Homeಮುಖಪುಟಪೌರ ಕಾರ್ಮಿಕರ ₹90 ಕೋಟಿ ಪಿಎಫ್‌ ಬಾಕಿ ಪಾವತಿಸುವಂತೆ ಬಿಬಿಎಂಪಿಗೆ ಹೈಕೋರ್ಟ್‌ ಆದೇಶ

ಪೌರ ಕಾರ್ಮಿಕರ ₹90 ಕೋಟಿ ಪಿಎಫ್‌ ಬಾಕಿ ಪಾವತಿಸುವಂತೆ ಬಿಬಿಎಂಪಿಗೆ ಹೈಕೋರ್ಟ್‌ ಆದೇಶ

- Advertisement -
- Advertisement -

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಪೌರ ಕಾರ್ಮಿಕರ ₹90 ಕೋಟಿಗೂ ಹೆಚ್ಚಿನ ಇಪಿಎಫ್‌ ಹಣ ಪಾವತಿಸುವಂತೆ ಪಾಲಿಕೆ ಆಡಳಿತಕ್ಕೆ ರಾಜ್ಯ ಹೈಕೋರ್ಟ್‌ ಇಂದು ಆದೇಶ ನೀಡಿದೆ.

ಪೌರಕಾರ್ಮಿಕರಿಗೆ ಕೊಡಬೇಕಾಗಿದ್ದ ಬಾಕಿ ಹಣವಾದ ₹90,18,89,719 (ತೊಂಬತ್ತು ಕೋಟಿ ಹದಿನೆಂಟು ಲಕ್ಷ ಎಂಬತ್ತೊಂಬತ್ತು ಸಾವಿರದ ಏಳುನೂರ ಹತ್ತೊಂಬತ್ತು) ಅನ್ನು ಪಾವತಿಸುವಂತೆ ಕರ್ನಾಟಕ ಉಚ್ಛ ನ್ಯಾಯಾಲಯ ಆದೇಶ ನೀಡಿ, ಪೌರಕಾರ್ಮಿಕರ ಸೇವೆಯ ಮಹತ್ವ ಮತ್ತು ಕೆಲಸದ ದುಸ್ಥಿತಿಗಳನ್ನು ಕುರಿತು ಆದೇಶದಲ್ಲಿ ಒತ್ತಿ ಹೇಳಿದೆ.

ಬಿಬಿಎಂಪಿ ಬಾಕಿ ಉಳಿಸಿಕೊಂಡಿದ್ದ ಬಾಕಿ ಪಿಎಫ್‌ ಹಣಕ್ಕೆ ವಾರ್ಷಿಕ 12% ಬಡ್ಡಿಯೊಂದಿಗೆ ಆದೇಶದ ದಿನಾಂಕದಿಂದ ಎಂಟು ವಾರಗಳಲ್ಲಿ ಪೌರಕಾರ್ಮಿಕರ ಇಪಿಎಫ್ ಖಾತೆಗಳಿಗೆ ಜಮಾಮಾಡಬೇಕೆಂದು ಆದೇಶ ನೀಡಿದೆ.

