Homeಮುಖಪುಟಪಡಿತರ ಅಂಗಡಿಗಳಲ್ಲಿ 'ಮೋದಿ ಸೆಲ್ಫಿ ಪಾಯಿಂಟ್', 'ಫ್ಲೆಕ್ಸ್‌'ಗಳನ್ನು ಹಾಕುವಂತೆ ಸೂಚನೆ: ತಿರಸ್ಕರಿಸಿದ ಕೇರಳ

ಪಡಿತರ ಅಂಗಡಿಗಳಲ್ಲಿ ‘ಮೋದಿ ಸೆಲ್ಫಿ ಪಾಯಿಂಟ್’, ‘ಫ್ಲೆಕ್ಸ್‌’ಗಳನ್ನು ಹಾಕುವಂತೆ ಸೂಚನೆ: ತಿರಸ್ಕರಿಸಿದ ಕೇರಳ

- Advertisement -
- Advertisement -

ಪಡಿತರ ಅಂಗಡಿಗಳಲ್ಲಿ ಪ್ರಧಾನಿ ನರೇಂದ್ರ ಅವರ ಕಟೌಟ್ ಇರುವ ಸೆಲ್ಫಿ ಪಾಯಿಂಟ್‌ಗಳನ್ನು, ಫ್ಲೆಕ್ಸ್‌ಗಳನ್ನು ಮತ್ತು ಬೋರ್ಡ್‌ಗಳನ್ನು ಅಳವಡಿಸುವಂತೆ ಕೇಂದ್ರ ಸರ್ಕಾರ ನಿರ್ದೇಶನವನ್ನು ನೀಡಿದ್ದು, ಇದನ್ನು ಕೇರಳ ಮುಖ್ಯಮಂತ್ರಿ ಮತ್ತು ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾರ್ಕ್ಸ್‌ವಾದಿ) ನಾಯಕ ಪಿಣರಾಯಿ ವಿಜಯನ್ ಅವರು ತಿರಸ್ಕರಿಸಿದ್ದಾರೆ.

ಈ ಕುರಿತು ರಾಜ್ಯ ವಿಧಾನಸಭೆಯಲ್ಲಿ ಮಾಹಿತಿ ನೀಡಿದ ಕೇರಳ ಸಿಎಂ ಪಿಣರಾಯ್‌ ವಿಜಯನ್,  ಇದು ಖಂಡಿತವಾಗಿಯೂ ಲೋಕಸಭೆ ಚುನಾವಣೆಯ ಪ್ರಚಾರದ ಭಾಗವಾಗಿದೆ. ಇದು ಸರಿಯಲ್ಲ ಮತ್ತು ಇದನ್ನು ಕೇರಳದಲ್ಲಿ ಜಾರಿಗೆ ತರುವುದು ಕಷ್ಟ ಎಂದು ನಾವು ಕೇಂದ್ರಕ್ಕೆ ತಿಳಿಸುತ್ತೇವೆ. ಇದನ್ನು ಚುನಾವಣಾ ಆಯೋಗದ ಗಮನಕ್ಕೆ ತರಬಹುದೇ ಎಂದು ನಾವು ಪರಿಶೀಲಿಸುತ್ತೇವೆ ಎಂದು ಹೇಳಿದ್ದಾರೆ.

ಕೇಂದ್ರ  ಸರಕಾರದ ಪಿಎಂ ಗರೀಬ್ ಕಲ್ಯಾಣ್ ಯೋಜನೆ ಅಡಿಯಲ್ಲಿನ ಪಡಿತರ ಅಂಗಡಿಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಕಟೌಟ್ ಇರುವ ಸೆಲ್ಫಿ ಪಾಯಿಂಟ್‌ಗಳನ್ನು ನಿರ್ದೇಶಿಸಲಾಗಿತ್ತು. ಸಾರ್ವಜನಿಕ ವಿತರಣಾ ವ್ಯವಸ್ಥೆ ಮತ್ತು ಪಡಿತರ ಅಂಗಡಿಗಳು ಕೇರಳದಲ್ಲಿ ಬಹಳ ಹಿಂದಿನಿಂದಲೂ ಅಸ್ತಿತ್ವದಲ್ಲಿವೆ. ಆದರೆ ಲೋಕಸಭೆ ಚುನಾವಣೆ ಸಮೀಪಿಸುತ್ತಿರುವ ಸಂದರ್ಭದಲ್ಲಿ ಕೇಂದ್ರ ಸರ್ಕಾರ ಈಗ ಈ ನಿರ್ದೇಶನವನ್ನು ನೀಡಿದೆ, ಖಂಡಿತವಾಗಿಯೂ ಇದನ್ನು ಪ್ರಚಾರಕ್ಕಾಗಿ ಬಳಸಿಕೊಳ್ಳುವ ಉದ್ದೇಶದಿಂದ ನೀಡಿರುವುದಾಗಿದೆ. ನಾವು ಈ ನಿರ್ದೇಶನವನ್ನು ಜಾರಿಗೊಳಿಸುವುದಿಲ್ಲ ಎಂದು ಪಿಣರಾಯ್‌ ವಿಜಯನ್ ಹೇಳಿದ್ದಾರೆ.

