Homeಮುಖಪುಟಮೂರನೆ ದಿನಕ್ಕೆ ಕಾಲಿಟ್ಟ 'ದೆಹಲಿ ಚಲೋ' ರೈತರ ಮೆರವಣಿಗೆ; ಇಂದು ಮತ್ತೊಂದು ಸುತ್ತಿನ ಸಭೆ

ಮೂರನೆ ದಿನಕ್ಕೆ ಕಾಲಿಟ್ಟ ‘ದೆಹಲಿ ಚಲೋ’ ರೈತರ ಮೆರವಣಿಗೆ; ಇಂದು ಮತ್ತೊಂದು ಸುತ್ತಿನ ಸಭೆ

- Advertisement -
- Advertisement -

ಪಂಜಾಬ್-ಹರಿಯಾಣ ಗಡಿಯಲ್ಲಿ ಪ್ರತಿಭಟನಾ ನಿರತ ರೈತರು ಮತ್ತು ಭದ್ರತಾ ಸಿಬ್ಬಂದಿ ನಡುವೆ ನಡೆಯುತ್ತಿರುವ ಸಂಘರ್ಷದ ನಡುವೆಯೇ ಮೂವರು ಕೇಂದ್ರ ಸಚಿವರ ಸಮಿತಿ ಇಂದು ಚಂಡೀಗಢದಲ್ಲಿ ರೈತ ಮುಖಂಡರೊಂದಿಗೆ ಮತ್ತೊಂದು ಸುತ್ತಿನ ಮಾತುಕತೆ ನಡೆಸಲಿದೆ. ಕೃಷಿ ಸಚಿವ ಅರ್ಜುನ್ ಮುಂಡಾ, ವಾಣಿಜ್ಯ ಸಚಿವ ಪಿಯೂಷ್ ಗೋಯಲ್ ಮತ್ತು ಗೃಹ ಖಾತೆ ರಾಜ್ಯ ಸಚಿವ ನಿತ್ಯಾನಂದ ರೈ ಅವರು ರೈತರ ವಿವಿಧ ಬೇಡಿಕೆಗಳನ್ನು ಪರಿಹರಿಸಲು ಸಂಜೆ 5 ಗಂಟೆಗೆ ಸಭೆ ನಡೆಸಲಿದ್ದಾರೆ, ಪ್ರಮುಖವಾಗಿ ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ (ಎಂಎಸ್‌ಪಿ) ಖಾತರಿಪಡಿಸುವ ಕಾನೂನು ಜಾರಿ ಕುರಿತು ಚರ್ಚೆ ನಡೆಯುವ ಸಾಧ್ಯತೆ ಇದೆ.

ಫೆಬ್ರವರಿ 8 ಮತ್ತು 12 ರಂದು ನಡೆದ ಹಿಂದಿನ ಸುತ್ತಿನ ಮಾತುಕತೆಗಳು ಅನಿರ್ದಿಷ್ಟವಾಗಿ ಉಳಿದಿರುವ ಕಾರಣ ಇದು ಉಭಯ ಪಕ್ಷಗಳ ನಡುವಿನ ಮಾತುಕತೆಯ ಮೂರನೇ ಪ್ರಯತ್ನ ಇದಾಗಿದೆ. ಪಂಜಾಬ್ ಮತ್ತು ಹರಿಯಾಣದ ಶಂಭು, ಖಾನೌರಿ ಗಡಿಯಲ್ಲಿ ಮೊಕ್ಕಾಂ ಹೂಡಿರುವ ಪಂಜಾಬ್‌ನ ರೈತರು ತಮ್ಮ ಬೇಡಿಕೆಗಳನ್ನು ಒಪ್ಪಿಕೊಳ್ಳುವಂತೆ ಕೇಂದ್ರಕ್ಕೆ ಮನವರಿಕೆ ಮಾಡಲು ದೆಹಲಿಯತ್ತ ಪಾದಯಾತ್ರೆ ನಡೆಸಲು ಪ್ರಯತ್ನಿಸುತ್ತಿದ್ದಾರೆ. ಹರಿಯಾಣದ ಜಿಂದ್ ಜಿಲ್ಲೆಯ ಸಮೀಪವಿರುವ ಡಾಟಾ ಸಿಂಘ್ವಾಲಾ-ಖನೌರಿ ಗಡಿಯಲ್ಲಿ ಇದೇ ರೀತಿಯ ಬಿಕ್ಕಟ್ಟು ಮುಂದುವರಿದಿದೆ.

