Homeಮುಖಪುಟನಿರಾಶ್ರಿತರ ಶಿಬಿರವನ್ನು ಟಾರ್ಗೆಟ್ ಮಾಡಿ ಇಸ್ರೇಲ್‌ನಿಂದ ದಾಳಿ: ಮಕ್ಕಳು, ಮಹಿಳೆಯರು ಸೇರಿ 100ಕ್ಕೂ ಅಧಿಕ ಮಂದಿ...

ನಿರಾಶ್ರಿತರ ಶಿಬಿರವನ್ನು ಟಾರ್ಗೆಟ್ ಮಾಡಿ ಇಸ್ರೇಲ್‌ನಿಂದ ದಾಳಿ: ಮಕ್ಕಳು, ಮಹಿಳೆಯರು ಸೇರಿ 100ಕ್ಕೂ ಅಧಿಕ ಮಂದಿ ಸಾವು

- Advertisement -
- Advertisement -

ಇಸ್ರೇಲ್‌ ಗಾಝಾ ಮೇಲೆ ಯುದ್ಧ ಅಪರಾಧವನ್ನು ಮುಂದುವರಿಸಿದ್ದು, ಗಾಝಾದ ರಫಾ ಮೇಲೆ ಇಸ್ರೇಲ್‌ ನಡೆಸಿದ ವೈಮಾನಿಕ ದಾಳಿಗೆ 100ಕ್ಕೂ ಹೆಚ್ಚು ಪ್ಯಾಲೆಸ್ತೀನ್‌ ನಾಗರಿಕರು ಮೃತಪಟ್ಟಿದ್ದಾರೆ. ಮೃತರಲ್ಲಿ ಮಹಿಳೆಯರು ಮತ್ತು ಮಕ್ಕಳು ಸೇರಿದ್ದಾರೆ.

ಇಸ್ರೇಲ್‌ ದಾಳಿ ಹಿನ್ನೆಲೆ ಗಾಝಾ ಪಟ್ಟಿಯಿಂದ ಲಕ್ಷಾಂತರ ಮಂದಿ ಈಜಿಪ್ಟ್ ಗಡಿಯಲ್ಲಿರುವ ರಫಾಗೆ ವಲಸೆ ಹೋಗಿದ್ದರು. ಈಜಿಪ್ಟ್ ಗಡಿಯಲ್ಲಿರುವ ರಫಾದಲ್ಲಿ ಜನಸಂಖ್ಯೆಯು 1.4 ಮಿಲಿಯನ್ ಇದೆ ಎಂದು ವರದಿಯು ತಿಳಿಸಿದೆ. ಅಲ್ಲಿ ನಾಗರಿಕರು ಆಹಾರ, ನೀರು ಮತ್ತು ಔಷಧದ ಕೊರೆತೆಯನ್ನು ಎದುರಿಸುತ್ತಿದ್ದಾರೆ. ಇದೀಗ ಇಸ್ರೇಲ್‌ ರಫಾದಲ್ಲಿ ನಿರಾಶ್ರಿತರನ್ನೇ ಟಾರ್ಗೆಟ್‌ ಮಾಡಿ ದಾಳಿಯನ್ನು ನಡೆಸುತ್ತಿದ್ದು, ಪ್ಯಾಲೆಸ್ತೀನ್‌ ನಾಗರಿಕರನ್ನು ಹತ್ಯೆ ಮಾಡುತ್ತಿದೆ. ಇಸ್ರೇಲ್ ರಫಾವನ್ನು ಕೊನೆಯದಾಗಿ ಉಳಿದಿರುವ ಹಮಾಸ್‌ನ ಭದ್ರಕೋಟೆ ಎಂದು ಹೇಳಿದೆ.

