Homeಮುಖಪುಟರೈತ ಸಂಘಟನೆಗಳಿಂದ ಇಂದು 'ಗ್ರಾಮೀಣ ಭಾರತ ಬಂದ್'

ರೈತ ಸಂಘಟನೆಗಳಿಂದ ಇಂದು ‘ಗ್ರಾಮೀಣ ಭಾರತ ಬಂದ್’

- Advertisement -
- Advertisement -

ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸಂಯುಕ್ತ ಕಿಸಾನ್ ಮೋರ್ಚಾ (ಎಸ್‌ಕೆಎಂ) ಸೇರಿದಂತೆ ಹಲವು ರೈತ ಸಂಘಟನೆಗಳು ಇಂದು (ಫೆ.16) ಗ್ರಾಮೀಣ ಭಾರತ ಬಂದ್ ಅಥವಾ ರಾಷ್ಟ್ರವ್ಯಾಪಿ ಮುಷ್ಕರಕ್ಕೆ ಕರೆ ನೀಡಿವೆ. ಇಂದಿನ ಬಂದ್‌ಗೆ ಎಲ್ಲಾ ಸಮಾನ ಮನಸ್ಕ ರೈತ ಸಂಘಟನೆಗಳು ಬೆಂಬಲ ನೀಡುವಂತೆ ಎಸ್‌ಕೆಎಂ ಮನವಿ ಮಾಡಿದೆ.

ಈಗಾಗಲೇ ಪಂಜಾಬ್‌ನಿಂದ ದಿಲ್ಲಿ ಚಲೋ ಹಮ್ಮಿಕೊಂಡಿರುವ ರೈತರನ್ನು ದೆಹಲಿಯಿಂದ ಸುಮಾರು 200 ಕಿಲೋಮೀಟರ್ ದೂರದಲ್ಲಿರುವ ಹರಿಯಾಣದ ಅಂಬಾಲಾ ಗಡಿಯಲ್ಲಿ ಪೊಲೀಸರು ತಡೆದಿದ್ದಾರೆ. ಈ ನಡುವೆ ದೇಶವ್ಯಾಪಿ ಗ್ರಾಮೀಣ ಪ್ರದೇಶಗಳ ಬಂದ್‌ಗೆ ಕರೆ ನೀಡಲಾಗಿದೆ.

ಬಂದ್‌ ಹಿನ್ನೆಲೆ ಇಂದು ಬೆಳಿಗ್ಗೆ 6 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ಗ್ರಾಮೀಣ ಪ್ರದೇಶಗಳಲ್ಲಿ ಕೃಷಿ ಚಟುವಟಿಕೆಗಳು, ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಕಾಯ್ದೆ (ನರೇಗಾ) ಕೆಲಸಗಳು, ಖಾಸಗಿ ಕಚೇರಿಗಳು, ಹಳ್ಳಿಗಳ ಅಂಗಡಿಗಳು ಮತ್ತು ಗ್ರಾಮೀಣ ಕೈಗಾರಿಕಾ ಮತ್ತು ಸೇವಾ ವಲಯದ ಸಂಸ್ಥೆಗಳು ಸ್ಥಗಿತಗೊಳ್ಳಲಿವೆ ಎಂದು ರೈತ ಸಂಘಟನೆಗಳು ತಿಳಿಸಿವೆ.

ಆಂಬ್ಯುಲೆನ್ಸ್ ಕಾರ್ಯಾಚರಣೆ, ಪತ್ರಿಕೆ ವಿತರಣೆ, ಮದುವೆ, ಮೆಡಿಕಲ್ ಶಾಪ್‌ಗಳು, ಬೋರ್ಡ್ ಪರೀಕ್ಷೆಗೆ ಹೋಗುವ ವಿದ್ಯಾರ್ಥಿಗಳು ಇತ್ಯಾದಿ ತುರ್ತು ಸೇವೆಗಳ ಮೇಲೆ ಬಂದ್‌ ಯಾವುದೇ ಪರಿಣಾಮ ಬೀರುವ ಸಾಧ್ಯತೆ ಇಲ್ಲ ಎಂದು ಕೆಲವು ವರದಿಗಳು ಹೇಳಿವೆ.

ರೈತರ ಬೇಡಿಕೆಗಳೇನು?