ಪಂಜಾಬ್‌ನಾದ್ಯಂತ ರೈಲ್ ರೋಕೋ:

ಸಭೆ ನಡೆಯುವವರೆಗೆ ರಾಷ್ಟ್ರ ರಾಜಧಾನಿ ಕಡೆಗೆ ತೆರಳುವ ಯಾವುದೇ ಹೊಸ ಪ್ರಯತ್ನಗಳನ್ನು ಮಾಡದಂತೆ ರೈತ ಮುಖಂಡರು ಒತ್ತಾಯಿಸಿದ್ದಾರೆ. ಕೇಂದ್ರದ ಪ್ರಸ್ತಾವನೆಗಳ ಆಧಾರದ ಮೇಲೆ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.

ಭಾರತಿ ಕಿಸಾನ್ ಯೂನಿಯನ್ (ಏಕ್ತಾ ಉಗ್ರನ್) ಮತ್ತು ಬಿಕೆಯು ದಕೌಂಡಾ (ಧನೇರ್) ಇಂದು ಪಂಜಾಬ್‌ನಲ್ಲಿ ‘ರೈಲ್ ರೋಕೋ’ (ರೈಲು ದಿಗ್ಬಂಧನ) ಘೋಷಿಸಿದ್ದಾರೆ. ಶಂಭು ಮತ್ತು ಖಾನೌರಿ ಗಡಿಯಲ್ಲಿ ಹರಿಯಾಣ ಭದ್ರತಾ ಸಿಬ್ಬಂದಿ ಅಶ್ರುವಾಯು ಶೆಲ್‌ಗಳು ಮತ್ತು ಜಲ ಫಿರಂಗಿಗಳನ್ನು ಬಳಸುವುದನ್ನು ವಿರೋಧಿಸಿ ರೈತರು ಮಧ್ಯಾಹ್ನ 12 ರಿಂದ ಸಂಜೆ 4 ರವರೆಗೆ ಏಳು ಸ್ಥಳಗಳಲ್ಲಿ ರೈಲು ಹಳಿಗಳ ಮೇಲೆ ಧರಣಿ ನಡೆಸಲು ಯೋಜಿಸಿದ್ದಾರೆ.

ಕಳೆದ ಎರಡು ದಿನಗಳ ಹಿಂದೆ ಪ್ರತಿಭಟನಾಕಾರರನ್ನು ಚದುರಿಸಲು ಪೊಲೀಸರು ಅಶ್ರುವಾಯು ಶೆಲ್‌ಗಳನ್ನು ನಿಯೋಜಿಸಿದ್ದು, ರೈತರು ಮುನ್ನೆಚ್ಚರಿಕೆ ವಹಿಸುವಂತೆ ಸೂಚಿಸಿದ್ದಾರೆ. ಅಶ್ರುವಾಯು ಪ್ರಭಾವವನ್ನು ಕಡಿಮೆ ಮಾಡಲು ರೈತರು ನೀರಿನ ಬಾಟಲಿಗಳು, ಒದ್ದೆಯಾದ ಬಟ್ಟೆಗಳು ಮತ್ತು ರಕ್ಷಣಾತ್ಮಕ ಸಾಧನಗಳೊಂದಿಗೆ ತಮ್ಮನ್ನು ತಾವು ಸಜ್ಜುಗೊಳಿಸಿಕೊಂಡರು.

ಅದೇ ಸಮಯದಲ್ಲಿ, ಸಂಯುಕ್ತ ಕಿಸಾನ್ ಮೋರ್ಚಾ ಟೋಲ್ ಪ್ಲಾಜಾಗಳಲ್ಲಿ ಬೆಳಿಗ್ಗೆ 11 ರಿಂದ ಮಧ್ಯಾಹ್ನ 2 ರವರೆಗೆ ಪ್ರತಿಭಟನೆ ನಡೆಸಲು ನಿರ್ಧರಿಸಿದೆ. ರೈತರು ತಮ್ಮ ಟ್ರ್ಯಾಕ್ಟರ್-ಟ್ರಾಲಿಗಳಲ್ಲಿ ದೆಹಲಿಗೆ ಪ್ರಯಾಣಿಸುವುದನ್ನು ತಡೆಯುವ ಮೂಲಕ ಪೊಲೀಸರು ಗಡಿಯನ್ನು ಬ್ಯಾರಿಕೇಡ್‌ಗಳಿಂದ ಮುಚ್ಚಿದ್ದಾರೆ.