ಬಿಬಿಎಂಪಿ ಪೌರಕಾರ್ಮಿಕರ ಸಂಘ (ಎಐಸಿಸಿಟಿಯುನೊಂದಿಗೆ ಸಂಯೋಜಿತವಾಗಿದೆ) ಬಿಬಿಎಂಪಿಯಲ್ಲಿ ಉದ್ಯೋಗದಲ್ಲಿರುವ ಪೌರಕಾರ್ಮಿಕರಿಗೆ ಜನವರಿ 2011 ಮತ್ತು ಜುಲೈ 2017 ರ ನಡುವಿನ ಅವಧಿಗೆ ಬಾಕಿ ಉಳಿಸಿಕೊಂಡಿದ್ದ ಪಿಎಫ್ ವಂತಿಗೆಯನ್ನು ಕೋರಿ ದೂರುಗಳನ್ನು ಸಲ್ಲಿಸಿತ್ತು. ಅದರ ಮೇಲೆ ಇಪಿಎಫ್ ಪ್ರಾಧಿಕಾರವು 26.10.2017 ರಂದು ಬಿಬಿಎಂಪಿಗೆ ರೂ. 90,18,89,719/- ಪೌರಕಾರ್ಮಿಕರ ಇಪಿಎಫ್ ಖಾತೆಗಳಿಗೆ ಜಮಾಮಾಡುವಂತೆ ಆದೇಶ ಹೊರಡಿಸಿತ್ತು. ಇಪಿಎಫ್ ಪ್ರಾಧಿಕಾರದ ಆದೇಶವನ್ನು ಅನುಸರಿಸಲು ವಿಫಲವಾದ ಕಾರಣ, ಆದೇಶವನ್ನು ಪಾಲಿಸುವಂತೆ ಬಿಬಿಎಂಪಿಗೆ ನಿರ್ದೇಶನ ನೀಡುವಂತೆ ಕೋರಿ ಕಾರ್ಮಿಕ ಸಂಘಟನೆಯು ಉಚ್ಛ ನ್ಯಾಯಾಲಯದ ಮೊರೆ ಹೋಗಿತ್ತು.

ಉಚ್ಚ ನ್ಯಾಯಾಲಯವು ಪೌರಕಾರ್ಮಿಕರ ಸೇವೆಯ ಮಹತ್ವ ಮತ್ತು ಅವರ ಕೆಲಸದಲ್ಲಿನ ದುಸ್ಥಿತಿಗಳನ್ನು ಗುರುತಿಸಿದೆ. “ಈ ಕಾರ್ಮಿಕರು (ಪೌರಕಾರ್ಮಿಕರು) ಸಮಾಜಕ್ಕೆ ಉತ್ತಮ ಸೇವೆಯನ್ನು ಮಾಡುತ್ತಿದ್ದಾರೆ ಮತ್ತು ಎಲ್ಲಾ ಕಾರ್ಮಿಕರು ಸರಿಯಾದ ವೇತನವನ್ನು ಸಕಾಲಕ್ಕೆ ಪಡೆಯುವುದನ್ನು ಒಳಗೊಂಡಂತೆ ತಮ್ಮ ಬಾಕಿ ಮೊತ್ತಗಳನ್ನು ಪಡೆಯುವುದನ್ನು ಖಚಿತಪಡಿಸಿಕೊಳ್ಳಲು ಕಾರ್ಮಿಕ ಸಂಘಟನೆಯು ಹಲವಾರು ವರ್ಷಗಳಿಂದ ಕೆಲಸ ಮಾಡಿದೆ. ಪೌರಕಾರ್ಮಿಕರು ದಲಿತ ಸಮುದಾಯವರಾಗಿದ್ದು, ಅದರಲ್ಲೂ ಪ್ರಧಾನವಾಗಿ ಮಹಿಳೆಯರೇ ಇದ್ದಾರೆ. ಸಾಪ್ತಾಹಿಕ ಅಥವಾ ರಾಷ್ಟ್ರೀಯ ರಜಾದಿನಗಳು ಅಥವಾ ಯಾವುದೇ ವಿರಾಮಗಳಿಲ್ಲದೆಯೇ, ಅವರು ವೈಜ್ಞಾನಿಕ ತಂತ್ರಜ್ಞಾನವಿಲ್ಲದ ಅಮಾನವೀಯ ಮತ್ತು ಹಳೆಯ ಮಾದರಿಯಲ್ಲೆ ಕಸ-ಸಂಗ್ರಹಣೆ ಮಾಡಿ, ರಸ್ತೆ ಗುಡಿಸುವಲ್ಲಿ ವರ್ಷವಿಡೀ ಕೆಲಸ ಮಾಡುತ್ತಾರೆ. ಅವರು ತಮ್ಮ ಸ್ವಂತ ಆರೋಗ್ಯವನ್ನು ಲೆಕ್ಕಿಸದೇ ನಿರಂತರವಾಗಿ ಸಾರ್ವಜನಿಕರ ಆರೋಗ್ಯವನ್ನು ರಕ್ಷಿಸಿದ್ದಾರೆ. ಪ್ರತಿ ದಿನವೂ ಅದನ್ನು ಮುಂದುವರೆಸಿದ್ದಾರೆ. ಇದರಿಂದಾಗಿ ಅವರು ಗಂಭೀರ ಮತ್ತು ಜೀವನಾವಧಿಯನ್ನು ಕಡಿಮೆಗೊಳಿಸುವ ಉಸಿರಾಟದ ಕಾಯಿಲೆಗಳು, ಹೃದಯದ ತೊಂದರೆಗಳು, ಬೆನ್ನು ಮತ್ತು ಮೊಣಕಾಲಿನ ಸಮಸ್ಯೆಗಳಿಂದ ಬಳಲುತ್ತಿದ್ದಾರೆ’ ಎಂದು ತನ್ನ ಆದೇಶದಲ್ಲಿ ಹೇಳಿದೆ.

