Homeಕರ್ನಾಟಕಚುನಾವಣಾ ಬಾಂಡ್ ಯೋಜನೆ ರದ್ದು: ಹೋರಾಟಗಾರರು, ಕಾನೂನು ತಜ್ಞರು ಏನಂದ್ರು?

ಚುನಾವಣಾ ಬಾಂಡ್ ಯೋಜನೆ ರದ್ದು: ಹೋರಾಟಗಾರರು, ಕಾನೂನು ತಜ್ಞರು ಏನಂದ್ರು?

- Advertisement -
- Advertisement -

ನರೇಂದ್ರ ಮೋದಿ ನೇತೃತ್ವದ ಕೇಂದ್ರದ ಬಿಜೆಪಿ ಸರ್ಕಾರ ಜಾರಿಗೆ ತಂದಿದ್ದ ‘ಚುನಾವಣಾ ಬಾಂಡ್ ಯೋಜನೆ’ಯನ್ನು ಅಸಂವಿಧಾನಿಕ ಎಂದು ರದ್ದುಗೊಳಿಸುವ ಮೂಲಕ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಈ ಕುರಿತು ಹೋರಾಟಗಾರರು, ಕಾನೂನು ತಜ್ಞರು ಸಂತಸ ವ್ಯಕ್ತಪಡಿಸಿದ್ದಾರೆ.

ಸುಪ್ರೀಂ ಕೋರ್ಟ್‌ನ ತೀರ್ಪಿನ ಕುರಿತು ನಾನುಗೌರಿ.ಕಾಂ ಜೊತೆ ಮಾತನಾಡಿರುವ ಹೋರಾಟಗಾರ ಆದರ್ಶ್ ಅಯ್ಯರ್, ಇದೊಂದು ಐತಿಹಾಸಿಕ ತೀರ್ಪು. ನಮ್ಮ ರಾಜಕೀಯ ವ್ಯವಸ್ಥೆಯಲ್ಲಿ ಬಹಳ ಕೆಟ್ಟದಾದ ದೇಣಿಗೆ ಪದ್ದತಿ ಬಂದಿತ್ತು. ಅದು ಎಲ್ಲಾ ಭ್ರಷ್ಟಾಚಾರಗಳಿಗೂ ಮಿಗಿಲಾಗಿತ್ತು. ಕಾರ್ಪೋರೇಟ್ ಕಂಪನಿಗಳು ಕಳ್ಳ ದಾರಿಯಲ್ಲಿ ರಾಜಕೀಯ ಪಕ್ಷಗಳಿಗೆ ದೇಣಿಗೆ ನೀಡುತ್ತಿತ್ತು. ಆ ವ್ಯವಸ್ಥೆಯನ್ನು ಒಡೆದು ಹಾಕುವ ಮೂಲಕ ಸುಪ್ರೀಂ ಕೋರ್ಟ್‌ ಪ್ರಜಾಪ್ರಭುತ್ವವನ್ನು ಬಲಪಡಿಸಿದೆ ಎಂದಿದ್ದಾರೆ.

ತುರ್ತು ಪರಿಸ್ಥಿತಿಯ ಸಂದರ್ಭದಲ್ಲಿ ಇಂದಿರಾ ಗಾಂಧಿಯವರ ಸರ್ಕಾರ ಯಾವ ರೀತಿ ಸರ್ವಾಧಿಕಾರಿ ಧೋರಣೆ ಅನುಸರಿಸಿತ್ತೋ, ಅದೇ ರೀತಿ ಈಗಿನ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಮುನ್ನಡೆಯುತ್ತಿದೆ. ಅದಕ್ಕೆ ಲಗಾಮು ಹಾಕುವಲ್ಲಿ ಸುಪ್ರೀಂ ಕೋರ್ಟ್‌ನ ತೀರ್ಪು ಬಹಳ ಮಹತ್ವದ್ದಾಗಿದೆ. ಸರ್ಕಾರಗಳು ಅನಿಯಂತ್ರಿತ ಅಥವಾ ಸರ್ವಾಧಿಕಾರಿ ಧೋರಣೆ ಅನುಸರಿಸಲು ಬೇಕಾದಷ್ಟು ಹಣ ಬೇಕು. ಈಗಿನ ಕೇಂದ್ರ ಸರ್ಕಾರಕ್ಕೆ ಆ ಹಣ ಚುನಾವಣಾ ಬಾಂಡ್‌ ಮೂಲಕ ಸಿಗುತ್ತಿತ್ತು. ಅಂತಹ ಅಕ್ರಮ ವ್ಯವಸ್ಥೆಗೆ ಸುಪ್ರೀಂ ಕೋರ್ಟ್ ಕಡಿವಾಣ ಹಾಕಿದೆ ಎಂದು ಹೇಳಿದ್ದಾರೆ.

