Homeಮುಖಪುಟಕೇಂದ್ರದಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ಎಂಎಸ್‌ಪಿಗೆ ಕಾನೂನು ಖಾತರಿ: ಮಲ್ಲಿಕಾರ್ಜುನ ಖರ್ಗೆ

ಕೇಂದ್ರದಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ಎಂಎಸ್‌ಪಿಗೆ ಕಾನೂನು ಖಾತರಿ: ಮಲ್ಲಿಕಾರ್ಜುನ ಖರ್ಗೆ

- Advertisement -
- Advertisement -

ದೆಹಲಿಯ ಸುತ್ತಮುತ್ತ ರೈತರ ಪ್ರತಿಭಟನೆಯ ನಡುವೆ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮಹತ್ವದ ಘೋಷಣೆ ಮಾಡಿದ್ದು, ಕೇಂದ್ರದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ ಕನಿಷ್ಠ ಬೆಂಬಲ ಬೆಲೆ (ಎಂಎಸ್‌ಪಿ) ಖಾತರಿ ಕಾನೂನು ಜಾರಿಗೆ ತರಲಾಗುವುದು ಎಂದು ಹೇಳಿದ್ದಾರೆ.

ರಾಹುಲ್ ಗಾಂಧಿ ಮುನ್ನಡೆಸುತ್ತಿರುವ ಭಾರತ್ ಜೋಡೋ ನ್ಯಾಯ ಯಾತ್ರೆಯ ಭಾಗವಾಗಿ ಛತ್ತೀಸ್‌ಗಢದ ಸುರ್ಗುಜಾ ವಿಭಾಗದ ವಿಭಾಗೀಯ ಕೇಂದ್ರವಾದ ಅಂಬಿಕಾಪುರದಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, “ಎಂಎಸ್‌ಪಿ ಖಾತರಿ ಕಾನೂನು ಜಾರಿಗೆ ತರಲಾಗುವುದು. ಇದು ಕಾಂಗ್ರೆಸ್ ಪಕ್ಷದ ಗ್ಯಾರಂಟಿ. ಛತ್ತೀಸ್‌ಗಢದ ನೆಲದಿಂದ ಮೊದಲ ಬಾರಿಗೆ ನಾನು ಇದನ್ನು ಘೋಷಿಸುತ್ತಿದ್ದೇನೆ” ಎಂದಿದ್ದಾರೆ.

ತಮ್ಮ ಬಹುಕಾಲದ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರೈತರು ನಡೆಸುತ್ತಿರುವ ಹೋರಾಟವನ್ನು ಉಲ್ಲೇಖಿಸಿದ ಖರ್ಗೆ, “ಕೇಂದ್ರದ ಬಿಜೆಪಿ ಸರ್ಕಾರವು ರೈತರು ದೆಹಲಿಗೆ ಬರದಂತೆ ತಾತ್ಕಾಲಿಕ ಕಾಂಕ್ರೀಟ್ ಗೋಡೆಗಳು ಮತ್ತು ಮೊಳೆಗಳನ್ನು ಬಳಸಿ ಅಮಾನವೀಯ ಕೃತ್ಯಗಳನ್ನು ಎಸಗುತ್ತಿದೆ. ರೈತರನ್ನು ಯಾವ ರೀತಿ ದಮನ ಮಾಡಲಾಗುತ್ತಿದೆ ನೋಡಿ. ಇದು ದೇಶದ ಪ್ರಜಾಪ್ರಭುತ್ವದ ಸ್ಥಿತಿಯನ್ನು ಸೂಚಿಸುತ್ತದೆ” ಎಂದು ಹೇಳಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ ಖರ್ಗೆ, ಕಾಂಗ್ರೆಸ್ ಪಕ್ಷದ ಗ್ಯಾರಂಟಿಗಳನ್ನು ಮೋದಿ ನಕಲು ಮಾಡಿದ್ದಾರೆ. ಅವರು ಭಾರತ ರತ್ನ ಪ್ರಶಸ್ತಿಗೆ ನಾಮನಿರ್ದೇಶನ ಮಾಡಿರುವ ಎಂ.ಎಸ್ ಸ್ವಾಮಿನಾಥನ್ ಅವರ ಬೆಂಬಲದೊಂದಿಗೆ ದೇಶಕ್ಕೆ ಹಸಿರು ಕ್ರಾಂತಿಯನ್ನು ತಂದದ್ದು ಕಾಂಗ್ರೆಸ್. ಆದರೆ, ಏನೂ ಮಾಡದೆ ಮೋದಿ ಅದರ ಕ್ರೆಡಿಟ್ ತೆಗೆದುಕೊಳ್ಳುತ್ತಿದ್ದಾರೆ. ಸ್ವಾಮಿನಾಥನ್ ಅವರಿಗೆ ಅತ್ಯುನ್ನತ ಗೌರವ ಸಿಗುತ್ತಿರುವುದಕ್ಕೆ ತುಂಬಾ ಸಂತೋಷವಾಗಿದೆ. ಹಸಿರು ಕ್ರಾಂತಿ ಮತ್ತು ಸ್ವಾಮಿನಾಥನ್ ಕೊಡುಗೆಯನ್ನು ಗಮನದಲ್ಲಿಟ್ಟುಕೊಂಡು ಕಾಂಗ್ರೆಸ್ ಪಕ್ಷವು ರೈತರ ಹಿತದೃಷ್ಟಿಯಿಂದ ಎಂಎಸ್‌ಪಿಗೆ ಕಾನೂನು ಖಾತರಿ ನೀಡಲಿದೆ ಎಂದು ಭರವಸೆ ನೀಡಿದ್ದಾರೆ.

