Homeಮುಖಪುಟಶಾರುಖ್ ಖಾನ್ ಮಧ್ಯಸ್ಥಿಕೆಯಿಂದ ಕತಾರ್ ಸರ್ಕಾರ  8 ಭಾರತೀಯರನ್ನು ಬಿಡುಗಡೆ ಮಾಡಿದೆ: ಬಿಜೆಪಿ ನಾಯಕ ಸುಬ್ರಮಣಿಯನ್...

ಶಾರುಖ್ ಖಾನ್ ಮಧ್ಯಸ್ಥಿಕೆಯಿಂದ ಕತಾರ್ ಸರ್ಕಾರ  8 ಭಾರತೀಯರನ್ನು ಬಿಡುಗಡೆ ಮಾಡಿದೆ: ಬಿಜೆಪಿ ನಾಯಕ ಸುಬ್ರಮಣಿಯನ್ ಸ್ವಾಮಿ

- Advertisement -
- Advertisement -

ಬಿಜೆಪಿ ನಾಯಕ, ಸಂಸದ ಸುಬ್ರಮಣಿಯನ್ ಸ್ವಾಮಿ ಅವರು ವಿದೇಶಾಂಗ ವ್ಯವಹಾರಗಳ ಸಚಿವಾಲಯ ಮತ್ತು ರಾಷ್ಟ್ರೀಯ ಭದ್ರತಾ ಸಂಸ್ಥೆ ವಿರುದ್ಧ ವಾಗ್ಧಾಳಿಯನ್ನು ನಡೆಸಿದ್ದು, ಯುಎಇ ಮತ್ತು ಕತಾರ್‌ಗೆ ಭೇಟಿ ನೀಡುವಾಗ ಬಾಲಿವುಡ್ ತಾರೆ ಶಾರುಖ್ ಖಾನ್ ಅವರನ್ನು ತಮ್ಮೊಂದಿಗೆ ಕರೆದುಕೊಂಡು ಹೋಗುವಂತೆ ಪ್ರಧಾನಿ ನರೇಂದ್ರ ಮೋದಿಯವರಿಗೆ ಹೇಳಿದ್ದಾರೆ. ಅಲ್ಲದೆ ಶಾರುಖ್ ಖಾನ್ ಮಧ್ಯಸ್ಥಿಕೆಯಿಂದಾಗಿ ಕತಾರ್ ಸರ್ಕಾರ  8 ಭಾರತೀಯ ನೌಕಾಪಡೆಯ ಸಿಬ್ಬಂದಿಗಳನ್ನು ಬಿಡುಗಡೆ ಮಾಡಿದೆ ಎಂದು ಹೇಳಿದ್ದಾರೆ.

ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ ಸುಬ್ರಮಣಿಯನ್ ಸ್ವಾಮಿ, ಮೋದಿ ಅವರು ತಮ್ಮೊಂದಿಗೆ ಸಿನಿಮಾ ನಟ ಶಾರುಖ್ ಖಾನ್ ಅವರನ್ನು ಕತಾರ್‌ಗೆ ಕರೆದುಕೊಂಡು ಹೋಗಬೇಕು, ಏಕೆಂದರೆ ವಿದೇಶಾಂಗ ಇಲಾಖೆ ಮತ್ತು NSA ಕತಾರ್‌ನ ಶೇಖ್‌ಗಳನ್ನು ಮನವೊಲಿಸಲು ವಿಫಲವಾದ ನಂತರ, ಮೋದಿ ಖಾನ್‌ಗೆ ಮಧ್ಯಪ್ರವೇಶಿಸುವಂತೆ ಮನವಿ ಮಾಡಿದ್ದರು ಮತ್ತು ಹೀಗಾಗಿ ನಮ್ಮ ನೌಕಾ ಅಧಿಕಾರಿಗಳನ್ನು ಶಿಕ್ಷೆಯಿಂದ ಮುಕ್ತಗೊಳಿಸಿ ಬಿಡುಗಡೆ ಮಾಡಲಾಗಿದೆ ಎಂದು ಹೇಳಿದ್ದಾರೆ.

