Homeಕರ್ನಾಟಕಆರ್‌ಬಿಎಎನ್‌ಎಂಎಸ್ ಕಾಲೇಜು ಪ್ರಾಂಶುಪಾಲರಿಂದ ದಲಿತ ಸಮುದಾಯದ ಪ್ರಾಧ್ಯಾಪಕರಿಗೆ ಅನ್ಯಾಯ ಆರೋಪ; ದೀರ್ಘಕಾಲದಿಂದ ಅಮಾನತಿನಲ್ಲಿಟ್ಟು ಮಾನಸಿಕ ಕಿರುಕುಳ

ಆರ್‌ಬಿಎಎನ್‌ಎಂಎಸ್ ಕಾಲೇಜು ಪ್ರಾಂಶುಪಾಲರಿಂದ ದಲಿತ ಸಮುದಾಯದ ಪ್ರಾಧ್ಯಾಪಕರಿಗೆ ಅನ್ಯಾಯ ಆರೋಪ; ದೀರ್ಘಕಾಲದಿಂದ ಅಮಾನತಿನಲ್ಲಿಟ್ಟು ಮಾನಸಿಕ ಕಿರುಕುಳ

- Advertisement -
- Advertisement -

ಜಾತಿ ಮತ್ತು ಭಾಷೆಯ ಕಾರಣಕ್ಕಾಗಿ ಕೆಲಸದ ಸ್ಥಳದಲ್ಲಿ ಮಾನಸಿಕ ಹಾಗೂ ದೈಹಿಕ ಕಿರುಕುಳದ ಪ್ರಕರಣಗಳು ಆಗಾಗ ಕೇಳಿಬರುತ್ತಿವೆ. ಇದನ್ನು ತಡೆಗಟ್ಟಲು ಹಲವು ಕಾನೂನುಗಳು ಇದ್ದರೂ, ಬಂಡವಾಳಶಾಹಿಗಳು ಅದ್ಯಾವುದಕ್ಕೂ ಹೆದರದೆ ತಮ್ಮ ಅಟ್ಟಹಾಸ ಮೆರೆಯುತ್ತಾರೆ. ಬೆಂಗಳೂರಿನ ಅತ್ಯಂತ ಹಳೆಯ ಶಿಕ್ಷಣ ಸಂಸ್ಥೆಯಾದ ಹಲಸೂರಿನ ಆರ್‌ಬಿಎಎನ್‌ಎಂಎಸ್‌ (RBANM’S) ಕಾಲೇಜಿನಲ್ಲಿ ಉತ್ತರ ಭಾರತ ಮೂಲದ ಪ್ರಾಂಶುಪಾಲರಾದ ಡಾ. ಚೇತನ್ ಬಜಾಜ್ ಅವರು ಪ್ರಾದೇಶಿಕತೆ ಹಾಗೂ ಜಾತಿ ಕಾರಣಕ್ಕಾಗಿ ಅಲ್ಲಿನ ಸಿಬ್ಬಂದಿಗಳಿಗೆ ಕಿರುಕುಳ ನೀಡುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ಪ್ರಾಂಶುಪಾಲರು ಇಷ್ಟೆಲ್ಲಾ ದೌರ್ಜನ್ಯ, ದಬ್ಬಾಳಿಕೆ ನಡೆಯುತ್ತಿದ್ದರೂ ಸಂಸ್ಥೆಯ ಆಡಳಿತ ಮಂಡಳಿ ಪದಾಧಿಕಾರಿಗಳು ಮಾತ್ರ ಕಣ್ಣು ಮುಚ್ಚಿ ಕುಳಿತಿದ್ದು, ಹಲವು ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ತೊಂದರೆ ಅನುಭವಿಸುತ್ತಿದ್ದಾರೆ.