ಪೌರಕಾರ್ಮಿಕರಿಗೆ ಆಗಿರುವ ಅನ್ಯಾಯದ ಬಗ್ಗೆಯೂ ಗಮನಿಸಿದ ನ್ಯಾಯಲಯ, ‘ಪ್ರತಿವಾದಿ ಬಿಬಿಎಂಪಿಯ ಕೃತ್ಯಗಳು ಅತ್ಯಂತ ಬಡ ಮತ್ತು ಹಿಂದುಳಿದ ಹಿನ್ನೆಲೆಯಿಂದ ಬಂದ ಕಾರ್ಮಿಕರಿಗೆ ಆರ್ಥಿಕ ಮತ್ತು ಮಾನಸಿಕ ನೋವನ್ನುಂಟುಮಾಡಿದೆ. 26.10.2017ರ ಆದೇಶವನ್ನು ಪಾಲಿಸಲು ಮತ್ತು ಅನುಷ್ಠಾನಗೊಳಿಸಲು ಪಾಲಿಕೆ ವಿಫಲವಾಗಿದ್ದು, ಇದು ಕಾನೂನುಬಾಹಿರ ನಡೆಯಾಗಿದೆ. ಇದು ಸಾರ್ವಜನಿಕ ನೀತಿಯ ಉಲ್ಲಂಘನೆಯಾಗಿದ್ದು, ಪೌರಕಾರ್ಮಿಕರ ಮೂಲಭೂತ ಮತ್ತು ಶಾಸನಬದ್ಧ ಜೀವನಕ್ಕೆ ವಿರುದ್ಧವಾಗಿದೆ’ ಎಂದು ಪಾಲಿಕೆ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದೆ.

‘ಬಿಬಿಎಂಪಿ ಪೌರಕಾರ್ಮಿಕರ ಸಂಘವು ಪೌರಕಾರ್ಮಿಕರ ಹಕ್ಕು ಮತ್ತು ಘನತೆಗಾಗಿ ಅಚಲ ಹೋರಾಟ ನಡೆಸುತ್ತಿದ್ದು, ನ್ಯಾಯ ಸಿಗುವವರೆಗೂ ಹೋರಾಟ ಮುಂದುವರಿಸಲಿದೆ’ ಎಂದು ಪೌರಕಾರ್ಮಿಕರ ಸಮಘದ ಅಧ್ಯಕ್ಷರಾದ ನಿರ್ಮಲಾ ಎಂ ತಿಳಿಸಿದ್ದಾರೆ.

ಇದನ್ನೂ ಓದಿ; ‘ಐಕ್ಯತೆಯೇ ದೈವ; ಛಿದ್ರತೆಯೇ ದೆವ್ವ’ ಎಂಬ ನುಡಿ ಮಂಡ್ಯದ ಸುಪ್ತ ಪ್ರಜ್ಞೆಯಲ್ಲೇ ಇದೆ: ದೇವನೂರ ಮಹಾದೇವ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆನ್‌ಲೈನ್ ರೈಲು ಬುಕಿಂಗ್‌ಗಳಿಗೆ ಮಾತ್ರ ಅಪಘಾತ ವಿಮೆ ಏಕೆ: ಸುಪ್ರೀಂ ಕೋರ್ಟ್ ಪ್ರಶ್ನೆ

