Homeಕರ್ನಾಟಕಚುನಾವಣಾ ಬಾಂಡ್ ರದ್ದು| ಬಿಜೆಪಿಯ ಕುತಂತ್ರಕ್ಕೆ ಸುಪ್ರೀಂ ಕೋರ್ಟ್‌ನಿಂದ ಕಪಾಳಮೋಕ್ಷ: ಸಿಎಂ ಸಿದ್ದರಾಮಯ್ಯ

ಚುನಾವಣಾ ಬಾಂಡ್ ರದ್ದು| ಬಿಜೆಪಿಯ ಕುತಂತ್ರಕ್ಕೆ ಸುಪ್ರೀಂ ಕೋರ್ಟ್‌ನಿಂದ ಕಪಾಳಮೋಕ್ಷ: ಸಿಎಂ ಸಿದ್ದರಾಮಯ್ಯ

- Advertisement -
- Advertisement -

ಚುನಾವಣಾ ಬಾಂಡ್‌ಗಳು ಅಸಾಂವಿಧಾನಿಕ ಎಂದು ಐವರು ನ್ಯಾಯಮೂರ್ತಿಗಳ ಸುಪ್ರೀಂ ಕೋರ್ಟ್‌ ಪೀಠ ನೀಡಿರುವ ತೀರ್ಪು ಪ್ರಜಾತಂತ್ರದಲ್ಲಿ ಪಾರದರ್ಶಕತೆಯನ್ನು ಮರುಸ್ಥಾಪಿಸುವ ನಿಟ್ಟಿನಿಂದ ಐತಿಹಾಸಿಕವಾಗಿದೆ. ಬಿಜೆಪಿಯ ಕುತಂತ್ರಕ್ಕೆ ನ್ಯಾಯಾಲಯ ಕಪಾಳಮೋಕ್ಷ ಮಾಡಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಈ ಬಗ್ಗೆ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಅವರು, “ಕ್ರೋನಿ ಬಂಡವಾಳಿಗರಿಂದ ಚುನಾವಣೆಗಾಗಿ ದೇಣಿಗೆ ಸಂಗ್ರಹಿಸುವ ದುರುದ್ದೇಶದಿಂದಲೇ ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಜಾರಿಗೆ ತಂದಿದ್ದ ಈ ಚುನಾವಣಾ ಬಾಂಡ್‌ಗಳು ಅಸಾಂವಿಧಾನಿಕವಾದುದು ಮಾತ್ರವಲ್ಲ, ಇದರಿಂದ ಅಭಿವ್ಯಕ್ತಿ ಸ್ವಾತಂತ್ರ್ಯ ಮತ್ತು ಮಾಹಿತಿ ಹಕ್ಕಿನ ಉಲ್ಲಂಘನೆಯಾಗಿದೆ ಎಂದು ಸುಪ್ರೀಂಕೋರ್ಟ್ ನೀಡಿರುವ ತೀರ್ಪು ಅತ್ಯಂತ ಸ್ವಾಗತಾರ್ಹವಾದುದು” ಎಂದಿದ್ದಾರೆ.

ಚುನಾವಣಾ ವ್ಯವಸ್ಥೆಯ ಸುಧಾರಣೆಯಲ್ಲಿ ಇದೊಂದು ದಿಟ್ಟ ಕ್ರಮವಾಗಿದೆ. ಕೇಂದ್ರದ ಬಿಜೆಪಿ ಸರ್ಕಾರ 2019ರ ಲೋಕಸಭಾ ಚುನಾವಣೆಯ ಪೂರ್ವದಲ್ಲಿ ಜಾರಿಗೆ ತಂದಿದ್ದ ಈ ಚುನಾವಣಾ ಬಾಂಡ್‌ಗಳು ಲಂಚದ ಮತ್ತೊಂದು ರೂಪವಾಗಿತ್ತು. ವಿತ್ತೀಯ ಕಾಯಿದೆಯ ಸ್ವರೂಪದಲ್ಲಿ ಚುನಾವಣಾ ಬಾಂಡ್‌ಗಳನ್ನು ತರಲಾಗಿತ್ತು ಹಾಗೂ ಇದಕ್ಕಾಗಿ ಸುಮಾರು ಐದು ಕಾಯಿದೆಗಳನ್ನು ತಿದ್ದುಪಡಿ ಮಾಡಲಾಗಿತ್ತು. ಇದೀಗ ಇದೆಲ್ಲವೂ ರದ್ದುಗೊಂಡಿವೆ. ಚುನಾವಣಾ ಬಾಂಡ್‌ಗಳನ್ನು ಜಾರಿಗೆ ತಂದಿದ್ದರ ಹಿಂದೆ ದುರುದ್ದೇಶವಿರುವುದನ್ನು ಕಾಂಗ್ರೆಸ್‌ ಪಕ್ಷ ಆರಂಭದಿಂದಲೂ ಸ್ಪಷ್ಟವಾಗಿ ಹೇಳಿತ್ತು. ಇದೀಗ ಸುಪ್ರೀಂಕೋರ್ಟ್ ಈ ವಿರೋಧಕ್ಕೆ ಮಾನ್ಯತೆ ನೀಡಿದೆ ಎಂದು ಸಿಎಂ ಹೇಳಿದ್ದಾರೆ.

