Homeಮುಖಪುಟಪೌರ ಕಾರ್ಮಿಕರ ₹90 ಕೋಟಿ ಪಿಎಫ್‌ ಬಾಕಿ ಪಾವತಿಸುವಂತೆ ಬಿಬಿಎಂಪಿಗೆ ಹೈಕೋರ್ಟ್‌ ಆದೇಶ

ಪೌರ ಕಾರ್ಮಿಕರ ₹90 ಕೋಟಿ ಪಿಎಫ್‌ ಬಾಕಿ ಪಾವತಿಸುವಂತೆ ಬಿಬಿಎಂಪಿಗೆ ಹೈಕೋರ್ಟ್‌ ಆದೇಶ

- Advertisement -
- Advertisement -

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಪೌರ ಕಾರ್ಮಿಕರ ₹90 ಕೋಟಿಗೂ ಹೆಚ್ಚಿನ ಇಪಿಎಫ್‌ ಹಣ ಪಾವತಿಸುವಂತೆ ಪಾಲಿಕೆ ಆಡಳಿತಕ್ಕೆ ರಾಜ್ಯ ಹೈಕೋರ್ಟ್‌ ಇಂದು ಆದೇಶ ನೀಡಿದೆ.

ಪೌರಕಾರ್ಮಿಕರಿಗೆ ಕೊಡಬೇಕಾಗಿದ್ದ ಬಾಕಿ ಹಣವಾದ ₹90,18,89,719 (ತೊಂಬತ್ತು ಕೋಟಿ ಹದಿನೆಂಟು ಲಕ್ಷ ಎಂಬತ್ತೊಂಬತ್ತು ಸಾವಿರದ ಏಳುನೂರ ಹತ್ತೊಂಬತ್ತು) ಅನ್ನು ಪಾವತಿಸುವಂತೆ ಕರ್ನಾಟಕ ಉಚ್ಛ ನ್ಯಾಯಾಲಯ ಆದೇಶ ನೀಡಿ, ಪೌರಕಾರ್ಮಿಕರ ಸೇವೆಯ ಮಹತ್ವ ಮತ್ತು ಕೆಲಸದ ದುಸ್ಥಿತಿಗಳನ್ನು ಕುರಿತು ಆದೇಶದಲ್ಲಿ ಒತ್ತಿ ಹೇಳಿದೆ.

ಬಿಬಿಎಂಪಿ ಬಾಕಿ ಉಳಿಸಿಕೊಂಡಿದ್ದ ಬಾಕಿ ಪಿಎಫ್‌ ಹಣಕ್ಕೆ ವಾರ್ಷಿಕ 12% ಬಡ್ಡಿಯೊಂದಿಗೆ ಆದೇಶದ ದಿನಾಂಕದಿಂದ ಎಂಟು ವಾರಗಳಲ್ಲಿ ಪೌರಕಾರ್ಮಿಕರ ಇಪಿಎಫ್ ಖಾತೆಗಳಿಗೆ ಜಮಾಮಾಡಬೇಕೆಂದು ಆದೇಶ ನೀಡಿದೆ.

ಬಿಬಿಎಂಪಿ ಪೌರಕಾರ್ಮಿಕರ ಸಂಘ (ಎಐಸಿಸಿಟಿಯುನೊಂದಿಗೆ ಸಂಯೋಜಿತವಾಗಿದೆ) ಬಿಬಿಎಂಪಿಯಲ್ಲಿ ಉದ್ಯೋಗದಲ್ಲಿರುವ ಪೌರಕಾರ್ಮಿಕರಿಗೆ ಜನವರಿ 2011 ಮತ್ತು ಜುಲೈ 2017 ರ ನಡುವಿನ ಅವಧಿಗೆ ಬಾಕಿ ಉಳಿಸಿಕೊಂಡಿದ್ದ ಪಿಎಫ್ ವಂತಿಗೆಯನ್ನು ಕೋರಿ ದೂರುಗಳನ್ನು ಸಲ್ಲಿಸಿತ್ತು. ಅದರ ಮೇಲೆ ಇಪಿಎಫ್ ಪ್ರಾಧಿಕಾರವು 26.10.2017 ರಂದು ಬಿಬಿಎಂಪಿಗೆ ರೂ. 90,18,89,719/- ಪೌರಕಾರ್ಮಿಕರ ಇಪಿಎಫ್ ಖಾತೆಗಳಿಗೆ ಜಮಾಮಾಡುವಂತೆ ಆದೇಶ ಹೊರಡಿಸಿತ್ತು. ಇಪಿಎಫ್ ಪ್ರಾಧಿಕಾರದ ಆದೇಶವನ್ನು ಅನುಸರಿಸಲು ವಿಫಲವಾದ ಕಾರಣ, ಆದೇಶವನ್ನು ಪಾಲಿಸುವಂತೆ ಬಿಬಿಎಂಪಿಗೆ ನಿರ್ದೇಶನ ನೀಡುವಂತೆ ಕೋರಿ ಕಾರ್ಮಿಕ ಸಂಘಟನೆಯು ಉಚ್ಛ ನ್ಯಾಯಾಲಯದ ಮೊರೆ ಹೋಗಿತ್ತು.

