Homeಫ್ಯಾಕ್ಟ್‌ಚೆಕ್Fact Check: ರಾಹುಲ್ ಗಾಂಧಿ ತಪ್ಪು ಲೆಕ್ಕ ಹೇಳಿದ್ದಾರೆಂದು ಎಡಿಟೆಡ್ ವಿಡಿಯೋ ಹಂಚಿಕೆ

Fact Check: ರಾಹುಲ್ ಗಾಂಧಿ ತಪ್ಪು ಲೆಕ್ಕ ಹೇಳಿದ್ದಾರೆಂದು ಎಡಿಟೆಡ್ ವಿಡಿಯೋ ಹಂಚಿಕೆ

- Advertisement -
- Advertisement -

ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ 50 ಮತ್ತು 15 ನ್ನು ಕೂಡಿಸಿದರೆ 73 ಆಗುತ್ತದೆ ಎಂದು
ಕಾಂಗ್ರೆಸ್‌ ನಾಯಕ ರಾಹುಲ್ ಗಾಂಧಿ ತಪ್ಪು ಲೆಕ್ಕ ಹೇಳಿದ್ದಾರೆ ಎನ್ನಲಾದ ವಿಡಿಯೋವೊಂದು ಹರಿದಾಡುತ್ತಿದೆ.

ಸಾಮಾಜಿಕ ಜಾಲತಾಣಗಳಲ್ಲಿ ಹಲವರು ಈ ವಿಡಿಯೋ ಹಂಚಿಕೊಂಡಿದ್ದು, ರಾಹುಲ್‌ ಗಾಂಧಿಯವರು ದೊಡ್ಡ ನಾಯಕ ಎಂದು ಹೇಳಲಾಗುತ್ತದೆ. ಆದರೆ, ಅವರು ದಡ್ಡ ಏನೂ ಗೊತ್ತಿಲ್ಲ ಎಂಬ ರೀತಿಯಲ್ಲಿ ಬಿಂಬಿಸಲು ಪ್ರಯತ್ನಿಸಿದ್ದಾರೆ.

ಫ್ಯಾಕ್ಟ್‌ಚೆಕ್‌ : ಈ ವಿಡಿಯೋದ ಸತ್ಯಾಸತ್ಯತೆ ತಿಳಿಯುವ ಪ್ರಯತ್ನವನ್ನು ನಾನುಗೌರಿ.ಕಾಂ ಮಾಡಿದೆ. ಇದಕ್ಕಾಗಿ ನಾವು ರಾಹುಲ್ ಗಾಂಧಿಯವರ ಇತ್ತೀಚಿನ ಭಾಷಣಗಳ ವಿಡಿಯೋ ಹುಡುಕಿದ್ದೇವೆ. ಈ ವೇಳೆ ನಮಗೆ, ‘ಭಾರತ್‌ ಜೋಡೋ ನ್ಯಾಯ ಯಾತ್ರೆ’ಯ ಸಂದರ್ಭದ ವಿಡಿಯೋವೊಂದು ಲಭ್ಯವಾಗಿದೆ. ಯೂಟ್ಯೂಬ್‌ನಲ್ಲಿ ಇರುವ ರಾಹುಲ್ ಗಾಂಧಿಯವರ ಭಾಷಣದ ವಿಡಿಯೋದಲ್ಲಿ ಅವರು ತಪ್ಪು ಲೆಕ್ಕ ಹೇಳಿರುವುದು ಕಂಡು ಬಂದಿಲ್ಲ. ಹಾಗಾಗಿ, ಇದು ಎಡಿಟೆಡ್ ವಿಡಿಯೋ ಎಂಬುವುದು ಖಚಿತವಾಗಿದೆ.