ಬಾಂಡ್ ಮಾಹಿತಿ ನೀಡಲು ಎಸ್‌ಬಿಐ, ಚುನಾವಣಾ ಆಯೋಗಕ್ಕೆ ಸೂಚನೆ

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್‌ಬಿಐ) ಚುನಾವಣಾ ಬಾಂಡ್ ನೀಡುತ್ತಿತ್ತು. ಹಲವು ಕಂಪನಿಗಳು, ಉದ್ಯಮಿಗಳು ರಾಜಕೀಯ ಪಕ್ಷಗಳಿಗೆ, ವಿಶೇಷವಾಗಿ ಬಿಜೆಪಿಗೆ ಕೋಟ್ಯಾಂತರ ರೂಪಾಯಿ ಹಣ ಈಗಾಗಲೇ ನೀಡಿದ್ದಾರೆ. ಯಾರು, ಯಾವಾಗ, ಯಾವ ಪಕ್ಷಕ್ಕೆ ಎಷ್ಟು ಹಣ ಕೊಟ್ಟಿದ್ದಾರೆ ಎಂದು ಮಾರ್ಚ್‌ ಒಳಗೆ ಚುನಾವಣಾ ಆಯೋಗಕ್ಕೆ ಮಾಹಿತಿ ನೀಡುವಂತೆ ಸುಪ್ರೀಂ ಕೋರ್ಟ್‌ ತೀರ್ಪು ನೀಡುವಾಗ ಎಸ್‌ಬಿಐಗೆ ಸೂಚಿಸಿದೆ. ಅಲ್ಲದೆ, ಮಾರ್ಚ್ 13ರ ಒಳಗೆ ಚುನಾವಣಾ ಆಯೋಗ ಈ ಮಾಹಿತಿಗಳನ್ನು ವೆಬ್‌ಸೈಟ್‌ನಲ್ಲಿ ಪ್ರಕಟಿಸಬೇಕು ಎಂದು ಆದೇಶಿಸಿದೆ. ಇದೊಂದು ಮಹತ್ವದ ಆದೇಶ. ಈ ಮೂಲಕ ಯಾವ ಪಕ್ಷಕ್ಕೆ ಯಾರು ಎಷ್ಟು ಹಣ ಕೊಟ್ಟಿದ್ದಾರೆ ಎಂದು ಜನರಿಗೆ ಗೊತ್ತಾಗಲಿದೆ ಎಂದು ಆದರ್ಶ್ ಅಯ್ಯರ್ ತಿಳಿಸಿದ್ದಾರೆ.