“ನಾವು ಕರ್ನಾಟಕ ಮತ್ತು ತೆಲಂಗಾಣದ ಚುನಾವಣೆಗಳನ್ನು ಐದು ಗ್ಯಾರಂಟಿಗಳ ಆಧಾರದ ಮೇಲೆ ಗೆದ್ದಿದ್ದೇವೆ. ಈಗ ಕಾಂಗ್ರೆಸ್ ಪಕ್ಷದ ಗ್ಯಾರಂಟಿಗಳನ್ನು ಮೋದಿ ಗ್ಯಾರಂಟಿ ಎಂದು ಕಾಪಿ ಮಾಡಲಾಗುತ್ತಿದೆ. ನಮ್ಮ ವಿಷಯದಲ್ಲಿ ಗ್ಯಾರಂಟಿಗಳು ಪಕ್ಷಕ್ಕೆ ಸೇರಿದ್ದು. ಆದರೆ, ಬಿಜೆಪಿಯ ವಿಷಯದಲ್ಲಿ ಅದು ಮೋದಿಗೆ ಸೇರಿದ್ದು. ಇದು ಅವರ ನಿರಂಕುಶ ಸ್ವಭಾವವನ್ನು ತೋರಿಸುತ್ತದೆ” ಎಂದು ಖರ್ಗೆ ಹೇಳಿದ್ದಾರೆ.

ಜನರನ್ನು ತಪ್ಪು ದಾರಿಗೆಳೆಯಲು ಸುಳ್ಳು ಹೇಳುವ ಮೋದಿ ‘ಸುಳ್ಳಿನ ಸರದಾರ’. ಅವರನ್ನು ನಂಬಬೇಡಿ ಎಂದು ಜನರಲ್ಲಿ ಮನವಿ ಮಾಡಿದರು. ದೇಶದಲ್ಲಿ ಪ್ರತಿ ಎರಡು ಗಂಟೆಗೆ ಐವರು ದಲಿತರು ಮತ್ತು ಬುಡಕಟ್ಟು ಜನಾಂಗದವರು ದೌರ್ಜನ್ಯ ಎದುರಿಸುತ್ತಿದ್ದಾರೆ ಎಂದು ಖರ್ಗೆ ಪ್ರಧಾನಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಎಂಎಸ್‌ಪಿ ಖಾತರಿ ಪುನರುಚ್ಚರಿಸಿದ ರಾಹುಲ್ ಗಾಂಧಿ:

