Homeಕರ್ನಾಟಕಮಂಗಳೂರು: ಶಾಲೆ ಮುಂದೆ ಘೋಷಣೆ ಕೂಗಿ ಗೊಂದಲ ಸೃಷ್ಟಿಸಿದ ಆರೋಪ; ಬಿಜೆಪಿ ಶಾಸಕರು ಸೇರಿ ಹಲವರ...

ಮಂಗಳೂರು: ಶಾಲೆ ಮುಂದೆ ಘೋಷಣೆ ಕೂಗಿ ಗೊಂದಲ ಸೃಷ್ಟಿಸಿದ ಆರೋಪ; ಬಿಜೆಪಿ ಶಾಸಕರು ಸೇರಿ ಹಲವರ ವಿರುದ್ಧ ಪ್ರಕರಣ ದಾಖಲು

- Advertisement -
- Advertisement -

ಮಂಗಳೂರು ನಗರದ ವೆಲೆನ್ಸಿಯಾದ ಸೇಂಟ್ ಜೆರೋಸಾ ಶಾಲೆಯ ಬಳಿ ಪ್ರತಿಭಟನೆ ನಡೆಸಿದ ಸಂದರ್ಭ ‘ಜೈ ಶ್ರೀರಾಮ್’ ಘೋಷಣೆ ಕೂಗಿ, ಕ್ರೈಸ್ತ ಧರ್ಮದ ವಿರುದ್ಧ ಮಾತನಾಡಿದ ಹಾಗೂ ಜಿಲ್ಲೆಯ ಶಾಂತಿ, ಸುವ್ಯಸ್ಥೆಗೆ ಧಕ್ಕೆ ತರಲು ಯತ್ನಿಸಿದ ಆರೋಪದ ಮೇಲೆ ಇಬ್ಬರು ಬಿಜೆಪಿ ಶಾಸಕರು, ಕಾರ್ಪೋರೇಟರ್‌ಗಳು ಸೇರಿದಂತೆ 5 ಮಂದಿಯ ವಿರುದ್ದ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಮಂಗಳೂರು ಉತ್ತರ ಶಾಸಕ ಡಾ. ವೈ ಭರತ್ ಶೆಟ್ಟಿ, ದಕ್ಷಿಣ ಶಾಸಕ ಡಿ. ವೇದವ್ಯಾಸ್ ಕಾಮತ್, ವಿಶ್ವ ಹಿಂದೂ ಪರಿಷತ್‌ ಪ್ರಾಂತ ಸಹಕಾರ್ಯವಾಹ ಶರಣ್‌ ಪಂಪ್‌ವೆಲ್‌, ಮಂಗಳೂರು ಮಹಾನಗರ ಪಾಲಿಕೆ ಸದಸ್ಯರಾದ ಸಂದೀಪ್‌ ಗರೋಡಿ ಮತ್ತು ಭರತ್‌ ಕುಮಾರ್‌ ವಿರುದ್ಧ ನಗರದ ದಕ್ಷಿಣ ಠಾಣೆಯಲ್ಲಿ ಬುಧವಾರ ಎಫ್‌ಐಆರ್‌ ದಾಖಲಾಗಿದೆ.

ಅನಿಲ್‌ ಜೆರಾಲ್ಡ್‌ ಲೋಬೊ ಎಂಬುವರು ನೀಡಿದ ದೂರಿನ ಆಧಾರದಲ್ಲಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

