Homeಕರ್ನಾಟಕಸೆಸ್, ಸರ್ ಚಾರ್ಜ್‌ನಲ್ಲೂ ನಮಗೆ ಪಾಲು ಕೊಡಬೇಕು: ಸಿಎಂ ಸಿದ್ದರಾಮಯ್ಯ

ಸೆಸ್, ಸರ್ ಚಾರ್ಜ್‌ನಲ್ಲೂ ನಮಗೆ ಪಾಲು ಕೊಡಬೇಕು: ಸಿಎಂ ಸಿದ್ದರಾಮಯ್ಯ

- Advertisement -
- Advertisement -

ನಾವು ಪ್ರಜಾಪ್ರಭುತ್ವ ಮತ್ತು ಒಕ್ಕೂಟ ವ್ಯವಸ್ಥೆಯನ್ನು ಒಪ್ಪಿಕೊಂಡ ಮೇಲೆ ಚೀನಾ ಮಾದರಿ ಏಕಸ್ವಾಮ್ಯವನ್ನು ಸಹಿಸಲು, ಅಮೆರಿಕದ ಅಧ್ಯಕ್ಷೀಯ ಮಾದರಿ ಆಡಳಿತವನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಎಕ್ಸ್ (ಟ್ವಿಟರ್)ನಲ್ಲಿ ಬುಧವಾರ ಸಂಜೆ ನಡೆದ ‘ನಮ್ಮ ತೆರಿಗೆ, ನಮ್ಮ ಹಕ್ಕು’ ಕನ್ನಡಿಗರ ಅಭಿಯಾನದ ಕುರಿತ ಸಾರ್ವಜನಿಕರ ಪ್ರಶ್ನೆಗಳಿಗೆ ಉತ್ತರಿಸುತ್ತಾ ಅವರು ಮಾತನಾಡಿದರು.

ಸಂವಿಧಾನ ಬದ್ದವಾದ ಒಕ್ಕೂಟ ವ್ಯವಸ್ಥೆಯನ್ನು ಇಡೀ ದೇಶ ಒಪ್ಪಿಕೊಂಡಿದೆ. ರಾಜ್ಯ ಮತ್ತು ಕೇಂದ್ರಗಳಿಗೆ ಜನರ ತೆರಿಗೆ ಹಣ ಹಂಚಿಕೆ ಆಗುತ್ತದೆ. ಇದಕ್ಕಾಗಿ 5 ವರ್ಷಕ್ಕೊಮ್ಮೆ ಹಣಕಾಸು ಆಯೋಗ ರಚನೆಯಾಗಿದೆ. ಆಯೋಗದ ಶಿಫಾರಸ್ಸುಗಳನ್ನು ಕೇಂದ್ರ ಸರ್ಕಾರ ಜಾರಿ ಮಾಡುತ್ತದೆ. 15 ನೇ ಹಣಕಾಸು ಆಯೋಗದಲ್ಲಿ ರಾಜ್ಯಕ್ಕೆ ಬಹಳ ದೊಡ್ಡ ಪ್ರಮಾಣದಲ್ಲಿ ಅನ್ಯಾಯ ಆಗಿದೆ. 14ನೇ ಆಯೋಗದಲ್ಲಿ ರಾಜ್ಯದ ತೆರಿಗೆ ಪಾಲು ಹಂಚಿಕೆ ಶೇ. 4.71 ಇದ್ದದ್ದು 15ನೇ ಹಣಕಾಸು ಆಯೋಗದಲ್ಲಿ ಶೇ. 3.64ಕ್ಕೆ ಕಡಿತ ಮಾಡಿಬಿಟ್ಟರು. ಅಂದರೆ, ಶೇ. 1.07 ನಮಗೆ ಕಡಿತ ಆಗಿದೆ. ಇದರಿಂದ ತೆರಿಗೆ ಹಂಚಿಕೆಯಲ್ಲಿ ರಾಜ್ಯಕ್ಕೆ 5 ವರ್ಷದಲ್ಲಿ ದೊಡ್ಡ ಹೊಡೆತ ಬಿದಿದ್ದು, ಬರೊಬ್ಬರಿ 1,87000 ಕೋಟಿ ರೂಪಾಯಿ ನಷ್ಟ ಆಗಿದೆ. ನಾವು ಕೊಡುವ ತೆರಿಗೆಯ 100 ರೂನಲ್ಲಿ ನಮಗೆ ವಾಪಾಸ್ ಬರೋದು ಕೇವಲ 12-13 ರೂ ಮಾತ್ರ ಎಂದು ಸಿಎಂ ತಿಳಿಸಿದರು.