ಪರೀಕ್ಷಾ ಕೊಠಡಿಯಲ್ಲಿ ಮೊಬೈಲ್‌ ಫೋನ್‌ ಬಳಸುತ್ತಿದ್ದನ್ನು ಪ್ರಶ್ನಿಸಿದ ದಲಿತ ಸಮುದಾಯದ ಪ್ರಾಧ್ಯಾಪಕ ಡಾ.  ಅವಿನಾಶ್. ವಿ, ಬೋಧಕೇತರ ಸಿಬ್ಬಂದಿ ದೀಪಾ ಸೇರಿದಂತೆ ಐದು ಜನರನ್ನು ಸಕಾರಣವಿಲ್ಲದೆ ಅಮಾನತು ಮಾಡಿ, ವಿಚಾರಣೆಯನ್ನೇ ನಡೆಸದೆ ಮಾನಸಿಕ ಹಿಂಸೆ ನೀಡುತ್ತಿದ್ದಾರೆ. ಕಳೆದ ಐದು ತಿಂಗಳಿನಿಂದ ಹಲವು ಸಿಬ್ಬಂದಿಗಳನ್ನು ಅಮಾನತಿನಲ್ಲಿಟ್ಟಿರುವ ಆರ್‌ಬಿಎಎನ್‌ಎಂಎಸ್‌ ಕಾಲೇಜು ಆಡಳಿತ ಮಂಡಳಿ, ದೀರ್ಘಕಾಲದಿಂದ ವಿಚಾರಣೆ ನಡೆಸದೆ ಮಾನಸಿಕ ಕಿರುಕುಳ ನೀಡುತ್ತಿದೆ ಎಂದು ಸಿಬ್ಬಂದಿಗಳು ಅಳಲು ತೋಡಿಕೊಂಡಿದ್ದಾರೆ.

ಪ್ರಾಂಶುಪಾಲರಾದ ಡಾ. ಚೇತನ್ ಬಜಾಜ್

ಈ ಬಗ್ಗೆ ‘ನಾನುಗೌರಿ.ಕಾಂ‘ ಜತೆಗೆ ಮಾತನಾಡಿದ ಡಾ. ಅವಿನಾಶ್, ‘ಕಳೆದ ಆರು ವರ್ಷಗಳಿಂದ ನಾನು ನಿಷ್ಠೆಯಿಂದ ಸಂಸ್ಥೆಗಾಗಿ ಕೆಲಸ ಮಾಡುತ್ತಿದ್ದೇನೆ.. ಈ ಆರು ವರ್ಷಗಳಿಲ್ಲಿ ಹಲವಾರು ಬದಲಾವಣೆಗಳು ಆದರೂ ನನ್ನ ವೃತ್ತಿ ಧರ್ಮವನ್ನು ಪಾಲಿಸಿಕೊಂಡು ಬರುತ್ತಿದ್ದೇನೆ. ನಾನು 2018ರಲ್ಲಿ ಮಂಗಳೂರು ವಿಶ್ವ ವಿದ್ಯಾಲಯದಿಂದ ಡಾಕ್ಟರೇಟ್ ಪದವಿ ಪಡೆದು ಆರ್‌ಬಿಎಎನ್‌ಎಂಎಸ್‌ ಕಾಲೇಜಿಗೆ ಬಂದಾಗ, ಅಲ್ಲಿದ್ದ ಉಪನ್ಯಾಸಕರಿಗೆ ಸಂಶೋಧನೆಯ ಅರಿವೆ ಇರಲಿಲ್ಲ. ಪ್ರಾಂಶುಪಾಲರು ಸಂಶೋಧನೆಯ ಮಹತ್ವದ ಬಗ್ಗೆ ತಿಳಿಸಿರಲಿಲ್ಲ, ಪ್ರಾಧ್ಯಾಪಕರಿಗೂ ಈ ಬಗ್ಗೆ ಆಸಕ್ತಿ ಇರಲಿಲ್ಲ. ನಾನು ಅಲ್ಲಿಗೆ ಹೋದಾಗ ಹಲವಾರು ವೈಮನಸ್ಸು ಇತ್ತು. ಆದರೆ, ನಾನು ಎಲ್ಲವನ್ನೂ ಸರಿದೂಗಿಸಿಕೊಂಡು ಕೆಲಸ ಮಾಡಿದ್ದೇನೆ’ ಎಂದರು.

