Homeಮುಖಪುಟಉತ್ತರ ಪ್ರದೇಶ: ಬುಂದೇಲ್‌ಖಂಡ್ ಪಟಾಕಿ ಸ್ಫೋಟದಲ್ಲಿ ಪ್ರಾಣ ಕಳೆದುಕೊಂಡ ಮಕ್ಕಳು

ಉತ್ತರ ಪ್ರದೇಶ: ಬುಂದೇಲ್‌ಖಂಡ್ ಪಟಾಕಿ ಸ್ಫೋಟದಲ್ಲಿ ಪ್ರಾಣ ಕಳೆದುಕೊಂಡ ಮಕ್ಕಳು

- Advertisement -
- Advertisement -

ಉತ್ತರ ಪ್ರದೇಶದ ಚಿತ್ರಕೂಟದ ಬುಂದೇಲ್‌ಖಂಡ ಗೌರವ ಮಹೋತ್ಸವದಲ್ಲಿ ಸಂಭವಿಸಿದ ಪಟಾಕಿ ಸ್ಫೋಟದಲ್ಲಿ ನಾಲ್ವರು ಮಕ್ಕಳು ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ಉತ್ಸವದಲ್ಲಿ ಪಟಾಕಿ ಸಿಡಿಸುವ ವೇಳೆ ಸ್ಫೋಟ ಸಂಭವಿಸಿದೆ.

‘ಇದರಲ್ಲಿ ನಮ್ಮ ನಾಲ್ವರು ಮಕ್ಕಳು ಸಾವನ್ನಪ್ಪಿದ್ದು, ಚಿತ್ರಕೂಟದ ಡಿಐಜಿ, ಜಿಲ್ಲಾ ಅಧಿಕಾರಿ ಮತ್ತು ಎಸ್ಪಿ, ಹೆಚ್ಚುವರಿ ಎಸ್ಪಿ, ಇತರ ಅಧಿಕಾರಿಗಳು ಸ್ಥಳದಲ್ಲಿದ್ದಾರೆ. ನಮ್ಮ ವಿಧಿವಿಜ್ಞಾನ ತಂಡ, ಬಾಂಬ್ ನಿಷ್ಕ್ರಿಯ ದಳದ (ಬಿಡಿಎಸ್) ತಂಡವೂ ಆಗಮಿಸುತ್ತಿದೆ’ ಎಂದು ಪ್ರಯಾಗ್ರಾಜ್ ವಲಯ ಹೆಚ್ಚುವರಿ ಮಹಾನಿರ್ದೇಶಕ (ಎಡಿಜಿ) ಭಾನು ಭಾಸ್ಕರ್ ಅವರು ಚಿತ್ರಕೂಟದಲ್ಲಿ ಸುದ್ದಿಗಾರರಿಗೆ ತಿಳಿಸಿದರು.

ಘಟನೆಗೆ ಸಂಬಂಧಿಸಿದಂತೆ ಮೂವರ ವಿರುದ್ಧ ಎಫ್‌ಐಆರ್ ದಾಖಲಾಗಿದ್ದು, ಎಫ್‌ಐಆರ್‌ನಲ್ಲಿ ಇನ್ನೂ ಹೆಚ್ಚಿನವರ ಹೆಸರು ಸೇರುವ ಸಾಧ್ಯತೆ ಇದ್ದು, ಘಟನೆಯ ಕುರಿತು ತನಿಖೆ ಆರಂಭಿಸಲಾಗಿದೆ ಎಂದು ಹಿರಿಯ ಅಧಿಕಾರಿ ತಿಳಿಸಿದ್ದಾರೆ.

‘ಪ್ರಸ್ತುತ ಮೂವರ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ ಮತ್ತು ಅದರಲ್ಲಿ ಹೆಚ್ಚಿನ ಜನರನ್ನು ಸೇರಿಸಲಾಗುವುದು. ತನಿಖೆ ನಡೆಯುತ್ತಿದೆ’ ಎಂದು ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಭಾಸ್ಕರ್ ಹೇಳಿದ್ದಾರೆ.