ವಿಡಿಯೋದ ಯೂಟ್ಯೂಬ್ ಲಿಂಕ್ ಇಲ್ಲಿದೆ 

ಫೆ.8ರಂದು ಭಾರತ್ ಜೋಡೋ ನ್ಯಾಯ ಯಾತ್ರೆಯ ಅಂಗವಾಗಿ ಒಡಿಶಾದಲ್ಲಿ ಬುಡಕಟ್ಟು ಜನರನ್ನು ಉದ್ದೇಶಿಸಿ ಮಾತನಾಡುವ ಸಂದರ್ಭದಲ್ಲಿ ಹಿಂದುಳಿದ ವರ್ಗಗಳ ಜನಸಂಖ್ಯೆ ಮತ್ತು ಮೀಸಲಾತಿ ಪಾಲನ್ನು ರಾಹುಲ್ ಗಾಂಧಿ ಉಲ್ಲೇಖಿಸಿದ್ದಾರೆ. ಅದರಲ್ಲಿ ಅವರು 50, 15 ಮತ್ತು 8 ಒಟ್ಟಾರೆಯಾಗಿ 73% ಆಗುತ್ತದೆ ಎಂದು ಹೇಳಿದ್ದಾರೆ. ಅಂದರೆ, ಇಲ್ಲಿ ರಾಹುಲ್‌ ಗಾಂಧಿ ಅವರು ಶೇಕಡಾವಾರು ಲೆಕ್ಕವನ್ನು ಹೇಳಿದ್ದಾರೆಯೇ ಹೊರತು, ಅಂಕಿ ಅಂಶಗಳನ್ನು ಕೂಡಿಸಿ ಹೇಳಿದ್ಧಲ್ಲ ಎಂಬುವುದು ಖಚಿತ.

ರಾಹುಲ್ ಗಾಂಧಿಯವರ ಭಾಷಣವನ್ನು ಕಾಂಗ್ರೆಸ್ ಫೆ.8ರಂದು ಎಕ್ಸ್‌ನಲ್ಲಿ ಹಂಚಿಕೊಂಡಿದ್ದು, ಅದು ಹೀಗಿದೆ.. “ಪತ್ರಕರ್ತರೊಬ್ಬರು ನನ್ನನ್ನು ಕೇಳಿದರು, ರಾಹುಲ್ ಜೀ ನೀವು ಜಾತಿ ಗಣತಿ ಮತ್ತು ಹಕ್ಕುಗಳ ಬಗ್ಗೆ ಮಾತನಾಡುತ್ತಿದ್ದೀರಿ. ಇದು ದೇಶವನ್ನು ವಿಭಜಿಸುತ್ತಿಲ್ಲವೇ?. ನಾನು ಅವರಿಗೆ ಪ್ರತಿಕ್ರಿಯೆಯಾಗಿ ಕೇಳಿದೆ, ಮಾಧ್ಯಮದ ಕ್ಷೇತ್ರದಲ್ಲಿ ಹಿಂದುಳಿದ, ದಲಿತ, ಬುಡಕಟ್ಟು ವರ್ಗದ ಎಷ್ಟು ಜನರು ಮಾಲೀಕರಾಗಿದ್ದಾರೆ? ಎಂದು. ಅವರು ಮೌನವಾದರು. ದೇಶದಲ್ಲಿ ಸುಮಾರು 50 ಶೇ. ಒಬಿಸಿಗಳು, 15 ಶೇ. ದಲಿತರು ಮತ್ತು 8 ಶೇ. ಆದಿವಾಸಿಗಳು ಇದ್ದಾರೆ, ಇದು ಒಟ್ಟು 73 ಶೇ. ಆಗಿದೆ. ಅಂದರೆ ಶೇ.73 ರಷ್ಟು ಜನರಿಗೆ ಏನೂ ಸಿಗುತ್ತಿಲ್ಲ ಎಂದಲ್ಲವೇ? ಹಾಗಾದರೆ ಭಾರತ ಹೇಗೆ ಒಗ್ಗಟ್ಟಾಗುತ್ತದೆ? ಎಂದು ನಾನು ಕೇಳಿದೆ.”

ಕಾಂಗ್ರೆಸ್‌ ಹಾಕಿರುವ ಈ ಪೋಸ್ಟ್‌ನಲ್ಲಿ ಶೇಖಡವಾರು ಲೆಕ್ಕದಲ್ಲಿ ಹಿಂದುಳಿದ ವರ್ಗಗಳ ಜನಸಂಖ್ಯೆ ಮತ್ತು ಮೀಸಲಾತಿ ಕುರಿತು ರಾಹುಲ್ ನೀಡಿರುವ ಹೇಳಿಕೆಯನ್ನು ಸ್ಪಷ್ಟವಾಗಿ ಉಲ್ಲೇಖಿಸಲಾಗಿದೆ. ಹಾಗಾಗಿ, ರಾಹುಲ್ ಗಾಂಧಿ ತಪ್ಪು ಲೆಕ್ಕ ಹೇಳಿದ್ದಾರೆ ಎಂಬುವುದು ಸುಳ್ಳು ಪ್ರತಿಪಾದನೆಯಾಗಿದೆ.