“ಶಾಲೆಯ ಶಿಕ್ಷಕಿ ಸಿಸ್ಟರ್ ಪ್ರಭಾ ಎಂಬವರು ಶಾಲಾ ವಿದ್ಯಾರ್ಥಿಗಳಿಗೆ ಪಾಠ ಮಾಡುವಾಗ ಹಿಂದೂ ದೇವರನ್ನು ಅವಮಾನ ಮಾಡಿದ್ದಾರೆ ಎಂದು ಆರೋಪಿಸಿದ ಆಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾಗಿತ್ತು. ಪ್ರಭಾ ಅವರು ಯಾವುದೇ ಧರ್ಮಕ್ಕೆ ಅವಮಾನವಾಗುವ ರೀತಿಯಲ್ಲಿ ನಡೆದುಕೊಂಡಿಲ್ಲ. ಈ ಬಗ್ಗೆ ಶಾಲಾ ಆಡಳಿತ ಮಂಡಳಿಯ ಜೊತೆ ಯಾವುದೇ ಚರ್ಚೆ ಮಾಡದೆ, ಫೆ. 12 ರಂದು ವೇದವ್ಯಾಸ್ ಕಾಮತ್, ಭರತ್ ಶೆಟ್ಟಿ, ಶರಣ್ ಪಂಪ್‌ವೆಲ್, ಸಂದೀಪ್ ಗರೋಡಿ ಹಾಗೂ ಭರತ್ ಕುಮಾರ್ ಅವರು ಸೇರಿ ಶಾಲೆಯ ಬಳಿ ಅಕ್ರಮವಾಗಿ ಪ್ರತಿಭಟನೆ ನಡೆಸುವಂತೆ ಕರೆ ನೀಡಿದ್ದಾರೆ. ಶಾಲೆಯ ಗೇಟ್ ಮುಂದೆ ‘ಜೈ ಶ್ರೀ ರಾಮ್’ ಘೋಷಣೆ ಕೂಗಿ, ಕ್ರೈಸ್ತ ಧರ್ಮದ ವಿರುದ್ಧ ಮಾತನಾಡಿದ್ದಾರೆ. ಶಾಲಾ ಆಡಳಿತ ಮಂಡಳಿಯ ನಿಯಮಗಳನ್ನು ವಿದ್ಯಾರ್ಥಿಗಳು ಉಲ್ಲಂಘಿಸುವಂತೆ ಪ್ರಚೋದಿಸಿದ್ದಾರೆ. ಶಾಲಾ ಆಡಳಿತ ಮಂಡಳಿಯ ವಿರುದ್ಧ ಮಾತನಾಡಿ ಬೆದರಿಕೆ ಹಾಕಿದ್ದಾರೆ. ಹಿಂದೂ ಮತ್ತು ಕ್ರೈಸ್ತ ಧರ್ಮದ ನಡುವೆ ಕಲಹ ಉಂಟಾಗುವಂತೆ ಪ್ರಚೋದಿಸಿ ಮಾತನಾಡಿದ್ದಾರೆ ಎಂದು ಅನಿಲ್‌ ಲೋಬೊ ಅವರು ದೂರಿನಲ್ಲಿ ಆರೋಪಿಸಿರುವುದಾಗಿ ತಿಳಿದು ಬಂದಿದೆ.

ಏನಿದು ಘಟನೆ:

ಮಂಗಳೂರು ನಗರದ ವೆಲೆನ್ಸಿಯಾದ ಸೇಂಟ್ ಜೆರೋಸಾ ಶಾಲೆಯ ಶಿಕ್ಷಕಿ ಸಿಸ್ಟರ್ ಪ್ರಭಾ ಅವರು ವಿದ್ಯಾರ್ಥಿಗಳಿಗೆ ಪಾಠ ಮಾಡುವಾಗ ಹಿಂದೂ ಧರ್ಮದ ಅವಹೇಳನ ಮಾಡಿದ್ದಾರೆ. ಮಕ್ಕಳ ಮೇಲೆ ಕ್ರೈಸ್ತ ಧರ್ಮವನ್ನು ಹೇರಿಕೆ ಮಾಡಲಾಗುತ್ತಿದೆ ಎಂಬ ಆರೋಪ ಕೇಳಿ ಬಂದಿತ್ತು.

ಈ ಸಂಬಂಧ ಫೆ.10ರಂದು ಕೆಲ ವಿದ್ಯಾರ್ಥಿಗಳ ಫೋಷಕರು ಶಾಲೆಯ ಬಳಿ ಜಮಾಯಿಸಿ ಆಡಳಿತ ಮಂಡಳಿ ಮತ್ತು ಶಿಕ್ಷಕರೊಂದಿಗೆ ವಾಗ್ವಾದ ನಡೆಸಿದ್ದರು. ಶಿಕ್ಷಕಿ ಪ್ರಭಾ ಅವರನ್ನು ವಜಾ ಮಾಡುವಂತೆ ಆಗ್ರಹಿಸಿದ್ದರು.