ಸುಪ್ರೀಂ ಕೋರ್ಟ್‌ ತೀರ್ಪನಿಂದ ಅದಾನಿ, ಅಂಬಾನಿ, ವೇದಾಂತದಂತಹ ದೊಡ್ಡ ದೊಡ್ಡ ಕಂಪನಿಗಳು ಯಾವ ಪಕ್ಷಕ್ಕೆ ಎಷ್ಟು ಹಣ ಕೊಟ್ಟಿದ್ದಾರೆ, ವಿಶೇಷವಾಗಿ ಬಿಜೆಪಿಗೆ ಎಷ್ಟು ಕೊಟ್ಟಿದ್ದಾರೆ ಎಂದು ಸ್ಪಷ್ಟವಾಗಿ ಗೊತ್ತಾಗಲಿದೆ. ಅದಾನಿ, ಅಂಬಾನಿಯವರು ದೊಡ್ಡ ದೊಡ್ಡ ಪ್ರಾಜೆಕ್ಟ್‌ಗಳನ್ನು ಮಾರುತ್ತಿದ್ದರು. ಅದರ ದುಡ್ಡು ಎಲ್ಲಿಗೆ ಹೋಗುತ್ತಿತ್ತು ಎಂದು ಇದುವರೆಗೆ ಮಾಹಿತಿ ಹೊರ ಬರುತ್ತಿರಲಿಲ್ಲ. ಉದಾಹರಣೆಗೆ, ರಿಲಾಯನ್ಸ್ ಕಮ್ಯೂನಿಕೇಷನ್ಸ್ ಎಂಬ ಅನಿಲ್ ಅಂಬಾನಿಯವರ ಕಂಪನಿ ಇತ್ತು. ಅದರ ಮೌಲ್ಯ ಅಂದಾಜು 49 ಸಾವಿರ ಕೋಟಿ ರೂಪಾಯಿ ಇತ್ತು. ಆದರೆ, ಅದನ್ನು ಕೇವಲ 425 ಕೋಟಿ ರೂಪಾಯಿಗೆ ಮುಖೇಶ್ ಅಂಬಾನಿ ಖರೀದಿಸಿದ್ದಾರೆ ಎಂದು ಹೇಳಿದ್ದಾರೆ. ಹಾಗಾದರೆ, ಉಳಿದ 48 ಸಾವಿರ ಕೋಟಿ ರೂ. ಎಲ್ಲಿ ಹೋಯಿತು? ಇಂತಹ ಮಾಹಿತಿಗಳು ಜನರಿಗೆ ಗೊತ್ತಾಗುತ್ತಿರಲಿಲ್ಲ ಎಂದು ಹೇಳಿದ್ದಾರೆ.

ಮಾಹಿತಿ ಹಕ್ಕು ಕಾಯ್ದೆಯ ಉಲ್ಲಂಘನೆ: 

ಚುನಾವಣಾ ಬಾಂಡ್‌ಗಳಿಂದ ಮಾಹಿತಿ ಹಕ್ಕು ಕಾಯ್ದೆಯ ಮೇಲೆ ದೊಡ್ಡ ಪರಿಣಾಮ ಬೀರಿತ್ತು. ಜನರಿಗೆ ರಾಜಕೀಯ ಪಕ್ಷಗಳ ಹಣದ ಕುರಿತು ಮಾಹಿತಿ ಸಿಗುತ್ತಿರಲಿಲ್ಲ. ಒಂದು ಬಾರಿ ಕೇಂದ್ರ ಮಾಹಿತಿ ಹಕ್ಕು ಆಯೋಗ ಚುನಾವಣಾ ಬಾಂಡ್ ಕುರಿತ ಮಾಹಿತಿಯನ್ನುಆರ್‌ಟಿಐ ಮೂಲಕ ನೀಡುವಂತೆ ಸೂಚಿಸಿತ್ತು. ಆದರೆ, ಅದರ ವಿರುದ್ದ ಕೇಂದ್ರ ಸರ್ಕಾರ ನ್ಯಾಯಾಲಯದಿಂದ ತಡೆ ತಂದಿತ್ತು. ಈ ಮೂಲಕ ರಾಜಕೀಯ ಪಕ್ಷಗಳು ಒಂದು ಕಡೆ ದುಡ್ಡು ಮಾಡುತ್ತಿತ್ತು. ಮತ್ತೊಂದೆಡೆ ಜನರಿಗೆ ಮಾಹಿತಿ ನೀಡುತ್ತಿರಲಿಲ್ಲ ಎಂದು ಆದರ್ಶ್‌ ಅಯ್ಯರ್ ತಿಳಿಸಿದ್ದಾರೆ.