ಇದು ಬಂಡವಾಳಶಾಹಿ ಶಕ್ತಿಗಳು ಹಾಗೂ ಆಡಳಿತಾರೂಢ ಸರ್ಕಾರದ ನಡುವಿನ ಕೊಡುಕೊಳ್ಳುವಿಕೆಗೆ ಕಾರಣವಾಗುತ್ತದೆ. ಚುನಾವಣಾ ಬಾಂಡ್‌ ಯೋಜನೆಯಡಿ ರಾಜಕೀಯ ಪಕ್ಷಗಳಿಗೆ ಅನಾಮಧೇಯವಾಗಿ ಯಾವುದೇ ಮಿತಿ ಇಲ್ಲದೆ ದೇಣಿಗೆ ನೀಡಬಹುದಾಗಿದ್ದರಿಂದ ಬಂಡವಾಳಶಾಹಿ ಶಕ್ತಿಗಳು ಹಾಗೂ ಆಡಳಿತಾರೂಢ ಸರ್ಕಾರದ ನಡುವೆ ಕೊಡುಕೊಳ್ಳುವಿಕೆಯ ಸಂಬಂಧವೇರ್ಪಡುತ್ತದೆ ಎನ್ನುವ ಆತಂಕವನ್ನು ನಮ್ಮ ಪಕ್ಷ ಹಾಗೂ ಪ್ರಜ್ಞಾವಂತ ನಾಗರಿಕರು, ವಿವಿಧ ಸಂಘಟನೆಗಳು ಎತ್ತಿದ್ದವು ಎಂದು ತಿಳಿಸಿದ್ದಾರೆ.

ಸುಪ್ರೀಂ ಕೋರ್ಟ್‌ ಸಹ ತನ್ನ ಇಂದಿನ ತೀರ್ಪಿನಲ್ಲಿ ಇಂತಹ ಸಾಧ್ಯತೆಯನ್ನು ಅಲ್ಲಗಳೆಯಲಾಗದು ಎಂದಿದೆ. ಇದು ಕೊಡುಕೊಳ್ಳುವಿಕೆಗೆ ಕಾರಣವಾಗಬಹುದಾದ ಹಿತಾಸಕ್ತಿಗಳನ್ನು ಕಾಯುವ ಸಾಧ್ಯತೆಯ ಆತಂಕದತ್ತ ಬೆರಳು ಮಾಡಿದೆ. ಇದೇ ವೇಳೆ, ಯೋಜನೆಯು ಮಾಹಿತಿ ಹಕ್ಕು ಹಾಗೂ ಮತದಾರರ ಹಕ್ಕಿನ ಉಲ್ಲಂಘನೆ ಎನ್ನುವುದನ್ನು ಸ್ಪಷ್ಟಗೊಳಿಸಿದೆ. ಸುಪ್ರೀಂ ಕೋರ್ಟ್‌ ತೀರ್ಪು ಕೇಂದ್ರ ಸರ್ಕಾರದ ಕರಾಳ ಸಂಚಿಗೆ ಹಿಡಿದ ಕನ್ನಡಿಯಾಗಿದ್ದು ಕೇಂದ್ರದ ಗುಪ್ತ ಕಾರ್ಯಸೂಚಿಯ ಮೇಲೆ ಮಾಡಿರುವ ಗದಾಪ್ರಹಾರವಾಗಿದೆ ಎಂದಿದ್ದಾರೆ.