ಪ್ರಧಾನಿ ಮೋದಿ ಎಕ್ಸ್‌ನಲ್ಲಿ ಕತಾರ್ ಪ್ರವಾಸದ ಬಗ್ಗೆ ಪೋಸ್ಟ್‌ವೊಂದನ್ನು ಹಾಕಿದ್ದರು. ಮುಂದಿನ ಎರಡು ದಿನಗಳಲ್ಲಿ, ನಾನು ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಯುಎಇ ಮತ್ತು ಕತಾರ್‌ಗೆ ಭೇಟಿ ನೀಡಲಿದ್ದೇನೆ, ಇದು ಈ ರಾಷ್ಟ್ರಗಳೊಂದಿಗೆ ಭಾರತದ ದ್ವಿಪಕ್ಷೀಯ ಸಂಬಂಧಗಳನ್ನು ಬಲಗೊಳಿಸುತ್ತದೆ. ಯುಎಇಗೆ ನನ್ನ ಭೇಟಿಯು ಅಧಿಕಾರ ವಹಿಸಿಕೊಂಡ ನಂತರ ನನ್ನ ಏಳನೆಯದಾಗಿದೆ, ಇದು ಬಲವಾದ ಭಾರತ-ಯುಎಇ ಸ್ನೇಹಕ್ಕೆ ನಾವು ನೀಡುವ ಆದ್ಯತೆಯನ್ನು ಸೂಚಿಸುತ್ತದೆ. ನನ್ನ ಸಹೋದರ HH @MohamedBinZayed ಅವರನ್ನು ಭೇಟಿಯಾಗಲು ನಾನು ಉತ್ಸುಕನಾಗಿದ್ದೇನೆ. ಯುಎಇಯಲ್ಲಿ ಮೊದಲ ಹಿಂದೂ ಮಂದಿರವನ್ನು ಉದ್ಘಾಟಿಸುವ ಗೌರವ ನನಗಿದೆ. ಅಬುಧಾಬಿಯಲ್ಲಿ ನಡೆಯುವ ಸಮುದಾಯ ಕಾರ್ಯಕ್ರಮದಲ್ಲಿ ನಾನು ಭಾರತೀಯ ಸಮುದಾಯವನ್ನು ಉದ್ದೇಶಿಸಿ ಮಾತನಾಡುತ್ತೇನೆ. ನಾನು @WorldGovSummit ನಲ್ಲಿ ಮಾತನಾಡುತ್ತೇನೆ ಮತ್ತು ದುಬೈನಲ್ಲಿ @HHShkMohd ಅನ್ನು ಭೇಟಿ ಮಾಡುತ್ತೇನೆ. ನಾನು HH ಶೇಖ್ @TamimBinHamad ಅವರನ್ನು ಭೇಟಿ ಮಾಡುತ್ತೇನೆ ಎಂದು ಪೋಸ್ಟ್‌ನಲ್ಲಿ ಉಲ್ಲೇಖಿಸಿದ್ದರು. ಇದಕ್ಕೆ ಪ್ರತಿಕ್ರಿಯಿಸಿದ ಸುಬ್ರಮಣಿಯನ್ ಸ್ವಾಮಿ, ಶಾರುಖ್ ಖಾನ್ ಮಧ್ಯಸ್ಥಿಕೆಯಿಂದಾಗಿ ಕತಾರ್ ಸರ್ಕಾರ  8 ಭಾರತೀಯ ನೌಕಾಪಡೆಯ ಸಿಬ್ಬಂದಿಗಳನ್ನು ಬಿಡುಗಡೆ ಮಾಡಿದೆ ಎಂದು ಹೇಳಿದ್ದಾರೆ.