ಉಚ್ಚ ನ್ಯಾಯಾಲಯವು ಪೌರಕಾರ್ಮಿಕರ ಸೇವೆಯ ಮಹತ್ವ ಮತ್ತು ಅವರ ಕೆಲಸದಲ್ಲಿನ ದುಸ್ಥಿತಿಗಳನ್ನು ಗುರುತಿಸಿದೆ. “ಈ ಕಾರ್ಮಿಕರು (ಪೌರಕಾರ್ಮಿಕರು) ಸಮಾಜಕ್ಕೆ ಉತ್ತಮ ಸೇವೆಯನ್ನು ಮಾಡುತ್ತಿದ್ದಾರೆ ಮತ್ತು ಎಲ್ಲಾ ಕಾರ್ಮಿಕರು ಸರಿಯಾದ ವೇತನವನ್ನು ಸಕಾಲಕ್ಕೆ ಪಡೆಯುವುದನ್ನು ಒಳಗೊಂಡಂತೆ ತಮ್ಮ ಬಾಕಿ ಮೊತ್ತಗಳನ್ನು ಪಡೆಯುವುದನ್ನು ಖಚಿತಪಡಿಸಿಕೊಳ್ಳಲು ಕಾರ್ಮಿಕ ಸಂಘಟನೆಯು ಹಲವಾರು ವರ್ಷಗಳಿಂದ ಕೆಲಸ ಮಾಡಿದೆ. ಪೌರಕಾರ್ಮಿಕರು ದಲಿತ ಸಮುದಾಯವರಾಗಿದ್ದು, ಅದರಲ್ಲೂ ಪ್ರಧಾನವಾಗಿ ಮಹಿಳೆಯರೇ ಇದ್ದಾರೆ. ಸಾಪ್ತಾಹಿಕ ಅಥವಾ ರಾಷ್ಟ್ರೀಯ ರಜಾದಿನಗಳು ಅಥವಾ ಯಾವುದೇ ವಿರಾಮಗಳಿಲ್ಲದೆಯೇ, ಅವರು ವೈಜ್ಞಾನಿಕ ತಂತ್ರಜ್ಞಾನವಿಲ್ಲದ ಅಮಾನವೀಯ ಮತ್ತು ಹಳೆಯ ಮಾದರಿಯಲ್ಲೆ ಕಸ-ಸಂಗ್ರಹಣೆ ಮಾಡಿ, ರಸ್ತೆ ಗುಡಿಸುವಲ್ಲಿ ವರ್ಷವಿಡೀ ಕೆಲಸ ಮಾಡುತ್ತಾರೆ. ಅವರು ತಮ್ಮ ಸ್ವಂತ ಆರೋಗ್ಯವನ್ನು ಲೆಕ್ಕಿಸದೇ ನಿರಂತರವಾಗಿ ಸಾರ್ವಜನಿಕರ ಆರೋಗ್ಯವನ್ನು ರಕ್ಷಿಸಿದ್ದಾರೆ. ಪ್ರತಿ ದಿನವೂ ಅದನ್ನು ಮುಂದುವರೆಸಿದ್ದಾರೆ. ಇದರಿಂದಾಗಿ ಅವರು ಗಂಭೀರ ಮತ್ತು ಜೀವನಾವಧಿಯನ್ನು ಕಡಿಮೆಗೊಳಿಸುವ ಉಸಿರಾಟದ ಕಾಯಿಲೆಗಳು, ಹೃದಯದ ತೊಂದರೆಗಳು, ಬೆನ್ನು ಮತ್ತು ಮೊಣಕಾಲಿನ ಸಮಸ್ಯೆಗಳಿಂದ ಬಳಲುತ್ತಿದ್ದಾರೆ’ ಎಂದು ತನ್ನ ಆದೇಶದಲ್ಲಿ ಹೇಳಿದೆ.