‘ನಾನು ಅಲ್ಲಿಗೆ ಕೆಲಸಕ್ಕೆ ಸೇರಿದಾಗ ಬಿಎನಲ್ಲಿ ಒಂದಂಕಿ ವಿದ್ಯಾರ್ಥಿಗಳು ಮಾತ್ರ ಇದ್ದರು.. ಪಿಯು ಕಾಲೇಜಿನ ವಿದ್ಯಾರ್ಥಿಗಳ ಮನವೊಲಿಸಿದ ನಾನು, ಸುಮಾರು 29 ವಿದ್ಯಾರ್ಥಿಗಳನ್ನು ಬಿಎ ಪದವಿಗೆ ದಾಖಲಾಗುವಂತೆ ಮಾಡಿದ್ದೆ; ಕೊರೊನಾ ನಂತರವೂ 25 ವಿದ್ಯಾರ್ಥಿಗಳು ಬಿಎಗೆ ದಾಖಲಾಗಿದ್ದರು. ನನ್ನ ಶ್ರಮದಿಂದ ಪ್ರಸ್ತುತ ಈ ಸಾಲಿನಲ್ಲಿ ಬಿಎ ಪದವಿಗೆ ಸುಮಾರು 32 ಜನ ವಿದ್ಯಾರ್ಥಿಗಳು ದಾಖಲಾತಿ ಪಡೆದುಕೊಂಡಿದ್ದಾರೆ. ಕೆಲವರಿಗೆ ಕಲಾ ವಿಭಾಗ ತೆಗೆದುಕೊಳ್ಳುವುದುಕ್ಕೂ ಆಸಕ್ತಿ ಇರಲಿಲ್ಲ. ಆದರೆ, ನಾನು ಸಾಕಷ್ಟು ಶ್ರಮಪಟ್ಟು ದಾಖಲಾತಿ ಹೆಚ್ಚಿಸಿದ್ದೇನೆ. ನಾನು ಹಲವು ವರ್ಷಗಳಿಂದ ಅಲ್ಲಿ ಕೆಲಸ ಮಾಡುತ್ತಿರುವುದರಿಂದ ವಿದ್ಯಾರ್ಥಿಗಳ ಕುರಿತು ಪ್ರಾಥಮಿಕ ಮಾಹಿತಿ ತಿಳಿದುಕೊಂಡಿದ್ದೇನೆ; ಆ ಮೂಲಕ ದಾಖಲಾತಿ ಹೆಚ್ಚಿಸಿದ್ದೇನೆ’ ಎಂದು ಹೇಳಿದರು.

‘ನಮ್ಮ ಕಾಲೇಜಿನಲ್ಲಿ 20ಕ್ಕೂ ಹೆಚ್ಚು ವಿದ್ಯಾರ್ಥಿಗಳು ಇಂದು ಬಿಎ ಪದವಿಗೆ ದಾಖಲಾಗಿದ್ದರೆ.. ಅದಕ್ಕೆ ಕಾರಣ ನನ್ನ ಶ್ರಮ ಮಾತ್ರ. ನ್ಯಾಕ್ ಕಮಿಟಿಯವರು ಕೂಡ ನ್ನನ್ನನ್ನು ‘ಮಲ್ಟಿ ಟ್ಯಾಲೆಂಟೆಡ್’ ಎಂದು ನಮ್ಮ ಪ್ರಾಂಶುಪಾಲರಿಗೆ ಹೇಳಿದ್ದಾರೆ; ಸಂಸ್ಥೆ ಬೆಳೆಯಲು ನನ್ನ ಕಡೆಯಿಂದ ಸಾಕಷ್ಟು ಶ್ರಮ ಹಾಕಿದ್ದೇನೆ. ಆದರೆ, ಇಷ್ಟೆಲ್ಲಾ ಕಾಲೇಜಿನ ಬೆಳವಣಿಗೆಗಾಗಿ ಶ್ರಮಿಸಿದ್ದರೂ ನನ್ನನ್ನು ಕಡೆಗಣಿಸುತ್ತಿದ್ದಾರೆ’ ಎಂದು ಅವಿನಾಶ್ ಬೇಸರ ವ್ಯಕ್ತಪಡಿಸಿದರು.

‘ಸಂಸ್ಥೆಗಾಗಿ ಇಷ್ಟೆಲ್ಲಾ ಶ್ರಮಿಸಿರುವ ನಾನು, ಕಾಲೇಜಿಗೆ ಕೆಟ್ಟ ಹೆಸರು ಬರುತ್ತದೆ ಎಂಬ ಕಾರಣಕ್ಕೆ ಅದರ ವಿರುದ್ಧ ಹೋರಾಡಿದ್ದೇನೆ. 2023ರ ಸೆಪ್ಟಂಬರ್ ತಿಂಗಳಲ್ಲಿ ಮಕ್ಕಳು ಸೆಮಿಸ್ಟರ್ ಪರೀಕ್ಷೆ ಬರೆಯುತ್ತಿದ್ದರು; ಅದೇ ಸಮಯದಲ್ಲಿ ಪರೀಕ್ಷಾ ಕೊಠಡಿಯಲ್ಲೆ ಮಹಿಳಾ ಪ್ರಾದ್ಯಾಪಕರು ತಮ್ಮ ಮೊಬೈಲ್‌ ಫೋನಿನಲ್ಲಿ ಮಾತನಾಡುತ್ತಿದ್ದರು. ಅದನ್ನು ಗಮನಿಸಿದ ನಾನು, ಪರೀಕ್ಷಾ ಮುಖ್ಯಸ್ಥರ ಗಮನಕ್ಕೆ ತಂದಿದ್ದೆ. ಆದರೆ, ಆ ಮಹಿಳಾ ಸಿಬ್ಬಂದಿ ನನ್ನ ವಿರುದ್ಧ ಸಂಸ್ಥೆಯ ಕಾರ್ಯದರ್ಶಿಗಳಿಗೆ ದೂರು ನೀಡಿ, ಅನುಮತಿ ಇಲ್ಲದೆ ನಾನು ಫೋಟೋ ತೆಗೆದಿದ್ದೇನೆ ಎಂದು ಆರೋಪ ಮಾಡಿದ್ದಾರೆ’ ಎಂದು ಮಾಹಿತಿ ನೀಡಿದರು.

‘ನಮ್ಮ ಸಂಸ್ಥೆಯ ಕಾರ್ಯದರ್ಶಿಗಳು ಪ್ರಕರಣದ ವಿಚಾರಣೆಯನ್ನೇ ನಡೆಸದೆ ಕಳೆದ ನಾಲ್ಕು ತಿಂಗಳಿಂದ ನನ್ನನ್ನು ಅಮಾನತಿನಲ್ಲಿ ಇಟ್ಟಿದ್ದಾರೆ. ಮಹಿಳಾ ಪ್ರಾಧ್ಯಾಪಕರು ನನ್ನ ವಿರುದ್ಧ ನೀಡಿದ ದೂರಿಗೆ ಸಾಕ್ಷಿ ಇದ್ದಿದ್ದರೆ ನನ್ನ ಮೇಲೆ ಕ್ರಮ ತೆಗೆದುಕೊಳ್ಳಲು ಇಷ್ಟು ದಿನ ಬೇಕಾಗಿತ್ತಾ’ ಎಂದು ಪ್ರಶ್ನಿಸಿದ್ದಾರೆ.

‘ನವೆಂಬರ್ ಆರನೇ ತಾರೀಖಿನಿಂದ ನಾನು ಈವರೆಗೆ ಅಮಾನತಿನಲ್ಲಿ ಇದ್ದೇನೆ. ನಾಲ್ಕು ತಿಂಗಳಿನಿಂದ ನನ್ನ ವಿಚಾರಣೆಯನ್ನೇ ನಡೆಸಿಲ್ಲ; ನನ್ನ ಜೀವನವನ್ನು ಹಾಳು ಮಾಡುವ ಏಕೈಕ ದುರುದ್ದೇಶದಿಂದ ನನಗೆ ಮಾನಸಿಕ ಹಿಂಸೆ ನೀಡುತ್ತಿದ್ದಾರೆ’ ಎಂದು ಅವಿನಾಶ್ ಆರೋಪಿಸಿದರು.

‘ನಮ್ಮ ಸಂಸ್ಥೆ ದಲಿತ ಅಭ್ಯುದಯಕ್ಕೆ ಎಂದು ಹೇಳುತ್ತಾರೆ. ಆದರೆ, ನಾನು ಕೂಡ ದಲಿತ, ನನ್ನ ಬಗ್ಗೆ ಇಷ್ಟೊಂದು ಅಸಡ್ಡೆ ಏಕೆ? ವಿದೇಶಗಳಲ್ಲಿ ಓದಿಕೊಂಡು ಬಂದಿದ್ದೇವೆ ಎಂದು ಹೇಳುವ ಇವರ ಮನಸ್ಸಿನಲ್ಲಿ ಕೊಳಕು ಇದೆ. ಇಲ್ಲದಿದ್ದರೆ ಇವರು ಇಷ್ಟು ದಿನ ನನ್ನ ವಿಚಾರಣೆ ನಡೆಸಿಲ್ಲ ಯಾಕೆ? ನಮ್ಮ ಕಾಲೇಜಿನ ಎಲ್ಲ ಕಡೆಯೂ ಸಿಸಿಟಿವಿ ಕ್ಯಾಮೆರಾಗಳಿವೆ; ಬೇಕಿದ್ದರೆ ಪರಿಶೀಲನೆ ನಡೆಸಲಿ. ಅದರಿಂದ ಅವರು ಒಂದು ನಿರ್ಧಾರಕ್ಕೆ ಬರುವುದಕ್ಕೆ ಸಾಧ್ಯವಾಗುತ್ತದೆ. ಆದರೆ, ಏನಾದರೂ ಮಾಡಿಕೊಳ್ಳಲಿ ಎಂಬ ಮನಸ್ಥಿಯ ಆಡಳಿತ ಮಂಡಳಿ ನನಗೆ ಅನ್ಯಾಯ ಮಾಡುತ್ತಿದೆ’ ಎಂದು ಬೇಸರ ಹೊರಹಾಕಿದರು.

ಕಳೆದ ಐದು ತಿಂಗಳಿನಿಂದ ಅಮಾನತಿನಲ್ಲಿರುವ ಬೋಧಕೇತರ ಸಿಬ್ಬಂದಿ ದೀಪಾ ಎಂಬುವವರು ಮಾತನಾಡಿ, ‘ಹೊಸದಾಗಿ ಬಂದಿರುವ ಪ್ರಾಂಶುಪಾಲರಿಗೆ ಕಾಲೇಜು ಆಡಳಿತದ ಬಗ್ಗೆ ಗೊತ್ತಿಲ್ಲ; ಅವರನ್ನು ಯಾಕಾಗಿ ನೇಮಕ ಮಾಡಿಕೊಂಡಿದ್ದಾರೆಯೋ ಗೊತ್ತಿಲ್ಲ. ಅವರು ಅತಿಥಿ ಉಪನ್ಯಾಸಕ ಹಾಗೂ ತರಬೇತುದಾರಾಗಿದ್ದವರು, ಶೈಕ್ಷಣಿಕ ಸಂಸ್ಥೆಯಲ್ಲಿ ಕೆಲಸ ಮಾಡಿದ ಅನುಭವ ಇಲ್ಲ. ನಾನು ಇದೇ ಕಾಲೇಜಿನಲ್ಲಿ 18 ವರ್ಷ ಕೆಲಸ ಮಾಡಿದ ಅನುಭವ ಇದೆ, ನನ್ನ ಕೆಲಸದ ಬಗ್ಗೆ ಹಿಂದಿನ ಆಡಳಿತ ಮಂಡಳಿ ಒಳ್ಳೆಯ ಮಾತನಾಡಿದ್ದಾರೆ. ಈವರೆಗೆ ನಾಲ್ಕು ಜನ ಪ್ರಾಂಶುಪಾಲರು ನನ್ನ ಕೆಲಸವನ್ನು ಒಪ್ಪಿಕೊಂಡಿದ್ದಾರೆ’ ಎಂದರು.

‘ಉತ್ತರ ಭಾರತದಿಂದ ಬಂದಿರುವ ಪ್ರಾಂಶುಪಾಲರು ತಮಗೆ ಬೇಕಾದವರನ್ನು ಕೆಲಸಕ್ಕೆ ನೇಮಕ ಮಾಡಿಕೊಂಡು, ಸ್ಥಳೀಯರು ಮತ್ತು ಕನ್ನಡಿಗರನ್ನು ಕೆಲಸದಿಂದ ತೆಗೆಯುವುದಕ್ಕೆ ಪಿತೂರಿ ನಡೆಸುತ್ತಿದ್ದಾರೆ. ನಮ್ಮ ಬಗ್ಗೆ ಕಾರ್ಯದರ್ಶಿಗಳಿಗೆ ತಪ್ಪು ಮಾಹಿತಿ ನೀಡಿ, ಅವರನ್ನು ಭೇಟಿಯಾಗದಂತೆ ಮಾಡಿದ್ದಾರೆ. ಡಾ. ಅವಿನಾಶ್ ಅವರಿಗಿಂತ ಮೊದಲೆ ನನ್ನನ್ನು ಅಮಾನತು ಮಾಡಿದ್ದಾರೆ. ಐದು ತಿಂಗಳಿನಿಂದ ಅಮಾನತಿನಲ್ಲಿಟ್ಟು, ನನಗೆ ಆರು ತಿಂಗಳ ವೇತನವನ್ನೂ ಕೊಡದೆ ಸತಾಯಿಸುತ್ತಿದ್ದಾರೆ. ನಾನು ಕೊಟ್ಟಿರುವ ಲಾಯರ್ ನೋಟಿಸ್‌ಗೂ ಅವರು ಉತ್ತರಿಸಿಲ್ಲ, ಸಂಸ್ಥೆ ವಿಚಾರಣೆ ಆಗುವವರೆಗೂ ಲೇಬರ್ ಕೋರ್ಟಿಗೆ ಹೋಗುವುದಕ್ಕೆ ಸಾಧ್ಯವಿಲ್ಲ’ ಎಂದು ದೀಪಾ ಅಸಹಾಯಕತೆ ವ್ಯಕ್ತಪಡಿಸಿದರು.

‘ಪ್ರಾಂಶುಪಾಲರು ಮತ್ತು ಕಾಲೇಜು ಆಡಳಿತ ಮಂಡಳಿ ನೀಡುವ ಮಾನಸಿಕ ಹಿಂಸೆಯಿಂದ ನಾನು ಅನಾರೋಗ್ಯಕ್ಕೆ ಈಡಾಗಿದ್ದೇನೆ. ಒಟ್ಟು ಐದು ಜನರನ್ನು ಅಮಾನತಿನಲ್ಲಿಟ್ಟಿದ್ದು, 12 ಜನರಿಗೆ ಮಾನಸಿಕ ಹಿಂಸೆ ನೀಡಿ ಕೆಲಸ ಬಿಡಿಸಿದ್ದಾರೆ’ ಎಂದು ಮಾಹಿತಿ ನೀಡಿದ್ದಾರೆ.

ಈ ಬಗ್ಗೆ ಮಾಹಿತಿ ಪಡೆಯಲು ಸಂಸ್ಥೆಯ ಕಾರ್ಯದರ್ಶಿಗಳಾದ ಸಂಜೀವ್ ನರೇನ್ ಅವರನ್ನು ಸಂಪರ್ಕಿಸಲಾಯಿತು. ಆದರೆ ಅವರು ಈ ವಿಚಾರದ ಬಗ್ಗೆ ಪ್ರತಿಕ್ರಿಯೆ ನೀಡುವುದಿಲ್ಲ ಎಂದು ಕೂಡಲೇ ಕರೆ ಸ್ಥಗಿತಗೊಳಿಸಿದರು; ಪ್ರಾಂಶುಪಾಲರು ಕರೆ ಸ್ವೀಕರಿಸಲಿಲ್ಲ.

ಇದನ್ನೂ ಓದಿ; ಸುಪ್ರೀಂ ಕೋರ್ಟ್‌ಗೆ ಸಲ್ಲಿಸಿದ್ದ ಜಾಮೀನು ಅರ್ಜಿ ಹಿಂಪಡೆದ ಉಮರ್‌ ಖಾಲಿದ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ಯಾಲೆಸ್ತೀನ್ ಜನರೊಂದಿಗೆ ಒಗ್ಗಟ್ಟು ಪ್ರದರ್ಶನ: ದೆಹಲಿಯ ಮೆಕ್‌ಡೊನಾಲ್ಡ್ಸ್ ಹೊರಗೆ ಪ್ರತಿಭಟನೆ

ಪ್ಯಾಲೆಸ್ಟೈನ್ ಜೊತೆ ಒಗ್ಗಟ್ಟಿನ ಭಾರತೀಯ ಜನರು (ಐಪಿಎಸ್‌ಪಿ) ಗುಂಪಿನ ಸದಸ್ಯರು (ಏ.3) ಜನಪಥ್ ಪ್ರದೇಶದ ಮೆಕ್‌ಡೊನಾಲ್ಡ್ಸ್ ಔಟ್‌ಲೆಟ್‌ನ ಹೊರಗೆ ದಿಢೀರ್ ಪ್ರತಿಭಟನೆಯನ್ನು ಆಯೋಜಿಸಿದ್ದರು. ಪ್ಯಾಲೆಸ್ತೀನಿಯನ್ನರನ್ನು ಒಳಗೊಂಡ ನಡೆಯುತ್ತಿರುವ ಸಂಘರ್ಷದಲ್ಲಿ ಮೆಕ್‌ಡೊನಾಲ್ಡ್ಸ್ ಮತ್ತು ಕೋಕಾ-ಕೋಲಾದಂತಹ ಬಹುರಾಷ್ಟ್ರೀಯ...

‘ಇರಾನಿಯನ್ನರು ಸ್ಮಾರ್ಟ್ ಚೆಸ್ ಆಡುತ್ತಿದ್ದು, ಟ್ರಂಪ್ ಭ್ರಮಾಲೋಕದಲ್ಲಿದ್ದಾರೆ..’; ಮಾಜಿ ರಾಜತಾಂತ್ರಿಕ ಅಧಿಕಾರಿ ಕೆ.ಪಿ. ಫ್ಯಾಬಿಯನ್

ಪ್ರಸ್ತುತ ನಡೆಯುತ್ತಿರುವ ಪಶ್ಚಿಮ ಏಷ್ಯಾ ಸಂಘರ್ಷದ ಬಗ್ಗೆ ಮಾತನಾಡಿದ ಭಾರತದ ಮಾಜಿ ರಾಯಭಾರಿ ಕೆ.ಪಿ. ಫ್ಯಾಬಿಯನ್, "ಇರಾನಿಯನ್ನರು ಸ್ಮಾರ್ಟ್ ಚೆಸ್ ಆಟವನ್ನು ಆಡುತ್ತಿದ್ದಾರೆ. ಆದರೆ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗಳು...

‘ನಾನು ಸಂಸತ್ತಿಗೆ ಹೋಗುವುದು ಗದ್ದಲ ಸೃಷ್ಟಿಸಲು ಅಲ್ಲ’ : ಎಎಪಿ ಆರೋಪಗಳನ್ನು ತಳ್ಳಿ ಹಾಕಿದ ರಾಘವ್ ಚಡ್ಡಾ

ತನ್ನ ವಿರುದ್ದ ಆಮ್‌ ಆದ್ಮಿ ಪಕ್ಷ (ಎಎಪಿ) ಮಾಡಿರುವ ಎಲ್ಲಾ ಆರೋಪಗಳನ್ನು ರಾಘವ್ ಚಡ್ಡಾ ಶನಿವಾರ (ಏ.4) ಅಲ್ಲಗಳೆದಿದ್ದು, "ಅವೆಲ್ಲವೂ ಸುಳ್ಳು ಮತ್ತು ಸಂಘಟಿತ ಅಭಿಯಾನದ ಭಾಗ" ಎಂದಿದ್ದಾರೆ. "ಸಂಸತ್ತಿನಲ್ಲಿ ನನ್ನ ಉದ್ದೇಶ...

ಎಡರಂಗದಲ್ಲಿ ಎಡಪಂಥೀಯರೇ ಇಲ್ಲ; ದ್ವೇಷ ಹರಡುವ ಜನರೊಂದಿಗೆ ಪಿಣರಾಯಿ ಪಾಲುದಾರಿಕೆ ಹೊಂದಿದ್ದಾರೆ: ರಾಹುಲ್ ಗಾಂಧಿ

ಕೇರಳ ವಿಧಾನಸಭಾ ಚುನಾವಣೆ ಪ್ರಚಾರವು ಅಂತಿಮ ಹಂತಕ್ಕೆ ತಲುಪುತ್ತಿದ್ದಂತೆ ತೀಕ್ಷ್ಣವಾದ ರಾಜಕೀಯ ದಾಳಿಯನ್ನು ಆರಂಭಿಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, "ಸಿಪಿಐ-ಎಂ ನೇತೃತ್ವದ ಎಡಪಕ್ಷವು ತನ್ನ ಸೈದ್ಧಾಂತಿಕ ತಿರುಳನ್ನು ಕಳೆದುಕೊಳ್ಳುತ್ತಿದೆ" ಎಂದು ಆರೋಪಿಸಿದ್ದಾರೆ. "ಎಲ್‌ಡಿಎಫ್...

ಬಿಜೆಪಿ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಅಂದಿದ್ದೆ : ಅಣ್ಣಾಮಲೈ

"ವಿಧಾನಸಭಾ ಚುನಾವಣೆಗೆ ಬಿಜೆಪಿ ನನಗೆ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಎಂದು ಮುಂಚಿತವಾಗಿ ಹೈಕಮಾಂಡ್‌ಗೆ ತಿಳಿಸಿದ್ದೆ" ಎಂದು ತಮಿಳುನಾಡು ಬಿಜೆಪಿಯ ಮಾಜಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ಹೇಳಿದ್ದಾರೆ. ಚೆನ್ನೈ ವಿಮಾನ ನಿಲ್ದಾಣದಲ್ಲಿ ಶನಿವಾರ...

ಸುರಕ್ಷಿತವಾಗಿ ಹಾರ್ಮುಜ್ ದಾಟಿದ 7ನೇ ಎಲ್‌ಪಿಜಿ ಹಡಗು; ಸರದಿಯಲ್ಲಿ ಕಾಯುತ್ತಿವೆ ಭಾರತದ 17 ಟ್ಯಾಂಕರ್‌ಗಳು

ಭಾರತದ ಧ್ವಜ ಹೊಂದಿದ್ದ ಮತ್ತೊಂದು ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಟ್ಯಾಂಕರ್, ಗ್ರೀನ್ ಸಾನ್ವಿ ಹೆಸರಿನ ಹಡಗು ಹಾರ್ಮುಜ್ ಜಲಸಂಧಿಯ ಪೂರ್ವಕ್ಕೆ ಯಶಸ್ವಿಯಾಗಿ ತಲುಪಿದೆ. ಹಡಗು ಟ್ರ್ಯಾಕಿಂಗ್ ದತ್ತಾಂಶದ ಪ್ರಕಾರ, ನಡೆಯುತ್ತಿರುವ ಪಶ್ಚಿಮ...

