Homeಕರ್ನಾಟಕಮಂಗಳೂರು: ಶಾಲೆ ಮುಂದೆ ಘೋಷಣೆ ಕೂಗಿ ಗೊಂದಲ ಸೃಷ್ಟಿಸಿದ ಆರೋಪ; ಬಿಜೆಪಿ ಶಾಸಕರು ಸೇರಿ ಹಲವರ...

ಮಂಗಳೂರು: ಶಾಲೆ ಮುಂದೆ ಘೋಷಣೆ ಕೂಗಿ ಗೊಂದಲ ಸೃಷ್ಟಿಸಿದ ಆರೋಪ; ಬಿಜೆಪಿ ಶಾಸಕರು ಸೇರಿ ಹಲವರ ವಿರುದ್ಧ ಪ್ರಕರಣ ದಾಖಲು

- Advertisement -
- Advertisement -

ಮಂಗಳೂರು ನಗರದ ವೆಲೆನ್ಸಿಯಾದ ಸೇಂಟ್ ಜೆರೋಸಾ ಶಾಲೆಯ ಬಳಿ ಪ್ರತಿಭಟನೆ ನಡೆಸಿದ ಸಂದರ್ಭ ‘ಜೈ ಶ್ರೀರಾಮ್’ ಘೋಷಣೆ ಕೂಗಿ, ಕ್ರೈಸ್ತ ಧರ್ಮದ ವಿರುದ್ಧ ಮಾತನಾಡಿದ ಹಾಗೂ ಜಿಲ್ಲೆಯ ಶಾಂತಿ, ಸುವ್ಯಸ್ಥೆಗೆ ಧಕ್ಕೆ ತರಲು ಯತ್ನಿಸಿದ ಆರೋಪದ ಮೇಲೆ ಇಬ್ಬರು ಬಿಜೆಪಿ ಶಾಸಕರು, ಕಾರ್ಪೋರೇಟರ್‌ಗಳು ಸೇರಿದಂತೆ 5 ಮಂದಿಯ ವಿರುದ್ದ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಮಂಗಳೂರು ಉತ್ತರ ಶಾಸಕ ಡಾ. ವೈ ಭರತ್ ಶೆಟ್ಟಿ, ದಕ್ಷಿಣ ಶಾಸಕ ಡಿ. ವೇದವ್ಯಾಸ್ ಕಾಮತ್, ವಿಶ್ವ ಹಿಂದೂ ಪರಿಷತ್‌ ಪ್ರಾಂತ ಸಹಕಾರ್ಯವಾಹ ಶರಣ್‌ ಪಂಪ್‌ವೆಲ್‌, ಮಂಗಳೂರು ಮಹಾನಗರ ಪಾಲಿಕೆ ಸದಸ್ಯರಾದ ಸಂದೀಪ್‌ ಗರೋಡಿ ಮತ್ತು ಭರತ್‌ ಕುಮಾರ್‌ ವಿರುದ್ಧ ನಗರದ ದಕ್ಷಿಣ ಠಾಣೆಯಲ್ಲಿ ಬುಧವಾರ ಎಫ್‌ಐಆರ್‌ ದಾಖಲಾಗಿದೆ.

ಅನಿಲ್‌ ಜೆರಾಲ್ಡ್‌ ಲೋಬೊ ಎಂಬುವರು ನೀಡಿದ ದೂರಿನ ಆಧಾರದಲ್ಲಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