ಪೌರಕಾರ್ಮಿಕರಿಗೆ ಆಗಿರುವ ಅನ್ಯಾಯದ ಬಗ್ಗೆಯೂ ಗಮನಿಸಿದ ನ್ಯಾಯಲಯ, ‘ಪ್ರತಿವಾದಿ ಬಿಬಿಎಂಪಿಯ ಕೃತ್ಯಗಳು ಅತ್ಯಂತ ಬಡ ಮತ್ತು ಹಿಂದುಳಿದ ಹಿನ್ನೆಲೆಯಿಂದ ಬಂದ ಕಾರ್ಮಿಕರಿಗೆ ಆರ್ಥಿಕ ಮತ್ತು ಮಾನಸಿಕ ನೋವನ್ನುಂಟುಮಾಡಿದೆ. 26.10.2017ರ ಆದೇಶವನ್ನು ಪಾಲಿಸಲು ಮತ್ತು ಅನುಷ್ಠಾನಗೊಳಿಸಲು ಪಾಲಿಕೆ ವಿಫಲವಾಗಿದ್ದು, ಇದು ಕಾನೂನುಬಾಹಿರ ನಡೆಯಾಗಿದೆ. ಇದು ಸಾರ್ವಜನಿಕ ನೀತಿಯ ಉಲ್ಲಂಘನೆಯಾಗಿದ್ದು, ಪೌರಕಾರ್ಮಿಕರ ಮೂಲಭೂತ ಮತ್ತು ಶಾಸನಬದ್ಧ ಜೀವನಕ್ಕೆ ವಿರುದ್ಧವಾಗಿದೆ’ ಎಂದು ಪಾಲಿಕೆ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದೆ.

‘ಬಿಬಿಎಂಪಿ ಪೌರಕಾರ್ಮಿಕರ ಸಂಘವು ಪೌರಕಾರ್ಮಿಕರ ಹಕ್ಕು ಮತ್ತು ಘನತೆಗಾಗಿ ಅಚಲ ಹೋರಾಟ ನಡೆಸುತ್ತಿದ್ದು, ನ್ಯಾಯ ಸಿಗುವವರೆಗೂ ಹೋರಾಟ ಮುಂದುವರಿಸಲಿದೆ’ ಎಂದು ಪೌರಕಾರ್ಮಿಕರ ಸಮಘದ ಅಧ್ಯಕ್ಷರಾದ ನಿರ್ಮಲಾ ಎಂ ತಿಳಿಸಿದ್ದಾರೆ.

ಇದನ್ನೂ ಓದಿ; ‘ಐಕ್ಯತೆಯೇ ದೈವ; ಛಿದ್ರತೆಯೇ ದೆವ್ವ’ ಎಂಬ ನುಡಿ ಮಂಡ್ಯದ ಸುಪ್ತ ಪ್ರಜ್ಞೆಯಲ್ಲೇ ಇದೆ: ದೇವನೂರ ಮಹಾದೇವ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...

ಚಲಿಸುತ್ತಿದ್ದ ಸ್ಲೀಪರ್ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : ಚಾಲಕ, ಕಂಡಕ್ಟರ್ ಬಂಧನ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 2012ರಲ್ಲಿ ನಡೆದ ನಿರ್ಭಯಾ ಪ್ರಕರಣವನ್ನು ನೆನಪಿಸುವಂತಹ ಆಘಾತಕಾರಿ ಘಟನೆಯೊಂದು ನಡೆದಿದೆ. ಸ್ಲೀಪರ್‌ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. indiatoday.in ವರದಿಯ ಪ್ರಕಾರ, ಈ ಘಟನೆಯು ಆಗಸ್ಟ್ 4ರ...

ಜಗತ್ತಿನ ಪ್ರತಿಯೊಬ್ಬರಿಗೂ ಲ್ಯಾಪ್‌ಟಾಪ್ ಕೊಳ್ಳುವಷ್ಟು ಕಪ್ಪು ಹಣ ಪ್ರಪಂಚದಲ್ಲಿದೆ: ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್

ಅಕ್ರಮ ಹಣ ವರ್ಗಾವಣೆ (Money Laundering) ಮತ್ತು 'ಡಿಜಿಟಲ್ ಅರೆಸ್ಟ್' ನಂತಹ ಆನ್‌ಲೈನ್ ವಂಚನೆಗಳ ಪ್ರಮಾಣದ ಕುರಿತು ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಈ ರೀತಿಯ...

ಪೆಟ್ರೋಲ್‌ನಲ್ಲಿ ಎಥನಾಲ್ ಪ್ರಮಾಣ ಬಹಿರಂಗಪಡಿಸುವಂತೆ ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಪೆಟ್ರೋಲ್‌ನಲ್ಲಿ ಬೆರೆಸಲಾಗುವ ಎಥನಾಲ್ ಪ್ರಮಾಣವನ್ನು ಕಡ್ಡಾಯವಾಗಿ ನಮೂದಿಸಬೇಕು ಮತ್ತು ವಾಹನಗಳಿಗೆ ಎಥನಾಲ್ ಮಿಶ್ರಿತ ಇಂಧನದ ಹೊಂದಾಣಿಕೆಯ ಬಗ್ಗೆ ಹೆಚ್ಚಿನ ಪಾರದರ್ಶಕತೆ ತರಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆ...

