Homeಫ್ಯಾಕ್ಟ್‌ಚೆಕ್Fact Check: 'ದಿಲ್ಲಿ ಚಲೋ'ಗೆ ರೈತರು ಒಂದೂವರೆ ಕೋಟಿ ರೂ. ಬೆಲೆಯ ಜೀಪ್‌ನಲ್ಲಿ ಬಂದಿದ್ದಾರೆ ಎಂಬುವುದು...

Fact Check: ‘ದಿಲ್ಲಿ ಚಲೋ’ಗೆ ರೈತರು ಒಂದೂವರೆ ಕೋಟಿ ರೂ. ಬೆಲೆಯ ಜೀಪ್‌ನಲ್ಲಿ ಬಂದಿದ್ದಾರೆ ಎಂಬುವುದು ಸುಳ್ಳು

- Advertisement -
- Advertisement -

ಡಿಸೆಂಬರ್ 2020ರಲ್ಲಿ ಕೇಂದ್ರದ ಕೃಷಿ ಕಾನೂನುಗಳ ವಿರುದ್ದ ರೈತರು ಹೋರಾಟ ನಡೆಸುತ್ತಿದ್ದ ಸಂದರ್ಭ ಮರ್ಸಿಡಿಸ್ ಬೆಂಝ್ ಜೀಪಿನ ಮೇಲೆ ಸಿಕ್ಕ್ ಸಮುದಾಯದ ಕೆಲ ವ್ಯಕ್ತಿಗಳು ಕುಳಿತು ಪತ್ರಿಕೆ ಓದುತ್ತಿದ್ದ ಫೋಟೋ ಒಂದು ಭಾರೀ ವೈರಲ್ ಆಗಿತ್ತು.

ಹಲವರು ಸಾಮಾಜಿಕ ಜಾಲತಾಣಗಳಲ್ಲಿ ಆ ಫೋಟೋ ಹಂಚಿಕೊಂಡು ‘ದೆಹಲಿಯ ಸಿಂಘು ಗಡಿಯಲ್ಲಿ ಪ್ರತಿಭಟನೆ ನಡೆಸುತ್ತಿರುವ ಬಡ ರೈತರ ಜೀಪ್ ನೋಡಿ, 1.5 ಕೋಟಿ ರೂಪಾಯಿ ಬೆಲೆಯದ್ದು’ ಎಂದು ಬರೆದುಕೊಂಡಿದ್ದರು. ಈ ಮೂಲಕ ದೆಹಲಿ ಗಡಿಯಲ್ಲಿ ಹೋರಾಟ ನಡೆಸುತ್ತಿರುವವರು ರೈತರೇ ಅಲ್ಲ ಎಂದು ಪ್ರತಿಪಾದಿಸಿದ್ದರು.

ಅಂದು ವೈರಲ್ ಫೋಟೋವನ್ನು ಎಕ್ಸ್ ಬಳಕೆದಾರ @nishant_india ಅವರು ಹಂಚಿಕೊಂಡಿದ್ದರು. ಇವರನ್ನು ಪ್ರಧಾನಿ ನರೇಂದ್ರ ಮೋದಿ ಎಕ್ಸ್‌ನಲ್ಲಿ ಫಾಲೋ ಮಾಡುತ್ತಿದ್ದಾರೆ. ರಾಜಾ ರಾಮಮೋಹನ್ ರಾಯ್ ಲೈಬ್ರರಿ ಫೌಂಡೇಶನ್ ಅಧ್ಯಕ್ಷ ಕಾಂಚನ್ ಗುಪ್ತಾ (@KanchanGupta) ಅಂಕಣಕಾರ ಕಾರ್ತಿಕೇಯ ತನ್ನಾ(@KartikeyaTanna) ಕೂಡ ಫೊಟೋ ಶೇರ್ ಮಾಡಿದ್ದರು.

ಈಗ ಮತ್ತೆ ವಿವಿಧ ರಾಜ್ಯಗಳ ರೈತರು ತಮ್ಮ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ‘ದಿಲ್ಲಿ ಚಲೋ’ ಹಮ್ಮಿಕೊಂಡಿದ್ದಾರೆ. ಹಾಗಾಗಿ, ಅದೇ ಹಳೆಯ ಫೋಟೋ ಮತ್ತೆ ವೈರಲ್ ಆಗಿದೆ. ಈ ಬಾರಿಯೂ 1.5 ಕೋಟಿ ಬೆಲೆಯ ಮರ್ಸಿಡಿಸ್ ಬೆಂಝ್ ಜೀಪ್ ರೈತರದ್ದು ಎಂದು ಹೇಳಲಾಗಿದೆ.