ತಿದ್ದುಪಡಿಗಳು ಅಸಂವಿಧಾನಿಕ

2017ರಲ್ಲಿ ಹಣಕಾಸು ಕಾಯ್ದೆಗೆ ತಿದ್ದುಪಡಿ ತಂದು ಚುನಾವಣಾ ಬಾಂಡ್ ಯೋಜನೆ ಜಾರಿಗೊಳಿಸಲಾಗಿತ್ತು. ಕೇವಲ ಹಣಕಾಸು ಕಾಯ್ದೆ ಮಾತ್ರವಲ್ಲದೆ, ಆರ್‌ಬಿಐ ಕಾಯ್ದೆ, ಆದಾಯ ತೆರಿಗೆ ಕಾಯ್ದೆ, ಜನಪ್ರತಿನಿಧಿಗಳ ಕಾಯ್ದೆ ಎಲ್ಲದಕ್ಕೂ ತಿದ್ದುಪಡಿ ತಂದು ಚುನಾವಣಾ ಬಾಂಡ್ ಜಾರಿಗೊಳಿಸಿದ್ದರು. ಈ ತಿದ್ದುಪಡಿಗೂ ಮೊದಲು ಕಂಪನಿಗಳು ರಾಜಕೀಯ ಪಕ್ಷಗಳಿಗೆ ತಮ್ಮ ಲಾಭದ ಗರಿಷ್ಠ ಶೇ.7ರಷ್ಟು ಮಾತ್ರ ದೇಣಿಗೆ ನೀಡಬಹುದಿತ್ತು. ಅದನ್ನು ತೆಗೆದು ಹಾಕಿದ್ದರು. ಬಿಜೆಪಿಯವರು ತಮ್ಮ ಬಹುಮತ ದುರುಪಯೋಗ ಮಾಡಿಕೊಂಡು ಲಾಭಕ್ಕೆ ಬಳಸುತ್ತಿದ್ದರು. ಪ್ರಜಾಪ್ರಭುತ್ವವನ್ನೇ ತಿರುಚಿದ್ದರು. ಸುಪ್ರೀಂ ಕೋರ್ಟ್‌ ಈ ಎಲ್ಲಾ ತಿದ್ದುಪಡಿಗಳನ್ನು ಅಸಂವಿಧಾನಿಕ ಎಂದು ಹೇಳಿದೆ ಎಂದಿದ್ದಾರೆ.

ಜನರಿಗೆ ಜಾಗೃತಿ ಮೂಡಿಸಬೇಕು:

ಚುನಾವಣಾ ಬಾಂಡ್ ಮೂಲಕ ರಾಜಕೀಯ ಪಕ್ಷಗಳ ನಡೆಸುತ್ತಿದ್ದ ‘ಕಾನೂನಾತ್ಮಕ ಭ್ರಷ್ಟಾಚಾರ’ ಮತ್ತು ಸುಪ್ರೀಂ ಕೋರ್ಟ್‌ ತೀರ್ಪಿನ ಬಗ್ಗೆ ಜನರಿಗೆ ಜಾಗೃತಿ ಮೂಡಿಸಬೇಕು. ಚುನಾವಣಾ ಬಾಂಡ್‌ನಿಂದ ರಾಜಕೀಯ ಪಕ್ಷಗಳು ಮತ್ತು ಅವರ ಜೊತೆಗಿರುವ ಬಂಡವಾಳ ಶಾಹಿಗಳಿಗೆ ಲಾಭ ಆಗುತ್ತಿದೆ ಎಂದು ಜನರಿಗೆ ತಿಳಿಸಬೇಕು. ಜನರು ಎಚ್ಚೆತ್ತುಕೊಂಡೆ ಮುಂದಿನ ಚುನಾವಣೆಯಲ್ಲಿ ಇದು ಖಂಡಿತಾ ಪರಿಣಾಮ ಬೀರಲಿದೆ ಎಂದು ಹೇಳಿದ್ದಾರೆ.

ತೀರ್ಪು ಸ್ವಾಗತಾರ್ಹ ನಿವೃತ್ತ ನ್ಯಾಯಮೂರ್ತಿ ವಿ ಗೋಪಾಲಗೌಡ 

ಸುಪ್ರೀಂ ಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ವಿ ಗೋಪಾಲಗೌಡ ಅವರು ಮಾತನಾಡಿ, “ಸುಪ್ರೀಂ ಕೋರ್ಟ್‌ ತೀರ್ಪನ್ನು ನಾನು ಸ್ವಾಗತಿಸುತ್ತೇನೆ. ಇದು ಬಹಳ ಸಂತೋಷದ ವಿಷಯ. 2017ರ ಹಣಕಾಸು ಕಾಯ್ದೆಯ ತಿದ್ದುಪಡಿಯೇ ಸರಿಯಾಗಿರಲಿಲ್ಲ. ಮಾಧ್ಯಮಗಳಲ್ಲಿ ಬಂದ ಮಾಹಿತಿ ಪ್ರಕಾರ, ಇದುವರೆಗೆ ಸಂಗ್ರವಾದ ಚುನಾವಣಾ ಬಾಂಡ್ ಕುರಿತು ಮಾಹಿತಿ ನೀಡುವಂತೆ ಎಸ್‌ಬಿಐ ಮತ್ತು ಚುನಾವಣಾ ಆಯೋಗಕ್ಕೆ ನ್ಯಾಯಾಲಯ ಸೂಚಿಸಿದೆ. ಇದು ಅತ್ಯಂತ ಸ್ವಾಗತಾರ್ಹ” ಆದೇಶ ಎಂದಿದ್ದಾರೆ.