ಇದಾಗಿ ಎರಡು ದಿನಗಳ ಬಳಿಕ, ಫೆ. 12ರಂದು ಶಾಸಕರಾದ ವೇದವ್ಯಾಸ್ ಕಾಮತ್ ಮತ್ತು ಭರತ್ ಶೆಟ್ಟಿ ನೇತೃತ್ವದಲ್ಲಿ ಶಾಲೆಯ ಬಳಿ ಜಮಾಯಿಸಿದ ಪೋಷಕರು, ವಿದ್ಯಾರ್ಥಿಗಳು ಮತ್ತು ಹಿಂದುತ್ವ ಸಂಘಟನೆಯ ಕಾರ್ಯಕರ್ತರು ಶಿಕ್ಷಕಿ ಸಿಸ್ಟರ್ ಪ್ರಭಾ ಮತ್ತು ಸ್ಟೀವನ್ ಎಂಬ ಮತ್ತೊಬ್ಬ ಶಿಕ್ಷಕನ ವಿರುದ್ದ ಕ್ರಮಕ್ಕೆ ಆಗ್ರಹಿಸಿದ್ದರು.

ಪೋಷಕರು ಮತ್ತು ಹಿಂದುತ್ವ ಸಂಘಟನೆಗಳ ಪ್ರತಿಭಟನೆ ಹೆಚ್ಚಾಗುತ್ತಿದ್ದಂತೆ ಶಿಕ್ಷಕಿ ಸಿಸ್ಟರ್ ಪ್ರಭಾ ಮತ್ತು ಶಿಕ್ಷಕ ಸ್ಟೀವನ್ ಅವರನ್ನು ವಜಾ ಮಾಡಿರುವುದಾಗಿ ಶಾಲೆಯ ಆಡಳಿತ ಮಂಡಳಿ ಘೋಷಿಸಿತ್ತು. ಈ ವೇಳೆ ಶಾಸಕ ವೇದವ್ಯಾಸ ಕಾಮತ್ ಶಾಲೆಯ ಮುಂದೆ ಮಕ್ಕಳಿಂದ ಜೈ ಶ್ರೀರಾಮ್ ಘೋಷಣೆ ಕೂಗಿಸಿದ್ದರು. ಈ ಕುರಿತ ವಿಡಿಯೋ ವೈರಲ್ ಆಗಿತ್ತು.

ಇದನ್ನೂ ಓದಿ: ಸೆಸ್, ಸರ್ ಚಾರ್ಜ್‌ನಲ್ಲೂ ನಮಗೆ ಪಾಲು ಕೊಡಬೇಕು: ಸಿಎಂ ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಯುಜಿಸಿ ಈಕ್ವಿಟಿ ನಿಯಮಗಳ ಮೇಲಿನ ಸುಪ್ರೀಂ ಕೋರ್ಟ್ ತಡೆಗೆ ವಿದ್ಯಾರ್ಥಿಗಳ ಪ್ರತಿಭಟನೆ, ರೋಹಿತ್ ಕಾಯ್ದೆಗೆ ಒತ್ತಾಯ

ಯುಜಿಸಿ ಇಕ್ವಿಟಿ ನಿಯಮಗಳಿಗೆ ಸುಪ್ರೀಂ ಕೋರ್ಟ್ ನೀಡಿದ ತಡೆಯಾಜ್ಞೆಯ ವಿರುದ್ಧ ಮತ್ತು ವಿಶ್ವವಿದ್ಯಾಲಯಗಳಲ್ಲಿ ಜಾತಿ ತಾರತಮ್ಯವನ್ನು ಎದುರಿಸಲು ಶಾಸನಬದ್ಧ ರೋಹಿತ್ ಕಾಯ್ದೆಯನ್ನು ಜಾರಿಗೆ ತರುವಂತೆ ಒತ್ತಾಯಿಸಿ ಅಖಿಲ ಭಾರತ ವಿದ್ಯಾರ್ಥಿ ಸಂಘ (ಎಐಎಸ್ಎ)...

ನರವಾಣೆ ಅಪ್ರಕಟಿತ ಪುಸ್ತಕ ಗದ್ದಲ | ಸತ್ಯ ಹೊರಬಂದರೆ ಮೋದಿ, ರಾಜನಾಥ್ ಸಿಂಗ್ ಮುಖವಾಡ ಬಯಲಾಗಲಿದೆ : ರಾಹುಲ್ ಗಾಂಧಿ

ಮಾಜಿ ಸೇನಾ ಮುಖ್ಯಸ್ಥ ಜನರಲ್ ಮನೋಜ್ ಮುಕುಂದ್ ನರವಾಣೆ ಅವರ ಅಪ್ರಕಟಿತ ಆತ್ಮಚರಿತ್ರೆ ಕುರಿತು ರಾಹುಲ್ ಗಾಂಧಿ ಸೋಮವಾರ (ಫೆ.2) ಲೋಕಸಭೆಯಲ್ಲಿ ಉಲ್ಲೇಖಿಸಿದ್ದು, ಈ ವೇಳೆ ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ತೀವ್ರ...

ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ಘರ್ಷಣೆ : ಮೂವರ ಬಂಧನ

ಗುಜರಾತ್‌ನ ಪಠಾಣ್ ತಾಲೂಕಿನ ಚದ್ರುಮಣ ಗ್ರಾಮದಲ್ಲಿ ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ನಡೆದ ಗಲಾಟೆಗೆ ಸಂಬಂಧಿಸಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದು, ಇನ್ನೂ ಐವರ ಬಂಧನಕ್ಕೆ ಬಲೆ ಬೀಸಿದ್ದಾರೆ. ಆರೋಪಿಗಳ ವಿರುದ್ದ ಎಸ್‌ಸಿ/ಎಸ್‌ಟಿ...

ಲೋಕಸಭೆಯಲ್ಲಿ ಲಡಾಖ್ ಬಿಕ್ಕಟ್ಟಿನ ಬಗ್ಗೆ ಮಾಜಿ ಸೇನಾ ಮುಖ್ಯಸ್ಥರ ಅಪ್ರಕಟಿತ ಆತ್ಮಚರಿತ್ರೆ ಉಲ್ಲೇಖಿಸಿದ ರಾಹುಲ್ ಗಾಂಧಿ: ಸಭೆಯಲ್ಲಿ ತೀವ್ರ ಗದ್ದಲ

ಸೋಮವಾರ ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಮಾಜಿ ಸೇನಾ ಮುಖ್ಯಸ್ಥ ಎಂಎಂ ನರವಾಣೆ ಅವರ ಆತ್ಮಚರಿತ್ರೆಯಿಂದ ಉಲ್ಲೇಖಿಸಲು ಪ್ರಯತ್ನಿಸಿದ ನಂತರ ಗದ್ದಲ ಭುಗಿಲೆದ್ದಿತು. ರಾಹುಲ್ ಮಾತನಾಡಲು ಪ್ರಾರಂಭಿಸುತ್ತಿದ್ದಂತೆ, ರಕ್ಷಣಾ ಸಚಿವ...

ಪಂಜಾಬ್ ನಿರೀಕ್ಷೆಗಳನ್ನು ಪೂರೈಸುವಲ್ಲಿ ಕೇಂದ್ರ ಬಜೆಟ್ ಮತ್ತೊಮ್ಮೆ ವಿಫಲವಾಗಿದೆ: ಸಿಎಂ ಭಗವಂತ್ ಮಾನ್

ಕೇಂದ್ರ ಬಜೆಟ್ ಮತ್ತೊಮ್ಮೆ ಪಂಜಾಬ್‌ನ ನಿರೀಕ್ಷೆಗಳನ್ನು ಪೂರೈಸುವಲ್ಲಿ ವಿಫಲವಾಗಿದೆ ಎಂದು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಮತ್ತು ಆಡಳಿತಾರೂಢ ಆಮ್ ಆದ್ಮಿ ಪಕ್ಷದ (ಎಎಪಿ) ಸರ್ಕಾರದ ಸಚಿವರು ಭಾನುವಾರ ಅಭಿಪ್ರಾಯಪಟ್ಟಿದ್ದಾರೆ. ಬಜೆಟ್ ರೈತರಿಗೆ ಯಾವುದೇ...