ರಾಷ್ಟ್ರೀಯ ರಾಜಧಾನಿ ಪ್ರದೇಶದಲ್ಲಿ (ಎನ್‌ಸಿಆರ್) ಟ್ರಾಫಿಕ್ ಮೇಲೆ ಪರಿಣಾಮ ಬೀರುವ ಪ್ರತಿಭಟನೆಗಳೊಂದಿಗೆ, ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್‌ಇ) ಕಳೆದ ರಾತ್ರಿ ವಿದ್ಯಾರ್ಥಿಗಳಿಗೆ ತಮ್ಮ ಪ್ರಯಾಣವನ್ನು ಮೊದಲೇ ಯೋಜಿಸುವಂತೆ ಒತ್ತಾಯಿಸಿ ಸಲಹೆಯನ್ನು ನೀಡಿತು; ಮಂಡಳಿಯು ಜನರಿಗೆ ಮೆಟ್ರೋ ಬಳಸಲು ಶಿಫಾರಸು ಮಾಡಿದೆ.

ಇದನ್ನೂ ಓದಿ; ರಾಜ್ಯಸಭೆ ಚುನಾವಣೆಗೆ ಅಭ್ಯರ್ಥಿಗಳನ್ನು ಘೋಷಿಸಿದ ಕಾಂಗ್ರೆಸ್; ಕರ್ನಾಟಕದಿಂದ ಮಾಕೇನ್‌ಗೆ ಟಿಕೆಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...

ಚಲಿಸುತ್ತಿದ್ದ ಸ್ಲೀಪರ್ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : ಚಾಲಕ, ಕಂಡಕ್ಟರ್ ಬಂಧನ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 2012ರಲ್ಲಿ ನಡೆದ ನಿರ್ಭಯಾ ಪ್ರಕರಣವನ್ನು ನೆನಪಿಸುವಂತಹ ಆಘಾತಕಾರಿ ಘಟನೆಯೊಂದು ನಡೆದಿದೆ. ಸ್ಲೀಪರ್‌ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. indiatoday.in ವರದಿಯ ಪ್ರಕಾರ, ಈ ಘಟನೆಯು ಆಗಸ್ಟ್ 4ರ...

ಜಗತ್ತಿನ ಪ್ರತಿಯೊಬ್ಬರಿಗೂ ಲ್ಯಾಪ್‌ಟಾಪ್ ಕೊಳ್ಳುವಷ್ಟು ಕಪ್ಪು ಹಣ ಪ್ರಪಂಚದಲ್ಲಿದೆ: ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್

ಅಕ್ರಮ ಹಣ ವರ್ಗಾವಣೆ (Money Laundering) ಮತ್ತು 'ಡಿಜಿಟಲ್ ಅರೆಸ್ಟ್' ನಂತಹ ಆನ್‌ಲೈನ್ ವಂಚನೆಗಳ ಪ್ರಮಾಣದ ಕುರಿತು ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಈ ರೀತಿಯ...

ಪೆಟ್ರೋಲ್‌ನಲ್ಲಿ ಎಥನಾಲ್ ಪ್ರಮಾಣ ಬಹಿರಂಗಪಡಿಸುವಂತೆ ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಪೆಟ್ರೋಲ್‌ನಲ್ಲಿ ಬೆರೆಸಲಾಗುವ ಎಥನಾಲ್ ಪ್ರಮಾಣವನ್ನು ಕಡ್ಡಾಯವಾಗಿ ನಮೂದಿಸಬೇಕು ಮತ್ತು ವಾಹನಗಳಿಗೆ ಎಥನಾಲ್ ಮಿಶ್ರಿತ ಇಂಧನದ ಹೊಂದಾಣಿಕೆಯ ಬಗ್ಗೆ ಹೆಚ್ಚಿನ ಪಾರದರ್ಶಕತೆ ತರಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆ...

