Homeಫ್ಯಾಕ್ಟ್‌ಚೆಕ್Fact Check: 'ದಿಲ್ಲಿ ಚಲೋ'ಗೆ ರೈತರು ಒಂದೂವರೆ ಕೋಟಿ ರೂ. ಬೆಲೆಯ ಜೀಪ್‌ನಲ್ಲಿ ಬಂದಿದ್ದಾರೆ ಎಂಬುವುದು...

Fact Check: ‘ದಿಲ್ಲಿ ಚಲೋ’ಗೆ ರೈತರು ಒಂದೂವರೆ ಕೋಟಿ ರೂ. ಬೆಲೆಯ ಜೀಪ್‌ನಲ್ಲಿ ಬಂದಿದ್ದಾರೆ ಎಂಬುವುದು ಸುಳ್ಳು

- Advertisement -
- Advertisement -

ಡಿಸೆಂಬರ್ 2020ರಲ್ಲಿ ಕೇಂದ್ರದ ಕೃಷಿ ಕಾನೂನುಗಳ ವಿರುದ್ದ ರೈತರು ಹೋರಾಟ ನಡೆಸುತ್ತಿದ್ದ ಸಂದರ್ಭ ಮರ್ಸಿಡಿಸ್ ಬೆಂಝ್ ಜೀಪಿನ ಮೇಲೆ ಸಿಕ್ಕ್ ಸಮುದಾಯದ ಕೆಲ ವ್ಯಕ್ತಿಗಳು ಕುಳಿತು ಪತ್ರಿಕೆ ಓದುತ್ತಿದ್ದ ಫೋಟೋ ಒಂದು ಭಾರೀ ವೈರಲ್ ಆಗಿತ್ತು.

ಹಲವರು ಸಾಮಾಜಿಕ ಜಾಲತಾಣಗಳಲ್ಲಿ ಆ ಫೋಟೋ ಹಂಚಿಕೊಂಡು ‘ದೆಹಲಿಯ ಸಿಂಘು ಗಡಿಯಲ್ಲಿ ಪ್ರತಿಭಟನೆ ನಡೆಸುತ್ತಿರುವ ಬಡ ರೈತರ ಜೀಪ್ ನೋಡಿ, 1.5 ಕೋಟಿ ರೂಪಾಯಿ ಬೆಲೆಯದ್ದು’ ಎಂದು ಬರೆದುಕೊಂಡಿದ್ದರು. ಈ ಮೂಲಕ ದೆಹಲಿ ಗಡಿಯಲ್ಲಿ ಹೋರಾಟ ನಡೆಸುತ್ತಿರುವವರು ರೈತರೇ ಅಲ್ಲ ಎಂದು ಪ್ರತಿಪಾದಿಸಿದ್ದರು.

ಅಂದು ವೈರಲ್ ಫೋಟೋವನ್ನು ಎಕ್ಸ್ ಬಳಕೆದಾರ @nishant_india ಅವರು ಹಂಚಿಕೊಂಡಿದ್ದರು. ಇವರನ್ನು ಪ್ರಧಾನಿ ನರೇಂದ್ರ ಮೋದಿ ಎಕ್ಸ್‌ನಲ್ಲಿ ಫಾಲೋ ಮಾಡುತ್ತಿದ್ದಾರೆ. ರಾಜಾ ರಾಮಮೋಹನ್ ರಾಯ್ ಲೈಬ್ರರಿ ಫೌಂಡೇಶನ್ ಅಧ್ಯಕ್ಷ ಕಾಂಚನ್ ಗುಪ್ತಾ (@KanchanGupta) ಅಂಕಣಕಾರ ಕಾರ್ತಿಕೇಯ ತನ್ನಾ(@KartikeyaTanna) ಕೂಡ ಫೊಟೋ ಶೇರ್ ಮಾಡಿದ್ದರು.

