Homeಮುಖಪುಟ'ದಿಲ್ಲಿ ಚಲೋ': ಈಡೇರದೆ ಉಳಿದಿರುವ ರೈತರ ಪ್ರಮುಖ ಬೇಡಿಕೆಗಳೇನು?

‘ದಿಲ್ಲಿ ಚಲೋ’: ಈಡೇರದೆ ಉಳಿದಿರುವ ರೈತರ ಪ್ರಮುಖ ಬೇಡಿಕೆಗಳೇನು?

- Advertisement -
- Advertisement -

ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಕೇಂದ್ರ ಸರ್ಕಾರಕ್ಕೆ ಒತ್ತಾಯಿಸಿ ಹಲವು ರಾಜ್ಯಗಳ ರೈತರು ಇಂದು (ಫೆ.13) ‘ದಿಲ್ಲಿ ಚಲೋ’ ಹಮ್ಮಿಕೊಂಡಿದ್ದಾರೆ. ರೈತರ ಬೇಡಿಕೆಗಳಲ್ಲಿ ‘ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆಯನ್ನು (ಎಂಎಸ್‌ಪಿ) ಖಾತರಿಪಡಿಸುವ ಕಾನೂನನ್ನು ಜಾರಿಗೊಳಿಸುವುದು’ ಪ್ರಮುಖವಾಗಿದೆ.

ರೈತರ ಇತರ ಬೇಡಿಕೆಗಳೆಂದರೆ, ವಿದ್ಯುತ್ ಕಾಯ್ದೆ 2020ರ ರದ್ದತಿ, ಲಖಿಂಪುರ ಖೇರಿಯಲ್ಲಿ ಸಾವನ್ನಪ್ಪಿದ ರೈತರಿಗೆ ಪರಿಹಾರ ಮತ್ತು ರೈತ ಚಳವಳಿಯಲ್ಲಿ ತೊಡಗಿರುವವರ ವಿರುದ್ಧದ ಪ್ರಕರಣಗಳನ್ನು ಹಿಂಪಡೆಯುವುದಾಗಿದೆ.

ಸೋಮವಾರ (ಫೆ.12) ಮಧ್ಯರಾತ್ರಿಯವರೆಗೆ ರೈತ ಮುಖಂಡರ ಜೊತೆಗೆ ಚಂಡೀಗಢದಲ್ಲಿ ಕೇಂದ್ರ ಆಹಾರ ಮತ್ತು ಗ್ರಾಹಕ ವ್ಯವಹಾರಗಳ ಸಚಿವ ಪಿಯೂಷ್ ಗೋಯಲ್ ಮತ್ತು ಕೃಷಿ ಸಚಿವ ಅರ್ಜುನ್ ಮುಂಡಾ ಸಭೆ ನಡೆಸಿದ್ದು, ವಿದ್ಯುತ್ ಕಾಯ್ದೆ 2020 ರದ್ದತಿ, ಉತ್ತರ ಪ್ರದೇಶದ ಲಖಿಂಪುರ ಖೇರಿಯಲ್ಲಿ ಮೃತಪಟ್ಟ ರೈತರಿಗೆ ಪರಿಹಾರ ಮತ್ತು ರೈತರ ಚಳವಳಿಯ ಸಂದರ್ಭಗಳಲ್ಲಿ ದಾಖಲಾದ ರೈತರ ಮೇಲಿನ ಪ್ರಕರಣಗಳನ್ನು ಹಿಂಪಡೆಯುವ ಬಗ್ಗೆ ಒಂದು ಒಪ್ಪಂದಕ್ಕೆ ಬಂದಿದ್ದಾರೆ.