ಇದನ್ನೂ ಓದಿ : Fact Check: ‘ದಿಲ್ಲಿ ಚಲೋ’ ಪ್ರತಿಭಟನಾ ನಿರತ ರೈತರು ಪೊಲೀಸರ ಮೇಲೆ ಟ್ರ್ಯಾಕ್ಟರ್ ಹತ್ತಿಸಿದ್ರಾ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ತೆರೆಮರೆಯಲ್ಲಿ ಏನೋ ಅನುಮಾನಾಸ್ಪದ ಘಟನೆ ನಡೆದಿದೆ..’; ಅಜಿತ್ ವಿಮಾನ ಅಪಘಾತದ ಕುರಿತು ಅನುಮಾನ ವ್ಯಕ್ತಪಡಿಸಿದ ರಾವತ್

ಜನವರಿ 28, 2026 ರಂದು ಮಹಾರಾಷ್ಟ್ರದ ಬಾರಾಮತಿ ಬಳಿ ನಡೆದ ವಿಮಾನ ಅಪಘಾತದಲ್ಲಿ ಉಪಮುಖ್ಯಮಂತ್ರಿ ಮತ್ತು ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಹಠಾತ್ ಸಾವು ಸಾಕಷ್ಟು ಅನುಮಾನಗಳನ್ನು ಹುಟ್ಟುಹಾಕಿದೆ. ರಾಜಕೀಯ ವಲಯದಿಂದ...

ಸಿಜೆ ರಾಯ್ ಸಾವಿನ ನ್ಯಾಯಾಂಗ ತನಿಖೆ ಆಗ್ರಹಿಸಿದ ಕೇರಳ ಸಿಎಂ ಪಿಣರಾಯಿ ವಿಜಯನ್ : ಲೋಕಸಭೆಯಲ್ಲಿ ಚರ್ಚೆಗೆ ಕಾಂಗ್ರೆಸ್ ಆಗ್ರಹ

ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿ.ಜೆ ರಾಯ್ ಅವರ ಸಾವಿನ ಬಗ್ಗೆ ನ್ಯಾಯಾಂಗ ತನಿಖೆಗೆ ಆದೇಶಿಸುವಂತೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಭಾನುವಾರ...

ಮಹಾರಾಷ್ಟ್ರ ಉಪ ಮುಖ್ಯಮಂತ್ರಿಯಾಗಿ ಸುನೇತ್ರಾ ಪವಾರ್ ನೇಮಕದ ಹಿಂದೆ ಬಿಜೆಪಿ ನಾಯಕತ್ವದ ಮಾಸ್ಟರ್ ಮೈಂಡ್: ‘ಸಾಮ್ನಾ’

ಮಹಾರಾಷ್ಟ್ರದ ವಿರೋಧ ಪಕ್ಷವಾದ ಶಿವಸೇನೆ (ಯುಬಿಟಿ), ರಾಷ್ಟ್ರೀಯತಾವಾದಿ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ) ನಾಯಕಿ ಸುನೇತ್ರಾ ಪವಾರ್ ಅವರು ಪತಿ ಅಜಿತ್ ಪವಾರ್ ನಿಧನರಾದ ಕೆಲವೇ ದಿನಗಳಲ್ಲಿ ರಾಜ್ಯದ ಉಪಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ...

ಎಪ್‌ಸ್ಟೀನ್‌ ಫೈಲ್ಸ್‌ನಲ್ಲಿ ಹೆಸರು ಉಲ್ಲೇಖ : ಸಚಿವ ಹರ್ದೀಪ್ ಸಿಂಗ್ ಪುರಿ ಹೇಳಿದ್ದೇನು?

ಜಗತ್ತಿನಾದ್ಯಂತ ಚರ್ಚೆಯ ವಿಷಯವಾಗಿರುವ ಜೆಫ್ರಿ ಎಪ್‌ಸ್ಟೀನ್‌ ಫೈಲ್ಸ್‌ನಲ್ಲಿ ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ ಅವರ ಹೆಸರಿದೆ, ಪುರಿ ಮತ್ತು ಎಪ್‌ಸ್ಟೀನ್ ನಡುವೆ ಇ-ಮೇಲ್ ಸಂಭಾಷಣೆಗಳು ನಡೆದಿವೆ. ಈ ಇ-ಮೇಲ್‌ಗಳು ಕೇವಲ ವ್ಯವಹಾರಿಕ...

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...