‘ನಾವು ಪ್ರಕರಣದ ಸಂಪೂರ್ಣ ತನಿಖೆಯನ್ನು ಹೊಸ ತನಿಖಾಧಿಕಾರಿ ಹರ್ಷ್ ಪಾಂಡೆ ಅವರಿಗೆ ನೀಡಿದ್ದೇವೆ. ಆದ್ದರಿಂದ, ನಾವು ತನಿಖೆ ಮಾಡುತ್ತಿರುವಾಗಲೆ ನವ ದೆಹಲಿ ಮತ್ತು ಲಕ್ನೋದಿಂದ ಬರುವ ತಂಡಗಳೊಂದಿಗೆ ಸಮನ್ವಯಗೊಳಿಸುವುದರ ಮೂಲಕ ತನಿಖೆ ತೀಬ್ರಗೊಳಿಸಲಾಗುತ್ತದೆ. ಹಾಗೆಯೇ ಪ್ರಯಾಗ್‌ರಾಜ್‌ನಿಂದ ಮತ್ತು ಆಗ್ರಾದಿಂದ ಬರುವ ತಂಡಗಳೊಂದಿಗೆ ನಾವು ಶೀಘ್ರದಲ್ಲೇ ತನಿಖೆ ಮುಂದುವರಿಸುತ್ತೇವೆ’ ಎಂದು ಅವರು ಹೇಳಿದರು.

‘ತನಿಖೆಗೆ ಸಂಬಂಧಿಸಿದಂತೆ ನಾನು ಯಾವುದೇ ಪ್ರತಿಕ್ರಿಯೆ ನೀಡುವುದು ಈಗ ಸೂಕ್ತವಲ್ಲ. ಏಕೆಂದರೆ, ಎಲ್ಲಾ ಸಣ್ಣಸಣ್ಣ ಸಂಗತಿಗಳನ್ನು ಪರಿಶೀಲಿಸಲಾಗುತ್ತಿದೆ. ಮಕ್ಕಳ ಮರಣೋತ್ತರ ಪರೀಕ್ಷೆ ಪೂರ್ಣಗೊಂಡಿಲ್ಲ. ಹೆಚ್ಚಿನ ಜನರನ್ನು ವಿಚಾರಣೆ ನಡೆಸಲಾಗುತ್ತಿದೆ ಮತ್ತು ಅವರು ನೀಡಿದ ಸುಳಿವುಗಳೊಂದಿಗೆ ನಾವು ತನಿಖೆ ನಡೆಸುತ್ತಿದ್ದೇವೆ’ ಎಂದು ಹಿರಿಯ ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

ಘಟನೆಯ ತನಿಖೆಗೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಹೆಚ್ಚುವರಿ ಮಹಾನಿರ್ದೇಶಕ (ಎಡಿಜಿ) ಶ್ರೇಣಿಯ ಅಧಿಕಾರಿಯ ನೇತೃತ್ವದಲ್ಲಿ ಉನ್ನತ ಮಟ್ಟದ ತನಿಖಾ ಸಮಿತಿಗೆ ಆದೇಶ ನೀಡಿದ್ದಾರೆ. ಸಂತ್ರಸ್ತರ ಕುಟುಂಬಗಳಿಗೆ ₹5 ಲಕ್ಷ ಹಾಗೂ ಗಾಯಗೊಂಡವರಿಗೆ ₹50 ಸಾವಿರ ಆರ್ಥಿಕ ನೆರವು ನೀಡುವುದಾಗಿ ಘೋಷಿಸಿದರು.

ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಭಾಸ್ಕರ್ ಮಾತನಾಡಿ, ಸಂತ್ರಸ್ತರ ಕುಟುಂಬ ಸದಸ್ಯರನ್ನು ಅಧಿಕಾರಿಗಳು ಭೇಟಿಯಾಗುತ್ತಿದ್ದಾರೆ. ಮಕ್ಕಳ ಗುರುತು ಇನ್ನೂ ಬಹಿರಂಗವಾಗಿಲ್ಲ, ಸಂತ್ರಸ್ತರ ಕುಟುಂಬಕ್ಕೆ ಸರ್ಕಾರ ಪರಿಹಾರವನ್ನು ಘೋಷಿಸಿದೆ ಎಂದು ಹೇಳಿದರು.