ಕತಾರ್‌ನಲ್ಲಿ ಗೂಢಚರ್ಯೆ ಆರೋಪದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿದ್ದ ಭಾರತೀಯ ನೌಕಾಪಡೆಯ 8 ಮಾಜಿ ಸಿಬ್ಬಂದಿಗಳನ್ನು ಕತಾರ್ ನ್ಯಾಯಾಲಯವು ಎರಡು ದಿನಗಳ ಮೊದಲು ಬಿಡುಗಡೆ ಮಾಡಿತ್ತು. ಕತಾರ್‌ನಲ್ಲಿ ಸೆರೆಯಾಗಿದ್ದ ಭಾರತೀಯ ನೌಕಾಪಡೆಯ ಅಧಿಕಾರಿಗಳು ಭಾರತಕ್ಕೆ ಮರಳಿದ್ದಾರೆ.

ಕತಾರ್‌ನ ಸಶಸ್ತ್ರ ಪಡೆಗಳು ಮತ್ತು ಭದ್ರತಾ ಏಜೆನ್ಸಿಗಳಿಗೆ ತರಬೇತಿ ನೀಡುವ ಖಾಸಗಿ ಸಂಸ್ಥೆಯಾದ ಅಲ್ ದಹ್ರಾ ಗ್ಲೋಬಲ್ ಟೆಕ್ನಾಲಜೀಸ್ ಮತ್ತು ಕನ್ಸಲ್ಟೆನ್ಸಿ ಸರ್ವಿಸಸ್‌ಗಾಗಿ ಕೆಲಸ ಮಾಡುತ್ತಿದ್ದ 8 ಮಂದಿ ಭಾರತೀಯ ನೌಕಾಪಡೆಯ ಮಾಜಿ ಅಧಿಕಾರಿಗಳನ್ನು ಕಳೆದ ವರ್ಷದ ಆಗಸ್ಟ್‌ನಲ್ಲಿ ಕತಾರ್‌ ಪೊಲೀಸರು ಬಂಧಿಸಿದ್ದರು. ಬಂಧಿತರ ಮೇಲೆ ಬೇಹುಗಾರಿಕೆಯ ಆರೋಪವನ್ನು ಹೊರಿಸಲಾಗಿತ್ತು. ಈ 8 ಮಾಜಿ ಅಧಿಕಾರಿಗಳ ಜಾಮೀನು ಅರ್ಜಿಗಳನ್ನು ಹಲವಾರು ಬಾರಿ ತಿರಸ್ಕರಿಸಲಾಗಿದೆ ಮತ್ತು ಅವರ ಬಂಧನವನ್ನು ಕತಾರ್ ಅಧಿಕಾರಿಗಳು ವಿಸ್ತರಿಸಿದ್ದರು. ಬಂಧಿತ ಭಾರತೀಯರಲ್ಲಿ ನಿವೃತ್ತ ಕಮಾಂಡರ್ ಪೂರ್ಣೇಂದು ತಿವಾರಿ ಅವರು ಅಲ್ ದಹ್ರಾ ವ್ಯವಸ್ಥಾಪಕ ನಿರ್ದೇಶಕರಾಗಿ ಸೇವೆ ಸಲ್ಲಿಸಿದ್ದರು. ಪ್ರಕರಣದಲ್ಲಿ 8 ಮಂದಿ ಅಧಿಕಾರಿಗಳಿಗೆ ಕತಾರ್‌ನ ನ್ಯಾಯಾಲಯವು ಗಲ್ಲು ಶಿಕ್ಷೆ ವಿಧಿಸಿತ್ತು. ದಹ್ರಾ ಗ್ಲೋಬಲ್ ಪ್ರಕರಣವು 8 ಮಂದಿ ಅಧಿಕಾರಿಗಳಿಗೆ ಗಲ್ಲು ಶಿಕ್ಷೆ ವಿಧಿಸಿದ ಆದೇಶದ ಬಳಿಕ ಅಂತರಾಷ್ಟ್ರೀಯ ಮಟ್ಟದಲ್ಲಿ ಗಮನ ಸೆಳೆದಿತ್ತು. ಆ ಬಳಿಕ ಭಾರತೀಯ ನೌಕಾಪಡೆಯ 8 ಮಾಜಿ ಸಿಬ್ಬಂದಿಗಳ ಮರಣದಂಡನೆಯನ್ನು ಕತಾರ್‌ನ ಮೇಲ್ಮನವಿ ನ್ಯಾಯಾಲಯವು ಇಳಿಸಿದ್ದು, ಮರಣದಂಡನೆಯನ್ನು ಜೈಲು ಶಿಕ್ಷೆಗೆ ಪರಿವರ್ತಿಸಿತ್ತು.