ಆದರೆ, ರೈತರ ಮೂರು ಪ್ರಮುಖ ಬೇಡಿಕೆಗಳಾದ ಎಲ್ಲಾ ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆಯನ್ನು ಖಾತರಿಪಡಿಸುವ ಕಾನೂನನ್ನು ಜಾರಿಗೊಳಿಸುವುದು, ರೈತರ ಸಾಲ ಮನ್ನಾ ಮತ್ತು ಸ್ವಾಮಿನಾಥನ್ ಆಯೋಗದ ಶಿಫಾರಸುಗಳ ಅನುಷ್ಠಾನದ ಬಗ್ಗೆ ಯಾವುದೇ ತೀರ್ಮಾನ ಆಗಿಲ್ಲ.

2020-21ರಲ್ಲಿ ಕೇಂದ್ರ ಸರ್ಕಾರದ ಮೂರು ಕೃಷಿ ಕಾನೂನುಗಳ ವಿರುದ್ದ ನಡೆದ ಅಂದೋಲನದ ವೇಳೆ, ರೈತ ಚಳವಳಿಯ ಸಂದರ್ಭಗಳಲ್ಲಿ ದಾಖಲಾದ ರೈತರ ಮೇಲಿನ ಪ್ರಕರಣಗಳನ್ನು ಹಿಂಪಡೆಯುವುದು, ಎಂಎಸ್‌ಪಿ ಕಾನೂನು ಜಾರಿ ಸೇರಿದಂತೆ ಹಲವು ಬೇಡಿಕೆಗಳನ್ನು ಈಡೇರಿಸುವ ಭರವಸೆಯನ್ನು ಸರ್ಕಾರ ನೀಡಿತ್ತು. ನಿನ್ನೆಯ(ಫೆ.12) ಸಭೆಯಲ್ಲಿ ಕೇವಲ ಪ್ರಕರಣಗಳನ್ನು ಹಿಂಪಡೆಯಲು ಸರ್ಕಾರ ಒಪ್ಪಿಕೊಂಡಿದೆ. ಆದರೆ, ರೈತರ ಪ್ರಮುಖ ಬೇಡಿಕೆಯಾದ ಎಂಎಸ್‌ಪಿಯ ಕುರಿತು ಯಾವುದೇ ತೀರ್ಮಾನ ಆಗಿಲ್ಲ. ಹಾಗಾಗಿ, ಹೋರಾಟ ಮುಂದುವರೆಸುವುದಾಗಿ ರೈತರು ಹೇಳಿದ್ದಾರೆ.

ರೈತ ಮುಖಂಡರಾದ ಸಂಯುಕ್ತ ಕಿಸಾನ್ ಮೋರ್ಚಾದ (ರಾಜಕೀಯೇತರ) ಜಗಜಿತ್ ಸಿಂಗ್ ದಲ್ಲೆವಾಲ್ ಮತ್ತು ಕಿಸಾನ್ ಮಜ್ದೂರ್ ಸಂಘರ್ಷ ಸಮಿತಿಯ ಸರ್ವಾನ್ ಸಿಂಗ್ ಪಂಧೇರ್ ಅವರು ಸರ್ಕಾರ ರೈತರ ಬೇಡಿಕೆಗಳನ್ನು ಈಡೇರಿಸುವ ಬಗ್ಗೆ ಸಂದೇಹ ವ್ಯಕ್ತಪಡಿಸಿದ್ದಾರೆ.

ಎಂಎಸ್‌ಪಿ, ಸಾಲಮನ್ನಾ ಮತ್ತು ಸ್ವಾಮಿನಾಥನ್ ಆಯೋಗದ ಶಿಫಾರಸುಗಳ ಅನುಷ್ಠಾನ ಸಂಬಂಧ ಕಾನೂನು ಜಾರಿಗೊಳಿಸುವ ಕುರಿತು ಚರ್ಚಿಸಲು ಸಮಿತಿ ರಚಿಸುವುದಾಗಿ ಸರ್ಕಾರ ಹೇಳುತ್ತಿದೆ. ಆದರೆ, ರೈತ ಪ್ರತಿನಿಧಿಗಳು ಅದಕ್ಕೆ ಒಪ್ಪಿಲ್ಲ.