‘ಈಗ ನಾವು ಎಲ್ಲರೊಂದಿಗೆ ಮಾತುಕತೆ ನಡೆಸುತ್ತಿದ್ದೇವೆ, ಕುಟುಂಬ ಸದಸ್ಯರನ್ನು ಭೇಟಿ ಮಾಡುವುದು ನಮ್ಮ ಮೊದಲ ಕೆಲಸವಾಗಿತ್ತು. ಆದ್ದರಿಂದ ನಾವು ಇಲ್ಲಿಯವರೆಗೆ ಇಬ್ಬರನ್ನು ಮಾತ್ರ ಭೇಟಿ ಮಾಡಿದ್ದೇವೆ, ನಾವು ಅಲಹಾಬಾದ್ ಮತ್ತು ಪ್ರಯಾಗ್ರಾಜ್ನಲ್ಲಿ ಕುಟುಂಬವನ್ನು ಭೇಟಿ ಮಾಡಿದ್ದೇವೆ. ಅದರ ನಂತರ ನಾವು ಉಳಿದವರನ್ನು ಭೇಟಿ ಮಾಡಿ ಅಗತ್ಯ ಕ್ರಮ ಕೈಗೊಳ್ಳುತ್ತೇವೆ’ ಎಂದು ಅವರು ಹೇಳಿದರು.

‘ಸರ್ಕಾರದ ಕಡೆಯಿಂದ ಪರಿಹಾರದ ಬಗ್ಗೆ ಕೆಲ ಮಾತುಗಳು ಕೇಳಿ ಬರುತ್ತಿದ್ದು, ಅದರಲ್ಲಿ ಪ್ರತಿ ಕುಟುಂಬಕ್ಕೆ ₹5 ಲಕ್ಷ ಹಾಗೂ ಗಾಯಗೊಂಡವರಿಗೆ ₹5 ಲಕ್ಷ ನೀಡಬೇಕು. ಇದನ್ನು ಹೊರತುಪಡಿಸಿ ಉಳಿದ ಪ್ರಕ್ರಿಯೆ ನಡೆಯುತ್ತಿದೆ, ಆದ್ದರಿಂದ ನಾವು ಎಲ್ಲ ಅಂಶಗಳನ್ನು ನೋಡುತ್ತೇವೆ; ಶೀಘ್ರದಲ್ಲೇ ಇದನ್ನು ತೀರ್ಮಾನಿಸುತ್ತೇವೆ’ ಎಂದು ಎಡಿಜಿ ಭಾಸ್ಕರ್ ಹೇಳಿದರು.

ಇದನ್ನೂ ಓದಿ; ಫೆ.21ರಂದು ಮಮತಾ ಬ್ಯಾನರ್ಜಿ ಪಂಜಾಬ್‌ಗೆ ಭೇಟಿ; ಕೇಜ್ರಿವಾಲ್, ಭಗವಂತ್ ಮಾನ್ ಜತೆ ಮಾತುಕತೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧರ್ಮದ ಕಾರಣಕ್ಕೆ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಗೆ ಹಲವು ಬಾರಿ ಇರಿತ: ಅಮೆರಿಕದ ಮಾಲ್‌ನಲ್ಲಿ ಕೃತ್ಯ

ಅಮೆರಿಕದ ಉತಾಹ್‌ನಲ್ಲಿರುವ ಶಾಪಿಂಗ್ ಮಾಲ್‌ನಲ್ಲಿ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಯೊಬ್ಬನಿಗೆ ಹಲವು ಬಾರಿ ಇರಿತದ ಆರೋಪ ಹೊರಿಸಲಾಗಿದೆ. ಹೈದರಾಬಾದ್‌ ನಗರದ ಟೋಲಿಚೌಕಿಯ ನಿವಾಸಿ ಸೈಯದ್ ಸೊಹೈಲ್ ಉದ್ದೀನ್, ಉತಾಹ್‌ನ ಸಾಲ್ಟ್ ಲೇಕ್ ಕೌಂಟಿಯ...

47 ವರ್ಷಗಳ ನಂತರ ಸಾಮೂಹಿಕ ಅತ್ಯಾಚಾರ ಪ್ರಕರಣದ ಶಿಕ್ಷೆ ಎತ್ತಿಹಿಡಿದ ಅಲಹಾಬಾದ್ ಹೈಕೋರ್ಟ್

1979 ರಲ್ಲಿ ನಡೆದಿದ್ದ ಅಪ್ರಾಪ್ತೆ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ 71 ವರ್ಷದ ವ್ಯಕ್ತಿಯ ಶಿಕ್ಷೆಯನ್ನು ಅಲಹಾಬಾದ್ ಹೈಕೋರ್ಟ್ ಎತ್ತಿಹಿಡಿದಿದೆ. ಆದರೆ, ಕ್ರಿಮಿನಲ್ ಮೇಲ್ಮನವಿಯ 43 ವರ್ಷಗಳ ಸುದೀರ್ಘ ವಿಚಾರಣೆ ಮತ್ತು ಆತನ...