ರಾಹುಲ್ ಗಾಂಧಿ ಕೂಡ ಎಂಎಸ್‌ಪಿ ಖಾತರಿ ವಿಚಾರವನ್ನೇ ಪುನರುಚ್ಚರಿಸಿದ್ದು, “ರೈತ ಬಂಧುಗಳೇ, ಇಂದು ಐತಿಹಾಸಿಕ ದಿನ. ಸ್ವಾಮಿನಾಥನ್ ಆಯೋಗದ ಪ್ರಕಾರ ಬೆಳೆಗಳ ಮೇಲೆ ಪ್ರತಿ ರೈತರಿಗೆ ಎಂಎಸ್‌ಪಿ ಕಾನೂನುಬದ್ಧ ಖಾತರಿ ನೀಡಲು ಕಾಂಗ್ರೆಸ್ ನಿರ್ಧರಿಸಿದೆ. ಈ ಕ್ರಮವು 15 ಕೋಟಿ ರೈತ ಕುಟುಂಬಗಳ ಏಳಿಗೆಯನ್ನು ಖಾತ್ರಿಪಡಿಸುವ ಮೂಲಕ ಅವರ ಜೀವನವನ್ನು ಸುಧಾರಿಸುತ್ತದೆ. ನ್ಯಾಯದ ಹಾದಿಯಲ್ಲಿ ಇದು ಕಾಂಗ್ರೆಸ್‌ನ ಮೊದಲ ಗ್ಯಾರಂಟಿ” ಎಂದು ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ್ದಾರೆ.

ಹಲವು ರಾಜ್ಯಗಳ ರೈತರು ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಕೇಂದ್ರ ಸರ್ಕಾರದ ವಿರುದ್ದ ಹೋರಾಟ ನಡೆಸುತ್ತಿದ್ದಾರೆ. ಎಂಎಸ್‌ಪಿ ಖಾತರಿ ಕಾನೂನು ಜಾರಿಗೊಳಿಸುವುದು ಅವರ ಪ್ರಮುಖ ಬೇಡಿಕೆಯಾಗಿದೆ.

ಇದನ್ನೂ ಓದಿ : ಭಾರತ್‌ ಜೋಡೋ ನ್ಯಾಯ ಯಾತ್ರೆ: ಬಿಜೆಪಿ ಸರಕಾರದಿಂದ ರೈತರಿಗೆ ಅನ್ಯಾಯ; ರಾಹುಲ್‌ ಗಾಂಧಿ ವಾಗ್ಧಾಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ರಾಜಭವನ’ಗಳನ್ನು ‘ಲೋಕಭವನ’ಗಳೆಂದು ಮರುನಾಮಕರಣ; ಇದು ಒಕ್ಕೂಟ ವ್ಯವಸ್ಥೆ ಮತ್ತು ಭಾಷಾ ಸಮಾನತೆಯ ಮೇಲಿನ ಆಕ್ರಮಣ: ಜಾಗೃತ ಕರ್ನಾಟಕ

ದೇಶಾದಾದ್ಯಂತ ಇರುವ ರಾಜಭವನಗಳ ಹೆಸರನ್ನು ಲೋಕಭವನ ಎಂದು ಮರುನಾಮಕರಣ ಮಾಡುವುದಾಗಿ ಕೇಂದ್ರ ಗೃಹಸಚಿವಾಲಯ ತೀರ್ಮಾನಿಸಿದೆ. ಕೇಂದ್ರದ  ಈ ನೀತಿಯನ್ನು ವಿರೋಧಿಸಿರುವ ಜಾಗೃತ ಕರ್ನಾಟಕ ದೇಶದ ಎಲ್ಲಾ ಹಿಂದಿಯೇತರ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದೆ....

ಯುಜಿಸಿ ಈಕ್ವಿಟಿ ನಿಯಮಗಳ ಮೇಲಿನ ಸುಪ್ರೀಂ ಕೋರ್ಟ್ ತಡೆಗೆ ವಿದ್ಯಾರ್ಥಿಗಳ ಪ್ರತಿಭಟನೆ, ರೋಹಿತ್ ಕಾಯ್ದೆಗೆ ಒತ್ತಾಯ

ಯುಜಿಸಿ ಇಕ್ವಿಟಿ ನಿಯಮಗಳಿಗೆ ಸುಪ್ರೀಂ ಕೋರ್ಟ್ ನೀಡಿದ ತಡೆಯಾಜ್ಞೆಯ ವಿರುದ್ಧ ಮತ್ತು ವಿಶ್ವವಿದ್ಯಾಲಯಗಳಲ್ಲಿ ಜಾತಿ ತಾರತಮ್ಯವನ್ನು ಎದುರಿಸಲು ಶಾಸನಬದ್ಧ ರೋಹಿತ್ ಕಾಯ್ದೆಯನ್ನು ಜಾರಿಗೆ ತರುವಂತೆ ಒತ್ತಾಯಿಸಿ ಅಖಿಲ ಭಾರತ ವಿದ್ಯಾರ್ಥಿ ಸಂಘ (ಎಐಎಸ್ಎ)...