ನವೆಂಬರ್ 19, 2021ರಂದು, ಪ್ರಧಾನಿ ನರೇಂದ್ರ ಮೋದಿ ಅವರು ಮೂರು ವಿವಾದಾತ್ಮಕ ಕೃಷಿ ಕಾನೂನುಗಳನ್ನು ರದ್ದುಗೊಳಿಸುವ ಘೋಷಣೆ ಮಾಡಿದ್ದರು. ಆ ಮೂಲಕ ದೆಹಲಿಯ ಗಡಿಯಲ್ಲಿ ಹದಿಮೂರು ತಿಂಗಳ ಕಾಲ ಸತತ ಹೋರಾಟ ನಡೆಸಿದ್ದ ರೈತರಿಗೆ ಮಹತ್ವದ ಜಯ ಸಿಕ್ಕಿತ್ತು.

ರೈತರ ಹೋರಾಟದ ವೇಳೆ ಅವರ ಬೇಡಿಕೆಗಳನ್ನು ತುರ್ತಾಗಿ ಈಡೇರಿಸುವುದಾಗಿ ಸರ್ಕಾರ ಹೇಳಿತ್ತು. ಆದರೆ, ಆ ಮಾತಿಗೆ ತಪ್ಪಿದ ಸರ್ಕಾರ ಭರವಸೆ ಕೊಟ್ಟ ಸುಮಾರು 9 ತಿಂಗಳ ನಂತರ ಜುಲೈ 12, 2022 ರಂದು ಸಮಿತಿಯೊಂದನ್ನು ರಚಿಸಿತ್ತು. ಮಾಜಿ ಕೃಷಿ ಕಾರ್ಯದರ್ಶಿ ಸಂಜಯ್ ಅಗರ್ವಾಲ್ ಅವರ ಅಧ್ಯಕ್ಷತೆಯ ಸಮಿತಿಯಲ್ಲಿ ಒಟ್ಟು 29 ಸದಸ್ಯರಿದ್ದು, ನಾಲ್ವರು ಕೇಂದ್ರ ಸರ್ಕಾರದ ಕಾರ್ಯದರ್ಶಿಗಳು ಮತ್ತು ನಾಲ್ವರು ರಾಜ್ಯ ಸರ್ಕಾರ ಪ್ರತಿನಿಧಿಗಳು ಈ ಸಮಿತಿಯಲ್ಲಿದ್ದಾರೆ.

ಕೃಷಿ ಕಾನೂನಗಳ ವಿರುದ್ದ ನಡೆದ ಹೋರಾಟದಲ್ಲಿ ಉತ್ತರ ಪ್ರದೇಶ, ಪಂಜಾಬ್ ಮತ್ತು ಹರಿಯಾಣದ ರೈತರು ಪ್ರಮುಖ ವಹಿಸಿದ್ದರು. ಈ ರಾಜ್ಯಗಳ ರೈತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು. ಆದರೆ, ಸರ್ಕಾರ ರಚಿಸಿದ ಸಮಿತಿಯಲ್ಲಿ ಈ ರಾಜ್ಯಗಳ ಪ್ರತಿನಿಧಿಗಳೇ ಇರಲಿಲ್ಲ. ಅಲ್ಲದೆ, ಕೃಷಿ ಕಾನೂನುಗಳನ್ನು ವಿರೋಧಿಸುವ ಯಾವುದೇ ಅರ್ಥಶಾಸ್ತ್ರಜ್ಞರು ಅಥವಾ ತಜ್ಞರು ಇಲ್ಲದಿರುವುದು ರೈತರಿಗೆ ಕಳವಳ ಉಂಟು ಮಾಡಿದೆ.