ರಾಜ್ಯಪಾಲರು ಪೂರ್ಣ ಭಾಷಣ ಓದಿಲ್ಲ, ‘ಜೈ ಸಂವಿಧಾನ’ ಎನ್ನುವುದನ್ನು ಉಲ್ಲೇಖಿಸದೆ ಹೋದರು : ಸಿಎಂ ಸಿದ್ದರಾಮಯ್ಯ

ರಾಜ್ಯಪಾಲರು ಪೂರ್ತಿ ಭಾಷಣ ಓದದೆ ತರಾತುರಿಯಲ್ಲಿ ಹೋದರು. ಭಾಷಣದಲ್ಲಿದ್ದ "ಜೈ ಸಂವಿಧಾನ" ಎನ್ನುವುದನ್ನೂ ಉಲ್ಲೇಖಿಸದೆ ತೆರಳಿದರು. ರಾಷ್ಟ್ರಗೀತೆ ಮುಗಿಯುವವರೆಗೂ ಕಾಯದೆ ಹೋಗಿಬಿಟ್ಟರು. ಇದು ಸರಿಯಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಬಿಜೆಪಿ ಶಾಸಕ...

ಉತ್ತರಾಖಂಡ| ಹಿಂದುತ್ವ ಗುಂಪಿನ ಕಿರುಕುಳದಿಂದ ಮುಸ್ಲಿಂ ಅಂಗಡಿ ಮಾಲೀಕನನ್ನು ರಕ್ಷಿಸಿದ ದೀಪಕ್ ಕುಮಾರ್

ಸ್ಥಳೀಯ ಮುಸ್ಲಿಂ ಅಂಗಡಿ ಮಾಲೀಕನ ವಿರುದ್ಧ ಬಜರಂಗದಳ ಸದಸ್ಯರು ನೀಡುತ್ತಿದ್ದ ಕಿರುಕುಳವನ್ನು ಜಿಮ್ ಮಾಲೀಕ ದೀಪಕ್ ಕುಮಾರ್ ಸ್ಥಳದಲ್ಲೇ ಎದುರಿಸಿದ್ದಾರೆ. ಆಕ್ರೋಶಿತರಾದ ಹಿಂದುತ್ವ ಗುಂಪಿನ ಸದಸ್ಯರು ದೀಪಕ್ ವಿರುದ್ಧವೇ ಪ್ರತಿಭಟನೆ ನಡೆಸಿದ್ದು, ಹಲವಾರ...

ಎಸ್‌ಐಆರ್ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ನಡೆಸುವ ಭಾರತೀಯ ಚುನಾವಣಾ ಆಯೋಗದ (ಇಸಿಐ) ನಿರ್ಧಾರವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ...

ದಕ್ಷಿಣ ಪಿನಾಕಿನಿ ಜಲವಿವಾದ : ನ್ಯಾಯಮಂಡಳಿ ಸ್ಥಾಪಿಸಲು ಸುಪ್ರೀಂ ಕೋರ್ಟ್ ಆದೇಶ

ದಕ್ಷಿಣ ಪಿನಾಕಿನಿ (ಪೆನ್ನೈಯಾರ್) ನದಿ ನೀರಿನ ಹಂಚಿಕೆಗೆ ಸಂಬಂಧಿಸಿದಂತೆ ತಮಿಳುನಾಡು ಮತ್ತು ಕರ್ನಾಟಕ ರಾಜ್ಯಗಳ ನಡುವೆ ಬಾಕಿ ಇರುವ ವಿವಾದಗಳನ್ನು ಪರಿಹರಿಸಲು ನ್ಯಾಯಮಂಡಳಿ ಸ್ಥಾಪಿಸುವಂತೆ ಸುಪ್ರೀಂ ಕೋರ್ಟ್ ಸೋಮವಾರ (ಫೆ.2) ನಿರ್ದೇಶನ ನೀಡಿದೆ. ಕೇಂದ್ರ...

ಸಿಜೆ ರಾಯ್ ಸಾವು| ಯಾವುದೇ ಡೆತ್ ನೋಟ್ ಅಥವಾ ಡೈರಿ ಪತ್ತೆಯಾಗಿಲ್ಲ; ಸಾಕ್ಷ್ಯಗಳು ಆತ್ಮಹತ್ಯೆಯನ್ನು ಸೂಚಿಸುತ್ತವೆ: ಎಸ್‌ಐಟಿ

ಬೆಂಗಳೂರು: ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿಜೆ ರಾಯ್ ಸಾವಿನ ಕುರಿತು ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ)ಕ್ಕೆ ಅಪರಾಧ ಸ್ಥಳದಲ್ಲಿ ಯಾವುದೇ ಡೆತ್ ನೋಟ್ ಅಥವಾ ಡೈರಿ ಪತ್ತೆಯಾಗಿಲ್ಲ, ಮತ್ತು ಪ್ರಾಥಮಿಕ...