“ಶಾಲೆಯ ಶಿಕ್ಷಕಿ ಸಿಸ್ಟರ್ ಪ್ರಭಾ ಎಂಬವರು ಶಾಲಾ ವಿದ್ಯಾರ್ಥಿಗಳಿಗೆ ಪಾಠ ಮಾಡುವಾಗ ಹಿಂದೂ ದೇವರನ್ನು ಅವಮಾನ ಮಾಡಿದ್ದಾರೆ ಎಂದು ಆರೋಪಿಸಿದ ಆಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾಗಿತ್ತು. ಪ್ರಭಾ ಅವರು ಯಾವುದೇ ಧರ್ಮಕ್ಕೆ ಅವಮಾನವಾಗುವ ರೀತಿಯಲ್ಲಿ ನಡೆದುಕೊಂಡಿಲ್ಲ. ಈ ಬಗ್ಗೆ ಶಾಲಾ ಆಡಳಿತ ಮಂಡಳಿಯ ಜೊತೆ ಯಾವುದೇ ಚರ್ಚೆ ಮಾಡದೆ, ಫೆ. 12 ರಂದು ವೇದವ್ಯಾಸ್ ಕಾಮತ್, ಭರತ್ ಶೆಟ್ಟಿ, ಶರಣ್ ಪಂಪ್‌ವೆಲ್, ಸಂದೀಪ್ ಗರೋಡಿ ಹಾಗೂ ಭರತ್ ಕುಮಾರ್ ಅವರು ಸೇರಿ ಶಾಲೆಯ ಬಳಿ ಅಕ್ರಮವಾಗಿ ಪ್ರತಿಭಟನೆ ನಡೆಸುವಂತೆ ಕರೆ ನೀಡಿದ್ದಾರೆ. ಶಾಲೆಯ ಗೇಟ್ ಮುಂದೆ ‘ಜೈ ಶ್ರೀ ರಾಮ್’ ಘೋಷಣೆ ಕೂಗಿ, ಕ್ರೈಸ್ತ ಧರ್ಮದ ವಿರುದ್ಧ ಮಾತನಾಡಿದ್ದಾರೆ. ಶಾಲಾ ಆಡಳಿತ ಮಂಡಳಿಯ ನಿಯಮಗಳನ್ನು ವಿದ್ಯಾರ್ಥಿಗಳು ಉಲ್ಲಂಘಿಸುವಂತೆ ಪ್ರಚೋದಿಸಿದ್ದಾರೆ. ಶಾಲಾ ಆಡಳಿತ ಮಂಡಳಿಯ ವಿರುದ್ಧ ಮಾತನಾಡಿ ಬೆದರಿಕೆ ಹಾಕಿದ್ದಾರೆ. ಹಿಂದೂ ಮತ್ತು ಕ್ರೈಸ್ತ ಧರ್ಮದ ನಡುವೆ ಕಲಹ ಉಂಟಾಗುವಂತೆ ಪ್ರಚೋದಿಸಿ ಮಾತನಾಡಿದ್ದಾರೆ ಎಂದು ಅನಿಲ್‌ ಲೋಬೊ ಅವರು ದೂರಿನಲ್ಲಿ ಆರೋಪಿಸಿರುವುದಾಗಿ ತಿಳಿದು ಬಂದಿದೆ.

ಏನಿದು ಘಟನೆ:

ಮಂಗಳೂರು ನಗರದ ವೆಲೆನ್ಸಿಯಾದ ಸೇಂಟ್ ಜೆರೋಸಾ ಶಾಲೆಯ ಶಿಕ್ಷಕಿ ಸಿಸ್ಟರ್ ಪ್ರಭಾ ಅವರು ವಿದ್ಯಾರ್ಥಿಗಳಿಗೆ ಪಾಠ ಮಾಡುವಾಗ ಹಿಂದೂ ಧರ್ಮದ ಅವಹೇಳನ ಮಾಡಿದ್ದಾರೆ. ಮಕ್ಕಳ ಮೇಲೆ ಕ್ರೈಸ್ತ ಧರ್ಮವನ್ನು ಹೇರಿಕೆ ಮಾಡಲಾಗುತ್ತಿದೆ ಎಂಬ ಆರೋಪ ಕೇಳಿ ಬಂದಿತ್ತು.

ಈ ಸಂಬಂಧ ಫೆ.10ರಂದು ಕೆಲ ವಿದ್ಯಾರ್ಥಿಗಳ ಫೋಷಕರು ಶಾಲೆಯ ಬಳಿ ಜಮಾಯಿಸಿ ಆಡಳಿತ ಮಂಡಳಿ ಮತ್ತು ಶಿಕ್ಷಕರೊಂದಿಗೆ ವಾಗ್ವಾದ ನಡೆಸಿದ್ದರು. ಶಿಕ್ಷಕಿ ಪ್ರಭಾ ಅವರನ್ನು ವಜಾ ಮಾಡುವಂತೆ ಆಗ್ರಹಿಸಿದ್ದರು.