ತಮ್ಮ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆ ಅಥವಾ ಎಂಎಸ್‌ಪಿಯನ್ನು ಖಾತರಿಪಡಿಸುವ ಕಾನೂನು ಜಾರಿಗೊಳಿಸಬೇಕು, ನರೇಗಾ ಯೋಜನೆಯನ್ನು ಬಲಪಡಿಸಬೇಕು, ಹಳೆಯ ಪಿಂಚಣಿ ಯೋಜನೆ (ಒಪಿಎಸ್‌) ಯನ್ನು ಮರುಸ್ಥಾಪಿಸಬೇಕು, ಔಪಚಾರಿಕ ಮತ್ತು ಅನೌಪಚಾರಿಕ ವಲಯಗಳಲ್ಲಿ ಎಲ್ಲಾ ಕಾರ್ಮಿಕರಿಗೆ ಪಿಂಚಣಿ ಮತ್ತು ಸಾಮಾಜಿಕ ಭದ್ರತೆಯನ್ನು ಖಚಿತಪಡಿಸಿಬೇಕು ಇತ್ಯಾದಿ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಪಂಜಾಬ್ ಮತ್ತು ಹರಿಯಾಣದ ರೈತರು ಈಗಾಗಲೇ ಬೀದಿಗಿಳಿದಿದ್ದಾರೆ. ಇದೇ ಬೇಡಿಕೆಗಳನ್ನು ಈಡೇರಿಕೆಗೆ ಆಗ್ರಹಿಸಿ ಗ್ರಾಮೀಣ ಭಾರತ ಬಂದ್‌ಗೆ ಕರೆ ನೀಡಲಾಗಿದೆ.

ಸ್ವಾಮಿನಾಥನ್ ಸೂತ್ರದ C2 50 (ಬಂಡವಾಳ ವೆಚ್ಚದ ಶೇ. 50ರಷ್ಟು) ಎಂಎಸ್‌ಪಿ ಕಾನೂನು ಖಾತರಿ, ಸಾಲ ಮನ್ನಾ, ಗೃಹ ಬಳಕೆ, ಅಂಗಡಿಗಳಿಗೆ ಮತ್ತು ಕೃಷಿಗೆ 300 ಯೂನಿಟ್ ಉಚಿತ ವಿದ್ಯುತ್ ನೀಡಬೇಕು, ಸಮಗ್ರ ಬೆಳೆ ವಿಮೆ ಮತ್ತು ಪಿಂಚಣಿಯನ್ನು ತಿಂಗಳಿಗೆ ₹10 ಸಾವಿರಕ್ಕೆ ಹೆಚ್ಚಿಸಬೇಕು, ಸ್ಮಾರ್ಟ್ ಮೀಟರ್‌ ಅಳವಡಿಸಬಾರದು ಮತ್ತು ವಿದ್ಯುತ್ ದರ ಹೆಚ್ಚಿಸಬಾರದು ಇತ್ಯಾದಿ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಎಸ್‌ಕೆಎಂ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದೆ.

ಕಾರ್ಮಿಕರು ಮತ್ತು ರೈತರು ಕರೆ ನೀಡಿರುವ ಇಂದಿನ ಗ್ರಾಮೀಣ ಭಾರತ ಬಂದ್‌ ಬೆಂಬಲಿಸಿ ಬುದ್ದಿ ಜೀವಿಗಳು, ಕಲಾವಿದರು ಸೇರಿದಂತೆ ಹಲವರು ಗುರುವಾರ (ಫೆ.15) ಜಂಟಿ ಹೇಳಿಕೆ ನೀಡಿದ್ದಾರೆ. ಪ್ರಭಾತ್ ಪಟ್ನಾಯಕ್, ಅರ್ಥಶಾಸ್ತ್ರಜ್ಞ ಇರ್ಫಾನ್ ಹಬೀಬ್, ಇತಿಹಾಸಕಾರ ನಾಸಿರ್ ತ್ಯಾಬ್ಜಿ, ಆರ್ಥಿಕ ಇತಿಹಾಸಕಾರ ಅನಿಲ್ ಚಂದ್ರ, ಸಾಂಸ್ಕೃತಿಕ ಕಾರ್ಯಕರ್ತ ಮತ್ತು ಪತ್ರಕರ್ತರಾದ ಪಿ ಸಾಯಿನಾಥ್ ಸೇರಿದಂತೆ ಒಟ್ಟು 34 ಜನರು ಜಂಟಿ ಹೇಳಿಕೆಗೆ ಸಹಿ ಹಾಕಿದ್ದಾರೆ. ರೈತರು ಮತ್ತು ಕಾರ್ಮಿಕರ ಈ ಮಹತ್ವದ ಬಂದ್‌ ಅನ್ನು ಸಮಾಜದ ಎಲ್ಲಾ ವರ್ಗದ ಜನರು ಬೆಂಬಲಿಸುವಂತೆ ಮನವಿ ಮಾಡಿದ್ದಾರೆ.