ಫ್ಯಾಕ್ಟ್‌ ಚೆಕ್ : ರೈತ ಹೋರಾಟದ ಸಂದರ್ಭದಲ್ಲೇ ಮತ್ತೊಮ್ಮೆ ಮುನ್ನೆಲೆಗೆ ಬಂದಿರುವ ಹಳೆಯ ಫೋಟೋದ ಬಗ್ಗೆ ಖ್ಯಾತ ಫ್ಯಾಕ್ಟ್‌ ಚೆಕ್ ವೆಬ್‌ಸೈಟ್‌ ಆಲ್ಟ್‌ ನ್ಯೂಸ್‌ 2020ರಲ್ಲೇ ಸತ್ಯಾಸತ್ಯತೆ ಪರಿಶೀಲನೆ ನಡೆಸಿತ್ತು.

ಆಲ್ಟ್ ನ್ಯೂಸ್‌ ಪ್ರಕಾರ, ಈ ಜೀಪ್ ಪಂಜಾಬ್‌ನ ಉದ್ಯಮಿ ಮನ್‌ಪ್ರೀತ್ ಸಿಂಗ್ ಎಂಬವರಿಗೆ ಸೇರಿದ್ದಾಗಿದೆ. ವಾಹನದ ನೋಂದಣಿ ಸಂಖ್ಯೆ PB 12Z 8282 ಎಂದಾಗಿದ್ದು, ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವಾಲಯದ ಪೋರ್ಟಲ್ ‘ವಾಹನ್‌’ನಲ್ಲಿ ಜೀಪ್‌ನ RTO ವಿವರಗಳನ್ನು ಪರಿಶೀಲಿಸಿದಾಗ, ‘ಈ ವಾಹನವು ಫೋರ್ಸ್ ಮೋಟಾರ್ಸ್‌ನ ಎಸ್‌ಯುವಿ ಗೂರ್ಖಾ ಆಗಿದೆ. ಫೋರ್ಸ್ ಗೂರ್ಖಾ ವೆಬ್‌ಸೈಟ್ ಪ್ರಕಾರ, ಕಾರಿನ ಆವೃತ್ತಿಯು 2.6/4×2 ಆಗಿದ್ದು, ಇವುಗಳು ಎರಡು ಮಾಡೆಲ್‌ಗಳನ್ನು ಹೊಂದಿವೆ. ಇದರ ಬೆಲೆ 9.75 ರಿಂದ 10 ಲಕ್ಷ ರೂ. ಆಗಿದೆ.

2017 ರಲ್ಲಿ, CNN News18 ಈ ಜೀಪ್ ಕುರಿತು ವರದಿ ಮಾಡಿದ್ದು, ‘ಕಲರ್ ಗ್ಲೋ ಕೇರಳ ಕಾರು ಮೋಡಿಫೈಯರ್’ ಎಂಬ ಸಂಸ್ಥೆ ಫೋರ್ಸ್ ಗೂರ್ಖಾ ಎಸ್‌ಯುವಿ ಕಾರನ್ನು ಥೇಟ್ ಮರ್ಸಿಡಿಸ್ ಜಿ ವ್ಯಾಗನ್‌ ಜೀಪ್ ರೀತಿ ಕಾಣುವಂತೆ ಮಾರ್ಪಡಿಸಿದೆ. ಇದರ ಮಾರ್ಪಾಡು ವೆಚ್ಚ ಆ ಸಮಯದಲ್ಲಿ 8.5 ಲಕ್ಷ ರೂ. ಎಂದು CNN News 18 ಹೇಳಿತ್ತು.

