Homeಮುಖಪುಟ'ಪಂಜಾಬ್-ಹರಿಯಾಣ ಗಡಿ 'ಅಂತಾರಾಷ್ಟ್ರೀಯ ಗಡಿ'ಯಂತಾಗಿದೆ..': ಕೇಂದ್ರದ ವಿರುದ್ಧ ರೈತರ ಆಕ್ರೋಶ

‘ಪಂಜಾಬ್-ಹರಿಯಾಣ ಗಡಿ ‘ಅಂತಾರಾಷ್ಟ್ರೀಯ ಗಡಿ’ಯಂತಾಗಿದೆ..’: ಕೇಂದ್ರದ ವಿರುದ್ಧ ರೈತರ ಆಕ್ರೋಶ

- Advertisement -
- Advertisement -

ರೈತರು ತಮ್ಮ ‘ಚಲೋ ದೆಹಲಿ’ ಮೆರವಣಿಗೆಯನ್ನು ಪ್ರಾರಂಭಿಸುತ್ತಿದ್ದಂತೆ, ಪಂಜಾಬ್ ಕಿಸಾನ್ ಮಜ್ದೂರ್ ಸಂಘರ್ಷ್ ಸಮಿತಿಯ ಪ್ರಧಾನ ಕಾರ್ಯದರ್ಶಿ ಮತ್ತು ಕಿಸಾನ್ ಮಜ್ದೂರ್ ಮೋರ್ಚಾ (ಕೆಎಂಎಂ) ನಾಯಕ ಸರ್ವಾನ್ ಸಿಂಗ್ ಪಂಧೇರ್, ಮೋದಿ ಸರ್ಕಾರವು ರೈತರನ್ನು ಹಿಂಸಿಸುತ್ತಿದೆ ಎಂದು ಆಕ್ರೋಶ ಹೊರಹಾಕಿದ್ದಾರೆ.

ದಿಲ್ಲಿಯ ಗಡಿಯಲ್ಲಿ ಕಾಂಕ್ರೀಟ್ ಬ್ಯಾರಿಕೇಡ್‌ಗಳು, ಮುಳ್ಳುತಂತಿಗಳು, ಟೈರ್ ಬಸ್ಟರ್‌ಗಳನ್ನು ಹಾಕಲಾಗಿದ್ದು, ರಾಷ್ಟ್ರ ರಾಜಧಾನಿಗೆ ರೈತರ ಸಂಚಾರಕ್ಕೆ ಅಡ್ಡಿಯಾಗಿದೆ.

ಮಾಧ್ಯಮಗಳೊಂದಿಗೆ ಮಾತನಾಡಿದ ಪಂಧೇರ್, ‘ಪಂಜಾಬ್ ಮತ್ತು ಹರಿಯಾಣದ ರೈತರಿಗೆ ಚಿತ್ರಹಿಂಸೆ ನೀಡಲಾಗುತ್ತಿದೆ. ಈ ಎರಡೂ ರಾಜ್ಯಗಳು ಇನ್ನು ಮುಂದೆ ಭಾರತದ ಭಾಗವಾಗಿಲ್ಲ, ಅವರನ್ನು ಅಂತರರಾಷ್ಟ್ರೀಯ ಗಡಿ ಎಂದು ಪರಿಗಣಿಸಲಾಗುತ್ತಿದೆ’ ಎಂದು ಕಿಡಿಕಾರಿದರು.

‘ನಾವು ರಸ್ತೆಗಳನ್ನು ನಿರ್ಬಂಧಿಸುತ್ತೇವೆ ಎಂದು ಹೇಳುತ್ತಿಲ್ಲ; ಕಳೆದ ಎರಡು-ಮೂರು ದಿನಗಳಿಂದ ಸರ್ಕಾರವೇ ರಸ್ತೆಗಳನ್ನು ನಿರ್ಬಂಧಿಸಿದೆ. ನಾವು ಆಹಾರಧಾನ್ಯಗಳನ್ನು ಬೆಳೆಯುತ್ತಿರುವ ನಾವು ದೇಶವನ್ನು ಪೋಷಿಸುತ್ತೇವೆ. ಆದರೆ ಅವರು ನಮಗಾಗಿ ರಸ್ತೆಗಳಲ್ಲಿ ಮೊಳೆಗಳ ಬೆಳೆಯನ್ನು ಬೆಳೆಸಿದ್ದಾರೆ” ಎಂದು ಪಂಧೇರ್ ಹೇಳಿದರು.

ಹರ್ಯಾಣ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಪಂಧೇರ್, ‘ಹರಿಯಾಣವನ್ನು “ಕಾಶ್ಮೀರ ಕಣಿವೆ”ಯಾಗಿ ಪರಿವರ್ತಿಸಲಾಗಿದೆ’ ಎಂದು ಅವರು ಹೇಳಿದರು.