ಸಿಬಿಎಸ್‌ಇ ಹಿಂದಿ ಹೇರಿಕೆಯು ತ್ರಿಭಾಷಾ ಸೂತ್ರ ಜಾರಿಯ ‘ರಹಸ್ಯ ಕಾರ್ಯವಿಧಾನ’: ಸ್ಟಾಲಿನ್ ಆರೋಪ

ಸಿಬಿಎಸ್‌ಇ ಇತ್ತೀಚೆಗೆ ಅನಾವರಣಗೊಳಿಸಿದ ಪಠ್ಯಕ್ರಮ ಚೌಕಟ್ಟಿನ ಕುರಿತು ಮಾತನಾಡಿದ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್, "ಮೂರು ಭಾಷಾ ಸೂತ್ರ ಎಂದು ಕರೆಯಲ್ಪಡುವುದು ವಾಸ್ತವದಲ್ಲಿ ಹಿಂದಿ ಮಾತನಾಡದ ಪ್ರದೇಶಗಳಿಗೆ ಹಿಂದಿ ವಿಸ್ತರಿಸುವ ರಹಸ್ಯ ಕಾರ್ಯವಿಧಾನವಾಗಿದೆ"...

‘ತಿಂದ ಮನೆಗೆ ಕನ್ನ ಹಾಕುವುದು ತರವಲ್ಲ, ನಿಮ್ಮ ಅಧಿಕ ಪ್ರಸಂಗ ಕರ್ನಾಟಕದ ಜನತೆ ಒಪ್ಪುವುದಿಲ್ಲ’ : ರಾಜ್ಯಪಾಲರ ವಿರುದ್ಧ ಕರವೇ ಕಿಡಿ

ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಲ್ಲಿ ತೃತೀಯ ಭಾಷೆಗೆ ಗ್ರೇಡಿಂಗ್ ನೀಡುವ ಸರ್ಕಾರದ ನಿರ್ಧಾರವನ್ನು ಮರುಪರಿಶೀಲಿಸುವಂತೆ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದಿರುವ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ರಾಜ್ಯಾಧ್ಯಕ್ಷ...

‘ತಪ್ಪಾಗಿದೆ’ : ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್‌ ವಿಧೇಯಕದ ಕುರಿತ ಟೀಕೆಗಳನ್ನು ಕೈಬಿಟ್ಟ ರಾಜಸ್ಥಾನ ಹೈಕೋರ್ಟ್

ಟ್ರಾನ್ಸ್‌ಜೆಂಡರ್ ಕಾಯ್ದೆ, 2019ರಲ್ಲಿ ಬದಲಾವಣೆಗಳನ್ನು ತರಲಿರುವ ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ವಿಧೇಯ, 2026ರ ಕುರಿತು ಈ ಹಿಂದೆ ಮಾಡಿದ್ದ ವಿಮರ್ಶಾತ್ಮಕ ಟಿಪ್ಪಣಿಗಳನ್ನು ರಾಜಸ್ಥಾನ ಹೈಕೋರ್ಟ್ ತೆಗೆದುಹಾಕಿದೆ ಎಂದು...

ಯುಸಿಸಿ ಜಾರಿ ನಂತರ ‘ಜನಸಂಖ್ಯಾ ನಿಯಂತ್ರಣ’ ಕಾನೂನಿಗೆ ಮುಂದಾದ ಉತ್ತರಾಖಂಡ ಬಿಜೆಪಿ ಸರ್ಕಾರ

ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತಂದ ನಂತರ, ಉತ್ತರಾಖಂಡ ಸರ್ಕಾರ ಈಗ ಜನಸಂಖ್ಯಾ ನಿಯಂತ್ರಣ ಕಾನೂನನ್ನು ತರುವ ಬಗ್ಗೆ ಯೋಚಿಸುತ್ತಿದೆ ಎಂದು ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಶುಕ್ರವಾರ ಸೂಚಿಸಿದ್ದಾರೆ. ಪ್ರಸ್ತಾವಿತ ಕ್ರಮದ...