ಪಶ್ಚಿಮ ಬಂಗಾಳ: ಮುರ್ಷಿದಾಬಾದ್‌ನಲ್ಲಿ ಶಾಲಾ ವ್ಯಾನ್‌ಗೆ ರೈಲು ಡಿಕ್ಕಿ: ಇಬ್ಬರು ವಿದ್ಯಾರ್ಥಿಗಳು ಸೇರಿ 3 ಮಂದಿ ಸಾವು

ಮುರ್ಷಿದಾಬಾದ್: ದೇಶದಲ್ಲಿ ರೈಲ್ವೆ ಸುರಕ್ಷತೆಯ ಕುರಿತು ಸರ್ಕಾರಗಳು ದೊಡ್ಡ ದೊಡ್ಡ ಭರವಸೆ ಹಾಗೂ ಯೋಜನೆಗಳನ್ನು ಮಂಡಿಸುತ್ತಿದ್ದರೂ, ತಳಮಟ್ಟದ ವಾಸ್ತವ ಮಾತ್ರ ಇಂದಿಗೂ ಅತ್ಯಂತ ಭೀಕರವಾಗಿದೆ ಎಂಬುದಕ್ಕೆ ಪಶ್ಚಿಮ ಬಂಗಾಳದಲ್ಲಿ ನಡೆದ ಈ ಘೋರ...

ವಿಜಯ್ ನೇತೃತ್ವದ ಟಿವಿಕೆ ಸರ್ಕಾರವನ್ನು ಅಸ್ಥಿರಗೊಳಿಸಲು ‘ಪ್ರಾಜೆಕ್ಟ್ ಮೇಘಾಲಯ’ ಸಂಚು ಆರೋಪ : ಪತ್ರಕರ್ತನ ವಿಚಾರಣೆ

ತಮಿಳುನಾಡಿನ ಆಡಳಿತಾರೂಢ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಶಾಸಕ ಎನ್. ಇಲೈಯರಾಜ ಅವರಿಗೆ ಹಣದ ಆಮಿಷವೊಡ್ಡಲು ಯತ್ನಿಸಿದ ಆರೋಪ ಪ್ರಕರಣ ಸಂಬಂಧ ಚೆನ್ನೈ ಪೊಲೀಸರು 'ಪುದಿಯಾ ತಲೈಮುರೈ' ವಾಹಿನಿಯ ಪತ್ರಕರ್ತ ವಿಜಯನ್...

ಜಂತರ್ ಮಂತರ್ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಕೇಜ್ರಿವಾಲ್ ಭೇಟಿ

ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ನೀಟ್ (NEET) ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಜಂತರ್ ಮಂತರ್‌ನಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಖ್ಯಾತ ಶಿಕ್ಷಣ ತಜ್ಞ ಹಾಗೂ ಪರಿಸರ...

E20 ಪೆಟ್ರೋಲ್ ಪ್ರಕರಣ : ‘ಗ್ರ್ಯಾಂಡ್ ವಿಟಾರಾ’ ಕಾರು ಬದಲಾಯಿಸಿ ಕೊಡಲು ಮಾರುತಿ ಸುಝುಕಿಗೆ ಗ್ರಾಹಕ ನ್ಯಾಯಾಲಯ ಆದೇಶ

ಛತ್ತೀಸ್‌ಗಢದ ರಾಯ್‌ಪುರದ ಜಿಲ್ಲಾ ಗ್ರಾಹಕ ವಿವಾದಗಳ ಪರಿಹಾರ ಆಯೋಗವು (ಡಿಸಿಡಿಆರ್‌ಸಿ), E20 ಇಂಧನ (ಪೆಟ್ರೋಲ್) ಬಳಕೆಯಿಂದಾಗಿ ಕಾರು ಕೆಟ್ಟುಹೋಗಿದೆ ಎಂದು ಆರೋಪಿಸಿದ ವ್ಯಕ್ತಿಗೆ ಹೊಸ 'ಗ್ರಾಂಡ್ ವಿಟಾರಾ' ಕಾರನ್ನು ನೀಡುವಂತೆ ಕಾರು ತಯಾರಿಕಾ...