ಈಗಾಗಲೇ ಚುನಾವಣಾ ಬಾಂಡ್‌ಗಳನ್ನು ಖರೀದಿಸಿದವರ ಸಂಪೂರ್ಣ ವಿವರವನ್ನು ಹದಿನೈದು ದಿನಗಳೊಳಗೆ ಭಾರತೀಯ ಸ್ಟೇಟ್ ಬ್ಯಾಂಕ್ ಬಹಿರಂಗಪಡಿಸಬೇಕೆಂದು ಕೋರ್ಟ್‌ ಹೇಳಿದೆ. ಇದರಿಂದ ಬಿಜೆಪಿಯ ಕಪಾಟಿನ ಒಳಗಿರುವ ಹಲವಾರು ಅಸ್ಥಿಪಂಜರಗಳು ಹೊರಬೀಳಲಿವೆ. ಸುಪ್ರೀಂಕೋರ್ಟ್ ಸರಿಯಾಗಿ ಗುರುತಿಸಿರುವಂತೆ ಇದು ಕ್ರೋನಿ ಬಂಡವಾಳಿಗರು ಮತ್ತು ಬಿಜೆಪಿಯಂತ ರಾಜಕೀಯ ಪಕ್ಷಗಳ ನಡುವಿನ ಒಂದು ಅಪವಿತ್ರ ಮೈತ್ರಿ ಆಗಿತ್ತು. ತಾನು ಅಧಿಕಾರಕ್ಕೆ ಬಂದ ನಂತರ ನೆರವಾಗುವ ಭರವಸೆ ನೀಡಿಯೇ ಉದ್ಯಮಿಗಳಿಂದ ಚುನಾವಣಾ ಬಾಂಡ್‌ಗಳ ಮೂಲಕ ಹಣ ಸಂಗ್ರಹಿಸಲಾಗುತ್ತಿತ್ತು. ಚುನಾವಣಾ ಬಾಂಡ್ ಮೂಲಕ ಬಂದ ದೇಣಿಗೆಯ ಶೇಕಡಾ 90ರಷ್ಟು ಭಾಗ ಭಾರತೀಯ ಜನತಾ ಪಕ್ಷಕ್ಕೆ ಸಂದಾಯವಾಗುತ್ತಿದ್ದ ಕಾರಣ, ಇದು ಯಾರ ನೆರವಿಗಾಗಿ ತಂದ ಯೋಜನೆ ಎನ್ನುವುದು ಸ್ಪಷ್ಟವಾಗಿತ್ತು. ಸಾಂವಿಧಾನಿಕ ಸಂಸ್ಥೆಗಳು ತಮ್ಮ ಸ್ವಾಯತ್ತತೆಯನ್ನು ಕಳೆದುಕೊಳ್ಳುತ್ತಿದೆ ಎಂಬ ಆತಂಕದ ನಡುವೆಯೇ ಸುಪ್ರೀಂ ಕೋರ್ಟ್ ಇಂತಹದ್ದೊಂದು ತೀರ್ಪು ನೀಡಿರುವುದು ಪ್ರಜಾಪ್ರಭುತ್ವ ಮತ್ತು ಸಂವಿಧಾನದ ಮೇಲೆ ಭರವಸೆ ಮೂಡಿಸಿದೆ ಎಂದು ಸಿಎಂ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಕಪ್ಪು ಹಣ ನಿಯಂತ್ರಿಸಲು ಚುನಾವಣಾ ಬಾಂಡ್‌ ಯೋಜನೆಯಿಂದ ಸಾಧ್ಯ ಎನ್ನುವ ಕೇಂದ್ರ ಸರ್ಕಾರದ ವಾದವನ್ನು ಸುಪ್ರೀಂ ಕೋರ್ಟ್ ಸಾರಾಸಗಟಾಗಿ‌ ತಿರಸ್ಕರಿಸಿದ್ದು, ಕಪ್ಪು ಹಣ ನಿಯಂತ್ರಣಕ್ಕೆ ಅದಕ್ಕಿಂತ ಉತ್ತಮ ವಿಧಾನಗಳಿವೆ ಎಂದು ಹೇಳಿರುವುದು ಕೇಂದ್ರದ ಪೊಳ್ಳು ವಾದಗಳಿಗೆ ಮಾಡಿರುವ ತಕ್ಕ ಶಾಸ್ತಿಯಾಗಿದೆ. ಅಲ್ಲದೆ, ಇದು ಆರ್ಥಿಕ ಅಸಮಾನತೆಯಿಂದ ಅಸಮ ರಾಜಕೀಯ ಮೇಲಾಟಗಳಿಗೆ ಕಾರಣವಾಗುತ್ತದೆ ಎಂದು ನ್ಯಾಯಾಲಯವು ಹೇಳಿರುವುದು ಮೋದಿ ನೇತೃತ್ವದ ಬಿಜೆಪಿ ಸರ್ಕಾರವು ಎಂತಹ ಚುನಾವಣಾ ರಾಜಕಾರಣದ ವ್ಯವಸ್ಥೆಯನ್ನು ಸೃಷ್ಟಿಸಲು ಮುಂದಾಗಿತ್ತು ಎನ್ನುವುದನ್ನು ಸ್ಪಷ್ಟಪಡಿಸಿದೆ. ವಿಪಕ್ಷಗಳನ್ನು ಒಂದಿಲ್ಲೊಂದು ರೀತಿಯಲ್ಲಿ ದಮನಿಸಿ, ತನಗೆ ಅನುಕೂಲವಾಗುವ ರೀತಿಯಲ್ಲಿ ವ್ಯವಸ್ಥೆಯನ್ನು ರೂಪಿಸಿಕೊಳ್ಳುವ ಬಿಜೆಪಿಯ ಕುತಂತ್ರಕ್ಕೆ ಸುಪ್ರೀಂ ಕೋರ್ಟ್‌ ಕಪಾಳಮೋಕ್ಷ ಮಾಡಿದೆ ಎಂದು ಸಿಎಂ ಹೇಳಿದ್ದಾರೆ.