 

 

ಇದನ್ನು ಓದಿ: ಪೂಂಚ್ ಸೇನಾ ಚಿತ್ರಹಿಂಸೆ ಬಗೆಗಿನ ವರದಿಯನ್ನು ತೆಗೆದು ಹಾಕುವಂತೆ ‘ದಿ ಕ್ಯಾರವಾನ್‌’ಗೆ ಸೂಚಿಸಿದ ಕೇಂದ್ರ ಸಚಿವಾಲಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ಯಾಲೆಸ್ತೀನ್ ಜನರೊಂದಿಗೆ ಒಗ್ಗಟ್ಟು ಪ್ರದರ್ಶನ: ದೆಹಲಿಯ ಮೆಕ್‌ಡೊನಾಲ್ಡ್ಸ್ ಹೊರಗೆ ಪ್ರತಿಭಟನೆ

ಪ್ಯಾಲೆಸ್ಟೈನ್ ಜೊತೆ ಒಗ್ಗಟ್ಟಿನ ಭಾರತೀಯ ಜನರು (ಐಪಿಎಸ್‌ಪಿ) ಗುಂಪಿನ ಸದಸ್ಯರು (ಏ.3) ಜನಪಥ್ ಪ್ರದೇಶದ ಮೆಕ್‌ಡೊನಾಲ್ಡ್ಸ್ ಔಟ್‌ಲೆಟ್‌ನ ಹೊರಗೆ ದಿಢೀರ್ ಪ್ರತಿಭಟನೆಯನ್ನು ಆಯೋಜಿಸಿದ್ದರು. ಪ್ಯಾಲೆಸ್ತೀನಿಯನ್ನರನ್ನು ಒಳಗೊಂಡ ನಡೆಯುತ್ತಿರುವ ಸಂಘರ್ಷದಲ್ಲಿ ಮೆಕ್‌ಡೊನಾಲ್ಡ್ಸ್ ಮತ್ತು ಕೋಕಾ-ಕೋಲಾದಂತಹ ಬಹುರಾಷ್ಟ್ರೀಯ...

‘ಇರಾನಿಯನ್ನರು ಸ್ಮಾರ್ಟ್ ಚೆಸ್ ಆಡುತ್ತಿದ್ದು, ಟ್ರಂಪ್ ಭ್ರಮಾಲೋಕದಲ್ಲಿದ್ದಾರೆ..’; ಮಾಜಿ ರಾಜತಾಂತ್ರಿಕ ಅಧಿಕಾರಿ ಕೆ.ಪಿ. ಫ್ಯಾಬಿಯನ್

ಪ್ರಸ್ತುತ ನಡೆಯುತ್ತಿರುವ ಪಶ್ಚಿಮ ಏಷ್ಯಾ ಸಂಘರ್ಷದ ಬಗ್ಗೆ ಮಾತನಾಡಿದ ಭಾರತದ ಮಾಜಿ ರಾಯಭಾರಿ ಕೆ.ಪಿ. ಫ್ಯಾಬಿಯನ್, "ಇರಾನಿಯನ್ನರು ಸ್ಮಾರ್ಟ್ ಚೆಸ್ ಆಟವನ್ನು ಆಡುತ್ತಿದ್ದಾರೆ. ಆದರೆ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗಳು...