ನರವಾಣೆ ಅಪ್ರಕಟಿತ ಪುಸ್ತಕ ಗದ್ದಲ | ಸತ್ಯ ಹೊರಬಂದರೆ ಮೋದಿ, ರಾಜನಾಥ್ ಸಿಂಗ್ ಮುಖವಾಡ ಬಯಲಾಗಲಿದೆ : ರಾಹುಲ್ ಗಾಂಧಿ

ಮಾಜಿ ಸೇನಾ ಮುಖ್ಯಸ್ಥ ಜನರಲ್ ಮನೋಜ್ ಮುಕುಂದ್ ನರವಾಣೆ ಅವರ ಅಪ್ರಕಟಿತ ಆತ್ಮಚರಿತ್ರೆ ಕುರಿತು ರಾಹುಲ್ ಗಾಂಧಿ ಸೋಮವಾರ (ಫೆ.2) ಲೋಕಸಭೆಯಲ್ಲಿ ಉಲ್ಲೇಖಿಸಿದ್ದು, ಈ ವೇಳೆ ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ತೀವ್ರ...

ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ಘರ್ಷಣೆ : ಮೂವರ ಬಂಧನ

ಗುಜರಾತ್‌ನ ಪಠಾಣ್ ತಾಲೂಕಿನ ಚದ್ರುಮಣ ಗ್ರಾಮದಲ್ಲಿ ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ನಡೆದ ಗಲಾಟೆಗೆ ಸಂಬಂಧಿಸಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದು, ಇನ್ನೂ ಐವರ ಬಂಧನಕ್ಕೆ ಬಲೆ ಬೀಸಿದ್ದಾರೆ. ಆರೋಪಿಗಳ ವಿರುದ್ದ ಎಸ್‌ಸಿ/ಎಸ್‌ಟಿ...

ಲೋಕಸಭೆಯಲ್ಲಿ ಲಡಾಖ್ ಬಿಕ್ಕಟ್ಟಿನ ಬಗ್ಗೆ ಮಾಜಿ ಸೇನಾ ಮುಖ್ಯಸ್ಥರ ಅಪ್ರಕಟಿತ ಆತ್ಮಚರಿತ್ರೆ ಉಲ್ಲೇಖಿಸಿದ ರಾಹುಲ್ ಗಾಂಧಿ: ಸಭೆಯಲ್ಲಿ ತೀವ್ರ ಗದ್ದಲ

ಸೋಮವಾರ ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಮಾಜಿ ಸೇನಾ ಮುಖ್ಯಸ್ಥ ಎಂಎಂ ನರವಾಣೆ ಅವರ ಆತ್ಮಚರಿತ್ರೆಯಿಂದ ಉಲ್ಲೇಖಿಸಲು ಪ್ರಯತ್ನಿಸಿದ ನಂತರ ಗದ್ದಲ ಭುಗಿಲೆದ್ದಿತು. ರಾಹುಲ್ ಮಾತನಾಡಲು ಪ್ರಾರಂಭಿಸುತ್ತಿದ್ದಂತೆ, ರಕ್ಷಣಾ ಸಚಿವ...

ಪಂಜಾಬ್ ನಿರೀಕ್ಷೆಗಳನ್ನು ಪೂರೈಸುವಲ್ಲಿ ಕೇಂದ್ರ ಬಜೆಟ್ ಮತ್ತೊಮ್ಮೆ ವಿಫಲವಾಗಿದೆ: ಸಿಎಂ ಭಗವಂತ್ ಮಾನ್

ಕೇಂದ್ರ ಬಜೆಟ್ ಮತ್ತೊಮ್ಮೆ ಪಂಜಾಬ್‌ನ ನಿರೀಕ್ಷೆಗಳನ್ನು ಪೂರೈಸುವಲ್ಲಿ ವಿಫಲವಾಗಿದೆ ಎಂದು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಮತ್ತು ಆಡಳಿತಾರೂಢ ಆಮ್ ಆದ್ಮಿ ಪಕ್ಷದ (ಎಎಪಿ) ಸರ್ಕಾರದ ಸಚಿವರು ಭಾನುವಾರ ಅಭಿಪ್ರಾಯಪಟ್ಟಿದ್ದಾರೆ. ಬಜೆಟ್ ರೈತರಿಗೆ ಯಾವುದೇ...

ರಾಜ್ಯಪಾಲರು ಪೂರ್ಣ ಭಾಷಣ ಓದಿಲ್ಲ, ‘ಜೈ ಸಂವಿಧಾನ’ ಎನ್ನುವುದನ್ನು ಉಲ್ಲೇಖಿಸದೆ ಹೋದರು : ಸಿಎಂ ಸಿದ್ದರಾಮಯ್ಯ

ರಾಜ್ಯಪಾಲರು ಪೂರ್ತಿ ಭಾಷಣ ಓದದೆ ತರಾತುರಿಯಲ್ಲಿ ಹೋದರು. ಭಾಷಣದಲ್ಲಿದ್ದ "ಜೈ ಸಂವಿಧಾನ" ಎನ್ನುವುದನ್ನೂ ಉಲ್ಲೇಖಿಸದೆ ತೆರಳಿದರು. ರಾಷ್ಟ್ರಗೀತೆ ಮುಗಿಯುವವರೆಗೂ ಕಾಯದೆ ಹೋಗಿಬಿಟ್ಟರು. ಇದು ಸರಿಯಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಬಿಜೆಪಿ ಶಾಸಕ...

ಉತ್ತರಾಖಂಡ| ಹಿಂದುತ್ವ ಗುಂಪಿನ ಕಿರುಕುಳದಿಂದ ಮುಸ್ಲಿಂ ಅಂಗಡಿ ಮಾಲೀಕನನ್ನು ರಕ್ಷಿಸಿದ ದೀಪಕ್ ಕುಮಾರ್

ಸ್ಥಳೀಯ ಮುಸ್ಲಿಂ ಅಂಗಡಿ ಮಾಲೀಕನ ವಿರುದ್ಧ ಬಜರಂಗದಳ ಸದಸ್ಯರು ನೀಡುತ್ತಿದ್ದ ಕಿರುಕುಳವನ್ನು ಜಿಮ್ ಮಾಲೀಕ ದೀಪಕ್ ಕುಮಾರ್ ಸ್ಥಳದಲ್ಲೇ ಎದುರಿಸಿದ್ದಾರೆ. ಆಕ್ರೋಶಿತರಾದ ಹಿಂದುತ್ವ ಗುಂಪಿನ ಸದಸ್ಯರು ದೀಪಕ್ ವಿರುದ್ಧವೇ ಪ್ರತಿಭಟನೆ ನಡೆಸಿದ್ದು, ಹಲವಾರ...

ಎಸ್‌ಐಆರ್ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ನಡೆಸುವ ಭಾರತೀಯ ಚುನಾವಣಾ ಆಯೋಗದ (ಇಸಿಐ) ನಿರ್ಧಾರವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ...

ದಕ್ಷಿಣ ಪಿನಾಕಿನಿ ಜಲವಿವಾದ : ನ್ಯಾಯಮಂಡಳಿ ಸ್ಥಾಪಿಸಲು ಸುಪ್ರೀಂ ಕೋರ್ಟ್ ಆದೇಶ

ದಕ್ಷಿಣ ಪಿನಾಕಿನಿ (ಪೆನ್ನೈಯಾರ್) ನದಿ ನೀರಿನ ಹಂಚಿಕೆಗೆ ಸಂಬಂಧಿಸಿದಂತೆ ತಮಿಳುನಾಡು ಮತ್ತು ಕರ್ನಾಟಕ ರಾಜ್ಯಗಳ ನಡುವೆ ಬಾಕಿ ಇರುವ ವಿವಾದಗಳನ್ನು ಪರಿಹರಿಸಲು ನ್ಯಾಯಮಂಡಳಿ ಸ್ಥಾಪಿಸುವಂತೆ ಸುಪ್ರೀಂ ಕೋರ್ಟ್ ಸೋಮವಾರ (ಫೆ.2) ನಿರ್ದೇಶನ ನೀಡಿದೆ. ಕೇಂದ್ರ...