ಈಗ ಮತ್ತೆ ವಿವಿಧ ರಾಜ್ಯಗಳ ರೈತರು ತಮ್ಮ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ‘ದಿಲ್ಲಿ ಚಲೋ’ ಹಮ್ಮಿಕೊಂಡಿದ್ದಾರೆ. ಹಾಗಾಗಿ, ಅದೇ ಹಳೆಯ ಫೋಟೋ ಮತ್ತೆ ವೈರಲ್ ಆಗಿದೆ. ಈ ಬಾರಿಯೂ 1.5 ಕೋಟಿ ಬೆಲೆಯ ಮರ್ಸಿಡಿಸ್ ಬೆಂಝ್ ಜೀಪ್ ರೈತರದ್ದು ಎಂದು ಹೇಳಲಾಗಿದೆ.

ಫ್ಯಾಕ್ಟ್‌ ಚೆಕ್ : ರೈತ ಹೋರಾಟದ ಸಂದರ್ಭದಲ್ಲೇ ಮತ್ತೊಮ್ಮೆ ಮುನ್ನೆಲೆಗೆ ಬಂದಿರುವ ಹಳೆಯ ಫೋಟೋದ ಬಗ್ಗೆ ಖ್ಯಾತ ಫ್ಯಾಕ್ಟ್‌ ಚೆಕ್ ವೆಬ್‌ಸೈಟ್‌ ಆಲ್ಟ್‌ ನ್ಯೂಸ್‌ 2020ರಲ್ಲೇ ಸತ್ಯಾಸತ್ಯತೆ ಪರಿಶೀಲನೆ ನಡೆಸಿತ್ತು.

ಆಲ್ಟ್ ನ್ಯೂಸ್‌ ಪ್ರಕಾರ, ಈ ಜೀಪ್ ಪಂಜಾಬ್‌ನ ಉದ್ಯಮಿ ಮನ್‌ಪ್ರೀತ್ ಸಿಂಗ್ ಎಂಬವರಿಗೆ ಸೇರಿದ್ದಾಗಿದೆ. ವಾಹನದ ನೋಂದಣಿ ಸಂಖ್ಯೆ PB 12Z 8282 ಎಂದಾಗಿದ್ದು, ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವಾಲಯದ ಪೋರ್ಟಲ್ ‘ವಾಹನ್‌’ನಲ್ಲಿ ಜೀಪ್‌ನ RTO ವಿವರಗಳನ್ನು ಪರಿಶೀಲಿಸಿದಾಗ, ‘ಈ ವಾಹನವು ಫೋರ್ಸ್ ಮೋಟಾರ್ಸ್‌ನ ಎಸ್‌ಯುವಿ ಗೂರ್ಖಾ ಆಗಿದೆ. ಫೋರ್ಸ್ ಗೂರ್ಖಾ ವೆಬ್‌ಸೈಟ್ ಪ್ರಕಾರ, ಕಾರಿನ ಆವೃತ್ತಿಯು 2.6/4×2 ಆಗಿದ್ದು, ಇವುಗಳು ಎರಡು ಮಾಡೆಲ್‌ಗಳನ್ನು ಹೊಂದಿವೆ. ಇದರ ಬೆಲೆ 9.75 ರಿಂದ 10 ಲಕ್ಷ ರೂ. ಆಗಿದೆ.

2017 ರಲ್ಲಿ, CNN News18 ಈ ಜೀಪ್ ಕುರಿತು ವರದಿ ಮಾಡಿದ್ದು, ‘ಕಲರ್ ಗ್ಲೋ ಕೇರಳ ಕಾರು ಮೋಡಿಫೈಯರ್’ ಎಂಬ ಸಂಸ್ಥೆ ಫೋರ್ಸ್ ಗೂರ್ಖಾ ಎಸ್‌ಯುವಿ ಕಾರನ್ನು ಥೇಟ್ ಮರ್ಸಿಡಿಸ್ ಜಿ ವ್ಯಾಗನ್‌ ಜೀಪ್ ರೀತಿ ಕಾಣುವಂತೆ ಮಾರ್ಪಡಿಸಿದೆ. ಇದರ ಮಾರ್ಪಾಡು ವೆಚ್ಚ ಆ ಸಮಯದಲ್ಲಿ 8.5 ಲಕ್ಷ ರೂ. ಎಂದು CNN News 18 ಹೇಳಿತ್ತು.

