Homeಕರ್ನಾಟಕಸೆಸ್, ಸರ್ ಚಾರ್ಜ್‌ನಲ್ಲೂ ನಮಗೆ ಪಾಲು ಕೊಡಬೇಕು: ಸಿಎಂ ಸಿದ್ದರಾಮಯ್ಯ

ಸೆಸ್, ಸರ್ ಚಾರ್ಜ್‌ನಲ್ಲೂ ನಮಗೆ ಪಾಲು ಕೊಡಬೇಕು: ಸಿಎಂ ಸಿದ್ದರಾಮಯ್ಯ

- Advertisement -
- Advertisement -

ನಾವು ಪ್ರಜಾಪ್ರಭುತ್ವ ಮತ್ತು ಒಕ್ಕೂಟ ವ್ಯವಸ್ಥೆಯನ್ನು ಒಪ್ಪಿಕೊಂಡ ಮೇಲೆ ಚೀನಾ ಮಾದರಿ ಏಕಸ್ವಾಮ್ಯವನ್ನು ಸಹಿಸಲು, ಅಮೆರಿಕದ ಅಧ್ಯಕ್ಷೀಯ ಮಾದರಿ ಆಡಳಿತವನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಎಕ್ಸ್ (ಟ್ವಿಟರ್)ನಲ್ಲಿ ಬುಧವಾರ ಸಂಜೆ ನಡೆದ ‘ನಮ್ಮ ತೆರಿಗೆ, ನಮ್ಮ ಹಕ್ಕು’ ಕನ್ನಡಿಗರ ಅಭಿಯಾನದ ಕುರಿತ ಸಾರ್ವಜನಿಕರ ಪ್ರಶ್ನೆಗಳಿಗೆ ಉತ್ತರಿಸುತ್ತಾ ಅವರು ಮಾತನಾಡಿದರು.

ಸಂವಿಧಾನ ಬದ್ದವಾದ ಒಕ್ಕೂಟ ವ್ಯವಸ್ಥೆಯನ್ನು ಇಡೀ ದೇಶ ಒಪ್ಪಿಕೊಂಡಿದೆ. ರಾಜ್ಯ ಮತ್ತು ಕೇಂದ್ರಗಳಿಗೆ ಜನರ ತೆರಿಗೆ ಹಣ ಹಂಚಿಕೆ ಆಗುತ್ತದೆ. ಇದಕ್ಕಾಗಿ 5 ವರ್ಷಕ್ಕೊಮ್ಮೆ ಹಣಕಾಸು ಆಯೋಗ ರಚನೆಯಾಗಿದೆ. ಆಯೋಗದ ಶಿಫಾರಸ್ಸುಗಳನ್ನು ಕೇಂದ್ರ ಸರ್ಕಾರ ಜಾರಿ ಮಾಡುತ್ತದೆ. 15 ನೇ ಹಣಕಾಸು ಆಯೋಗದಲ್ಲಿ ರಾಜ್ಯಕ್ಕೆ ಬಹಳ ದೊಡ್ಡ ಪ್ರಮಾಣದಲ್ಲಿ ಅನ್ಯಾಯ ಆಗಿದೆ. 14ನೇ ಆಯೋಗದಲ್ಲಿ ರಾಜ್ಯದ ತೆರಿಗೆ ಪಾಲು ಹಂಚಿಕೆ ಶೇ. 4.71 ಇದ್ದದ್ದು 15ನೇ ಹಣಕಾಸು ಆಯೋಗದಲ್ಲಿ ಶೇ. 3.64ಕ್ಕೆ ಕಡಿತ ಮಾಡಿಬಿಟ್ಟರು. ಅಂದರೆ, ಶೇ. 1.07 ನಮಗೆ ಕಡಿತ ಆಗಿದೆ. ಇದರಿಂದ ತೆರಿಗೆ ಹಂಚಿಕೆಯಲ್ಲಿ ರಾಜ್ಯಕ್ಕೆ 5 ವರ್ಷದಲ್ಲಿ ದೊಡ್ಡ ಹೊಡೆತ ಬಿದಿದ್ದು, ಬರೊಬ್ಬರಿ 1,87000 ಕೋಟಿ ರೂಪಾಯಿ ನಷ್ಟ ಆಗಿದೆ. ನಾವು ಕೊಡುವ ತೆರಿಗೆಯ 100 ರೂನಲ್ಲಿ ನಮಗೆ ವಾಪಾಸ್ ಬರೋದು ಕೇವಲ 12-13 ರೂ ಮಾತ್ರ ಎಂದು ಸಿಎಂ ತಿಳಿಸಿದರು.

ಬೆಂಗಳೂರು ಫೆರಿಫೆರಲ್ ರಸ್ತೆ ನಿರ್ಮಾಣ ಮತ್ತು ಕೆರೆಗಳ ಅಭಿವೃದ್ದಿಗೆ 6,000 ಕೋಟಿ ರೂ. ಸೇರಿ ಒಟ್ಟು 11,495 ಕೋಟಿ ರೂ. ವಿಶೇಷ ಅನುದಾನ ಕೊಡಲು ಹಣಕಾಸು ಆಯೋಗ ಶಿಫಾರಸ್ಸು ಮಾಡಿತ್ತು. ಇದನ್ನು ಕೊಡಬಾರದು ಎಂದು ತೀರ್ಮಾನ ಮಾಡಿ ತಡೆದವರು ನಿರ್ಮಲಾ ಸೀತಾರಾಮನ್. ಕರ್ನಾಟಕದಿಂದ ಆಯ್ಕೆಯಾದ ಅವರು ರಾಜ್ಯಕ್ಕೆ ಇಷ್ಟು ದೊಡ್ಡ ಅನ್ಯಾಯ ಮಾಡಿಬಿಟ್ಟರು ಎಂದು ಹೇಳಿದರು.

ಸೆಸ್ ಮತ್ತು ಸರ್ ಚಾರ್ಜ್‌ನಿಂದ ಸಂಗ್ರಹ ಆಗುವ ತೆರಿಗೆಗಳಲ್ಲಿ ಒಂದು ರೂಪಾಯಿಯನ್ನೂ ಕೇಂದ್ರ ಸರ್ಕಾರ ರಾಜ್ಯಗಳಿಗೆ ಕೊಡುವುದಿಲ್ಲ. ಆದ್ದರಿಂದ, ಇದರಲ್ಲೂ ನಾವು (ರಾಜ್ಯ) ಪಾಲು ಕೇಳಬೇಕು ಎಂದು ತೀರ್ಮಾನ ಮಾಡಿದ್ದೇವೆ. ಇದಕ್ಕಾಗಿ ಸಂವಿಧಾನಕ್ಕೆ ತಿದ್ದುಪಡಿ ತನ್ನಿ ಎಂದು ನಾನು ಒತ್ತಾಯಿಸುತ್ತೇನೆ. ಇದಕ್ಕೇ ನಾನು ‘ನನ್ನ ತೆರಿಗೆ ನನ್ನ ಹಕ್ಕು’ ಎನ್ನೋದು ಎಂದರು.

ರಾಜ್ಯಗಳ ಅಭಿವೃದ್ಧಿಗೆ ಸೆಸ್, ಸರ್ ಚಾರ್ಜ್ ನಲ್ಲಿ ಪಾಲು ಕೊಡಲೇಬೇಕು. ರಾಜ್ಯಗಳ ಅಭಿವೃದ್ಧಿ ಆಗದೆ ದೇಶದ ಅಭಿವೃದ್ಧಿ ಹೇಗೆ ಸಾಧ್ಯ? ರಾಜ್ಯಗಳು ದುರ್ಬಲ ಆದರೆ ದೇಶ ದುರ್ಬಲ ಆಗುತ್ತದೆ. ರಾಜ್ಯಗಳು ಸುಭದ್ರ ಆಗಿದ್ದರೆ ದೇಶವೂ ಸುಭದ್ರ ಆಗುತ್ತದೆ. ದೇಶ ಅಂದರೆ ರಾಜ್ಯಗಳ ಒಕ್ಕೂಟ. ತೆರಿಗೆ ವಸೂಲಾಗುವುದೇ ರಾಜ್ಯಗಳಿಂದ. ಹೀಗಿದ್ದಾಗ ರಾಜ್ಯಗಳಿಗೆ ನ್ಯಾಯಯುತವಾದ ತೆರಿಗೆ ಕೊಡಿ ಎನ್ನುವುದು ನಮ್ಮ ಒತ್ತಾಯ. ಅಭಿವೃದ್ಧಿಯನ್ನೇ ಮಾಡದ ಉತ್ತರ ಪ್ರದೇಶಕ್ಕೆ 2,18,000 ಸಾವಿರ ಕೋಟಿಗೂ ರೂಪಾಯಿಗೂ ಅಧಿಕ ಹಣ ಹೋಗುತ್ತದೆ. ನಮಗೆ 52,000 ಸಾವಿರ ಕೋಟಿ ರೂ. ಮಾತ್ರ ಕೊಡುತ್ತಿದ್ದಾರೆ. ಇದನ್ನು ಸಹಿಸಬೇಕಾ? ಉತ್ತರ ಪ್ರದೇಶದ ಜನಸಂಖ್ಯೆ ಹೆಚ್ಚಾಗಿದ್ದರೂ, ಅವರಿಂದ ಬರುವ ತೆರಿಗೆ ಕಡಿಮೆ. ಉತ್ತರ ಪ್ರದೇಶಕ್ಕೆ ಕೊಡಬೇಡಿ ಎನ್ನುವುದು ನಮ್ಮ ವಾದವಲ್ಲ. ನಮಗೆ ಅನ್ಯಾಯ ಮಾಡಬೇಡಿ ಎನ್ನುವುದು ನಮ್ಮ ಆಗ್ರಹ ಎಂದು ಸಿಎಂ ಹೇಳಿದರು.

ಮೋದಿ ಅವರು ಪ್ರಧಾನಿ ಆದ ಬಳಿಕ ಕಾರ್ಪೋರೇಟ್ ಮೇಲಿನ ತೆರಿಗೆ ಪ್ರಮಾಣವನ್ನು ಶೇ.30 ರಿಂದ ಶೇ.22.5ಕ್ಕೆ ಇಳಿಸಿದ್ದಾರೆ. ಕಾರ್ಪೋರೇಟ್‌ಗಳಿಗೆ ಕಡಿಮೆ ಮಾಡಿ ಅದರ ಹೊರೆಯನ್ನು ಜನಸಾಮಾನ್ಯರ ಮೇಲೆ ಹೇರಿದ್ದಾರೆ. ಅಂದರೆ ಬಡವರು, ಮಧ್ಯಮ ವರ್ಗದವರಿಂದ ತೆರಿಗೆ ವಸೂಲಿ ಮಾಡುವುದನ್ನು ಹೆಚ್ಚು ಮಾಡುತ್ತಲೇ ಇದ್ದಾರೆ. ನಮ್ಮ ಸಂಸದರು, ಕೇಂದ್ರದಲ್ಲಿ ಮಂತ್ರಿಗಳಾಗಿರುವವರು ಯಾರೂ ದೆಹಲಿಯಲ್ಲಿ ಈ ಅನ್ಯಾಯವನ್ನು ಪ್ರಶ್ನಿಸುವುದೇ ಇಲ್ಲ. ನಾವು ನಮ್ಮ ಹಕ್ಕುಗಳಿಗಾಗಿ ಹೋರಾಟ ಮಾಡುತ್ತಲೇ ಒಕ್ಕೂಟ ವ್ಯವಸ್ಥೆಯನ್ನು ಬಲಪಡಿಸುತ್ತೇವೆ. ಸಾಮಾನ್ಯ ಜನರ ಖರ್ಚಿನ ಮೇಲೆ ಹಾಕುವ ಜಿಎಸ್‌ಟಿ ತೆರಿಗೆ ಪ್ರಮಾಣ ಕಡಿಮೆ ಆಗಿ, ಶ್ರೀಮಂತರು ಬಳಸುವ ಐಷಾರಾಮಿ ವಸ್ತುಗಳ ಮೇಲೆ ಜೆಎಸ್‌ಟಿ ಹೆಚ್ಚಿಸಬೇಕು ಎಂದು ಆಗ್ರಹಿಸಿದರು.

ತಮ್ಮ ಆದಾಯಕ್ಕೂ ತೆರಿಗೆ ಕಟ್ಟಿ, ತಾವು ಮಾಡುವ ಖರ್ಚಿಗೂ ತೆರಿಗೆ ಕಟ್ಟುವ ಜನರು ಅವರ ಹಣಕ್ಕೆ, ನಮ್ಮ ರಾಜ್ಯಕ್ಕೆ ಆಗುತ್ತಿರುವ ಅನ್ಯಾಯವನ್ನು ಅರ್ಥ ಮಾಡಿಕೊಳ್ಳಬೇಕು. ಇದೇ ಮೋದಿ ಅವರು ಗುಜರಾತ್ ಮುಖ್ಯಮಂತ್ರಿ ಆಗಿದ್ದಾಗ ಶೇ.50ರಷ್ಟು ತೆರಿಗೆ ಪಾಲು ಕೊಡಿ ಎಂದು ಕೇಂದ್ರಕ್ಕೆ ಕೇಳಿದ್ದರು. ರಾಜ್ಯಗಳು ಭಿಕ್ಷುಕರಾ? ಎಂದು ಪ್ರಶ್ನಿಸಿದ್ದರು. ಕೇಂದ್ರಕ್ಕೆ ಒಂದು ರೂಪಾಯಿ ತೆರಿಗೆಯನ್ನೂ ಕೊಡುವುದಿಲ್ಲ. ಎಲ್ಲವನ್ನೂ ರಾಜ್ಯವೇ ಇಟ್ಟುಕೊಳ್ತೀವಿ ಎಂದು ಹೇಳಿದ್ದರು. ಈಗ ಪ್ರಧಾನಿ ಆದ ಮೇಲೆ ಉಲ್ಟಾ ಮಾತಾಡುತ್ತಿದ್ದಾರೆ ಎಂದರು.

ರಾಜ್ಯದಲ್ಲಿ ಬಿಜೆಪಿ ಸರ್ಕಾರ ಇದ್ದಾಗ ನಾನು ಸದನದಲ್ಲಿ ಪದೇ ಪದೇ ಹೇಳಿದ್ದೆ. ಯಡಿಯೂರಪ್ಪ, ಬೊಮ್ಮಾಯಿ ಇಬ್ಬರೂ ಮುಖ್ಯಮಂತ್ರಿಗಳಾಗಿ ರಾಜ್ಯದ ಪಾಲನ್ನು ತರಲು ಪ್ರಯತ್ನಿಸಲೇ ಇಲ್ಲ. ಈಗ ಪ್ರಹ್ಲಾದ್ ಜೋಶಿಯವರೂ ರಾಜ್ಯಕ್ಕೆ ಆಗುತ್ತಿರುವ ಅನ್ಯಾಯ ಪ್ರಶ್ನೆ ಮಾಡದೆ, ಅನ್ಯಾಯವನ್ನು ಸಮರ್ಥಿಸುತ್ತಿದ್ದಾರೆ. ಇವರು ರಾಜ್ಯವನ್ನು ಪ್ರತಿನಿಧಿಸುತ್ತಿದ್ದಾರೆ ಎನ್ನುವುದನ್ನೇ ಮರೆತು ಮಾತಾಡಿದ್ದಾರೆ ಎಂದು ಕಿಡಿಕಾರಿದರು.

ನಾವು ಪ್ರಜಾಪ್ರಭುತ್ವ, ಒಕ್ಕೂಟ ವ್ಯವಸ್ಥೆಯನ್ನು ಒಪ್ಪಿಕೊಂಡಿದ್ದೇವೆ. ಹೀಗಿದ್ದಾಗ ಚೀನಾ ರೀತಿಯ ಕೇಂದ್ರದ ಏಕಸ್ವಾಮ್ಯ ಮತ್ತು ಅಮೆರಿಕದ ಅಧ್ಯಕ್ಷೀಯ ಮಾದರಿಯ ಆಡಳಿತವನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ. ನಾವು ಪ್ರಜಾಪ್ರಭುತ್ವ ಮತ್ತು ಒಕ್ಕೂಟ ವ್ಯವಸ್ಥೆ ಪರವಾಗಿ ಇರುವವರು ಎಂದು ಸಿಎಂ ಸ್ಪಷ್ಟಪಡಿಸಿದರು.

ಕನ್ನಡ ಬಾವುಟ ಮತ್ತು ದ್ವಿಭಾಷಾ ನೀತಿಯ ವಿಚಾರದಲ್ಲೂ ಜನ ಎಚ್ಚೆತ್ತುಕೊಂಡು ಹೋರಾಟ ಮಾಡುವ ಅಗತ್ಯವಿದೆ. ಭಾಷೆಯಾಗಿ ಯಾವ ಭಾಷೆಯನ್ನಾದರೂ ಕಲಿಯಬಹುದು. ಆದರೆ ಕನ್ನಡದ ಮೇಲೆ ಹಿಂದಿ ಅಥವಾ ಇತರೆ ಭಾಷೆಯ ಹೇರಿಕೆ, ಸಾಂಸ್ಕೃತಿಕ ಹೇರಿಕೆಯನ್ನು ಸಹಿಸಲು ಸಾಧ್ಯವಿಲ್ಲ ಎಂದು ಹೇಳಿದರು.

ಇದನ್ನೂ ಓದಿ: ರಾಜ್ಯಸಭೆ ಚುನಾವಣೆಗೆ ಅಭ್ಯರ್ಥಿಗಳನ್ನು ಘೋಷಿಸಿದ ಕಾಂಗ್ರೆಸ್; ಕರ್ನಾಟಕದಿಂದ ಮಾಕೇನ್‌ಗೆ ಟಿಕೆಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...