ಇದಾಗಿ ಎರಡು ದಿನಗಳ ಬಳಿಕ, ಫೆ. 12ರಂದು ಶಾಸಕರಾದ ವೇದವ್ಯಾಸ್ ಕಾಮತ್ ಮತ್ತು ಭರತ್ ಶೆಟ್ಟಿ ನೇತೃತ್ವದಲ್ಲಿ ಶಾಲೆಯ ಬಳಿ ಜಮಾಯಿಸಿದ ಪೋಷಕರು, ವಿದ್ಯಾರ್ಥಿಗಳು ಮತ್ತು ಹಿಂದುತ್ವ ಸಂಘಟನೆಯ ಕಾರ್ಯಕರ್ತರು ಶಿಕ್ಷಕಿ ಸಿಸ್ಟರ್ ಪ್ರಭಾ ಮತ್ತು ಸ್ಟೀವನ್ ಎಂಬ ಮತ್ತೊಬ್ಬ ಶಿಕ್ಷಕನ ವಿರುದ್ದ ಕ್ರಮಕ್ಕೆ ಆಗ್ರಹಿಸಿದ್ದರು.

ಪೋಷಕರು ಮತ್ತು ಹಿಂದುತ್ವ ಸಂಘಟನೆಗಳ ಪ್ರತಿಭಟನೆ ಹೆಚ್ಚಾಗುತ್ತಿದ್ದಂತೆ ಶಿಕ್ಷಕಿ ಸಿಸ್ಟರ್ ಪ್ರಭಾ ಮತ್ತು ಶಿಕ್ಷಕ ಸ್ಟೀವನ್ ಅವರನ್ನು ವಜಾ ಮಾಡಿರುವುದಾಗಿ ಶಾಲೆಯ ಆಡಳಿತ ಮಂಡಳಿ ಘೋಷಿಸಿತ್ತು. ಈ ವೇಳೆ ಶಾಸಕ ವೇದವ್ಯಾಸ ಕಾಮತ್ ಶಾಲೆಯ ಮುಂದೆ ಮಕ್ಕಳಿಂದ ಜೈ ಶ್ರೀರಾಮ್ ಘೋಷಣೆ ಕೂಗಿಸಿದ್ದರು. ಈ ಕುರಿತ ವಿಡಿಯೋ ವೈರಲ್ ಆಗಿತ್ತು.

ಇದನ್ನೂ ಓದಿ: ಸೆಸ್, ಸರ್ ಚಾರ್ಜ್‌ನಲ್ಲೂ ನಮಗೆ ಪಾಲು ಕೊಡಬೇಕು: ಸಿಎಂ ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...

ಚಲಿಸುತ್ತಿದ್ದ ಸ್ಲೀಪರ್ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : ಚಾಲಕ, ಕಂಡಕ್ಟರ್ ಬಂಧನ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 2012ರಲ್ಲಿ ನಡೆದ ನಿರ್ಭಯಾ ಪ್ರಕರಣವನ್ನು ನೆನಪಿಸುವಂತಹ ಆಘಾತಕಾರಿ ಘಟನೆಯೊಂದು ನಡೆದಿದೆ. ಸ್ಲೀಪರ್‌ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. indiatoday.in ವರದಿಯ ಪ್ರಕಾರ, ಈ ಘಟನೆಯು ಆಗಸ್ಟ್ 4ರ...

ಜಗತ್ತಿನ ಪ್ರತಿಯೊಬ್ಬರಿಗೂ ಲ್ಯಾಪ್‌ಟಾಪ್ ಕೊಳ್ಳುವಷ್ಟು ಕಪ್ಪು ಹಣ ಪ್ರಪಂಚದಲ್ಲಿದೆ: ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್

ಅಕ್ರಮ ಹಣ ವರ್ಗಾವಣೆ (Money Laundering) ಮತ್ತು 'ಡಿಜಿಟಲ್ ಅರೆಸ್ಟ್' ನಂತಹ ಆನ್‌ಲೈನ್ ವಂಚನೆಗಳ ಪ್ರಮಾಣದ ಕುರಿತು ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಈ ರೀತಿಯ...

ಪೆಟ್ರೋಲ್‌ನಲ್ಲಿ ಎಥನಾಲ್ ಪ್ರಮಾಣ ಬಹಿರಂಗಪಡಿಸುವಂತೆ ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಪೆಟ್ರೋಲ್‌ನಲ್ಲಿ ಬೆರೆಸಲಾಗುವ ಎಥನಾಲ್ ಪ್ರಮಾಣವನ್ನು ಕಡ್ಡಾಯವಾಗಿ ನಮೂದಿಸಬೇಕು ಮತ್ತು ವಾಹನಗಳಿಗೆ ಎಥನಾಲ್ ಮಿಶ್ರಿತ ಇಂಧನದ ಹೊಂದಾಣಿಕೆಯ ಬಗ್ಗೆ ಹೆಚ್ಚಿನ ಪಾರದರ್ಶಕತೆ ತರಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆ...