CNN News18 ಸುದ್ದಿ ಲಿಂಕ್ ಇಲ್ಲಿದೆ 

ಮಾರ್ಪಾಡು ಮಾಡಲಾದ ಕಾರಿನ ಮಾಲೀಕ ಪಂಜಾಬ್‌ನ ಆನಂದಪುರದ ನಿವಾಸಿ ಮನ್‌ಪ್ರೀತ್ ಸಿಂಗ್ ಅವರೊಂದಿಗೆ ನಾವು ಮಾತನಾಡಿದ್ದು ಅವರು, ನಾನೋರ್ವ ಉದ್ಯಮಿ. ನನ್ನ ಕುಟುಂಬ ಸದಸ್ಯರು ಕೃಷಿಕರು. ಕೃಷಿ ಕಾನೂನುಗಳ ವಿರುದ್ದ ನಡೆಯುತ್ತಿರುವ ಹೋರಾಟಕ್ಕೆ ಬೆಂಬಲ ಸೂಚಿಸುವ ಸಲುವಾಗಿ ಡಿಸೆಂಬರ್ 5 ರಂದು ನಾನು ನನ್ನ ಜೀಪ್‌ನೊಂದಿಗೆ ಹೋರಾಟದ ಸ್ಥಳಕ್ಕೆ ಭೇಟಿ ನೀಡಿದ್ದೆ. ರೈತರನ್ನು ಬೆಂಬಲಿಸಲು ಎಲ್ಲಾ ವರ್ಗಗಳ ಜನರು ಗಡಿಯಲ್ಲಿದ್ದಾರೆ. ವೈರಲ್ ಆಗಿರುವ ಫೋಟೋ ಕಾರು ನನ್ನದು. ಇದು ಮರ್ಸಿಡಿಸ್ ಬೆಂಝ್-ಜಿ ವ್ಯಾಗನ್‌ನ ಪ್ರತಿರೂಪವಾಗಿದೆ. ಈ ವಿಚಾರದಲ್ಲಿ ನನಗೆ ಮುಚ್ಚಿಡಲು ಏನೂ ಇಲ್ಲ. ನಾನು ಸಾಮಾನ್ಯ ತೆರಿಗೆದಾರ. ರೈತರ ಪ್ರತಿಭಟನೆಯನ್ನು ಕುರಿತು ತಪ್ಪು ಕಲ್ಪನೆ ಮೂಡಿಸಲು ನನ್ನ ಕಾರಿನ ಫೋಟೋವನ್ನು ಬಳಸಿಕೊಳ್ಳಲಾಗಿದೆ. ಇದು ತುಂಬಾ ಬೇಸರದ ಸಂಗತಿ. ನನ್ನ ಜೀಪ್‌ನ ವೈರಲ್ ಫೋಟೋ ಮುಂದಿಟ್ಟುಕೊಂಡು ನಡೆಯುತ್ತಿರುವ ಆನ್‌ಲೈನ್ ದಾಳಿಗಳು ರೈತರ ಪ್ರತಿಭಟನೆಯನ್ನು ಬೆಂಬಲಿಸುವ ನನ್ನ ಉತ್ಸಾಹದ ಮೇಲೆ ಪರಿಣಾಮ ಬೀರುವುದಿಲ್ಲ ಎಂದು ಹೇಳಿದ್ದರು ಎಂದು ಆಲ್ಟ್ ನ್ಯೂಸ್‌ 2020ರಲ್ಲೇ ತಿಳಿಸಿತ್ತು.

ಒಟ್ಟಿನಲ್ಲಿ ಹೋರಾಟ ನಿರತ ರೈತರು ಕೋಟಿ ಬೆಲೆಯ ಮರ್ಸಿಡಿಸ್ ಬೆಂಝ್ ಜೀಪ್ ಹೊಂದಿದ್ದಾರೆ ಎಂಬುವುದು ಸುಳ್ಳು ಪ್ರತಿಪಾದನೆಯಾಗಿದೆ. ಅಸಲಿಗೆ ವೈರಲ್‌ ಫೋಟೋದಲ್ಲಿರುವುದಯ ಬೆಂಝ್ ಜೀಪೇ ಅಲ್ಲ. ಅದು ಫೋರ್ಸ್ ಗೂರ್ಖಾ ಎಸ್‌ಯುವಿ ಕಾರನ್ನು ಮಾರ್ಪಡಿಸಿ ಬೆಂಝ್ ರೀತಿ ಮಾಡಿರುವುದಾಗಿದೆ. ಸುಳ್ಳು ಸುದ್ದಿ, ಫ್ಯಾಕ್ಟ್‌ ಚೆಕ್ ಇವೆಲ್ಲದರ ಹೊರತಾಗಿಯೂ ನೋಡುವುದಾದರೆ, ರೈತರು ಒಂದೂವರೆ ಕೋಟಿ ಬೆಲೆಯ ಬೆಂಝ್ ಜೀಪ್ ಹೊಂದುವುದು ಅಪರಾಧವೇನಲ್ಲ. ಲಕ್ಷಾಂತರ ರೂಪಾಯಿ ಸುರಿದು ಕೃಷಿ ಮಾಡುವ ರೈತರು ದುಬಾರಿ ಬೆಲೆಯ ಜೀಪ್ ಕೊಳ್ಳಲು ಸಾಮಾರ್ಥ್ಯ ಇಲ್ಲದವರೂ ಅಲ್ಲ. ಜೀಪ್‌ ಹೊಂದಿದವರು ಹೋರಾಟ ಮಾಡಬಾರದೆಂದೂ ಇಲ್ಲ. ಅಲ್ಲದೆ, ರೈತರೆಂದರೆ ಬಡವರು ಮಾತ್ರ ಎಂಬುವುದು ಒಂದು ತಪ್ಪು ಕಲ್ಪನೆಯಾಗಿದೆ.

ಇದನ್ನೂ ಓದಿ : Fact Check: ರಾಹುಲ್ ಗಾಂಧಿ ರಹಸ್ಯವಾಗಿ ಮದುವೆಯಾಗಿದ್ದಾರೆ ಎಂಬುದು ಸುಳ್ಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...