Homeಮುಖಪುಟಪೂಂಚ್ ಸೇನಾ ಚಿತ್ರಹಿಂಸೆ ಬಗೆಗಿನ ವರದಿಯನ್ನು ತೆಗೆದು ಹಾಕುವಂತೆ 'ದಿ ಕ್ಯಾರವಾನ್‌'ಗೆ ಸೂಚಿಸಿದ ಕೇಂದ್ರ ಸಚಿವಾಲಯ

ಪೂಂಚ್ ಸೇನಾ ಚಿತ್ರಹಿಂಸೆ ಬಗೆಗಿನ ವರದಿಯನ್ನು ತೆಗೆದು ಹಾಕುವಂತೆ ‘ದಿ ಕ್ಯಾರವಾನ್‌’ಗೆ ಸೂಚಿಸಿದ ಕೇಂದ್ರ ಸಚಿವಾಲಯ

- Advertisement -
- Advertisement -

ಜಮ್ಮು ಮತ್ತು ಕಾಶ್ಮೀರದಲ್ಲಿ ಭಾರತೀಯ ಸೇನೆಯು ನಾಗರಿಕರಿಗೆ ಚಿತ್ರಹಿಂಸೆ ನೀಡಿದ ಕಥೆಯನ್ನು 24 ಗಂಟೆಗಳ ಒಳಗೆ ತೆಗೆದುಹಾಕುವಂತೆ ಮಾಹಿತಿ ಮತ್ತು ಪ್ರಸಾರ ಸಚಿವಾಲಯವು ಸುದ್ದಿ ನಿಯತಕಾಲಿಕ ‘ದಿ ಕ್ಯಾರವಾನ್‌’ಗೆ ಸೂಚಿಸಿದೆ.

ಮಾಹಿತಿ ತಂತ್ರಜ್ಞಾನ ಕಾಯ್ದೆಯ ಸೆಕ್ಸನ್‌ 69ಎ ಅಡಿಯಲ್ಲಿ ಸಚಿವಾಲಯವು ಈ ಆದೇಶವನ್ನು ನೀಡಿದೆ. ಜತೀಂದರ್ ಕೌರ್ ತುರ್ ಅವರ ‘ಸ್ಕ್ರೀಮ್ಸ್ ಫ್ರಮ್ ದಿ ಆರ್ಮಿ ಪೋಸ್ಟ್’ ಎಂಬ ವರದಿಯನ್ನು ತೆಗೆದು ಹಾಕುವಂತೆ ಪ್ರಸಾರ ಸಚಿವಾಲಯವು ಸೂಚಿಸಿದೆ. ಇದು ಪಠ್ಯ ಮತ್ತು ವೀಡಿಯೋ ರೂಪದಲ್ಲಿತ್ತು.

ಕಾರವಾನ್ ಪ್ರಕಾರ, ಆದೇಶದಲ್ಲಿ ಈ ಎರಡೂ ವಿಷಯಗಳನ್ನು 24 ಗಂಟೆಗಳ ಒಳಗೆ ತೆಗೆದುಹಾಕಬೇಕು. ಕಾರವಾನ್ ವರದಿಯನ್ನು ತೆಗೆದು ಹಾಕದಿದ್ದರೆ, ಭಾರತ ಸರ್ಕಾರವು ವರದಿಯ URLನ್ನು ನಿರ್ಬಂಧಿಸುತ್ತದೆ ಎಂದು ಸಚಿವಾಲಯ ಎಚ್ಚರಿಕೆಯನ್ನು ನೀಡಿದೆ.

ಜಮ್ಮು ಮತ್ತು ಕಾಶ್ಮೀರದ ಪೂಂಚ್-ರಜೌರಿ ಪ್ರದೇಶದಲ್ಲಿ ಭಯೋತ್ಪಾದಕರ ಹೊಂಚುದಾಳಿಯಲ್ಲಿ ನಾಲ್ವರು ಯೋಧರು ಹುತಾತ್ಮರಾದ ನಂತರ ಭಾರತೀಯ ಸೇನೆಯ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದ ಮೂವರು ನಾಗರಿಕರ ಚಿತ್ರಹಿಂಸೆ ಮತ್ತು ಸಾವಿನ ಬಗ್ಗೆ ವರದಿಯಲ್ಲಿ ಉಲ್ಲೇಖವಿದೆ, ವಿದ್ಯುತ್‌ ಆಘಾತ ಸೇರಿದಂತೆ ಸೈನ್ಯದ ಚಿತ್ರಹಿಂಸೆಯನ್ನು ವರದಿಯಲ್ಲಿ ಉಲ್ಲೇಖಿಸಲಾಗಿತ್ತು. ಸೇನೆಯ ಮಾಹಿತಿದಾರರಾಗಿ ಕೆಲಸ ಮಾಡುತ್ತಿದ್ದ ಜನರ ಮೇಲೆ ನಡೆದ ಚಿತ್ರಹಿಂಸೆಯನ್ನು ವರದಿಯು ವಿವರವಾಗಿ ವಿವರಿಸಿದೆ. ಡಿ.22ರಂದು ಟೋಪಾ ಪೀರ್‌ನಲ್ಲಿ ಸೇನೆಯು ಹತ್ಯೆಗೈದ ಮೂವರು ನಾಗರಿಕರಾದ ಸಫೀರ್, ಶಬೀರ್ ಮತ್ತು ಶೌಕತ್ ಅವರ ಕುಟುಂಬಗಳೊಂದಿಗೆ ಪತ್ರಕರ್ತರು ವರದಿಯನ್ನು ಸಿದ್ದಪಡಿಸುವ ವೇಳೆ ಮಾತನಾಡಿದ್ದರು. ಇದಲ್ಲದೆ ಸಂತ್ರಸ್ತರ ಕುಟುಂಬಗಳಿಗೆ ಸೈನ್ಯವು ಹೇಗೆ ನಗದು ರೂಪದಲ್ಲಿ ಲಂಚವನ್ನು ನೀಡಿದೆ ಎಂಬ ಬಗ್ಗೆ ವರದಿಯು ಉಲ್ಲೇಖಿಸಿತ್ತು