ಆನ್‌ಲೈನ್‌ನಲ್ಲಿ ಟಿಕೆಟ್ ಖರೀದಿಸುವ ಪ್ರಯಾಣಿಕರಿಗೆ ಮಾತ್ರ ಅಪಘಾತ ವಿಮಾ ರಕ್ಷಣೆಯನ್ನು ಏಕೆ ಒದಗಿಸಲಾಗುತ್ತಿದೆ? ಆಫ್‌ಲೈನ್ ಟಿಕೆಟ್ ಖರೀದಿಸುವವರಿಗೆ ಏಕೆ ವಿಸ್ತರಿಸುತ್ತಿಲ್ಲ ಎಂಬುದರ ಕುರಿತು ಸುಪ್ರೀಂ ಕೋರ್ಟ್ ಭಾರತೀಯ ರೈಲ್ವೆಯಿಂದ ವಿವರಣೆ ಕೇಳಿದೆ. ರೈಲ್ವೆ ವ್ಯವಸ್ಥೆ...

ಇಸ್ರೇಲ್ ಆಕ್ರಮಿತ ಪ್ಯಾಲೆಸ್ತೀನ್ ಪ್ರದೇಶ ಕುರಿತ ವಿಶ್ವಸಂಸ್ಥೆಯ ವಿಚಾರಣಾ ಆಯೋಗದ ಅಧ್ಯಕ್ಷರಾಗಿ ಎಸ್. ಮುರಳೀಧರ್

ಪೂರ್ವ ಜೆರುಸಲೆಮ್ ಮತ್ತು ಇಸ್ರೇಲ್ ಸೇರಿದಂತೆ ಆಕ್ರಮಿತ ಪ್ಯಾಲೆಸ್ತೀನ್ ಪ್ರದೇಶದ ಕುರಿತಾದ ವಿಶ್ವಸಂಸ್ಥೆಯ ಸ್ವತಂತ್ರ ಅಂತರರಾಷ್ಟ್ರೀಯ ವಿಚಾರಣಾ ಆಯೋಗದ ಅಧ್ಯಕ್ಷರನ್ನಾಗಿ ಹಿರಿಯ ವಕೀಲ ಮತ್ತು ಒರಿಸ್ಸಾ ಹೈಕೋರ್ಟ್ ಮಾಜಿ ಮುಖ್ಯ ನ್ಯಾಯಮೂರ್ತಿ ಎಸ್....

ಲೈಂಗಿಕ ದೌರ್ಜನ್ಯ: ಪಾಲಕ್ಕಾಡ್ ಶಾಸಕ ರಾಹುಲ್ ಮಾಂಕೂಟತ್ತಿಲ್ ವಿರುದ್ಧ ದೂರು ದಾಖಲು

ಪಾಲಕ್ಕಾಡ್ ಶಾಸಕ ರಾಹುಲ್ ಮಾಂಕೂಟತ್ತಿಲ್ ವಿರುದ್ಧ ಮಹಿಳೆಯೊಬ್ಬರು ಲೈಂಗಿಕ ದೌರ್ಜನ್ಯ ಎಸಗಿ ಗರ್ಭಪಾತ ಮಾಡಿಸಲು ಒತ್ತಾಯಿಸಿದ್ದಾರೆ ಎಂದು ಆರೋಪಿಸಿದ ನಂತರ ಕೇರಳ ಪೊಲೀಸರು ಶುಕ್ರವಾರ ಪ್ರಕರಣ ದಾಖಲಿಸಿದ್ದಾರೆ ಎಂದು ಸ್ಥಳೀಯ ಮಾಧ್ಯಮಗಳು ವರದಿ...

