Homeಮುಖಪುಟಭಾರತ್‌ ಜೋಡೋ ನ್ಯಾಯ ಯಾತ್ರೆ: ಬಿಜೆಪಿ ಸರಕಾರದಿಂದ ರೈತರಿಗೆ ಅನ್ಯಾಯ; ರಾಹುಲ್‌ ಗಾಂಧಿ ವಾಗ್ಧಾಳಿ

ಭಾರತ್‌ ಜೋಡೋ ನ್ಯಾಯ ಯಾತ್ರೆ: ಬಿಜೆಪಿ ಸರಕಾರದಿಂದ ರೈತರಿಗೆ ಅನ್ಯಾಯ; ರಾಹುಲ್‌ ಗಾಂಧಿ ವಾಗ್ಧಾಳಿ

- Advertisement -
- Advertisement -

ರಾಹುಲ್‌ ಗಾಂಧಿ ನೇತೃತ್ವದ ಭಾರತ್‌ ಜೋಡೋ ನ್ಯಾಯ ಯಾತ್ರೆ ಛತ್ತೀಸ್‌ಗಢದಲ್ಲಿ ಮುಂದುವರಿದಿದ್ದು, ಯಾತ್ರೆ ವೇಳೆ ರಾಹುಲ್‌ ಗಾಂಧಿ ‘ದೆಹಲಿ ಚಲೋ’ ಬಗ್ಗೆ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದು, ಬಿಜೆಪಿ ರೈತರಿಗೆ ಅನ್ಯಾಯ ಮಾಡಿದೆ ಎಂದು ಹೇಳಿದ್ದಾರೆ.

ಭಾರತ್‌ ಜೋಡೋ ನ್ಯಾಯ ಯಾತ್ರೆ ನಾಳೆ ಜಾರ್ಖಂಡ್‌ಗೆ ಪ್ರವೇಶಿಸಲಿದೆ. ಇದಕ್ಕೂ ಮೊದಲು ಯಾತ್ರೆ  ರಾಯ್‌ಗಢ್, ಶಕ್ತಿ, ಕೊರ್ಬಾ, ಸೂರಜ್‌ಪುರ, ಸುರ್ಗುಜಾ ಮತ್ತು ಬಲರಾಮ್‌ಪುರ ಜಿಲ್ಲೆಗಳ ಮೂಲಕ ಛತ್ತೀಸ್‌ಗಢದಲ್ಲಿ 536 ಕಿಲೋಮೀಟರ್ ಕ್ರಮಿಸಲಿದೆ. ಕೆಲವು ದಿನಗಳ ಹಿಂದೆ ಯಾತ್ರೆಯಲ್ಲಿ ಮಾತನಾಡಿದ್ದ ರಾಹುಲ್‌ ಗಾಂಧಿ, ಪ್ರಧಾನಿ ನರೇಂದ್ರ ಮೋದಿ ಅವರು ಶೀಘ್ರದಲ್ಲೇ ಉಕ್ಕಿನ ಮಿಲ್‌ಗಳನ್ನು ತಮ್ಮ ಕೋಟ್ಯಾಧಿಪತಿ ಸ್ನೇಹಿತರಿಗೆ ಹಸ್ತಾಂತರಿಸಲಿದ್ದಾರೆ. ದೇಶದಲ್ಲಿ ಆರ್ಥಿಕ ಅನ್ಯಾಯ ನಡೆಯುತ್ತಿದೆ. ಪ್ರಧಾನಿ ಮೋದಿ ದೇಶದ ಸಂಪತ್ತನ್ನು ಕೆಲವೇ ಕೆಲ ಗೆಳೆಯರಿಗೆ ಹಸ್ತಾತರಿಸಲು ಉತ್ಸುಕರಾಗಿದ್ದಾರೆ ಎಂದು ಹೇಳಿದ್ದರು.