CNN News18 ಸುದ್ದಿ ಲಿಂಕ್ ಇಲ್ಲಿದೆ 

ಮಾರ್ಪಾಡು ಮಾಡಲಾದ ಕಾರಿನ ಮಾಲೀಕ ಪಂಜಾಬ್‌ನ ಆನಂದಪುರದ ನಿವಾಸಿ ಮನ್‌ಪ್ರೀತ್ ಸಿಂಗ್ ಅವರೊಂದಿಗೆ ನಾವು ಮಾತನಾಡಿದ್ದು ಅವರು, ನಾನೋರ್ವ ಉದ್ಯಮಿ. ನನ್ನ ಕುಟುಂಬ ಸದಸ್ಯರು ಕೃಷಿಕರು. ಕೃಷಿ ಕಾನೂನುಗಳ ವಿರುದ್ದ ನಡೆಯುತ್ತಿರುವ ಹೋರಾಟಕ್ಕೆ ಬೆಂಬಲ ಸೂಚಿಸುವ ಸಲುವಾಗಿ ಡಿಸೆಂಬರ್ 5 ರಂದು ನಾನು ನನ್ನ ಜೀಪ್‌ನೊಂದಿಗೆ ಹೋರಾಟದ ಸ್ಥಳಕ್ಕೆ ಭೇಟಿ ನೀಡಿದ್ದೆ. ರೈತರನ್ನು ಬೆಂಬಲಿಸಲು ಎಲ್ಲಾ ವರ್ಗಗಳ ಜನರು ಗಡಿಯಲ್ಲಿದ್ದಾರೆ. ವೈರಲ್ ಆಗಿರುವ ಫೋಟೋ ಕಾರು ನನ್ನದು. ಇದು ಮರ್ಸಿಡಿಸ್ ಬೆಂಝ್-ಜಿ ವ್ಯಾಗನ್‌ನ ಪ್ರತಿರೂಪವಾಗಿದೆ. ಈ ವಿಚಾರದಲ್ಲಿ ನನಗೆ ಮುಚ್ಚಿಡಲು ಏನೂ ಇಲ್ಲ. ನಾನು ಸಾಮಾನ್ಯ ತೆರಿಗೆದಾರ. ರೈತರ ಪ್ರತಿಭಟನೆಯನ್ನು ಕುರಿತು ತಪ್ಪು ಕಲ್ಪನೆ ಮೂಡಿಸಲು ನನ್ನ ಕಾರಿನ ಫೋಟೋವನ್ನು ಬಳಸಿಕೊಳ್ಳಲಾಗಿದೆ. ಇದು ತುಂಬಾ ಬೇಸರದ ಸಂಗತಿ. ನನ್ನ ಜೀಪ್‌ನ ವೈರಲ್ ಫೋಟೋ ಮುಂದಿಟ್ಟುಕೊಂಡು ನಡೆಯುತ್ತಿರುವ ಆನ್‌ಲೈನ್ ದಾಳಿಗಳು ರೈತರ ಪ್ರತಿಭಟನೆಯನ್ನು ಬೆಂಬಲಿಸುವ ನನ್ನ ಉತ್ಸಾಹದ ಮೇಲೆ ಪರಿಣಾಮ ಬೀರುವುದಿಲ್ಲ ಎಂದು ಹೇಳಿದ್ದರು ಎಂದು ಆಲ್ಟ್ ನ್ಯೂಸ್‌ 2020ರಲ್ಲೇ ತಿಳಿಸಿತ್ತು.

