Homeಫ್ಯಾಕ್ಟ್‌ಚೆಕ್Fact Check: ರಾಹುಲ್ ಗಾಂಧಿ ತಪ್ಪು ಲೆಕ್ಕ ಹೇಳಿದ್ದಾರೆಂದು ಎಡಿಟೆಡ್ ವಿಡಿಯೋ ಹಂಚಿಕೆ

Fact Check: ರಾಹುಲ್ ಗಾಂಧಿ ತಪ್ಪು ಲೆಕ್ಕ ಹೇಳಿದ್ದಾರೆಂದು ಎಡಿಟೆಡ್ ವಿಡಿಯೋ ಹಂಚಿಕೆ

- Advertisement -
- Advertisement -

ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ 50 ಮತ್ತು 15 ನ್ನು ಕೂಡಿಸಿದರೆ 73 ಆಗುತ್ತದೆ ಎಂದು
ಕಾಂಗ್ರೆಸ್‌ ನಾಯಕ ರಾಹುಲ್ ಗಾಂಧಿ ತಪ್ಪು ಲೆಕ್ಕ ಹೇಳಿದ್ದಾರೆ ಎನ್ನಲಾದ ವಿಡಿಯೋವೊಂದು ಹರಿದಾಡುತ್ತಿದೆ.

ಸಾಮಾಜಿಕ ಜಾಲತಾಣಗಳಲ್ಲಿ ಹಲವರು ಈ ವಿಡಿಯೋ ಹಂಚಿಕೊಂಡಿದ್ದು, ರಾಹುಲ್‌ ಗಾಂಧಿಯವರು ದೊಡ್ಡ ನಾಯಕ ಎಂದು ಹೇಳಲಾಗುತ್ತದೆ. ಆದರೆ, ಅವರು ದಡ್ಡ ಏನೂ ಗೊತ್ತಿಲ್ಲ ಎಂಬ ರೀತಿಯಲ್ಲಿ ಬಿಂಬಿಸಲು ಪ್ರಯತ್ನಿಸಿದ್ದಾರೆ.

ಫ್ಯಾಕ್ಟ್‌ಚೆಕ್‌ : ಈ ವಿಡಿಯೋದ ಸತ್ಯಾಸತ್ಯತೆ ತಿಳಿಯುವ ಪ್ರಯತ್ನವನ್ನು ನಾನುಗೌರಿ.ಕಾಂ ಮಾಡಿದೆ. ಇದಕ್ಕಾಗಿ ನಾವು ರಾಹುಲ್ ಗಾಂಧಿಯವರ ಇತ್ತೀಚಿನ ಭಾಷಣಗಳ ವಿಡಿಯೋ ಹುಡುಕಿದ್ದೇವೆ. ಈ ವೇಳೆ ನಮಗೆ, ‘ಭಾರತ್‌ ಜೋಡೋ ನ್ಯಾಯ ಯಾತ್ರೆ’ಯ ಸಂದರ್ಭದ ವಿಡಿಯೋವೊಂದು ಲಭ್ಯವಾಗಿದೆ. ಯೂಟ್ಯೂಬ್‌ನಲ್ಲಿ ಇರುವ ರಾಹುಲ್ ಗಾಂಧಿಯವರ ಭಾಷಣದ ವಿಡಿಯೋದಲ್ಲಿ ಅವರು ತಪ್ಪು ಲೆಕ್ಕ ಹೇಳಿರುವುದು ಕಂಡು ಬಂದಿಲ್ಲ. ಹಾಗಾಗಿ, ಇದು ಎಡಿಟೆಡ್ ವಿಡಿಯೋ ಎಂಬುವುದು ಖಚಿತವಾಗಿದೆ.

ವಿಡಿಯೋದ ಯೂಟ್ಯೂಬ್ ಲಿಂಕ್ ಇಲ್ಲಿದೆ 

ಫೆ.8ರಂದು ಭಾರತ್ ಜೋಡೋ ನ್ಯಾಯ ಯಾತ್ರೆಯ ಅಂಗವಾಗಿ ಒಡಿಶಾದಲ್ಲಿ ಬುಡಕಟ್ಟು ಜನರನ್ನು ಉದ್ದೇಶಿಸಿ ಮಾತನಾಡುವ ಸಂದರ್ಭದಲ್ಲಿ ಹಿಂದುಳಿದ ವರ್ಗಗಳ ಜನಸಂಖ್ಯೆ ಮತ್ತು ಮೀಸಲಾತಿ ಪಾಲನ್ನು ರಾಹುಲ್ ಗಾಂಧಿ ಉಲ್ಲೇಖಿಸಿದ್ದಾರೆ. ಅದರಲ್ಲಿ ಅವರು 50, 15 ಮತ್ತು 8 ಒಟ್ಟಾರೆಯಾಗಿ 73% ಆಗುತ್ತದೆ ಎಂದು ಹೇಳಿದ್ದಾರೆ. ಅಂದರೆ, ಇಲ್ಲಿ ರಾಹುಲ್‌ ಗಾಂಧಿ ಅವರು ಶೇಕಡಾವಾರು ಲೆಕ್ಕವನ್ನು ಹೇಳಿದ್ದಾರೆಯೇ ಹೊರತು, ಅಂಕಿ ಅಂಶಗಳನ್ನು ಕೂಡಿಸಿ ಹೇಳಿದ್ಧಲ್ಲ ಎಂಬುವುದು ಖಚಿತ.