ಛತ್ತೀಸ್‌ಗಢದ ಅಂಬಿಕಾಪುರದಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ಮಾತನಾಡಿದ ರಾಹುಲ್‌ ಗಾಂಧಿ, ಈ ದೇಶದಲ್ಲಿ ಪ್ರತಿದಿನ ಬಡವರು, ರೈತರು, ಕಾರ್ಮಿಕರು ಮತ್ತು ಸಣ್ಣ ಉದ್ಯಮಿಗಳ ಮೇಲೆ ಅನ್ಯಾಯ ನಡೆಯುತ್ತಿದೆ, ಅನ್ಯಾಯ ಇರುವ ಸಮಾಜದಲ್ಲಿ ಹಿಂಸೆ ಮತ್ತು ದ್ವೇಷ ಇರುತ್ತದೆ ಎಂದು ಹೇಳಿದ್ದಾರೆ.

ಬಿಜೆಪಿ ಸರ್ಕಾರ ಎಂಎಸ್ ಸ್ವಾಮಿನಾಥನ್ ಅವರಿಗೆ ಭಾರತ ರತ್ನ ಘೋಷಿಸಿದೆ. ಆದರೆ ಅವರು ಎಂಎಸ್ ಸ್ವಾಮಿನಾಥನ್ ಹೇಳಿದ್ದನ್ನು ಜಾರಿಗೆ ತರಲು ಸಿದ್ಧರಿಲ್ಲ. ಅವರು ತಮ್ಮ ವರದಿಯಲ್ಲಿ ರೈತರಿಗೆ ಎಂಎಸ್‌ಪಿಗೆ ಕಾನೂನುಬದ್ಧ ಹಕ್ಕನ್ನು ನೀಡಬೇಕು ಎಂದು ಸ್ಪಷ್ಟವಾಗಿ ಉಲ್ಲೇಖಿಸಿದ್ದರು. ಆದರೆ ಬಿಜೆಪಿ ಸರ್ಕಾರ ಅದನ್ನು ಮಾಡುತ್ತಿಲ್ಲ. INDIA ಮೈತ್ರಿ ಸರ್ಕಾರ ಅಧಿಕಾರಕ್ಕೆ ಬಂದಾಗ ನಾವು ಭಾರತದ ರೈತರಿಗೆ ಎಂಎಸ್‌ಪಿ ಖಾತರಿಪಡಿಸುವ ಕಾನೂನು ಜಾರಿಗೆ ತರುತ್ತೇವೆ. ಸ್ವಾಮಿನಾಥನ್ ವರದಿಯಲ್ಲಿ ಉಲ್ಲೇಖಿಸಿದ್ದನ್ನು ನಾವು ಈಡೇರಿಸುತ್ತೇವೆ. ಇಂದು ರೈತರು ದಿಲ್ಲಿಯತ್ತ ಪಾದಯಾತ್ರೆ ನಡೆಸುತ್ತಿದ್ದಾರೆ, ಅವರನ್ನು ತಡೆಯಲಾಗುತ್ತಿದೆ, ಅಶ್ರುವಾಯು ಪ್ರಯೋಗಿಸಲಾಗುತ್ತಿದೆ. ಅವರು ಏನು ಹೇಳುತ್ತಿದ್ದಾರೆ, ಅವರು ತಮ್ಮ ದುಡಿಮೆಯ ಫಲವನ್ನು ಕೇಳುತ್ತಿದ್ದಾರೆ ಎಂದು ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಹೇಳಿದ್ದಾರೆ.

ಎಂಎಸ್ ಸ್ವಾಮಿನಾಥನ್ ಮತ್ತು ಚೌಧರಿ ಚರಣ್ ಸಿಂಗ್ ಅವರಿಗೆ ಭಾರತ ರತ್ನ ನೀಡುವ ಸರ್ಕಾರ ರೈತರಿಗೆ ಅನ್ಯಾಯ ಮಾಡುತ್ತಿದೆ. ರೈತ ಸಂಘಟನೆಗಳು 3-4 ಪ್ರಮುಖ ಬೇಡಿಕೆಗಳನ್ನು ಮುಂದಿಟ್ಟಿದೆ. ಸ್ವಾಮಿನಾಥನ್ ಸೂತ್ರವನ್ನು ಜಾರಿಗೆ ತರಬೇಕೆಂಬುದು ಅವರ ದೊಡ್ಡ ಬೇಡಿಕೆಯಾಗಿದೆ. ಎಂಎಸ್ಪಿ ‘ಮೋದಿ ಮಾರಾಟ ಬೆಲೆ’ ಅಲ್ಲ. MSP ಎಂದರೆ ‘ಕನಿಷ್ಠ ಬೆಂಬಲ ಬೆಲೆ’ ಎಂದು ಕಾಂಗ್ರೆಸ್‌ ನಾಯಕ ಜೈರಾಮ್‌ ರಮೇಶ್‌ ಹೇಳಿದ್ದಾರೆ.