ಭೂಸ್ವಾಧೀನ ಕಾಯಿದೆ 2013ರ ಮರುಸ್ಥಾಪನೆ, ವಿಶ್ವ ವ್ಯಾಪಾರ ಸಂಸ್ಥೆಯಿಂದ ಹಿಂದೆ ಸರಿಯುವುದು ಮತ್ತು ಹಿಂದಿನ ಆಂದೋಲನದ ಸಮಯದಲ್ಲಿ ಸಾವನ್ನಪ್ಪಿದ ರೈತರ ಕುಟುಂಬಗಳಿಗೆ ಪರಿಹಾರ ಸೇರಿದಂತೆ ಇತರ ಹಲವು ಬೇಡಿಕೆಗಳನ್ನು ರೈತರು ಸರ್ಕಾರದ ಮುಂದಿಟ್ಟಿದ್ದಾರೆ.

ಪ್ರತಿಭಟನಾ ಮೆರವಣಿಗೆ ಕೈಗೊಂಡಿರುವ ರೈತರು ದೆಹಲಿ ಪ್ರವೇಶಿಸದಂತೆ ತಡೆಯಲು ಪೊಲೀಸರು ಸಾಧ್ಯವಿರುವ ಎಲ್ಲ ಕ್ರಮಗಳನ್ನು ಕೈಗೊಂಡಿದ್ದಾರೆ. ಸಿಂಘು, ಟಿಕ್ರಿ ಮತ್ತು ಗಾಝಿಪುರ ಗಡಿಗಳಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ. ಸಾರ್ವಜನಿಕ ಸಭೆಗಳು ನಡೆಸುವುದಕ್ಕೆ ಮತ್ತು ಟ್ರ್ಯಾಕ್ಟರ್, ಟ್ರಾಲಿಗಳು ನಗರಕ್ಕೆ ಪ್ರವೇಶಿಸದಂತೆ ಪೊಲೀಸರು ಒಂದು ತಿಂಗಳ ಕಾಲ ನಿಷೇಧ ಹೇರಿದ್ದಾರೆ.

ದೆಹಲಿಯಾದ್ಯಂತ ಬೃಹತ್ ಸಭೆಗಳನ್ನು ನಿಷೇಧಿಸಲಾಗಿದೆ. ಹೆಚ್ಚಿನ ರಸ್ತೆಗಳನ್ನು ಕಾಂಕ್ರೀಟ್ ಬ್ಲಾಕ್‌ಗಳು, ಮುಳ್ಳು ತಂತಿಗಳು ಮತ್ತು ಬ್ಯಾರಿಕೇಡ್‌ಗಳಿಂದ ಮುಚ್ಚಲಾಗಿದೆ. ವಾಣಿಜ್ಯ ವಾಹನಗಳ ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ.

ಇದನ್ನೂ ಓದಿ : ಮೆರವಣಿಗೆ ಆರಂಭಿಸಿದ ರೈತರು; ದೆಹಲಿ-ಹರಿಯಾಣ ಗಡಿಯಲ್ಲಿ ಕಂದಕ, ಮುಳ್ಳಿನ ಬೇಲಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನ ಬದಲಿಸಿ ಮನುಸ್ಮೃತಿ ತರಲು SIR ಷಡ್ಯಂತ್ರ: ನಟ ಕಿಶೋರ್

ದೇಶದ ಬಹುಕೋಟಿ ಉದ್ಯಮಿ ಗೌತಮ್ ಅದಾನಿಯದ್ದೇ ಇರಲಿ ಅಥವಾ ಒಬ್ಬ ಬಡ ರೈತನದ್ದೇ ಇರಲಿ, ಪ್ರಜಾಪ್ರಭುತ್ವದಲ್ಲಿ ಎಲ್ಲರ ಮತವೂ ಒಂದೇ ಸಮ. ಪ್ರಜೆಗಳನ್ನೆಲ್ಲ ಸಮಾನವಾಗಿ ಕಾಣುವ ಏಕೈಕ ಅಸ್ತ್ರ ಎಂದರೆ ಅದು ಮತದಾನದ...

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

'ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು' ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ...

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...