ದೆಹಲಿ| ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ಒತ್ತುವರಿ ತೆರವು ಕಾರ್ಯಾಚರಣೆ ಆರಂಭಿಸಿದ ಎಂಸಿಡಿ

ದೆಹಲಿ ಹೈಕೋರ್ಟ್ ನಿರ್ದೇಶನದಂತೆ, ಮೊಘಲರ ಕಾಲದ ಐತಿಹಾಸಿಕ ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ನಿರ್ಮಾಣಗಳನ್ನು ಸಮೀಕ್ಷೆ ಮಾಡಿ, ಒತ್ತುವರಿಯನ್ನು ತೆರವುಗೊಳಿಸುವ ಬೃಹತ್ ಕಾರ್ಯಾಚರಣೆಯನ್ನು ದೆಹಲಿ ಮಹಾನಗರ ಪಾಲಿಕೆ (ಎಂಸಿಡಿ) ಸೋಮವಾರ (ಆ.31) ಪ್ರಾರಂಭಿಸಿದೆ...

ವೆನೆಜುವೆಲಾ ಮತ್ತೆ ಎದ್ದು ನಿಲ್ಲಲಿದೆ: ಬಂಧನದಲ್ಲಿರುವ ವೆನೆಜುವೆಲಾ ಮಾಜಿ ಅಧ್ಯಕ್ಷ ಮಡುರೊ ಮೊದಲ ಫೋಟೋ ಹಂಚಿಕೆ

ಜನವರಿಯಲ್ಲಿ ಅಮೆರಿಕ ಪಡೆಗಳಿಂದ ಬಂಧನಕ್ಕೊಳಗಾಗಿದ್ದ ವೆನೆಜುವೆಲಾದ ಮಾಜಿ ಅಧ್ಯಕ್ಷ ನಿಕೋಲಸ್ ಮಡುರೊ, ಅಮೆರಿಕದ ಬಂಧನ ಕೇಂದ್ರದಿಂದ ತಮ್ಮ ಎರಡು ಛಾಯಾಚಿತ್ರಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ. ಬಂಧನದ ಬಳಿಕ ಮಡುರೊ ಅವರ ಫೋಟೋಗಳು ಹೊರಬಂದಿರುವುದು...

‘ಮಹಿಳೆಯರು ಆಭರಣದಂತೆ ಮನೆಯಲ್ಲೇ ಇರಬೇಕು’ ಮುಸ್ಲಿಂ ಧರ್ಮಗುರು ವಿವಾದಾತ್ಮಕ ಹೇಳಿಕೆ

ಮಹಿಳೆಯರು ಮನೆಯಲ್ಲೇ ಇರಬೇಕು ಮತ್ತು ಸಾರ್ವಜನಿಕ ಕ್ಷೇತ್ರಕ್ಕೆ ಪ್ರವೇಶಿಸಬಾರದು ಎಂದು ಕೇರಳದ ಪ್ರಭಾವಿ ಮುಸ್ಲಿಂ ಧರ್ಮಗುರು ಶೇಖ್ ಅಬೂಬಕರ್ ಅಹ್ಮದ್ ನೀಡಿದ ಹೇಳಿಕೆ ಸಾಮಾಜಿಕ ಮಾಧ್ಯಮಗಳಲ್ಲಿ ಹಾಗೂ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆ...

ಹಲ್ದ್ವಾನಿ ‘ಶುದ್ಧೀಕರಣ’ ವಿವಾದ : ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್

ಉತ್ತರಾಖಂಡದ ಹಲ್ದ್ವಾನಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ರ್‍ಯಾಲಿ ನಡೆದ ಸ್ಥಳದಲ್ಲಿ ಬಿಜೆಪಿ ಬೆಂಬಲಿಗರು 'ಶುದ್ಧೀಕರಣ' ನಡೆಸಿದ ವಿವಾದ ಹೊಸ ರಾಜಕೀಯ ಮತ್ತು ಕಾನೂನು ತಿರುವು ಪಡೆದುಕೊಂಡಿದೆ. ಜಾತಿ ನಿಂದನೆಗೆ ಸಂಬಂಧಿಸಿದಂತೆ...