ಒಟ್ಟಿನಲ್ಲಿ ಹೋರಾಟ ನಿರತ ರೈತರು ಕೋಟಿ ಬೆಲೆಯ ಮರ್ಸಿಡಿಸ್ ಬೆಂಝ್ ಜೀಪ್ ಹೊಂದಿದ್ದಾರೆ ಎಂಬುವುದು ಸುಳ್ಳು ಪ್ರತಿಪಾದನೆಯಾಗಿದೆ. ಅಸಲಿಗೆ ವೈರಲ್‌ ಫೋಟೋದಲ್ಲಿರುವುದಯ ಬೆಂಝ್ ಜೀಪೇ ಅಲ್ಲ. ಅದು ಫೋರ್ಸ್ ಗೂರ್ಖಾ ಎಸ್‌ಯುವಿ ಕಾರನ್ನು ಮಾರ್ಪಡಿಸಿ ಬೆಂಝ್ ರೀತಿ ಮಾಡಿರುವುದಾಗಿದೆ. ಸುಳ್ಳು ಸುದ್ದಿ, ಫ್ಯಾಕ್ಟ್‌ ಚೆಕ್ ಇವೆಲ್ಲದರ ಹೊರತಾಗಿಯೂ ನೋಡುವುದಾದರೆ, ರೈತರು ಒಂದೂವರೆ ಕೋಟಿ ಬೆಲೆಯ ಬೆಂಝ್ ಜೀಪ್ ಹೊಂದುವುದು ಅಪರಾಧವೇನಲ್ಲ. ಲಕ್ಷಾಂತರ ರೂಪಾಯಿ ಸುರಿದು ಕೃಷಿ ಮಾಡುವ ರೈತರು ದುಬಾರಿ ಬೆಲೆಯ ಜೀಪ್ ಕೊಳ್ಳಲು ಸಾಮಾರ್ಥ್ಯ ಇಲ್ಲದವರೂ ಅಲ್ಲ. ಜೀಪ್‌ ಹೊಂದಿದವರು ಹೋರಾಟ ಮಾಡಬಾರದೆಂದೂ ಇಲ್ಲ. ಅಲ್ಲದೆ, ರೈತರೆಂದರೆ ಬಡವರು ಮಾತ್ರ ಎಂಬುವುದು ಒಂದು ತಪ್ಪು ಕಲ್ಪನೆಯಾಗಿದೆ.

ಇದನ್ನೂ ಓದಿ : Fact Check: ರಾಹುಲ್ ಗಾಂಧಿ ರಹಸ್ಯವಾಗಿ ಮದುವೆಯಾಗಿದ್ದಾರೆ ಎಂಬುದು ಸುಳ್ಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...

ಚಲಿಸುತ್ತಿದ್ದ ಸ್ಲೀಪರ್ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : ಚಾಲಕ, ಕಂಡಕ್ಟರ್ ಬಂಧನ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 2012ರಲ್ಲಿ ನಡೆದ ನಿರ್ಭಯಾ ಪ್ರಕರಣವನ್ನು ನೆನಪಿಸುವಂತಹ ಆಘಾತಕಾರಿ ಘಟನೆಯೊಂದು ನಡೆದಿದೆ. ಸ್ಲೀಪರ್‌ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. indiatoday.in ವರದಿಯ ಪ್ರಕಾರ, ಈ ಘಟನೆಯು ಆಗಸ್ಟ್ 4ರ...

ಜಗತ್ತಿನ ಪ್ರತಿಯೊಬ್ಬರಿಗೂ ಲ್ಯಾಪ್‌ಟಾಪ್ ಕೊಳ್ಳುವಷ್ಟು ಕಪ್ಪು ಹಣ ಪ್ರಪಂಚದಲ್ಲಿದೆ: ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್

ಅಕ್ರಮ ಹಣ ವರ್ಗಾವಣೆ (Money Laundering) ಮತ್ತು 'ಡಿಜಿಟಲ್ ಅರೆಸ್ಟ್' ನಂತಹ ಆನ್‌ಲೈನ್ ವಂಚನೆಗಳ ಪ್ರಮಾಣದ ಕುರಿತು ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಈ ರೀತಿಯ...

ಪೆಟ್ರೋಲ್‌ನಲ್ಲಿ ಎಥನಾಲ್ ಪ್ರಮಾಣ ಬಹಿರಂಗಪಡಿಸುವಂತೆ ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಪೆಟ್ರೋಲ್‌ನಲ್ಲಿ ಬೆರೆಸಲಾಗುವ ಎಥನಾಲ್ ಪ್ರಮಾಣವನ್ನು ಕಡ್ಡಾಯವಾಗಿ ನಮೂದಿಸಬೇಕು ಮತ್ತು ವಾಹನಗಳಿಗೆ ಎಥನಾಲ್ ಮಿಶ್ರಿತ ಇಂಧನದ ಹೊಂದಾಣಿಕೆಯ ಬಗ್ಗೆ ಹೆಚ್ಚಿನ ಪಾರದರ್ಶಕತೆ ತರಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆ...