Homeಕರ್ನಾಟಕಆರ್‌ಬಿಎಎನ್‌ಎಂಎಸ್ ಕಾಲೇಜು ಪ್ರಾಂಶುಪಾಲರಿಂದ ದಲಿತ ಸಮುದಾಯದ ಪ್ರಾಧ್ಯಾಪಕರಿಗೆ ಅನ್ಯಾಯ ಆರೋಪ; ದೀರ್ಘಕಾಲದಿಂದ ಅಮಾನತಿನಲ್ಲಿಟ್ಟು ಮಾನಸಿಕ ಕಿರುಕುಳ

ಆರ್‌ಬಿಎಎನ್‌ಎಂಎಸ್ ಕಾಲೇಜು ಪ್ರಾಂಶುಪಾಲರಿಂದ ದಲಿತ ಸಮುದಾಯದ ಪ್ರಾಧ್ಯಾಪಕರಿಗೆ ಅನ್ಯಾಯ ಆರೋಪ; ದೀರ್ಘಕಾಲದಿಂದ ಅಮಾನತಿನಲ್ಲಿಟ್ಟು ಮಾನಸಿಕ ಕಿರುಕುಳ

- Advertisement -
- Advertisement -

ಜಾತಿ ಮತ್ತು ಭಾಷೆಯ ಕಾರಣಕ್ಕಾಗಿ ಕೆಲಸದ ಸ್ಥಳದಲ್ಲಿ ಮಾನಸಿಕ ಹಾಗೂ ದೈಹಿಕ ಕಿರುಕುಳದ ಪ್ರಕರಣಗಳು ಆಗಾಗ ಕೇಳಿಬರುತ್ತಿವೆ. ಇದನ್ನು ತಡೆಗಟ್ಟಲು ಹಲವು ಕಾನೂನುಗಳು ಇದ್ದರೂ, ಬಂಡವಾಳಶಾಹಿಗಳು ಅದ್ಯಾವುದಕ್ಕೂ ಹೆದರದೆ ತಮ್ಮ ಅಟ್ಟಹಾಸ ಮೆರೆಯುತ್ತಾರೆ. ಬೆಂಗಳೂರಿನ ಅತ್ಯಂತ ಹಳೆಯ ಶಿಕ್ಷಣ ಸಂಸ್ಥೆಯಾದ ಹಲಸೂರಿನ ಆರ್‌ಬಿಎಎನ್‌ಎಂಎಸ್‌ (RBANM’S) ಕಾಲೇಜಿನಲ್ಲಿ ಉತ್ತರ ಭಾರತ ಮೂಲದ ಪ್ರಾಂಶುಪಾಲರಾದ ಡಾ. ಚೇತನ್ ಬಜಾಜ್ ಅವರು ಪ್ರಾದೇಶಿಕತೆ ಹಾಗೂ ಜಾತಿ ಕಾರಣಕ್ಕಾಗಿ ಅಲ್ಲಿನ ಸಿಬ್ಬಂದಿಗಳಿಗೆ ಕಿರುಕುಳ ನೀಡುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ಪ್ರಾಂಶುಪಾಲರು ಇಷ್ಟೆಲ್ಲಾ ದೌರ್ಜನ್ಯ, ದಬ್ಬಾಳಿಕೆ ನಡೆಯುತ್ತಿದ್ದರೂ ಸಂಸ್ಥೆಯ ಆಡಳಿತ ಮಂಡಳಿ ಪದಾಧಿಕಾರಿಗಳು ಮಾತ್ರ ಕಣ್ಣು ಮುಚ್ಚಿ ಕುಳಿತಿದ್ದು, ಹಲವು ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ತೊಂದರೆ ಅನುಭವಿಸುತ್ತಿದ್ದಾರೆ.

ಪರೀಕ್ಷಾ ಕೊಠಡಿಯಲ್ಲಿ ಮೊಬೈಲ್‌ ಫೋನ್‌ ಬಳಸುತ್ತಿದ್ದನ್ನು ಪ್ರಶ್ನಿಸಿದ ದಲಿತ ಸಮುದಾಯದ ಪ್ರಾಧ್ಯಾಪಕ ಡಾ.  ಅವಿನಾಶ್. ವಿ, ಬೋಧಕೇತರ ಸಿಬ್ಬಂದಿ ದೀಪಾ ಸೇರಿದಂತೆ ಐದು ಜನರನ್ನು ಸಕಾರಣವಿಲ್ಲದೆ ಅಮಾನತು ಮಾಡಿ, ವಿಚಾರಣೆಯನ್ನೇ ನಡೆಸದೆ ಮಾನಸಿಕ ಹಿಂಸೆ ನೀಡುತ್ತಿದ್ದಾರೆ. ಕಳೆದ ಐದು ತಿಂಗಳಿನಿಂದ ಹಲವು ಸಿಬ್ಬಂದಿಗಳನ್ನು ಅಮಾನತಿನಲ್ಲಿಟ್ಟಿರುವ ಆರ್‌ಬಿಎಎನ್‌ಎಂಎಸ್‌ ಕಾಲೇಜು ಆಡಳಿತ ಮಂಡಳಿ, ದೀರ್ಘಕಾಲದಿಂದ ವಿಚಾರಣೆ ನಡೆಸದೆ ಮಾನಸಿಕ ಕಿರುಕುಳ ನೀಡುತ್ತಿದೆ ಎಂದು ಸಿಬ್ಬಂದಿಗಳು ಅಳಲು ತೋಡಿಕೊಂಡಿದ್ದಾರೆ.

ಪ್ರಾಂಶುಪಾಲರಾದ ಡಾ. ಚೇತನ್ ಬಜಾಜ್

ಈ ಬಗ್ಗೆ ‘ನಾನುಗೌರಿ.ಕಾಂ‘ ಜತೆಗೆ ಮಾತನಾಡಿದ ಡಾ. ಅವಿನಾಶ್, ‘ಕಳೆದ ಆರು ವರ್ಷಗಳಿಂದ ನಾನು ನಿಷ್ಠೆಯಿಂದ ಸಂಸ್ಥೆಗಾಗಿ ಕೆಲಸ ಮಾಡುತ್ತಿದ್ದೇನೆ.. ಈ ಆರು ವರ್ಷಗಳಿಲ್ಲಿ ಹಲವಾರು ಬದಲಾವಣೆಗಳು ಆದರೂ ನನ್ನ ವೃತ್ತಿ ಧರ್ಮವನ್ನು ಪಾಲಿಸಿಕೊಂಡು ಬರುತ್ತಿದ್ದೇನೆ. ನಾನು 2018ರಲ್ಲಿ ಮಂಗಳೂರು ವಿಶ್ವ ವಿದ್ಯಾಲಯದಿಂದ ಡಾಕ್ಟರೇಟ್ ಪದವಿ ಪಡೆದು ಆರ್‌ಬಿಎಎನ್‌ಎಂಎಸ್‌ ಕಾಲೇಜಿಗೆ ಬಂದಾಗ, ಅಲ್ಲಿದ್ದ ಉಪನ್ಯಾಸಕರಿಗೆ ಸಂಶೋಧನೆಯ ಅರಿವೆ ಇರಲಿಲ್ಲ. ಪ್ರಾಂಶುಪಾಲರು ಸಂಶೋಧನೆಯ ಮಹತ್ವದ ಬಗ್ಗೆ ತಿಳಿಸಿರಲಿಲ್ಲ, ಪ್ರಾಧ್ಯಾಪಕರಿಗೂ ಈ ಬಗ್ಗೆ ಆಸಕ್ತಿ ಇರಲಿಲ್ಲ. ನಾನು ಅಲ್ಲಿಗೆ ಹೋದಾಗ ಹಲವಾರು ವೈಮನಸ್ಸು ಇತ್ತು. ಆದರೆ, ನಾನು ಎಲ್ಲವನ್ನೂ ಸರಿದೂಗಿಸಿಕೊಂಡು ಕೆಲಸ ಮಾಡಿದ್ದೇನೆ’ ಎಂದರು.

‘ನಾನು ಅಲ್ಲಿಗೆ ಕೆಲಸಕ್ಕೆ ಸೇರಿದಾಗ ಬಿಎನಲ್ಲಿ ಒಂದಂಕಿ ವಿದ್ಯಾರ್ಥಿಗಳು ಮಾತ್ರ ಇದ್ದರು.. ಪಿಯು ಕಾಲೇಜಿನ ವಿದ್ಯಾರ್ಥಿಗಳ ಮನವೊಲಿಸಿದ ನಾನು, ಸುಮಾರು 29 ವಿದ್ಯಾರ್ಥಿಗಳನ್ನು ಬಿಎ ಪದವಿಗೆ ದಾಖಲಾಗುವಂತೆ ಮಾಡಿದ್ದೆ; ಕೊರೊನಾ ನಂತರವೂ 25 ವಿದ್ಯಾರ್ಥಿಗಳು ಬಿಎಗೆ ದಾಖಲಾಗಿದ್ದರು. ನನ್ನ ಶ್ರಮದಿಂದ ಪ್ರಸ್ತುತ ಈ ಸಾಲಿನಲ್ಲಿ ಬಿಎ ಪದವಿಗೆ ಸುಮಾರು 32 ಜನ ವಿದ್ಯಾರ್ಥಿಗಳು ದಾಖಲಾತಿ ಪಡೆದುಕೊಂಡಿದ್ದಾರೆ. ಕೆಲವರಿಗೆ ಕಲಾ ವಿಭಾಗ ತೆಗೆದುಕೊಳ್ಳುವುದುಕ್ಕೂ ಆಸಕ್ತಿ ಇರಲಿಲ್ಲ. ಆದರೆ, ನಾನು ಸಾಕಷ್ಟು ಶ್ರಮಪಟ್ಟು ದಾಖಲಾತಿ ಹೆಚ್ಚಿಸಿದ್ದೇನೆ. ನಾನು ಹಲವು ವರ್ಷಗಳಿಂದ ಅಲ್ಲಿ ಕೆಲಸ ಮಾಡುತ್ತಿರುವುದರಿಂದ ವಿದ್ಯಾರ್ಥಿಗಳ ಕುರಿತು ಪ್ರಾಥಮಿಕ ಮಾಹಿತಿ ತಿಳಿದುಕೊಂಡಿದ್ದೇನೆ; ಆ ಮೂಲಕ ದಾಖಲಾತಿ ಹೆಚ್ಚಿಸಿದ್ದೇನೆ’ ಎಂದು ಹೇಳಿದರು.

‘ನಮ್ಮ ಕಾಲೇಜಿನಲ್ಲಿ 20ಕ್ಕೂ ಹೆಚ್ಚು ವಿದ್ಯಾರ್ಥಿಗಳು ಇಂದು ಬಿಎ ಪದವಿಗೆ ದಾಖಲಾಗಿದ್ದರೆ.. ಅದಕ್ಕೆ ಕಾರಣ ನನ್ನ ಶ್ರಮ ಮಾತ್ರ. ನ್ಯಾಕ್ ಕಮಿಟಿಯವರು ಕೂಡ ನ್ನನ್ನನ್ನು ‘ಮಲ್ಟಿ ಟ್ಯಾಲೆಂಟೆಡ್’ ಎಂದು ನಮ್ಮ ಪ್ರಾಂಶುಪಾಲರಿಗೆ ಹೇಳಿದ್ದಾರೆ; ಸಂಸ್ಥೆ ಬೆಳೆಯಲು ನನ್ನ ಕಡೆಯಿಂದ ಸಾಕಷ್ಟು ಶ್ರಮ ಹಾಕಿದ್ದೇನೆ. ಆದರೆ, ಇಷ್ಟೆಲ್ಲಾ ಕಾಲೇಜಿನ ಬೆಳವಣಿಗೆಗಾಗಿ ಶ್ರಮಿಸಿದ್ದರೂ ನನ್ನನ್ನು ಕಡೆಗಣಿಸುತ್ತಿದ್ದಾರೆ’ ಎಂದು ಅವಿನಾಶ್ ಬೇಸರ ವ್ಯಕ್ತಪಡಿಸಿದರು.

‘ಸಂಸ್ಥೆಗಾಗಿ ಇಷ್ಟೆಲ್ಲಾ ಶ್ರಮಿಸಿರುವ ನಾನು, ಕಾಲೇಜಿಗೆ ಕೆಟ್ಟ ಹೆಸರು ಬರುತ್ತದೆ ಎಂಬ ಕಾರಣಕ್ಕೆ ಅದರ ವಿರುದ್ಧ ಹೋರಾಡಿದ್ದೇನೆ. 2023ರ ಸೆಪ್ಟಂಬರ್ ತಿಂಗಳಲ್ಲಿ ಮಕ್ಕಳು ಸೆಮಿಸ್ಟರ್ ಪರೀಕ್ಷೆ ಬರೆಯುತ್ತಿದ್ದರು; ಅದೇ ಸಮಯದಲ್ಲಿ ಪರೀಕ್ಷಾ ಕೊಠಡಿಯಲ್ಲೆ ಮಹಿಳಾ ಪ್ರಾದ್ಯಾಪಕರು ತಮ್ಮ ಮೊಬೈಲ್‌ ಫೋನಿನಲ್ಲಿ ಮಾತನಾಡುತ್ತಿದ್ದರು. ಅದನ್ನು ಗಮನಿಸಿದ ನಾನು, ಪರೀಕ್ಷಾ ಮುಖ್ಯಸ್ಥರ ಗಮನಕ್ಕೆ ತಂದಿದ್ದೆ. ಆದರೆ, ಆ ಮಹಿಳಾ ಸಿಬ್ಬಂದಿ ನನ್ನ ವಿರುದ್ಧ ಸಂಸ್ಥೆಯ ಕಾರ್ಯದರ್ಶಿಗಳಿಗೆ ದೂರು ನೀಡಿ, ಅನುಮತಿ ಇಲ್ಲದೆ ನಾನು ಫೋಟೋ ತೆಗೆದಿದ್ದೇನೆ ಎಂದು ಆರೋಪ ಮಾಡಿದ್ದಾರೆ’ ಎಂದು ಮಾಹಿತಿ ನೀಡಿದರು.

‘ನಮ್ಮ ಸಂಸ್ಥೆಯ ಕಾರ್ಯದರ್ಶಿಗಳು ಪ್ರಕರಣದ ವಿಚಾರಣೆಯನ್ನೇ ನಡೆಸದೆ ಕಳೆದ ನಾಲ್ಕು ತಿಂಗಳಿಂದ ನನ್ನನ್ನು ಅಮಾನತಿನಲ್ಲಿ ಇಟ್ಟಿದ್ದಾರೆ. ಮಹಿಳಾ ಪ್ರಾಧ್ಯಾಪಕರು ನನ್ನ ವಿರುದ್ಧ ನೀಡಿದ ದೂರಿಗೆ ಸಾಕ್ಷಿ ಇದ್ದಿದ್ದರೆ ನನ್ನ ಮೇಲೆ ಕ್ರಮ ತೆಗೆದುಕೊಳ್ಳಲು ಇಷ್ಟು ದಿನ ಬೇಕಾಗಿತ್ತಾ’ ಎಂದು ಪ್ರಶ್ನಿಸಿದ್ದಾರೆ.

‘ನವೆಂಬರ್ ಆರನೇ ತಾರೀಖಿನಿಂದ ನಾನು ಈವರೆಗೆ ಅಮಾನತಿನಲ್ಲಿ ಇದ್ದೇನೆ. ನಾಲ್ಕು ತಿಂಗಳಿನಿಂದ ನನ್ನ ವಿಚಾರಣೆಯನ್ನೇ ನಡೆಸಿಲ್ಲ; ನನ್ನ ಜೀವನವನ್ನು ಹಾಳು ಮಾಡುವ ಏಕೈಕ ದುರುದ್ದೇಶದಿಂದ ನನಗೆ ಮಾನಸಿಕ ಹಿಂಸೆ ನೀಡುತ್ತಿದ್ದಾರೆ’ ಎಂದು ಅವಿನಾಶ್ ಆರೋಪಿಸಿದರು.

‘ನಮ್ಮ ಸಂಸ್ಥೆ ದಲಿತ ಅಭ್ಯುದಯಕ್ಕೆ ಎಂದು ಹೇಳುತ್ತಾರೆ. ಆದರೆ, ನಾನು ಕೂಡ ದಲಿತ, ನನ್ನ ಬಗ್ಗೆ ಇಷ್ಟೊಂದು ಅಸಡ್ಡೆ ಏಕೆ? ವಿದೇಶಗಳಲ್ಲಿ ಓದಿಕೊಂಡು ಬಂದಿದ್ದೇವೆ ಎಂದು ಹೇಳುವ ಇವರ ಮನಸ್ಸಿನಲ್ಲಿ ಕೊಳಕು ಇದೆ. ಇಲ್ಲದಿದ್ದರೆ ಇವರು ಇಷ್ಟು ದಿನ ನನ್ನ ವಿಚಾರಣೆ ನಡೆಸಿಲ್ಲ ಯಾಕೆ? ನಮ್ಮ ಕಾಲೇಜಿನ ಎಲ್ಲ ಕಡೆಯೂ ಸಿಸಿಟಿವಿ ಕ್ಯಾಮೆರಾಗಳಿವೆ; ಬೇಕಿದ್ದರೆ ಪರಿಶೀಲನೆ ನಡೆಸಲಿ. ಅದರಿಂದ ಅವರು ಒಂದು ನಿರ್ಧಾರಕ್ಕೆ ಬರುವುದಕ್ಕೆ ಸಾಧ್ಯವಾಗುತ್ತದೆ. ಆದರೆ, ಏನಾದರೂ ಮಾಡಿಕೊಳ್ಳಲಿ ಎಂಬ ಮನಸ್ಥಿಯ ಆಡಳಿತ ಮಂಡಳಿ ನನಗೆ ಅನ್ಯಾಯ ಮಾಡುತ್ತಿದೆ’ ಎಂದು ಬೇಸರ ಹೊರಹಾಕಿದರು.

ಕಳೆದ ಐದು ತಿಂಗಳಿನಿಂದ ಅಮಾನತಿನಲ್ಲಿರುವ ಬೋಧಕೇತರ ಸಿಬ್ಬಂದಿ ದೀಪಾ ಎಂಬುವವರು ಮಾತನಾಡಿ, ‘ಹೊಸದಾಗಿ ಬಂದಿರುವ ಪ್ರಾಂಶುಪಾಲರಿಗೆ ಕಾಲೇಜು ಆಡಳಿತದ ಬಗ್ಗೆ ಗೊತ್ತಿಲ್ಲ; ಅವರನ್ನು ಯಾಕಾಗಿ ನೇಮಕ ಮಾಡಿಕೊಂಡಿದ್ದಾರೆಯೋ ಗೊತ್ತಿಲ್ಲ. ಅವರು ಅತಿಥಿ ಉಪನ್ಯಾಸಕ ಹಾಗೂ ತರಬೇತುದಾರಾಗಿದ್ದವರು, ಶೈಕ್ಷಣಿಕ ಸಂಸ್ಥೆಯಲ್ಲಿ ಕೆಲಸ ಮಾಡಿದ ಅನುಭವ ಇಲ್ಲ. ನಾನು ಇದೇ ಕಾಲೇಜಿನಲ್ಲಿ 18 ವರ್ಷ ಕೆಲಸ ಮಾಡಿದ ಅನುಭವ ಇದೆ, ನನ್ನ ಕೆಲಸದ ಬಗ್ಗೆ ಹಿಂದಿನ ಆಡಳಿತ ಮಂಡಳಿ ಒಳ್ಳೆಯ ಮಾತನಾಡಿದ್ದಾರೆ. ಈವರೆಗೆ ನಾಲ್ಕು ಜನ ಪ್ರಾಂಶುಪಾಲರು ನನ್ನ ಕೆಲಸವನ್ನು ಒಪ್ಪಿಕೊಂಡಿದ್ದಾರೆ’ ಎಂದರು.

‘ಉತ್ತರ ಭಾರತದಿಂದ ಬಂದಿರುವ ಪ್ರಾಂಶುಪಾಲರು ತಮಗೆ ಬೇಕಾದವರನ್ನು ಕೆಲಸಕ್ಕೆ ನೇಮಕ ಮಾಡಿಕೊಂಡು, ಸ್ಥಳೀಯರು ಮತ್ತು ಕನ್ನಡಿಗರನ್ನು ಕೆಲಸದಿಂದ ತೆಗೆಯುವುದಕ್ಕೆ ಪಿತೂರಿ ನಡೆಸುತ್ತಿದ್ದಾರೆ. ನಮ್ಮ ಬಗ್ಗೆ ಕಾರ್ಯದರ್ಶಿಗಳಿಗೆ ತಪ್ಪು ಮಾಹಿತಿ ನೀಡಿ, ಅವರನ್ನು ಭೇಟಿಯಾಗದಂತೆ ಮಾಡಿದ್ದಾರೆ. ಡಾ. ಅವಿನಾಶ್ ಅವರಿಗಿಂತ ಮೊದಲೆ ನನ್ನನ್ನು ಅಮಾನತು ಮಾಡಿದ್ದಾರೆ. ಐದು ತಿಂಗಳಿನಿಂದ ಅಮಾನತಿನಲ್ಲಿಟ್ಟು, ನನಗೆ ಆರು ತಿಂಗಳ ವೇತನವನ್ನೂ ಕೊಡದೆ ಸತಾಯಿಸುತ್ತಿದ್ದಾರೆ. ನಾನು ಕೊಟ್ಟಿರುವ ಲಾಯರ್ ನೋಟಿಸ್‌ಗೂ ಅವರು ಉತ್ತರಿಸಿಲ್ಲ, ಸಂಸ್ಥೆ ವಿಚಾರಣೆ ಆಗುವವರೆಗೂ ಲೇಬರ್ ಕೋರ್ಟಿಗೆ ಹೋಗುವುದಕ್ಕೆ ಸಾಧ್ಯವಿಲ್ಲ’ ಎಂದು ದೀಪಾ ಅಸಹಾಯಕತೆ ವ್ಯಕ್ತಪಡಿಸಿದರು.

‘ಪ್ರಾಂಶುಪಾಲರು ಮತ್ತು ಕಾಲೇಜು ಆಡಳಿತ ಮಂಡಳಿ ನೀಡುವ ಮಾನಸಿಕ ಹಿಂಸೆಯಿಂದ ನಾನು ಅನಾರೋಗ್ಯಕ್ಕೆ ಈಡಾಗಿದ್ದೇನೆ. ಒಟ್ಟು ಐದು ಜನರನ್ನು ಅಮಾನತಿನಲ್ಲಿಟ್ಟಿದ್ದು, 12 ಜನರಿಗೆ ಮಾನಸಿಕ ಹಿಂಸೆ ನೀಡಿ ಕೆಲಸ ಬಿಡಿಸಿದ್ದಾರೆ’ ಎಂದು ಮಾಹಿತಿ ನೀಡಿದ್ದಾರೆ.

ಈ ಬಗ್ಗೆ ಮಾಹಿತಿ ಪಡೆಯಲು ಸಂಸ್ಥೆಯ ಕಾರ್ಯದರ್ಶಿಗಳಾದ ಸಂಜೀವ್ ನರೇನ್ ಅವರನ್ನು ಸಂಪರ್ಕಿಸಲಾಯಿತು. ಆದರೆ ಅವರು ಈ ವಿಚಾರದ ಬಗ್ಗೆ ಪ್ರತಿಕ್ರಿಯೆ ನೀಡುವುದಿಲ್ಲ ಎಂದು ಕೂಡಲೇ ಕರೆ ಸ್ಥಗಿತಗೊಳಿಸಿದರು; ಪ್ರಾಂಶುಪಾಲರು ಕರೆ ಸ್ವೀಕರಿಸಲಿಲ್ಲ.

ಇದನ್ನೂ ಓದಿ; ಸುಪ್ರೀಂ ಕೋರ್ಟ್‌ಗೆ ಸಲ್ಲಿಸಿದ್ದ ಜಾಮೀನು ಅರ್ಜಿ ಹಿಂಪಡೆದ ಉಮರ್‌ ಖಾಲಿದ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...