ರೈತರಿಗೆ ಕೇಂದ್ರ ಸರ್ಕಾರ ನೀಡಿದ ಭರವಸೆಗಳನ್ನು ಈಡೇರಿಸುವಂತೆ ರೈತ ಸಂಘಗಳು ಒತ್ತಾಯಿಸುತ್ತಿವೆ. ಆದರೆ ಪ್ರಧಾನಿ ಮೋದಿ ಅವರ ಸರ್ಕಾರವು ರಾಷ್ಟ್ರ ರಾಜಧಾನಿಗೆ ಪ್ರವೇಶಿಸದಂತೆ ರೈತರನ್ನು ತಡೆಯಲು ಪ್ರಯತ್ನಿಸುತ್ತಿದೆ. ಇದು ತುಂಬಾ ದುರದೃಷ್ಟಕರ,  ರಾಹುಲ್ ಗಾಂಧಿ ರೈತ ಸಂಘಗಳನ್ನು ಭೇಟಿ ಮಾಡಿ ಎಂಎಸ್‌ಪಿ, ಸಾಲ ಮನ್ನಾ ಮತ್ತು ಪಿಎಂ ಫಸಲ್ ಬಿಮಾ ಯೋಜನೆ ಕುರಿತು ಚರ್ಚಿಸಿದ್ದಾರೆ ಎಂದು ಜೈರಾಮ್‌ ರಮೇಶ್‌ ಹೇಳಿದ್ದಾರೆ.

ಜನವರಿ 14 ರಂದು ಮಣಿಪುರದಲ್ಲಿ ಪ್ರಾರಂಭವಾದ ‘ಭಾರತ್ ಜೋಡೋ ನ್ಯಾಯ ಯಾತ್ರೆ’ 67 ದಿನಗಳಲ್ಲಿ 6,713 ಕಿಮೀ ಕ್ರಮಿಸಿ ಮಾರ್ಚ್ 20ರಂದು ಮುಂಬೈನಲ್ಲಿ ಕೊನೆಗೊಳ್ಳಲಿದೆ.

ಇದನ್ನು ಓದಿ: ಶಾರುಖ್ ಖಾನ್ ಮಧ್ಯಸ್ಥಿಕೆಯಿಂದ ಕತಾರ್ ಸರ್ಕಾರ  8 ಭಾರತೀಯರನ್ನು ಬಿಡುಗಡೆ ಮಾಡಿದೆ: ಬಿಜೆಪಿ ನಾಯಕ ಸುಬ್ರಮಣಿಯನ್ ಸ್ವಾಮಿ

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತಮಿಳುನಾಡು| ರಸ್ತೆ ಅಪಘಾತದಲ್ಲಿ ಇಬ್ಬರು ದಲಿತ ಯುವಕರು ಸಾವು; ಜಾತಿ ವೈಷಮ್ಯ ಆರೋಪ

ತಮಿಳುನಾಡಿನ ಧರ್ಮಪುರಿಯಲ್ಲಿ ಬುಧವಾರ ರಾತ್ರಿ ಚಿನ್ನಾರ್ಥಳ್ಳಿ ಕೂಟ್ ರಸ್ತೆಯ ಬಳಿ ಅಪರಿಚಿತ ವಾಹನವೊಂದು ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸೊನ್ನಂಪಟ್ಟಿ ಗ್ರಾಮದ ಪರಿಶಿಷ್ಟ ಜಾತಿಗೆ ಸೇರಿದ ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ ಎಂದು...

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...