ರಾಹುಲ್ ಗಾಂಧಿಯವರ ಭಾಷಣವನ್ನು ಕಾಂಗ್ರೆಸ್ ಫೆ.8ರಂದು ಎಕ್ಸ್‌ನಲ್ಲಿ ಹಂಚಿಕೊಂಡಿದ್ದು, ಅದು ಹೀಗಿದೆ.. “ಪತ್ರಕರ್ತರೊಬ್ಬರು ನನ್ನನ್ನು ಕೇಳಿದರು, ರಾಹುಲ್ ಜೀ ನೀವು ಜಾತಿ ಗಣತಿ ಮತ್ತು ಹಕ್ಕುಗಳ ಬಗ್ಗೆ ಮಾತನಾಡುತ್ತಿದ್ದೀರಿ. ಇದು ದೇಶವನ್ನು ವಿಭಜಿಸುತ್ತಿಲ್ಲವೇ?. ನಾನು ಅವರಿಗೆ ಪ್ರತಿಕ್ರಿಯೆಯಾಗಿ ಕೇಳಿದೆ, ಮಾಧ್ಯಮದ ಕ್ಷೇತ್ರದಲ್ಲಿ ಹಿಂದುಳಿದ, ದಲಿತ, ಬುಡಕಟ್ಟು ವರ್ಗದ ಎಷ್ಟು ಜನರು ಮಾಲೀಕರಾಗಿದ್ದಾರೆ? ಎಂದು. ಅವರು ಮೌನವಾದರು. ದೇಶದಲ್ಲಿ ಸುಮಾರು 50 ಶೇ. ಒಬಿಸಿಗಳು, 15 ಶೇ. ದಲಿತರು ಮತ್ತು 8 ಶೇ. ಆದಿವಾಸಿಗಳು ಇದ್ದಾರೆ, ಇದು ಒಟ್ಟು 73 ಶೇ. ಆಗಿದೆ. ಅಂದರೆ ಶೇ.73 ರಷ್ಟು ಜನರಿಗೆ ಏನೂ ಸಿಗುತ್ತಿಲ್ಲ ಎಂದಲ್ಲವೇ? ಹಾಗಾದರೆ ಭಾರತ ಹೇಗೆ ಒಗ್ಗಟ್ಟಾಗುತ್ತದೆ? ಎಂದು ನಾನು ಕೇಳಿದೆ.”

ಕಾಂಗ್ರೆಸ್‌ ಹಾಕಿರುವ ಈ ಪೋಸ್ಟ್‌ನಲ್ಲಿ ಶೇಖಡವಾರು ಲೆಕ್ಕದಲ್ಲಿ ಹಿಂದುಳಿದ ವರ್ಗಗಳ ಜನಸಂಖ್ಯೆ ಮತ್ತು ಮೀಸಲಾತಿ ಕುರಿತು ರಾಹುಲ್ ನೀಡಿರುವ ಹೇಳಿಕೆಯನ್ನು ಸ್ಪಷ್ಟವಾಗಿ ಉಲ್ಲೇಖಿಸಲಾಗಿದೆ. ಹಾಗಾಗಿ, ರಾಹುಲ್ ಗಾಂಧಿ ತಪ್ಪು ಲೆಕ್ಕ ಹೇಳಿದ್ದಾರೆ ಎಂಬುವುದು ಸುಳ್ಳು ಪ್ರತಿಪಾದನೆಯಾಗಿದೆ.

ಇದನ್ನೂ ಓದಿ : Fact Check: ‘ದಿಲ್ಲಿ ಚಲೋ’ ಪ್ರತಿಭಟನಾ ನಿರತ ರೈತರು ಪೊಲೀಸರ ಮೇಲೆ ಟ್ರ್ಯಾಕ್ಟರ್ ಹತ್ತಿಸಿದ್ರಾ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...

ಚಲಿಸುತ್ತಿದ್ದ ಸ್ಲೀಪರ್ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : ಚಾಲಕ, ಕಂಡಕ್ಟರ್ ಬಂಧನ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 2012ರಲ್ಲಿ ನಡೆದ ನಿರ್ಭಯಾ ಪ್ರಕರಣವನ್ನು ನೆನಪಿಸುವಂತಹ ಆಘಾತಕಾರಿ ಘಟನೆಯೊಂದು ನಡೆದಿದೆ. ಸ್ಲೀಪರ್‌ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. indiatoday.in ವರದಿಯ ಪ್ರಕಾರ, ಈ ಘಟನೆಯು ಆಗಸ್ಟ್ 4ರ...

ಜಗತ್ತಿನ ಪ್ರತಿಯೊಬ್ಬರಿಗೂ ಲ್ಯಾಪ್‌ಟಾಪ್ ಕೊಳ್ಳುವಷ್ಟು ಕಪ್ಪು ಹಣ ಪ್ರಪಂಚದಲ್ಲಿದೆ: ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್

ಅಕ್ರಮ ಹಣ ವರ್ಗಾವಣೆ (Money Laundering) ಮತ್ತು 'ಡಿಜಿಟಲ್ ಅರೆಸ್ಟ್' ನಂತಹ ಆನ್‌ಲೈನ್ ವಂಚನೆಗಳ ಪ್ರಮಾಣದ ಕುರಿತು ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಈ ರೀತಿಯ...