ಭವಿಷ್ಯದಲ್ಲಿ ಸರ್ಕಾರ ಇಂತಹ ದುಷ್ಟ ಆಲೋಚನೆ ಮಾಡದಿರಲಿ : ಖರ್ಗೆ

ಸುಪ್ರೀಂ ತೀರ್ಪನ್ನು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸ್ವಾಗತಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, “ಭವಿಷ್ಯದಲ್ಲಿ ಸರ್ಕಾರವು ಇಂತಹ ದುಷ್ಟ ಆಲೋಚನೆಗಳನ್ನು ಮಾಡುವುದನ್ನು ನಿಲ್ಲಿಸಲಿದೆ ಎಂದು ನಾನು ಭಾವಿಸುತ್ತೇನೆ. ಈ ಯೋಜನೆಯನ್ನು ಪ್ರಾರಂಭಿಸಿದಾಗಲೇ ಕಾಂಗ್ರೆಸ್ ಪಕ್ಷವು ಇದು ಪಾರದರ್ಶಕತೆಯಿಂದ ಕೂಡಿಲ್ಲ ಮತ್ತು ಪ್ರಜಾಪ್ರಭುತ್ವ ವಿರೋಧಿ ಎಂದು ಹೇಳಿತ್ತು. ಅಲ್ಲದೆ, 2019ರ ಚುನಾವಣಾ ಪ್ರಣಾಳಿಕೆಯಲ್ಲಿ, ಮೋದಿ ಸರ್ಕಾರದ ಈ ಸಂಶಯಾಸ್ಪದ ಯೋಜನೆಯನ್ನು ರದ್ದುಗೊಳಿಸುವುದಾಗಿ ಕಾಂಗ್ರೆಸ್ ಭರವಸೆ ನೀಡಿತ್ತು” ಎಂದಿದ್ದಾರೆ.

ತೀರ್ಪು ದೊಡ್ಡ ಪರಿಣಾಮ ಬೀರಲಿದೆ : ಕಪಿಲ್ ಸಿಬಲ್

ರಾಜ್ಯಸಭಾ ಸಂಸದ, ಹಿರಿಯ ವಕೀಲ ಕಪಿಲ್ ಸಿಬಲ್ ಅವರು ತೀರ್ಪಿನ ಕುರಿತು ಸುದ್ದಿ ಸಂಸ್ಥೆ ಪಿಟಿಐ ಜೊತೆ ಮಾತನಾಡಿದ್ದು, “ಎಲ್ಲಾ ಹಣ ರಾಜಕೀಯ ಪಕ್ಷಗಳು ಪಡೆದಿದೆ. ಅದರಲ್ಲೂ ಬಿಜೆಪಿ ಗರಿಷ್ಠ ಮೊತ್ತವನ್ನು ಪಡೆದಿದೆ ಎಂಬ ಸರಳ ಕಾರಣಕ್ಕಾಗಿ ಸುಪ್ರೀಂ ಕೋರ್ಟ್‌ ತೀರ್ಪು ಖಷಿ ಕೊಟ್ಟಿದೆ. ಚುನಾವಣಾ ಬಾಂಡ್ ಯೋಜನೆಯ ಸ್ಥಗಿತ ನಿಸ್ಸಂಶಯವಾಗಿಯೂ ದೊಡ್ಡ ಪರಿಣಾಮ ಬೀರಲಿದೆ” ಎಂದಿದ್ದಾರೆ