ಬೆಂಗಳೂರು ಫೆರಿಫೆರಲ್ ರಸ್ತೆ ನಿರ್ಮಾಣ ಮತ್ತು ಕೆರೆಗಳ ಅಭಿವೃದ್ದಿಗೆ 6,000 ಕೋಟಿ ರೂ. ಸೇರಿ ಒಟ್ಟು 11,495 ಕೋಟಿ ರೂ. ವಿಶೇಷ ಅನುದಾನ ಕೊಡಲು ಹಣಕಾಸು ಆಯೋಗ ಶಿಫಾರಸ್ಸು ಮಾಡಿತ್ತು. ಇದನ್ನು ಕೊಡಬಾರದು ಎಂದು ತೀರ್ಮಾನ ಮಾಡಿ ತಡೆದವರು ನಿರ್ಮಲಾ ಸೀತಾರಾಮನ್. ಕರ್ನಾಟಕದಿಂದ ಆಯ್ಕೆಯಾದ ಅವರು ರಾಜ್ಯಕ್ಕೆ ಇಷ್ಟು ದೊಡ್ಡ ಅನ್ಯಾಯ ಮಾಡಿಬಿಟ್ಟರು ಎಂದು ಹೇಳಿದರು.

ಸೆಸ್ ಮತ್ತು ಸರ್ ಚಾರ್ಜ್‌ನಿಂದ ಸಂಗ್ರಹ ಆಗುವ ತೆರಿಗೆಗಳಲ್ಲಿ ಒಂದು ರೂಪಾಯಿಯನ್ನೂ ಕೇಂದ್ರ ಸರ್ಕಾರ ರಾಜ್ಯಗಳಿಗೆ ಕೊಡುವುದಿಲ್ಲ. ಆದ್ದರಿಂದ, ಇದರಲ್ಲೂ ನಾವು (ರಾಜ್ಯ) ಪಾಲು ಕೇಳಬೇಕು ಎಂದು ತೀರ್ಮಾನ ಮಾಡಿದ್ದೇವೆ. ಇದಕ್ಕಾಗಿ ಸಂವಿಧಾನಕ್ಕೆ ತಿದ್ದುಪಡಿ ತನ್ನಿ ಎಂದು ನಾನು ಒತ್ತಾಯಿಸುತ್ತೇನೆ. ಇದಕ್ಕೇ ನಾನು ‘ನನ್ನ ತೆರಿಗೆ ನನ್ನ ಹಕ್ಕು’ ಎನ್ನೋದು ಎಂದರು.

ರಾಜ್ಯಗಳ ಅಭಿವೃದ್ಧಿಗೆ ಸೆಸ್, ಸರ್ ಚಾರ್ಜ್ ನಲ್ಲಿ ಪಾಲು ಕೊಡಲೇಬೇಕು. ರಾಜ್ಯಗಳ ಅಭಿವೃದ್ಧಿ ಆಗದೆ ದೇಶದ ಅಭಿವೃದ್ಧಿ ಹೇಗೆ ಸಾಧ್ಯ? ರಾಜ್ಯಗಳು ದುರ್ಬಲ ಆದರೆ ದೇಶ ದುರ್ಬಲ ಆಗುತ್ತದೆ. ರಾಜ್ಯಗಳು ಸುಭದ್ರ ಆಗಿದ್ದರೆ ದೇಶವೂ ಸುಭದ್ರ ಆಗುತ್ತದೆ. ದೇಶ ಅಂದರೆ ರಾಜ್ಯಗಳ ಒಕ್ಕೂಟ. ತೆರಿಗೆ ವಸೂಲಾಗುವುದೇ ರಾಜ್ಯಗಳಿಂದ. ಹೀಗಿದ್ದಾಗ ರಾಜ್ಯಗಳಿಗೆ ನ್ಯಾಯಯುತವಾದ ತೆರಿಗೆ ಕೊಡಿ ಎನ್ನುವುದು ನಮ್ಮ ಒತ್ತಾಯ. ಅಭಿವೃದ್ಧಿಯನ್ನೇ ಮಾಡದ ಉತ್ತರ ಪ್ರದೇಶಕ್ಕೆ 2,18,000 ಸಾವಿರ ಕೋಟಿಗೂ ರೂಪಾಯಿಗೂ ಅಧಿಕ ಹಣ ಹೋಗುತ್ತದೆ. ನಮಗೆ 52,000 ಸಾವಿರ ಕೋಟಿ ರೂ. ಮಾತ್ರ ಕೊಡುತ್ತಿದ್ದಾರೆ. ಇದನ್ನು ಸಹಿಸಬೇಕಾ? ಉತ್ತರ ಪ್ರದೇಶದ ಜನಸಂಖ್ಯೆ ಹೆಚ್ಚಾಗಿದ್ದರೂ, ಅವರಿಂದ ಬರುವ ತೆರಿಗೆ ಕಡಿಮೆ. ಉತ್ತರ ಪ್ರದೇಶಕ್ಕೆ ಕೊಡಬೇಡಿ ಎನ್ನುವುದು ನಮ್ಮ ವಾದವಲ್ಲ. ನಮಗೆ ಅನ್ಯಾಯ ಮಾಡಬೇಡಿ ಎನ್ನುವುದು ನಮ್ಮ ಆಗ್ರಹ ಎಂದು ಸಿಎಂ ಹೇಳಿದರು.

ಮೋದಿ ಅವರು ಪ್ರಧಾನಿ ಆದ ಬಳಿಕ ಕಾರ್ಪೋರೇಟ್ ಮೇಲಿನ ತೆರಿಗೆ ಪ್ರಮಾಣವನ್ನು ಶೇ.30 ರಿಂದ ಶೇ.22.5ಕ್ಕೆ ಇಳಿಸಿದ್ದಾರೆ. ಕಾರ್ಪೋರೇಟ್‌ಗಳಿಗೆ ಕಡಿಮೆ ಮಾಡಿ ಅದರ ಹೊರೆಯನ್ನು ಜನಸಾಮಾನ್ಯರ ಮೇಲೆ ಹೇರಿದ್ದಾರೆ. ಅಂದರೆ ಬಡವರು, ಮಧ್ಯಮ ವರ್ಗದವರಿಂದ ತೆರಿಗೆ ವಸೂಲಿ ಮಾಡುವುದನ್ನು ಹೆಚ್ಚು ಮಾಡುತ್ತಲೇ ಇದ್ದಾರೆ. ನಮ್ಮ ಸಂಸದರು, ಕೇಂದ್ರದಲ್ಲಿ ಮಂತ್ರಿಗಳಾಗಿರುವವರು ಯಾರೂ ದೆಹಲಿಯಲ್ಲಿ ಈ ಅನ್ಯಾಯವನ್ನು ಪ್ರಶ್ನಿಸುವುದೇ ಇಲ್ಲ. ನಾವು ನಮ್ಮ ಹಕ್ಕುಗಳಿಗಾಗಿ ಹೋರಾಟ ಮಾಡುತ್ತಲೇ ಒಕ್ಕೂಟ ವ್ಯವಸ್ಥೆಯನ್ನು ಬಲಪಡಿಸುತ್ತೇವೆ. ಸಾಮಾನ್ಯ ಜನರ ಖರ್ಚಿನ ಮೇಲೆ ಹಾಕುವ ಜಿಎಸ್‌ಟಿ ತೆರಿಗೆ ಪ್ರಮಾಣ ಕಡಿಮೆ ಆಗಿ, ಶ್ರೀಮಂತರು ಬಳಸುವ ಐಷಾರಾಮಿ ವಸ್ತುಗಳ ಮೇಲೆ ಜೆಎಸ್‌ಟಿ ಹೆಚ್ಚಿಸಬೇಕು ಎಂದು ಆಗ್ರಹಿಸಿದರು.