ಇಸ್ರೇಲ್‌ ನಡೆಸುತ್ತಿರುವ ಈ ನರಹತ್ಯೆಯನ್ನು ಮಾನವತಾವಾದಿಗಳು ಮತ್ತು ಇಸ್ರೇಲ್‌ನ ಕೆಲವು ನಿಕಟ ಮಿತ್ರರು ಕೂಡ ತೀವ್ರವಾಗಿ ಟೀಕಿಸಿದ್ದರು. ರಾಫಾದ ಮೇಲೆ ಇಸ್ರೇಲ್ ಆಕ್ರಮಣವು ದುರಂತವಾಗಿದೆ ಮತ್ತು ಅದು ಮುಂದುವರಿಯಬಾರದು ಎಂದು ಡಾಕ್ಟರ್ಸ್ ವಿದೌಟ್ ಬಾರ್ಡರ್ಸ್ ಹೇಳಿಕೆಯಲ್ಲಿ ತಿಳಿಸಿತ್ತು. ಗಾಝಾದಲ್ಲಿ ಸುರಕ್ಷಿತವಾದ ಸ್ಥಳವಿಲ್ಲ ಮತ್ತು ಗಾಝಾದ ಜನರಿಗೆ ಅಲ್ಲಿಂದ ನಿರ್ಗಮಿಸಲು ಯಾವುದೇ ಮಾರ್ಗವಿಲ್ಲ ಎಂದು ಹೇಳಿದ್ದಾರೆ. UNRWA ಏಜೆನ್ಸಿಯ ಮುಖ್ಯಸ್ಥರಾದ ಫಿಲಿಪ್ ಲಾಝಾರಿನಿ ಮಾತನಾಡಿ, ರಾಫಾದಲ್ಲಿ ಆತಂಕ ಹೆಚ್ಚುತ್ತಿದೆ, ಜನರಿಗೆ ಎಲ್ಲಿಗೆ ಹೋಗಬೇಕೆಂದು ತಿಳಿದಿಲ್ಲ ಎಂದು ಹೇಳಿದ್ದಾರೆ. ನಿರಾಶ್ರಿತರ ಶಿಬಿರದ ಮೇಲಿನ ಯಾವುದೇ ಯುದ್ಧವನ್ನು ಸ್ವೀಕರಿಸಲು ಸಾಧ್ಯವಿಲ್ಲ ಎಂದು ನಾರ್ವೇಜಿಯನ್ ನಿರಾಶ್ರಿತರ ಮಂಡಳಿಯ ಪ್ರಧಾನ ಕಾರ್ಯದರ್ಶಿ ಜಾನ್ ಎಗೆಲ್ಯಾಂಡ್ ಕೂಡ ಹೇಳಿದ್ದರು.

ಎಪಿ ವರದಿಯ ಪ್ರಕಾರ, ಗಾಝಾ ಆರೋಗ್ಯ ಸಚಿವಾಲಯದ ವಕ್ತಾರ ಅಶ್ರಫ್ ಅಲ್-ಕಿದ್ರಾ ಅವರು ದಾಳಿಯಲ್ಲಿ ಕನಿಷ್ಠ 67 ಜನರು ಸಾವನ್ನಪ್ಪಿದ್ದಾರೆ ಎಂದು ಹೇಳಿದ್ದಾರೆ. ಆದರೆ ರಾಫಾದಲ್ಲಿನ ಅಬು ಯೂಸೆಫ್ ಅಲ್-ನಜ್ಜರ್ ಆಸ್ಪತ್ರೆಯಲ್ಲಿ ಪತ್ರಕರ್ತರೊಬ್ಬರು ಕನಿಷ್ಠ 50 ದೇಹಗಳನ್ನು ಎಣಿಸಿದ್ದಾರೆ ಎಂದು ಹೇಳಿಕೊಂಡಿದ್ದಾರೆ.

ರಾಫಾದಲ್ಲಿ ರಾತ್ರಿ ಉಂಟಾಗಿರುವ ಬಾಂಬ್ ಸ್ಫೋಟದಿಂದಾಗಿ ಮನೆಗಳು ಧ್ವಂಸವಾಗಿರುವುದು ಮತ್ತು ರಕ್ತಸಿಕ್ತವಾದ ದೇಹಗಳು ಆಸ್ಪತ್ರೆಗಳಲ್ಲಿ ಬಿದ್ದುಕೊಂಡಿರುವುದು ಕಂಡು ಬಂದಿದೆ. ವರದಿಯ ಪ್ರಕಾರ, ಇಸ್ರೇಲ್‌ ವಿಶೇಷ ಪಡೆಗಳು ರಾಫಾದಲ್ಲಿ ಎರಡನೇ ಮಹಡಿಯ ಅಪಾರ್ಟ್‌ಮೆಂಟ್‌ಗೆ ಮುಂಜಾನೆ 1:49ಕ್ಕೆ ಗುಂಡಿನ ದಾಳಿ ನಡೆಸಿದೆ. ಇದಾದ ಒಂದು ನಿಮಿಷದ ನಂತರ ಸುತ್ತಮುತ್ತಲಿನ ಪ್ರದೇಶಗಳ ಮೇಲೆ ವಾಯುದಾಳಿ ನಡೆಸಿದೆ.