‘ನಾನು ಸಂಸತ್ತಿಗೆ ಹೋಗುವುದು ಗದ್ದಲ ಸೃಷ್ಟಿಸಲು ಅಲ್ಲ’ : ಎಎಪಿ ಆರೋಪಗಳನ್ನು ತಳ್ಳಿ ಹಾಕಿದ ರಾಘವ್ ಚಡ್ಡಾ

ತನ್ನ ವಿರುದ್ದ ಆಮ್‌ ಆದ್ಮಿ ಪಕ್ಷ (ಎಎಪಿ) ಮಾಡಿರುವ ಎಲ್ಲಾ ಆರೋಪಗಳನ್ನು ರಾಘವ್ ಚಡ್ಡಾ ಶನಿವಾರ (ಏ.4) ಅಲ್ಲಗಳೆದಿದ್ದು, "ಅವೆಲ್ಲವೂ ಸುಳ್ಳು ಮತ್ತು ಸಂಘಟಿತ ಅಭಿಯಾನದ ಭಾಗ" ಎಂದಿದ್ದಾರೆ. "ಸಂಸತ್ತಿನಲ್ಲಿ ನನ್ನ ಉದ್ದೇಶ...

ಎಡರಂಗದಲ್ಲಿ ಎಡಪಂಥೀಯರೇ ಇಲ್ಲ; ದ್ವೇಷ ಹರಡುವ ಜನರೊಂದಿಗೆ ಪಿಣರಾಯಿ ಪಾಲುದಾರಿಕೆ ಹೊಂದಿದ್ದಾರೆ: ರಾಹುಲ್ ಗಾಂಧಿ

ಕೇರಳ ವಿಧಾನಸಭಾ ಚುನಾವಣೆ ಪ್ರಚಾರವು ಅಂತಿಮ ಹಂತಕ್ಕೆ ತಲುಪುತ್ತಿದ್ದಂತೆ ತೀಕ್ಷ್ಣವಾದ ರಾಜಕೀಯ ದಾಳಿಯನ್ನು ಆರಂಭಿಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, "ಸಿಪಿಐ-ಎಂ ನೇತೃತ್ವದ ಎಡಪಕ್ಷವು ತನ್ನ ಸೈದ್ಧಾಂತಿಕ ತಿರುಳನ್ನು ಕಳೆದುಕೊಳ್ಳುತ್ತಿದೆ" ಎಂದು ಆರೋಪಿಸಿದ್ದಾರೆ. "ಎಲ್‌ಡಿಎಫ್...

ಬಿಜೆಪಿ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಅಂದಿದ್ದೆ : ಅಣ್ಣಾಮಲೈ

"ವಿಧಾನಸಭಾ ಚುನಾವಣೆಗೆ ಬಿಜೆಪಿ ನನಗೆ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಎಂದು ಮುಂಚಿತವಾಗಿ ಹೈಕಮಾಂಡ್‌ಗೆ ತಿಳಿಸಿದ್ದೆ" ಎಂದು ತಮಿಳುನಾಡು ಬಿಜೆಪಿಯ ಮಾಜಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ಹೇಳಿದ್ದಾರೆ. ಚೆನ್ನೈ ವಿಮಾನ ನಿಲ್ದಾಣದಲ್ಲಿ ಶನಿವಾರ...

ಸುರಕ್ಷಿತವಾಗಿ ಹಾರ್ಮುಜ್ ದಾಟಿದ 7ನೇ ಎಲ್‌ಪಿಜಿ ಹಡಗು; ಸರದಿಯಲ್ಲಿ ಕಾಯುತ್ತಿವೆ ಭಾರತದ 17 ಟ್ಯಾಂಕರ್‌ಗಳು

ಭಾರತದ ಧ್ವಜ ಹೊಂದಿದ್ದ ಮತ್ತೊಂದು ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಟ್ಯಾಂಕರ್, ಗ್ರೀನ್ ಸಾನ್ವಿ ಹೆಸರಿನ ಹಡಗು ಹಾರ್ಮುಜ್ ಜಲಸಂಧಿಯ ಪೂರ್ವಕ್ಕೆ ಯಶಸ್ವಿಯಾಗಿ ತಲುಪಿದೆ. ಹಡಗು ಟ್ರ್ಯಾಕಿಂಗ್ ದತ್ತಾಂಶದ ಪ್ರಕಾರ, ನಡೆಯುತ್ತಿರುವ ಪಶ್ಚಿಮ...