ಸಿಜೆಪಿ ಶಾಂತಿಯುತ ಪ್ರತಿಭಟನೆಗೆ ನಿರಂತರ ಪೊಲೀಸ್ ಕಣ್ಗಾವಲು ಪ್ರಶ್ನಿಸಿ ದೆಹಲಿ ಹೈಕೋರ್ಟ್‌ಗೆ ಅರ್ಜಿ

ರಾಷ್ಟ್ರ ರಾಜಧಾನಿ ದೆಹಲಿಯ ಜಂತರ್ ಮಂತರ್‌ನಲ್ಲಿ ಜಿರಳೆ ಜನತಾ ಪಕ್ಷ (ಸಿಜೆಪಿ) ಆಯೋಜಿಸಿರುವ ಶಾಂತಿಯುತ ಧರಣಿ ಮತ್ತು ಉಪವಾಸ ಸತ್ಯಾಗ್ರಹದಲ್ಲಿ ಭಾಗವಹಿಸುವ ನಾಗರಿಕರ ಮೇಲೆ ದೆಹಲಿ ಪೊಲೀಸರು ನಿರಂತರ ಮತ್ತು ವ್ಯಾಪಕ ಕಣ್ಗಾವಲು...

IAS ಆಗುವ ಮುನ್ನ ‘ಪರಿಪೂರ್ಣ ತಾಯಿ’ಯಾಗಿ ಎಂದ ರಾಜ್ಯಪಾಲರ ಸಲಹೆ ಪುರುಷ ಪ್ರಾಧ್ಯಾನ್ಯತೆಯ ಮುಂದುವರೆದ ಆಚರಣೆ ಅಲ್ಲವೆ?

ಇತ್ತೀಚೆಗೆ ಉತ್ತರ ಪ್ರದೇಶದ ರಾಜ್ಯಪಾಲರಾದ ಆನಂದಿಬೆನ್ ಪಟೇಲ್ ಅವರು, "ಮಹಿಳೆಯರು IAS ಅಧಿಕಾರಿ ಅಥವಾ ಶಿಕ್ಷಕಿಯಾಗುವ ಕನಸು ಕಾಣುವ ಮೊದಲು 'ಪರಿಣಿತ ತಾಯಿ' ಆಗುವುದನ್ನು ಕಲಿಯಬೇಕು ಎಂದು ಸಲಹೆ ನೀಡಿದ್ದರು. ಕಾನ್ಪುರದ ಛತ್ರಪತಿ...

ಹಿಂದಿನ ಮದುವೆ, ಮಗು ವಿಚಾರ ಮುಚ್ಚಿಟ್ಟಿದ್ದಕ್ಕೆ ಸಹೋದರನೊಂದಿಗಿನ ಸಂಬಂಧ ಮುರಿದುಕೊಂಡಿದ್ದ ಕಾನೂನು ವಿದ್ಯಾರ್ಥಿನಿಯನ್ನು ಇರಿದು ಕೊಂದ ತಮ್ಮ

ಬೆಂಗಳೂರು: ಮೊದಲ ಮದುವೆ ಹಾಗೂ ಮಗುವಿದ್ದ ವಿಷಯವನ್ನು ಮುಚ್ಚಿಟ್ಟು ವಂಚಿಸಿದ್ದ ಪ್ರಿಯಕರನೊಂದಿಗಿನ ಸಂಬಂಧವನ್ನು ಮುರಿದುಕೊಂಡ ಕಾರಣಕ್ಕೆ, ಆತನ ಸಹೋದರನಿಂದಲೇ ಚಾಕು ಇರಿತಕ್ಕೊಳಗಾಗಿದ್ದ ಕಾನೂನು ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ...

ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ಅಮೆರಿಕ ದಾಳಿಗೆ ಇರಾನ್‌ನಿಂದ ಪ್ರತೀಕಾರ

ಕಳೆದ ಗುರುವಾರ (ಜು.16) ಖುಜೆಸ್ತಾನ್ ಪ್ರಾಂತ್ಯದಲ್ಲಿರುವ ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ನಡೆದ ದಾಳಿಗೆ ಪ್ರತೀಕಾರವಾಗಿ, ಕುವೈತ್ ಮತ್ತು ಬಹ್ರೇನ್ ಸೇರಿದಂತೆ ಗಲ್ಫ್ ರಾಷ್ಟ್ರಗಳಲ್ಲಿರುವ ಅಮೆರಿಕದ ವಾಯು ನೆಲೆಗಳ ಮೇಲೆ ಇರಾನ್ ಪ್ರತಿದಾಳಿ...