ಗಾಝಾದ ಆರೋಗ್ಯ ಸಚಿವಾಲಯದ ಪ್ರಕಾರ ಅ.7ರಂದು ಯುದ್ಧ ಆರಂಭವಾದ ದಿನದಿಂದ ಗಾಝಾದಲ್ಲಿ 27,000ಕ್ಕೂ ಅಧಿಕ ಜನರ ಹತ್ಯೆ ನಡೆದಿದೆ. ಇದರಲ್ಲಿ 12,300ಕ್ಕೂ ಹೆಚ್ಚು ಮಕ್ಕಳು ಮತ್ತು ಹದಿಹರೆಯದವರು ಸೇರಿದ್ದಾರೆ. ಸುಮಾರು 8,400 ಮಹಿಳೆಯರ ಹತ್ಯೆ ನಡೆದಿದೆ. ಗಾಝಾದಲ್ಲಿ ಒಟ್ಟು ಸಾವಿನ ಸಂಖ್ಯೆಯಲ್ಲಿ 43% ದಷ್ಟು ಮಕ್ಕಳು ಮತ್ತು ಹದಿಹರೆಯದವರು ಸೇರಿದ್ದಾರೆ. ಇನ್ನು 60,000ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದು, ಮನೆ-ನಿವಾಸಗಳನ್ನು ಕಳೆದುಕೊಂಡು ಲಕ್ಷಾಂತರ ಮಂದಿ ನಿರಾಶ್ರಿತರಾಗಿದ್ದಾರೆ.

ಇದನ್ನು ಓದಿ: ದಿಲ್ಲಿ ಚಲೋ: ಬಲಪ್ರಯೋಗ ಕೊನೆಯ ಆಯ್ಕೆಯಾಗಬೇಕು: ಹೈಕೋರ್ಟ್

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...

ಚಲಿಸುತ್ತಿದ್ದ ಸ್ಲೀಪರ್ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : ಚಾಲಕ, ಕಂಡಕ್ಟರ್ ಬಂಧನ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 2012ರಲ್ಲಿ ನಡೆದ ನಿರ್ಭಯಾ ಪ್ರಕರಣವನ್ನು ನೆನಪಿಸುವಂತಹ ಆಘಾತಕಾರಿ ಘಟನೆಯೊಂದು ನಡೆದಿದೆ. ಸ್ಲೀಪರ್‌ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. indiatoday.in ವರದಿಯ ಪ್ರಕಾರ, ಈ ಘಟನೆಯು ಆಗಸ್ಟ್ 4ರ...

ಜಗತ್ತಿನ ಪ್ರತಿಯೊಬ್ಬರಿಗೂ ಲ್ಯಾಪ್‌ಟಾಪ್ ಕೊಳ್ಳುವಷ್ಟು ಕಪ್ಪು ಹಣ ಪ್ರಪಂಚದಲ್ಲಿದೆ: ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್

ಅಕ್ರಮ ಹಣ ವರ್ಗಾವಣೆ (Money Laundering) ಮತ್ತು 'ಡಿಜಿಟಲ್ ಅರೆಸ್ಟ್' ನಂತಹ ಆನ್‌ಲೈನ್ ವಂಚನೆಗಳ ಪ್ರಮಾಣದ ಕುರಿತು ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಈ ರೀತಿಯ...

ಪೆಟ್ರೋಲ್‌ನಲ್ಲಿ ಎಥನಾಲ್ ಪ್ರಮಾಣ ಬಹಿರಂಗಪಡಿಸುವಂತೆ ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಪೆಟ್ರೋಲ್‌ನಲ್ಲಿ ಬೆರೆಸಲಾಗುವ ಎಥನಾಲ್ ಪ್ರಮಾಣವನ್ನು ಕಡ್ಡಾಯವಾಗಿ ನಮೂದಿಸಬೇಕು ಮತ್ತು ವಾಹನಗಳಿಗೆ ಎಥನಾಲ್ ಮಿಶ್ರಿತ ಇಂಧನದ ಹೊಂದಾಣಿಕೆಯ ಬಗ್ಗೆ ಹೆಚ್ಚಿನ ಪಾರದರ್ಶಕತೆ ತರಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆ...