Homeಮುಖಪುಟಬಾಬರಿ ಮಸೀದಿ ಧ್ವಂಸದಲ್ಲಿ ಪಾಲ್ಗೊಂಡಿದ್ದ ಅಜಿತ್ ಗೋಪ್ಚಾಡೆಯನ್ನು ರಾಜ್ಯಸಭೆಗೆ ನಾಮನಿರ್ದೇಶನ ಮಾಡಿದ ಬಿಜೆಪಿ

ಬಾಬರಿ ಮಸೀದಿ ಧ್ವಂಸದಲ್ಲಿ ಪಾಲ್ಗೊಂಡಿದ್ದ ಅಜಿತ್ ಗೋಪ್ಚಾಡೆಯನ್ನು ರಾಜ್ಯಸಭೆಗೆ ನಾಮನಿರ್ದೇಶನ ಮಾಡಿದ ಬಿಜೆಪಿ

- Advertisement -
- Advertisement -

ರಾಜ್ಯಸಭಾ ಚುನಾವಣೆಗೆ ಮಹಾರಾಷ್ಟ್ರದಿಂದ ಭಾರತೀಯ ಜನತಾ ಪಕ್ಷ (ಬಿಜೆಪಿ) ಬುಧವಾರ ಮೂವರು ಅಭ್ಯರ್ಥಿಗಳನ್ನು ಘೋಷಿಸಿದೆ. ಮೇಲ್ಮನೆಯಲ್ಲಿ ಮಹಾರಾಷ್ಟ್ರವನ್ನು ಪ್ರತಿನಿಧಿಸಲು ಮಾಜಿ ಸಿಎಂ ಅಶೋಕ್ ಚವ್ಹಾಣ್ ಮತ್ತು ಕೊತ್ರೂಡ್ ಮಾಜಿ ಶಾಸಕಿ ಮೇಧಾ ಕುಲಕರ್ಣಿ ಜೊತೆಗೆ ಡಾ.ಅಜಿತ್ ಗೋಪ್ಚಾಡೆ ಅವರನ್ನು ನಾಮನಿರ್ದೇಶನ ಮಾಡಲಾಗಿದೆ.

ಗೋಪ್ಚಾಡೆ ಅವರ ನಾಮ ನಿರ್ದೇಶನದ ನಂತರ, ಅವರ ಹಳೆಯ ಫೋಟೋಗಳು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡಲು ಪ್ರಾರಂಭಿಸಿವೆ. 1992ರಲ್ಲಿ ರಾಮ ಜನ್ಮಭೂಮಿ ಆಂದೋಲನದ ಭಾಗವಾಗಿ ಅಯೋಧ್ಯೆಯಲ್ಲಿ ನಡೆದ ಬಾಬರಿ ಮಸೀದಿ ಧ್ವಂಸ ಕಾರ್ಯದಲ್ಲಿ ಈ ಅಜಿತ್ ಗೋಪ್ಚಾಡೆ ಭಾಗವಹಿಸಿದ್ದರು. ಬಾಬರಿ ಮಸೀದಿಯ ಗುಂಬಝಿನ ಮೇಲೆ ಹತ್ತಿ ನಿಂತಿದ್ದವರ ಗುಂಪಿನಲ್ಲಿದ್ದ ಗೋಪ್ಚಾಡೆಯವರ ಫೋಟೋ ಅಂದು ವೈರಲ್ ಆಗಿತ್ತು. ಈಗ ಗೋಪ್ಚಾಡೆ ರಾಜ್ಯಸಭೆಗೆ ನಾಮ ನಿರ್ದೇಶನವಾಗುತ್ತಿದ್ದಂತೆ, ಆ ಹಳೆಯ ಫೋಟೋ ಮತ್ತೊಮ್ಮೆ ಮುನ್ನಲೆಗೆ ಬಂದಿದೆ.

ಅಜಿತ್ ಗೋಪ್ಚಾಡೆ ಯಾರು?

ಡಾ. ಅಜಿತ್ ಗೋಪ್ಚಾಡೆ ಅವರು ರಾಷ್ಟ್ರೀಯ ಸ್ವಯಂ ಸೇವಕ ಸಂಘ (ಆರ್‌ಎಸ್‌ಎಸ್)ದ ಸಕ್ರಿಯ ಕಾರ್ಯಕರ್ತರಾಗಿದ್ದಾರೆ. ಸಂಘಟನೆಯ ಮೇಲಿನ ನಿಷ್ಠೆಗೆ ಅವರು ಹೆಸರುವಾಸಿಯಾಗಿದ್ದಾರೆ. ಈ ಹಿಂದೆ ಮಹಾರಾಷ್ಟ್ರ ಬಿಜೆಪಿಯ ಉಪಾಧ್ಯಕ್ಷ ಸ್ಥಾನದ ಜವಾಬ್ದಾರಿಯನ್ನು ಅವರಿಗೆ ವಹಿಸಲಾಗಿತ್ತು. ನಾಂದೇಡ್ ಲೋಕಸಭಾ ಕ್ಷೇತ್ರ, ನಾಂದೇಡ್ ಮತ್ತು ನೈಗಾಂವ್ ವಿಧಾನಸಭಾ ಕ್ಷೇತ್ರಗಳಿಗೆ ಸಂಬಂಧಿಸಿದಂತೆ ಅವರ ಹೆಸರು ಆಗಾಗ ಚರ್ಚೆಯಾಗುತ್ತಿರುತ್ತದೆ. ಸಾಮಾಜಿಕ ಮತ್ತು ಶೈಕ್ಷಣಿಕ ಚಟುವಟಿಕೆಗಳಲ್ಲಿ ಕೂಡ ಅವರು ಗುರುತಿಸಿಕೊಂಡಿದ್ದಾರೆ.

ಕಾಲೇಜಿನಲ್ಲಿದ್ದಾಗಲೇ ವಿವಿಧ ವಿದ್ಯಾರ್ಥಿ ಚಳವಳಿಗಳನ್ನು ಸಂಘಟಿಸುವಲ್ಲಿ ಮುಂದಾಳತ್ವ ವಹಿಸಿದ್ದ ಅಜಿತ್ ಅವರು, ಬಿಜೆಪಿ ನಾಯಕರಾದ ಪ್ರಮೋದ್ ಮಹಾಜನ್, ಗೋಪಿನಾಥ್ ಮುಂಡೆ ಮತ್ತು ನಿತಿನ್ ಗಡ್ಕರಿ ಅವರೊಂದಿಗಿನ ಒಡನಾಟದ ಮೂಲಕ ಬಿಜೆಪಿಯ ವಿದ್ಯಾರ್ಥಿ ಘಟಕ ಎಬಿವಿಪಿಯಲ್ಲಿ ಗುರುತಿಸಿಕೊಂಡಿದ್ದರು. ಆರೋಗ್ಯ ಮತ್ತು ವೈದ್ಯಕೀಯ ಕ್ಷೇತ್ರದಲ್ಲಿ ಅವರ ಕೆಲಸವೂ ಗಮನಾರ್ಹವಾಗಿದೆ. ಎಂಬಿಬಿಎಸ್ ಮತ್ತು ಎಂಡಿ ಪದವಿ ಪಡೆದಿರುವ ಡಾ. ಅಜಿತ್ ಗೋಪ್ಚಾಡೆ ಅವರು ಮಕ್ಕಳ ಕಾಯಿಲೆಗಳ ಚಿಕಿತ್ಸೆಯಲ್ಲಿ ಪರಿಣತಿ ಹೊಂದಿದ್ದಾರೆ.

ಮಹಾರಾಷ್ಟ್ರ ಬಿಜೆಪಿ ವೈದ್ಯರ ಘಟಕದ ಮುಖ್ಯಸ್ಥರಾಗಿರುವ ಗೋಪ್ಚಾಡೆ, ಜಿ-20 ಶೃಂಗಸಭೆ ಕಾರ್ಯಕ್ರಮದ ಸಮಿತಿಯಲ್ಲೂ ಇದ್ದರು. ಬಿಜೆಪಿಯು 2020ರ ಮೇನಲ್ಲಿ ಮಹಾರಾಷ್ಟ್ರ ರಾಜ್ಯ ವಿಧಾನ ಪರಿಷತ್ತಿನ ಚುನಾವಣೆಗೆ ಗೋಪ್ಚಾಡೆ ಅವರನ್ನು ನಾಮನಿರ್ದೇಶನ ಮಾಡಿತ್ತು. ಗೋಪ್ಚಾಡೆ ಅವರು ನಾಮಪತ್ರ ಸಲ್ಲಿಸಿದ್ದರು. ಆದರೆ, ಇದಾಗಿ ಕೆಲವೇ ಗಂಟೆಗಳಲ್ಲಿ ಪಕ್ಷ ತನ್ನ ನಿರ್ಧಾರ ಬದಲಾಯಿಸಿತ್ತು. ಗೋಪ್ಚಾಡೆ ಬದಲಿಗೆ ದಿವಂಗತ ಗೋಪಿನಾಥ್ ಮುಂಡೆ ಮತ್ತು ಅವರ ಪುತ್ರಿ ಪಂಕಜಾ ಮುಂಡೆ ಅವರ ನಿಕಟವರ್ತಿ ರಮೇಶ್ ಕರಾಡ್‌ಗೆ ಅವಕಾಶ ನೀಡಿತ್ತು.

ರಾಜ್ಯಸಭೆಗೆ ನಾಮನಿರ್ದೇಶನ ಗೋಪ್ಚಾಡೆ ಹೇಳಿದ್ದೇನು?

ತನ್ನನ್ನು ರಾಜ್ಯಸಭೆಗೆ ನಾಮನಿರ್ದೇಶನ ಮಾಡಿರುವ ಪಕ್ಷದ ನಿರ್ಧಾರದ ಬಗ್ಗೆ ಪ್ರತಿಕ್ರಿಯಿಸಿದ ಅಜಿತ್ ಗೋಪ್ಚಾಡೆ, “ಪ್ರಧಾನಿ ಮೋದಿ, ಗೃಹ ಸಚಿವ ಅಮಿತ್ ಶಾ ಮತ್ತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರು ತಮ್ಮ ಸಮಿತಿಯ ಮೂಲಕ ನಿರ್ಧಾರ ಕೈಗೊಂಡಿದ್ದಾರೆ. ಈ ಮೂಲಕ ಪಕ್ಷದ ಸಂಘಟನೆಯನ್ನು ಹೆಚ್ಚಿಸುವುದು ನನ್ನ ಜವಬ್ದಾರಿ” ಎಂದು ಹೇಳಿದ್ದಾರೆ.

ಇದನ್ನೂ ಓದಿ : ರಾಜ್ಯಸಭೆ ಚುನಾವಣೆಗೆ ಅಭ್ಯರ್ಥಿಗಳನ್ನು ಘೋಷಿಸಿದ ಕಾಂಗ್ರೆಸ್; ಕರ್ನಾಟಕದಿಂದ ಮಾಕೇನ್‌ಗೆ ಟಿಕೆಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಜೆಪಿ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಅಂದಿದ್ದೆ : ಅಣ್ಣಾಮಲೈ

"ವಿಧಾನಸಭಾ ಚುನಾವಣೆಗೆ ಬಿಜೆಪಿ ನನಗೆ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಎಂದು ಮುಂಚಿತವಾಗಿ ಹೈಕಮಾಂಡ್‌ಗೆ ತಿಳಿಸಿದ್ದೆ" ಎಂದು ತಮಿಳುನಾಡು ಬಿಜೆಪಿಯ ಮಾಜಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ಹೇಳಿದ್ದಾರೆ. ಚೆನ್ನೈ ವಿಮಾನ ನಿಲ್ದಾಣದಲ್ಲಿ ಶನಿವಾರ...

ಸುರಕ್ಷಿತವಾಗಿ ಹಾರ್ಮುಜ್ ದಾಟಿದ 7ನೇ ಎಲ್‌ಪಿಜಿ ಹಡಗು; ಸರದಿಯಲ್ಲಿ ಕಾಯುತ್ತಿವೆ ಭಾರತದ 17 ಟ್ಯಾಂಕರ್‌ಗಳು

ಭಾರತದ ಧ್ವಜ ಹೊಂದಿದ್ದ ಮತ್ತೊಂದು ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಟ್ಯಾಂಕರ್, ಗ್ರೀನ್ ಸಾನ್ವಿ ಹೆಸರಿನ ಹಡಗು ಹಾರ್ಮುಜ್ ಜಲಸಂಧಿಯ ಪೂರ್ವಕ್ಕೆ ಯಶಸ್ವಿಯಾಗಿ ತಲುಪಿದೆ. ಹಡಗು ಟ್ರ್ಯಾಕಿಂಗ್ ದತ್ತಾಂಶದ ಪ್ರಕಾರ, ನಡೆಯುತ್ತಿರುವ ಪಶ್ಚಿಮ...

ಸಿಬಿಎಸ್‌ಇ ಹಿಂದಿ ಹೇರಿಕೆಯು ತ್ರಿಭಾಷಾ ಸೂತ್ರ ಜಾರಿಯ ‘ರಹಸ್ಯ ಕಾರ್ಯವಿಧಾನ’: ಸ್ಟಾಲಿನ್ ಆರೋಪ

ಸಿಬಿಎಸ್‌ಇ ಇತ್ತೀಚೆಗೆ ಅನಾವರಣಗೊಳಿಸಿದ ಪಠ್ಯಕ್ರಮ ಚೌಕಟ್ಟಿನ ಕುರಿತು ಮಾತನಾಡಿದ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್, "ಮೂರು ಭಾಷಾ ಸೂತ್ರ ಎಂದು ಕರೆಯಲ್ಪಡುವುದು ವಾಸ್ತವದಲ್ಲಿ ಹಿಂದಿ ಮಾತನಾಡದ ಪ್ರದೇಶಗಳಿಗೆ ಹಿಂದಿ ವಿಸ್ತರಿಸುವ ರಹಸ್ಯ ಕಾರ್ಯವಿಧಾನವಾಗಿದೆ"...

‘ತಿಂದ ಮನೆಗೆ ಕನ್ನ ಹಾಕುವುದು ತರವಲ್ಲ, ನಿಮ್ಮ ಅಧಿಕ ಪ್ರಸಂಗ ಕರ್ನಾಟಕದ ಜನತೆ ಒಪ್ಪುವುದಿಲ್ಲ’ : ರಾಜ್ಯಪಾಲರ ವಿರುದ್ಧ ಕರವೇ ಕಿಡಿ

ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಲ್ಲಿ ತೃತೀಯ ಭಾಷೆಗೆ ಗ್ರೇಡಿಂಗ್ ನೀಡುವ ಸರ್ಕಾರದ ನಿರ್ಧಾರವನ್ನು ಮರುಪರಿಶೀಲಿಸುವಂತೆ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದಿರುವ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ರಾಜ್ಯಾಧ್ಯಕ್ಷ...

‘ತಪ್ಪಾಗಿದೆ’ : ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್‌ ವಿಧೇಯಕದ ಕುರಿತ ಟೀಕೆಗಳನ್ನು ಕೈಬಿಟ್ಟ ರಾಜಸ್ಥಾನ ಹೈಕೋರ್ಟ್

ಟ್ರಾನ್ಸ್‌ಜೆಂಡರ್ ಕಾಯ್ದೆ, 2019ರಲ್ಲಿ ಬದಲಾವಣೆಗಳನ್ನು ತರಲಿರುವ ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ವಿಧೇಯ, 2026ರ ಕುರಿತು ಈ ಹಿಂದೆ ಮಾಡಿದ್ದ ವಿಮರ್ಶಾತ್ಮಕ ಟಿಪ್ಪಣಿಗಳನ್ನು ರಾಜಸ್ಥಾನ ಹೈಕೋರ್ಟ್ ತೆಗೆದುಹಾಕಿದೆ ಎಂದು...

ಯುಸಿಸಿ ಜಾರಿ ನಂತರ ‘ಜನಸಂಖ್ಯಾ ನಿಯಂತ್ರಣ’ ಕಾನೂನಿಗೆ ಮುಂದಾದ ಉತ್ತರಾಖಂಡ ಬಿಜೆಪಿ ಸರ್ಕಾರ

ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತಂದ ನಂತರ, ಉತ್ತರಾಖಂಡ ಸರ್ಕಾರ ಈಗ ಜನಸಂಖ್ಯಾ ನಿಯಂತ್ರಣ ಕಾನೂನನ್ನು ತರುವ ಬಗ್ಗೆ ಯೋಚಿಸುತ್ತಿದೆ ಎಂದು ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಶುಕ್ರವಾರ ಸೂಚಿಸಿದ್ದಾರೆ. ಪ್ರಸ್ತಾವಿತ ಕ್ರಮದ...

ಪಶ್ಚಿಮ ಬಂಗಾಳ| ಟಿಎಂಸಿ ನಾಯಕರ ಭದ್ರತೆಗೆ ಭಾರೀ ಪೊಲೀಸ್ ನಿಯೋಜನೆ; ಇಸಿಐ ಆಕ್ಷೇಪ

ರಾಜ್ಯದ ವಿವಿಧ ಹಂತಗಳಲ್ಲಿ ತೃಣಮೂಲ ಕಾಂಗ್ರೆಸ್ ನಾಯಕರಿಗೆ ವೈಯಕ್ತಿಕ ಭದ್ರತೆ ಒದಗಿಸಲು ಪಶ್ಚಿಮ ಬಂಗಾಳ ಪೊಲೀಸರು ಮತ್ತು ಕೋಲ್ಕತ್ತಾ ಪೊಲೀಸರು ನಿಯೋಜಿಸಿರುವ ಹೆಚ್ಚಿನ ಸಂಖ್ಯೆಯ ಸಿಬ್ಬಂದಿಯನ್ನು ಭಾರತೀಯ ಚುನಾವಣಾ ಆಯೋಗ (ಇಸಿಐ) ಗಂಭೀರವಾಗಿ...

ಅಮೆರಿಕದ ಕದನ ವಿರಾಮ ಪ್ರಸ್ತಾವನೆ ತಿರಸ್ಕರಿಸಿದ ಇರಾನ್ : ಪಶ್ಚಿಮ ಏಷ್ಯಾ ಸಂಘರ್ಷ ಉಲ್ಬಣ

ಅಲ್ಪಾವಧಿಯ ಕದನ ವಿರಾಮಕ್ಕಾಗಿ ಅಮೆರಿಕ ಮುಂದಿಟ್ಟಿದ್ದ ಪ್ರಸ್ತಾವನೆಯನ್ನು ಇರಾನ್ ತಿರಸ್ಕರಿಸಿದೆ ಎಂದು ವರದಿಯಾಗಿದೆ. ಏಪ್ರಿಲ್ 1, 2026ರ ಬುಧವಾರದಂದು ಅಮೆರಿಕವು ಅನಾಮಧೇಯ ಮಧ್ಯಸ್ಥಿಕೆ ರಾಷ್ಟ್ರದ ಮೂಲಕ ಇರಾನ್‌ಗೆ 48 ಗಂಟೆಗಳ ತಾತ್ಕಾಲಿಕ ಕದನ ವಿರಾಮದ ಆಫರ್...

ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನರಿಗೆ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿ

ಹಿರಿಯ ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನ ಹಿರಿಯ ಸಾಧಕರು 2026ನೇ ಸಾಲಿನ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿಗೆ ಭಾಜನರಾಗಿದ್ದಾರೆ. ರಾಯಚೂರು ಜಿಲ್ಲೆಯ ಹಿರಿಯ ದಲಿತ ಹೋರಾಟಗಾರ...

ಗಾಜಾ; ಗೊಂಬೆಯೊಂದಿಗೆ ‘ಅಂತ್ಯಕ್ರಿಯೆ’ ಆಟ ಆಡುವ ಎಳೆಯ ಮಕ್ಕಳ ವಿಡಿಯೋ ವೈರಲ್; ಸುತ್ತಲಿನ ಘಟನೆಯನ್ನು ಪುನರಾವರ್ತಿಸುವ ಮಕ್ಕಳು

ಅಕ್ಟೋಬರ್ 2023 ರಲ್ಲಿ ಇಸ್ರೇಲಿ ಮಿಲಿಟರಿ ದಾಳಿಯನ್ನು ಪ್ರಾರಂಭಿಸಿದ ನಂತರ ಗಾಜಾದಿಂದ ದುಃಖಕರ ದೃಶ್ಯಗಳು ಹೊರಹೊಮ್ಮುತ್ತಿವೆ. ಇತ್ತೀಚಿನ ಒಂದು ಘಟನೆಯಲ್ಲಿ, ಚಿಕ್ಕ ಮಕ್ಕಳು ಅಂತ್ಯಕ್ರಿಯೆಗಾಗಿ ಗೊಂಬೆಯನ್ನು ಹೊತ್ತುಕೊಂಡು ಹೋಗುವುದನ್ನು ಕಾಣಬಹುದು - ಇದು ಅವರು...