ಇದನ್ನೂ ಓದಿ: ಪೌರ ಕಾರ್ಮಿಕರ ₹90 ಕೋಟಿ ಪಿಎಫ್‌ ಬಾಕಿ ಪಾವತಿಸುವಂತೆ ಬಿಬಿಎಂಪಿಗೆ ಹೈಕೋರ್ಟ್‌ ಆದೇಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐದು ರಾಜ್ಯಗಳ ವಿಧಾನಸಭೆ ಚುನಾವಣೆ ದಿನಾಂಕ ಪ್ರಕಟ; ಬಂಗಾಳದಲ್ಲಿ ಮಾತ್ರ ಎರಡು ಹಂತದ ಮತದಾನ

ಅಸ್ಸಾಂ, ಪಶ್ಚಿಮ ಬಂಗಾಳ, ತಮಿಳುನಾಡು, ಕೇರಳ ಮತ್ತು ಪುದುಚೇರಿ ವಿಧಾನಸಭಾ ಚುನಾವಣೆಗಳ ವೇಳಾಪಟ್ಟಿಯನ್ನು ಭಾರತೀಯ ಚುನಾವಣಾ ಆಯೋಗದ (ಇಸಿಐ) ಮುಖ್ಯಸ್ಥರಾದ ಜ್ಞಾನೇಶ್ ಕುಮಾರ್ ಪ್ರಕಟಿಸಿದರು. ದೆಹಲಿಯಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಖ್ಯ...

ಫ್ಲಿಪ್‌ಕಾರ್ಟ್‌ನಿಂದ 1 ರೂ.ಗೆ ಹಾಲು ಮಾರಾಟ; ಪ್ರಧಾನಿ ಮೋದಿ ಮಧ್ಯಸ್ಥಿಕೆಗೆ ಬಮುಲ್‌ ಆಗ್ರಹ

ಫ್ಲಿಪ್‌ಕಾರ್ಟ್‌ ಸಂಸ್ಥೆಯು ಆನ್‌ಲೈನ್‌ ಮೂಲಕ 1 ರೂ.ಗೆ ಲೀಟರ್‌ ಹಾಲನ್ನು ಮಾರಾಟ ಮಾಡಿರುವುದು ಭಾರಿ ಜನಾಕ್ರೋಶಕ್ಕೆ ಕಾರಣವಾಗಿದೆ. ಈ ಬಗ್ಗೆ, ಬೆಂಗಳೂರು ನಗರ, ಗ್ರಾಮೀಣ ಮತ್ತು ರಾಮನಗರ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ...

