Homeಮುಖಪುಟತಮಿಳುನಾಡು: ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ ಸೆಂಥಿಲ್ ಬಾಲಾಜಿ

ತಮಿಳುನಾಡು: ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ ಸೆಂಥಿಲ್ ಬಾಲಾಜಿ

- Advertisement -
- Advertisement -

ಎಐಎಡಿಎಂಕೆ ಸರ್ಕಾರದಲ್ಲಿನ ಉದ್ಯೋಗಕ್ಕಾಗಿ ನಗದು ಹಗರಣದಲ್ಲಿ ಆರೋಪಿಯಾಗಿರುವ ಮಾಜಿ ಕ್ಯಾಬಿನೆಟ್ ಸಚಿವ ವಿ. ಸೆಂಥಿಲ್ ಬಾಲಾಜಿ ಫೆಬ್ರವರಿ 12ರಂದು ತಮ್ಮ ಡಿಎಂಕೆ ಸರ್ಕಾರದ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ತನ್ನ ಬಂಧನದಿಂದ ಸುಮಾರು ಒಂಬತ್ತು ತಿಂಗಳ ನಂತರ ಕೊನೆಗೂ ಸೆಂಥಿಲ್ ಬಾಲಾಜಿ ರಾಜೀನಾಮೆ ಸಲ್ಲಿಸಿದ್ದು, ಸ್ಟಾಲಿನ್ ಸಂಪುಟದಲ್ಲಿ ವಿದ್ಯುತ್, ಅಸಾಂಪ್ರದಾಯಿಕ ಇಂಧನ ನಿಷೇಧದ ಉಸ್ತುವಾರಿ ವಹಿಸಿದ್ದ ಅವರನ್ನು ಜೂನ್ 14, 2023 ರಂದು ಜಾರಿ ನಿರ್ದೇಶನಾಲಯ (ಇಡಿ) ಬಂಧಿಸಿತ್ತು. ನಂತರವೂ ಅವರು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಅವರ ಸಂಪುಟದಲ್ಲಿ ಖಾತೆಯಿಲ್ಲದ ಸಚಿವರಾಗಿ ಮುಂದುವರಿದಿದ್ದರು.

ಹಿಂದಿನ ಎಐಎಡಿಎಂಕೆ ಸರ್ಕಾರದಲ್ಲಿ ರಾಜ್ಯ ಸಾರಿಗೆ ಇಲಾಖೆಯಲ್ಲಿ ನಡೆದಿದೆ ಎನ್ನಲಾದ ಉದ್ಯೋಗಕ್ಕಾಗಿ ನಗದು ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಸೆಂಥಿಲ್ ಬಾಲಾಜಿ ಅವರನ್ನು ಬಂಧಿಸಲಾಗಿತ್ತು. ಇದಕ್ಕೂ ಮುನ್ನ ಜನವರಿ 30 ರಂದು ಮದ್ರಾಸ್ ಹೈಕೋರ್ಟ್ ಸೆಂಥಿಲ್ ಬಾಲಾಜಿ 230 ದಿನಗಳಿಗಿಂತ ಹೆಚ್ಚು ಕಾಲ ಬಂಧನದಲ್ಲಿದ್ದರೂ ಸಚಿವ ಸ್ಥಾನವನ್ನು ಏಕೆ ಮುಂದುವರಿಸಿದ್ದಾರೆ ಎಂದು ಪ್ರಶ್ನಿಸಿತ್ತು.