ದೆಹಲಿ| ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ಒತ್ತುವರಿ ತೆರವು ಕಾರ್ಯಾಚರಣೆ ಆರಂಭಿಸಿದ ಎಂಸಿಡಿ

ದೆಹಲಿ ಹೈಕೋರ್ಟ್ ನಿರ್ದೇಶನದಂತೆ, ಮೊಘಲರ ಕಾಲದ ಐತಿಹಾಸಿಕ ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ನಿರ್ಮಾಣಗಳನ್ನು ಸಮೀಕ್ಷೆ ಮಾಡಿ, ಒತ್ತುವರಿಯನ್ನು ತೆರವುಗೊಳಿಸುವ ಬೃಹತ್ ಕಾರ್ಯಾಚರಣೆಯನ್ನು ದೆಹಲಿ ಮಹಾನಗರ ಪಾಲಿಕೆ (ಎಂಸಿಡಿ) ಸೋಮವಾರ (ಆ.31) ಪ್ರಾರಂಭಿಸಿದೆ...

ವೆನೆಜುವೆಲಾ ಮತ್ತೆ ಎದ್ದು ನಿಲ್ಲಲಿದೆ: ಬಂಧನದಲ್ಲಿರುವ ವೆನೆಜುವೆಲಾ ಮಾಜಿ ಅಧ್ಯಕ್ಷ ಮಡುರೊ ಮೊದಲ ಫೋಟೋ ಹಂಚಿಕೆ

ಜನವರಿಯಲ್ಲಿ ಅಮೆರಿಕ ಪಡೆಗಳಿಂದ ಬಂಧನಕ್ಕೊಳಗಾಗಿದ್ದ ವೆನೆಜುವೆಲಾದ ಮಾಜಿ ಅಧ್ಯಕ್ಷ ನಿಕೋಲಸ್ ಮಡುರೊ, ಅಮೆರಿಕದ ಬಂಧನ ಕೇಂದ್ರದಿಂದ ತಮ್ಮ ಎರಡು ಛಾಯಾಚಿತ್ರಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ. ಬಂಧನದ ಬಳಿಕ ಮಡುರೊ ಅವರ ಫೋಟೋಗಳು ಹೊರಬಂದಿರುವುದು...

‘ಮಹಿಳೆಯರು ಆಭರಣದಂತೆ ಮನೆಯಲ್ಲೇ ಇರಬೇಕು’ ಮುಸ್ಲಿಂ ಧರ್ಮಗುರು ವಿವಾದಾತ್ಮಕ ಹೇಳಿಕೆ

ಮಹಿಳೆಯರು ಮನೆಯಲ್ಲೇ ಇರಬೇಕು ಮತ್ತು ಸಾರ್ವಜನಿಕ ಕ್ಷೇತ್ರಕ್ಕೆ ಪ್ರವೇಶಿಸಬಾರದು ಎಂದು ಕೇರಳದ ಪ್ರಭಾವಿ ಮುಸ್ಲಿಂ ಧರ್ಮಗುರು ಶೇಖ್ ಅಬೂಬಕರ್ ಅಹ್ಮದ್ ನೀಡಿದ ಹೇಳಿಕೆ ಸಾಮಾಜಿಕ ಮಾಧ್ಯಮಗಳಲ್ಲಿ ಹಾಗೂ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆ...

ಹಲ್ದ್ವಾನಿ ‘ಶುದ್ಧೀಕರಣ’ ವಿವಾದ : ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್

ಉತ್ತರಾಖಂಡದ ಹಲ್ದ್ವಾನಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ರ್‍ಯಾಲಿ ನಡೆದ ಸ್ಥಳದಲ್ಲಿ ಬಿಜೆಪಿ ಬೆಂಬಲಿಗರು 'ಶುದ್ಧೀಕರಣ' ನಡೆಸಿದ ವಿವಾದ ಹೊಸ ರಾಜಕೀಯ ಮತ್ತು ಕಾನೂನು ತಿರುವು ಪಡೆದುಕೊಂಡಿದೆ. ಜಾತಿ ನಿಂದನೆಗೆ ಸಂಬಂಧಿಸಿದಂತೆ...

ಜೈಲಿನಲ್ಲಿದ್ದ KPSC ಅಧ್ಯಕ್ಷರ ಭೇಟಿಯಾಗಿದ್ದೇಕೆ HDK? ಪ್ರಿಯಾಂಕ್ ಖರ್ಗೆ ಪ್ರಶ್ನೆ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ವಿಚಾರವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಕೇಳಿಬಂದಿರುವ ಗಂಭೀರ ಆರೋಪಗಳಿಗೆ ಅವರು ತಾರ್ಕಿಕ ಸ್ಪಷ್ಟನೆ ನೀಡುವ ಬದಲು, ಜಾರಿಕೊಳ್ಳುವ ರೀತಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ ಎಂದು...