಷಿಸಿತ್ತು. ಪ್ರಾಸಿಕ್ಯೂಷನ್ ಎಲ್ಲಾ ಸಮಂಜಸವಾದ ಅನುಮಾನಗಳನ್ನು ಮೀರಿ ಅಪರಾಧವನ್ನು ಸರಿಯಾಗಿ ಸಾಬೀತುಪಡಿಸಿದೆ ಎಂದು ಕೋರ್ಟ್‌ ಹೇಳಿದೆ.

ರವಿ ಕಪೂರ್, ಅಮಿತ್ ಶುಕ್ಲಾ, ಅಜಯ್ ಕುಮಾರ್ ಮತ್ತು ಬಲ್ಜೀತ್ ಮಲಿಕ್ ಎಂಬ ನಾಲ್ವರು ಅಪರಾಧಿಗಳ ವಿರುದ್ಧ 302 (ಕೊಲೆ) ಮತ್ತು 34 (ಸಾಮಾನ್ಯ ಉದ್ದೇಶದಿಂದ ಮಾಡಿದ ಅಪರಾಧ)  ಮತ್ತು ಭಾರತೀಯ ದಂಡ ಸಂಹಿತೆಯ ವಿವಿಧ ಸೆಕ್ಸನ್‌ಗಳಡಿಯಲ್ಲಿ ದಾಖಲಿಸಲಾಗಿದ್ದ ಪ್ರಕರಣದಲ್ಲಿ ಅವರಿಗೆ  ಶಿಕ್ಷೆ ವಿಧಿಸಲಾಗಿತ್ತು. ಇದಲ್ಲದೆ ಪ್ರಕರಣದ ಐದನೇ ಅಪರಾಧಿ ಅಜಯ್ ಸೇಥಿ ದರೋಡೆ ಮಾಡಿದ ಸೊತ್ತು ಪಡೆದ ಅಪರಾಧಕ್ಕೆ ಶಿಕ್ಷೆಗೆ ಗುರಿಯಾಗಿದ್ದಾನೆ. ಸಂಘಟಿತ ಅಪರಾಧ ಮತ್ತು ನಿರಂತರ ಕಾನೂನುಬಾಹಿರ ಚಟುವಟಿಕೆಯ ಹಿಂದಿನ ಒಳಗೊಳ್ಳುವಿಕೆಯ ಆಧಾರದ ಮೇಲೆ ವಿಧಿಸಲಾದ ಮಹಾರಾಷ್ಟ್ರದ ಸಂಘಟಿತ ಅಪರಾಧಗಳ ಕಠಿಣ ನಿಯಂತ್ರಣ ಕಾಯ್ದೆ (MCOCA) ಅಡಿಯಲ್ಲಿ ಸೇಥಿ ಸೇರಿದಂತೆ ಎಲ್ಲಾ ಐವರು ಅಪರಾಧಿಗಳನ್ನು ಶಿಕ್ಷೆಗೆ ಗುರಿಪಡಿಸಲಾಗಿದೆ.

ಸೆಪ್ಟೆಂಬರ್ 30, 2008ರಲ್ಲಿ ಬೆಳಿಗ್ಗೆ 3.25 ರಿಂದ 3.55ರ ನಡುವೆ ದೆಹಲಿಯ ವಸಂತ ವಿಹಾರ್ ಕಡೆಯಿಂದ ವಸಂತ್ ಕುಂಜ್ ಕಡೆಗೆ ಹೋಗುವ ರಸ್ತೆಯಲ್ಲಿ ಅಪರಾಧಿಗಳು ಪತ್ರಕರ್ತೆ ಸೌಮ್ಯಾಳನ್ನು ದರೋಡೆ ಮಾಡುವ ಉದ್ದೇಶದಿಂದ ಗುಂಡು ಹಾರಿಸಿದ್ದರು. ಪ್ರಮುಖ ಇಂಗ್ಲೀಷ್ ನ್ಯೂಸ್ ಚಾನೆಲ್‌ನಲ್ಲಿ ಸೌಮ್ಯಾ ಅವರು ಕೆಲಸ ಮಾಡುತ್ತಿದ್ದರು. ಕೆಲಸ ಮುಗಿಸಿ ಕಾರಿನಲ್ಲಿ ಹಿಂದಿರುಗುತ್ತಿದ್ದಾಗ ಅವರನ್ನು ದಕ್ಷಿಣ ದಿಲ್ಲಿಯ ನೆಲ್ಸನ್ ಮಂಡೇಲಾ ಮಾರ್ಗದಲ್ಲಿ 2008 ಸೆಪ್ಟಂಬರ್ 30ರಂದು ಮುಂಜಾನೆ ಗುಂಡು ಹಾರಿಸಿ ಹತ್ಯೆಗೈಯಲಾಗಿತ್ತು.

ಇದನ್ನು ಓದಿ: ರಾಜಸ್ಥಾನ: ಅತ್ಯಾಚಾರಿಯ ಬಂಧನಕ್ಕೆ ಆಗ್ರಹಿಸಿ ನೀರಿನ ಟ್ಯಾಂಕ್ ಏರಿದ ದಲಿತ ಮಹಿಳೆ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

'ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು' ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ...

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...

ಚಲಿಸುತ್ತಿದ್ದ ಸ್ಲೀಪರ್ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : ಚಾಲಕ, ಕಂಡಕ್ಟರ್ ಬಂಧನ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 2012ರಲ್ಲಿ ನಡೆದ ನಿರ್ಭಯಾ ಪ್ರಕರಣವನ್ನು ನೆನಪಿಸುವಂತಹ ಆಘಾತಕಾರಿ ಘಟನೆಯೊಂದು ನಡೆದಿದೆ. ಸ್ಲೀಪರ್‌ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. indiatoday.in ವರದಿಯ ಪ್ರಕಾರ, ಈ ಘಟನೆಯು ಆಗಸ್ಟ್ 4ರ...