ಸೆಂಟ್ರಲ್ ಟ್ರೇಡ್ ಯೂನಿಯನ್ಸ್ (CTUs)ಮತ್ತು ಸಂಯುಕ್ತ ಕಿಸಾನ್ ಮೋರ್ಚಾ (SKM)ಕೈಗಾರಿಕಾ ವಲಯಗಳ ಮುಷ್ಕರ ಮತ್ತು ಗ್ರಾಮೀಣ ಭಾರತ್ ಬಂದ್‌ಗೆ ಒಗ್ಗಟ್ಟಿನ ಕರೆ ನೀಡಿವೆ. ಬಿಜೆಪಿ ನೇತೃತ್ವದ ಸರ್ಕಾರದ ಕಾರ್ಪೊರೇಟ್ ಪರ, ಜನವಿರೋಧಿ ನೀತಿಗಳಿಂದ ತೀವ್ರ ತರವಾದ ದಾಳಿಯನ್ನು ಎದುರಿಸುತ್ತಿರುವ ಕಾರ್ಮಿಕ ವರ್ಗಗಳು ಪರ ಮತ್ತು ರೈತರ ಬೇಡಿಕೆಗಳ ಈಡೇರಿಕೆಗೆ ಈ ಬಂದ್‌ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

ದಿಲ್ಲಿ ಚಲೋ:

ಒಂದೆಡೆ ರೈತ, ಕಾರ್ಮಿಕ ಸಂಘಟನೆಗಳು ಭಾರತ್ ಬಂದ್‌ಗೆ ಕರೆ ನೀಡಿದ್ದರೆ, ಮತ್ತೊಂದೆಡೆ ದಿಲ್ಲಿ ಚಲೋ ಹಮ್ಮಿಕೊಂಡಿರುವ ಪಂಜಾಬ್‌ನ ರೈತರು ಪಂಜಾಬ್ -ಹರಿಯಾಣದ ಶಂಭು ಮತ್ತು ಖಾನೌರಿ ಗಡಿಯಲ್ಲಿ ಮೊಕ್ಕಾಂ ಹೂಡಿದ್ದಾರೆ. ತಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಕೇಂದ್ರದ ಮೇಲೆ ಒತ್ತಡ ಹೇರಲು ಅವರು ದೆಹಲಿಯತ್ತ ಮೆರವಣಿಗೆ ನಡೆಸುತ್ತಿದ್ದಾರೆ.

ರೈತರು ದೆಹಲಿ ಪ್ರವೇಶಿಸದಂತೆ ತಡೆಯಲು ಎಲ್ಲಾ ರೀತಿಯ ಸಿದ್ದತೆ ಮಾಡಿಕೊಂಡಿರುವ ಪೊಲೀಸರು ಈಗಾಗಲೇ ಕೆಲವೆಡೆ ರೈತರ ಮೇಲೆ ಅಶ್ರುವಾಯು ಪ್ರಯೋಗಿಸಿದ್ದಾರೆ. ಈ ನಡುವೆ 30,000ಕ್ಕೂ ಹೆಚ್ಚು ಅಶ್ರುವಾಯು ಶೆಲ್‌ಗಳ ಖರೀದಿಗೆ ಆದೇಶ ನೀಡಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾಗಿ ಮಾಧ್ಯಮಗಳು ವರದಿ ಮಾಡಿವೆ.

2020ರಲ್ಲಿ ಕೇಂದ್ರದ ಮೂರು ಕೃಷಿ ಕಾನೂನುಗಳ ವಿರುದ್ದ ದೊಡ್ಡ ಮಟ್ಟದ ಹೋರಾಟ ರೂಪಿಸಿದ್ದ ರೈತರು ಸುಮಾರು ಹದಿಮೂರು ತಿಂಗಳುಗಳ ಕಾಲ ದೆಹಲಿಯನ್ನು ಸಂಪರ್ಕಿಸುವ ಪಂಜಾಬ್, ಹರಿಯಾಣ ಮತ್ತು ಉತ್ತರ ಪ್ರದೇಶಗಳ ಸಿಂಘು, ಗಾಜಿಪುರ ಮತ್ತು ಟಿಕ್ರಿ ಗಡಿಗಳಲ್ಲಿ ಧರಣಿ ನಡೆಸಿದ್ದರು. ಆಗಸ್ಟ್ 2020 ರಿಂದ ಡಿಸೆಂಬರ್ 2021 ರವರೆಗೆ ರೈತರು ದೆಹಲಿಯ ಗಡಿಗಳಲ್ಲಿ ಕುಳಿತಿದ್ದರು. ಕೊನೆಗೆ ಕೇಂದ್ರ ಕೃಷಿ ಕಾನೂನುಗಳನ್ನು ವಾಪಸ್ ಪಡೆಯುವ ಮೂಲಕ ರೈತರ ಹೋರಾಟಕ್ಕೆ ದೊಡ್ಡ ಮಟ್ಟದ ಜಯ ಸಿಕ್ಕಿತ್ತು.

ಇದನ್ನೂ ಓದಿ : ಪೌರ ಕಾರ್ಮಿಕರ ₹90 ಕೋಟಿ ಪಿಎಫ್‌ ಬಾಕಿ ಪಾವತಿಸುವಂತೆ ಬಿಬಿಎಂಪಿಗೆ ಹೈಕೋರ್ಟ್‌ ಆದೇಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...