ಸಿಬಿಎಸ್‌ಇ ಹಿಂದಿ ಹೇರಿಕೆಯು ತ್ರಿಭಾಷಾ ಸೂತ್ರ ಜಾರಿಯ ‘ರಹಸ್ಯ ಕಾರ್ಯವಿಧಾನ’: ಸ್ಟಾಲಿನ್ ಆರೋಪ

ಸಿಬಿಎಸ್‌ಇ ಇತ್ತೀಚೆಗೆ ಅನಾವರಣಗೊಳಿಸಿದ ಪಠ್ಯಕ್ರಮ ಚೌಕಟ್ಟಿನ ಕುರಿತು ಮಾತನಾಡಿದ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್, "ಮೂರು ಭಾಷಾ ಸೂತ್ರ ಎಂದು ಕರೆಯಲ್ಪಡುವುದು ವಾಸ್ತವದಲ್ಲಿ ಹಿಂದಿ ಮಾತನಾಡದ ಪ್ರದೇಶಗಳಿಗೆ ಹಿಂದಿ ವಿಸ್ತರಿಸುವ ರಹಸ್ಯ ಕಾರ್ಯವಿಧಾನವಾಗಿದೆ"...

‘ತಿಂದ ಮನೆಗೆ ಕನ್ನ ಹಾಕುವುದು ತರವಲ್ಲ, ನಿಮ್ಮ ಅಧಿಕ ಪ್ರಸಂಗ ಕರ್ನಾಟಕದ ಜನತೆ ಒಪ್ಪುವುದಿಲ್ಲ’ : ರಾಜ್ಯಪಾಲರ ವಿರುದ್ಧ ಕರವೇ ಕಿಡಿ

ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಲ್ಲಿ ತೃತೀಯ ಭಾಷೆಗೆ ಗ್ರೇಡಿಂಗ್ ನೀಡುವ ಸರ್ಕಾರದ ನಿರ್ಧಾರವನ್ನು ಮರುಪರಿಶೀಲಿಸುವಂತೆ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದಿರುವ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ರಾಜ್ಯಾಧ್ಯಕ್ಷ...

‘ತಪ್ಪಾಗಿದೆ’ : ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್‌ ವಿಧೇಯಕದ ಕುರಿತ ಟೀಕೆಗಳನ್ನು ಕೈಬಿಟ್ಟ ರಾಜಸ್ಥಾನ ಹೈಕೋರ್ಟ್

ಟ್ರಾನ್ಸ್‌ಜೆಂಡರ್ ಕಾಯ್ದೆ, 2019ರಲ್ಲಿ ಬದಲಾವಣೆಗಳನ್ನು ತರಲಿರುವ ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ವಿಧೇಯ, 2026ರ ಕುರಿತು ಈ ಹಿಂದೆ ಮಾಡಿದ್ದ ವಿಮರ್ಶಾತ್ಮಕ ಟಿಪ್ಪಣಿಗಳನ್ನು ರಾಜಸ್ಥಾನ ಹೈಕೋರ್ಟ್ ತೆಗೆದುಹಾಕಿದೆ ಎಂದು...

ಯುಸಿಸಿ ಜಾರಿ ನಂತರ ‘ಜನಸಂಖ್ಯಾ ನಿಯಂತ್ರಣ’ ಕಾನೂನಿಗೆ ಮುಂದಾದ ಉತ್ತರಾಖಂಡ ಬಿಜೆಪಿ ಸರ್ಕಾರ

ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತಂದ ನಂತರ, ಉತ್ತರಾಖಂಡ ಸರ್ಕಾರ ಈಗ ಜನಸಂಖ್ಯಾ ನಿಯಂತ್ರಣ ಕಾನೂನನ್ನು ತರುವ ಬಗ್ಗೆ ಯೋಚಿಸುತ್ತಿದೆ ಎಂದು ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಶುಕ್ರವಾರ ಸೂಚಿಸಿದ್ದಾರೆ. ಪ್ರಸ್ತಾವಿತ ಕ್ರಮದ...