ಪ್ರಜಾಪ್ರಭುತ್ವಕ್ಕೆ ದೊಡ್ಡ ವರದಾನ: ಎಸ್‌ವೈ ಖುರೈಶಿ

ಸುಪ್ರೀಂ ತೀರ್ಪಿನ ಕುರಿತು ಮಾತನಾಡಿದ ಭಾರತದ ಮಾಜಿ ಮುಖ್ಯ ಚುನಾವಣಾ ಆಯುಕ್ತ ಎಸ್‌ವೈ ಖುರೈಶಿ, “ಕಳೆದ 5-7 ವರ್ಷಗಳಲ್ಲಿ ನಾವು ಸುಪ್ರೀಂ ಕೋರ್ಟ್‌ನಿಂದ ಪಡೆದ ಅತ್ಯಂತ ಐತಿಹಾಸಿಕ ತೀರ್ಪು ಇದಾಗಿದೆ. ಇದು ಪ್ರಜಾಪ್ರಭುತ್ವಕ್ಕೆ ದೊಡ್ಡ ವರದಾನವಾಗಿದೆ. ಕಳೆದ ಹಲವು ವರ್ಷಗಳಿಂದ ನಾವೆಲ್ಲರೂ ಇದರ ಬಗ್ಗೆ ಕಾಳಜಿ ವಹಿಸಿದ್ದೇವೆ. ಪ್ರಜಾಪ್ರಭುತ್ವವನ್ನು ಪ್ರೀತಿಸುವ ಪ್ರತಿಯೊಬ್ಬರೂ ಈ ಯೋಜನೆ ವಿರುದ್ದ ಪ್ರತಿಭಟಿಸುತ್ತಿದ್ದರು. ನಾನೇ ಹಲವಾರು ಲೇಖನಗಳನ್ನು ಬರೆದಿದ್ದೇನೆ ಮತ್ತು ಮಾಧ್ಯಮಗಳೊಂದಿಗೆ ಹಲವು ಬಾರಿ ಮಾತನಾಡಿದ್ದೇನೆ. ನಾವು ಎತ್ತಿದ ಪ್ರತಿಯೊಂದು ಸಮಸ್ಯೆಗೂ ಈ ತೀರ್ಪಿನಲ್ಲಿ ಉತ್ತರ ಸಿಕ್ಕಿದೆ ಎಂದಿದ್ದಾರೆ.

ಇದನ್ನೂ ಓದಿ: ಚುನಾವಣಾ ಬಾಂಡ್ ಯೋಜನೆ ರದ್ದುಗೊಳಿಸಿದ ಸುಪ್ರೀಂ ಕೋರ್ಟ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧರ್ಮದ ಕಾರಣಕ್ಕೆ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಗೆ ಹಲವು ಬಾರಿ ಇರಿತ: ಅಮೆರಿಕದ ಮಾಲ್‌ನಲ್ಲಿ ಕೃತ್ಯ

ಅಮೆರಿಕದ ಉತಾಹ್‌ನಲ್ಲಿರುವ ಶಾಪಿಂಗ್ ಮಾಲ್‌ನಲ್ಲಿ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಯೊಬ್ಬನಿಗೆ ಹಲವು ಬಾರಿ ಇರಿತದ ಆರೋಪ ಹೊರಿಸಲಾಗಿದೆ. ಹೈದರಾಬಾದ್‌ ನಗರದ ಟೋಲಿಚೌಕಿಯ ನಿವಾಸಿ ಸೈಯದ್ ಸೊಹೈಲ್ ಉದ್ದೀನ್, ಉತಾಹ್‌ನ ಸಾಲ್ಟ್ ಲೇಕ್ ಕೌಂಟಿಯ...

47 ವರ್ಷಗಳ ನಂತರ ಸಾಮೂಹಿಕ ಅತ್ಯಾಚಾರ ಪ್ರಕರಣದ ಶಿಕ್ಷೆ ಎತ್ತಿಹಿಡಿದ ಅಲಹಾಬಾದ್ ಹೈಕೋರ್ಟ್

1979 ರಲ್ಲಿ ನಡೆದಿದ್ದ ಅಪ್ರಾಪ್ತೆ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ 71 ವರ್ಷದ ವ್ಯಕ್ತಿಯ ಶಿಕ್ಷೆಯನ್ನು ಅಲಹಾಬಾದ್ ಹೈಕೋರ್ಟ್ ಎತ್ತಿಹಿಡಿದಿದೆ. ಆದರೆ, ಕ್ರಿಮಿನಲ್ ಮೇಲ್ಮನವಿಯ 43 ವರ್ಷಗಳ ಸುದೀರ್ಘ ವಿಚಾರಣೆ ಮತ್ತು ಆತನ...