ಉತ್ತರ ಪ್ರದೇಶ-ಮಹಾರಾಷ್ಟ್ರದಲ್ಲಿ ಜನನ ಪ್ರಮಾಣಪತ್ರಕ್ಕೆ ಆಧಾರ್ ಮಾನ್ಯವಲ್ಲ: ಹೊಸ ಮಾರ್ಗಸೂಚಿ

ಜನನ ಪ್ರಮಾಣಪತ್ರಗಳನ್ನು ನೀಡಲು ಆಧಾರ್ ಕಾರ್ಡ್‌ಗಳನ್ನು ಇನ್ನು ಮುಂದೆ ಮಾನ್ಯ ಪುರಾವೆಯಾಗಿ ಅಥವಾ ಜನ್ಮ ದಿನಾಂಕದ ಪುರಾವೆಯಾಗಿ ಸ್ವೀಕರಿಸಲಾಗುವುದಿಲ್ಲ ಎಂದು ಉತ್ತರ ಪ್ರದೇಶ ಮತ್ತು ಮಹಾರಾಷ್ಟ್ರ ಘೋಷಿಸಿವೆ. ಈ ಉದ್ದೇಶಕ್ಕಾಗಿ ಆಧಾರ್ ಬಳಸುವುದನ್ನು...

ಉತ್ತರಾಖಂಡ| 150 ವರ್ಷಗಳ ಜಾತಿ ತಡೆಗೋಡೆ ಮುರಿದು ತಮ್ಮದೇ ಮುಖ್ಯಸ್ಥರ ಆಯ್ಕೆ ಮಾಡಿಕೊಂಡ ದಲಿತರು

ಉತ್ತರಾಖಂಡದ ದೂರದ ಜೌನ್ಸರ್-ಬವಾರ್ ಪ್ರದೇಶದ ಬಿಜ್ನು ಬಿಜ್ನಾಡ್ ಗ್ರಾಮದ ದಲಿತ ಸಮುದಾಯವು ಸುಮಾರು 150 ವರ್ಷಗಳಲ್ಲಿ ಮೊದಲ ಬಾರಿಗೆ ತನ್ನದೇ ಆದ 'ಸೈನಾ' (ಗ್ರಾಮದ ಮುಖ್ಯಸ್ಥ) ಆಯ್ಕೆ ಮಾಡುವ ಮೂಲಕ ಐತಿಹಾಸಿಕ ಹೆಜ್ಜೆ...

ರಿಲಯನ್ಸ್ ಇಂಡಸ್ಟ್ರೀಸ್‌ಗೆ ರೂ. 56.44 ಕೋಟಿ ಸಿಜಿಎಸ್‌ಟಿ ದಂಡ

ಮುಖೇಶ್ ಅಂಬಾನಿ ನೇತೃತ್ವದ ರಿಲಯನ್ಸ್ ಇಂಡಸ್ಟ್ರೀಸ್, ಅಹಮದಾಬಾದ್‌ನ ಸಿಜಿಎಸ್‌ಟಿ ಜಂಟಿ ಆಯುಕ್ತರಿಂದ 56.44 ಕೋಟಿ ರೂ. ದಂಡದ ಆದೇಶವನ್ನು ಸ್ವೀಕರಿಸಿದೆ ಎಂದು ಶುಕ್ರವಾರ ತಿಳಿಸಿದೆ. ನವೆಂಬರ್ 25 ರಂದು ಹೊರಡಿಸಲಾದ ಆದೇಶದಲ್ಲಿ, ಕಂಪನಿಯ ಇನ್‌ಪುಟ್...

ತಮಿಳುನಾಡು| ರಸ್ತೆ ಅಪಘಾತದಲ್ಲಿ ಇಬ್ಬರು ದಲಿತ ಯುವಕರು ಸಾವು; ಜಾತಿ ವೈಷಮ್ಯ ಆರೋಪ

ತಮಿಳುನಾಡಿನ ಧರ್ಮಪುರಿಯಲ್ಲಿ ಬುಧವಾರ ರಾತ್ರಿ ಚಿನ್ನಾರ್ಥಳ್ಳಿ ಕೂಟ್ ರಸ್ತೆಯ ಬಳಿ ಅಪರಿಚಿತ ವಾಹನವೊಂದು ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸೊನ್ನಂಪಟ್ಟಿ ಗ್ರಾಮದ ಪರಿಶಿಷ್ಟ ಜಾತಿಗೆ ಸೇರಿದ ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ ಎಂದು...

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...