ಉದ್ಯೋಗಕ್ಕಾಗಿ ನಗದು ಹಗರಣದಲ್ಲಿ ಮನಿ ಲಾಂಡರಿಂಗ್ ಪ್ರಕರಣದಲ್ಲಿ ಸೆಂಥಿಲ್ ಬಾಲಾಜಿ ಅವರನ್ನು ಜೂನ್ 2023 ರಲ್ಲಿ ಇಡಿ ಬಂಧಿಸಿತ್ತು. ಚೆನ್ನೈ ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯವು ಮಾಜಿ ಸಚಿವರ ಜಾಮೀನು ಅರ್ಜಿಯನ್ನು ಜನವರಿ 12 ರಂದು ಮೂರನೇ ಬಾರಿಗೆ ತಿರಸ್ಕರಿಸಿತು. ಅವರ ಜಾಮೀನು ಅರ್ಜಿಯನ್ನು ಈ ಹಿಂದೆ ಎರಡು ಬಾರಿ ವಜಾಗೊಳಿಸಲಾಗಿತ್ತು. ಸೆಪ್ಟೆಂಬರ್ 2023 ಮತ್ತು ಜೂನ್ 2023 ರಲ್ಲಿ ಜಿಲ್ಲಾ ಸೆಷನ್ಸ್ ನ್ಯಾಯಾಲಯವು, ಅವರ ವಿರುದ್ಧದ ಆರೋಪಗಳು ವರ್ಗಬದ್ಧ ಎಂದು ಹೇಳಿ, ಬಾಲಾಜಿ ವಿರುದ್ಧದ ಅಪರಾಧದ ಆರೋಪದಲ್ಲಿ ಅವರು “ನಿರ್ದಿಷ್ಟ ಪಾತ್ರವನ್ನು” ಹೊಂದಿದ್ದಾರೆ ಎಂದು ಹೇಳಿತ್ತು. ಮದ್ರಾಸ್ ಹೈಕೋರ್ಟ್ ಮತ್ತು ಸುಪ್ರೀಂ ಕೋರ್ಟ್ ತಲಾ ಒಂದು ಬಾರಿ ವೈದ್ಯಕೀಯ ಕಾರಣಗಳಿಗಾಗಿ ಜಾಮೀನು ನಿರಾಕರಿಸಿತು.

ಸೆಂಥಿಲ್ ಬಾಲಾಜಿ ಮನೆ ಮೇಲೆ ಇಡಿ ದಾಳಿ ನಡೆಸಿದ ನಂತರ ಅವರಿಗೆ ಎದೆನೋವು ಕಾಣಿಸಿಕೊಂಡಿತ್ತು. ಚಿಕಿತ್ಸೆ ನಂತರ ಜೂನ್‌ನಲ್ಲಿ ಅವರನ್ನು ಬಂಧಿಸಿದ್ದರು. ಚೆನ್ನೈನ ಓಮಂಡೂರ್ ಸರ್ಕಾರಿ ಆಸ್ಪತ್ರೆಯಲ್ಲಿ ಅವರ ಹೃದಯದಲ್ಲಿ ಮೂರು ಬ್ಲಾಕ್‌ಗಳನ್ನು ಪತ್ತೆಹಚ್ಚಿದ ವೈದ್ಯರು, ಆಂಜಿಯೋಗ್ರಾಮ್ ಅನ್ನು ನಡೆಸಿದ್ದರು. ಖಾಸಗಿ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆ ಮಾಡಿಸಿಕೊಳ್ಳಲು ಮದ್ರಾಸ್ ಹೈಕೋರ್ಟ್ ಅನುಮತಿ ನೀಡಿತ್ತು. ಅವರನ್ನು ಚೆನ್ನೈನ ಕಾವೇರಿ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆಗೆ ಒಳಪಡಿಸಲಾಯಿತು. ನಂತರ ಅವರನ್ನು ಪುಝಲ್ ಕೇಂದ್ರ ಕಾರಾಗೃಹಕ್ಕೆ ಸ್ಥಳಾಂತರಿಸಲಾಯಿತು.

ಸಿಎಂ ಸ್ಟಾಲಿನ್ ಸೇರಿದಂತೆ ಹಲವಾರು ಡಿಎಂಕೆ ಪಕ್ಷದ ಕಾರ್ಯಕರ್ತರು ಇಡಿ ಕ್ರಮಗಳು ರಾಜಕೀಯ ಕಿರುಕುಳಕ್ಕೆ ಸಮಾನವಾಗಿದೆ ಎಂದು ಆರೋಪ ಮಾಡಿದ್ದಾರೆ. ತಮಿಳುನಾಡಿನ ಡಿಎಂಕೆಯಂತಹ ಎದುರಾಳಿ ಪಕ್ಷಗಳ ವಿರುದ್ಧ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಸೇಡು ತೀರಿಸಿಕೊಳ್ಳಲಾಗಿದೆ ಎಂದು ಖಂಡಿಸಿದರು.

ಇದನ್ನೂ ಓದಿ; ರೈತರನ್ನು ಬಂಧಿಸಿಡಲು ಕ್ರೀಡಾಂಗಣಕ್ಕೆ ಬೇಡಿಕೆ ಇಟ್ಟ ಕೇಂದ್ರ; ನಿರಾಕರಿಸಿದ ಆಪ್ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...