ಫೆ.12ರಂದು ದಿ ಕ್ಯಾರವಾನ್ ನಿಯತಕಾಲಿಕದ ಸಂಪಾದಕರಿಗೆ ಸಚಿವಾಲಯವು ನೊಟೀಸ್‌ ನೀಡಿದ್ದು, ವರದಿಯು ರಾಷ್ಟ್ರೀಯ ಭದ್ರತೆಗೆ ಅಪಾಯವಾಗಿದೆ ಮತ್ತು 24 ಗಂಟೆಗಳ ಒಳಗೆ ಅದನ್ನು ತೆಗೆದುಹಾಕಬೇಕು ಎಂದು ಹೇಳಿದ್ದರು. ಪತ್ರಿಕೆಯು ಆದೇಶವನ್ನು ಅನುಸರಿಸುತ್ತದೆ ಮತ್ತು ಅದನ್ನು ನ್ಯಾಯಾಲಯದಲ್ಲಿ ಪ್ರಶ್ನಿಸುತ್ತದೆ ಎಂದು ಹೇಳಿದೆ.

ಸೆನ್ಸಾರ್‌ಶಿಪ್ ಕುರಿತು ಅಧಿಕೃತ ಪ್ರಕಟಣೆಯನ್ನು ಮಾಡುತ್ತಾ ಕಾರವಾನ್ ಸಾಮಾಜಿಕ ಮಾದ್ಯಮ ಪ್ಲಾಟ್‌ಫಾರ್ಮ್ ಎಕ್ಸ್‌ನಲ್ಲಿ ಈ ಕುರಿತು ಮಾಹಿತಿಯನ್ನು ಹಂಚಿಕೊಂಡಿದ್ದು, ನಾವು ಮಾಹಿತಿ ಮತ್ತು ಪ್ರಸಾರ ಸಚಿವಾಲಯದಿಂದ ಐಟಿ ಕಾಯ್ದೆಯ ಸೆಕ್ಷನ್ 69ಎ ಅಡಿಯಲ್ಲಿ ಆದೇಶವನ್ನು ಸ್ವೀಕರಿಸಿದ್ದೇವೆ, ಈ ವೀಡಿಯೊವನ್ನು 24 ಗಂಟೆಗಳಲ್ಲಿ ತೆಗೆದುಹಾಕಲು ನಮಗೆ ನಿರ್ದೇಶಿಸಲಾಗಿದೆ ಎಂದು ಓದುಗರಿಗೆ ತಿಳಿಸುತ್ತಿದ್ದೇವೆ ಎಂದು ಹೇಳಿದೆ.

ಇದನ್ನು ಓದಿ: ದಿಲ್ಲಿ ಚಲೋ: ಶಂಭು ಗಡಿಯಲ್ಲಿ ರೈತರ ಮೇಲೆ ಪೊಲೀಸ್‌ ದೌರ್ಜನ್ಯ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...

ಚಲಿಸುತ್ತಿದ್ದ ಸ್ಲೀಪರ್ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : ಚಾಲಕ, ಕಂಡಕ್ಟರ್ ಬಂಧನ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 2012ರಲ್ಲಿ ನಡೆದ ನಿರ್ಭಯಾ ಪ್ರಕರಣವನ್ನು ನೆನಪಿಸುವಂತಹ ಆಘಾತಕಾರಿ ಘಟನೆಯೊಂದು ನಡೆದಿದೆ. ಸ್ಲೀಪರ್‌ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. indiatoday.in ವರದಿಯ ಪ್ರಕಾರ, ಈ ಘಟನೆಯು ಆಗಸ್ಟ್ 4ರ...

ಜಗತ್ತಿನ ಪ್ರತಿಯೊಬ್ಬರಿಗೂ ಲ್ಯಾಪ್‌ಟಾಪ್ ಕೊಳ್ಳುವಷ್ಟು ಕಪ್ಪು ಹಣ ಪ್ರಪಂಚದಲ್ಲಿದೆ: ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್

ಅಕ್ರಮ ಹಣ ವರ್ಗಾವಣೆ (Money Laundering) ಮತ್ತು 'ಡಿಜಿಟಲ್ ಅರೆಸ್ಟ್' ನಂತಹ ಆನ್‌ಲೈನ್ ವಂಚನೆಗಳ ಪ್ರಮಾಣದ ಕುರಿತು ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಈ ರೀತಿಯ...