ದೆಹಲಿ| ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ಒತ್ತುವರಿ ತೆರವು ಕಾರ್ಯಾಚರಣೆ ಆರಂಭಿಸಿದ ಎಂಸಿಡಿ

ದೆಹಲಿ ಹೈಕೋರ್ಟ್ ನಿರ್ದೇಶನದಂತೆ, ಮೊಘಲರ ಕಾಲದ ಐತಿಹಾಸಿಕ ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ನಿರ್ಮಾಣಗಳನ್ನು ಸಮೀಕ್ಷೆ ಮಾಡಿ, ಒತ್ತುವರಿಯನ್ನು ತೆರವುಗೊಳಿಸುವ ಬೃಹತ್ ಕಾರ್ಯಾಚರಣೆಯನ್ನು ದೆಹಲಿ ಮಹಾನಗರ ಪಾಲಿಕೆ (ಎಂಸಿಡಿ) ಸೋಮವಾರ (ಆ.31) ಪ್ರಾರಂಭಿಸಿದೆ...

ವೆನೆಜುವೆಲಾ ಮತ್ತೆ ಎದ್ದು ನಿಲ್ಲಲಿದೆ: ಬಂಧನದಲ್ಲಿರುವ ವೆನೆಜುವೆಲಾ ಮಾಜಿ ಅಧ್ಯಕ್ಷ ಮಡುರೊ ಮೊದಲ ಫೋಟೋ ಹಂಚಿಕೆ

ಜನವರಿಯಲ್ಲಿ ಅಮೆರಿಕ ಪಡೆಗಳಿಂದ ಬಂಧನಕ್ಕೊಳಗಾಗಿದ್ದ ವೆನೆಜುವೆಲಾದ ಮಾಜಿ ಅಧ್ಯಕ್ಷ ನಿಕೋಲಸ್ ಮಡುರೊ, ಅಮೆರಿಕದ ಬಂಧನ ಕೇಂದ್ರದಿಂದ ತಮ್ಮ ಎರಡು ಛಾಯಾಚಿತ್ರಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ. ಬಂಧನದ ಬಳಿಕ ಮಡುರೊ ಅವರ ಫೋಟೋಗಳು ಹೊರಬಂದಿರುವುದು...

‘ಮಹಿಳೆಯರು ಆಭರಣದಂತೆ ಮನೆಯಲ್ಲೇ ಇರಬೇಕು’ ಮುಸ್ಲಿಂ ಧರ್ಮಗುರು ವಿವಾದಾತ್ಮಕ ಹೇಳಿಕೆ

ಮಹಿಳೆಯರು ಮನೆಯಲ್ಲೇ ಇರಬೇಕು ಮತ್ತು ಸಾರ್ವಜನಿಕ ಕ್ಷೇತ್ರಕ್ಕೆ ಪ್ರವೇಶಿಸಬಾರದು ಎಂದು ಕೇರಳದ ಪ್ರಭಾವಿ ಮುಸ್ಲಿಂ ಧರ್ಮಗುರು ಶೇಖ್ ಅಬೂಬಕರ್ ಅಹ್ಮದ್ ನೀಡಿದ ಹೇಳಿಕೆ ಸಾಮಾಜಿಕ ಮಾಧ್ಯಮಗಳಲ್ಲಿ ಹಾಗೂ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆ...

ಹಲ್ದ್ವಾನಿ ‘ಶುದ್ಧೀಕರಣ’ ವಿವಾದ : ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್

ಉತ್ತರಾಖಂಡದ ಹಲ್ದ್ವಾನಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ರ್‍ಯಾಲಿ ನಡೆದ ಸ್ಥಳದಲ್ಲಿ ಬಿಜೆಪಿ ಬೆಂಬಲಿಗರು 'ಶುದ್ಧೀಕರಣ' ನಡೆಸಿದ ವಿವಾದ ಹೊಸ ರಾಜಕೀಯ ಮತ್ತು ಕಾನೂನು ತಿರುವು ಪಡೆದುಕೊಂಡಿದೆ. ಜಾತಿ ನಿಂದನೆಗೆ ಸಂಬಂಧಿಸಿದಂತೆ...