“ಮಕ್ಕಳ ಹಂತಕನನ್ನು ಹುಡುಕಿ ಹತ್ಯೆ ಮಾಡುತ್ತೇವೆ” : ನೆತನ್ಯಾಹು ಸುರಕ್ಷಿತವಾಗಿದ್ದಾರೆ ಎಂಬ ಇಸ್ರೇಲ್ ಸ್ಪಷ್ಟನೆ ಬೆನ್ನಲ್ಲೆ ಐಆರ್‌ಜಿಸಿ ಹೇಳಿಕೆ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರನ್ನು ಹುಡುಕಿ ಹತ್ಯೆ ಮಾಡುತ್ತೇವೆ ಎಂದು ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ಹೇಳಿರುವುದಾಗಿ ವರದಿಯಾಗಿದೆ. ನೆತನ್ಯಾಹು ಅವರ ಹತ್ಯೆಯ ವದಂತಿಗಳನ್ನು ಇಸ್ರೇಲ್ ನಿರಾಕರಿಸಿದ ಬೆನ್ನಲ್ಲೇ, ಐಆರ್‌ಜಿಸಿ ಈ...

ಮಹಾರಾಷ್ಟ್ರ| ಇಫ್ತಾರ್ ಕೂಟಕ್ಕೆ ಸೇರಿದ್ದ ಮುಸ್ಲಿಮರ ಮೇಲೆ ಹಿಂದುತ್ವವಾದಿ ಗುಂಪಿನಿಂದ ದಾಳಿ

ರಂಜಾನ್‌ ಮಾಸದ ಉಪವಾಸ ಮುರಿಯಲು ನೆರೆದಿದ್ದ ಜನರ ಮೇಲೆ ಅಪರಿಚಿತ ವ್ಯಕ್ತಿಗಳ ಗುಂಪೊಂದು ದಾಳಿ ನಡೆಸಿರುವ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ. ಇಫ್ತಾರ್ ಕೂಟಕ್ಕೆ ಸಿದ್ಧತೆ ನಡೆಸುತ್ತಿದ್ದಾಗ, ಸುಮಾರು 100 ಕ್ಕೂ ಹೆಚ್ಚು...

ಆಸ್ಕರ್‌ ಅಂತಿಮ ಪಟ್ಟಿಗೆ ಆಯ್ಕೆಯಾದ ‘ದಿ ವಾಯ್ಸ್ ಆಫ್ ಹಿಂದ್ ರಜಬ್’

ಗಾಝಾದ ಆರು ವರ್ಷದ ಬಾಲಕಿ ಹಿಂದ್ ರಜಬ್‌ ಮತ್ತು ಆಕೆಯ ಸಂಬಂಧಿಕರನ್ನು ಇಸ್ರೇಲಿ ಸೈನಿಕರು ಭೀಕರವಾಗಿ ಹತ್ಯೆ ಮಾಡಿದ ಕಥೆಯನ್ನು ಹೇಳುವ 'ದಿ ವಾಯ್ಸ್ ಆಫ್ ಹಿಂದ್ ರಜಬ್' ಚಲನಚಿತ್ರವು 2026ರ ಆಸ್ಕರ್...

ಉತ್ತರ ಪ್ರದೇಶ| ದಲಿತ ಕುಟುಂಬದ ಮದುವೆ ಮನೆಯಲ್ಲಿ ಸವರ್ಣಿಯರಿಂದ ಹಲ್ಲೆ; ಬಂದೂಕಿನಿಂದ ಬೆದರಿಕೆ

ಮಾರ್ಚ್ 10 ರಂದು ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಟಿಕುನಿಯಾ ಪೊಲೀಸ್ ಠಾಣೆ ಪ್ರದೇಶದಲ್ಲಿ ಜಾತಿ ಆಧಾರಿತ ಹಿಂಸಾಚಾರದ ತೀವ್ರ ಆತಂಕಕಾರಿ ಘಟನೆ ಬೆಳಕಿಗೆ ಬಂದಿದೆ. 24 ಗಂಟೆಗಳ ಒಳಗೆ ಎಫ್‌ಐಆರ್...