ಪಶ್ಚಿಮ ಬಂಗಾಳ: ಮುರ್ಷಿದಾಬಾದ್‌ನಲ್ಲಿ ಶಾಲಾ ವ್ಯಾನ್‌ಗೆ ರೈಲು ಡಿಕ್ಕಿ: ಇಬ್ಬರು ವಿದ್ಯಾರ್ಥಿಗಳು ಸೇರಿ 3 ಮಂದಿ ಸಾವು

ಮುರ್ಷಿದಾಬಾದ್: ದೇಶದಲ್ಲಿ ರೈಲ್ವೆ ಸುರಕ್ಷತೆಯ ಕುರಿತು ಸರ್ಕಾರಗಳು ದೊಡ್ಡ ದೊಡ್ಡ ಭರವಸೆ ಹಾಗೂ ಯೋಜನೆಗಳನ್ನು ಮಂಡಿಸುತ್ತಿದ್ದರೂ, ತಳಮಟ್ಟದ ವಾಸ್ತವ ಮಾತ್ರ ಇಂದಿಗೂ ಅತ್ಯಂತ ಭೀಕರವಾಗಿದೆ ಎಂಬುದಕ್ಕೆ ಪಶ್ಚಿಮ ಬಂಗಾಳದಲ್ಲಿ ನಡೆದ ಈ ಘೋರ...

ವಿಜಯ್ ನೇತೃತ್ವದ ಟಿವಿಕೆ ಸರ್ಕಾರವನ್ನು ಅಸ್ಥಿರಗೊಳಿಸಲು ‘ಪ್ರಾಜೆಕ್ಟ್ ಮೇಘಾಲಯ’ ಸಂಚು ಆರೋಪ : ಪತ್ರಕರ್ತನ ವಿಚಾರಣೆ

ತಮಿಳುನಾಡಿನ ಆಡಳಿತಾರೂಢ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಶಾಸಕ ಎನ್. ಇಲೈಯರಾಜ ಅವರಿಗೆ ಹಣದ ಆಮಿಷವೊಡ್ಡಲು ಯತ್ನಿಸಿದ ಆರೋಪ ಪ್ರಕರಣ ಸಂಬಂಧ ಚೆನ್ನೈ ಪೊಲೀಸರು 'ಪುದಿಯಾ ತಲೈಮುರೈ' ವಾಹಿನಿಯ ಪತ್ರಕರ್ತ ವಿಜಯನ್...

ಜಂತರ್ ಮಂತರ್ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಕೇಜ್ರಿವಾಲ್ ಭೇಟಿ

ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ನೀಟ್ (NEET) ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಜಂತರ್ ಮಂತರ್‌ನಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಖ್ಯಾತ ಶಿಕ್ಷಣ ತಜ್ಞ ಹಾಗೂ ಪರಿಸರ...

E20 ಪೆಟ್ರೋಲ್ ಪ್ರಕರಣ : ‘ಗ್ರ್ಯಾಂಡ್ ವಿಟಾರಾ’ ಕಾರು ಬದಲಾಯಿಸಿ ಕೊಡಲು ಮಾರುತಿ ಸುಝುಕಿಗೆ ಗ್ರಾಹಕ ನ್ಯಾಯಾಲಯ ಆದೇಶ

ಛತ್ತೀಸ್‌ಗಢದ ರಾಯ್‌ಪುರದ ಜಿಲ್ಲಾ ಗ್ರಾಹಕ ವಿವಾದಗಳ ಪರಿಹಾರ ಆಯೋಗವು (ಡಿಸಿಡಿಆರ್‌ಸಿ), E20 ಇಂಧನ (ಪೆಟ್ರೋಲ್) ಬಳಕೆಯಿಂದಾಗಿ ಕಾರು ಕೆಟ್ಟುಹೋಗಿದೆ ಎಂದು ಆರೋಪಿಸಿದ ವ್ಯಕ್ತಿಗೆ ಹೊಸ 'ಗ್ರಾಂಡ್ ವಿಟಾರಾ' ಕಾರನ್ನು ನೀಡುವಂತೆ ಕಾರು ತಯಾರಿಕಾ...