ಸೋಮವಾರ ಕೇಂದ್ರ ಸಚಿವರಾದ ಅರ್ಜುನ್ ಮುಂಡಾ ಮತ್ತು ಪಿಯೂಷ್ ಗೋಯಲ್ ರೈತರನ್ನು ಭೇಟಿಯಾಗಿ ಅವರ ಪರಿಸ್ಥಿತಿಯನ್ನು ಚರ್ಚಿಸಿದರು. ಆದರೆ, ಸಭೆ ನಂತರದಲ್ಲಿ ರೈತರು ಅತೃಪ್ತರಾಗಿದ್ದು, ಮೆರವಣಿಗೆಯನ್ನು ಮುಂದುವರಿಸಲು ನಿರ್ಧರಿಸಿದರು. ‘ನಾವು ನಿನ್ನೆಯ ಸಭೆಯಲ್ಲಿ ಸಮಸ್ಯೆಯನ್ನು ಪರಿಹರಿಸಲು ನಮ್ಮ ಅತ್ಯುತ್ತಮ ಪ್ರಯತ್ನವನ್ನು ಮಾಡಿದ್ದೇವೆ.  ಕೇಂದ್ರ ಸರ್ಕಾರದೊಂದಿಗೆ ಘರ್ಷಣೆಯನ್ನು ತಪ್ಪಿಸಲು ನಾವು ಐದು ಗಂಟೆಗಳ ಕಾಲ ಸಭೆಯಲ್ಲಿ ಭಾಗವಹಿಸಿದ್ದೇವೆ’ ಎಂದು ಪಂಧರ್ ಅವರು ಸಭೆಯ ಕುರಿತು ಮಾತನಾಡುತ್ತಾ ಹೇಳಿದರು.

ರೈತರ ಬೇಡಿಕೆಗಳು ’75 ವರ್ಷಗಳಿಂದ ಬಗೆಹರಿಯದೆ ಉಳಿದಿವೆ; ಈ ದೇಶದಲ್ಲಿ ರೈತರನ್ನು ‘ದೇಶವಿರೋಧಿ’ ಎಂದು ಪರಿಗಣಿಸುವುದು ದುರದೃಷ್ಟಕರ. ನಾವು ಈ ದೇಶದ ಪ್ರಜೆಗಳು ಮತ್ತು ನಾವು ನಮ್ಮ ಬೇಡಿಕೆಗಳನ್ನು ಮುಂದುವರಿಸುತ್ತೇವೆ’ ಎಂದು ಪಂಧೇರ್ ಹೇಳಿದ್ದಾರೆ.

ರೈತರ ಪ್ರತಿಭಟನೆಯ ಹಿನ್ನೆಲೆಯಲ್ಲಿ ದೆಹಲಿ ಗಡಿಯಲ್ಲಿ ಒಂದು ತಿಂಗಳ ಕಾಲ ಸೆಕ್ಷನ್ 144 ಅನ್ನು ವಿಧಿಸಲಾಗಿದೆ ಮತ್ತು ಹರಿಯಾಣ ಕ್ರೀಡಾಂಗಣಗಳನ್ನು ತಾತ್ಕಾಲಿಕ ಜೈಲುಗಳಾಗಿ ಪರಿವರ್ತಿಸಲಾಗಿದೆ. ರೈತರನ್ನು ಬಂಧಿಸಲು ಪೊಲೀಸರು ಸಿದ್ಧತೆ ಮಾಡಿಕೊಂಡಿದ್ದಾರೆ.

ಇದನ್ನೂ ಓದಿ; ರೈತರನ್ನು ಬಂಧಿಸಿಡಲು ಕ್ರೀಡಾಂಗಣಕ್ಕೆ ಬೇಡಿಕೆ ಇಟ್ಟ ಕೇಂದ್ರ; ನಿರಾಕರಿಸಿದ ಆಪ್ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

'ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು' ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ...

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...

ಚಲಿಸುತ್ತಿದ್ದ ಸ್ಲೀಪರ್ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : ಚಾಲಕ, ಕಂಡಕ್ಟರ್ ಬಂಧನ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 2012ರಲ್ಲಿ ನಡೆದ ನಿರ್ಭಯಾ ಪ್ರಕರಣವನ್ನು ನೆನಪಿಸುವಂತಹ ಆಘಾತಕಾರಿ ಘಟನೆಯೊಂದು ನಡೆದಿದೆ. ಸ್ಲೀಪರ್‌ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. indiatoday.in ವರದಿಯ ಪ್ರಕಾರ, ಈ ಘಟನೆಯು ಆಗಸ್ಟ್ 4ರ...