ತಮ್ಮ ಆದಾಯಕ್ಕೂ ತೆರಿಗೆ ಕಟ್ಟಿ, ತಾವು ಮಾಡುವ ಖರ್ಚಿಗೂ ತೆರಿಗೆ ಕಟ್ಟುವ ಜನರು ಅವರ ಹಣಕ್ಕೆ, ನಮ್ಮ ರಾಜ್ಯಕ್ಕೆ ಆಗುತ್ತಿರುವ ಅನ್ಯಾಯವನ್ನು ಅರ್ಥ ಮಾಡಿಕೊಳ್ಳಬೇಕು. ಇದೇ ಮೋದಿ ಅವರು ಗುಜರಾತ್ ಮುಖ್ಯಮಂತ್ರಿ ಆಗಿದ್ದಾಗ ಶೇ.50ರಷ್ಟು ತೆರಿಗೆ ಪಾಲು ಕೊಡಿ ಎಂದು ಕೇಂದ್ರಕ್ಕೆ ಕೇಳಿದ್ದರು. ರಾಜ್ಯಗಳು ಭಿಕ್ಷುಕರಾ? ಎಂದು ಪ್ರಶ್ನಿಸಿದ್ದರು. ಕೇಂದ್ರಕ್ಕೆ ಒಂದು ರೂಪಾಯಿ ತೆರಿಗೆಯನ್ನೂ ಕೊಡುವುದಿಲ್ಲ. ಎಲ್ಲವನ್ನೂ ರಾಜ್ಯವೇ ಇಟ್ಟುಕೊಳ್ತೀವಿ ಎಂದು ಹೇಳಿದ್ದರು. ಈಗ ಪ್ರಧಾನಿ ಆದ ಮೇಲೆ ಉಲ್ಟಾ ಮಾತಾಡುತ್ತಿದ್ದಾರೆ ಎಂದರು.

ರಾಜ್ಯದಲ್ಲಿ ಬಿಜೆಪಿ ಸರ್ಕಾರ ಇದ್ದಾಗ ನಾನು ಸದನದಲ್ಲಿ ಪದೇ ಪದೇ ಹೇಳಿದ್ದೆ. ಯಡಿಯೂರಪ್ಪ, ಬೊಮ್ಮಾಯಿ ಇಬ್ಬರೂ ಮುಖ್ಯಮಂತ್ರಿಗಳಾಗಿ ರಾಜ್ಯದ ಪಾಲನ್ನು ತರಲು ಪ್ರಯತ್ನಿಸಲೇ ಇಲ್ಲ. ಈಗ ಪ್ರಹ್ಲಾದ್ ಜೋಶಿಯವರೂ ರಾಜ್ಯಕ್ಕೆ ಆಗುತ್ತಿರುವ ಅನ್ಯಾಯ ಪ್ರಶ್ನೆ ಮಾಡದೆ, ಅನ್ಯಾಯವನ್ನು ಸಮರ್ಥಿಸುತ್ತಿದ್ದಾರೆ. ಇವರು ರಾಜ್ಯವನ್ನು ಪ್ರತಿನಿಧಿಸುತ್ತಿದ್ದಾರೆ ಎನ್ನುವುದನ್ನೇ ಮರೆತು ಮಾತಾಡಿದ್ದಾರೆ ಎಂದು ಕಿಡಿಕಾರಿದರು.

ನಾವು ಪ್ರಜಾಪ್ರಭುತ್ವ, ಒಕ್ಕೂಟ ವ್ಯವಸ್ಥೆಯನ್ನು ಒಪ್ಪಿಕೊಂಡಿದ್ದೇವೆ. ಹೀಗಿದ್ದಾಗ ಚೀನಾ ರೀತಿಯ ಕೇಂದ್ರದ ಏಕಸ್ವಾಮ್ಯ ಮತ್ತು ಅಮೆರಿಕದ ಅಧ್ಯಕ್ಷೀಯ ಮಾದರಿಯ ಆಡಳಿತವನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ. ನಾವು ಪ್ರಜಾಪ್ರಭುತ್ವ ಮತ್ತು ಒಕ್ಕೂಟ ವ್ಯವಸ್ಥೆ ಪರವಾಗಿ ಇರುವವರು ಎಂದು ಸಿಎಂ ಸ್ಪಷ್ಟಪಡಿಸಿದರು.

ಕನ್ನಡ ಬಾವುಟ ಮತ್ತು ದ್ವಿಭಾಷಾ ನೀತಿಯ ವಿಚಾರದಲ್ಲೂ ಜನ ಎಚ್ಚೆತ್ತುಕೊಂಡು ಹೋರಾಟ ಮಾಡುವ ಅಗತ್ಯವಿದೆ. ಭಾಷೆಯಾಗಿ ಯಾವ ಭಾಷೆಯನ್ನಾದರೂ ಕಲಿಯಬಹುದು. ಆದರೆ ಕನ್ನಡದ ಮೇಲೆ ಹಿಂದಿ ಅಥವಾ ಇತರೆ ಭಾಷೆಯ ಹೇರಿಕೆ, ಸಾಂಸ್ಕೃತಿಕ ಹೇರಿಕೆಯನ್ನು ಸಹಿಸಲು ಸಾಧ್ಯವಿಲ್ಲ ಎಂದು ಹೇಳಿದರು.

ಇದನ್ನೂ ಓದಿ: ರಾಜ್ಯಸಭೆ ಚುನಾವಣೆಗೆ ಅಭ್ಯರ್ಥಿಗಳನ್ನು ಘೋಷಿಸಿದ ಕಾಂಗ್ರೆಸ್; ಕರ್ನಾಟಕದಿಂದ ಮಾಕೇನ್‌ಗೆ ಟಿಕೆಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

FACT CHECK : ಕಾಕ್ರೋಚ್ ಜನತಾ ಪಾರ್ಟಿಯ ಹೆಚ್ಚಿನ ಫಾಲೋವರ್ಸ್ ಪಾಕಿಸ್ತಾನದವರಾ?

ಇತ್ತೀಚೆಗೆ ಹುಟ್ಟಿಕೊಂಡ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಇನ್‌ಸ್ಟಾಗ್ರಾಮ್ ಪೇಜ್ ಕಾಂಗ್ರೆಸ್‌ನ 13 ಮಿಲಿಯನ್ ಮತ್ತು ಬಿಜೆಪಿಯ 9 ಮಿಲಿಯನ್ ಫಾಲೋವರ್ಸ್‌ಗಳ ಗಡಿಯನ್ನು ದಾಟಿದ್ದು, ಬರೋಬ್ಬರಿ 23 ಮಿಲಿಯನ್ (ಮೇ 24ರಂತೆ) ಫಾಲೋವರ್ಸ್‌...

ಬಾಂಗ್ಲಾ ಗಡಿಯಾಚೆಗೆ ತಳ್ಳಿದವರ ವಾಪಸಾತಿ: ಭಾರತೀಯರನ್ನೇ ಗಡಿಪಾರು ಮಾಡುತ್ತಿರುವ ಕೇಂದ್ರ?

ದಾಖಲೆರಹಿತ ವಲಸಿಗರೆಂದು ಆರೋಪಿಸಿ ಅಧಿಕಾರಿಗಳು ಬಾಂಗ್ಲಾದೇಶದ ಗಡಿಯಾಚೆಗೆ 'ತಳ್ಳಿದ್ದ' ಪಶ್ಚಿಮ ಬಂಗಾಳದ ನಿವಾಸಿಗಳನ್ನು ವಾಪಸ್ ಕರೆ ತರುವುದಾಗಿ ಕೇಂದ್ರ ಸರ್ಕಾರ ಶುಕ್ರವಾರ (ಮೇ 22,2026) ಸುಪ್ರೀಂ ಕೋರ್ಟ್‌ಗೆ ವಾಗ್ದಾನ ಮಾಡಿದೆ ಎಂದು ವರದಿಯಾಗಿದೆ....

SIR ಜಾರಿಯಾದ್ರೆ ಗ್ಯಾರಂಟಿಯನ್ನು ಕಳೆದುಕೊಳ್ತೀರಿ!

"ಬಡವರ ಮತಗಳನ್ನು ಪಟ್ಟಿಯಿಂದ ತೆಗೆಯಲು ಎಸ್‌ಐಆರ್ (SIR) ಮೂಲಕ ದೊಡ್ಡ ಸಂಚು ರೂಪಿಸಲಾಗಿದೆ. ನಾವೆಲ್ಲರೂ ಬಹಳ ಎಚ್ಚರಿಕೆಯಿಂದ ಇರಬೇಕು, ಇಲ್ಲದಿದ್ದರೆ ಮತ ಹಕ್ಕಿನ ಜೊತೆಗೆ ಶಕ್ತಿ, ಗೃಹಲಕ್ಷ್ಮಿಯಂತಹ ಗ್ಯಾರೆಂಟಿ ಯೋಜನೆಯನ್ನು ಕಳೆದುಕೊಳ್ಳಬೇಕಾಗುತ್ತದೆ" ಎಂದು...

ವೈಯಕ್ತಿಕ ಸ್ವಾತಂತ್ರ್ಯ Vs ಕಠಿಣ ಕಾಯ್ದೆ: ಯುಎಪಿಎ ಜಾಮೀನು ಭಿನ್ನಾಭಿಪ್ರಾಯಕ್ಕೆ ಸಿಗುವುದೇ ಸುಪ್ರೀಂ ಪರಿಹಾರ?

ಯುಎಪಿಎ ಅಡಿಯಲ್ಲಿ ದೀರ್ಘಕಾಲದ ಜೈಲುವಾಸದ ಹಿನ್ನೆಲೆ, ಜಾಮೀನು ನೀಡುವ ಕುರಿತು ಸುಪ್ರೀಂ ಕೋರ್ಟ್‌ನ ಎರಡು ನ್ಯಾಯಪೀಠಗಳ ನಡುವೆ ಭಿನ್ನಾಭಿಪ್ರಾಯ ಮೂಡಿದ ಕಾರಣ, ವಿಚಾರವನ್ನು ಸುಪ್ರೀಂ ಕೋರ್ಟ್‌ ವಿಸ್ತೃತ ಪೀಠಕ್ಕೆ ಶಿಫಾರಸು ಮಾಡಲಾಗಿದೆ ಎಂದು...

ತಾಯ್ತನ ಕ್ರೀಡೆಗೆ ಅಡ್ಡಿಯಾಗಬಾರದು: ಕುಸ್ತಿ ಒಕ್ಕೂಟಕ್ಕೆ ದೆಹಲಿ ಹೈಕೋರ್ಟ್ ಚಾಟಿ, ವಿನೇಶ್ ಫೋಗಟ್‌ಗೆ ಬಿಗ್ ರಿಲೀಫ್!

ಖ್ಯಾತ ಮಹಿಳಾ ಕುಸ್ತಿ ಪಟು ವಿನೇಶ್ ಫೋಗಟ್ ಅವರನ್ನು ದೇಶೀಯ ಕ್ರೀಡಾಕೂಟಗಳಲ್ಲಿ ಭಾಗವಹಿಸದಂತೆ "ಅನರ್ಹ" ಎಂದು ಘೋಷಿಸಿದ್ದ ಭಾರತೀಯ ಕುಸ್ತಿ ಒಕ್ಕೂಟದ (WFI) ನಿರ್ಧಾರವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ....

ಗುಜರಾತ್: ಜಾನುವಾರು ಹತ್ಯೆ ಆರೋಪದಲ್ಲಿ ಬಂಧಿಸಿದ 70 ವರ್ಷದ ಮುಸ್ಲಿಂ ವ್ಯಕ್ತಿ ಸಾವು: ‘ತಂದೆಯನ್ನು ಕೊಂದರು’ ಎಂದು ಆರೋಪಿಸಿದ ಮಗ

ಗುಜರಾತ್‌ನ ಅಹಮದಾಬಾದ್ ನಗರದಲ್ಲಿ ಪೊಲೀಸ್ ಕಸ್ಟಡಿಯಲ್ಲಿದ್ದ 70 ವರ್ಷದ ಜಹೀರ್ ಶೇಖ್ ಎಂಬ ಮುಸ್ಲಿಂ ವೃದ್ಧರೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಈ ಘಟನೆಯು ಗುಜರಾತ್‌ನಲ್ಲಿ ತೀವ್ರ ಸಂಚಲನ ಸೃಷ್ಟಿಸಿದ್ದು, ಕಸ್ಟಡಿ ನಿಂದನೆ, ಪೊಲೀಸರ ದೌರ್ಜನ್ಯ...

ಪಶ್ಚಿಮ ಬಂಗಾಳ: ಬಿಜೆಪಿಗೆ ಉಲ್ಟಾ ಹೊಡೆಯುತ್ತಾ ಗೋ-ಹತ್ಯೆ ನಿಷೇಧ ಕಾಯ್ದೆ?

ಬಕ್ರೀದ್ (ಈದ್-ಉಲ್-ಅದ್ಹಾ) ಹಬ್ಬ ಹತ್ತಿರ ಬರುತ್ತಿದ್ದಂತೆ, ಪಶ್ಚಿಮ ಬಂಗಾಳದಲ್ಲಿ ಗೋ ಹತ್ಯೆ ನಿಯಂತ್ರಣ ಕಾಯ್ದೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುತ್ತಿರುವುದಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದೆ. ಈ ಆಕ್ರೋಶ ಕೇವಲ ಧಾರ್ಮಿಕ ಕಾರಣಗಳಿಗಷ್ಟೇ ಸೀಮಿತವಾಗಿಲ್ಲ, ಬದಲಿಗೆ ವ್ಯಾಪಾರಿಗಳು,...

ಪ.ಬಂಗಾಳ: ಮಮತಾ ಸರ್ಕಾರ ಜಾರಿ ಮಾಡಿದ್ದ OBC ಮೀಸಲಾತಿಯನ್ನು ಕಿತ್ತೆಸೆದ ಸುವೇಂದು ನೇತೃತ್ವದ ಬಿಜೆಪಿ ಸರ್ಕಾರ

ಪಶ್ಚಿಮ ಬಂಗಾಳದ ಒಬಿಸಿ (ಇತರ ಹಿಂದುಳಿದ ವರ್ಗಗಳು) ಪಟ್ಟಿಯಲ್ಲಿದ್ದ ಮುಸ್ಲಿಂ ಸಮುದಾಯಗಳನ್ನು ಕೈಬಿಡುವ ಮೂಲಕ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರವು ಭಾರಿ ರಾಜಕೀಯ ಸಂಚಲನ ಸೃಷ್ಟಿಸಿದೆ. ಈ ಹಿಂದೆ...

ಸಾಮಾಜಿಕ ಹೋರಾಟಗಾರ ‘ಫರಿದುಲ್ ಇಸ್ಲಾಂ’ರನ್ನು ಸುಳ್ಳು ಪ್ರಕರಣದಲ್ಲಿ ಬಂಧಿಸಿದ ಕೋಲ್ಕತ್ತಾ ಪೊಲೀಸರು

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು ಇನ್ನು ಹತ್ತು ದಿನಗಳು ಕಳೆಯುವಷ್ಟರಲ್ಲೇ, ಸರ್ಕಾರದ ಆಡಳಿತವನ್ನು ಪ್ರಶ್ನಿಸುವವರ ಹಾಗೂ ಹೋರಾಟಗಾರರ ಧ್ವನಿಯನ್ನು ಹತ್ತಿಕ್ಕುವ ಕೆಲಸ ಆರಂಭವಾಗಿದೆ ಎಂಬ...

ಉಪ್ಪಿನಂಗಡಿ: ಸೂರ್ಯ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯ, ಚಿಕಿತ್ಸೆಗೆಂದು ತೆರಳಿ ಶವವಾಗಿ ಮರಳಿದ ಬೀದಿಬದಿ ವ್ಯಾಪಾರಿ!

ಖಾಸಗಿ ಆಸ್ಪತ್ರೆಗಳ ಹಣದ ದಾಹ ಮತ್ತು ವೈದ್ಯಕೀಯ ಸಿಬ್ಬಂದಿಯ ಘೋರ ನಿರ್ಲಕ್ಷ್ಯಕ್ಕೆ ಮತ್ತೊಂದು ಬಡ ಜೀವ ಬಲಿಯಾಗಿದೆ. ಉಪ್ಪಿನಂಗಡಿಯ ಸೂರ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಾಗಿದ್ದ ಮೊಹಮ್ಮದ್ ಶರೀಫ್ (35) ಎಂಬ ಬೀದಿ ಬದಿ...