ಇದಕ್ಕೂ ಮುನ್ನ 10,000 ಪಡಿತರ ಅಂಗಡಿಗಳಲ್ಲಿ ಮೋದಿ ಇರುವ ಫ್ಲೆಕ್ಸ್ ಬೋರ್ಡ್‌ಗಳನ್ನು ಅಳವಡಿಸಿ ವರದಿ ಸಲ್ಲಿಸುವಂತೆ ಭಾರತೀಯ ಆಹಾರ ನಿಗಮ (ಎಫ್‌ಸಿಐ) ಮತ್ತು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಗೆ ಕೇಂದ್ರ ಸರ್ಕಾರ ಸೂಚಿಸಿದೆ ಎಂದು  ಕೇರಳದ ನಾಗರಿಕ ಮತ್ತು ಸರಬರಾಜು ಖಾತೆ ಸಚಿವ ಜಿ.ಆರ್‌ ಅನಿಲ್ ಸದನಕ್ಕೆ ತಿಳಿಸಿದ್ದಾರೆ. 550 ಪಡಿತರ ಅಂಗಡಿಗಳಲ್ಲಿ ಪ್ರಧಾನಿಯವರ ಸೆಲ್ಫಿ ಪಾಯಿಂಟ್‌ಗಳನ್ನು ಸ್ಥಾಪಿಸುವಂತೆಯೂ ನಿರ್ದೇಶನ ನೀಡಿದೆ ಇದಲ್ಲದೆ ಕೇಂದ್ರ ಸರ್ಕಾರದ ಬ್ರ್ಯಾಂಡಿಂಗ್ ಹೊಂದಿರುವ ಕ್ಯಾರಿ ಬ್ಯಾಗ್‌ಗಳನ್ನು ಸಹ ಗ್ರಾಹಕರಿಗೆ ಒದಗಿಸುವಂತೆ ಸೂಚಿಸಲಾಗಿದೆ ಎಂದು ಹೇಳಿದ್ದಾರೆ.

ಲೋಕಸಭೆ ಚುನಾವಣೆ ಸಮೀಪಿಸುತ್ತಿದ್ದಂತೆ ಕೇಂದ್ರ ಸರ್ಕಾರದ ಪ್ರಚಾರದ ಭಾಗದಲ್ಲಿ ‘ಸೆಲ್ಫಿ ಪಾಯಿಂಟ್‌ಗಳು’ ದೊಡ್ಡ ಭಾಗವಾಗಿದೆ. ಅವುಗಳನ್ನು ಸಾರ್ವಜನಿಕ ಸ್ಥಳಗಳು, ರೈಲು ನಿಲ್ದಾಣಗಳು, ಶಿಕ್ಷಣ ಸಂಸ್ಥೆಗಳು ಇತ್ಯಾದಿಗಳಲ್ಲಿ ಇರಿಸುವಂತೆ ಈ ಮೊದಲು ನಿರ್ದೇಶನವನ್ನು ನೀಡಲಾಗಿತ್ತು. ಇವೆಲ್ಲವನ್ನೂ ಸಾರ್ವಜನಿಕರ ತೆರಿಗೆ ಹಣದಿಂದ ನಿರ್ಮಿಸಲಾಗುತ್ತಿದೆ. ಇತ್ತೀಚೆಗೆ ವಿಶ್ವವಿದ್ಯಾನಿಲಯಗಳಲ್ಲಿ ಮೋದಿ ಸೆಲ್ಫಿ ಪಾಯಿಂಟ್‌ಗಳ ನಿರ್ಮಾಣಕ್ಕೆ ಆದೇಶ ಕೊಟ್ಟಿರುವುದು ವಿವಾದಕ್ಕೆ ಕಾರಣವಾಗಿತ್ತು. ಆ ಬಳಿಕ ರೈಲ್ವೇ ನಿಲ್ದಾಣಗಳಲ್ಲಿ ಸಾರ್ವಜನಿಕರ ವೆಚ್ಚದಲ್ಲಿ ಮೋದಿಯ ಪೋಟೋ ಇರುವಂತೆ ಸೆಲ್ಫಿ ಪಾಯಿಂಟ್‌ಗಳನ್ನು ನಿರ್ಮಿಸಲಾಗಿದೆ ಎನ್ನವುದು ಆರ್‌ಟಿಐ ಮಾಹಿತಿಯಿಂದ ಬಯಲಾಗಿತ್ತು. ಮೋದಿ ಸಾರ್ವಜನಿಕರ ತೆರಿಗೆ ಹಣವನ್ನು ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ ಎಂದು ಪ್ರತಿಪಕ್ಷಗಳು ಟೀಕಿಸಿದ್ದವು.

ಇದನ್ನು ಓದಿ: ಪತ್ರಕರ್ತೆ ಸೌಮ್ಯ ವಿಶ್ವನಾಥನ್ ಹತ್ಯೆ ಪ್ರಕರಣ: ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ಅಪರಾಧಿಗಳಿಗೆ ಜಾಮೀನು

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

'ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು' ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ...

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...

ಚಲಿಸುತ್ತಿದ್ದ ಸ್ಲೀಪರ್ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : ಚಾಲಕ, ಕಂಡಕ್ಟರ್ ಬಂಧನ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 2012ರಲ್ಲಿ ನಡೆದ ನಿರ್ಭಯಾ ಪ್ರಕರಣವನ್ನು ನೆನಪಿಸುವಂತಹ ಆಘಾತಕಾರಿ ಘಟನೆಯೊಂದು ನಡೆದಿದೆ. ಸ್ಲೀಪರ್‌ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. indiatoday.in ವರದಿಯ ಪ್ರಕಾರ, ಈ ಘಟನೆಯು ಆಗಸ್ಟ್ 4ರ...