ಸಿಜೆಪಿ ಶಾಂತಿಯುತ ಪ್ರತಿಭಟನೆಗೆ ನಿರಂತರ ಪೊಲೀಸ್ ಕಣ್ಗಾವಲು ಪ್ರಶ್ನಿಸಿ ದೆಹಲಿ ಹೈಕೋರ್ಟ್‌ಗೆ ಅರ್ಜಿ

ರಾಷ್ಟ್ರ ರಾಜಧಾನಿ ದೆಹಲಿಯ ಜಂತರ್ ಮಂತರ್‌ನಲ್ಲಿ ಜಿರಳೆ ಜನತಾ ಪಕ್ಷ (ಸಿಜೆಪಿ) ಆಯೋಜಿಸಿರುವ ಶಾಂತಿಯುತ ಧರಣಿ ಮತ್ತು ಉಪವಾಸ ಸತ್ಯಾಗ್ರಹದಲ್ಲಿ ಭಾಗವಹಿಸುವ ನಾಗರಿಕರ ಮೇಲೆ ದೆಹಲಿ ಪೊಲೀಸರು ನಿರಂತರ ಮತ್ತು ವ್ಯಾಪಕ ಕಣ್ಗಾವಲು...

IAS ಆಗುವ ಮುನ್ನ ‘ಪರಿಪೂರ್ಣ ತಾಯಿ’ಯಾಗಿ ಎಂದ ರಾಜ್ಯಪಾಲರ ಸಲಹೆ ಪುರುಷ ಪ್ರಾಧ್ಯಾನ್ಯತೆಯ ಮುಂದುವರೆದ ಆಚರಣೆ ಅಲ್ಲವೆ?

ಇತ್ತೀಚೆಗೆ ಉತ್ತರ ಪ್ರದೇಶದ ರಾಜ್ಯಪಾಲರಾದ ಆನಂದಿಬೆನ್ ಪಟೇಲ್ ಅವರು, "ಮಹಿಳೆಯರು IAS ಅಧಿಕಾರಿ ಅಥವಾ ಶಿಕ್ಷಕಿಯಾಗುವ ಕನಸು ಕಾಣುವ ಮೊದಲು 'ಪರಿಣಿತ ತಾಯಿ' ಆಗುವುದನ್ನು ಕಲಿಯಬೇಕು ಎಂದು ಸಲಹೆ ನೀಡಿದ್ದರು. ಕಾನ್ಪುರದ ಛತ್ರಪತಿ...

ಹಿಂದಿನ ಮದುವೆ, ಮಗು ವಿಚಾರ ಮುಚ್ಚಿಟ್ಟಿದ್ದಕ್ಕೆ ಸಹೋದರನೊಂದಿಗಿನ ಸಂಬಂಧ ಮುರಿದುಕೊಂಡಿದ್ದ ಕಾನೂನು ವಿದ್ಯಾರ್ಥಿನಿಯನ್ನು ಇರಿದು ಕೊಂದ ತಮ್ಮ

ಬೆಂಗಳೂರು: ಮೊದಲ ಮದುವೆ ಹಾಗೂ ಮಗುವಿದ್ದ ವಿಷಯವನ್ನು ಮುಚ್ಚಿಟ್ಟು ವಂಚಿಸಿದ್ದ ಪ್ರಿಯಕರನೊಂದಿಗಿನ ಸಂಬಂಧವನ್ನು ಮುರಿದುಕೊಂಡ ಕಾರಣಕ್ಕೆ, ಆತನ ಸಹೋದರನಿಂದಲೇ ಚಾಕು ಇರಿತಕ್ಕೊಳಗಾಗಿದ್ದ ಕಾನೂನು ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ...

ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ಅಮೆರಿಕ ದಾಳಿಗೆ ಇರಾನ್‌ನಿಂದ ಪ್ರತೀಕಾರ

ಕಳೆದ ಗುರುವಾರ (ಜು.16) ಖುಜೆಸ್ತಾನ್ ಪ್ರಾಂತ್ಯದಲ್ಲಿರುವ ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ನಡೆದ ದಾಳಿಗೆ ಪ್ರತೀಕಾರವಾಗಿ, ಕುವೈತ್ ಮತ್ತು ಬಹ್ರೇನ್ ಸೇರಿದಂತೆ ಗಲ್ಫ್ ರಾಷ್ಟ್ರಗಳಲ್ಲಿರುವ ಅಮೆರಿಕದ ವಾಯು ನೆಲೆಗಳ ಮೇಲೆ ಇರಾನ್ ಪ್ರತಿದಾಳಿ...