’70 ಲಕ್ಷ ಬಂಗಾಳಿ ಮುಸ್ಲಿಮರನ್ನು ಹೊರದಬ್ಬಲು ಸಾಧ್ಯವಿಲ್ಲ..ಅವರೇ ದೇಶ ಬಿಡುವಂತಹ ಪರಿಸ್ಥಿತಿ ಸೃಷ್ಟಿಸುತ್ತೇವೆ’: ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ

ಸುಮಾರು 70 ಲಕ್ಷ 'ಬಂಗಾಳಿ ಮುಸ್ಲಿಮರ'ನ್ನು ಭಾರತದಿಂದ ಹೊರಹಾಕುವುದು 'ಮಾನವೀಯವಾಗಿ ಸಾಧ್ಯವಿಲ್ಲ'. ಹಾಗಾಗಿ, ಅವರಾಗಿಯೇ ದೇಶ ತೊರೆಯುವಂತಹ ಪರಿಸ್ಥಿತಿಯನ್ನು ನಾವು ಸೃಷ್ಟಿಸುತ್ತೇವೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಹೇಳಿದ್ದಾರೆ. ಈ...

ಮೋದಿಯವರ ವಿದೇಶಾಂಗ ನೀತಿ ಸಂಪೂರ್ಣವಾಗಿ ದಿಕ್ಕು ತಪ್ಪಿದೆ, ನಗೆಪಾಟಲಿಗೆ ಈಡಾಗಿದೆ, ಅನೈತಿಕತೆಯಿಂದ ಕೂಡಿದೆ. ಇದು ಜಗಜ್ಜಾಹೀರಾಗಿದೆ – ಶ್ರೀಪಾದ್‌ ಭಟ್

ತಮ್ಮ ಸ್ಥಳೀಯ ಮತಬ್ಯಾಂಕ್ ರಾಜಕಾರಣದ ಜೊತೆಗೆ ವಿದೇಶಿ ನೀತಿಯನ್ನು ತಳುಕು ಹಾಕುವುದು. ಉದಾಹರಣೆಗೆ ಅಮೆರಿಕ-ಇಸ್ರೇಲ್ ಜಂಟಿಯಾಗಿ ನಡೆಸುತ್ತಿರುವ ಇರಾನ್ ಮೇಲಿನ ಯುದ್ಧದ ಸಮಯದಲ್ಲಿ ಮೋದಿ ನೇತೃತ್ವದ ಸರ್ಕಾರವು ತಾನು ಇರಾನ್ ಪರ ನಿಲುವು ತಾಳಿದರೆ...

ದೆಹಲಿ ಪೊಲೀಸರಿಂದ 10 ಮಂದಿ ಹೋರಾಟಗಾರರ ಅಪಹರಣ ಆರೋಪ : ಹೈಕೋರ್ಟ್‌ಗೆ ಹೇಬಿಯಸ್ ಕಾರ್ಪಸ್ ಅರ್ಜಿ

ಸಿವಿಲ್ ಸೊಸೈಟಿಯ ಹತ್ತು ಮಂದಿ ಹೋರಾಟಗಾರರನ್ನು ದೆಹಲಿ ಪೊಲೀಸರು ಅಪಹರಿಸಿದ್ದಾರೆ ಅಥವಾ ಅಕ್ರಮವಾಗಿ ಬಂಧಿಸಿದ್ದಾರೆ ಎಂದು ಮಾನವ ಹಕ್ಕುಗಳ ಗುಂಪುಗಳು ಆರೋಪಿಸಿವೆ. ಹತ್ತು ಮಂದಿಯನ್ನು ದೆಹಲಿ ಪೊಲೀಸರು ಮತ್ತು ಇತರ ರಾಜ್ಯಗಳ ಏಜೆನ್ಸಿಗಳು ಅಪಹರಿಸಿವೆ...

ಗುಜರಾತ್‌: 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ: ವಿಧಾನಸಭೆಗೆ ಮಾಹಿತಿ ನೀಡಿದ ಸರ್ಕಾರ

ಗಾಂಧಿನಗರ: ರಾಜ್ಯದ 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಮತ್ತು ಪರಿಸ್ಥಿತಿಯನ್ನು ಸುಧಾರಿಸಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಗುಜರಾತ್ ಸರ್ಕಾರ ಶನಿವಾರ ವಿಧಾನಸಭೆಗೆ...